• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ದೆಹಲಿಯ ಗುಂಡಿನ ದಾಳಿಗೂ ಅಲ್ಲಿನ ಎಲೆಕ್ಷನ್ ಗೂ ಇದೆಯಾ ಲಿಂಕ್..?

by
February 1, 2020
in ದೇಶ
0
ದೆಹಲಿಯ ಗುಂಡಿನ ದಾಳಿಗೂ ಅಲ್ಲಿನ ಎಲೆಕ್ಷನ್ ಗೂ ಇದೆಯಾ ಲಿಂಕ್..?
Share on WhatsAppShare on FacebookShare on Telegram

ದೆಹಲಿಯ 70 ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ನಡೀತಿದೆ. ಬಿಜೆಪಿ ಹಾಗು ಆಮ್ ಆದ್ಮಿ ಪಾರ್ಟಿ ನಡುವೆ ಜಿದ್ದಾಜಿದ್ದಿನ ಹೋರಾಟ ನಡೀತಿದೆ. ಕಾಂಗ್ರೆಸ್‌ ಸೇರಿದಂತೆ ಬೇರೆಲ್ಲಾ ಸಣ್ಣಪುಟ್ಟ ಪಕ್ಷಗಳು ಲೆಕ್ಕಕ್ಕಿಲ್ಲ ಎನ್ನುವಂತಾಗಿದೆ. ಎಲ್ಲಾ 70 ಕ್ಷೇತ್ರಗಳಲ್ಲೂ ಆಮ್ ಆದ್ಮಿ ಪಾರ್ಟಿಯ ಅಭ್ಯರ್ಥಿಗಳ ಕಡೆಗೆ ಮತದಾರನ ಒಲವು ಸ್ಪಷ್ಟವಾಗ್ತಿದೆ. ಅರವಿಂದ್ ಕೇಜ್ರಿವಾಲ್ ಸರ್ಕಾರ ಕೈಗೊಂಡಿರುವ ಜನಪರ ಕಾರ್ಯಕ್ರಮಗಳಿಗೆ ಮಾರು ಹೋಗಿದ್ದಾರೆ ಎನ್ನುತ್ತಿವೆ ರಾಜಕೀಯ ವಿಶ್ಲೇಷಣೆಗಳು. ಇದು ಬಿಜೆಪಿ ನಾಯಕರನ್ನು ಕಂಗಾಲಾಗಿಸಿದೆ.

ADVERTISEMENT

ದೆಹಲಿ ಮತದಾರರನ್ನು ಧರ್ಮದ ಆಧಾರದಲ್ಲಿ ಇಬ್ಭಾಗ ಮಾಡಲು ಬಿಜೆಪಿ ನಾಯಕರು ಇನ್ನಿಲ್ಲದ ಕಸರತ್ತು ನಡೆಸುತ್ತಿದ್ದಾರೆ. ದೆಹಲಿಯ ಚುನಾವಣೆ ಭಾರತ, ಪಾಕಿಸ್ತಾನ ನಡುವಿನ ಯುದ್ಧಕ್ಕೆ ಹೋಲಿಸುತ್ತಿದ್ದಾರೆ. ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧ ಮಾಡುವವರನ್ನು ಗುಂಡಿಕ್ಕಿ ಹತ್ಯೆ ಮಾಡಬೇಕು ಎಂದು ಪ್ರಚಾರದಲ್ಲೇ ಕರೆ ಕೊಡುತ್ತಾರೆ. ಒಟ್ಟಾರೆ ಧರ್ಮದ ಆಧಾರದಲ್ಲಿ ಜನರು ರೊಚ್ಚಿಗೇಳುವಂತೆ ಮಾಡಲು ಇನ್ನಿಲ್ಲದ ಕಸರತ್ತು ನಡೆಯುತ್ತಿದೆ ಎನ್ನುವುದು ಸಾಮಾನ್ಯ ಜನರಿಗೂ ಗೊತ್ತಾಗುತ್ತಿದೆ.

ಕೇಂದ್ರ ಸಚಿವ ಅನುರಾಗ್ ಠಾಕೂರ್ ಹೇಳಿಕೆ ಕೊಟ್ಟ ನಾಲ್ಕೇ ದಿನದಲ್ಲಿ ದೆಹಲಿಯ ಯುವಕನೊಬ್ಬ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ನಡೆಯುತ್ತಿದ್ದ ಹೋರಾಟಗಾರರ ಮೇಲೆ ಆರಡಿ ವ್ಯಕ್ತಿಯೊಬ್ಬ ಬಂದೂಕಿನಿಂದ ಗುಂಡು ಹಾರಿಸಿದ್ದ. ಈ ಘಟನೆಯಲ್ಲಿ ಓರ್ವ ಪತ್ರಿಕೋದ್ಯಮ ವಿದ್ಯಾರ್ಥಿ ಗಾಯಗೊಂಡು ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಅಪರಿಚತ ವ್ಯಕ್ತಿಯೊಬ್ಬ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧ ಮಾಡುವ ಜನರ ಮೇಲೆ ದಾಳಿ ಮಾಡಿದ್ದು, ಉದ್ದೇಶಪೂರ್ವಕವಾಗಿ ನಡೆದ ಘಟನೆಯಾ ಎನ್ನುವ ಅನುಮಾನ ಮೂಡಲು ಶುರುವಾಗುತ್ತಿವೆ. ಈ ಅನುಮಾನ ಮೂಡಲು ಕಾರಣವಾಗಿದ್ದು ಅಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆ. ರಾಜಕೀಯ ಯಶಸ್ವಿಗಾಗಿ ಗುಂಡು ಹಾರಿಸುವಂತೆ ಯೋಜನೆ ರೂಪಿಸಲಾಯ್ತಾ ಅನ್ನೋ ಪ್ರಶ್ನಾರ್ಥಕ ಚಿಹ್ನೆ ಮೂಡುವಂತಾಗಿದೆ. ಈ ಹೋರಾಟವನ್ನು ಹತ್ತಿಕ್ಕಿದ್ರೆ ಚುನಾವಣೆಯಲ್ಲಿ ಮತಗಳಿಸಬಹುದು ಅನ್ನೋ ಕಾರಣಕ್ಕೆ ಯಾರಾದರು ಸಂಚು ಮಾಡಿರಬಹುದು ಎನ್ನುವ ಮಾತುಗಳು ಕೇಳಿಬರುತ್ತಿವೆ. ಈ ಅನುಮಾನಕ್ಕೆ ಹಲವಾರು ಕಾರಣಗಳೂ ಇವೆ.

ದೆಹಲಿಯಲ್ಲಿ ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಾರ್ಟಿ ಅಧಿಕಾರದಲ್ಲಿದೆ. ಆದರೆ ಅಲ್ಲಿನ ಪೊಲೀಸ್ ವ್ಯವಸ್ಥೆ ಮೇಲೆ ಹಿಡಿತ ಹೊಂದಿರುವುದು ನಮ್ಮ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ. ಒಂದನೇ ಅನುಮಾನ ಏನಪ್ಪ ಅಂದ್ರೆ, ಆ ಯುವಕ ಬಂದೂಕಿನಿಂದ ಗುಂಡು ಹಾರಿಸಿದ್ದು, ಪ್ರತಿಭಟನಾಕಾರರ ಮೇಲೆ. ಆ ವೇಳೆ ದೆಹಲಿ ಪೊಲೀಸರು ಶಸ್ತ್ರ ಸಜ್ಜಿತವಾಗಿ ಕೆಲವೇ ಅಡಿಗಳ ದೂರ ನಿಂತಿದ್ದರು.

ಓರ್ವ ಬಂದೂಕುಧಾರಿ ಗುಂಡು ಹಾರಿಸುತ್ತಿದ್ದಾನೆ ಎಂದರೆ, ಕಾನೂನು ಪಾಲನೆ ಮಾಡಬೇಕಿದ್ದ ಪೊಲೀಸರು ಮಾಡಬೇಕಿದ್ದ ಮೊದಲ ಕೆಲಸ ಎಂದರೆ ಆತನ ಮೇಲೆ ಫೈರ್ ಮಾಡುವುದು. ಆದರೆ ಪೊಲೀಸರು ಆ ಕೆಲಸವನ್ನು ಮಾಡುವುದಿಲ್ಲ. ಆತನನ್ನು ತುಂಬಾ ಸಾಮಾನ್ಯ ರೀತಿಯಲ್ಲಿ ಬಂಧನ ಮಾಡುತ್ತಾರೆ. ಮತ್ತೊಂದು ಎಂದರೆ ಬಂದೂಕಿನಿಂದ ಗುಂಡು ಹಾರಿಸುವಾಗ ಆ ಪೊಲೀಸರ ತಂಡ ಸುಮ್ಮನೆ ನಿಂತಿರುವ ದೃಶ್ಯಗಳು ಮಾಧ್ಯಮಗಳಲ್ಲಿ ಪ್ರಸಾರವಾಗಿವೆ. ಈ ದೃಶ್ಯಗಳು ಪೊಲೀಸರಿಗೆ ಮೊದಲೇ ಗೊತ್ತಿತ್ತಾ ಎನ್ನುವ ಅನುಮಾನವನ್ನು ಹುಟ್ಟುಹಾಕುತ್ತಿದೆ.

ಜಾಮಿಯಾ ಮಿಲಿಯಾ ಇಸ್ಲಾಮಿಯಾ ಬಳಿ ನಡೆದ ದಾಳಿ ವೇಳೆ ಪೊಲೀಸರು ಕೆಲಕಾಲ ಯಾವುದೇ ಪ್ರತಿಕ್ರಿಯೆ ಕೊಡಲಿಲ್ಲ. ಇದೊಂದು ಅನುಮಾನ ಆದರೆ, ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ 17 ವರ್ಷದ ಯುವಕ ಗುಂಡು ಹಾರಿಸುವುದಕ್ಕಾಗಿ ಹಣ ಪಾವತಿ ಮಾಡಿದ್ದು ಯಾರು..? ಎಂದು ಪ್ರಶ್ನಿಸಿದ್ದಾರೆ. ಸಂಸತ್‌ ಬಜೆಟ್‌ ಅಧಿವೇಶನ ಆರಂಭಕ್ಕೂ ಮುನ್ನವೇ ರಾಹುಲ್‌ ಗಾಂಧಿ ಈ ಪ್ರಶ್ನೆ ಮಾಡಿರೋದು ಭಾರೀ ಕೋಲಾಹಲವನ್ನು ಸೃಷ್ಟಿ ಮಾಡುವ ಎಲ್ಲಾ ಸಾಧ್ಯಗಳು ಇವೆ.

ಇನ್ನು ಅರವಿಂದ್‌ ಕೇಜ್ರಿವಾಲ್‌ ಕೂಡ, ಪೌರತ್ವ ತಿದ್ದುಪಡಿ ಕಾಯ್ದೆ, ಎನ್‌ಸಿಆರ್‌, ಎನ್‌ಆರ್‌ಸಿ ಆಕ್ರೋಶಭರಿತ ಹೇಳಿಕೆಗಳು ದೆಹಲಿ ಚುನಾವಣೆಯಲ್ಲಿ ಪರಿಣಾಮ ಬೀರುವುದಿಲ್ಲ. ಇಲ್ಲಿ ಅಭಿವೃದ್ಧಿ ಆಧಾರದಲ್ಲಿ ಚುನಾವಣೆ ನಡೆಯುತ್ತೆ ಎಂದಿದ್ದಾರೆ. ದೆಹಲಿ ಜಾಮಿಯಾ ಫೈರಿಂಗ್‌ ವಿಚಾರ ಮುಂದೆ ಯಾವ ಪರಿಣಾಮ ಬೀರುತ್ತೆ ಎನ್ನುವುದು ಚುನಾವಣಾ ಫಲಿತಾಂಶಕ್ಕೆ ಹಿಡಿದ ಕೈಗನ್ನಡಿಯಾಗಿರಲಿದೆ.

Tags: citizenship lawCongress MPJamia Millia protestJamia shooterRahul Gandhiteenagerಕಾಂಗ್ರೆಸ್ ಸಂಸದಜಾಮಿಯಾ ಮಿಲಿಯಾಜಾಮಿಯಾ ಶೂಟರ್ಪೌರತ್ವ ಕಾನೂನುಪ್ರತಿಭಟನೆರಾಹುಲ್ ಗಾಂಧಿ
Previous Post

ಕೇಂದ್ರ ಬಜೆಟ್‌ 2020ರ ಮುಖ್ಯಾಂಶಗಳು

Next Post

ಜನಸಾಮಾನ್ಯರಿಗೆ ಒಂದು ಕೈಲಿ ಕೊಟ್ಟು ಮತ್ತೊಂದು ಕೈಲಿ ಕಿತ್ತುಕೊಂಡ ನಿರ್ಮಲಾ

Related Posts

ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :
Top Story

ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

by ಪ್ರತಿಧ್ವನಿ
May 27, 2026
0

ಬೆಂಗಳೂರು : ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಚರ್ಚೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಇದಕ್ಕೆ ಸಂಬಂಧಿಸಿದ ಪೂರಕ ಬೆಳವಣಿಗೆಗಳು ಮುಂದುವರೆದಿವೆ. ಹೈಕಮಾಂಡ್‌ ನಾಯಕರೊಂದಿಗಿನ ಸಭೆಯ ಬಳಿಕ ಬೆಂಗಳೂರಿಗೆ ಆಗಮಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ...

Read moreDetails
ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

May 27, 2026
BREAKING NEWS : ಗುಜರಾತ್‌ ತಂಡವನ್ನು ಬಗ್ಗು ಬಡಿದ RCB : 5ನೇ ಬಾರಿಗೆ ಫೈನಲ್‌ ಪ್ರವೇಶ..

BREAKING NEWS : ಗುಜರಾತ್‌ ತಂಡವನ್ನು ಬಗ್ಗು ಬಡಿದ RCB : 5ನೇ ಬಾರಿಗೆ ಫೈನಲ್‌ ಪ್ರವೇಶ..

May 26, 2026
ಸಿದ್ದರಾಮಯ್ಯ ರಾಜೀನಾಮೆಗೆ ಸಿದ್ಧವಾಯ್ತಾ ವೇದಿಕೆ..? : ದೆಹಲಿಯ ಸಭೆಯಲ್ಲಿ ಏನೇನಾಯ್ತು? ಇನ್‌ಸೈಡ್‌ ಡೀಟೆಲ್ಸ್‌ ಇಲ್ಲಿದೆ..

ಸಿದ್ದರಾಮಯ್ಯ ರಾಜೀನಾಮೆಗೆ ಸಿದ್ಧವಾಯ್ತಾ ವೇದಿಕೆ..? : ದೆಹಲಿಯ ಸಭೆಯಲ್ಲಿ ಏನೇನಾಯ್ತು? ಇನ್‌ಸೈಡ್‌ ಡೀಟೆಲ್ಸ್‌ ಇಲ್ಲಿದೆ..

May 26, 2026
“ಸರ್ಕಾರದಲ್ಲಿ ‘ಕುರ್ಚಿ’ಗಾಗಿ ಕಚ್ಚಾಟ, ದೆಹಲಿ ‘ಹೈಕಮಾಂಡ್’ ಮುಂದೆ ಸಾಷ್ಟಾಂಗ ನಮಸ್ಕಾರ!”

“ಸರ್ಕಾರದಲ್ಲಿ ‘ಕುರ್ಚಿ’ಗಾಗಿ ಕಚ್ಚಾಟ, ದೆಹಲಿ ‘ಹೈಕಮಾಂಡ್’ ಮುಂದೆ ಸಾಷ್ಟಾಂಗ ನಮಸ್ಕಾರ!”

May 26, 2026
Next Post
ಜನಸಾಮಾನ್ಯರಿಗೆ ಒಂದು ಕೈಲಿ ಕೊಟ್ಟು ಮತ್ತೊಂದು ಕೈಲಿ ಕಿತ್ತುಕೊಂಡ ನಿರ್ಮಲಾ

ಜನಸಾಮಾನ್ಯರಿಗೆ ಒಂದು ಕೈಲಿ ಕೊಟ್ಟು ಮತ್ತೊಂದು ಕೈಲಿ ಕಿತ್ತುಕೊಂಡ ನಿರ್ಮಲಾ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada