• Home
  • About Us
  • ಕರ್ನಾಟಕ
Sunday, December 14, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ವರಿಷ್ಠರು ಓಕೆ ಎಂದರೂ ಸಂಪುಟ ವಿಸ್ತರಣೆ ವಿಳಂಬವಾಗುತ್ತಿರುವುದೇಕೆ?

by
February 1, 2020
in ಕರ್ನಾಟಕ
0
ವರಿಷ್ಠರು ಓಕೆ ಎಂದರೂ ಸಂಪುಟ ವಿಸ್ತರಣೆ ವಿಳಂಬವಾಗುತ್ತಿರುವುದೇಕೆ?
Share on WhatsAppShare on FacebookShare on Telegram

ಅಂತೂ ಇಂತು ಕುಂತೀ ಮಕ್ಕಳಿಗೆ ರಾಜ್ಯ ಸಿಕ್ಕಿತು ಎಂಬಂತೆ ಒಂದೂವರೆ ತಿಂಗಳ ಸತತ ಪ್ರಯತ್ನ, ಒತ್ತಡಗಳಿಂದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಸಂಪುಟ ವಿಸ್ತರಣೆಗೆ ಹೈಕಮಾಂಡ್ ಒಪ್ಪಿಗೆ ಸಿಕ್ಕಿದೆ. ಮೈತ್ರಿ ಸರ್ಕಾರ ಉರುಳಿಸಿ ಬಿಜೆಪಿ ಸೇರಿ ಗೆದ್ದ ಎಲ್ಲಾ 11 ಮಂದಿಗೂ ಸಚಿವ ಸ್ಥಾನ ಕೊಡಬೇಕು ಎಂಬ ಮುಖ್ಯಮಂತ್ರಿಗಳ ಪ್ರಯತ್ನ ಪೂರ್ಣ ಫಲ ನೀಡಿಲ್ಲವಾದರೂ ಬಹುತೇಕ ಯಡಿಯೂರಪ್ಪ ಅವರ ಮಾತಿಗೆ ಹೈಕಮಾಂಡ್ ಅಸ್ತು ಎಂದಿದೆ. ಸದ್ಯದ ಮಾಹಿತಿ ಪ್ರಕಾರ ಒಟ್ಟು 13 ಮಂದಿಯನ್ನು ಸಂಪುಟಕ್ಕೆ ಸೇರಿಸಿಕೊಳ್ಳಲು ತೀರ್ಮಾನಿಸಲಾಗಿದ್ದು, ಇದರಲ್ಲಿ ಮೈತ್ರಿ ಸರ್ಕಾರ ಉರುಳಿಸಿ ಗೆದ್ದು ಬಂದಿರುವ 11 ಶಾಸಕರ ಪೈಕಿ ಎಷ್ಟು ಮಂದಿಗೆ ಮತ್ತು ಮೂಲ ಬಿಜೆಪಿಯಿಂದ ಗೆದ್ದು ಬಂದವರ ಪೈಕಿ ಎಷ್ಟು ಮಂದಿಗೆ ಸಚಿವ ಸ್ಥಾನ ಎಂಬುದು ಇನ್ನೂ ಸ್ಪಷ್ಟವಾಗಿ ಗೊತ್ತಾಗುತ್ತಿಲ್ಲ. ಒಂದು ಮೂಲಗಳ ಪ್ರಕಾರ 10+3 (10 ಮಂದಿ ನೂತನವಾಗಿ ಗೆದ್ದವರು, ಮೂವರು ಹಳೇ ಬಿಜೆಪಿ) ಲೆಕ್ಕಾಚಾರದೊಂದಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಸೋಮವಾರ ಸಚಿವ ಸಂಪುಟ ವಿಸ್ತರಿಸುತ್ತಿದ್ದಾರೆ ಎಂಬ ಮಾಹಿತಿ ಇದೆ.

ADVERTISEMENT

ಆದರೆ, ಸಚಿವರ ಸಂಖ್ಯೆ ಇನ್ನೂ ಸ್ಪಷ್ಟವಾಗುತ್ತಿಲ್ಲ. ಏಕೆಂದರೆ, ಮುಖ್ಯಮಂತ್ರಿ ಯಡಿಯೂರಪ್ಪ ಅವರು ಈ ಬಗ್ಗೆ ಸ್ಪಷ್ಟವಾಗಿ ಏನನ್ನೂ ಹೇಳುತ್ತಿಲ್ಲ. ಒಮ್ಮೆ 11 ಮಂದಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸುತ್ತಿದ್ದಾರೆ ಎನ್ನುತ್ತಾರೆ. ಮತ್ತೊಂದೆಡೆ ಈ ಬಗ್ಗೆ ತೀರ್ಮಾನ ಕೈಗೊಳ್ಳುತ್ತೇವೆ ಎಂದು ಸುಮ್ಮನಾಗುತ್ತಾರೆ. ಆದರೆ, ಒಂದಂತೂ ಸ್ಪಷ್ಟ. ಸಂಪುಟ ರಚನೆ ಸಂದರ್ಭದಲ್ಲಿ ಸಾಕಷ್ಟು ಆಟ ಆಡಿಸಿದ ಬಳಿಕ ಮುಖ್ಯಮಂತ್ರಿ ಯಡಿಯೂರಪ್ಪ ಬಯಕೆಯಂತೆ (ಉಪಮುಖ್ಯಮಂತ್ರಿ ಹುದ್ದೆ ಹೊರತುಪಡಿಸಿ) ಸಚಿವರ ಆಯ್ಕೆಗೆ ಒಪ್ಪಿಗೆ ನೀಡಿದ ತಂತ್ರವನ್ನೇ ಈ ಬಾರಿಯೂ ಹೈಕಮಾಂಡ್ ಅನುಸರಿಸಿದೆ. ಇದರ ಜತೆಗೆ, ನಾನು ದೆಹಲಿಗೆ ಹೋಗುವುದಿಲ್ಲ ಎಂದು ಕುಳಿತಿದ್ದ ಯಡಿಯೂರಪ್ಪ ಅವರನ್ನು ದೆಹಲಿಗೆ ಕರೆಸಿಕೊಂಡು, ನಿಮ್ಮ ಮಾತು ನಾವು ಕೇಳುತ್ತೇವೆ. ಅದೇ ರೀತಿ ನಮ್ಮ ಮಾತಿಗೂ ನೀವು ಬೆಲೆ ಕೊಡಬೇಕಾಗುತ್ತದೆ ಎಂಬ ಸಂದೇಶವನ್ನು ವರಿಷ್ಠರು ಯಡಿಯೂರಪ್ಪ ಅವರಿಗೆ ನೀಡಿದ್ದಾರೆ.

ಎದುರಾಗಿದೆ ಸಮಸ್ಯೆಗಳ ಸರಮಾಲೆ

ಇಷ್ಟೆಲ್ಲಾ ಆದರೂ ಸಂಪುಟ ವಿಸ್ತರಣೆ ಕುರಿತಂತೆ ಗೊಂದಲ ಮಾತ್ರ ಇನ್ನೂ ಬಗೆಹರಿದಿಲ್ಲ. ಏಕೆಂದರೆ, ಸಂಖ್ಯೆ ಬಗ್ಗೆ ಇನ್ನೂ ಅಂತಿಮ ನಿರ್ಧಾರವಾಗಿಲ್ಲ. 10+3 ಲೆಕ್ಕಾಚಾರದ ಪ್ರಕಾರವೇ ಮಂತ್ರಿ ಮಂಡಲ ವಿಸ್ತರಿಸುವುದಾದರೆ ಬಹುತೇಕ ಮಹೇಶ್ ಕುಮುಟಳ್ಳಿ ಹೊರನಿಲ್ಲಬೇಕಾಗುತ್ತದೆ. ಏಕೆಂದರೆ, ಅಥಣಿ ಕ್ಷೇತ್ರದಿಂದ ಈಗಾಗಲೇ ಒಬ್ಬರು (ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ) ಸಂಪುಟದಲ್ಲಿದ್ದಾರೆ. ಮಹೇಶ್ ಕುಮುಟಳ್ಳಿಗೂ ಸ್ಥಾನ ನೀಡಿದರೆ ಒಂದೇ ಕ್ಷೇತ್ರದಿಂದ ಇಬ್ಬರು ಸಚಿವರಾದಂತಾಗುತ್ತದೆ. ಇದು ಬಿಜೆಪಿಯ ಆಂತರಿಕ ಬೇಗುದಿಯನ್ನು ಇನ್ನಷ್ಟು ಹೆಚ್ಚಿಸುತ್ತದೆ. ಮಂತ್ರಿ ಮಂಡಲ ರಚನೆಯಲ್ಲಿ ಮುಖ್ಯಮಂತ್ರಿಗಳು ಸಾಮಾಜಿಕ ನ್ಯಾಯ ಪಾಲಿಸುತ್ತಿಲ್ಲ ಎಂಬ ಕೂಗಿಗೆ ದೊಡ್ಡ ಬೆಂಬಲವೇ ಸಿಕ್ಕಿ ಭವಿಷ್ಯದಲ್ಲಿ ಬಿಜೆಪಿಗೆ ಪ್ರತೀಕೂಲ ಪರಿಸ್ಥಿತಿ ನಿರ್ಮಾಣವಾಗಬಹುದು. ಈ ರೀತಿಯ ಬೆಳವಣಿಗೆಗಳ ಬಗ್ಗೆ ತಲೆಕೆಡಿಸಿಕೊಳ್ಳದೆ ಮಹೇಶ್ ಕುಮುಟಳ್ಳಿಗೆ ಸಚಿವ ಸ್ಥಾನ ನೀಡಿದರೆ ಆಗ ಶ್ರೀಮಂತ ಪಾಟೀಲ್ ಅವರಿಗೆ ಸಚಿವ ಸ್ಥಾನದ ಭಾಗ್ಯ ತಪ್ಪುತ್ತದೆ.

ಇನ್ನು ಹಳೆಯ ಬಿಜೆಪಿಯಲ್ಲೂ ಸಚಿವ ಸ್ಥಾನದ ವಿಚಾರದಲ್ಲಿ ಕೆಲವು ತೊಡಕುಗಳಿವೆ. ಉಮೇಶ್ ಕತ್ತಿ, ಅರವಿಂದ ಲಿಂಬಾವಳಿ ಸಂಪುಟ ಸೇರುವುದು ಬಹುತೇಕ ಖಚಿತವಾಗಿದೆ. ಇನ್ನೊಂದು ಸ್ಥಾನಕ್ಕೆ ಹಾಲಪ್ಪ ಆಚಾರ ಜತೆ ಸಿ.ಪಿ.ಯೋಗೇಶ್ವರ್ ಅವರ ಹೆಸರು ಕೇಳಿಬರುತ್ತಿದೆ. ಆಪರೇಷನ್ ಕಮಲದ ರುವಾರಿಯಾಗಿರುವ ಯೋಗೇಶ್ವರ್ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂಬುದು ಸರಿಯಾದರೂ ಅವರು ವಿಧಾನ ಮಂಡಲದ ಉಭಯ ಸದನಗಳ ಸದಸ್ಯರಲ್ಲದೇ ಇರುವುದೇ ಸಮಸ್ಯೆ. ಪ್ರಸ್ತುತ ವಿಧಾನ ಪರಿಷತ್ತಿನಲ್ಲಿ ಖಾಲಿ ಇರುವ ಸ್ಥಾನ ಒಂದು ಮಾತ್ರ. ಈ ಸ್ಥಾನಕ್ಕೆ ಫೆ. 17ರಂದು ಚುನಾವಣೆ ನಡೆಯಲಿದ್ದು, ಉಪುಮುಖ್ಯಮಂತ್ರಿ ಹುದ್ದೆ ಮುಂದುವರಿಯುತ್ತಿರುವುದರಿಂದ ಲಕ್ಷ್ಮಣ ಸವದಿ ಅವರನ್ನೇ ಈ ಸ್ಥಾನಕ್ಕೆ ಆಯ್ಕೆ ಮಾಡಬೇಕು.

ಇದರ ಜತೆಗೆ ಮೈತ್ರಿ ಸರ್ಕಾರ ಉರುಳಲು ಕಾರಣರಾದ ಆರ್.ಶಂಕರ್ ಅವರಿಗೆ ವಿಧಾನಸಭೆ ಉಪ ಚುನಾವಣೆಯಲ್ಲಿ ಟಿಕೆಟ್ ನೀಡಿಲ್ಲ. ವಿಧಾನ ಪರಿಷತ್ ಸದಸ್ಯರಾಗಿ ನೇಮಕ ಮಾಡಿ ಸಚಿವ ಸ್ಥಾನ ಕಲ್ಪಿಸುವ ಭರವಸೆ ನೀಡಲಾಗಿದ್ದು, ಮುಂದೆ ವಿಧಾನ ಪರಿಷತ್ತಿನ ಒಂದು ಸ್ಥಾನವನ್ನು ಅವರಿಗೆ ಮೀಸಲಿಡಬೇಕಾಗುತ್ತದೆ. ಹೀಗಿರುವಾಗ ಯೋಗೇಶ್ವರ್ ಅವರನ್ನು ಮಂತ್ರಿ ಮಾಡಿದರೆ ಅವರನ್ನು ಆರು ತಿಂಗಳಲ್ಲಿ ಮೇಲ್ಮನೆಗೆ ಆಯ್ಕೆ ಮಾಡಬೇಕಾಗುತ್ತದೆ. ಸದ್ಯದ ಪರಿಸ್ಥಿತಿಯಲ್ಲಿ ಅದು ಕಷ್ಟಸಾಧ್ಯ. ಹಾಗೆಂದು ಮಂತ್ರಿ ಸ್ಥಾನ ನೀಡದೇ ಇದ್ದರೆ ಸರ್ಕಾರ ರಚನೆಗೆ ಕಾರಣರಾದ ಯೋಗೇಶ್ವರ್ ಅವರಿಗೆ ದ್ರೋಹ ಮಾಡಿದಂತಾಗುತ್ತದೆ. ಈ ಸಮಸ್ಯೆಗೂ ಮದ್ದೆರೆಯುವ ಜವಾಬ್ದಾರಿ ಯಡಿಯೂರಪ್ಪ ಅವರ ಮೇಲಿದೆ.

ಇದಿಷ್ಟು ಒಂದೆಡೆಯಾದರೆ, ಪ್ರಸ್ತುತ ಹಳೆಯ ಬಿಜೆಪಿಗೆ ಸಿಕ್ಕಿರುವ ಮೂರು ಸ್ಥಾನಗಳ ಪೈಕಿ ಉಮೇಶ್ ಕತ್ತಿ ಮತ್ತು ಅರವಿಂದ ಲಿಂಬಾವಳಿ ಅವರಿಗೆ ನೀಡಲೇ ಬೇಕಾಗುತ್ತದೆ. ಉಮೇಶ್ ಕತ್ತಿ ಅವರಿಗೆ ಈಗಾಗಲೇ ಯಡಿಯೂರಪ್ಪ ಅವರು ಮಂತ್ರಿ ಮಾಡುವ ಭರವಸೆ ನೀಡಿದ್ದರೆ, ಸಂಪುಟ ರಚನೆ ವೇಳೆಯೇ ಮಂತ್ರಿಯಾಗಬೇಕಿದ್ದ ಅರವಿಂದ ಲಿಂಬಾವಳಿ ಕಾರಣಾಂತರಗಳಿಂದ ಮಂತ್ರಿ ಸ್ಥಾನ ತಪ್ಪಿಸಿಕೊಂಡಿದ್ದರು. ಈ ಬಾರಿ ಅವರಿಗೆ ಸಚಿವ ಸಂಪುಟದಲ್ಲಿ ಸ್ಥಾನ ಬಹುತೇಕ ಖಚಿತ. ಉಳಿದ ಒಂದು ಸ್ಥಾನಕ್ಕೆ ಯಲಬುರ್ಗಾ ಶಾಸಕ ಹಾಲಪ್ಪ ಆಚಾರ್ ಅವರು ಆಕಾಂಕ್ಷಿಯಾಗಿದ್ದರೆ, ಯೋಗೇಶ್ವರ್ ಹೆಸರು ಕೇಳಿಬರುತ್ತಿದೆ.

ಆದರೆ, ಈ ಬಾರಿ 13 ಕ್ಷೇತ್ರಗಳಲ್ಲಿ 12 ಕ್ಷೇತ್ರಗಳಲ್ಲಿ ಬಿಜೆಪಿಯನ್ನು ಗೆಲ್ಲಿಸಿಕೊಟ್ಟ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ವಿಚಾರ ಬಂದೇ ಇಲ್ಲ. ಆಡಳಿತ ಪಕ್ಷದ ಮುಖ್ಯ ಸಚೇತಕರಾಗಿರುವ ಸುನೀಲ್ ಕುಮಾರ್, ಕುಂದಾಪುರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಮತ್ತು ಸುಳ್ಯದ ಎಸ್.ಅಂಗಾರ ಅವರ ಪೈಕಿ ಒಬ್ಬರಿಗೆ ಸಚಿವ ಸ್ಥಾನ ನೀಡಲೇ ಬೇಕು ಎಂಬ ಒತ್ತಾಯ ಮೊದಲಿನಿಂದಲೂ ಇದೆ. ಈ ಬಾರಿಯಾದರೂ ಒಂದು ಸ್ಥಾನ ಸಿಗಬಹುದು ಎಂಬ ನಿರೀಕ್ಷೆ ಹುಸಿಯಾಗುತ್ತಿದ್ದು, ಇದು ಭವಿಷ್ಯದಲ್ಲಿ ಬಿಜೆಪಿಗೆ ಹಿನ್ನಡೆ ಉಂಟುಮಾಡಬಹುದು. ಆದರೆ, ಇದನ್ನು ಯೋಚಿಸದೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಸಾಮಾಜಿಕ ನ್ಯಾಯಕ್ಕಿಂತ ಸರ್ಕಾರ ಭದ್ರ ಮಾಡಿಕೊಳ್ಳುವುದಷ್ಟೇ ನನ್ನ ಕೆಲಸ ಎಂದುಕೊಂಡರೆ ಆ ಭಾಗಕ್ಕೆ ಮಂತ್ರಿ ಸ್ಥಾನ ಮರೀಚಿಕೆಯಾಗಲಿದೆ.

ರಮೇಶ್ ಜಾರಕಿಹೊಳಿ ತಂಡವೂ ಇಕ್ಕಟ್ಟಿಗೆ ಸಿಲುಕಿದೆ

ಇಲ್ಲಿ ಯಡಿಯೂರಪ್ಪ ಮಾತ್ರವಲ್ಲ, ರಮೇಶ್ ಜಾರಕಿಹೊಳಿ ಮತ್ತು ಅವರ ತಂಡವೂ (11 ಶಾಸಕರು) ಇಕ್ಕಟ್ಟಿಗೆ ಸಿಲುಕಿದ್ದಾರೆ. ಮೈತ್ರಿ ಸರ್ಕಾರ ಉರುಳಿಸಲು ಕಾರಣರಾದ ಎಲ್ಲರಿಗೂ (ಸೋತವರು ಸೇರಿ) ಸಚಿವ ಸ್ಥಾನ ನೀಡಬಕೇಕು, ಗೆದ್ದ ಎಲ್ಲರಿಗೂ ಸಚಿವ ಸ್ಥಾನ ನೀಡಲೇ ಬೇಕು ಎಂದು ಪಟ್ಟು ಹಿಡಿದಿರುವ ರಮೇಶ್ ಜಾರಕಿಹೊಳಿ ಮತ್ತು 10 ಶಾಸಕರ ತಂಡ ಇದೀಗ ಇಕ್ಕಟ್ಟಿನಲ್ಲಿ ಸಿಲುಕುವಂತಾಗಿದೆ. ಗೆದ್ದಿರುವ 11 ಶಾಸಕರ ಪೈಕಿ ಹೈಕಮಾಂಡ್ ಇಂತಿಷ್ಟು (9 ಅಥವಾ 10) ಮಂದಿಗೆ ಸಚಿವ ಸ್ಥಾನಗಳನ್ನು ನೀಡಿ ಎಂದು ಹೈಕಮಾಂಡ್ ಹೇಳಿದೆ. ಈ ಸ್ಥಾನಗಳಿಗೆ ನಿಮ್ಮ 11 ಮಂದಿ ಪೈಕಿ ಯಾರನ್ನೆಲ್ಲಾ ಆಯ್ಕೆ ಮಾಡಬೇಕು ಎಂಬುದನ್ನು ನೀವೇ ನಿರ್ಧರಿಸಿಕೊಳ್ಳಿ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಹೇಳಿದ್ದಾರೆ. ಆ ಮೂಲಕ ತಮ್ಮ ಒಂದು ಸಮಸ್ಯೆಯನ್ನು ರಮೇಶ್ ಜಾರಕಿಹೊಳಿ ಮತ್ತು ತಂಡದ ಮೇಲೆಯೇ ಹಾಕಿ ತಾವು ಪಾರಾಗಿದ್ದಾರೆ.

ಇರುವ 11 ಶಾಸಕರಿಗೆ ಇಂತಿಷ್ಟು ಸಚಿವ ಸ್ಥಾನ ಎಂದು ನಿಗದಿಯಾಗಿರುವುದರಿಂದ ಅದಕ್ಕೆ ಯಾರನ್ನು ಆಯ್ಕೆ ಮಾಡಬೇಕು ಎಂಬುದನ್ನು ಅವರವರೇ ಕುಳಿತು ಬಗೆಹರಿಸಿಕೊಳ್ಳಬೇಕು. ಯಾರಿಗೆ ಸಚಿವ ಸ್ಥಾನ ತಪ್ಪಿದರೂ ಅದಕ್ಕೆ ಅವರ ಜತೆಗಿದ್ದವರೇ ಕಾರಣರಾಗುತ್ತಾರೆ. ಯಡಿಯೂರಪ್ಪ ಅವರ ಮೇಲೆ ಅಪವಾದ ಬರುವುದು ತಪ್ಪುತ್ತದೆ. ಇನ್ನೊಂದೆಡೆ ಎಲ್ಲರಿಗೂ ಮಂತ್ರಿ ಸ್ಥಾನ ನೀಡದೇ ಇದ್ದಲ್ಲಿ ಯಾರಿಗೂ ಸಚಿವ ಸ್ಥಾನ ಬೇಡವೇ ಬೇಡ ಎಂದು ಹೇಳಲು ಸಾಧ್ಯವಿಲ್ಲ. ಅಷ್ಟೇ ಅಲ್ಲ, ಶಾಸಕ ಸ್ಥಾನದಿಂದ ಅನರ್ಹಗೊಂಡು ಈಗಷ್ಟೇ ಪುನರಾಯ್ಕೆಯಾಗಿರುವ ಅವರು ಮತ್ತೆ ಕ್ಯಾತೆ ತೆಗೆದು ರಾಜೀನಾಮೆ ನೀಡಿದರೆ ಅಳಿದುಳಿದ ಗೌರವವೂ ಹರಾಜಾಗುತ್ತದೆ. ಹೀಗಾಗಿ ಮುಖ್ಯಮಂತ್ರಿ ಯಡಿಯೂರಪ್ಪ ಅವರೊಂದಿಗೆ ಕುಳಿತು ಸಮಸ್ಯೆ ಬಗೆಹರಿಸಿಕೊಳ್ಳಲು ಈ ಶಾಸಕರು ಕೂಡ ನಿರ್ಧರಿಸಿದ್ದಾರೆ.

ಆದರೆ, ಅಂತಿಮವಾಗಿ ಯಾರಿಗೆಲ್ಲಾ ಸಚಿವ ಸ್ಥಾನ ಸಿಗುತ್ತದೆ ಎಂಬುದು ಸೋಮವಾರವಷ್ಟೇ ಗೊತ್ತಾಗಲಿದೆ. ಒಂದೊಮ್ಮೆ ಅಷ್ಟರೊಳಗೆ ಸಮಸ್ಯೆ ಬಗೆಹರಿಯದೇ ಇದ್ದಲ್ಲಿ ಸಂಪುಟ ವಿಸ್ತರಣೆ ಮತ್ತೂ ಒಂದೆರಡು ದಿನ ಮುಂದಕ್ಕೆ ಹೋಗಬಹುದು.

Tags: BJPBS Yediyurappacabinet expansionchief ministerhigh commandsuspenseಅನುಮಾನಬಿಎಸ್ ಯಡಿಯೂರಪ್ಪಬಿಜೆಪಿಮುಖ್ಯಮಂತ್ರಿಸಂಪುಟ ವಿಸ್ತರಣೆಹೈಕಮಾಂಡ್
Previous Post

ಜನಸಾಮಾನ್ಯರಿಗೆ ಒಂದು ಕೈಲಿ ಕೊಟ್ಟು ಮತ್ತೊಂದು ಕೈಲಿ ಕಿತ್ತುಕೊಂಡ ನಿರ್ಮಲಾ

Next Post

ಬಜೆಟ್: ಹಾಡಿ ಹೊಗಳಿದ ಬಿಜೆಪಿ, ತೆಗಳಿದ ಪ್ರತಿಪಕ್ಷಗಳು

Related Posts

“ಯಾವ ಇಕ್ಬಾಲ್ ಹುಸೇನ್ ಮಾತನ್ನು ನಂಬಬೇಡಿ, ಆತ ಚಟಕ್ಕೆ ಮಾತನಾಡುತ್ತಾನೆ”
Top Story

“ಯಾವ ಇಕ್ಬಾಲ್ ಹುಸೇನ್ ಮಾತನ್ನು ನಂಬಬೇಡಿ, ಆತ ಚಟಕ್ಕೆ ಮಾತನಾಡುತ್ತಾನೆ”

by ಪ್ರತಿಧ್ವನಿ
December 13, 2025
0

ಬೆಂಗಳೂರು ದಕ್ಷಿಣ ಹಾಗೂ ಉತ್ತರ ಜಿಲ್ಲೆಗಳಲ್ಲಿ ಹೊಸ ಬೆಂಗಳೂರು ನಿರ್ಮಾಣ: ಡಿಸಿಎಂ ಡಿ.ಕೆ. ಶಿವಕುಮಾರ್ ದೇವನಹಳ್ಳಿಗೆ ಕಾವೇರಿ, ಎತ್ತಿನಹೊಳೆ ನೀರು *ಯೋಜನಾ ಪ್ರಾಧಿಕಾರದಿಂದ 30-40 ಮೀಟರ್ ರಸ್ತೆ...

Read moreDetails
ಬ್ರಾಹ್ಮಣರ ಅಭಿವೃದ್ಧಿಗೆ, ಸಮಸ್ಯೆಗೆ ಕಾಂಗ್ರೆಸ್ ಸರ್ಕಾರ ಸದಾ ಸ್ಪಂದಿಸುತ್ತಿದೆ: ಸಚಿವ ದಿನೇಶ್ ಗುಂಡೂರಾವ್

ಬ್ರಾಹ್ಮಣರ ಅಭಿವೃದ್ಧಿಗೆ, ಸಮಸ್ಯೆಗೆ ಕಾಂಗ್ರೆಸ್ ಸರ್ಕಾರ ಸದಾ ಸ್ಪಂದಿಸುತ್ತಿದೆ: ಸಚಿವ ದಿನೇಶ್ ಗುಂಡೂರಾವ್

December 13, 2025
ಬ್ರಾಹ್ಮಣರ ಅಭಿವೃದ್ಧಿಗೆ, ಸಮಸ್ಯೆಗೆ ಕಾಂಗ್ರೆಸ್ ಸರ್ಕಾರ ಸದಾ ಸ್ಪಂದಿಸುತ್ತಿದೆ

ಬ್ರಾಹ್ಮಣರ ಅಭಿವೃದ್ಧಿಗೆ, ಸಮಸ್ಯೆಗೆ ಕಾಂಗ್ರೆಸ್ ಸರ್ಕಾರ ಸದಾ ಸ್ಪಂದಿಸುತ್ತಿದೆ

December 13, 2025
ಸಂಗೀತಗಾರ ರಿಕಿ ಕೇಜ್ ಮನೆಯಲ್ಲಿ ಕಳ್ಳತನ: ತಕ್ಷಣವೇ ಪ್ರತಿಕ್ರಿಯಿಸಿದ Zomato

ಸಂಗೀತಗಾರ ರಿಕಿ ಕೇಜ್ ಮನೆಯಲ್ಲಿ ಕಳ್ಳತನ: ತಕ್ಷಣವೇ ಪ್ರತಿಕ್ರಿಯಿಸಿದ Zomato

December 13, 2025
ಬೆಂಗಳೂರಿಗೆ 2ನೇ ಏರ್‌ಪೋರ್ಟ್‌ ಖಚಿತ: ಕಾರ್ಯಸಾಧ್ಯತಾ ವರದಿಗೆ ಟೆಂಡರ್ ಕರೆದ ಸರ್ಕಾರ

ಬೆಂಗಳೂರಿಗೆ 2ನೇ ಏರ್‌ಪೋರ್ಟ್‌ ಖಚಿತ: ಕಾರ್ಯಸಾಧ್ಯತಾ ವರದಿಗೆ ಟೆಂಡರ್ ಕರೆದ ಸರ್ಕಾರ

December 13, 2025
Next Post
ಬಜೆಟ್: ಹಾಡಿ ಹೊಗಳಿದ ಬಿಜೆಪಿ

ಬಜೆಟ್: ಹಾಡಿ ಹೊಗಳಿದ ಬಿಜೆಪಿ, ತೆಗಳಿದ ಪ್ರತಿಪಕ್ಷಗಳು

Please login to join discussion

Recent News

“ಯಾವ ಇಕ್ಬಾಲ್ ಹುಸೇನ್ ಮಾತನ್ನು ನಂಬಬೇಡಿ, ಆತ ಚಟಕ್ಕೆ ಮಾತನಾಡುತ್ತಾನೆ”
Top Story

“ಯಾವ ಇಕ್ಬಾಲ್ ಹುಸೇನ್ ಮಾತನ್ನು ನಂಬಬೇಡಿ, ಆತ ಚಟಕ್ಕೆ ಮಾತನಾಡುತ್ತಾನೆ”

by ಪ್ರತಿಧ್ವನಿ
December 13, 2025
ಸಂಗೀತಗಾರ ರಿಕಿ ಕೇಜ್ ಮನೆಯಲ್ಲಿ ಕಳ್ಳತನ: ತಕ್ಷಣವೇ ಪ್ರತಿಕ್ರಿಯಿಸಿದ Zomato
Top Story

ಸಂಗೀತಗಾರ ರಿಕಿ ಕೇಜ್ ಮನೆಯಲ್ಲಿ ಕಳ್ಳತನ: ತಕ್ಷಣವೇ ಪ್ರತಿಕ್ರಿಯಿಸಿದ Zomato

by ಪ್ರತಿಧ್ವನಿ
December 13, 2025
ಬೆಂಗಳೂರಿಗೆ 2ನೇ ಏರ್‌ಪೋರ್ಟ್‌ ಖಚಿತ: ಕಾರ್ಯಸಾಧ್ಯತಾ ವರದಿಗೆ ಟೆಂಡರ್ ಕರೆದ ಸರ್ಕಾರ
Top Story

ಬೆಂಗಳೂರಿಗೆ 2ನೇ ಏರ್‌ಪೋರ್ಟ್‌ ಖಚಿತ: ಕಾರ್ಯಸಾಧ್ಯತಾ ವರದಿಗೆ ಟೆಂಡರ್ ಕರೆದ ಸರ್ಕಾರ

by ಪ್ರತಿಧ್ವನಿ
December 13, 2025
ಯಾರ ಬೆದರಿಕೆಗೂ ಬಗ್ಗಲ್ಲ: ಅಪಾರ್ಟ್‌ಮೆಂಟ್ ಅಸೋಸಿಯೇಷನ್‌ ಖಜಾಂಚಿಗೆ ಡಿಕೆಶಿ ಎಚ್ಚರಿಕೆ
Top Story

ಯಾರ ಬೆದರಿಕೆಗೂ ಬಗ್ಗಲ್ಲ: ಅಪಾರ್ಟ್‌ಮೆಂಟ್ ಅಸೋಸಿಯೇಷನ್‌ ಖಜಾಂಚಿಗೆ ಡಿಕೆಶಿ ಎಚ್ಚರಿಕೆ

by ಪ್ರತಿಧ್ವನಿ
December 13, 2025
ಮೇಕೆದಾಟು ಯೋಜನೆ ತಡೆಯಿರಿ: ಕ್ಯಾತೆ ತೆಗೆದ ಎಐಎಡಿಎಂಕೆ ಪಳನಿಸ್ವಾಮಿ
Top Story

ಮೇಕೆದಾಟು ಯೋಜನೆ ತಡೆಯಿರಿ: ಕ್ಯಾತೆ ತೆಗೆದ ಎಐಎಡಿಎಂಕೆ ಪಳನಿಸ್ವಾಮಿ

by ಪ್ರತಿಧ್ವನಿ
December 13, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

“ಯಾವ ಇಕ್ಬಾಲ್ ಹುಸೇನ್ ಮಾತನ್ನು ನಂಬಬೇಡಿ, ಆತ ಚಟಕ್ಕೆ ಮಾತನಾಡುತ್ತಾನೆ”

“ಯಾವ ಇಕ್ಬಾಲ್ ಹುಸೇನ್ ಮಾತನ್ನು ನಂಬಬೇಡಿ, ಆತ ಚಟಕ್ಕೆ ಮಾತನಾಡುತ್ತಾನೆ”

December 13, 2025
ಬ್ರಾಹ್ಮಣರ ಅಭಿವೃದ್ಧಿಗೆ, ಸಮಸ್ಯೆಗೆ ಕಾಂಗ್ರೆಸ್ ಸರ್ಕಾರ ಸದಾ ಸ್ಪಂದಿಸುತ್ತಿದೆ: ಸಚಿವ ದಿನೇಶ್ ಗುಂಡೂರಾವ್

ಬ್ರಾಹ್ಮಣರ ಅಭಿವೃದ್ಧಿಗೆ, ಸಮಸ್ಯೆಗೆ ಕಾಂಗ್ರೆಸ್ ಸರ್ಕಾರ ಸದಾ ಸ್ಪಂದಿಸುತ್ತಿದೆ: ಸಚಿವ ದಿನೇಶ್ ಗುಂಡೂರಾವ್

December 13, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada