• Home
  • About Us
  • ಕರ್ನಾಟಕ
Monday, January 19, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ರಾಜಕೀಯ

ಗೊಂದಲ ಬಗೆಹರಿದರಷ್ಟೇ 13 ಮಂದಿ, ಇಲ್ಲವಾದರೆ 10 ಮಂದಿಗೆ ಮಾತ್ರ ಸಚಿವ ಸ್ಥಾನ

by
February 5, 2020
in ರಾಜಕೀಯ
0
ಗೊಂದಲ ಬಗೆಹರಿದರಷ್ಟೇ 13 ಮಂದಿ
Share on WhatsAppShare on FacebookShare on Telegram

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಮಂತ್ರಿ ಮಂಡಲ ವಿಸ್ತರಣೆ ಕ್ಷಣ ಕ್ಷಣಕ್ಕೂ ಹೊಸ ತಿರುವು ಪಡೆದುಕೊಳ್ಳುತ್ತಿದೆ. ನನಗೆ ದಕ್ಕದ್ದು ಬೇರೆಯವರಿಗೂ ದಕ್ಕಬಾರದು ಎಂಬ ಬಿಜೆಪಿ ಶಾಸಕರ ಹೋರಾಟಕ್ಕೆ ಮದ್ದೆರೆಯುವ ಕೊನೆಯ ಪ್ರಯತ್ನವನ್ನು ಪಕ್ಷದ ಹೈಕಮಾಂಡ್ ಮಾಡುತ್ತಿದ್ದು, ಇದರಿಂದ ಗುರುವಾರ ಸಚಿವರಾಗಿ ಅಧಿಕಾರ ಸ್ವೀಕರಿಸುವವರ ಸಂಖ್ಯೆ ಎಷ್ಟು ಎಂಬ ಗೊಂದಲ ಕಾಣಿಸಿಕೊಂಡಿದೆ. ಇದರೊಂದಿಗೆ ಸೋತವರಿಗೆ ಮಂತ್ರಿಗಿರಿ ನೀಡಬಾರದು ಎಂದು ಸಿ.ಪಿ.ಯೋಗೇಶ್ವರ್ ವಿರುದ್ಧ ಬಂಡೆದ್ದು ಪ್ರತ್ಯೇಕ ಸಭೆಗಳನ್ನು ನಡೆಸಿ ಬಂಡಾಯದ ಭೀತಿ ಮೂಡಿಸುತ್ತಿರುವ ಆಕಾಂಕ್ಷಿಗಳಿಂದಾಗಿ ಮೂಲ ಬಿಜೆಪಿ ಶಾಸಕರು ನಾಳೆ ಸಚಿವ ಸ್ಥಾನದಿಂದ ವಂಚಿತರಾಗುವ ಆತಂಕ ಕಾಣಿಸಿಕೊಂಡಿದೆ.

ADVERTISEMENT

ಸಚಿವ ಸಂಪುಟ ವಿಸ್ತರಣೆ ಕುರಿತಂತೆ ಕಳೆದ ವಾರ ದೆಹಲಿಗೆ ತೆರಳಿ ವರಿಷ್ಠರೊಂದಿಗೆ ಮಾತುಕತೆ ನಡೆಸಿದ್ದ ಮುಖ್ಯಮಂತ್ರಿ ಯಡಿಯೂರಪ್ಪ ಅವರು 10+3 (10 ಮಂದಿ ನೂತನವಾಗಿ ಗೆದ್ದವರು, ಮೂವರು ಹಳೇ ಬಿಜೆಪಿ) ಲೆಕ್ಕಾಚಾರದೊಂದಿಗೆ ಮಂತ್ರಿಮಂಡಲವನ್ನು ವಿಸ್ತರಣೆ ಮಾಡಲು ಅನುಮತಿ ಪಡೆದುಕೊಂಡು ಬಂದಿದ್ದರು. ಅರ್ಹ 11 ಶಾಸಕರ ಪೈಕಿ ಮಹೇಶ್ ಕುಮುಟಳ್ಳಿ ಹೊರತುಪಡಿಸಿ ಉಳಿದವರಿಗೆ ಮಂತ್ರಿ ಸ್ಥಾನ ನೀಡುವುದು ಹಾಗೂ ಮೂಲ ಬಿಜೆಪಿಯವರಲ್ಲಿ ಶಾಸಕರಾದ ಅರವಿಂದ ಲಿಂಬಾವಳಿ, ಉಮೇಶ್ ಕತ್ತಿ ಮತ್ತು ಆಪರೇಷನ್ ಕಮಲದಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂಬುದು ಅವರ ಯೋಚನೆಯಾಗಿತ್ತು.

ಇದನ್ನೂ ಓದಿ: ಸಂಪುಟ ಸಂಕಟ- CM BSY ಬೆಂಬಲಕ್ಕೆ ನಿಂತ ವರಿಷ್ಠರು

ಆದರೆ, ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸೋತ ಸಿ.ಪಿ.ಯೋಗೇಶ್ವರ್ ಅವರಿಗೆ ಸಚಿವ ಸ್ಥಾನ ನೀಡಲು ಮೂಲ ಬಿಜೆಪಿ ಶಾಸಕರು ಆಕ್ಷೇಪ ವ್ಯಕ್ತಪಡಿಸಿದ್ದರು. ಈಗಾಗಲೇ ಸೋತ ಲಕ್ಷ್ಮಣ ಸವದಿ ಅವರನ್ನು ಸಚಿವರನ್ನಾಗಿ ಮಾಡಿ ಉಪಮುಖ್ಯಮಂತ್ರಿ ಹುದ್ದೆ ನೀಡಲಾಗಿದೆ. ಇದೀಗ ಮತ್ತೆ ಸೋತವರಿಗೇ ಸಚಿವ ಸ್ಥಾನ ನೀಡಿದರೆ ಗೆದ್ದು ಬಂದವರ ಕಥೆ ಏನು ಎಂದು ಪ್ರಶ್ನಿಸಿದ್ದರು. ಅಲ್ಲದೆ, ಸಂಪುಟ ವಿಸ್ತರಣೆಯಲ್ಲೂ ಪ್ರಾದೇಶಿಕ ಅಸಮತೋಲನವಾಗುತ್ತಿದೆ. ಬಿಜೆಪಿಗೆ ಹೆಚ್ಚು ಸ್ಥಾನಗಳನ್ನು ತಂದುಕೊಟ್ಟ ಕಲ್ಯಾಣ ಕರ್ನಾಟಕ, ಕರಾವಳಿ ಕರ್ನಾಟಕಕ್ಕೆ ಅನ್ಯಾಯವಾಗುತ್ತಿದೆ ಎಂದು ಗುಲ್ಲೆಬ್ಬಿಸಿದ್ದರು. ಯಾವುದೇ ಕಾರಣಕ್ಕೂ ಯೋಗೇಶ್ವರ್ ಅವರಿಗೆ ಸಚಿವ ಸ್ಥಾನ ನೀಡಬಾರದು ಎಂದು ಪಟ್ಟು ಹಿಡಿದು ಕುಳಿತಿರುವ ಈ ಶಾಸಕರು, ಬಂಡಾಯವೇಳುವ ಸೂಚನೆಯನ್ನೂ ನೀಡಿದ್ದರು. ಇದರ ಪರಿಣಾಮ ಸಂಪುಟ ವಿಸ್ತರಣೆಯಲ್ಲಿ 10+3 ಫಾರ್ಮುಲಾ ಬದಿಗಿಟ್ಟು ಅರ್ಹ ಹತ್ತು ಶಾಸಕರಿಗೆ ಮಾತ್ರ ಗುರುವಾರ ಬೆಳಗ್ಗೆ 10.30ಕ್ಕೆ ಮಂತ್ರಿಗಿರಿ ಸಿಗಲಿದೆ ಎಂಬ ಮಾತುಗಳು ಕೇಳಿಬರುತ್ತಿದೆ.

ಇದನ್ನೂ ಓದಿ: ಸಂಪುಟ ವಿಸ್ತರಣೆ ಸುಸೂತ್ರ- ಫಲಿಸಿತೇ ಸಿಎಂ ತಂತ್ರಗಾರಿಕೆ?

10+3 ಬದಲು ಅರ್ಹ ಹತ್ತು ಮಂದಿಗೆ ಮಾತ್ರ ಸಚಿವ ಸ್ಥಾನ ಎಂಬುದು ನಿಜವೇ?

10+3 ಫಾರ್ಮುಲಾ ಬದಿಗಿಟ್ಟು ಅರ್ಹ ಹತ್ತು ಶಾಸಕರಿಗೆ ಮಾತ್ರ ಗುರುವಾರ ಬೆಳಗ್ಗೆ 10.30ಕ್ಕೆ ಮಂತ್ರಿಗಿರಿ ಸಿಗಲಿದೆ ಎಂಬ ಊಹಾಪೋಹಗಳ ಬಗ್ಗೆ ಪರಿಶೀಲಿಸಿದಾಗ ಸದ್ಯ ಇದು ಎಚ್ಚರಿಕೆ. ಆದರೆ, ಅಸಮಾಧಾನಗೊಂಡಿರುವ ಶಾಸಕರು ಸಮಾಧಾನಗೊಳ್ಳದೇ ಇದ್ದರೆ ನಿಜವಾಗುತ್ತದೆ ಎಂಬ ಮಾಹಿತಿ ಲಭ್ಯವಾಗಿದೆ. ಅಂದರೆ, ಶಾಸಕರು ತಮ್ಮ ಪಟ್ಟು ಸಡಿಲಿಸಿ ಮಂತ್ರಿ ಮಂಡಲ ವಿಸ್ತರಣೆಗೆ ಯಾವುದೇ ಅಡ್ಡಿಯಾಗದಂತೆ ನೋಡಿಕೊಂಡರೆ ಈ ಹಿಂದೆ ನಿರ್ಧಾರವಾದಂತೆ 10+3 (10 ಮಂದಿ ನೂತನವಾಗಿ ಗೆದ್ದವರು, ಮೂವರು ಹಳೇ ಬಿಜೆಪಿ ಶಾಸಕರು) ಸಚಿವರಾಗಿ ಪ್ರಮಾಣವಚನ ಸ್ವೀಕರಿಸುತ್ತಾರೆ. ಗೊಂದಲ ಬಗೆಹರಿದ ಮೇಲೆ ಮೂಲ ಬಿಜೆಪಿ ಶಾಸಕರಿಗೆ ಸಚಿವರಾಗುವ ಯೋಗ ಬರುತ್ತದೆ.

ಇದನ್ನು ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಪಕ್ಷದ ವರಿಷ್ಠರು ಚರ್ಚಿಸಿಯೇ ನಿರ್ಧರಿಸಿದ್ದಾರೆ. ಸಂಪುಟ ವಿಸ್ತರಣೆ ಗೊಂದಲದಿಂದಾಗಿ ಆರಂಭದಲ್ಲಿ ಗುರುವಾರದ ಸಂಪುಟ ವಿಸ್ತರಣೆಯನ್ನೇ ಮುಂದೂಡಲು ಯೋಚಿಸಲಾಗಿತ್ತು. ಆದರೆ, ಫೆಬ್ರವರಿ 17ರಿಂದ ವಿಧಾನ ಮಂಡಲ ಅಧಿವೇಶನ ಆರಂಭವಾಗಲಿದ್ದು, ಅದಕ್ಕೆ ಮೊದಲು ಮೈತ್ರಿ ಸರ್ಕಾರ ಉರುಳಿಸಿ ಬಿಜೆಪಿಗೆ ಸೇರಿ ಗೆದ್ದವರಿಗೆ ಸಚಿವ ಸ್ಥಾನ ನೀಡಲೇ ಬೇಕು. ಇಲ್ಲವಾದಲ್ಲಿ ಅಧಿವೇಶನದಲ್ಲಿ ಸರ್ಕಾರ ಮುಜುಗರಕ್ಕೆ ಒಳಗಾಗುತ್ತದೆ. ಅಷ್ಟೇ ಅಲ್ಲ, ಈ ಶಾಸಕರು ಅಧಿವೇಶನದಿಂದ ದೂರ ಉಳಿದು ಸರ್ಕಾರ ಇಕ್ಕಟ್ಟಿಗೆ ಸಿಲುಕಬೇಕಾಗುತ್ತದೆ. ಈ ಕಾರಣಕ್ಕಾಗಿ ಗುರುವಾರ ಅರ್ಹ 11 ಶಾಸಕರ ಪೈಕಿ 10 ಮಂದಿ ಗುರುವಾರ ಸಚಿವರಾಗಿ ಅಧಿಕಾರ ಸ್ವೀಕರಿಸಲೇಬೇಕು. ಬುಧವಾರ ಸಂಜೆಯೊಳಗೆ ವಿವಾದ ಬಗೆಹರಿಯದೇ ಇದ್ದಲ್ಲಿ ಈ ಹತ್ತು ಮಂದಿಗೆ ಸಚಿವ ಸ್ಥಾನ ನೀಡೋಣ. ಉಳಿದವರ ವಿಚಾರವನ್ನು ಅಧಿವೇಶನ ಮುಗಿದ ಬಳಿಕ ನಿರ್ಧರಿಸೋಣ ಎಂಬ ಮುಖ್ಯಮಂತ್ರಿಯವರ ಸಲಹೆಗೆ ಹೈಕಮಾಂಡ್ ಒಪ್ಪಿಕೊಂಡಿದೆ.

ರಾತ್ರಿಯೊಳಗೆ ಎಲ್ಲವೂ ಅಂತಿಮವಾಗುವ ಸಾಧ್ಯತೆ

ಸದ್ಯದ ಮಾಹಿತಿ ಪ್ರಕಾರ ಗುರುವಾರ ಸಚಿವ ಸ್ಥಾನ ಸ್ವೀಕರಿಸುವವರು 10 ಮಂದಿಯೇ ಅಥವಾ 13 ಮಂದಿಯೇ ಎಂಬ ಬಗ್ಗೆ ಬುಧವಾರ ರಾತ್ರಿಯೊಳಗೆ ಸ್ಪಷ್ಟ ಚಿತ್ರಣ ಸಿಗಲಿದೆ. ಸಂಪುಟ ವಿಸ್ತರಣೆ ವಿಚಾರದಲ್ಲಿ ಅಸಮಾಧಾನಗೊಂಡು ಪ್ರತ್ಯೇಕ ಸಭೆ ನಡೆಸಿರುವ ಶಾಸಕರನ್ನು ತೃಪ್ತಿ ಪಡಿಸುವ ಪ್ರಯತ್ನಗಳು ನಡೆಯುತ್ತಿವೆ. ಹೈಕಮಾಂಡ್ ನಾಯಕರ ಪ್ರತಿನಿಧಿಗಳ ಜತೆಗೆ ಮುಖ್ಯಮಂತ್ರಿ ಯಡಿಯೂರಪ್ಪ ಅವರೂ ಅತೃಪ್ತ ಶಾಸಕರೊಂದಿಗೆ ಚರ್ಚಿಸುತ್ತಿದ್ದಾರೆ. ಮಾತುಕತೆ ಫಲಪ್ರದವಾಗಿ ಯಡಿಯೂರಪ್ಪ ಮತ್ತು ಹೈಕಮಾಂಡ್ ನಿರ್ಧರಿಸಿದಂತೆ ಸಚಿವ ಸಂಪುಟ ವಿಸ್ತರಿಸಲು ಈ ಶಾಸಕರು ಒಪ್ಪಿಕೊಂಡರೆ ನಾಳೆಯೇ ಎಲ್ಲಾ 13 ಮಂದಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸುತ್ತಿದ್ದಾರೆ. ಇಲ್ಲವಾದಲ್ಲಿ ಅರ್ಹ 10 ಶಾಸಕರಿಗೆ ಮಾತ್ರ ಸಚಿವರಾಗುವ ಅವಕಾಶ ಸಿಗುತ್ತದೆ.

ಪ್ರಸ್ತುತ ಅಸಮಾಧಾನಗೊಂಡು ಪ್ರತ್ಯೇಕ ಸಭೆ ನಡೆಸುತ್ತಿರುವವರೆಲ್ಲರೂ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಆಪ್ತ ವಲಯಕ್ಕೆ ಸೇರಿದವರು. ಹೇಗಾದರೂ ಮಾಡಿ ಸಚಿವ ಸ್ಥಾನ ಗಿಟ್ಟಿಸಿಕೊಳ್ಳಲು ಸಾಧ್ಯವೋ ನೋಡೋಣ ಎಂಬ ಕಾರಣಕ್ಕೆ ಈ ರೀತಿಯ ಹೋರಾಟ ಮಾಡುತ್ತಿದ್ದಾರೆ. ಸಿಗುವುದಿಲ್ಲ ಎಂದು ಖಾತರಿಯಾದರೆ ಸರ್ಕಾರಕ್ಕೆ ಅಪಾಯ ತಂದೊಡ್ಡಿ ಯಡಿಯೂರಪ್ಪ ಅವರನ್ನು ಅಧಿಕಾರದಿಂದ ಕೆಳಗಿಳಿಯುವ ಮಟ್ಟಕ್ಕೆ ಇವರ ಹೋರಾಟ ಹೋಗುವುದಿಲ್ಲ. ಹೀಗಾಗಿ ರಾತ್ರಿಯೊಳಗೆ ಸಮಸ್ಯೆ ಬಗೆಹರಿದು ಪರಿಸ್ಥಿತಿ ತಿಳಿಗೊಳ್ಳಲಿದೆ. ಬಹುತೇಕ ನಾಳೆ ಎಲ್ಲಾ 13 ಮಂದಿ ಸಚಿವರಾಗಿ ಅಧಿಕಾರ ಸ್ವೀಕರಿಸಬಹುದು. ಒಂದೊಮ್ಮೆ ಸಮಸ್ಯೆ ಬಗೆಹರಿಯದಿದ್ದಲ್ಲಿ 10 ಮಂದಿಗೆ ಮಾತ್ರ ಈ ಬಾರಿ ಅವಕಾಶ ಸಿಗುತ್ತದೆ.

Tags: cabinet expansionCM YeddyurappaMinister seatOath Taking ceremonyಪ್ರಮಾಣವಚನಬಿಜೆಪಿಮುಖ್ಯಮಂತ್ರಿ ಯಡಿಯೂರಪ್ಪಸಚಿವ ಸ್ಥಾನ
Previous Post

ಮನೀಶ್ ಪಾಂಡೆ ಕಡೆಗಣನೆ; ಟೀಮ್‌ ಇಂಡಿಯಾ ಸೆಲೆಕ್ಷನ್‌ ಬಗ್ಗೆ ಅಭಿಮಾನಿಗಳು ಗರಂ 

Next Post

ದೆಹಲಿ ಗೆಲಲ್ಲು ಮೋದಿ ಕಸರತ್ತು! ರಾಮ ಮಂದಿರ ಟ್ರಸ್ಟ್ ದಾಳ!?

Related Posts

“ನನ್ನ ಅನುಪಸ್ಥಿಯಲ್ಲಿ ಜನರ ಕಷ್ಟ, ಸುಖಗಳನ್ನು ಆಲಿಸುವವರು ಡಾ.ಯತೀಂದ್ರ”
ಕರ್ನಾಟಕ

“ನನ್ನ ಅನುಪಸ್ಥಿಯಲ್ಲಿ ಜನರ ಕಷ್ಟ, ಸುಖಗಳನ್ನು ಆಲಿಸುವವರು ಡಾ.ಯತೀಂದ್ರ”

by ಪ್ರತಿಧ್ವನಿ
January 18, 2026
0

ಮೈಸೂರು: ವರುಣಾ ಕ್ಷೇತ್ರವನ್ನು ಮೇಲ್ಮನೆ ಸದಸ್ಯರು ಸಂಪೂರ್ಣವಾಗಿ ನೋಡಿಕೊಳ್ಳುತ್ತಿದ್ದು, ನನ್ನ ಗೈರು ಹಾಜರಿಯಲ್ಲಿ ಕ್ಷೇತ್ರದ ಜನರ ಕಷ್ಟ, ಸುಖಗಳನ್ನು ಆಲಿಸುವವರು ಡಾ.ಯತೀಂದ್ರ ಎಂದು ಸಿಎಂ‌ ಸಿದ್ದರಾಮಯ್ಯ ಹೇಳಿದರು....

Read moreDetails
“ಅಬಕಾರಿ ಲೈಸೆನ್ಸ್‌ಗೆ ಲಂಚ ಇದೊಂದು ಪ್ಯಾಕೇಜ್‌ ಡೀಲ್‌, ತಿಮ್ಮಾಪುರ ರಾಜೀನಾಮೆವರೆಗೂ ನಾವು ಹೋರಾಡ್ತೀವಿ”

“ಅಬಕಾರಿ ಲೈಸೆನ್ಸ್‌ಗೆ ಲಂಚ ಇದೊಂದು ಪ್ಯಾಕೇಜ್‌ ಡೀಲ್‌, ತಿಮ್ಮಾಪುರ ರಾಜೀನಾಮೆವರೆಗೂ ನಾವು ಹೋರಾಡ್ತೀವಿ”

January 18, 2026
ಅಬಕಾರಿ ಇಲಾಖೆಯಲ್ಲಿ 3,542 ಕೋಟಿ ಭ್ರಷ್ಟಾಚಾರ :‌ ಸಿದ್ದು ಸರ್ಕಾರದ ವಿರುದ್ಧ ಛಲವಾದಿ ಹೊಸ ಬಾಂಬ್..!

ಅಬಕಾರಿ ಇಲಾಖೆಯಲ್ಲಿ 3,542 ಕೋಟಿ ಭ್ರಷ್ಟಾಚಾರ :‌ ಸಿದ್ದು ಸರ್ಕಾರದ ವಿರುದ್ಧ ಛಲವಾದಿ ಹೊಸ ಬಾಂಬ್..!

January 18, 2026
ತನ್ನ ಮಾತು ವಿರೋಧಿಸುವರಿಗೆ ಟ್ರಂಪ್ ಮತ್ತೆ ಶಾಕ್

ತನ್ನ ಮಾತು ವಿರೋಧಿಸುವರಿಗೆ ಟ್ರಂಪ್ ಮತ್ತೆ ಶಾಕ್

January 18, 2026
“ಮಂಥ್ಲಿ ಮಂತ್ರಿ ಆರ್.ಬಿ.ತಿಮ್ಮಾಪೂರ‌” : ಲಂಚ ಹಗರಣದ ವಿರುದ್ಧ ಸಿಡಿದೆದ್ದ ಬಿಜೆಪಿ, ಜೆಡಿಎಸ್

“ಮಂಥ್ಲಿ ಮಂತ್ರಿ ಆರ್.ಬಿ.ತಿಮ್ಮಾಪೂರ‌” : ಲಂಚ ಹಗರಣದ ವಿರುದ್ಧ ಸಿಡಿದೆದ್ದ ಬಿಜೆಪಿ, ಜೆಡಿಎಸ್

January 18, 2026
Next Post
ದೆಹಲಿ ಗೆಲಲ್ಲು ಮೋದಿ ಕಸರತ್ತು! ರಾಮ ಮಂದಿರ ಟ್ರಸ್ಟ್ ದಾಳ!?

ದೆಹಲಿ ಗೆಲಲ್ಲು ಮೋದಿ ಕಸರತ್ತು! ರಾಮ ಮಂದಿರ ಟ್ರಸ್ಟ್ ದಾಳ!?

Please login to join discussion

Recent News

ಕತೆಯಲ್ಲ ಕಥನವಲ್ಲ ದುರಂತ ವಾಸ್ತವ
Top Story

ಕತೆಯಲ್ಲ ಕಥನವಲ್ಲ ದುರಂತ ವಾಸ್ತವ

by ನಾ ದಿವಾಕರ
January 18, 2026
Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!
Top Story

Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!

by ಪ್ರತಿಧ್ವನಿ
January 18, 2026
BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ
Top Story

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

by ಪ್ರತಿಧ್ವನಿ
January 17, 2026
Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ
Top Story

Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

by ಪ್ರತಿಧ್ವನಿ
January 17, 2026
BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?
Top Story

BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?

by ಪ್ರತಿಧ್ವನಿ
January 17, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಕುಂದಾಪುರ ಇಎಸ್‌ಐ ಆಸ್ಪತ್ರೆಗೆ ವೈದ್ಯರ ನೇಮಕಕ್ಕೆ ಕ್ರಮ: ಸಚಿವ ಸಂತೋಷ್‌ ಲಾಡ್‌

ಗಿಗ್‌ ಕಾರ್ಮಿಕರ ಸುರಕ್ಷತೆಯ ಬಗ್ಗೆ ಸಚಿವ ಲಾಡ್‌ ಕಳವಳ : 10 ನಿಮಿಷದ ಡೆಲಿವರಿ ಸ್ಥಗಿತದ ಕಾರ್ಮಿಕರ ಬೇಡಿಕೆಗೆ ಸ್ಪಂದನೆ

January 18, 2026
“ನನ್ನ ಅನುಪಸ್ಥಿಯಲ್ಲಿ ಜನರ ಕಷ್ಟ, ಸುಖಗಳನ್ನು ಆಲಿಸುವವರು ಡಾ.ಯತೀಂದ್ರ”

“ನನ್ನ ಅನುಪಸ್ಥಿಯಲ್ಲಿ ಜನರ ಕಷ್ಟ, ಸುಖಗಳನ್ನು ಆಲಿಸುವವರು ಡಾ.ಯತೀಂದ್ರ”

January 18, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada