• Home
  • About Us
  • ಕರ್ನಾಟಕ
Thursday, July 31, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಆಮ್‌ ಆದ್ಮಿ ಪಾರ್ಟಿಗೆ ದಿಲ್ಲಿಯಲ್ಲಿ ಇವಿಎಂ ಹ್ಯಾಕ್ ಮಾಡುವ ಭೀತಿ ಕಾಡುತ್ತಿದೆಯೇ? 

by
February 10, 2020
in ದೇಶ
0
ಆಮ್‌ ಆದ್ಮಿ ಪಾರ್ಟಿಗೆ ದಿಲ್ಲಿಯಲ್ಲಿ ಇವಿಎಂ ಹ್ಯಾಕ್ ಮಾಡುವ ಭೀತಿ ಕಾಡುತ್ತಿದೆಯೇ? 
Share on WhatsAppShare on FacebookShare on Telegram

ನಾಳೆ ದೆಹಲಿ ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ. ಚುನಾವಣೋತ್ತರ ಸಮೀಕ್ಷೆಗಳಲ್ಲಿ ಬಿಜೆಪಿಗೆ ಹಿನ್ನೆಡೆಯಾಗಿದೆ. ಆಮ್ ಆದ್ಮಿ ಪಾರ್ಟಿ ಗೆದ್ದು ಮತ್ತೆ ಅಧಿಕಾರ ಹಿಡಿಯಲಿದೆ ಎನ್ನುವ ಮಾಹಿತಿಗಳು ಬಂದಿವೆ. ಆದರೆ ಬಿಜೆಪಿ ನಾಯಕರು ಮಾತ್ರ ಬಿಜೆಪಿ ಸರಳ ಬಹುಮತ ಪಡೆದು ಅಧಿಕಾರ ಹಿಡಿಯಲಿದೆ ಎಂದು ತುಂಬಾ ಆತ್ಮವಿಶ್ವಾಸದಲ್ಲಿ ಹೇಳುತ್ತಿದ್ದಾರೆ. ಬಿಜೆಪಿ ನಾಯಕರ ಈ ಹೇಳಿಕೆ ಆಮ್ ಆದ್ಮಿ ಪಾರ್ಟಿ ನಾಯಕರು ಕಣ್ಣಿಗೆ ಎಣ್ಣೆ ಬಿಟ್ಟುಕೊಂಡು ಕಾಯುವಂತೆ ಅಗಿದೆ. ಆಮ್ ಆದ್ಮಿ ನಾಯಕರ ಈ ಸಂಕಷ್ಟಕ್ಕೆ ಕಾರಣ ಎಲೆಕ್ಟ್ರಾನಿಕ್ ವೋಟಿಂಗ್ ಮೆಷಿನ್ ಹ್ಯಾಕ್ ಮಾಡುವ ಭೀತಿ. ಬಿಜೆಪಿ ದೇಶಾದ್ಯಂತ ಜಯಭೇರಿ ಬಾರಿಸುತ್ತಾ ಸಾಗಿದಂತೆ ವಿರೋಧ ಪಕ್ಷದ ನಾಯಕರು ಇವಿಎಂ ಮೆಷಿನ್ ಹ್ಯಾಕ್ ಮಾಡಲಾಗುತ್ತಿದೆ ಎನ್ನುವ ಆರೋಪ ಮಾಡಿದ್ದರು. ಇವಿಎಂ ಹ್ಯಾಕ್ ಆಗುತ್ತಿರುವುದರಿಂದಲೇ ನಮಗೆ ಬರಬೇಕಾದ ಮತಗಳೂ ಕೂಡ ಬಿಜೆಪಿ ಪಾಲಾಗುತ್ತಿವೆ ಎಂದು ಆರೋಪಿಸಿದ್ರು. ಇದೀಗ ಅದೇ ಭೀತಿ ಎದುರಾಗಿದೆ.

ADVERTISEMENT

ಚುನಾವಣೆಗೂ ಮುನ್ನ ಆಮ್ ಆದ್ಮಿ ಪಾರ್ಟಿ ಕೂಡ ಎಲೆಕ್ಟ್ರಾನಿಕ್ ವೋಟಿಂಗ್ ಮೆಷಿನ್ ಅನ್ನು ಹ್ಯಾಕ್ ಮಾಡಬಹುದು ಎನ್ನುವುದನ್ನು ತೋರಿಸಿದ್ದರು. ಡೆಮೋ ಮಾಡಿ ತೋರಿಸಿದ್ದ ಆಪ್‌ನ ಎಂಜಿನಿಯರ್ ಟೀಂ ಯಾವುದೇ ಕಾರಣಕ್ಕೂ ಇವಿಎಂ ಮೆಷಿನ್ ಬಳಕೆ ಮಾಡಿ ಚುನಾವಣೆ ಮಾಡದಂತೆ ಕೇಂದ್ರ ಚುನಾವಣಾ ಆಯೋಗಕ್ಕೆ ಮನವಿ ಮಾಡಿತ್ತು. ಆದರೆ ಕೇಂದ್ರ ಚುನಾವಣಾ ಆಯೋಗದ ಅಧಿಕಾರಿಗಳು ಮಾತ್ರ ಆಮ್ ಅದ್ಮಿ ಪಾರ್ಟಿಯ ಆರೋಪವನ್ನು ಅಲ್ಲಗಳೆದಿದ್ದರು. ಯಾವುದೇ ಕಾರಣಕ್ಕೂ ಇವಿಎಂ ಹ್ಯಾಕ್ ಮಾಡಲು ಸಾಧ್ಯವಿಲ್ಲ. ಚುನಾವಣೆ ಮುಕ್ತಾಯವಾದ ಬಳಿಕ ಇವಿಎಂ ಮೆಷಿನ್ ಸ್ಟ್ರಾಂಗ್ ರೂಮ್ ಸೇರಲಿದೆ. ಅದಕ್ಕೂ ಮೊದಲೇ ಚುನಾವಣಾ ಕೇಂದ್ರದಲ್ಲೇ ಅದನ್ನು ಸಂಪರ್ಕ ರಹಿತವನ್ನಾಗಿ ಮಾಡಿ ಸೀಲ್ ಮಾಡಲಾಗುತ್ತದೆ. ಯಾವುದೇ ಇಂಟರ್ನೆಟ್ ಸಂಪರ್ಕ ಇಲ್ಲ ಎಂದ ಮೇಲೆ ಅದನ್ನು ಹ್ಯಾಕ್ ಮಾಡುವುದು ಹೇಗೆ ಎನ್ನುವ ಮರು ಪ್ರಶ್ನೆಯನ್ನು ಹಾಕಿತ್ತು. ಆದರೆ ಇವಿಎಂ ಮೆಷಿನ್ ಬದಲಾವಣೆ ಮಾಡಿದರೆ ಏನು ಮಾಡುವುದು ಎನ್ನುವ ಆತಂಕ ಬೇರೆ ಪಕ್ಷದವರನ್ನು ಕಾಡಲಾರಂಭಿಸಿತ್ತು. ಈ ಅನುಮಾನಕ್ಕೆ ಮತ್ತೊಂದು ಕಾರಣ ಬಿಜೆಪಿ ನಾಯಕ ಕೊಟ್ಟಿದ್ದ ಆ ಒಂದು ಹೇಳಿಕೆ.

ದೆಹಲಿಯಲ್ಲಿ ಚುನಾವಣಾ ಪ್ರಚಾರ ನಡೆಸುವ ವೇಳೆ ಬಿಜೆಪಿ ನಾಯಕರೊಬ್ಬರು ನೀವು ಬಿಜೆಪಿಗೆ ಮತ ಹಾಕದಿದ್ದರೂ ನಿಮ್ಮ ಮತ ಬಿಜೆಪಿಗೆ ಬರಲಿದೆ ಎಂದಿದ್ದರು. ಆ ಬಳಿಕ ಇವಿಎಂ ಹ್ಯಾಕ್ ಮಾಡಲಾಗುತ್ತೆ ಎನ್ನುವ ಮಾತಿಗೆ ಬಲ ಬಂದಂತಾಗಿತ್ತು. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೂಡ ಇವಿಎಂ ಹ್ಯಾಕ್ ಮಾಡುವ ವಿಡಿಯೋ ಶೇರ್ ಮಾಡುವ ಮೂಲಕ ಹ್ಯಾಕ್ ಮಾಡಲಾಗುತ್ತೆ ಎಂಬುದನ್ನು ಬೆಂಬಲಿಸಿದ್ದರು. ಇದೀಗ ಕರ್ನಾಟಕ ಬಿಜೆಪಿ ಕೂಡ ಇದೇ ಅರ್ಥ ಬರುವ ಹಾಗೆ ಟ್ವೀಟ್ ಮಾಡಿದೆ. ಈ ಟ್ವೀಟ್‌ನ ಅರ್ಥ, ಪ್ರೀತಿಯ ಇವಿಎಂ ನಿನ್ನನ್ನು ಎಲ್ಲಾ ವಿರೋಧ ಪಕ್ಷಗಳು ಮಂಗಳವಾರ ನಿನ್ನನ್ನು ದೂಷಿಸುತ್ತಾರೆ. ನೀನು ಅವರನ್ನು ಕ್ಷಮಿಸಿಬಿಡು. ಯಾಕಂದ್ರೆ ಅವರಿಗೆ ಏನ್ ಮಾಡ್ತಿದ್ದೀವಿ? ಏನನ್ನು ಹೇಳ್ತಿದ್ದೀವಿ ಎನ್ನುವುದು ಗೊತ್ತಿಲ್ಲ ಎಂದು ವ್ಯಂಗ್ಯವಾಡಿದೆ. ಈ ಮೂಲಕ ದೆಹಲಿಯಲ್ಲಿ ಆಮ್ ಆದ್ಮಿ ಪಾರ್ಟಿ ಗೆಲುವು ಸಾಧಿಸಲಿದೆ ಎಂದಿದೆ. ಆಮ್ ಆದ್ಮಿ ಪಾರ್ಟಿಗೆ ಎದುರಾಗಿರುವ ಇನ್ನೊಂದು ಸಂಕಷ್ಟ ಎಂದರೆ ಚುನಾವಣಾ ಆಯೋಗ ಮತದಾನ ಮುಕ್ತಾಯವಾಗಿ ಒಂದು ದಿನ ಕಳೆದರೂ ಇನ್ನೂ ಕೂಡ ಮತದಾನ ನಡೆದ ಅಂಕಿ ಅಂಶವನ್ನು ಅಧಿಕೃತವಾಗಿ ಘೋಷಣೆ ಮಾಡದೆ ಇರುವುದು. ಕೆಲವು ಕಡೆ ಇಂದು ಸಂಜೆಯವರೆಗೂ ಕೂಡ ಇವಿಎಂ ಮೆಷಿನ್ ಸ್ಟ್ರಾಂಗ್ ರೂಮ್ ಸೇರಿರಲ್ಲ. ಇದೂ ಕೂಡ ಅನುಮಾನ ಹೆಚ್ಚಾಗುವಂತೆ ಮಾಡಿದೆ

ಆಮ್ ಆದ್ಮಿ ಪಾರ್ಟಿ ನಾಯಕರು ಇವಿಎಂ ಮೆಷಿನ್ ಹ್ಯಾಕ್ ಮಾಡುವ ಭೀತಿಗೆ ಒಳಗಾಗಿದ್ದಾರೆ. ಯಾಕೆಂದ್ರೆ ಚುನಾವಣಾ ಆಯೋಗ ಸಂಜೆಯವರೆಗೂ ಶೇಕಡವಾರು ಮತದಾನದ ಅಂಕಿ ಅಂಶವನ್ನು ಘೋಷಣೆ ಮಾಡಿರಲಿಲ್ಲ. ಈ ಬಗ್ಗೆ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಟ್ವೀಟ್ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದೊಂದು ಅಚ್ಚರಿಯ ಸಂಗತಿಯಾಗಿದ್ದು, ದೆಹಲಿ ಚುನಾವಣಾ ಆಯೋಗ ಮತದಾನ ಮುಗಿದು 22 ಗಂಟೆಗಳು ಕಳೆದರು ಮತದಾನದ ಶೇಕಡವಾರು ಅಂಕಿ ಅಂಶ ಪ್ರಕಟ ಮಾಡದೆ ಇರುವುದಕ್ಕೆ ಕಾರಣವೇನೆಂದು ಪ್ರಶ್ನಿಸಿದ್ದಾರೆ. ಚುನಾವಣಾ ಆಯೋಗದ ಅಧಿಕಾರಿಗಳು ಏನು ಮಾಡುತ್ತಿದ್ದಾರೆ ಎಂದು ಪ್ರಶ್ನೆ ಮಾಡಿದೆ. ಮತದಾನ ಆದ ಬಳಿಕ ಮತವಂಚನೆ ಮಾಡಲು ಅಧಿಕಾರಿಗಳು ಸಾಥ್ ಕೊಡ್ತಿದ್ದಾರಾ ಎನ್ನುವ ಗಂಭೀರ ಆರೋಪ ಮಾಡಿದ್ದಾರೆ. ಚುನಾವಣಾ ಆಯೋಗದ ನಡೆ ಕೂಡ ಅನುಮಾನಕ್ಕೆ ಕಾರಣವಾಗಿದ್ದು, ಚುನಾವಣೆಯಲ್ಲಿ ಎಷ್ಟು ಜನರು ಮತದಾನ ಮಾಡಿದ್ದಾರೆ ಎನ್ನುವ ಅಂತಿಮ ಅಂಕಿ ಅಂಶ ಕೊಡದೆ ಇರುವುದು ಭಾರೀ ಅನುಮಾನ ಮೂಡಿಸಿದೆ. ಚುನಾವಣೋತ್ತರ ಸಮೀಕ್ಷೆಗಳೆಲ್ಲವೂ ಆಮ್ ಆದ್ಮಿ ಪಾರ್ಟಿ ಗೆಲ್ಲಲಿದೆ ಎಂದರೂ ಬಿಜೆಪಿ ನಾಯಕರ ಆತ್ಮವಿಶ್ವಾಸದ ಹಿಂದಿನ ಶಕ್ತಿ ಇವಿಎಂ ಟ್ಯಾಂಪರಿಂಗ್ ಮಾಡೋದಾ..? ಎಂದು ದೆಹಲಿ ಜನರೇ ಪ್ರಶ್ನಿಸುವಂತಾಗಿದೆ.

ಇನ್ನು ಇದೀಗ ಪತ್ರಿಕಾಗೋಷ್ಟಿ ನಡೆಸಿರುವ ಚುನವಣಾ ಆಯೋಗವು ಅಧಿಕತೃ ಅಂಕಿ ಅಂಶಗಳನ್ನು ಪ್ರಕಟಿಸಿದ್ದು ಶೇಕಡಾ 62.59 ಮತದಾರರು ಮತ ಚಲಾಯಿಸಿದ್ದಾರೆಂದು ಹೇಳಿದೆ. ಆದರೆ ಚುನಾವಣೆ ಪ್ರಕ್ರಿಯೆಗಳೆಲ್ಲವೂ ಕೊನೆಗೊಂಡ 24 ತಾಸುಗಳ ನಂತರ ಚುನಾವಣಾ ಆಯೋಗವು ಈ ಪ್ರಕಟನೆಯ;ನ್ನು ಹೊರಡಿಸಿದೆ.

Tags: ಆಮ್ ಆದ್ಮಿ ಪಾರ್ಟಿಇವಿಎಂ ಹ್ಯಾಕ್
Previous Post

ಯಡಿಯೂರಪ್ಪ ಬೆಂಗಳೂರು ನಗರಾಭಿವೃದ್ಧಿ ಖಾತೆ ತಮಲ್ಲೇ ಉಳಿಸಿಕೊಂಡಿದ್ದೇಕೆ?

Next Post

ವರ್ಷ ಕಾಲಾವಕಾಶವಿದ್ದರೂ ಚುನಾವಣಾ ಆಯೋಗವು ನಾಲ್ಕೇ ತಿಂಗಳಲ್ಲಿ ವಿವಿಪ್ಯಾಟ್ ಚೀಟಿಗಳನ್ನು ನಾಶಪಡಿಸಿದ್ದೇಕೆ?

Related Posts

Top Story

N Chaluvarayaswamy: ಕೇಂದ್ರದಿಂದ ರಸಗೊಬ್ಬರ ಪೂರೈಕೆ ಕೊರತೆಯಿಂದ ರಾಜ್ಯದಲ್ಲಿ ಸಮಸ್ಯೆ..!!

by ಪ್ರತಿಧ್ವನಿ
July 30, 2025
0

ಕೇಂದ್ರ ಸರ್ಕಾರದಿಂದ ಯೂರಿಯಾ ಪೂರೈಕೆ ಕೊರತೆಯಾದ ಹಿನ್ನೆಲೆಯಲ್ಲಿ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ವಿತರಣೆಯಲ್ಲಿ ಸಮಸ್ಯೆಯಾಗಿದ್ದು, ಅದನ್ನು ನಿಭಾಯಿಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ಎಲ್ಲಾ ಗೊಂದಲಗಳು ಬಗೆಹರಿಯಲಿವೆ ಎಂದು ಕೃಷಿ...

Read moreDetails

MB Patil: ಕೈಗಾರಿಕೆ ಮತ್ತು ಐಟಿ ಇಲಾಖೆಯ ಯೋಜನೆ ಕುರಿತು ಎಂ ಬಿ ಪಾಟೀಲ, ಪ್ರಿಯಾಂಕ್‌ ಖರ್ಗೆ ಮಾತುಕತೆ

July 30, 2025

Australia:16 ವರ್ಷದೊಳಗಿನ ಮಕ್ಕಳು ಸಾಮಾಜಿಕ ಜಾಲತಾಣಗಳನ್ನು ಉಪಯೋಗಿಸದಂತೆ ನೀಷೇದಿಸಿದ ಆಸ್ಟ್ರೇಲಿಯಾ ಸರ್ಕಾರ..!!

July 30, 2025

Lakshmi Hebbalkar: ಗೃಹಲಕ್ಷ್ಮೀ ಯೋಜನೆಯ ಜಂಟಿ ಹೊಣೆಗಾರಿಕೆ ಗುಂಪುಗಳ ಕುರಿತು ಸಭೆ

July 30, 2025
ಚರಿತ್ರೆ-ವರ್ತಮಾನದ ತಾಕಲಾಟಗಳ ನಡುವೆ,,,,

ಚರಿತ್ರೆ-ವರ್ತಮಾನದ ತಾಕಲಾಟಗಳ ನಡುವೆ,,,,

July 30, 2025
Next Post
ವರ್ಷ ಕಾಲಾವಕಾಶವಿದ್ದರೂ ಚುನಾವಣಾ ಆಯೋಗವು ನಾಲ್ಕೇ ತಿಂಗಳಲ್ಲಿ ವಿವಿಪ್ಯಾಟ್ ಚೀಟಿಗಳನ್ನು ನಾಶಪಡಿಸಿದ್ದೇಕೆ?

ವರ್ಷ ಕಾಲಾವಕಾಶವಿದ್ದರೂ ಚುನಾವಣಾ ಆಯೋಗವು ನಾಲ್ಕೇ ತಿಂಗಳಲ್ಲಿ ವಿವಿಪ್ಯಾಟ್ ಚೀಟಿಗಳನ್ನು ನಾಶಪಡಿಸಿದ್ದೇಕೆ?

Please login to join discussion

Recent News

Top Story

DCM DK Shivakumar: ಚುನಾವಣಾ ಆಯೋಗದ ಅನ್ಯಾಯದ ಬಗ್ಗೆ ಹೋರಾಡಬೇಕಿದೆ.!!

by ಪ್ರತಿಧ್ವನಿ
July 30, 2025
Top Story

N Chaluvarayaswamy: ಕೇಂದ್ರದಿಂದ ರಸಗೊಬ್ಬರ ಪೂರೈಕೆ ಕೊರತೆಯಿಂದ ರಾಜ್ಯದಲ್ಲಿ ಸಮಸ್ಯೆ..!!

by ಪ್ರತಿಧ್ವನಿ
July 30, 2025
Top Story

MB Patil: ಕೈಗಾರಿಕೆ ಮತ್ತು ಐಟಿ ಇಲಾಖೆಯ ಯೋಜನೆ ಕುರಿತು ಎಂ ಬಿ ಪಾಟೀಲ, ಪ್ರಿಯಾಂಕ್‌ ಖರ್ಗೆ ಮಾತುಕತೆ

by ಪ್ರತಿಧ್ವನಿ
July 30, 2025
Top Story

Australia:16 ವರ್ಷದೊಳಗಿನ ಮಕ್ಕಳು ಸಾಮಾಜಿಕ ಜಾಲತಾಣಗಳನ್ನು ಉಪಯೋಗಿಸದಂತೆ ನೀಷೇದಿಸಿದ ಆಸ್ಟ್ರೇಲಿಯಾ ಸರ್ಕಾರ..!!

by ಪ್ರತಿಧ್ವನಿ
July 30, 2025
Top Story

Lakshmi Hebbalkar: ಗೃಹಲಕ್ಷ್ಮೀ ಯೋಜನೆಯ ಜಂಟಿ ಹೊಣೆಗಾರಿಕೆ ಗುಂಪುಗಳ ಕುರಿತು ಸಭೆ

by ಪ್ರತಿಧ್ವನಿ
July 30, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

DCM DK Shivakumar: ಚುನಾವಣಾ ಆಯೋಗದ ಅನ್ಯಾಯದ ಬಗ್ಗೆ ಹೋರಾಡಬೇಕಿದೆ.!!

July 30, 2025

N Chaluvarayaswamy: ಕೇಂದ್ರದಿಂದ ರಸಗೊಬ್ಬರ ಪೂರೈಕೆ ಕೊರತೆಯಿಂದ ರಾಜ್ಯದಲ್ಲಿ ಸಮಸ್ಯೆ..!!

July 30, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada