• Home
  • About Us
  • ಕರ್ನಾಟಕ
Sunday, February 1, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ನೆರೆ ಪರಿಹಾರಕ್ಕೆ ಕನ್ನ: ಆರು ಸರ್ಕಾರಿ ಅಧಿಕಾರಿಗಳು ಅಮಾನತು 

by
February 29, 2020
in ಕರ್ನಾಟಕ
0
ನೆರೆ ಪರಿಹಾರಕ್ಕೆ ಕನ್ನ: ಆರು ಸರ್ಕಾರಿ ಅಧಿಕಾರಿಗಳು ಅಮಾನತು 
Share on WhatsAppShare on FacebookShare on Telegram

ಹಾವೇರಿಯಲ್ಲಿ ನೆರೆಯಲ್ಲಿ ಕೊಚ್ಚಿ ಹೋಗಿದ್ದ ಬೆಳೆಗಳಿಗೆ ಪರಿಹಾರ ವಿತರಿಸುವ ಸಂದರ್ಭದಲ್ಲಿ ಭಾರೀ ಅವ್ಯವಹಾರ ಎಸಗಿದ್ದ ಅಧಿಕಾರಿಗಳ ವಿರುದ್ದ ಕ್ರಿಮಿನಲ್‌ ಮೊಕದ್ದಮೆ ದಾಖಲಿಸಲಾಗಿದೆ. ನೆರೆಯಿಂದ ನೊಂದ ರೈತರ ಸಂಕಷ್ಟಗಳನ್ನು ಪರಿಹರಿಸಬೇಕಿದ್ದ ಸರ್ಕಾರಿ ಅಧಿಕಾರಿಗಳು, ರೈತರ ನೋವಿನ ಮೇಲೆ ಬರೆ ಎಳೆದಂತೆ, ನೆರೆ ಪರಿಹಾರದ ಹಣವನ್ನು ಲಪಟಾಯಿಸಿದ ಕುರಿತು ಪ್ರತಿಧ್ವನಿ ವಿಸ್ತೃತವಾದ ವರದಿ ದಾಖಲಿಸಿತ್ತು.

ADVERTISEMENT

ಈಗ ಅವ್ಯವಹಾರ ಎಸಗಿರುವ ಆರೋಪದ ಮೇಲೆ ಆರು ಜನ ಗ್ರಾಮ ಲೆಕ್ಕಾಧಿಕಾರಿಗಳನ್ನು ಸೇವೆಯಿಂದ ವಜಾ ಮಾಡಲಾಗಿದೆ. ಈ ಕುರಿತಾಗಿ ಪ್ರತಿಧ್ವನಿಗೆ ಮಾಹಿತಿ ನೀಡಿರುವ ಹಾವೇರಿ ಜಿಲ್ಲೆಯ ಜಿಲ್ಲಾಧಿಕಾರಿ ಕೃಷ್ಣ ಬಾಜಪೇಯಿ, ತಂತ್ರಾಂಶದಲ್ಲಿನ ಲೋಪದೋಷಗಳನ್ನು ಅರಿತು ಬೇಕಾಬಿಟ್ಟಿಯಾಗಿ ಹಣ ವರ್ಗಾವಣೆ ಮಾಡಿರುವವರ ವಿರುದ್ದ ಕ್ರಿಮಿನಲ್‌ ಕೇಸು ದಾಖಲಿಸಲಾಗಿದೆ ಎಂದು ಹೇಳಿದ್ದಾರೆ.

ಹಾವೇರಿ ತಾಲೂಕಿನ ದೇವಗಿರಿ ಗ್ರಾಮ ಪಂಚಾಯತ್‌ ಗ್ರಾಮ ಲೆಕ್ಕಾಧಿಕಾರಿ ಆನಂದ ದೇಸಾಯಿ, ಕರ್ಜಗಿ ಗ್ರಾಮ ಲೆಕ್ಕಾಧಿಕಾರಿ ಎಸ್‌ ಎ ಲಿಂಗದಹಳ್ಳಿ, ಶಿಗ್ಗಾಂವ್‌ ತಾಲೂಕಿನ ಅತ್ತಿಗೆರೆ ಗ್ರಾಮ ಪಂಚಾಯತ್‌ನ ಗ್ರಾಮ ಲೆಕ್ಕಾಧಿಕಾರಿ ಅಕ್ಷಯ್‌ ಪಾಟೀಲ್‌, ಆಂಡಳಗಿ ಗ್ರಾಮ ಲೆಕ್ಕಾಧಿಕಾರಿ ಸಿ ಡಿ ಮಳಲಿ, ಕಬ್ಬನೂರು ಗ್ರಾಮ ಲೆಕ್ಕಾಧಿಕಾರಿ ಸಿದ್ದರಾಮ್‌ ಇಂದೂರು ಹಾಗೂ ಬನ್ನೂರು ಗ್ರಾಮ ಲೆಕ್ಕಾಧಿಕಾರಿ ಎಚರೇಶ್‌ ಹಿರೇಸಕ್ರಿಗೌಡ ಅಮಾನತುಗೊಂಡ ಅಧಿಕಾರಿಗಳು. ಇವರನ್ನು ಅಮಾನತುಗೊಳಿಸಿ ಜಿಲ್ಲಾಧಿಕಾರಿ ಕೃಷ್ಣ ಅವರು ಆದೇಶ ಹೊರಡಿಸಿದ್ದಾರೆ.

ಇನ್ನು ಈ ಅವ್ಯವಹಾರದ ಕುರಿತು ತನಿಖೆಯನ್ನು ಕೈಗೊಳ್ಳಲು ಪ್ರತೀ ತಾಲೂಕಿಗೆ ವಿಚಾರಣಾಧಿಕಾರಿಯನ್ನು ನೇಮಿಸಲಾಗಿದೆ. ಅವರಿಗೆ ಪರಿಹಾರ ವಿತರಿಸುವ ತಂತ್ರಾಂಶದ ಕುರಿತು ತರಭೇತಿಯನ್ನು ನೀಡಲಾಗುತ್ತಿದ್ದು, ಈ ಅವ್ಯವಹಾರದ ಕುರಿತ ಸಮಗ್ರ ತನಿಖೆಯನ್ನು ಅವರು ನಡೆಸಿ ವರದಿ ನೀಡಲಿದ್ದಾರೆ, ಎಂದು ಕೃಷ್ಣ ತಿಳಿಸಿದರು.

“ಉನ್ನತ ಶಿಕ್ಷಣ ಪಡೆದು ಸರ್ಕಾರಿ ಅಧಿಕಾರಿಗಳಾಗಿ ನೇಮಕಗೊಳ್ಳುವವರು, ತಂತ್ರಾಂಶದಲ್ಲಿನ ಲೋಪದೋಷಗಳ ಕುರಿತು ಚೆನ್ನಾಗಿ ಅರಿತಿರುತ್ತಾರೆ. ಅಂಥಹವರಿಂದ ಈ ರೀತಿಯ White Collar Crime ನಡೆದಿದೆ,” ಎಂದು ಕೃಷ್ಣ ಬಾಜಪೇಯಿ ಅಭಿಪ್ರಾಯಪಟ್ಟಿದ್ದಾರೆ.

ಈ ಅವ್ಯವಹಾರದ ಕುರಿತು ಇನ್ನಷ್ಟು ಮಾಹಿತಿಗಳು ತಿಳಿದು ಬಂದಿದ್ದು, ಭೂಮಿಯ ಮೂಲ ದಾಖಲೆ ಹೊಂದಿರುವ ವ್ಯಕ್ತಿ ಮೃತಪಟ್ಟಲ್ಲಿ, ಅವರ ಮಗ ಅಥವಾ ಮಗಳಿಗೆ ಸೇರಬೇಕಾದ ಹಣವನ್ನು ಕೂಡಾ ಈ ಅಧುಕಾರಿಗಳು ಲಪಟಾಯಿಸಿದ್ದಾರೆ. ಇನ್ನು ಈ ಅವ್ಯವಹಾರದಲ್ಲಿ ಹಲವು ಬ್ರೋಕರ್‌ಗಳು ಕೂಡಾ ಪಾಲು ಹೊಂದಿದ್ದು, ರೈತರ ಹೆಸರಿನಲ್ಲಿ ಹಣ ಪಡೆದು ನಂತರ ಹಣವನ್ನು ತಮ್ಮ ಖಾತೆಗೆ ನೇರವಾಗಿ ವರ್ಗಾಯಿಸಿದ್ದಾರೆ. ಈಗಾಗಲೇ ಲಕ್ಷಗಟ್ಟಲೆ ಹಣವನ್ನು ನುಂಗಿ ನೀರು ಕುಡಿದಿರುವ ಅಧಿಕಾರಿಗಳಿಂದ ಸುಮಾರು 60 ಲಕ್ಷದಷ್ಟು ಹಣವನ್ನು ವಾಪಸು ಪಡೆಯಲಾಗಿದ್ದು, ತಂತ್ರಾಂಶದಲ್ಲಿನ ಅಂಕಿ ಸಂಖ್ಯೆಗಳನ್ನು ಕೂಲಂಕುಶವಾಗಿ ಪರಿಶೀಲಿಸಿದ ಬಳಿಕ ಲಪಟಾಯಿಸಲಾದ ಮೊತ್ತದ ನಿಖರ ಮಾಹಿತಿ ತಿಳಿಯಲಿದೆ.

ಏನೇ ಆದರೂ, ಬಡ ರೈತರ ಸಂಕಷ್ಟಕ್ಕೆ ಸರ್ಕಾರ ನೀಡಿದ ಹಣವನ್ನು ಈ ರೀತಿ ನುಂಗಿ ನೀರು ಕುಡಿದ ಅಧಿಕಾರಿಗಳಿಗೆ ಕಠಿಣ ಸಜೆಯಾಗಬೇಕು. ಇವರ ಮೇಲೆ ಜರುಗಿಸುವ ಕ್ರಮ ಉಳಿದ ಅಧಿಕಾರಿಗಳಿಗೆ ಒಂದು ಉದಾಹರಣೆಯಾಗಿರಬೇಕು. ರೈತರ ಹೆಸರಿನಲ್ಲಿ ರಾಜಕೀಯ ಮಾಡುವುದು ಮಾತ್ರವಲ್ಲದೇ, ರೈತರ ಕಷ್ಟಗಳಿಗೆ ರಾಜಕಾರಣಿಗಳು ನೆರವಾಗಬೇಕಿದೆ.

Tags: DC Krishna BajapaiFlood ComepnsationHaveri DistrictVillage accountantನೆರೆ ಪರಿಹಾರಸರ್ಕಾರಿ ಅಧಿಕಾರಿಹಾವೇರಿ
Previous Post

ಮಹಿಳಾ ಕ್ರಿಕೆಟ್ ಮನ್ವಂತರಕ್ಕೆ ಕಾರಣವಾಗಲಿ ನಾರೀಮಣಿಯರ ಪ್ರದರ್ಶನ

Next Post

ದೆಹಲಿಯಲ್ಲಿ ಮನುಷ್ಯತ್ವ ಮರೆತು ದಾನವರಾದ ಮತಾಂಧರು

Related Posts

ಅಕ್ರಮ ಗಣಿಗಾರಿಕೆಗೆ ಜೆಸಿಬಿ ಮೇಲೆ ಕಲ್ಲೆಸೆದು ಕಾನೂನಿನ ಗಡುಸು ಮುಖ ತೋರಿಸಿದ ಮಹಿಳಾ ಅಧಿಕಾರಿ
ಕರ್ನಾಟಕ

ಅಕ್ರಮ ಗಣಿಗಾರಿಕೆಗೆ ಜೆಸಿಬಿ ಮೇಲೆ ಕಲ್ಲೆಸೆದು ಕಾನೂನಿನ ಗಡುಸು ಮುಖ ತೋರಿಸಿದ ಮಹಿಳಾ ಅಧಿಕಾರಿ

by ಪ್ರತಿಧ್ವನಿ
February 1, 2026
0

ಬೆಳಗಾವಿ : ರಾಜಕೀಯ ಒತ್ತಡ, ಬೆದರಿಕೆಗಳು, ಗುಂಪು ಗಲಾಟೆಯ ನಡುವೆಯೂ ಅಕ್ರಮ ಗಣಿಗಾರಿಕೆಗೆ ತಲೆಬಾಗದೆ, ಸ್ಥಳದಲ್ಲೇ ಕಠಿಣ ಕ್ರಮ ಕೈಗೊಂಡ ಮಹಿಳಾ ಭೂ ವಿಜ್ಞಾನಿ ಬಿಂದನ್ ಪಾಟೀಲ...

Read moreDetails
ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು: ಕಾಂಗ್ರೆಸಿಗರ ಟೀಕೆಗೆ ಕುಮಾರಸ್ವಾಮಿ ಖಡಕ್‌ ಉತ್ತರ

ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು: ಕಾಂಗ್ರೆಸಿಗರ ಟೀಕೆಗೆ ಕುಮಾರಸ್ವಾಮಿ ಖಡಕ್‌ ಉತ್ತರ

February 1, 2026
Vijayapura: 27 ಭೂ ಕಬಳಿಕೆ ಪ್ರಕರಣಗಳಲ್ಲಿ 200 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ

Vijayapura: 27 ಭೂ ಕಬಳಿಕೆ ಪ್ರಕರಣಗಳಲ್ಲಿ 200 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ

February 1, 2026
ಕೇಂದ್ರದಿಂದ ಕರ್ನಾಟಕಕ್ಕೆ ಪದೇ ಪದೇ ಅನ್ಯಾಯ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಿಡಿ

ಕೇಂದ್ರದಿಂದ ಕರ್ನಾಟಕಕ್ಕೆ ಪದೇ ಪದೇ ಅನ್ಯಾಯ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಿಡಿ

February 1, 2026
400 ಕೋಟಿ ದರೋಡೆ ಕೇಸ್‌: ದಿಢೀರ್‌ ಪೊಲೀಸರಿಗೆ ಶರಣಾದ ವ್ಯಕ್ತಿ ಯಾರು..?

400 ಕೋಟಿ ದರೋಡೆ ಕೇಸ್‌: ದಿಢೀರ್‌ ಪೊಲೀಸರಿಗೆ ಶರಣಾದ ವ್ಯಕ್ತಿ ಯಾರು..?

February 1, 2026
Next Post
ದೆಹಲಿಯಲ್ಲಿ ಮನುಷ್ಯತ್ವ ಮರೆತು ದಾನವರಾದ ಮತಾಂಧರು

ದೆಹಲಿಯಲ್ಲಿ ಮನುಷ್ಯತ್ವ ಮರೆತು ದಾನವರಾದ ಮತಾಂಧರು

Please login to join discussion

Recent News

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?
Top Story

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?

by ಪ್ರತಿಧ್ವನಿ
February 1, 2026
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಹಾಗೂ ಅಳಿಯನ ಬಗ್ಗೆ ಇಲ್ಲಿದೆ ಯಾರಿಗೂ ತಿಳಿಯದ ಈ ವಿಷಯ!
Top Story

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಹಾಗೂ ಅಳಿಯನ ಬಗ್ಗೆ ಇಲ್ಲಿದೆ ಯಾರಿಗೂ ತಿಳಿಯದ ಈ ವಿಷಯ!

by ಪ್ರತಿಧ್ವನಿ
February 1, 2026
ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು: ಕಾಂಗ್ರೆಸಿಗರ ಟೀಕೆಗೆ ಕುಮಾರಸ್ವಾಮಿ ಖಡಕ್‌ ಉತ್ತರ
Top Story

ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು: ಕಾಂಗ್ರೆಸಿಗರ ಟೀಕೆಗೆ ಕುಮಾರಸ್ವಾಮಿ ಖಡಕ್‌ ಉತ್ತರ

by ಪ್ರತಿಧ್ವನಿ
February 1, 2026
Vijayapura: 27 ಭೂ ಕಬಳಿಕೆ ಪ್ರಕರಣಗಳಲ್ಲಿ 200 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ
Top Story

Vijayapura: 27 ಭೂ ಕಬಳಿಕೆ ಪ್ರಕರಣಗಳಲ್ಲಿ 200 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ

by ಪ್ರತಿಧ್ವನಿ
February 1, 2026
ಕೇಂದ್ರದಿಂದ ಕರ್ನಾಟಕಕ್ಕೆ ಪದೇ ಪದೇ ಅನ್ಯಾಯ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಿಡಿ
Top Story

ಕೇಂದ್ರದಿಂದ ಕರ್ನಾಟಕಕ್ಕೆ ಪದೇ ಪದೇ ಅನ್ಯಾಯ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಿಡಿ

by ಪ್ರತಿಧ್ವನಿ
February 1, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?

February 1, 2026
ಸಾಮಾಜಿಕ ಜಾಲತಾಣದಲ್ಲಿ  ಜಮಾತೆ ಇಸ್ಲಾಮಿ ಮುಖ್ಯಸ್ಥರ ಪೋಸ್ಟ್: ಬಾಂಗ್ಲಾದೇಶದಲ್ಲಿ ಆಕ್ರೋಶ! ಆಗಿದ್ದಾದರೂ ಏನು ?

ಸಾಮಾಜಿಕ ಜಾಲತಾಣದಲ್ಲಿ  ಜಮಾತೆ ಇಸ್ಲಾಮಿ ಮುಖ್ಯಸ್ಥರ ಪೋಸ್ಟ್: ಬಾಂಗ್ಲಾದೇಶದಲ್ಲಿ ಆಕ್ರೋಶ! ಆಗಿದ್ದಾದರೂ ಏನು ?

February 1, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada