• Home
  • About Us
  • ಕರ್ನಾಟಕ
Sunday, December 14, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಕರೋನಾ ತಡೆಯಲು ತಮಿಳುನಾಡು ಸರ್ಕಾರದ ಉಡಾಫೆ: ಇತರೆ ರಾಜ್ಯಗಳಲ್ಲಿ ಆತಂಕ

by
March 17, 2020
in ದೇಶ
0
ಕರೋನಾ ತಡೆಯಲು ತಮಿಳುನಾಡು ಸರ್ಕಾರದ ಉಡಾಫೆ: ಇತರೆ ರಾಜ್ಯಗಳಲ್ಲಿ ಆತಂಕ
Share on WhatsAppShare on FacebookShare on Telegram

ಕರೋನಾ ತರಹದ ವೈರಸ್‌ ಹರಡುವುದನ್ನು ತಡೆಯಬೇಕು ಎಂದರೆ ವಿಶೇಷವಾದ ಕಾಳಜಿ ವಹಿಸುವುದು ಅಗತ್ಯ. ಆದರೆ ಕರ್ನಾಟಕ, ಕೇರಳದಂತಹ ರಾಜ್ಯಗಳು ತೋರುತ್ತಿರುವ ಕಾಳಜಿ ಬೇರೆ ರಾಜ್ಯಗಳಲ್ಲಿಲ್ಲ. ಕರೋನಾ ಕುರಿತು ಶಿಷ್ಟಾಚಾರ ಪಾಲಿಸಬೇಕಿದ್ದ ರಾಜ್ಯ ಸರ್ಕಾರಗಳು ನಿರ್ಲಕ್ಷ್ಯ ತೋರಿವೆ. ಅದಕ್ಕೆ ನಿದರ್ಶನ ಎಂಬಂತೆ ಮಹಾರಾಷ್ಟ್ರದಲ್ಲಿ ಕರೋನಾ ರೋಗಿಗಳ ಸಂಖ್ಯೆ 33ಕ್ಕೆ ಏರಿದೆ. ಇದಕ್ಕೆ ಕಾರಣ ತಮಿಳುನಾಡನ್ನ ನೋಡಿ ತಿಳಿದುಕೊಳ್ಳಬಹುದು. ತಮಿಳುನಾಡಿನಲ್ಲಿ ಇದುವರೆಗೆ ಕೇವಲ 72 ಜನರನ್ನ ಪರೀಕ್ಷೆಗೆ ಒಳಪಡಿಸಿದ್ದಾರೆ. ಅದರಲ್ಲೂ ಒಬ್ಬನಿಗೆ ಮಾತ್ರ ರೋಗ ಇರುವಿಕೆ ದೃಢಪಟ್ಟಿದೆ. ಈ ತರಹದ ಉಡಾಫೆಯ ರಾಜ್ಯ ಸರ್ಕಾರಗಳು ಹಾಗೂ ಜನಪ್ರತಿನಿಧಿಗಳ ಮಧ್ಯೆ ಸ್ವಸ್ಥ ಸಮಾಜ ಹೇಗೆ ಸಾಧ್ಯ.

ADVERTISEMENT

ಭಾರತದಲ್ಲಿ ಕರೋನಾ ಆತಂಕ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಎರಡನೇ ವಾರಕ್ಕೆ ಒಟ್ಟು 114 ಜನರಲ್ಲಿ ರೋಗ ದೃಢಪಟ್ಟಿದೆ. 13 ಜನರು ರೋಗದಿಂದ ಗುಣಮುಖರಾಗಿದ್ದಾರೆ. ಹಾಗೂ ಇಬ್ಬರು ಮೃತಪಟ್ಟಿದ್ದಾರೆ. ಪ್ರತಿದಿನ ನೂರಾರು ಭಾರತೀಯರು ವೈರಸ್‌ ಪೀಡಿತ ರಾಷ್ಟ್ರಗಳಿಂದ ಸ್ವದೇಶಕ್ಕೆ ಆಗಮಿಸುತ್ತಿದ್ದಾರೆ. ಯುದ್ಧಪರಿಸ್ಥಿತಿಯಲ್ಲಿ ಸಂತ್ರಸ್ತರ ರಕ್ಷಣೆ ಮಾಡುವ ರೀತಿ ಕೇಂದ್ರ ಸರ್ಕಾರ ಅವರನ್ನೆಲ್ಲಾ ಕರೆತಂದು ಹದಿನಾಲ್ಕು ದಿನಗಳ ಕಾಲ ತೀವ್ರ ನಿಗಾ ಘಟಕದಲ್ಲಿರಿಸಲು ಏರ್ಪಾಡು ಮಾಡಿದೆ. ಮೂರನೇ ವಾರಕ್ಕೆ ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ICMR)‌ ವೈರಸ್‌ ತಪಾಸಣೆಯನ್ನು ಪರಿಣಾಮಕಾರಿಯಾಗಿ ಅನುಷ್ಟಾನ ಮಾಡುತ್ತಿದೆ. ವಿದೇಶದಿಂದ ಮರಳಿದವರನ್ನಷ್ಟೇ ತಪಾಸಣೆ ಮಾಡುವುದಲ್ಲ, ಕರೋನ ವೈರಸ್‌ ಸಮುದಾಯದೊಳಗೆ ಪ್ರಸರಣವಾಗುತ್ತಿದ್ದರೆ ಅದರ ಮೇಲೂ ನಿಗಾ ಇಡಲು ಮುಂದಾಗಿದೆ. ಕರೋನಾ ದಾಳಿಗೆ ತುತ್ತಾದ ದೇಶಗಳೆಲ್ಲಾ ರೋಗ ಲಕ್ಷಣಗಳು ಕಂಡು ಬರುವ ಎಲ್ಲರನ್ನ ತಪಾಸಣೆ ಮಾಡುತ್ತಿವೆ.

ನಮ್ಮ ದೇಶದಲ್ಲಿ ಮಾರ್ಚ್‌ 15ರಿಂದ ಸಮುದಾಯಲ್ಲಿ ವೈರಸ್‌ಪ್ರಸರಣ ತಡೆಯಲು ವೈದ್ಯಕೀಯ ಪರೀಕ್ಷೆಗೆ ಒಳಪಡಿಸುವ ಕೆಲಸ ಆರಂಭವಾಗಿದೆ. ಭಾರತದಲ್ಲಿ 60ರಿಂದ 70 ತಪಾಸಣಾ ಕೇಂದ್ರಗಳಲ್ಲಿ ಕರೋನಾ ರೋಗ ಚರ್ಯೆಯನ್ನ ಪರೀಕ್ಷೆ ಮಾಡಲಾಗುತ್ತಿದೆ. ಪ್ರತೀ ಪ್ರಯೋಗಾಲಯದಲ್ಲಿ ದಿನಕ್ಕೆ ಸುಮಾರು ತೊಂಭತ್ತು ಮಾದರಿಗಳನ್ನ ಪರೀಕ್ಷೆ ಮಾಡಬಹುದು ಆದರೆ ಎಲ್ಲಾ ಪ್ರಯೋಗಾಲಗಳಿಂದ ಕೇವಲ ಐವತ್ತೊಂದು ಮಾದರಿಗಳನ್ನಷ್ಟೇ ಪರೀಕ್ಷೆ ನಡೆಸಲಾಗಿದೆ. ಅಂದರೆ ವಿದೇಶದಿಂದ ಬಂದವರದ್ದೆಲ್ಲಾ ಗಂಟಲ ದ್ರವ ಹಾಗೂ ರಕ್ತ ಮಾದರಿಯನ್ನ ಪರೀಕ್ಷೆ ಮಾಡಲಾಗಿಲ್ಲ ಎಂದರ್ಥ..!

ಸಮುದಾಯದೊಳಗೆ ರೋಗ ಪ್ರಸರಣದ ಆತಂಕಕ್ಕೊಳಗಾಗಿರುವ ಭಾರತ ತನ್ನ ತಪಾಸಣಾ ಸಾಮರ್ಥ್ಯವನ್ನ ಹೆಚ್ಚು ಮಾಡಿಕೊಂಡಿದೆ. ಶೈವಾವಸ್ಥೆಯಲ್ಲಿದ್ದ ರೋಗವನ್ನ ಗುರುತಿಸಲಾಗದೇ ಅಥವಾ ಬೇಜವಾಬ್ದಾರಿತನದಿಂದ ಜನನಿಬಿಡ ಪ್ರದೇಶದಲ್ಲಿ ರೋಗಿ ಓಡಾಡಿದರೆ ತಡೆಗಟ್ಟುವುದು ಹೇಗೆ. ಐಸೋಲೇಷನ್‌ ವಾರ್ಡ್‌ನಿಂದಲೇ ಇಬ್ಬರು ತಪ್ಪಿಸಿಕೊಂಡು ಹೋದ ಘಟನೆಗಳೂ ನಮ್ಮ ಕಣ್ಣಮುಂದೆ ಇದೆ. ಇಂತಹ ಸಮಯದಲ್ಲಿ ಎಲ್ಲರೂ ಜಾಗೃತರಾಗಿರಬೇಕು. ಆದರೆ ತಮಿಳುನಾಡಿನ ಮನಸ್ಥಿತಿ ಮಾತ್ರ ವ್ಯತಿರಿಕ್ತವಾಗಿದೆ. ವಿದೇಶದಿಂದ ಬಂದಿರುವ ಹಾಗೂ ರೋಗ ಲಕ್ಷಣಗಳಿರುವವರನ್ನ ಪರೀಕ್ಷೆ ಮಾಡದೇ ಮನೆಗೆ ಕಳಿಸುತ್ತಿದ್ದಾರೆ. ಈ ಕುರಿತು ಗಾಯತ್ರಿ ಎಂಬ ಮಹಿಳೆ ಆಕ್ರೋಶಭರಿತವಾಗಿ ಟ್ವೀಟ್‌ ಮಾಡಿದ್ದಾಳೆ. ರೋಗ ಲಕ್ಷಣಗಳಿವೆ ಎಂದು ಸರ್ಕಾರಿ ಆಸ್ಪತ್ರೆಗೆ ಹೋದರೂ ಸಹ ಯಾವುದೇ ಪರೀಕ್ಷೆ ನಡೆಸದೇ ರಕ್ತದ ಮಾದರಿ ಸಂಗ್ರಹಿಸಿಲ್ಲ, ಬದಲಿಗೆ ರೋಗ ಉಲ್ಭಣಗೊಂಡರೆ ಮಾತ್ರ ಬನ್ನಿ ಎಂದು ಹೇಳಿ ಕಳಿಸಿದ್ದಾರಂತೆ..! ಇದು ಒಬ್ಬ ಮಹಿಳೆಯ ದೂರಲ್ಲ, ಕೇವಲ ಎಪ್ಪತ್ತೆರಡು ಜನರನ್ನ ಪರೀಕ್ಷೆ ಮಾಡಿ ಒಬ್ಬರಿಗೆ ಕರೋನಾ ಸೋಂಕಿದೆ ಎಂದು ಸರ್ಕಾರವೇ ಅಧಿಕೃತವಾಗಿ ಹೇಳಿಕೊಂಡಿದೆ. ತಮಿಳುನಾಡು ಸರ್ಕಾರವೇ ಈ ತರಹ ನಿರ್ಲಕ್ಷ ತೋರಿದರೆ ಉಳಿದ ರಾಜ್ಯಗಳ ಕಥೆ ಏನು..?

ಅಕ್ಕಪಕ್ಕದ ರಾಜ್ಯಗಳೆಲ್ಲಾ ನೂರಾರು ಮಾದರಿಯನ್ನ ಪರೀಕ್ಷೆ ಮಾಡಿದ್ದು ಕರ್ನಾಟಕದಲ್ಲಿ ಏಳು ಜನ ಹಾಗೂ ಕೇರಳದಲ್ಲಿ 24 ಜನರು ಸೋಂಕಿತರಾಗಿದ್ದಾರೆ. ತಮಿಳುನಾಡಿನಲ್ಲಿ ಮಾತ್ರ ಒಬ್ಬರೇ ಸೋಂಕಿತರಾಗಿರೋದಕ್ಕೆ ಹೇಗೆ ಸಾಧ್ಯ. ತಮಿಳುನಾಡಿನ ಆರೋಗ್ಯ ಇಲಾಖೆ ಆಯುಕ್ತ ಕೆ.ಕೊಲಾಂಡಸ್ವಾಮಿ ಪ್ರಕಾರ ಅಕ್ಕಪಕ್ಕದ ರಾಜ್ಯಗಳ ಜನರು ಕರೋನಾ ಸೋಂಕಿತ ರಾಜ್ಯಗಳಿಂದ ಬಂದಿದ್ದಾರಂತೆ. ಅಕ್ಕಪಕ್ಕದ ರಾಜ್ಯಗಳಲ್ಲಿ ಹೆಚ್ಚೆಚ್ಚು ಜನರನ್ನ ತಪಾಸಣೆ ಮಾಡಿದ್ದಕ್ಕಾಗಿ ಹೆಚ್ಚು ಸೋಂಕಿತರನ್ನ ಗುರುತಿಸಿಕೊಂಡಿದ್ದಾರೆ ಆದರೆ ತಮಿಳುನಾಡು ಕೇವಲ ಎಪ್ಪತ್ತೆರಡೇ ಜನರಿಗೆ ಸೀಮಿತವಾಯ್ತಲ್ಲ ಅಂದರೆ ಅದಕ್ಕೆ ಉತ್ತರವಿಲ್ಲ. ತಮಿಳುನಾಡಿನಲ್ಲಿ ನಾಲ್ಕು ವೈರಾಣು ಪ್ರಯೋಗಾಲಯಗಳಿವೆ ಆದರೂ ಅಲ್ಲಿನ ಸರ್ಕಾರ ತಪಾಸಣೆ ನಡೆಸುವ ಗೋಜಿಗೆ ಹೋಗಿಲ್ಲ ಆದರೂ ಶಿಷ್ಟಾಚಾರ ಪರಿಪಾಲನೆ ಆಗುತ್ತೆ ಎಂದು ಕೊಲಾಂಡಸ್ವಾಮಿ ಸಮಜಾಯಿಷಿ ಕೊಡ್ತಾರೆ. ಕೆಮ್ಮು ಕಫ ಬಂದವರೆಲ್ಲಾ ಪರೀಕ್ಷೆ ಮಾಡಿ ಅಂತ ಹೇಳಿದರೆ ಕಷ್ಟ ಎನ್ನುವುದು ಅವರ ಅಭಿಪ್ರಾಯ.

ಈಗಾಗಲೇ ಮಹಾರಾಷ್ಟ್ರ ಹೊಣೆಗೇಡಿತನಕ್ಕೆ ಮೂವತ್ತೆರಡು ಜನ ಸೋಂಕಿತರನ್ನ ಪಡೆದುಕೊಂಡಿದೆ. ಇತ್ತ ತಮಿಳುನಾಡಿನಂತಹ ರಾಜ್ಯಗಳು ಇದರ ಪರಿವೆಯೇ ಇಲ್ಲದಂತೆ ಉಡಾಫೆ ವರ್ತನೆ ತೋರುತ್ತಿವೆ. ಸದ್ಯ ಕರ್ನಾಟಕ ರಾಜ್ಯ ಚುರುಕಾಗಿದ್ದು ತಮಿಳುನಾಡು ಹಾಗೂ ಮಹಾರಾಷ್ಟ್ರದ ಗಡಿಭಾಗದಲ್ಲಿ ಕಟ್ಟೆಚ್ಚರ ವಹಿಸಲೇಬೇಕಾದ ಪರಿಸ್ಥಿತಿ ಇದೆ. ಸಾಧ್ಯವಾದರೆ ಮಹಾರಾಷ್ಟ್ರ ಹಾಗೂ ತಮಿಳುನಾಡಿನ ಗಡಿಯಲ್ಲಿ ತಾತ್ಕಾಲಿಕ ನಿಷೇಧ ಹೇರುವುದೇ ಒಳಿತು. ಕೇವಲ ವಿದೇಶದಿಂದ ಸೋಂಕು ಹೊತ್ತು ತಂದವರನ್ನ ತಪಾಸಣೆ ಮಾಡುತ್ತಿದ್ದೇವೆ. ಆದರೆ ಸಮುದಾಯದೊಳಗೆ ರೋಗ ಪ್ರಸರಣ ತಡೆಯಲು ಯಾವುದೇ ಪ್ರಯತ್ನಗಳಾಗುತ್ತಿಲ್ಲ ಎನ್ನುವ ಆತಂಕ ಎದುರಾಗಿದೆ.

Tags: Corona TestingcoronavirusGovernment of Tamil NaduKarnatakaಕರೋನಾತಮಿಳುನಾಡು
Previous Post

ಒಕ್ಕಲಿಗ ಸಚಿವರ ಪೈಪೋಟಿ ಮಧ್ಯೆ ಇತರೆ ಸಚಿವರು ಹೈರಾಣ

Next Post

ಕರೋನಾ ವೈರಸ್ ಉಪಟಳಕ್ಕೆ ಚಿನ್ನ-ಬೆಳ್ಳಿ ಕೂಡಾ ಕಂಗಾಲು!

Related Posts

ಮೇಕೆದಾಟು ಯೋಜನೆ ತಡೆಯಿರಿ: ಕ್ಯಾತೆ ತೆಗೆದ ಎಐಎಡಿಎಂಕೆ ಪಳನಿಸ್ವಾಮಿ
Top Story

ಮೇಕೆದಾಟು ಯೋಜನೆ ತಡೆಯಿರಿ: ಕ್ಯಾತೆ ತೆಗೆದ ಎಐಎಡಿಎಂಕೆ ಪಳನಿಸ್ವಾಮಿ

by ಪ್ರತಿಧ್ವನಿ
December 13, 2025
0

ಬೆಂಗಳೂರು : ರಾಜ್ಯದ ಮಹತ್ವಾಕಾಂಕ್ಷೆಯ ಮೇಕೆದಾಟು(Mekedatu) ಸಮತೋಲಿತ ಜಲಾನಯನ ಯೋಜನೆಯ ತ್ವರಿತ ಅನುಷ್ಠಾನಕ್ಕಾಗಿ ಕೆಇಆರ್‌ಎಸ್(KERS) ನಿರ್ದೇಶಕರ ನೇತೃತ್ವದಲ್ಲಿ ಹೊಸ ತಂಡ ರಚಿಸಿ, ಯೋಜನೆ ಕಾರ್ಯಾನುಷ್ಠಾನಕ್ಕೆ ರಾಜ್ಯ ಸರ್ಕಾರ...

Read moreDetails
ಲೆಜೆಂಡ್‌ ಮೆಸ್ಸಿ ನೋಡಲು ಬಂದ ಫ್ಯಾನ್ಸ್‌ಗೆ ನಿರಾಸೆ: ಕ್ರೀಡಾಂಗಣಕ್ಕೆ ನುಗ್ಗಿ ಆಕ್ರೋಶ

ಲೆಜೆಂಡ್‌ ಮೆಸ್ಸಿ ನೋಡಲು ಬಂದ ಫ್ಯಾನ್ಸ್‌ಗೆ ನಿರಾಸೆ: ಕ್ರೀಡಾಂಗಣಕ್ಕೆ ನುಗ್ಗಿ ಆಕ್ರೋಶ

December 13, 2025

ಆರ್.ಡಿ.ಪಿ.ಆರ್ ಅಧಿಕಾರಿಗಳಿಗೆ ಹೈಕೋರ್ಟಿನಲ್ಲಿ ಐತಿಹಾಸಿಕ ನ್ಯಾಯ: ಪ್ರಿಯಾಂಕ್ ಖರ್ಗೆ

December 12, 2025
ಮತ್ತೆ ಹೋರಾಟ ಘೋಷಿಸಿದ ಅಣ್ಣಾ ಹಜಾರೆ

ಮತ್ತೆ ಹೋರಾಟ ಘೋಷಿಸಿದ ಅಣ್ಣಾ ಹಜಾರೆ

December 12, 2025

ನಾನು ಯಾವುದೇ ಬಲ ಪ್ರದರ್ಶನ ಮಾಡುತ್ತಿಲ್ಲ, ಅದರ ಅವಶ್ಯಕತೆಯೂ ನನಗಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

December 12, 2025
Next Post
ಕರೋನಾ ವೈರಸ್ ಉಪಟಳಕ್ಕೆ  ಚಿನ್ನ-ಬೆಳ್ಳಿ ಕೂಡಾ ಕಂಗಾಲು!

ಕರೋನಾ ವೈರಸ್ ಉಪಟಳಕ್ಕೆ ಚಿನ್ನ-ಬೆಳ್ಳಿ ಕೂಡಾ ಕಂಗಾಲು!

Please login to join discussion

Recent News

“ಯಾವ ಇಕ್ಬಾಲ್ ಹುಸೇನ್ ಮಾತನ್ನು ನಂಬಬೇಡಿ, ಆತ ಚಟಕ್ಕೆ ಮಾತನಾಡುತ್ತಾನೆ”
Top Story

“ಯಾವ ಇಕ್ಬಾಲ್ ಹುಸೇನ್ ಮಾತನ್ನು ನಂಬಬೇಡಿ, ಆತ ಚಟಕ್ಕೆ ಮಾತನಾಡುತ್ತಾನೆ”

by ಪ್ರತಿಧ್ವನಿ
December 13, 2025
ಸಂಗೀತಗಾರ ರಿಕಿ ಕೇಜ್ ಮನೆಯಲ್ಲಿ ಕಳ್ಳತನ: ತಕ್ಷಣವೇ ಪ್ರತಿಕ್ರಿಯಿಸಿದ Zomato
Top Story

ಸಂಗೀತಗಾರ ರಿಕಿ ಕೇಜ್ ಮನೆಯಲ್ಲಿ ಕಳ್ಳತನ: ತಕ್ಷಣವೇ ಪ್ರತಿಕ್ರಿಯಿಸಿದ Zomato

by ಪ್ರತಿಧ್ವನಿ
December 13, 2025
ಬೆಂಗಳೂರಿಗೆ 2ನೇ ಏರ್‌ಪೋರ್ಟ್‌ ಖಚಿತ: ಕಾರ್ಯಸಾಧ್ಯತಾ ವರದಿಗೆ ಟೆಂಡರ್ ಕರೆದ ಸರ್ಕಾರ
Top Story

ಬೆಂಗಳೂರಿಗೆ 2ನೇ ಏರ್‌ಪೋರ್ಟ್‌ ಖಚಿತ: ಕಾರ್ಯಸಾಧ್ಯತಾ ವರದಿಗೆ ಟೆಂಡರ್ ಕರೆದ ಸರ್ಕಾರ

by ಪ್ರತಿಧ್ವನಿ
December 13, 2025
ಯಾರ ಬೆದರಿಕೆಗೂ ಬಗ್ಗಲ್ಲ: ಅಪಾರ್ಟ್‌ಮೆಂಟ್ ಅಸೋಸಿಯೇಷನ್‌ ಖಜಾಂಚಿಗೆ ಡಿಕೆಶಿ ಎಚ್ಚರಿಕೆ
Top Story

ಯಾರ ಬೆದರಿಕೆಗೂ ಬಗ್ಗಲ್ಲ: ಅಪಾರ್ಟ್‌ಮೆಂಟ್ ಅಸೋಸಿಯೇಷನ್‌ ಖಜಾಂಚಿಗೆ ಡಿಕೆಶಿ ಎಚ್ಚರಿಕೆ

by ಪ್ರತಿಧ್ವನಿ
December 13, 2025
ಮೇಕೆದಾಟು ಯೋಜನೆ ತಡೆಯಿರಿ: ಕ್ಯಾತೆ ತೆಗೆದ ಎಐಎಡಿಎಂಕೆ ಪಳನಿಸ್ವಾಮಿ
Top Story

ಮೇಕೆದಾಟು ಯೋಜನೆ ತಡೆಯಿರಿ: ಕ್ಯಾತೆ ತೆಗೆದ ಎಐಎಡಿಎಂಕೆ ಪಳನಿಸ್ವಾಮಿ

by ಪ್ರತಿಧ್ವನಿ
December 13, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

“ಯಾವ ಇಕ್ಬಾಲ್ ಹುಸೇನ್ ಮಾತನ್ನು ನಂಬಬೇಡಿ, ಆತ ಚಟಕ್ಕೆ ಮಾತನಾಡುತ್ತಾನೆ”

“ಯಾವ ಇಕ್ಬಾಲ್ ಹುಸೇನ್ ಮಾತನ್ನು ನಂಬಬೇಡಿ, ಆತ ಚಟಕ್ಕೆ ಮಾತನಾಡುತ್ತಾನೆ”

December 13, 2025
ಬ್ರಾಹ್ಮಣರ ಅಭಿವೃದ್ಧಿಗೆ, ಸಮಸ್ಯೆಗೆ ಕಾಂಗ್ರೆಸ್ ಸರ್ಕಾರ ಸದಾ ಸ್ಪಂದಿಸುತ್ತಿದೆ: ಸಚಿವ ದಿನೇಶ್ ಗುಂಡೂರಾವ್

ಬ್ರಾಹ್ಮಣರ ಅಭಿವೃದ್ಧಿಗೆ, ಸಮಸ್ಯೆಗೆ ಕಾಂಗ್ರೆಸ್ ಸರ್ಕಾರ ಸದಾ ಸ್ಪಂದಿಸುತ್ತಿದೆ: ಸಚಿವ ದಿನೇಶ್ ಗುಂಡೂರಾವ್

December 13, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada