• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 12, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಕರೋನಾ ಕತ್ತಲಲ್ಲಿ ಗದ್ದುಗೆ ಏರಿದ ಶಿವರಾಜ್‌ ಸಿಂಗ್‌ ಚೌಹಾಣ್‌

by
March 26, 2020
in ದೇಶ
0
ಕರೋನಾ ಕತ್ತಲಲ್ಲಿ ಗದ್ದುಗೆ ಏರಿದ ಶಿವರಾಜ್‌ ಸಿಂಗ್‌ ಚೌಹಾಣ್‌
Share on WhatsAppShare on FacebookShare on Telegram

ಇಡೀ ವಿಶ್ವವೇ ಕರೋನಾದ ಕಪಿಮುಷ್ಟಿಯಲ್ಲಿ ಬಂಧಿಯಗಿದೆ, ಭಾರತಕ್ಕೆ ಕರೋನ ಛಾಯೆ ಆವರಿಸಿದೆ. ಆದರೆ ಬಿಜೆಪಿ ಮಾತ್ರ ಮಧ್ಯ ಪ್ರದೇಶದಲ್ಲಿ ಆಪರೇಷನ್‌ ಕಮಲವನ್ನ ಸದ್ದಿಲ್ಲದೇ ಮುಗಿಸಿ ಗದ್ದುಗೆ ಏರಿತು. ಪ್ರಧಾನಿ ಸೆಂಟ್ರಲ್‌ ದೆಹಲಿಯ ಪುನರ್‌ನಿರ್ಮಾಣಕ್ಕೆ ಆದೇಶ ಹೊರಡಿಸಿದರು. ಶಾಹೀನ್‌ ಭಾಗ್‌ನಲ್ಲಿನ ಎನ್‌ಆರ್‌ಸಿ, ಸಿಎಎ ಹೋರಾಟದ ಟೆಂಟ್‌ ದಿಕ್ಕಾಪಾಲಾಯ್ತು. ಇಪ್ಪತ್ತೊಂದು ದಿನಗಳು ಮನೆಬಿಟ್ಟು ಹೊರಬರಬೇಡಿ ಎಂದು ಪ್ರಧಾನಿ ಜನರಲ್ಲಿ ಮನವಿಗೆ ಮುಂದಾದರೆ ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯಾನಾಥ್‌ ರಾಮನ ಮಂದಿರ ನಿರ್ಮಾಣಕ್ಕೆ ಪೂರಕವಾಗಿ ಹವನ ಹೋಮ ಮಾಡಿ ಅದ್ಧೂರಿ ಪೂಜೆ ನಡೆಸಿದರು. ಸಾಲದು ಎಂಬಂತೆ ಕರೋನಾಕ್ಕೆ ಸೆಟೆದು ನಿಲ್ಲುವಂತೆ ಫೋಟೋಗಳನ್ನ ಟ್ವೀಟ್‌ ಮಾಡಿದರು.

ADVERTISEMENT

ದೇಶ ಕರೋನಾಕ್ಕೆ ತುತ್ತಾಯ್ತು ಎಂಬ ಮೆಘಾ ಸುದ್ದಿಸ್ಫೋಟಗಳಿಗಿಂತಾ ಮೊದಲು ರಾಷ್ಟ್ರೀಯ ಚಾನೆಲ್‌ಗಳು ಮಧ್ಯಪ್ರದೇಶದ ರಾಜಕೀಯ ಪ್ರಹಸನಗಳ ಕಡೆ ವಾಲಿಕೊಂಡಿದ್ದವು. ಮೊದಲ ವಾರ ನಾಲ್ಕು ಕಾಂಗ್ರೆಸ್‌ ಶಾಸಕರನ್ನ ಕರ್ನಾಟಕದಲ್ಲಿ ತಂದಿಡಲಾಗಿದೆ. ಬಿಜೆಪಿ ಸರ್ಕಾರದ ಒಂದಿಬ್ಬರು ಮಂತ್ರಿಗಳ ಸುಪರ್ದಿಯಲ್ಲಿ ಇವರೆಲ್ಲಾ ಇದ್ದಾರೆ ಎಂದು ಸುದ್ದಿಯಾಗುತ್ತಿತ್ತು. ಇದ್ದಕ್ಕಿದ್ದಂತೆ ೨೨ ಜನ ಶಾಸಕರು ಭೋಪಾಲ್‌ನಿಂದ ಕಾಣೆಯಾಗಿಬಿಟ್ಟಿದ್ದರು. ಅದರ ಬೆನ್ನಲ್ಲೇ ದಶಕದ ಕಾಲ ರಾಹುಲ್‌ ಗಾಂಧಿ ಆಪ್ತನಾಗಿದ್ದು ಮಧ್ಯಪ್ರದೇಶದಲ್ಲಿ ಕಾಂಗ್ರೆಸ್‌ ಕಟ್ಟಿದ್ದ ಅರಸೊತ್ತಿಗೆಯ ಜ್ಯೋತಿರಾಧಿತ್ಯ ಸಿಂಧಿಯಾ ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮಿತ್‌ ಶಾರನ್ನ ಭೇಟಿ ಮಾಡಿ ರಾಜೀನಾಮೆ ಸಲ್ಲಿಸಿದ್ದರು. ನಂತರ ಹೈಡ್ರಾಮ ಶುರುವಾಯ್ತು. ಅಷ್ಟರಲ್ಲಿ ಕರೋನಾ ಆತಂಕ ಹೆಮ್ಮರವಾಗಿತ್ತು. ಸುದ್ದಿವಾಹಿನಿಗಳೆಲ್ಲಾ ಕರೋನಾ ಕರೋನಾ ಅಂತ ನಿರಂತರವಾಗಿ ಬ್ರೇಕಿಂಗ್‌ ನ್ಯೂಸ್‌ ಪ್ರಸಾರ ಮಾಡಲಾರಂಭಿಸಿದವು.

ಶಾಸಕರ ರಾಜೀನಾಮೆ ಸಂದರ್ಭದಲ್ಲಿ ದೇಶಾದ್ಯಂತ 50 ಪ್ರಕರಣಗಳು ಕಂಡುಬಂದರೆ ಬಹುಮತ ಸಾಬೀತು ಮಾಡಿ ಶಿವರಾಜ್‌ ಸಿಂಗ್‌ ಚೌಹಾಣ್‌ ಸಿಎಂ ಆದಾಗ ಇದರ ಸಂಖ್ಯೆ ಹತ್ತುಪಟ್ಟು ಹೆಚ್ಚಾಗಿತ್ತು. ಇಡೀ ದೇಶವನ್ನೇ ಲಾಕ್‌ ಮಾಡಿದ್ದರಿಂದ ಕೆಲವರಿಗೆ ಲಾಭವಾಯ್ತು. ಎನ್‌ಆರ್‌ಸಿ, ಎನ್‌ಸಿಆರ್‌, ಸಿಎಎ ವಿರೋಧಿಸಿ ಡಿಸೆಂಬರ್‌ 11ರಿಂದ ನಡೆಯುತ್ತಿದ್ದ ಶಾಹೀನ್‌ಭಾಗ್‌ ಸತ್ಯಾಗ್ರಹ ಕರೋನಾ ಹಿನ್ನೆಲೆಯಲ್ಲಿ ಬಂದ್‌ ಆಗಿದೆ. ಇಷ್ಟು ದೀರ್ಘ ಕಾಲ ಸತತವಾಗಿ ಗಟ್ಟಿ ಕೂತಿದ್ದವರು ಬೆರಳೆಣಿಕೆಯಷ್ಟು. ಆಗಲೇ ಸಾಕಷ್ಟು ಪೆಟ್ಟು ತಿಂದಿದ್ದ ಹೋರಾಟ ವಿಧಿಯಿಲ್ಲದೇ ಸಂಪೂರ್ಣ ತೆರವಾಯ್ತು. ಶಾಹೀನ್‌ ಭಾಗ್‌ ಹಾಗೂ ಜಾಮೀಯಾ ವಿಶ್ವವಿದ್ಯಾಲಯದ ಗೋಡೆಗಳ ಮೇಲಿನ ಹೋರಾಟದ ಬರಹಗಳ ಮೇಲೆ ಬಿಳಿ ಪೇಂಟ್‌ ಬಳಿಯಲಾತ್ತು. ಬಿಜೆಪಿ ಸಾಮಾಜಿಕ ಜಾಲತಾಣಗಳ ನಿರ್ವಾಹಕ ಅಮಿತ್‌ ಮಾಳವೀಯ ಎಷ್ಟು ಖುಷಿಯಾಗಿದ್ದರು ಎಂದರೆ. ಟ್ವೀಟ್‌ ಮಾಡಿ ಬುದ್ದಿಜೀವಿಗಳು, ಕೆಲವು ಮಾಧ್ಯಮಗಳ ಬೆಂಬಲದಿಂದ ಅರಾಜಕತೆ ಹಾಗೂ ಅಶಾಂತಿ ಸೃಷ್ಟಿಯಾಗಿತ್ತು. ಕೊನೆಗೂ ಮುಸ್ಲಿಂ ವಿರೋಧ ಅಂತ್ಯವಾಯ್ತು ಎಂದು ಬರೆದುಕೊಂಡರು.

ರಾಮಮಂದಿರ ನಿರ್ಮಾಣ ಹಾಗೂ ಎನ್‌ಆರ್‌ಸಿ ಬಿಜೆಪಿಯ ಎರಡು ಪ್ರಬಲ ಚುನಾವಣಾ ಅಸ್ತ್ರಗಳು. ಅವುಗಳನ್ನ ಪ್ರಚುರಪಡಿಸದೇ ಇದ್ದರೆ ಆಗುತ್ತದೆಯೇ..? ಖಂಡಿತಾ ಇಲ್ಲ. ಆದರೆ ಇದರ ಮಧ್ಯೆ ಕರೋನಾ ಬಂದಿದೆ. ಪ್ರಧಾನಿ ಮೋದಿ ಜನರನ್ನುದ್ದೇಶಿಸಿ ಮಾತನಾಡಿ ಇಪ್ಪತ್ತೊಂದು ದಿನ ಮನೆಯಲ್ಲಿದ್ದು ಬಿಡಿ ಎಂದು ಮನವಿ ಮಾಡಿದರು. ಮರು ದಿನ ಅಂದರೆ ಇಂದು ಉತ್ತರ ಪ್ರದೇಶದ ಸಿಎಂ ಟ್ವಿಟ್ಟರ್‌ ಖಾತೆಯಲ್ಲಿ ಸಾಮೂಹಿಕ ಪೂಜೆಯ ಫೋಟೋಗಳು ರಾರಾಜಿಸುತ್ತಿವೆ. ಸಿಎಂ ಆದಿತ್ಯಾನಾಥ್‌ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಪೂರ್ವಭಾವಿ ಪೂಜಾಕೈಂಕರ್ಯ ಮುಗಿಸಿದ್ದಾರೆ. ಆ ಫೋಟೊಗಳನ್ನ ಶೇರ್‌ ಮಾಡಿಕೊಂಡಿದ್ದಾರೆ. ಕೇಂದ್ರ ಸರ್ಕಾರವೇ ಎಲ್ಲಾ ಧಾರ್ಮಿಕ ಕಾರ್ಯಗಳಿಗೆ ನಿಷೇಧ ಹೇರಿದೆ. ಆದರೆ ಆದಿತ್ಯಾನಾಥ್‌ ಸರ್ಕಾರಕ್ಕೆ ಇದ್ಯಾವುದರ ಪರಿವೆಯೇ ಇಲ್ಲ ಆದರೂ ನಾವು ಜನರಿಂದ ಕರೋನಾ ನಿರ್ಲಕ್ಷ್ಯ ಎಂದು ಓಡಾಡುತ್ತೇವೆ. ರಾಮಮಂದಿರ ನಿರ್ಮಾಣ ಕಾರ್ಯದ ವೈಭವವನ್ನ ಕರೋನಾ ಮರೆಯಲ್ಲಿ ಕೇಂದ್ರ ಸರ್ಕಾರ ಮರೆಮಾಚುವುದಿಲ್ಲ. ಆದರೂ ಸಿಎಂ ಆದಿತ್ಯಾನಾಥ್‌ಗೆ ಯಾಕಿಷ್ಟು ಆತುರವೋ ಗೊತ್ತಿಲ್ಲ.

ಇವೆಲ್ಲದರ ಮಧ್ಯೆ ದೆಹಲಿ ಪುನರ್‌ನಿರ್ಮಾಣ ಕೆಲಸಕ್ಕೆ ಪ್ರಧಾನಿ ಮೋದಿ ಪಣತೊಟ್ಟಿದ್ದಾರೆ. ಸುಮಾರು ಇಪ್ಪತ್ತು ಸಾವಿರ ಕೋಟಿ ವೆಚ್ಚದಲ್ಲಿ ಕೇಂದ್ರ ಮಂತ್ರಿಗಳು ಹಾಗೂ ಸಂಸದರು ವಾಸವಿರುವ ಸೆಂಟ್ರಲ್‌ ದೆಹಲಿಯ ಅಭಿವೃದ್ಧಿಗೆ ಗೆಜೆಟ್‌ ನೋಟಿಫಿಕೇಷನ್‌ ಆಗಿದೆ. ಲಾಕ್‌ಡೌನ್‌ ಹಾಗೂ ಆರ್ಥಿಕ ಹಿಂಜರಿತದಿಂದ ಆಗುವ ಪರಿಣಾಮಗಳ ಅರಿವಿದ್ದರೂ ಇಂತಹದೊಂದು ನಿರ್ಧಾರ ಟೀಕೆಗಳಿಗೆ ಗುರಿಯಾಗಿದೆ. ಇಪ್ಪತ್ತೊಂದು ದಿನಗಳ ಬಂಧನದಲ್ಲಿ ಜನರಿಗಾಗುವ ಸಮಸ್ಯೆಗಳನ್ನ ಹಾಗೂ ಅವುಗಳಿಗೆ ಬೇಕಿರುವ ಧನವಿನಿಯೋಗದ ಬಗ್ಗೆ ಪ್ರಧಾನಿಗಳು ಚಿಂತಿಸಬೇಕಿದೆ. ಈ ಬಂಧನದ ದಿನಗಳ ನಡುವೆ ಜನರ ಜೀವನ ಕಟ್ಟಿಕೊಡುವ ಘೋಷಣೆಗಳೇನಾದರೂ ಮಾಡುತ್ತಾರಾ ನೋಡಬೇಕಿದೆ.

Tags: Corona VirusMadhya PradeshShivaraj Singh Chauhanಮಧ್ಯಪ್ರದೇಶಶಿವರಾಜ್ ಸಿಂಗ್ ಚೌಹಾಣ್
Previous Post

ಕರೋನಾ ವೈರಸ್‌ ಎಫೆಕ್ಟ್‌ ; ಭಾರತೀಯ ಚಿತ್ರರಂಗದ ತವಕ – ತಲ್ಲಣಗಳು..!?

Next Post

ವಿಪಕ್ಷ ನಾಯಕರ ಟೀಕೆಯನ್ನು ನಿರ್ಲಕ್ಷಿಸಿದ್ದೇ ದೇಶಕ್ಕೆ ದುಬಾರಿ ಆಯಿತೇ..!?

Related Posts

ಮೋದಿಗೆ ಹತ್ಯೆ ಸಂಚು ಆರೋಪ: ಬಿಹಾರದಲ್ಲಿ ಮೂವರು ಬಂಧನ, ಸಿಐಎ ಇಮೇಲ್‌  ಬಹಿರಂಗ
ದೇಶ

ಮೋದಿಗೆ ಹತ್ಯೆ ಸಂಚು ಆರೋಪ: ಬಿಹಾರದಲ್ಲಿ ಮೂವರು ಬಂಧನ, ಸಿಐಎ ಇಮೇಲ್‌  ಬಹಿರಂಗ

by ಪ್ರತಿಧ್ವನಿ
April 10, 2026
0

ಪಟ್ನಾ, ಏ.10: ಪ್ರಧಾನಮಂತ್ರಿ  ನರೇಂದ್ರ ಮೋದಿ ಅವರನ್ನು ಹತ್ಯೆ ಮಾಡುವ ಸಂಚು ರೂಪಿಸಿದ್ದ ಆರೋಪದಡಿ ಬಿಹಾರ ಪೊಲೀಸರು ಮೂವರು ಯುವಕರನ್ನು ಬಂಧಿಸಿದ್ದಾರೆ. ಈ ಘಟನೆ ದೇಶದಾದ್ಯಂತ ಆತಂಕ...

Read moreDetails
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

April 9, 2026
ಇಂಧನ ಕೊರತೆ ಆರೋಪ: ಕೇಂದ್ರದ ವಿರುದ್ಧ ಕೆ.ಹೆಚ್. ಮುನಿಯಪ್ಪ ವಾಗ್ದಾಳಿ

ಇಂಧನ ಕೊರತೆ ಆರೋಪ: ಕೇಂದ್ರದ ವಿರುದ್ಧ ಕೆ.ಹೆಚ್. ಮುನಿಯಪ್ಪ ವಾಗ್ದಾಳಿ

April 6, 2026
ಟೆರಿಟೋರಿಯಲ್ ಆರ್ಮಿಯಲ್ಲಿ ಉದ್ಯೋಗ:ಯುವಕರಿಗೆ ಸುವರ್ಣಾವಕಾಶ

 ಮೊಹಮ್ಮದ್ ಇಕ್ಬಾಲ್ ‘ಪಲಾಯನಗೈದ ಆರ್ಥಿಕ ಅಪರಾಧಿ’ ಎಂದು ನ್ಯಾಯಾಲಯ ಘೋಷಣೆ

April 1, 2026
Next Post
ವಿಪಕ್ಷ ನಾಯಕರ ಟೀಕೆಯನ್ನು ನಿರ್ಲಕ್ಷಿಸಿದ್ದೇ ದೇಶಕ್ಕೆ ದುಬಾರಿ ಆಯಿತೇ..!?

ವಿಪಕ್ಷ ನಾಯಕರ ಟೀಕೆಯನ್ನು ನಿರ್ಲಕ್ಷಿಸಿದ್ದೇ ದೇಶಕ್ಕೆ ದುಬಾರಿ ಆಯಿತೇ..!?

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada