• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, May 16, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ವಿಶಾಖಪಟ್ಟಣಂ ವಿಷಾನಿಲ ಸೋರಿಕೆ: ಸ್ವಯಂಪ್ರೇರಿತ ಪ್ರಕರಣ ದಾಖಲಿಸಿದ ಆಂಧ್ರ ಹೈಕೋರ್ಟ್

by
May 8, 2020
in ದೇಶ
0
ವಿಶಾಖಪಟ್ಟಣಂ ವಿಷಾನಿಲ ಸೋರಿಕೆ: ಸ್ವಯಂಪ್ರೇರಿತ ಪ್ರಕರಣ ದಾಖಲಿಸಿದ ಆಂಧ್ರ ಹೈಕೋರ್ಟ್
Share on WhatsAppShare on FacebookShare on Telegram

ವಿಶಾಖಪಟ್ಟಣಂನಲ್ಲಿ ಮೇ 6 ಮಧ್ಯರಾತ್ರಿ ರಾಸಾಯನಿಕ ಕಾರ್ಖಾನೆಯಲ್ಲಿ ಸ್ಟೈರಿನ್ ಅನಿಲ ಸೋರಿಕೆಯಿಂದ 11 ಜೀವಗಳು ಬಲಿಯಾಗಿ ಹಲವಾರು ಮಂದಿ ವಿಷಾನಿಲದಿಂದಾಗಿ ಅಸ್ವಸ್ಥರಾಗಿರುವ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಆಂಧ್ರ ಹೈಕೋರ್ಟ್ ಸ್ವಯಂ ಪ್ರೇರಿತವಾಗಿ ಸು ಮೊಟೊ (Suo Moto) ಪ್ರಕರಣ ದಾಖಲಿಸಿದೆ. ಘಟನೆಯಿಂದ ಆಗಿರುವ ನಷ್ಟವನ್ನು ತಗ್ಗಿಸಲು ಅಗತ್ಯವಿರುವ ಎಲ್ಲಾ ಕ್ರಮವನ್ನು ತೆಗೆದುಕೊಳ್ಳಲು ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ.

ADVERTISEMENT

ನ್ಯಾಯಾಲಯ ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸುವಾಗ 8 ಸಾವು ವರದಿಯಾಗಿದ್ದು ಈಗ ಸಾವಿನ ಸಂಖ್ಯೆ 11 ಕ್ಕೇರಿದೆ.

ಪರಿಸರ ಸಂರಕ್ಷಣಾ ಕಾಯ್ದೆಯಡಿಯಲ್ಲಿ ಸ್ಟೈರಿನ್ ಅನಿಲವನ್ನು ಅಪಾಯಕಾರಿಯೆಂದು ಸೂಚಿಸಲಾಗಿದೆ. ಇದರ ಸೇವನೆಯು ಮನುಷ್ಯನ ಜೀವಕ್ಕೆ ಅಪಾಯಕಾರಿ. ಈ ಅಪಾಯಕಾರಿ ಅನಿಲದ ಉತ್ಪಾದಕರು, ಸಂಗ್ರಾಹಕರು, ಮತ್ತು ಆಮದುದಾರರಿಗೆ ಇರುವ ಜವಾಬ್ದಾರಿಯನ್ನು ಈ ಪ್ರಕರಣದಲ್ಲಿ ಪಾಲಿಸಿದ್ದಾರೆಯೋ ಇಲ್ಲವೋ ಎಂಬುವುದನ್ನು ತ್ವರಿತವಾಗಿ ಪರಿಶೀಲಿಸಲಾಗುವುದು ಎಂದು ಕೋರ್ಟ್ ಹೇಳಿದೆ. ಬಳಿಕ ಕಾನೂನಿನ ಚೌಕಟ್ಟಿನಲ್ಲಿ ಕಾರ್ಖಾನೆ ಕಾರ್ಯಾಚರಿಸುತ್ತಿತ್ತೇ ಎಂಬುವುದನ್ನೂ ಪರಿಶೀಲಿಸಲಾಗುವುದು ಎಂದಿದೆ.

ಅನಿಲ ಸೋರಿಕೆಯಿಂದ ಆರೋಗ್ಯದ ಮೇಲೆ ಪರಿಣಾಮ ಬೀರಿದವರಿಗೆ ವೈದ್ಯಕೀಯ ಸೇವೆ ನೀಡುವುದು ಕೋರ್ಟಿನ ಆದ್ಯತೆಯಾಗಿದೆ. ಕಾರ್ಖಾನೆಯ ಸುತ್ತಮುತ್ತಲ ಜನರನ್ನು ಸ್ಥಳಾಂತರಿಸುವುದು NDRF ನ ಜವಾಬ್ದಾರಿ ಎಂದು ಕೋರ್ಟ್ ಹೇಳಿದೆ. ಸರ್ಕಾರಿ ಆಸ್ಪತ್ರೆಗಳಲ್ಲದೆ ಉಳಿದ ಸ್ಥಳೀಯ ಆಸ್ಪತ್ರೆಗಳೂ ಚಿಕಿತ್ಸೆ ನೀಡಲು ತೆರೆದಿರಬೇಕು ಎಂದು ಕೋರ್ಟ್ ಆದೇಶಿಸಿದೆ. ವೈದ್ಯಕೀಯ ಚಿಕಿತ್ಸೆ ಜೊತೆಗೆ ಮಕ್ಕಳಿಗೆ, ಮಹಿಳೆಯರಿಗೆ ಸಾಕಷ್ಟು ಪೌಷ್ಟಿಕ ಆಹಾರ ನೀಡುವ ಬಗ್ಗೆಯೂ ಕೋರ್ಟ್ ತನ್ನ ಕಾಳಜಿ ವಹಿಸಿದೆ.

ಘಟನೆ ಸಂಭವಿಸಿದ ಬೆನ್ನಲ್ಲಿ ಕೇಂದ್ರ ಕೆಲವು ಮಾರ್ಗದರ್ಶನದೊಂದಿಗೆ ಗೋವಾ, ಗುವಾಹಟಿ, ದಿಯು & ದಮನ್ನಲ್ಲಿದ್ದ NDRF ಪಡೆಯನ್ನು ವಿಶಾಖಪಟ್ಟಣಕ್ಕೆ ಕಳುಹಿಸಲಾಯಿತೆಂದು ಕೋರ್ಟಿಗೆ ತಿಳಿಸಲಾಯಿತು. ಜನರನ್ನು ಸ್ಥಳಾಂತರಿಸಲು, ವೈದ್ಯಕೀಯ ಚಿಕಿತ್ಸೆ ಮೊದಲಾದ ಅಗತ್ಯ ಕಾರ್ಯಾಚರಣೆಗಳಿಗೆ ಮತ್ತಷ್ಟು NDRF ಸಿಬ್ಬಂದಿಗಳ ಅಗತ್ಯವಿದ್ದಲ್ಲಿ ಅವರನ್ನು ಕರೆಸಿಕೊಳ್ಳುವ ಸ್ವಾತಂತ್ರ್ಯವನ್ನು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೀಡಿದೆ.

ವಿಶಾಖಪಟ್ಟಣದಲ್ಲಿರುವ ಎಲ್ಲಾ ಆಸ್ಪತ್ರೆಗಳೂ ಚಿಕಿತ್ಸೆಗೆ ಲಭ್ಯವಿರುವಂತೆ ನೋಡಿಕೊಳ್ಳಬೇಕು, ದುರಂತ ಸಂಭವಿಸಿದ ಪ್ರದೇಶದಲ್ಲಿ ಅನಿಲ ಸೋರಿಕೆಯ ಪರಿಣಾಮವನ್ನು ತಗ್ಗಿಸಲು ಅಗ್ನಿ ಶಾಮಕ ದಳ ನೀರು ಸಿಂಪಡಿಸಿದೆಯೇ ಎಂದು ಪರಿಶೀಲಿಸಬೇಕೆಂದು ರಾಜ್ಯ ಸರ್ಕಾರಕ್ಕೆ ಹೈ ಕೋರ್ಟ್ ಆದೇಶಿಸಿದೆ.

ಜೀತೇಂದ್ರ ಕುಮಾರ್ ಮಹೇಶ್ವರಿ ಮತ್ತು ಲಲಿತಾ ಕಣ್ಣೇಗಂತೀ ಅವರನ್ನು ಒಳಗೊಂಡ ಪೀಠವು ಮೇ 20 ರಂದು ಮುಂದಿನ ವಿಚಾರಣೆ ಕೈಗೊಳ್ಳಲಿದೆ.

Tags: Andhra PradeshGas leakhighcourtvishakhapattanam
Previous Post

ಲಾಕ್‌ಡೌನ್‌ ಸಂಕಷ್ಟ: ದಿಕ್ಕು ತೋಚದಂತಾದ ಮಾವು ಬೆಳೆಗಾರರು

Next Post

ವಲಸೆ ಕಾರ್ಮಿಕರನ್ನು ಕೊಂದು ಹಾಕಿದ ಮಹಾರಾಷ್ಟ್ರ ಸರ್ಕಾರ..!?

Related Posts

ಇಸ್ರೇಲ್ – ಕರ್ನಾಟಕದ ನಡುವೆ ಆರಂಭವಾಗಲಿದೆಯಾ ಕೌಶಲ್ಯಯುತ ಶ್ರಮಶಕ್ತಿ ಒಪ್ಪಂದ? : ಸಚಿವ ಲಾಡ್‌ ಪ್ಲ್ಯಾನ್‌ ಏನು..?
Top Story

ಇಸ್ರೇಲ್ – ಕರ್ನಾಟಕದ ನಡುವೆ ಆರಂಭವಾಗಲಿದೆಯಾ ಕೌಶಲ್ಯಯುತ ಶ್ರಮಶಕ್ತಿ ಒಪ್ಪಂದ? : ಸಚಿವ ಲಾಡ್‌ ಪ್ಲ್ಯಾನ್‌ ಏನು..?

by ಪ್ರತಿಧ್ವನಿ
May 15, 2026
0

ಬೆಂಗಳೂರು :  ಪರಿಣತ ಕಾರ್ಮಿಕರ ಕೊರತೆ ಎದುರಿಸುತ್ತಿರುವ ಮಧ್ಯಪ್ರಾಚ್ಯದ ಕೆಲವು ದೇಶಗಳಲ್ಲಿ ಕೆಲಸ ಮಾಡುವ ಕ್ಷಮೆತೆಯಿರುವ ರಾಜ್ಯದ ಕಾರ್ಮಿಕರಿಗೆ ಅವಕಾಶ ಕಲ್ಪಿಸುವ ಸಂಬಂಧ ಕಾರ್ಮಿಕ ಸಚಿವ ಸಂತೋಷ್‌...

Read moreDetails
ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ಖಂಡನೀಯ : ಮೋದಿ ವಿರುದ್ಧ ಸಿದ್ದರಾಮಯ್ಯ ಕಿಡಿ

ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ಖಂಡನೀಯ : ಮೋದಿ ವಿರುದ್ಧ ಸಿದ್ದರಾಮಯ್ಯ ಕಿಡಿ

May 15, 2026
ಮೋದಿಯಿಂದ ದೇಶ ದೊಡ್ಡ ದುರಂತ ಸ್ಥಿತಿಗೆ ಬಂದಿದೆ : ಬೆಲೆ ಏರಿಕೆಗೆ ಡಿಕೆ ಶಿವಕುಮಾರ್‌ ವಾಗ್ದಾಳಿ

ಮೋದಿಯಿಂದ ದೇಶ ದೊಡ್ಡ ದುರಂತ ಸ್ಥಿತಿಗೆ ಬಂದಿದೆ : ಬೆಲೆ ಏರಿಕೆಗೆ ಡಿಕೆ ಶಿವಕುಮಾರ್‌ ವಾಗ್ದಾಳಿ

May 15, 2026
ಮೋದಿ ಎಚ್ಚರಿಕೆಯ ಬೆನ್ನಲ್ಲೆ ದಿಢೀರ್‌ ಪೆಟ್ರೋಲ್‌, ಡಿಸೇಲ್‌ ಬೆಲೆ ಏರಿಕೆ

ಮೋದಿ ಎಚ್ಚರಿಕೆಯ ಬೆನ್ನಲ್ಲೆ ದಿಢೀರ್‌ ಪೆಟ್ರೋಲ್‌, ಡಿಸೇಲ್‌ ಬೆಲೆ ಏರಿಕೆ

May 15, 2026
ವಿದ್ಯುತ್ ಉತ್ಪಾದನೆಯಲ್ಲಿ ಮಹಿಳಾ ಸಿಬ್ಬಂದಿ ಸೇವೆ ಶ್ಲಾಘನೀಯ: ಗೌರವ್ ಗುಪ್ತ

ವಿದ್ಯುತ್ ಉತ್ಪಾದನೆಯಲ್ಲಿ ಮಹಿಳಾ ಸಿಬ್ಬಂದಿ ಸೇವೆ ಶ್ಲಾಘನೀಯ: ಗೌರವ್ ಗುಪ್ತ

May 14, 2026
Next Post
ವಲಸೆ ಕಾರ್ಮಿಕರನ್ನು ಕೊಂದು ಹಾಕಿದ ಮಹಾರಾಷ್ಟ್ರ ಸರ್ಕಾರ..!?

ವಲಸೆ ಕಾರ್ಮಿಕರನ್ನು ಕೊಂದು ಹಾಕಿದ ಮಹಾರಾಷ್ಟ್ರ ಸರ್ಕಾರ..!?

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada