• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ವಲಸೆ ಕಾರ್ಮಿಕರಿಗೆ ಅಗತ್ಯ ಇರುವ ಸೇವೆ ಒದಗಿಸುವಂತೆ ರಾಜ್ಯಗಳಿಗೆ ಕೇಂದ್ರಸೂಚನೆ

by
May 11, 2020
in ದೇಶ
0
ವಲಸೆ ಕಾರ್ಮಿಕರಿಗೆ ಅಗತ್ಯ ಇರುವ ಸೇವೆ ಒದಗಿಸುವಂತೆ ರಾಜ್ಯಗಳಿಗೆ ಕೇಂದ್ರಸೂಚನೆ
Share on WhatsAppShare on FacebookShare on Telegram

ಲಾಕ್‌ಡೌನ್‌ನಿಂದ ಅನ್ಯರಾಜ್ಯಗಳಲ್ಲಿ ಬಾಕಿಯಾಗಿರುವ ವಲಸೆ ಕಾರ್ಮಿಕರು ಪರಿಸ್ಥಿತಿಗೆ ಒಳಗಾಗಿ ಕಾಲ್ನಡಿಗೆಯಲ್ಲಿ ತಮ್ಮೂರುಗಳಿಗೆ ಹೊರಟಿದ್ದರೆ ಅವರನ್ನು ಲಭ್ಯವಿರುವ ಬಸ್ಸುಗಳಲ್ಲಿ ಅಥವಾ ವಿಶೇಷ ʼಶ್ರಮಿಕ್ʼ ರೈಲುಗಳಲ್ಲಿ ಕಳುಹಿಸಬೇಕೆಂದು ಗೃಹ ಕಾರ್ಯದರ್ಶಿ ಎಲ್ಲಾ ರಾಜ್ಯಗಳ ಮುಖ್ಯ ಕಾರ್ಯದರ್ಶಿ ಮತ್ತು ಕೇಂದ್ರಾಡಳಿತ ಪ್ರದೇಶದ ಆಡಳಿತಾಧಿಕಾರಿಗಳಿಗೆ ಪತ್ರ ಬರೆದಿದ್ದಾರೆ.

ADVERTISEMENT

ಮಹಾರಾಷ್ಟ್ರದಲ್ಲಿ ನಡೆದ ರೈಲು ದುರಂತವನ್ನು ಗಂಭೀರವಾಗಿ ಪರಿಗಣಿಸಿರುವ ಕೇಂದ್ರ, ವಲಸೆ ಕಾರ್ಮಿಕರ ಕುರಿತು ಇನ್ನಷ್ಟು ಕಾಳಜಿ ವಹಿಸಿದೆ. ಈಗಾಗಲೇ ವಲಸೆ ಕಾರ್ಮಿಕರಿಗೆ ತಮ್ಮೂರುಗಳಿಗೆ ತೆರಳಲು ವಿಶೇಷ ಶ್ರಮಿಕ್‌ ರೈಲುಗಳ ಸೇವೆ ಶುರು ಮಾಡಲಾಗಿತ್ತು. ಆದರೆ ಲಾಕ್‌ಡೌನ್‌ ಘೋಷಿಸಿದ 40 ದಿನಗಳ ಬಳಿಕ ವಿಶೇಷ ರೈಲು ಸೇವೆ ಪ್ರಾರಂಭಿಸಲಾಗಿತ್ತು. ಆದರೆ ಅದಾಗಲೇ ಕಾರ್ಮಿಕರು ಕಾಲ್ನಡಿಗೆಯಲ್ಲಿ ಯಾತ್ರೆ ಆರಂಭಿಸಿದ್ದರು.

ಹೀಗೊಂದು ಸೇವೆ ತಮಗಾಗಿ ಆರಂಭಗೊಂಡಿರುವ ಮಾಹಿತಿಯೂ ಇಲ್ಲದ ಕಾರ್ಮಿಕರು ಇನ್ನೂ ಸಾವಿರಾರು ಸಂಖ್ಯೆಯಲ್ಲಿ ತಮ್ಮೂರುಗಳಿಗೆ ಕಾಲ್ನಡಿಗೆಯಲ್ಲಿ ತೆರಳಿದ್ದಾರೆ. ರಸ್ತೆಗಳ ಮೂಲಕ ಹಾಗೂ ರೈಲು ಹಳಿಗಳ ಮೂಲಕ ಸಾಗುತ್ತಿರುವ ಕಾರ್ಮಿಕರು ಕಂಡು ಬಂದರೆ ಅವರಿಗೆ ಆಹಾರ, ತಾತ್ಕಾಲಿಕ ಸೂರು ಹಾಗೂ ವೈದ್ಯಕೀಯ ಸವಲತ್ತುಗಳನ್ನು ನೀಡಿ ಲಭ್ಯವಿರುವ ಸಾರಿಗೆ ಸೇವೆಯ ಮೂಲಕ ಅವರನ್ನು ತಮ್ಮೂರುಗಳಿಗೆ ಕಳುಹಿಸಬೇಕೆಂದು ಗೃಹ ಕಾರ್ಯದರ್ಶಿ ಪತ್ರದಲ್ಲಿ ಹೇಳಿದ್ದಾರೆ.

ಮುಖ್ಯವಾಗಿ ಇಂತಹ ಕಾರ್ಮಿಕರನ್ನು ಗಮನದಲ್ಲಿಟ್ಟುಕೊಂಡು ಗೃಹ ಕಾರ್ಯದರ್ಶಿ ರಾಜ್ಯಗಳ ಮುಖ್ಯ ಕಾರ್ಯದರ್ಶಿ ಹಾಗೂ ಕೇಂದ್ರಾಡಳಿತ ಪ್ರದೇಶಗಳ ಆಡಳಿತಾಧಿಕಾರಿಗಳಿಗೆ, ಇವರ ಕಾಳಜಿ ವಹಿಸುವಂತೆ ಎರಡು ಪತ್ರಗಳನ್ನು ಬರೆದಿದ್ದಾರೆ. ಕ್ಯಾಬಿನೆಟ್‌ ಕಾರ್ಯದರ್ಶಿ ಹಾಗೂ ಮುಖ್ಯ ಕಾರ್ಯದರ್ಶಿಗಳ ನಡುವೆ ಮೇ 10 ರಂದು ನಡೆದ ವೀಡಿಯೋ ಕಾನ್ಫರೆನ್ಸ್‌ ಚರ್ಚೆಯ ಹಿನ್ನಲೆಯಲ್ಲಿ ಎರಡೂ ಪತ್ರಗಳನ್ನು ಕಳುಹಿಸಲಾಗಿದೆ. ಸೋಮವಾರ ಕಳುಹಿಸಿದ್ದಾರೆನ್ನುವ ಪತ್ರದಲ್ಲಿ ವಲಸೆ ಕಾರ್ಮಿಕರಿಗೆ ಅಗತ್ಯವಿರುವ ವೈದ್ಯಕೀಯ ಸವಲತ್ತು ಮತ್ತು ಸೇವೆಗಳ ಕುರಿತು ಕಾಳಜಿ ವಹಿಸುವಂತೆ ಕೇಂದ್ರ ಆದೇಶಿಸಿದೆ.

Tags: Migrant Workers
Previous Post

ಸಿಎಂಗಳ ಜೊತೆ ಪಿಎಂ ಸಭೆ; ಈ ಬಾರಿಯಾದರೂ ಸೂಕ್ತ, ಸಮರ್ಥ ತೀರ್ಮಾನಗಳು ಹೊರಬೀಳಲಿ

Next Post

ನರೇಂದ್ರ ಮೋದಿ ಸರ್ಕಾರ ಈ ವರ್ಷ ಮಾಡೋ ಸಾಲ 12 ಲಕ್ಷ ಕೋಟಿ ದಾಟಲಿದೆ!

Related Posts

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ
ಅಭಿಮತ

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

by ಪ್ರತಿಧ್ವನಿ
April 27, 2026
0

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ 'ಗ್ಲೋಬಲ್ ರಾಜಸ್ಥಾನ ಅಗ್ರಿಟೆಕ್ ಮೀಟ್ 2026' ಅಂಗವಾಗಿ ಬೆಂಗಳೂರಿನ ರೋಡ್ ಶೋನಲ್ಲಿ ಹೂಡಿಕೆಗೆ ಕೈಗಾರಿಕೆಗಳ ಆಸಕ್ತಿ...

Read moreDetails
ಬೆಸ್ಕಾಂನ ‘ಹೆಚ್‌ಟಿ ಮಿತ್ರ’  ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

ಬೆಸ್ಕಾಂನ ‘ಹೆಚ್‌ಟಿ ಮಿತ್ರ’ ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

April 23, 2026
ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

April 23, 2026
ಮಹಿಳಾ ಮೀಸಲಾತಿ ಡಿಎಂಕೆ ರಾಜಕೀಯ ಹುನ್ನಾರಕ್ಕೆ ರಾಜ್ಯದ ಹಿತ ಬಲಿ:ಬಸವರಾಜ ಬೊಮ್ಮಾಯಿ

ಮಹಿಳಾ ಮೀಸಲಾತಿ ಡಿಎಂಕೆ ರಾಜಕೀಯ ಹುನ್ನಾರಕ್ಕೆ ರಾಜ್ಯದ ಹಿತ ಬಲಿ:ಬಸವರಾಜ ಬೊಮ್ಮಾಯಿ

April 23, 2026
ಸಂವಿಧಾನದ ಅಶಯಗಳು -ಬಾಬು ಜಗಜೀವನ್‌ರಾಮ್‌-

ಸಂವಿಧಾನದ ಅಶಯಗಳು -ಬಾಬು ಜಗಜೀವನ್‌ರಾಮ್‌-

April 23, 2026
Next Post
ನರೇಂದ್ರ ಮೋದಿ ಸರ್ಕಾರ ಈ ವರ್ಷ ಮಾಡೋ ಸಾಲ 12 ಲಕ್ಷ ಕೋಟಿ ದಾಟಲಿದೆ!

ನರೇಂದ್ರ ಮೋದಿ ಸರ್ಕಾರ ಈ ವರ್ಷ ಮಾಡೋ ಸಾಲ 12 ಲಕ್ಷ ಕೋಟಿ ದಾಟಲಿದೆ!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada