• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ನರೇಂದ್ರ ಮೋದಿ ಸರ್ಕಾರ ಈ ವರ್ಷ ಮಾಡೋ ಸಾಲ 12 ಲಕ್ಷ ಕೋಟಿ ದಾಟಲಿದೆ!

by
May 11, 2020
in ದೇಶ
0
ನರೇಂದ್ರ ಮೋದಿ ಸರ್ಕಾರ ಈ ವರ್ಷ ಮಾಡೋ ಸಾಲ 12 ಲಕ್ಷ ಕೋಟಿ ದಾಟಲಿದೆ!
Share on WhatsAppShare on FacebookShare on Telegram

ಕರೋನಾ ಸೋಂಕು ನಿಗ್ರಹಕ್ಕಾಗಿ ದೇಶವ್ಯಾಪಿ ಲಾಕ್‌ಡೌನ್ ಘೋಷಿಸಿದ ಹಿನ್ನೆಲೆಯಲ್ಲಿ ಆದಾಯವೇ ಬಾರದೆ ಬೊಕ್ಕಸ ಬರಿದಾಗಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಪ್ರಸಕ್ತ ವಿತ್ತೀಯ ವರ್ಷದಲ್ಲಿನ ಸಾಲದ ಪ್ರಮಾಣವನ್ನು 12 ಲಕ್ಷ ಕೋಟಿ ರುಪಾಯಿಗಳಿಗೆ ಏರಿಸಲಿದೆ. ಈ ಹಿಂದೆ ಪಡೆಯುವ ಸಾಲದ ಪ್ರಮಾಣವನ್ನು 7.8 ಲಕ್ಷ ಕೋಟಿ ರುಪಾಯಿಗಳೆಂದು ನಿಗದಿ ಮಾಡಲಾಗಿತ್ತು. ಅಂದರೆ 4.2 ಲಕ್ಷ ಕೋಟಿಗಳಷ್ಟು ಹೆಚ್ಚುವರಿಯಾಗಿ ಸಾಲ ಮಾಡಲು ಮುಂದಾಗಿದೆ. ಇದರೊಂದಿಗೆ ದೇಶದ ಸಾಲದ ಮೊತ್ತವು ನರೇಂದ್ರ ಮೋದಿ ಅವರ ಘನ ಅಧಿಕಾರದ ಅವಧಿಯಲ್ಲಿ 1 ಲಕ್ಷ ಕೋಟಿಯನ್ನು ದಾಟುತ್ತಿದೆ.

ADVERTISEMENT

ನರೇಂದ್ರ ಮೋದಿ ಅಧಿಕಾರಕ್ಕೆ ಬಂದ ನಂತರ ದೇಶದ ಸಾಲದ ಪ್ರಮಾಣ ಬೃಹತ್ ಪ್ರಮಾಣದಲ್ಲಿ ಏರಿಕೆಯಾಗಿದೆ. ಅದಕ್ಕೆ ಸ್ಪಷ್ಟ ಕಾರಣವೇನೆಂಬುದನ್ನು ಮೋದಿ ಸರ್ಕಾರವು ಇದುವರೆಗೆ ನೀಡಿಲ್ಲ. ಆದರೆ, ಮೋದಿ ಸರ್ಕಾರದ ತರ್ಕರಹಿತ ಆರ್ಥಿಕ ನೀತಿಗಳು ಇದಕ್ಕೆ ಕಾರಣ ಎಂಬುದು ಮೇಲ್ನೋಟಕ್ಕೆ ಸಾಬೀತಾಗಿದೆ. ನರೇಂದ್ರಮೋದಿ ಪ್ರಧಾನಿಯಾಗಿ ಅಧಿಕಾರ ಗ್ರಹಿಸುವ ಮುನ್ನಾ ಅಂದರೆ, 2014 ಮಾರ್ಚ್ ಅಂತ್ಯಕ್ಕೆ ಇದ್ದ ದೇಶದ ಸಾಲದ ಮೊತ್ತವು 53.11 ಲಕ್ಷ ಕೋಟಿ ರುಪಾಯಿಗಳು. ಮೋದಿ ಆಡಳಿತದ ಮೊದಲ ಐದೂವರೆ ವರ್ಷಗಳ ಅವಧಿಯಲ್ಲಿ ಅಂದರೆ, ಸೆಪ್ಟೆಂಬರ್ 2019ರ ವೇಳೆಗೆ 91.01 ಲಕ್ಷ ಕೋಟಿ ರುಪಾಯಿಗಳಿಗೆ ಏರಿತ್ತು. ಮೋದಿ ಅಧಿಕಾರಕ್ಕೆ ಬಂದ ನಂತರ ಏರಿಕೆ ಆಗಿರುವ ಸಾಲದ ಮೊತ್ತವು 37.9 ಲಕ್ಷ ಕೋಟಿ ರುಪಾಯಿಗಳು. ಶೇಕಡವಾರು ಪ್ರಮಾಣದಲ್ಲಿ ಶೇ.71.36ರಷ್ಟು.

ಸಾಮಾನ್ಯವಾಗಿ ಮಾರ್ಚ್ ಅಂತ್ಯಕ್ಕೆ ಆಯಾ ವರ್ಷದ ಸಾಲದ ಅಂಕಿಅಂಶಗಳನ್ನು ಏಪ್ರಿಲ್ ತಿಂಗಳ ಅಂತ್ಯದಲ್ಲಿ ಪ್ರಕಟಿಸಲಾಗುತ್ತದೆ. ಪ್ರಸಕ್ತ ವರ್ಷದಲ್ಲಿ ಇದುವರೆಗೂ ಪ್ರಕಟವಾಗಿಲ್ಲ. ಕಳೆದ ವಿತ್ತೀಯ ವರ್ಷದ ಉತ್ತರಾರ್ಧದಲ್ಲಿ ಮೊದಿ ಸರ್ಕಾರ ಏನಿಲ್ಲವೆಂದರೂ 6 ಲಕ್ಷ ಕೋಟಿ ರುಪಾಯಿಗಳಷ್ಟು ಸಾಲ ಮಾಡಿರುವ ಅಂದಾಜಿದ್ದು, ಒಟ್ಟಾರೆ ಸಾಲವು 97 ಲಕ್ಷ ಕೋಟಿ ಆಜುಬಾಜಿಗೆ ಏರಬಹುದು. ಈ ಲೆಕ್ಕವು 2020 ಮಾರ್ಚ್ ಅಂತ್ಯದವರೆಗೆ ಮಾತ್ರ.

ನರೇಂದ್ರ ಮೋದಿ ಅವರು ನಮಸ್ತೆ ಟ್ರಂಪ್ ಕಾರ್ಯಕ್ರಮ ಮಾಡಲು ಮತ್ತು ಮಧ್ಯಪ್ರದೇಶದಲ್ಲಿ ಹಿಂಬಾಗಿಲಿನಿಂದ ಸರ್ಕಾರ ರಚಿಸುವ ಸಲುವಾಗಿ ಕರೋನಾ ಸೋಂಕು ತಡೆಗೆ ಮಾರ್ಚ್ ಕೊನೆವಾರದಲ್ಲಿ ಲಾಕ್‌ಡೌನ್ ಘೋಷಿಸಿರಬಹುದು. ಆದರೆ, ಜನವರಿ ಆರಂಭದಿಂದಲೇ ಕರೋನಾ ಸೋಂಕು ಆರ್ಥಿಕ ಚಟುವಟಿಕೆಗಳ ಮೇಲೆ ವ್ಯತಿರಿಕ್ತ ಪರಿಣಾಮ ಬೀರಿತ್ತು. ಹೀಗಾಗಿ ಕಳೆದ ವಿತ್ತೀಯ ವರ್ಷದ ಕೊನೆ ತ್ರೈಮಾಸಿಕದಲ್ಲಿನ ಬೊಕ್ಕಸಕ್ಕೆ ಹೆಚ್ಚಿನ ಆದಾಯವೇನೂ ಬಂದಿಲ್ಲ. ಅದಕ್ಕೂ ಹಿಂದಿನ ಮೂರು ತ್ರೈಮಾಸಿಕಗಳಲ್ಲಿ ಕೂಡಾ ಸರ್ಕಾರ ನಿರೀಕ್ಷಿಸಿದಷ್ಟು ಜಿಎಸ್ಟಿ ಸೇರಿದಂತೆ ತೆರಿಗೆ ಸಂಪನ್ಮೂಲ ಕ್ರೋಢೀಕರಣವಾಗಿಲ್ಲ. ಹೀಗಾಗಿ 2019-20ನೇ ಸಾಲಿನಲ್ಲಿ ಬಜೆಟ್ ನಲ್ಲಿ ಅಂದಾಜಿಸಿದ ವಿತ್ತೀಯ ಕೊರತೆಯು ಶೇ.3.5ರ ಬದಲಿಗೆ ಶೇ.5.5ಕ್ಕೆ ಏರುವ ಅಂದಾಜು ಮಾಡಲಾಗಿದೆ. ವಾಸ್ತವವಾಗಿ ಅದು ಶೇ.6ರಷ್ಟಕ್ಕೆ ಏರುವ ಸಾಧ್ಯತೆಯೂ ಇದೆ.

ಹೀಗಾಗಿ ಪ್ರಸಕ್ತ ವಿತ್ತೀಯ ವರ್ಷದಲ್ಲಿ ಮೋದಿ ಸರ್ಕಾರವು ಹೆಚ್ಚಿನ ಸಾಲ ಪಡೆಯಲು ಮುಂದಾಗುತ್ತಿದೆ. ಕರೋನಾ ಸಂಕಷ್ಟ ನಿವಾರಿಸಲು ಘೋಷಿಸಲಾಗಿರುವ ಮತ್ತು ಮುಂದೆ ಘೋಷಿಸಲ್ಪಡುವ ಪ್ಯಾಕೇಜುಗಳಿಗಾಗಿ ಹೆಚ್ಚಿನ ಆರ್ಥಿಕ ಸಂಪನ್ಮೂಲದ ಅಗತ್ಯ ಇರುವುದರಿಂದ ಈ ಹೊತ್ತಿನಲ್ಲಿ ಅದು ತೆರಿಗೆ ಮತ್ತಿತರ ಯಾವುದೇ ಮೂಲದಿಂದಲೂ ದಕ್ಕದಿರುವ ಕಾರಣ ಸಾಲ ಪಡೆಯುವುದು ಅನಿವಾರ್ಯವಾಗಿದೆ. ಸಾಲದ ಪ್ರಮಾಣವು ನಿರೀಕ್ಷೆ ಮೀರಿ ಹಿಗ್ಗುತ್ತಿರುವುದರಿಂದಾಗಿ ಪ್ರಸಕ್ತ ವಿತ್ತೀಯ ವರ್ಷದಲ್ಲಿ ಕೂಡಾ ವಿತ್ತೀಯ ಕೊರತೆಯು ಶೇ.6ರಷ್ಟು ದಾಟುವ ಅಂದಾಜು ಇದೆ.

Tags: ModiRBI
Previous Post

ವಲಸೆ ಕಾರ್ಮಿಕರಿಗೆ ಅಗತ್ಯ ಇರುವ ಸೇವೆ ಒದಗಿಸುವಂತೆ ರಾಜ್ಯಗಳಿಗೆ ಕೇಂದ್ರಸೂಚನೆ

Next Post

ರೈಲು ಪ್ರಯಾಣಿಕರು ಪಾಲಿಸಬೇಕಾದ ಸೂತ್ರಗಳು.!

Related Posts

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ
ಅಭಿಮತ

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

by ಪ್ರತಿಧ್ವನಿ
April 27, 2026
0

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ 'ಗ್ಲೋಬಲ್ ರಾಜಸ್ಥಾನ ಅಗ್ರಿಟೆಕ್ ಮೀಟ್ 2026' ಅಂಗವಾಗಿ ಬೆಂಗಳೂರಿನ ರೋಡ್ ಶೋನಲ್ಲಿ ಹೂಡಿಕೆಗೆ ಕೈಗಾರಿಕೆಗಳ ಆಸಕ್ತಿ...

Read moreDetails
ಬೆಸ್ಕಾಂನ ‘ಹೆಚ್‌ಟಿ ಮಿತ್ರ’  ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

ಬೆಸ್ಕಾಂನ ‘ಹೆಚ್‌ಟಿ ಮಿತ್ರ’ ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

April 23, 2026
ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

April 23, 2026
ಮಹಿಳಾ ಮೀಸಲಾತಿ ಡಿಎಂಕೆ ರಾಜಕೀಯ ಹುನ್ನಾರಕ್ಕೆ ರಾಜ್ಯದ ಹಿತ ಬಲಿ:ಬಸವರಾಜ ಬೊಮ್ಮಾಯಿ

ಮಹಿಳಾ ಮೀಸಲಾತಿ ಡಿಎಂಕೆ ರಾಜಕೀಯ ಹುನ್ನಾರಕ್ಕೆ ರಾಜ್ಯದ ಹಿತ ಬಲಿ:ಬಸವರಾಜ ಬೊಮ್ಮಾಯಿ

April 23, 2026
ಸಂವಿಧಾನದ ಅಶಯಗಳು -ಬಾಬು ಜಗಜೀವನ್‌ರಾಮ್‌-

ಸಂವಿಧಾನದ ಅಶಯಗಳು -ಬಾಬು ಜಗಜೀವನ್‌ರಾಮ್‌-

April 23, 2026
Next Post
ರೈಲು ಪ್ರಯಾಣಿಕರು ಪಾಲಿಸಬೇಕಾದ ಸೂತ್ರಗಳು.!

ರೈಲು ಪ್ರಯಾಣಿಕರು ಪಾಲಿಸಬೇಕಾದ ಸೂತ್ರಗಳು.!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada