• Home
  • About Us
  • ಕರ್ನಾಟಕ
Monday, February 2, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಹಸಿರುವಲಯ ಶಿವಮೊಗ್ಗದಲ್ಲಿ ಆತಂಕ ತಂದ ಗುಜರಾತ್ ನಂಟು!

by
May 11, 2020
in ಕರ್ನಾಟಕ
0
ಹಸಿರುವಲಯ ಶಿವಮೊಗ್ಗದಲ್ಲಿ ಆತಂಕ ತಂದ ಗುಜರಾತ್ ನಂಟು!
Share on WhatsAppShare on FacebookShare on Telegram

ಈವರೆಗೆ ಹಸಿರು ವಲಯದಲ್ಲಿಯೇ ಇದ್ದ ಮುಖ್ಯಮಂತ್ರಿಗಳ ತವರು ಜಿಲ್ಲೆ ಶಿವಮೊಗ್ಗದಲ್ಲಿ ಗುಜರಾತಿನ ಅಹಮದಾಬಾದಿನಿಂದ ವಲಸೆ ಬಂದ ಕರೋನಾ ಸೋಂಕಿತರು, ಏಕಕಾಲಕ್ಕೆ ಎಂಟು ಪಾಸಿಟಿವ್ ಪ್ರಕರಣಗಳನ್ನು ಜಿಲ್ಲೆಗೆ ತಂದಿದ್ದಾರೆ.

ADVERTISEMENT

ಅಹಮದಾಬಾದಿನಲ್ಲಿ ಲಾಕ್ ಡೌನ್ ವೇಳೆ ಸಿಲುಕಿಕೊಂಡಿದ್ದ ಶಿಕಾರಿಪುರ ಮೂಲದ ಏಳು ಮಂದಿ ಮತ್ತು ತೀರ್ಥಹಳ್ಳಿ ತಾಲೂಕಿನ ಒಬ್ಬರು ಸೇರಿ ಒಟ್ಟು ಎಂಟು ಮಂದಿ, ಅಲ್ಲಿ ತಿಂಗಳ ಹಿಂದೆ ಕೋವಿಡ್-19 ತಪಾಸಣೆಗೆ ಒಳಗಾಗಿದ್ದರು. ಆಗ ಎಲ್ಲರ ಫಲಿತಾಂಶವೂ ನೆಗೆಟೀವ್ ಬಂದಿತ್ತು. ಆದರೆ, ಆ ಬಳಿಕ ಅವರು ಸುಮಾರು ಒಂದು ತಿಂಗಳ ಕಾಲ ಅಲ್ಲಿಯೇ ಲಾಕ್ ಡೌನ್ ಆಗಿದ್ದು ಮೂರು ದಿನಗಳ ಹಿಂದೆ ಶಿವಮೊಗ್ಗಕ್ಕೆ ತಲುಪಿದ್ದರು.

ಹುಬ್ಬಳ್ಳಿ, ಹರಿಹರ-ಹೊನ್ನಾಳಿ ಮಾರ್ಗವಾಗಿ ಖಾಸಗಿ ವಾಹನದ ಮೂಲಕ ಪ್ರವೇಶಿಸಿದ ಅವರನ್ನು ಜಿಲ್ಲೆಯ ಗಡಿ ಮಡಿಕೆ ಚೀಲೂರು ಬಳಿಯೇ ತಡೆದು ಚೆಕ್ ಪೋಸ್ಟ್ ನಲ್ಲಿಯೇ ವಶಕ್ಕೆ ಪಡೆದು ಜನಸಂಪರ್ಕದಿಂದ ಹೊರತಾದ ಸ್ಥಳದಲ್ಲಿ ಇಡಲಾಗಿತ್ತು. ಕೂಡಲೇ ಅವರ ಗಂಟಲು ದ್ರವ ತೆಗೆದು ಪರೀಕ್ಷೆಗೆ ಕಳಿಸಲಾಗಿತ್ತು. ಎಂಟು ಮಂದಿಯ ವರದಿ ಪಾಸಿಟೀವ್ ಬಂದಿರುವ ಹಿನ್ನೆಲೆಯಲ್ಲಿ ಅವರನ್ನು ಕೋವಿಡ್-19 ಆಸ್ಪತ್ರೆಯಲ್ಲಿ ಪ್ರತ್ಯೇಕಿಸಿ ಚಿಕತ್ಸೆ ನೀಡಲಾಗುತ್ತಿದೆ. ಅವರನ್ನು ಕರೆತಂದ ಪೊಲೀಸ್ ಸಿಬ್ಬಂದಿ, ಅವರೊಂದಿಗೆ ಸಂಪರ್ಕಕ್ಕೆ ಬಂದ ಆಂಬ್ಯುಲೆನ್ಸ್ ಸಿಬ್ಬಂದಿ ಮತ್ತು ವೈದ್ಯಕೀಯ ಸಿಬ್ಬಂದಿಯನ್ನು ಕೂಡ ಕ್ವಾರಂಟೈನ್ ಮಾಡಲಾಗಿದೆ ಎಂದು ಜಿಲ್ಲಾಡಳಿತ ಭಾನುವಾರ ಬೆಳಗ್ಗೆ ಹೇಳಿದೆ.

ಜೊತೆಗೆ, ಅವರುಗಳು ಅಹಮದಾಬಾದ್ ನಲ್ಲಿ ಧಾರ್ಮಿಕ ಕಾರ್ಯಕ್ರಮಕ್ಕೆ ಹೋಗಿ ಲಾಕ್ ಡೌನ್ ನಿಂದಾಗಿ ಅಲ್ಲಿಯೇ ಸಿಲುಕಿಕೊಂಡಿದ್ದಾಗಿ ಹೇಳಿದ್ದಾರೆ. ತಬ್ಲೀಘ್ ಸಮಾವೇಶದಲ್ಲಿ ಭಾಗಿಯಾಗಿರುವ ಬಗ್ಗೆ ಮಾಹಿತಿ ಇಲ್ಲ. ಅಲ್ಲದೆ ತಬ್ಲೀಘ್ ಸಮಾವೇಶ ನಡೆದು ಆಗಲೇ ಎರಡು ತಿಂಗಳಾಗಿದೆ. ಹಾಗಾಗಿ ಅದರಿಂದಾಗಿ ಇವರು ಸೋಂಕು ತಗುಲಿಸಿಕೊಂಡಿರುವ ಸಾಧ್ಯತೆ ಕಡಿಮೆ ಎಂದೂ ಜಿಲ್ಲಾಧಿಕಾರಿ ಕೆ ಬಿ ಶಿವಕುಮಾರ್ ಹೇಳಿದ್ದಾರೆ.

ಆದರೆ, ಶಿವಮೊಗ್ಗ ನಗರ ಶಾಸಕರೂ ಆಗಿರುವ ಉಸ್ತುವಾರಿ ಸಚಿವ ಕೆ ಎಸ್ ಈಶ್ವರಪ್ಪ ಅವರು, ಸೋಂಕಿತರು ತಬ್ಲೀಘಿಗಳು ಎಂದಿದ್ದಾರೆ. ಭಾನುವಾರ ಸುದ್ದಿಗೋಷ್ಠಿಯಲ್ಲಿ ಅವರು ಈ ಹೇಳಿಕೆ ನೀಡಿದ್ದು, ಜಿಲ್ಲೆಯ ಜನರೊಂದಿಗೆ ಅವರಾರಿಗೂ ಪ್ರಾಥಮಿಕ ಸಂಪರ್ಕ ಇಲ್ಲದೆ ಇರುವುದರಿಂದ ಮತ್ತು ಎಲ್ಲರನ್ನೂ ಪ್ರತ್ಯೇಕವಾಗಿ ಕ್ವಾರಂಟೈನ್ ನಲ್ಲಿಟ್ಟು ಪರೀಕ್ಷೆ ನಡೆಸಿ, ಬಳಿಕ ಐಸೋಲೇಷನ್ ನಲ್ಲಿಟ್ಟು ಚಿಕಿತ್ಸೆ ನೀಡುತ್ತಿರುವುದರಿಂದ ಜಿಲ್ಲೆಯ ಹಸಿರು ವಲಯದ ಸ್ಥಾನಮಾನಕ್ಕೆ ಯಾವುದೇ ಧಕ್ಕೆ ಇಲ್ಲ. ಎಂದಿನಂತೆಯೇ ಕೋವಿಡ್-19 ವಿಷಯದಲ್ಲಿ ಜಿಲ್ಲೆ ಹಸಿರುವಲಯದಲ್ಲಿಯೇ ಮುಂದುವರಿಯುತ್ತದೆ ಎಂದು ಅವರು ಹೇಳಿದ್ದರು.

ಈ ನಡುವೆ ಒಟ್ಟು 40 ಜನರು ಅಹಮದಾಬಾದಿನಿಂದ ಒಂದೇ ಖಾಸಗಿ ಬಸ್ಸಿನಲ್ಲಿಹೊರಟು ಬೇರೆಬೇರೆ ಭಾಗದವರು ಅವರವರ ಊರುಗಳಿಗೆ ಹೋಗಿದ್ದಾರೆ. ಅಂತಿಮವಾಗಿ ಆ ಬಸ್ಸಿನಲ್ಲಿ ಜಿಲ್ಲೆಯ ಒಂಭತ್ತು ಜನ ಪ್ರಯಾಣ ಮುಂದುವರಿಸಿ ಜಿಲ್ಲೆಗೆ ಗಡಿಗೆ ಬಂದಾಗ ಪೊಲೀಸರು ಅವರನ್ನು ತಪಾಸಣೆಗೆ ಒಳಪಡಿಸಿದ್ದಾರೆ. ಆ ಪೈಕಿ ಒಬ್ಬರ ವರದಿ ನೆಗೇಟಿವ್ ಬಂದಿದೆ. ಆದರೆ, ಈ ಎಂಟೂ ಮಂದಿ ಗುಜರಾತಿನಿಂದ ಶಿವಮೊಗ್ಗದ ವರೆಗೆ ಊಟ, ತಿಂಡಿಗಾಗಿ ಹಲವು ಸ್ಥಳಗಳಲ್ಲಿ ಇಳಿದಿದ್ದಾರೆ. ಬಸ್ಸಿನಲ್ಲಿದ್ದ ಇತರರೊಂದಿಗೆ ಬೆರೆತಿದ್ದಾರೆ. ಹೊನ್ನಾಳಿಯಲ್ಲಿಯೂ ಬಸ್ ನಿಲ್ಲಿಸಿ ವಿಶ್ರಾಂತಿ ಪಡೆದಿದ್ದಾರೆ. ಹಾಗಾಗಿ ಇವರ ಸಂಪರ್ಕಕ್ಕೆ ಯಾರೆಲ್ಲಾ ಬಂದಿದ್ದಾರೆ? ಯಾರಿಗೆಲ್ಲಾ ಸೋಂಕು ಹರಡಿದೆ ಎಂಬುದನ್ನು ಪತ್ತೆ ಮಾಡುವ ಸವಾಲು ಎದುರಾಗಿದೆ.

ಈ ನಡುವೆ ಈ ಎಲ್ಲರೂ ಒಂದೇ ಸಮುದಾಯಕ್ಕೆ ಸೇರಿದವರು ಎಂಬ ಹಿನ್ನೆಲೆಯಲ್ಲಿ ಈಗಾಗಲೇ ರಾಜಕೀಯ ಮೇಲಾಟ ಶುರುವಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಒಂದು ಧರ್ಮದ ವೇಷಭೂಷಣದ ವ್ಯಕ್ತಿಯೊಬ್ಬರು ಜಿಲ್ಲೆ ನಕ್ಷೆಗೆ ಕೆಂಪು ಬಣ್ಣ ಬಳಿಯುವ ಚಿತ್ರ, ಸೋಂಕಿತರ ಹೆಸರು, ವಿಳಾಸದ ಪಟ್ಟಿ ಸೇರಿದಂತೆ ಹಲವು ಸೂಕ್ಷ್ಮ ಮತ್ತು ದುರುದ್ದೇಶದ ಮಾಹಿತಿಗಳು ಹರಿದಾಡುತ್ತಿವೆ. ಜಿಲ್ಲಾಡಳಿತದ ಎಚ್ಚರಿಕೆಯ ಹೊರತಾಗಿಯೂ ಒಂದು ಕೋಮಿನ ವಿರುದ್ಧ ದ್ವೇಷ ಕಾರುವ ಸಂದೇಶಗಳು ವೈರಲ್ ಆಗಿವೆ.

ಸ್ವತಃ ಬಿಜೆಪಿ ಹಿರಿಯ ನಾಯಕ, ವಿಧಾನಪರಿಷತ್ ಸದಸ್ಯ ಆಯನೂರು ಮಂಜುನಾಥ್ ಅವರು, “ತಬ್ಲೀಘಿಗಳು ಗುಜರಾತಿನಿಂದ ಜಿಲ್ಲೆಗೆ ಕರೋನಾ ತಂದಿದ್ದಾರೆ. ಈವರೆಗೆ ಹಸಿರು ವಲಯದಲ್ಲಿದ್ದ ಜಿಲ್ಲೆ ಅವರಿಂದಾಗಿ ಆತಂಕಕ್ಕೆ ಈಡಾಗಿದೆ” ಎಂದು ಪತ್ರಿಕಾಗೋಷ್ಠಿಯಲ್ಲಿ ಸೋಮವಾರ ಆರೋಪಿಸಿದ್ದಾರೆ. ಆ ಮೂಲಕ ಕರೋನಾ ಸೋಂಕಿನ ಕೋಮುವಾದೀಕರಣಕ್ಕೆ ಸ್ವತಃ ಜನಪ್ರತಿನಿಧಿಯಾಗಿ ಆಯನೂರು ಚಾಲನೆ ನೀಡಿದ್ದಾರೆ ಎಂಬ ಟೀಕೆಗಳೂ ಕೇಳಿಬಂದಿವೆ.

ಈ ನಡುವೆ, ಸೋಂಕಿತರನ್ನು ಮೊದಲ ದಿನ ನಗರ ಹೃದಯಭಾಗದ ಬಾಪೂಜಿನಗರ ಹಾಸ್ಟೆಲ್ ಒಂದರಲ್ಲಿ ಕ್ವಾರಂಟೈನ್ ಮಾಡಲಾಗಿತ್ತು. ಆದರೆ ಸ್ಥಳೀಯರು ಆ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಅವರನ್ನು ನಗರದ ಹೊರವಲಯಕ್ಕೆ ಸ್ಥಳಾಂತರಿಸಲು ರಾತ್ರಿ ವೇಳೆ ಮುಂದಾದಾಗ, ಇಬ್ಬರು ತಪ್ಪಿಸಿಕೊಂಡು ಹೋಗಲು ಯತ್ನಿಸಿದ್ದರು. ಆಗ ಪೊಲೀಸರು ಹರಸಾಹಸ ಮಾಡಿ ಅವರನ್ನು ಹಿಡಿದಿದ್ದಾರೆ. ಆ ಮೂಲಕ ಜಿಲ್ಲೆಯನ್ನು ಹೆಚ್ಚಿನ ಸೋಂಕಿನಿಂದ ಪಾರುಮಾಡಿದ್ದಾರೆ ಎಂಬ ಮಾಹಿತಿ ಕೂಡ ಹೊರಬಿದ್ದಿದೆ. ಆ ಹಿನ್ನೆಲೆಯಲ್ಲಿ ಒಬ್ಬರು ಪೊಲೀಸ್ ಇನ್ಸ್ ಪೆಕ್ಟರ್, ಒಬ್ಬರು ಪಿಎಸ್ ಐ, ಇಬ್ಬರು ಪೇದೆ ಸೇರಿದಂತೆ ವಿವಿಧ ಇಲಾಖೆಯ ಸುಮಾರು 25 ಮಂದಿಯನ್ನು(ಇಡೀ ಕ್ವಾರಂಟೈನ್ ಪ್ರಕ್ರಿಯೆಯಲ್ಲಿ ನೇರಭಾಗಿಯಾಗಿ ಸೋಂಕಿತರ ಸಂಪರ್ಕಕ್ಕೆ ಬಂದವರು) 14 ದಿನಗಳ ಕ್ವಾರಂಟೈನ್ ಗೆ ಒಳಪಡಿಸಲಾಗಿದೆ.

ಇದೀಗ ಜಿಲ್ಲೆಯಲ್ಲಿ ಪೊಲೀಸರ ಈ ಕಾರ್ಯಾಚರಣೆ ವಿಷಯ ಕೂಡ ವೈರಲ್ ಆಗಿದ್ದು, ನಿರ್ದಿಷ್ಟವಾಗಿ ಒಂದು ಸಮುದಾಯವನ್ನು ಗುರಿಯಾಗಿಸಿಕೊಂಡು ಕರೋನಾ ಸೋಂಕನ್ನು ಕೂಡ ಕೋಮುವಾದಿ ರಾಜಕೀಯದ ದಾಳವಾಗಿಸಿಕೊಳ್ಳಲಾಗುತ್ತಿದೆ. ಮತ್ತೊಂದು ಕಡೆ, ಇದಕ್ಕೆ ಪರ್ಯಾಯವಾಗಿ ಮತ್ತೊಂದು ಗುಂಪಿನಿಂದಲೂ ಕೆಲವು ಆಡಿಯೋ ಕ್ಲಿಪಿಂಗ್ ಗಳನ್ನು ವೈರಲ್ ಮಾಡಲಾಗುತ್ತಿದೆ.

ಹಾಗಾಗಿ ಇಷ್ಟು ದಿನಗಳ ಕಾಲ ಶ್ರಮವಹಿಸಿ ಜಿಲ್ಲೆಯನ್ನು ಸೋಂಕುಮುಕ್ತವಾಗಿಟ್ಟಿದ್ದ ಜಿಲ್ಲಾಡಳಿತ ಮತ್ತು ಪೊಲೀಸರ ಪಾಲಿಗೆ ಇದೀಗ ಸುಳ್ಳು ಸುದ್ದಿಗಳು ಮತ್ತು ಕೋಮುವಾದಿ ವಿಶ್ಲೇಷಣೆಗಳಿಗೆ ತಡೆಯೊಡ್ಡುವುದು ತಲೆನೋವಾಗಿ ಪರಿಣಮಿಸಿವೆ.

Tags: AhmedabadCM YediyurappacoronavirusCovid 19ShivamoggaTabligh Jammatಅಹಮದಾಬಾದ್‌ಕರೋನಾ ಸೋಂಕುಕೋವಿಡ್-19ಗುಜರಾತ್ತಬ್ಲೀಘ್ಶಿವಮೊಗ್ಗಸಿ ಎಂ ಯಡಿಯೂರಪ್ಪ
Previous Post

ಕರೋನಾ ಸೋಂಕಿಲ್ಲದೆ ಕೇವಲ ಲಾಕ್ಡೌನ್ ನಿಂದ ಮಾತ್ರವೇ ಸತ್ತವರ ಸಂಖ್ಯೆ ಎಷ್ಟುಗೊತ್ತಾ?     

Next Post

ಸದ್ಯಕ್ಕೆ ರೈಲ್ವೇ ಸಂಚಾರ ಬೇಡ ಎಂದ ನಾಲ್ವರು ಮುಖ್ಯಮಂತ್ರಿಗಳು.!!

Related Posts

ಅಕ್ರಮ ಗಣಿಗಾರಿಕೆಗೆ ಜೆಸಿಬಿ ಮೇಲೆ ಕಲ್ಲೆಸೆದು ಕಾನೂನಿನ ಗಡುಸು ಮುಖ ತೋರಿಸಿದ ಮಹಿಳಾ ಅಧಿಕಾರಿ
ಕರ್ನಾಟಕ

ಅಕ್ರಮ ಗಣಿಗಾರಿಕೆಗೆ ಜೆಸಿಬಿ ಮೇಲೆ ಕಲ್ಲೆಸೆದು ಕಾನೂನಿನ ಗಡುಸು ಮುಖ ತೋರಿಸಿದ ಮಹಿಳಾ ಅಧಿಕಾರಿ

by ಪ್ರತಿಧ್ವನಿ
February 1, 2026
0

ಬೆಳಗಾವಿ : ರಾಜಕೀಯ ಒತ್ತಡ, ಬೆದರಿಕೆಗಳು, ಗುಂಪು ಗಲಾಟೆಯ ನಡುವೆಯೂ ಅಕ್ರಮ ಗಣಿಗಾರಿಕೆಗೆ ತಲೆಬಾಗದೆ, ಸ್ಥಳದಲ್ಲೇ ಕಠಿಣ ಕ್ರಮ ಕೈಗೊಂಡ ಮಹಿಳಾ ಭೂ ವಿಜ್ಞಾನಿ ಬಿಂದನ್ ಪಾಟೀಲ...

Read moreDetails
ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು: ಕಾಂಗ್ರೆಸಿಗರ ಟೀಕೆಗೆ ಕುಮಾರಸ್ವಾಮಿ ಖಡಕ್‌ ಉತ್ತರ

ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು: ಕಾಂಗ್ರೆಸಿಗರ ಟೀಕೆಗೆ ಕುಮಾರಸ್ವಾಮಿ ಖಡಕ್‌ ಉತ್ತರ

February 1, 2026
Vijayapura: 27 ಭೂ ಕಬಳಿಕೆ ಪ್ರಕರಣಗಳಲ್ಲಿ 200 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ

Vijayapura: 27 ಭೂ ಕಬಳಿಕೆ ಪ್ರಕರಣಗಳಲ್ಲಿ 200 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ

February 1, 2026
ಕೇಂದ್ರದಿಂದ ಕರ್ನಾಟಕಕ್ಕೆ ಪದೇ ಪದೇ ಅನ್ಯಾಯ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಿಡಿ

ಕೇಂದ್ರದಿಂದ ಕರ್ನಾಟಕಕ್ಕೆ ಪದೇ ಪದೇ ಅನ್ಯಾಯ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಿಡಿ

February 1, 2026
400 ಕೋಟಿ ದರೋಡೆ ಕೇಸ್‌: ದಿಢೀರ್‌ ಪೊಲೀಸರಿಗೆ ಶರಣಾದ ವ್ಯಕ್ತಿ ಯಾರು..?

400 ಕೋಟಿ ದರೋಡೆ ಕೇಸ್‌: ದಿಢೀರ್‌ ಪೊಲೀಸರಿಗೆ ಶರಣಾದ ವ್ಯಕ್ತಿ ಯಾರು..?

February 1, 2026
Next Post
ಸದ್ಯಕ್ಕೆ ರೈಲ್ವೇ ಸಂಚಾರ ಬೇಡ ಎಂದ ನಾಲ್ವರು ಮುಖ್ಯಮಂತ್ರಿಗಳು.!!

ಸದ್ಯಕ್ಕೆ ರೈಲ್ವೇ ಸಂಚಾರ ಬೇಡ ಎಂದ ನಾಲ್ವರು ಮುಖ್ಯಮಂತ್ರಿಗಳು.!!

Please login to join discussion

Recent News

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?
Top Story

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?

by ಪ್ರತಿಧ್ವನಿ
February 1, 2026
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಹಾಗೂ ಅಳಿಯನ ಬಗ್ಗೆ ಇಲ್ಲಿದೆ ಯಾರಿಗೂ ತಿಳಿಯದ ಈ ವಿಷಯ!
Top Story

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಹಾಗೂ ಅಳಿಯನ ಬಗ್ಗೆ ಇಲ್ಲಿದೆ ಯಾರಿಗೂ ತಿಳಿಯದ ಈ ವಿಷಯ!

by ಪ್ರತಿಧ್ವನಿ
February 1, 2026
ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು: ಕಾಂಗ್ರೆಸಿಗರ ಟೀಕೆಗೆ ಕುಮಾರಸ್ವಾಮಿ ಖಡಕ್‌ ಉತ್ತರ
Top Story

ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು: ಕಾಂಗ್ರೆಸಿಗರ ಟೀಕೆಗೆ ಕುಮಾರಸ್ವಾಮಿ ಖಡಕ್‌ ಉತ್ತರ

by ಪ್ರತಿಧ್ವನಿ
February 1, 2026
Vijayapura: 27 ಭೂ ಕಬಳಿಕೆ ಪ್ರಕರಣಗಳಲ್ಲಿ 200 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ
Top Story

Vijayapura: 27 ಭೂ ಕಬಳಿಕೆ ಪ್ರಕರಣಗಳಲ್ಲಿ 200 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ

by ಪ್ರತಿಧ್ವನಿ
February 1, 2026
ಕೇಂದ್ರದಿಂದ ಕರ್ನಾಟಕಕ್ಕೆ ಪದೇ ಪದೇ ಅನ್ಯಾಯ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಿಡಿ
Top Story

ಕೇಂದ್ರದಿಂದ ಕರ್ನಾಟಕಕ್ಕೆ ಪದೇ ಪದೇ ಅನ್ಯಾಯ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಿಡಿ

by ಪ್ರತಿಧ್ವನಿ
February 1, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?

February 1, 2026
ಸಾಮಾಜಿಕ ಜಾಲತಾಣದಲ್ಲಿ  ಜಮಾತೆ ಇಸ್ಲಾಮಿ ಮುಖ್ಯಸ್ಥರ ಪೋಸ್ಟ್: ಬಾಂಗ್ಲಾದೇಶದಲ್ಲಿ ಆಕ್ರೋಶ! ಆಗಿದ್ದಾದರೂ ಏನು ?

ಸಾಮಾಜಿಕ ಜಾಲತಾಣದಲ್ಲಿ  ಜಮಾತೆ ಇಸ್ಲಾಮಿ ಮುಖ್ಯಸ್ಥರ ಪೋಸ್ಟ್: ಬಾಂಗ್ಲಾದೇಶದಲ್ಲಿ ಆಕ್ರೋಶ! ಆಗಿದ್ದಾದರೂ ಏನು ?

February 1, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada