• Home
  • About Us
  • ಕರ್ನಾಟಕ
Thursday, December 18, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಬಿಜೆಪಿ ವಕ್ತಾರ ಸಂಬಿತ್ ಪಾತ್ರ ವಿರುದ್ಧ ವಿವಿಧೆಡೆ FIR

by
May 12, 2020
in ದೇಶ
0
ಬಿಜೆಪಿ ವಕ್ತಾರ ಸಂಬಿತ್ ಪಾತ್ರ ವಿರುದ್ಧ ವಿವಿಧೆಡೆ FIR
Share on WhatsAppShare on FacebookShare on Telegram

ದುರುದ್ದೇಶದ ಮಾನಹಾನಿಕರ ಸಂಗತಿ ಹಂಚಿಕೊಂಡಿದ್ದು ಮತ್ತು ಸಮುದಾಯಗಳ ನಡುವೆ ಪರಸ್ಪರ ದ್ವೇಷ ಹರಡುವ ಉದ್ದೇಶದಿಂದ ಸುಳ್ಳು ಸುದ್ದಿ ಹರಡಿದ ಆರೋಪದ ಮೇಲೆ ಬಿಜೆಪಿ ರಾಷ್ಟ್ರೀಯ ವಕ್ತಾರ ಸಂಬಿತ್ ಪಾತ್ರ ವಿರುದ್ಧ ಮಹಾರಾಷ್ಟ್ರ ಮತ್ತು ಛತ್ತೀಸಗಢದಲ್ಲಿ ಎರಡು ಪ್ರತ್ಯೇಕ ಪ್ರಕರಣ ದಾಖಲಾಗಿವೆ.

ಮಾಜಿ ಪ್ರಧಾನಿಗಳಾದ ರಾಜೀವ್ ಗಾಂಧಿ ಮತ್ತು ಜವಾಹರ್ ಲಾಲ್ ನೆಹರು ವಿರುದ್ಧ ಮಾನಹಾನಿಕರ ಟ್ವೀಟ್ ಮಾಡಿದ ಆರೋಪದ ಮೇಲೆ ಸಂಬಿತ್ ಪಾತ್ರ ವಿರುದ್ಧ ಮುಂಬೈನಲ್ಲಿ ಒಂದು ಪ್ರಕರಣ ದಾಖಲಾಗಿದೆ. ಕರೋನಾ ಮಹಾಮಾರಿ ನಿಯಂತ್ರಣದ ವಿಷಯದಲ್ಲಿ ಈಗ ಬದುಕಿಲ್ಲದ ಮಾಜಿ ಪ್ರಧಾನಿಗಳು ಮತ್ತು ಕಾಂಗ್ರೆಸ್ ಪಕ್ಷದ ವಿರುದ್ಧ ಕಪೋಲಕಲ್ಪಿತ ಮಾಹಿತಿ ಹಂಚಿಕೊಳ್ಳುವ ಮೂಲಕ ಪಕ್ಷ ಮತ್ತು ಪಕ್ಷದ ನಾಯಕರಿಗೆ ಅವಮಾನ ಮಾಡುವ ಮತ್ತು ಜನರಲ್ಲಿ ತಪ್ಪು ಕಲ್ಪನೆ ಬಿತ್ತುವ ದುರುದ್ದೇಶದಿಂದ ಅವಮಾನಕರ ಸಂಗತಿ ಟ್ವೀಟ್ ಮಾಡಿದ್ದಾರೆ ಎಂದು ಕಾಂಗ್ರೆಸ್ ದೂರು ನೀಡಿತ್ತು. ಆ ದೂರಿನ ಹಿನ್ನೆಲೆಯಲ್ಲಿ ಮುಂಬೈ ನಗರದ ಮಹಾತ್ಮ ಪುಲೆ ಚೌಕ್ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ.

आदरणीय श्री @mssirsa जी
आप ठीक कह रहें है ..ये ३००० नहीं अपितु कहीं अधिक बर्बरता हुई थी 84 के सिख नरसंहार मैं।
सोचते भी है तो दिल सिहर उठता है
मगर ये कांग्रेसी है कि सच बोलने पर मुझे arrest करना चाहते है।
राजीव गांधी को सिखों के हत्या के लिए कभी ईश्वर माफ़ नहीं करेंगे। https://t.co/Mr9LycJYnJ

— Sambit Patra (@sambitswaraj) May 11, 2020


दोस्तों
किसी को इस बात पे शक है क्या,की ३००० से अधिक सिख बंधुओ का 1984 में जो कत्लेआम हुआ था,उसके ज़िम्मेदार राजीव गांधी थे?
फिर सच तो सच है ..
कोंग्रेससीयों ने ठाना हुआ है की राजीव गांधी को पूरा expose कर के ही दम लेंगे।
So be it … let’s #ExposeRajivGandhi https://t.co/JX7W9JkSoX

— Sambit Patra (@sambitswaraj) May 11, 2020


You are right sir ..Rajiv Gandhi was indeed “Father of Mob Lynching”!! https://t.co/lQmRBrw5AR

— Sambit Patra (@sambitswaraj) May 11, 2020


ADVERTISEMENT

‘ಕಾಂಗ್ರೆಸ್ ಕಾಲದಲ್ಲಿ ಏನಾದರೂ ಕರೋನಾ ಸಂಭವಿಸಿದ್ದರೆ, ಸಾವಿರಾರು ಕೋಟಿ ರೂಪಾಯಿ ಹಗರಣಗಳು ನಡೆಯುತ್ತಿದ್ದವು’ ಎಂದು ಟ್ವೀಟ್ ಮಾಡಿರುವ ಸಂಬಿತ್, ಆ ಟ್ವೀಟ್ ನೊಂದಿಗೆ ಕಾಂಗ್ರೆಸ್ ಮಾಜಿ ಪ್ರಧಾನಿಗಳಾದ ನೆಹರು ಮತ್ತು ರಾಜೀವ್ ಗಾಂಧಿ ಅವರ ಚಿತ್ರಗಳನ್ನು ಕೂಡ ಶೇರ್ ಮಾಡಿದ್ದಾರೆ. ಇದು ಈಗ ತಮ್ಮನ್ನು ತಾವು ಸಮರ್ಥಿಸಿಕೊಳ್ಳಲು ಬದುಕಿಲ್ಲದ ನಾಯಕರು ಮತ್ತು ರಾಷ್ಟ್ರೀಯ ಪಕ್ಷವಾದ ಕಾಂಗ್ರೆಸ್ ಗೆ ಅವಮಾನ ಮಾಡುವ, ಜನರ ಮನಸ್ಸಿನಲ್ಲಿ ತಪ್ಪು ಕಲ್ಪನೆ ಬಿತ್ತುವ ದುರುದ್ದೇಶದ ಟ್ವೀಟ್ ಎಂದು ಮಹಾರಾಷ್ಟ್ರ ಯುವ ಕಾಂಗ್ರೆಸ್ ಪ್ರಧಾನಕಾರ್ಯದರ್ಶಿ ಬ್ರಿಜ್ ಕಿಶೋರ್ ದತ್ ನೀಡಿರುವ ದೂರಿನಲ್ಲಿ ಹೇಳಲಾಗಿತ್ತು. ಐಪಿಸಿ ಸೆಕ್ಷನ್ 500 ಅಡಿ ಸಂಬಿತ್ ವಿರುದ್ಧ ಪ್ರಕರಣ ದಾಖಲಾಗಿದೆ.

ಛತ್ತೀಸಗಢದಲ್ಲಿ ದಾಖಲಾಗಿರುವ ಮತ್ತೊಂದು ಪ್ರಕರಣದಲ್ಲಿ, ಇದೇ ನಾಯಕರ ವಿರುದ್ಧ ಕಾಶ್ಮೀರ ಮತ್ತು ಸಿಖ್ ಗಲಭೆ ವಿಷಯ ಪ್ರಸ್ತಾಪಿಸಿ, ದೇಶದ ವಿವಿಧ ಸಮುದಾಯಗಳ ವಿರುದ್ಧ ಪರಸ್ಪರ ದ್ವೇಷ ಬಿತ್ತುವ ಮತ್ತು ಆ ಸಮುದಾಯಗಳಲ್ಲಿ ಕಾಂಗ್ರೆಸ್ ನಾಯಕರಾದ ದಿವಂತಹ ಪ್ರಧಾನಿಗಳ ವಿರುದ್ಧ ಅಸಹನೆ ಹುಟ್ಟಿಸುವ ದುರುದ್ದೇಶದಿಂದ ಟ್ವೀಟ್ ಮಾಡಿರುವುದಾಗಿ ಸಂಬಿತ್ ಪಾತ್ರ ವಿರುದ್ಧ ಎಫ್ ಐಆರ್ ದಾಖಲಾಗಿದೆ.

ಛತ್ತೀಸಗಢ ಯುವ ಕಾಂಗ್ರೆಸ್ ಅಧ್ಯಕ್ಷ ಪೂರ್ಣಚಂದ್ ಪಧಿ ನೀಡಿದ ದೂರಿನ ಮೇಲೆ ಅಲ್ಲಿನ ರಾಯಪುರ್ ಪೊಲೀಸರು ಎಫ್ ಐಆರ್ ದಾಖಲಿಸಿದ್ದು, ಕಾಶ್ಮೀರ ವಿಷಯ, 1984ರ ಸಿಖ್ ಗಲಭೆ ಮತ್ತು ಬೋಫೋರ್ಸ್ ವಿಷಯದಲ್ಲಿ ನೆಹರು ಮತ್ತು ರಾಜೀವ್ ಗಾಂಧಿಯವರ ಹೆಸರನ್ನು ಪ್ರಸ್ತಾಪಿಸಿ ಸಾಮಾಜಿಕ ಶಾಂತಿ ಕದಡುವ, ಧಾರ್ಮಿಕ ದ್ವೇಷ ಬಿತ್ತುವ ಮತ್ತು ಸಮುದಾಯಗಳ ನಡುವೆ ಪರಸ್ಪರ ವೈಷಮ್ಯ ಬಿತ್ತುವ ಯತ್ನ ಮಾಡಿದ್ದಾರೆ ಎಂದು ಎಫ್ ಐಆರ್ ನಲ್ಲಿ ಹೇಳಲಾಗಿದೆ. ಐಪಿಸಿ ಸೆಕ್ಷನ್ 153ಎ, 505(2) ಮತ್ತು 298 ಅಡಿ ಪ್ರಕರಣ ದಾಖಲಿಸಲಾಗಿದೆ.

Tags: 1984 sikh riot1984 ಸಿಖ್‌ ದಂಗೆBJPJawaharalal NeharuRajiv Gandhisambit patraಜವಹರಲಾಲ್‌ ನೆಹರೂಬಿಜೆಪಿರಾಜೀವ್ ಗಾಂಧಿಸಂಬಿತ್‌ ಪಾತ್ರಾ
Previous Post

FIR ಬಳಿಕ ವರಸೆ ಬದಲಾಯಿಸಿದ ಝೀ ನ್ಯೂಸ್‌ನ ಸುಧೀರ್ ಚೌಧರಿ

Next Post

ರೈಲು ಪ್ರಯಾಣಿಕರಿಗೆ ʼಆರೋಗ್ಯ ಸೇತುʼ App ಕಡ್ಡಾಯ!

Related Posts

ಶಾಲಾ ಮಕ್ಕಳಿಗೆ ಭಗವದ್ಗೀತೆ ಯಾಕೆ ಬೋಧಿಸಬೇಕು..?: ಕಾರಣ ನೀಡಿದ ಕುಮಾರಸ್ವಾಮಿ
Top Story

ಶಾಲಾ ಮಕ್ಕಳಿಗೆ ಭಗವದ್ಗೀತೆ ಯಾಕೆ ಬೋಧಿಸಬೇಕು..?: ಕಾರಣ ನೀಡಿದ ಕುಮಾರಸ್ವಾಮಿ

by ಪ್ರತಿಧ್ವನಿ
December 18, 2025
0

ನವದೆಹಲಿ: ಶಾಲಾ ಹಂತದಿಂದಲೇ ಭಗವದ್ಗೀತೆಯನ್ನು( Bhagavad Gita) ಮಕ್ಕಳಿಗೆ ಬೋಧಿಸಬೇಕು. ಇದು ಅತ್ಯಂತ ಉತ್ತಮ ಶೈಕ್ಷಣಿಕ ಸುಧಾರಣಾ ಕ್ರಮವಾಗುತ್ತದೆ ಎಂದು ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು...

Read moreDetails
ದೇಶದಲ್ಲಿ ಹಣದುಬ್ಬರ ಪ್ರಮಾಣ ಇಳಿಕೆ..! ಕಾರಣವೇನು?

ದೇಶದಲ್ಲಿ ಹಣದುಬ್ಬರ ಪ್ರಮಾಣ ಇಳಿಕೆ..! ಕಾರಣವೇನು?

December 17, 2025

ರಸ್ತೆ ಅಪಘಾತ ಸಂತ್ರಸ್ತರಿಗೆ 1.5 ಲಕ್ಷದವರೆಗೆ ‘ಉಚಿತ ಚಿಕಿತ್ಸೆ’ ; ಕೇಂದ್ರದಿಂದ ಹೊಸ ಯೋಜನೆ

December 17, 2025

ಕುಂದಾಪುರ ಇಎಸ್‌ಐ ಆಸ್ಪತ್ರೆಗೆ ವೈದ್ಯರ ನೇಮಕಕ್ಕೆ ಕ್ರಮ: ಸಚಿವ ಸಂತೋಷ್‌ ಲಾಡ್‌

December 17, 2025

ದ್ವೇಷ ರಾಜಕಾರಣ ಬಿಜೆಪಿ ಆಸ್ತಿ, ಅವರ ಸುಳ್ಳು ಕೇಸ್ ಗಳಿಗೆ ಆಯುಷ್ಯವಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್..

December 17, 2025
Next Post
ರೈಲು ಪ್ರಯಾಣಿಕರಿಗೆ ʼಆರೋಗ್ಯ ಸೇತುʼ App ಕಡ್ಡಾಯ!

ರೈಲು ಪ್ರಯಾಣಿಕರಿಗೆ ʼಆರೋಗ್ಯ ಸೇತುʼ App ಕಡ್ಡಾಯ!

Please login to join discussion

Recent News

Winter Session 2025: ನನಗೆ ಜೈಲಿನಿಂದ ಯಾವ ಕರೆಗಳು ಬಂದಿಲ್ಲ-ಡಿಸಿಎಂ ಡಿ.ಕೆ ಶಿವಕುಮಾರ್‌
Top Story

Winter Session 2025: ನನಗೆ ಜೈಲಿನಿಂದ ಯಾವ ಕರೆಗಳು ಬಂದಿಲ್ಲ-ಡಿಸಿಎಂ ಡಿ.ಕೆ ಶಿವಕುಮಾರ್‌

by ಪ್ರತಿಧ್ವನಿ
December 18, 2025
ನನಗೆ ಬೆದರಿಕೆ ಹಾಕಲು ಬರಬೇಡಿ-ಡಿ.ಕೆ ಶಿವಕುಮಾರ್‌ಗೆ ವಿಜಯೇಂದ್ರ ಎಚ್ಚರಿಕೆ
Top Story

ನನಗೆ ಬೆದರಿಕೆ ಹಾಕಲು ಬರಬೇಡಿ-ಡಿ.ಕೆ ಶಿವಕುಮಾರ್‌ಗೆ ವಿಜಯೇಂದ್ರ ಎಚ್ಚರಿಕೆ

by ಪ್ರತಿಧ್ವನಿ
December 18, 2025
ಪೊಲೀಸ್ ಸಿಬ್ಬಂದಿ ಹುಟ್ಟುಹಬ್ಬ, ವಿವಾಹ ವಾರ್ಷಿಕೋತ್ಸವಕ್ಕೆ ರಜೆ ನೀಡಿ: ಡಿಜಿಪಿಗೆ ಪತ್ರ!
Top Story

ಪೊಲೀಸ್ ಸಿಬ್ಬಂದಿ ಹುಟ್ಟುಹಬ್ಬ, ವಿವಾಹ ವಾರ್ಷಿಕೋತ್ಸವಕ್ಕೆ ರಜೆ ನೀಡಿ: ಡಿಜಿಪಿಗೆ ಪತ್ರ!

by ಪ್ರತಿಧ್ವನಿ
December 18, 2025
Winter Session 2025: ತೀವ್ರ ವಿರೋಧದ ನಡುವೆಯೂ ದ್ವೇಷ ಭಾಷಣ ತಡೆ ವಿಧೇಯಕ ಅಂಗೀಕಾರ
Top Story

Winter Session 2025: ತೀವ್ರ ವಿರೋಧದ ನಡುವೆಯೂ ದ್ವೇಷ ಭಾಷಣ ತಡೆ ವಿಧೇಯಕ ಅಂಗೀಕಾರ

by ಪ್ರತಿಧ್ವನಿ
December 18, 2025
ಕಂದಾಯ ಸಚಿವರ ಅಕ್ರಮಕ್ಕೆ ಕಾನೂನಿನಲ್ಲಿ ಅವಕಾಶ ಇದೆಯೇ?: ಬಿ.ವೈ ವಿಜಯೇಂದ್ರ
Top Story

ಕಂದಾಯ ಸಚಿವರ ಅಕ್ರಮಕ್ಕೆ ಕಾನೂನಿನಲ್ಲಿ ಅವಕಾಶ ಇದೆಯೇ?: ಬಿ.ವೈ ವಿಜಯೇಂದ್ರ

by ಪ್ರತಿಧ್ವನಿ
December 18, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Winter Session 2025: ನನಗೆ ಜೈಲಿನಿಂದ ಯಾವ ಕರೆಗಳು ಬಂದಿಲ್ಲ-ಡಿಸಿಎಂ ಡಿ.ಕೆ ಶಿವಕುಮಾರ್‌

Winter Session 2025: ನನಗೆ ಜೈಲಿನಿಂದ ಯಾವ ಕರೆಗಳು ಬಂದಿಲ್ಲ-ಡಿಸಿಎಂ ಡಿ.ಕೆ ಶಿವಕುಮಾರ್‌

December 18, 2025
ನನಗೆ ಬೆದರಿಕೆ ಹಾಕಲು ಬರಬೇಡಿ-ಡಿ.ಕೆ ಶಿವಕುಮಾರ್‌ಗೆ ವಿಜಯೇಂದ್ರ ಎಚ್ಚರಿಕೆ

ನನಗೆ ಬೆದರಿಕೆ ಹಾಕಲು ಬರಬೇಡಿ-ಡಿ.ಕೆ ಶಿವಕುಮಾರ್‌ಗೆ ವಿಜಯೇಂದ್ರ ಎಚ್ಚರಿಕೆ

December 18, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada