• Home
  • About Us
  • ಕರ್ನಾಟಕ
Friday, June 20, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ರಾಜಕೀಯ

2021 ಪಶ್ಚಿಮ ಬಂಗಾಳ ಚುನಾವಣೆ: ಬಿಜೆಪಿ ಪಾಲಿಗೆ ಸೆಮಿಫೈನಲ್?

by
June 22, 2020
in ರಾಜಕೀಯ
0
2021 ಪಶ್ಚಿಮ ಬಂಗಾಳ ಚುನಾವಣೆ: ಬಿಜೆಪಿ ಪಾಲಿಗೆ ಸೆಮಿಫೈನಲ್?
Share on WhatsAppShare on FacebookShare on Telegram

ಮುಂದಿನ ವರ್ಷ ಏಪ್ರಿಲ್‌-ಮೇ ತಿಂಗಳಲ್ಲಿ ನಡೆಯುವಂತಹ ಪಶ್ಚಿನ ಬಂಗಾಳ ಚುನಾವಣೆ ಬಿಜೆಪಿಗೆ ನಿಜಕ್ಕೂ ಪ್ರತಿಷ್ಠೆಯ ಪ್ರಶ್ನೆ. ನರೇಂದ್ರ ಮೋದಿ ನೇತೃತ್ವದ ಕೇಂದ್ರ ಎರಡನೇ ಅವಧಿಗೆ ಅಧಿಕಾರಕ್ಕೇರಿದ ನಂತರ ಎದುರಾಗುವ ಹೈ ವೋಲ್ಟೇಜ್‌ ಚುನಾವಣೆ ಇದಾಗಿದೆ.

ADVERTISEMENT

ಬಿಜೆಪಿ 2014ರಲ್ಲಿ ಅಧಿಕಾರಕ್ಕೇರಬೇಕಾದರೆ ಅದು ಮೊತ್ತಮೊದಲು ಗೆಲ್ಲಬೇಕಾಗಿದ್ದು ಉತ್ತರಪ್ರದೇಶದ ಜನರ ಜನಮಾನಸವನ್ನು. ಅಲ್ಲಿನ ಜನರು ಬಿಜೆಪಿಗೆ ಸಾಥ್‌ ನೀಡಿದರೆ ಉಳಿದೆಲ್ಲವೂ ಸಾಧ್ಯ ಎನ್ನುವಂತೆ, ರಾಮ ಮಂದಿರ, ಹಿಂದುತ್ವವೆಂಬ ಅಸ್ತ್ರದಿಂದ ಉತ್ತರ ಪ್ರದೇಶದ ಅತೀ ಹೆಚ್ಚು ಸೀಟುಗಳನ್ನು ಕಬಳಿಸಿತು. ಈಗ, ಅದೇ ರೀತಿ ಪ್ರತಿಷ್ಠೆಯಿಂದ ಗೆಲ್ಲಲು ಹೊರಟಿರುವ ಇನ್ನೊಂದು ರಾಜ್ಯ ಪಶ್ಚಿಮ ಬಂಗಾಳ. ಎಲ್ಲಾ ಕಡೆಯಿಂದ ಸುತ್ತಿ ಬಳಸಿ ಕೊನೆಗೆ ಪಶ್ಚಿನ ಬಂಗಾಳವನ್ನು ಇನ್ನೊಂದು ಉತ್ತರ ಪ್ರದೇಶದಂತೆ ನೋಡುತ್ತಿದೆ ಭಾರತೀಯ ಜನತಾ ಪಕ್ಷ.

ಭಾರೀ ಚರ್ಚೆಗೆ ಮತ್ತು ಪರ ವಿರೋಧ ಚರ್ಚೆಗಳಿಗೆ ಕಾರಣವಾಗಿದ್ದ ಎನ್‌ಆರ್‌ಸಿಯ ಅನುಷ್ಟಾನದ ಮೂಲ ಗುರಿ ಪಶ್ಚಿಮ ಬಂಗಾಳ. ಅಲ್ಲಿನ ಮುಸ್ಲಿಮರನ್ನು ಬಾಂಗ್ಲಾದೇಶಿಗಳೆಂದು ನಿರೂಪಿಸಲು ಸಂಪೂರ್ಣ ದೇಶವನ್ನೇ ಅಸಹನೆಯ ತುತ್ತ ತುದಿಯಲ್ಲಿ ನಿಲ್ಲಿಸಿದ್ದರು, ಚಾಣಕ್ಯ ಅಮಿತ್‌ ಶಾ ಹಾಗೂ ನರೇಂದ್ರ ಮೋದಿ. ಗಡಿ ರಾಜ್ಯಗಳಲ್ಲಿ ಎನ್‌ಆರ್‌ಸಿಯನ್ನು ಮಾಡುತ್ತೇವೆಂದು ರಾಷ್ಟ್ರಪತಿ ರಾಮನಾಥ ಕೋವಿಂದ್‌ ಅವರು ಮೋದಿಯವರ ಎರಡನೇ ಅವಧಿಯ ಮೊದಲ ಸಂಸತ್‌ ಅಧಿವೇಷನದಲ್ಲಿ ಹೇಳಿದ್ದು, ಈ ವಾದಕ್ಕೆ ಪುಷ್ಟಿ ನೀಡುತ್ತದೆ.

ಯಾಕೆ ಪಶ್ಚಿಮ ಬಂಗಾಳ ಚುನಾವಣೆ ಅತೀ ಮುಖ್ಯ?

ಪ.ಬಂ.ದಲ್ಲಿನ 27% ಜನರು ಮುಸ್ಲಿಮರು ಮತ್ತು ಪೂರ್ವ ಭಾರತದಲ್ಲಿನ ಹಿಂದಿಯೇತರ ರಾಜ್ಯಗಳಲ್ಲಿ ಅತೀ ಪ್ರಮುಖವಾದುದು ಮತ್ತು ಅತೀ ದೊಡ್ಡ ಮೆಟ್ರೊಪಾಲಿಟನ್‌ ನಗರ ಹೊಂದಿರುವ ರಾಜ್ಯ. ಇಂತಹ ರಾಜ್ಯ ತಮ್ಮ ಸುಪರ್ದಿಯಲ್ಲಿದೆ ಎಂದರೆ ಯಾರಿಗೆ ತಾನೇ ಜಂಭ ಇರಲ್ಲ ಹೇಳಿ. ತನ್ನ ಸುತ್ತಮುತ್ತಲಿನ ಸಣ್ಣ ರಾಜ್ಯಗಳ ಮೇಲೆ ಪ್ರಭಾವ ಬೀರುವ ಎಲ್ಲಾ ಅರ್ಹತೆಯನ್ನು ಪ.ಬಂ. ರಾಜಕಾರಣ ಹೊಂದಿದೆ.

ಈವರೆಗೆ ಪ.ಬಂ.ದಲ್ಲಿ ತಮ್ಮ ವಿಜಯ ಪತಾಕೆ ಹಾರಿಸಲು ಸಾಧ್ಯವಾಗದೇ ಇರುವ ಬಿಜೆಪಿ, ಒಂದು ವೇಳೆ 2021ರಲ್ಲಿ ಗೆದ್ದು ಬೀಗಿದರೆ, ನಂತರ ಬಿಜೆಪಿಯ ಅಶ್ವಮೇಧ ಯಾಗದ ಕುದುರೆ 2024ರ ಲೋಕಸಭಾ ಚುನಾವಣೆಯನ್ನೂ ಧೂಳೀಪಟ ಮಾಡಿಬಿಡುತ್ತದೆ ಎಂಬುದು ಚುನಾವಣಾ ವಿಶ್ಲೇಷಕರ ಅಭಿಮತ.

ಹೊಸ ಸೆಮಿಫೈನಲ್‌?

ಸಾಮಾನ್ಯವಾಗಿ ಉತ್ತರ ಪ್ರದೇಶ ಚುನಾವಣೆಯು ಲೋಕಸಭಾ ಅವಧಿಯ ಮಧ್ಯಂತರದಲ್ಲಿ ಬರುತ್ತದೆ. ಹಾಗಾಗಿ ಅದನ್ನು ಸೆಮಿಫೈನಲ್‌ ಮ್ಯಾಚ್‌ ಎಂದು ಸಂಭೋದಿಸುವುದು ಇದೆ. ಆದರೆ, ಈಗ ಪಶ್ಚಿಮ ಬಂಗಾಳ ಚುನಾವಣೆಯನ್ನು ಪ್ರತಿಷ್ಠೆಯ ಕಣವೆಂದು ಬಿಜೆಪಿಯು ತೆಗೆದುಕೊಂಡಿರುವುದರಿಂದ ಇದೇ ಚುನಾವಣೆ ಬಿಜೆಪಿಗೆ ಸೆಮಿಫೈನಲ್‌ ಆಗಲಿದೆಯೇ ಎಂದು ಅನಿಸುತ್ತಿದೆ.

ಇಷ್ಟವರೆಗೆ, ಉತ್ತರ ಪ್ರದೇಶದ ಚುನಾವಣೆಯ ಫಲಿತಾಂಶ ಕೇಂದ್ರ ಸರ್ಕಾರದ ಸಾಧನೆ ವೈಫಲ್ಯಗಳನ್ನು ಎತ್ತಿಹಿಡಿಯುತ್ತಿದ್ದವು. ಈ ಬಾರಿ ಪಶ್ಚಿಮ ಬಂಗಾಳ ಚುನಾವಣೆ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ನಿರಂಕುಶ ನಿರ್ಧಾರಗಳು ಜನಪರವೇ ಜನ ವಿರೋಧಿಯೇ ಎಂದು ಸಾಬೀತು ಮಾಡಲಿದೆ.

ಕಳೆದ ಬಾರಿ ಉತ್ತರ ಪ್ರದೇಶದಲ್ಲಿ ವಿಜಯ ಪತಾಕೆ ಹಾರಿಸಿದ ಬಿಜೆಪಿಗೆ, ಇನ್ನೆಲ್ಲೂ ಅಡೆತಡೆಗಳು ಇಲ್ಲ ಎಂಬುದು ಸ್ಪಷ್ಟವಾಗಿತ್ತು. ಆ ನಂತರ ನಡೆದ ಬಾಲಾಕೋಟ್‌ ವಾಯು ದಾಳಿಯಂತು ಭಾರತದಲ್ಲಿ ಸಾರ್ವತ್ರಿಕ ಚುನಾವಣೆಯ ಅವಶ್ಯಕತೆಯೇ ಇಲ್ಲದೆ ಬಿಜೆಪಿ ಗೆಲ್ಲಲಿದೆ ಎಂಬುದನ್ನು ಸಾಬೀತು ಮಾಡಿತು.

ಉತ್ತರ ಪ್ರದೇಶದ ಗೆಲುವು ಬಿಜೆಪಿಯಲ್ಲಿ ಸ್ಥೈರ್ಯವನ್ನು ತುಂಬುವುದಕ್ಕಿಂತ ವಿರೋಧ ಪಕ್ಷಗಳಲ್ಲಿನ ಆತ್ಮಸ್ಥೈರ್ಯವನ್ನು ಉಡುಗಿಸುವ ಕೆಲಸ ಮಾಡಿತ್ತು. ಒಂದು ವೇಳೆ ಪಶ್ಚಿಮ ಬಂಗಾಳದ ಚುನಾವಣೆಯಲ್ಲಿ ಬಿಜೆಪಿಯು ಜಯಭೇರಿಯನ್ನು ಸಾಧಿಸಿದರೆ, ಮತ್ತೆ ವಿರೋಧ ಪಕ್ಷಗಳು ತಮ್ಮ ಕಾರ್ಯಕರ್ತರಲ್ಲಿ ಹುಮ್ಮಸ್ಸು ತುಂಬುವ ಕಾರ್ಯ ಮಾಡಬೇಕಾಗಿ ಬರಬಹುದು. ಇಲ್ಲವಾದರೆ, ಮುಂಬರುವ ದಿನಗಳಲ್ಲಿನ ಚುನಾವಣೆಗಳು ಸಲೀಸಾಗಿ ಬಿಜೆಪಿಯ ತೆಕ್ಕೆಗೆ ಬೀಳುವುದರಲ್ಲಿ ಅನುಮಾನವಿಲ್ಲ.

Tags: BJPWest Bengal Election 2021ಪಶ್ಚಿಮ ಬಂಗಾಳ ಚುನಾವಣೆಬಿಜೆಪಿ
Previous Post

ಪ್ರಧಾನಿ ಮೋದಿ ವಿರುದ್ಧ ರಾಹುಲ್ ಗಾಂಧಿ ಟೀಕೆ ಸರಿಯೋ? ತಪ್ಪೋ?

Next Post

ಪದ ಬಳಕೆಯ ಪರಿಣಾಮದ ಕುರಿತು ಪ್ರಧಾನಿ ಎಚ್ಚರವಾಗಿರಬೇಕು- ಮನಮೋಹನ್‌ ಸಿಂಗ್

Related Posts

ಅಮಿತ್ ಶಾ ಅವರೇ ನನ್ನ ನಾಯಕ – ಏನೇ ಸಮಸ್ಯೆಯಿದ್ರೂ ನನ್ನ ಬೆನ್ನಿಗೆ ಅಮಿತ್ ಶಾ ನಿಲ್ತಾರೆ – ಹೆಚ್.ಡಿ.ಕೆ ಅಚ್ಚರಿ ಹೇಳಿಕೆ 
Top Story

ಅಮಿತ್ ಶಾ ಅವರೇ ನನ್ನ ನಾಯಕ – ಏನೇ ಸಮಸ್ಯೆಯಿದ್ರೂ ನನ್ನ ಬೆನ್ನಿಗೆ ಅಮಿತ್ ಶಾ ನಿಲ್ತಾರೆ – ಹೆಚ್.ಡಿ.ಕೆ ಅಚ್ಚರಿ ಹೇಳಿಕೆ 

by Chetan
June 20, 2025
0

ಇಂದು ನೆಲಮಂಗಲದ (Nelamangala) ಬಳಿಯಿರೋ ನಗರೂರಿನಲ್ಲಿ ಸಿದ್ಧಗೊಂಡಿರುವ ಬೃಹತ್ ವೇದಿಕೆ ಕಾರ್ಯಕ್ರಮದಲ್ಲಿ‌ ಕೇಂದ್ರ ಗೃಹ ಸಚಿವ ಅಮಿತ್ ಶಾ (Amit shah) ಭಾಗಿಯಾಗಿದ್ದಾರೆ. ನಗರೂರಿನಲ್ಲಿ ಆರಂಭಿಸಿರುವ ಬಿಜಿಎಸ್ ಎಂಸಿಎಚ್...

Read moreDetails

ಆದಿಚುಂಚನಗಿರಿ ವಿಶ್ವವಿದ್ಯಾಲಯದ ಬೆಂಗಳೂರು ಕ್ಯಾಂಪಸ್ ಉದ್ಘಾಟನಾ ಸಮಾರಂಭ

June 20, 2025
ಸರ್ಕಾರದ ವಿರುದ್ಧವೇ ತಿರುಗಿಬಿದ್ದ ಕಾಂಗ್ರೆಸ್ ಶಾಸಕ – ವಸತಿ ಯೋಜನೆ ಗೋಲ್ಮಾಲ್ ಬಗ್ಗೆ ಬಿ.ಆರ್ ಪಾಟೀಲ್ ಆಡಿಯೋ ವೈರಲ್ ! 

ಸರ್ಕಾರದ ವಿರುದ್ಧವೇ ತಿರುಗಿಬಿದ್ದ ಕಾಂಗ್ರೆಸ್ ಶಾಸಕ – ವಸತಿ ಯೋಜನೆ ಗೋಲ್ಮಾಲ್ ಬಗ್ಗೆ ಬಿ.ಆರ್ ಪಾಟೀಲ್ ಆಡಿಯೋ ವೈರಲ್ ! 

June 20, 2025
ಡಿಕೆಶಿ ಬಳಿ ಬಟ್ಟೆ ಕೊಡಿಸಿಕೊಳ್ಳುವ ದಾರಿದ್ರ್ಯ ನಂಗಿಲ್ಲ – ಅವನ ಕೊಳ್ಳೆ ಹೊಡೆದ ದುಡ್ಡು ಯಾರಿಗೆ ಬೇಕು..? : ಹೆಚ್.ಡಿ.ಕೆ 

ಡಿಕೆಶಿ ಬಳಿ ಬಟ್ಟೆ ಕೊಡಿಸಿಕೊಳ್ಳುವ ದಾರಿದ್ರ್ಯ ನಂಗಿಲ್ಲ – ಅವನ ಕೊಳ್ಳೆ ಹೊಡೆದ ದುಡ್ಡು ಯಾರಿಗೆ ಬೇಕು..? : ಹೆಚ್.ಡಿ.ಕೆ 

June 20, 2025

ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ನೇರಪ್ರಸಾರ

June 20, 2025
Next Post
ಪದ ಬಳಕೆಯ ಪರಿಣಾಮದ ಕುರಿತು ಪ್ರಧಾನಿ ಎಚ್ಚರವಾಗಿರಬೇಕು- ಮನಮೋಹನ್‌ ಸಿಂಗ್

ಪದ ಬಳಕೆಯ ಪರಿಣಾಮದ ಕುರಿತು ಪ್ರಧಾನಿ ಎಚ್ಚರವಾಗಿರಬೇಕು- ಮನಮೋಹನ್‌ ಸಿಂಗ್

Please login to join discussion

Recent News

ಕೊತ್ತಲವಾಡಿ ರಿಲೀಸ್ ಡೇಟ್ ಫಿಕ್ಸ್… ಆಗಸ್ಟ್ 1ಕ್ಕೆ ಯಶ್‌ ತಾಯಿ ಬಂಡವಾಳ ಹೂಡಿರುವ ಸಿನಿಮಾ ರಿಲೀಸ್
Top Story

ಕೊತ್ತಲವಾಡಿ ರಿಲೀಸ್ ಡೇಟ್ ಫಿಕ್ಸ್… ಆಗಸ್ಟ್ 1ಕ್ಕೆ ಯಶ್‌ ತಾಯಿ ಬಂಡವಾಳ ಹೂಡಿರುವ ಸಿನಿಮಾ ರಿಲೀಸ್

by ಪ್ರತಿಧ್ವನಿ
June 20, 2025
ಅಮಿತ್ ಶಾ ಅವರೇ ನನ್ನ ನಾಯಕ – ಏನೇ ಸಮಸ್ಯೆಯಿದ್ರೂ ನನ್ನ ಬೆನ್ನಿಗೆ ಅಮಿತ್ ಶಾ ನಿಲ್ತಾರೆ – ಹೆಚ್.ಡಿ.ಕೆ ಅಚ್ಚರಿ ಹೇಳಿಕೆ 
Top Story

ಅಮಿತ್ ಶಾ ಅವರೇ ನನ್ನ ನಾಯಕ – ಏನೇ ಸಮಸ್ಯೆಯಿದ್ರೂ ನನ್ನ ಬೆನ್ನಿಗೆ ಅಮಿತ್ ಶಾ ನಿಲ್ತಾರೆ – ಹೆಚ್.ಡಿ.ಕೆ ಅಚ್ಚರಿ ಹೇಳಿಕೆ 

by Chetan
June 20, 2025
Top Story

ಆದಿಚುಂಚನಗಿರಿ ವಿಶ್ವವಿದ್ಯಾಲಯದ ಬೆಂಗಳೂರು ಕ್ಯಾಂಪಸ್ ಉದ್ಘಾಟನಾ ಸಮಾರಂಭ

by ಪ್ರತಿಧ್ವನಿ
June 20, 2025
ಸರ್ಕಾರದ ವಿರುದ್ಧವೇ ತಿರುಗಿಬಿದ್ದ ಕಾಂಗ್ರೆಸ್ ಶಾಸಕ – ವಸತಿ ಯೋಜನೆ ಗೋಲ್ಮಾಲ್ ಬಗ್ಗೆ ಬಿ.ಆರ್ ಪಾಟೀಲ್ ಆಡಿಯೋ ವೈರಲ್ ! 
Top Story

ಸರ್ಕಾರದ ವಿರುದ್ಧವೇ ತಿರುಗಿಬಿದ್ದ ಕಾಂಗ್ರೆಸ್ ಶಾಸಕ – ವಸತಿ ಯೋಜನೆ ಗೋಲ್ಮಾಲ್ ಬಗ್ಗೆ ಬಿ.ಆರ್ ಪಾಟೀಲ್ ಆಡಿಯೋ ವೈರಲ್ ! 

by Chetan
June 20, 2025
ಡಿಕೆಶಿ ಬಳಿ ಬಟ್ಟೆ ಕೊಡಿಸಿಕೊಳ್ಳುವ ದಾರಿದ್ರ್ಯ ನಂಗಿಲ್ಲ – ಅವನ ಕೊಳ್ಳೆ ಹೊಡೆದ ದುಡ್ಡು ಯಾರಿಗೆ ಬೇಕು..? : ಹೆಚ್.ಡಿ.ಕೆ 
Top Story

ಡಿಕೆಶಿ ಬಳಿ ಬಟ್ಟೆ ಕೊಡಿಸಿಕೊಳ್ಳುವ ದಾರಿದ್ರ್ಯ ನಂಗಿಲ್ಲ – ಅವನ ಕೊಳ್ಳೆ ಹೊಡೆದ ದುಡ್ಡು ಯಾರಿಗೆ ಬೇಕು..? : ಹೆಚ್.ಡಿ.ಕೆ 

by Chetan
June 20, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಕೊತ್ತಲವಾಡಿ ರಿಲೀಸ್ ಡೇಟ್ ಫಿಕ್ಸ್… ಆಗಸ್ಟ್ 1ಕ್ಕೆ ಯಶ್‌ ತಾಯಿ ಬಂಡವಾಳ ಹೂಡಿರುವ ಸಿನಿಮಾ ರಿಲೀಸ್

ಕೊತ್ತಲವಾಡಿ ರಿಲೀಸ್ ಡೇಟ್ ಫಿಕ್ಸ್… ಆಗಸ್ಟ್ 1ಕ್ಕೆ ಯಶ್‌ ತಾಯಿ ಬಂಡವಾಳ ಹೂಡಿರುವ ಸಿನಿಮಾ ರಿಲೀಸ್

June 20, 2025
ಯುವ ‘ಎಕ್ಕ’ ಪ್ರಚಾರಕ್ಕೆ ಕಿಕ್ ಸ್ಟಾರ್ಟ್…ಜುಲೈ 18ಕ್ಕೆ ಚಿತ್ರ ರಿಲೀಸ್

ಯುವ ‘ಎಕ್ಕ’ ಪ್ರಚಾರಕ್ಕೆ ಕಿಕ್ ಸ್ಟಾರ್ಟ್…ಜುಲೈ 18ಕ್ಕೆ ಚಿತ್ರ ರಿಲೀಸ್

June 20, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada