• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 21, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಜನರಿಗೆ ಕರೋನಾ ಅಂಟಿಸಿರುವುದು ಸರ್ಕಾರ, ಸರ್ಕಾರವೇ ಜನರ ಜವಾಬ್ದಾರಿ ವಹಿಸಬೇಕು- ಡಿಕೆಶಿ

by
July 14, 2020
in ಕರ್ನಾಟಕ
0
ಜನರಿಗೆ ಕರೋನಾ ಅಂಟಿಸಿರುವುದು ಸರ್ಕಾರ
Share on WhatsAppShare on FacebookShare on Telegram

ಕರ್ನಾಟಕದಲ್ಲಿ ಕರೋನಾ ಸೋಂಕು ಹರಡುವಿಕೆ ತಡೆಗಟ್ಟಲು ವಿಫಲವಾಗಿರುವ ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌, ಮಂತ್ರಿ, ಮುಖ್ಯಮಂತ್ರಿಗಳು ಆಸ್ಪತ್ರೆಗೆ ತೆರಳಿ ವ್ಯವಸ್ಥೆಯನ್ನು ಖುದ್ದು ಗಮನಿಸಬೇಕು. ರೋಗಿಗಳ ಜೊತೆಗೆ ಮಾತನಾಡಿ, ಅವರ ಸಮಸ್ಯೆ ಆಲಿಸಬೇಕು. ಅವರ ಜೊತೆಗೆ ಸರ್ಕಾರವಿದೆ ಎಂಬ ಧೈರ್ಯವನ್ನು ಜನರಿಗೆ ನೀಡಬೇಕು ಎಂದು ಪತ್ರಿಕಾ ಗೋಷ್ಟಿಯಲ್ಲಿ ಹೇಳಿದ್ದಾರೆ.

ADVERTISEMENT

ವೈದ್ಯರನ್ನು, ನರ್ಸುಗಳನ್ನು ಸೇರಿದಂತೆ ಆರೋಗ್ಯ ಕಾರ್ಯಕರ್ತರನ್ನು ಸರಿಯಾಗಿ ಗಮನಿಸುತ್ತಿಲ್ಲ. ಜೀವದ ಹಂಗು ತೊರೆದು ಸೇವೆ ಸಲ್ಲಿಸುತ್ತಿರುವ ಆರೋಗ್ಯ ಕಾರ್ಯಕರ್ತರಿಗೆ ಆತ್ಮ ಸ್ಥೈರ್ಯ ತುಂಬುವ ಕೆಲಸ ಮಾಡಬೇಕು. ಆರೋಗ್ಯ ಕಾರ್ಯಕರ್ತರ ಕಾಳಜಿಯೇ ವಹಿಸದ ಸರ್ಕಾರ ವೈದ್ಯಕೀಯ ಉಪರಣಗಳಲ್ಲಿ ದುಡ್ಡು ಮಾಡುವಲ್ಲಿ ನಿರತವಾಗಿದೆ ಎಂದು ವೈದ್ಯಕೀಯ ಉಪಕರಣದ ಹಗರಣದ ಕುರಿತು ಟೀಕೆ ಮಾಡಿದ್ದಾರೆ.

ಕರೋನಾದಿಂದಾಗಿ ಮೃತಪಟ್ಟವರಿಗೆ ಸರಿಯಾದ ಅಂತ್ಯಕ್ರಿಯೆ ನಡೆಸುತ್ತಿಲ್ಲ. ಮೃತದೇಹಗಳಿಗೆ ಕನಿಷ್ಟ ಗೌರವ ನೀಡುವುದನ್ನು ಕಲಿಯಿರಿ. ಮೃತದೇಹಗಳಿಗೆ ಗೌರವ ಕೊಡದೆ ಇರುವುದು ಭಾರತದ ಸಂಸ್ಕೃತಿಯಲ್ಲ. ಮೃತಪಟ್ಟವರ ಸಂಪ್ರದಾಯದಂತೆ ಅವರ ಅಂತಿಮ ವಿಧಿ ವಿಧಾನ ನೆರವೇರಿಸಬೇಕೆಂದು ಸರ್ಕಾರವನ್ನು ಕೇಳಿಕೊಂಡಿದ್ದಾರೆ.

ಕೋವಿಡ್‌ ಚಿಕಿತ್ಸೆಗೆಂದು ಸರ್ಕಾರಿ, ಖಾಸಗಿ ಆಸ್ಪತ್ರೆಗಳಿಗೆ ದರ ನಿಗದಿಪಡಿಸಬೇಡಿ. ಕೋವಿಡ್‌ ರೋಗಿಗಳಿಗೆ ಚಿಕಿತ್ಸೆಗಳನ್ನು ಉಚಿತವಾಗಿ ನೀಡಿ, ಕರೋನಾ ಸೋಂಕಿತರಿಗೆ ಇನ್ಸುರೆನ್ಸ್‌ ಮಾಡಿಸಬೇಕು. ಜನರು ಯಾವ ತಪ್ಪನ್ನೂ ಮಾಡಿಲ್ಲ, ಎಲ್ಲೋ ಇದ್ದ ಕರೋನಾವನ್ನು ತಂದು ಜನರಿಗೆ ಅಂಟಿಸಿರುವುದು ಸರ್ಕಾರ, ಸರ್ಕಾರವೇ ಜನರ ಆರೋಗ್ಯದ ಕಾಳಜಿ ವಹಿಸಬೇಕು, ಜನರ ಜವಾಬ್ದಾರಿಯನ್ನು ಮುಖ್ಯಮಂತ್ರಿ- ಸರ್ಕಾರವೇ ಹೊರಬೇಕೆಂದು ರಾಜ್ಯ ಕಾಂಗ್ರೆಸ್‌ ಅಧ್ಯಕ್ಷ ಡಿಕೆ ಶಿವಕುಮಾರ್‌ ಆಗ್ರಹಿಸಿದ್ದಾರೆ.

ಬೆಂಗಳೂರಲ್ಲಿ ವಿಪರೀತವಾಗಿ ಕರೋನಾ ಪ್ರಕರಣ ಕಂಡುಬರುತ್ತಿರುವ ಹಿನ್ನಲೆಯಲ್ಲಿ ಜನರು ಊರು ಬಿಡುತ್ತಿದ್ದಾರೆ. ಜನರು ಸರ್ಕಾರದ ಮೇಲಿನ ನಂಬಿಕೆ ಕಳೆದುಕೊಂಡಿದ್ದಾರೆ. ಹಾಗಾಗಿ ನಗರ ತೊರೆಯುತ್ತಿದ್ದಾರೆ. ಹೀಗಾದರೆ ಬೆಂಗಳೂರು ನಗರ ಕಟ್ಟುವವರು ಯಾರು? ಬೆಂಗಳೂರು ಏನಾಗಬೇಕು ಎಂದು ಕೇಳಿದ್ದಾರೆ.

ಇನ್ನು ಕೇಂದ್ರ ಘೋಷಣೆ ಮಾಡಿರುವ 20 ಲಕ್ಷ ಕೋಟಿ ಪ್ಯಾಕೇಜ್‌ ಕುರಿತು ಲೆಕ್ಕ ಕೇಳಿದ ಡಿಕೆಶಿ, ಘೋಷಿಸಿದ ಹಣವನ್ನು ಎಲ್ಲಿ ಖರ್ಚು ಮಾಡಿದ್ದೀರಿ, ಪ್ಯಾಕೇಜಿನಿಂದ ಕರ್ನಾಟಕಕ್ಕೆ ಏನು ತಲುಪಿದೆ. ಖರ್ಚು ಮಾಡಿರುವ ಕುರಿತು ಲೆಕ್ಕ ಕೊಡಿ ನಾವು ನೋಡುತ್ತೇವೆ ಎಂದು ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ.

Tags: ಕರ್ನಾಟಕಕಾಂಗ್ರೆಸ್ಡಿಕೆ ಶಿವಕುಮಾರ್‌
Previous Post

ಪುಣೆ ಜೈಲಿನಲ್ಲಿ ವರವರರಾವ್ ಪ್ರಾಣಕ್ಕೆ ಅಪಾಯವಿದೆಯೇ?

Next Post

ಕೋವಿಡ್ ಚಿಕಿತ್ಸೆ ನಿರಾಕರಣೆ- ಎರಡು ಖಾಸಗಿ ಆಸ್ಪತ್ರೆಗಳ ಸೇವೆಯನ್ನು ಮುಚ್ಚಿಸಿದ ಆರೋಗ್ಯಾಧಿಕಾರಿ

Related Posts

“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”
Top Story

“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

by ಪ್ರತಿಧ್ವನಿ
April 21, 2026
0

 ಬೆಂಗಳೂರು : ದಾವಣಗೆರೆ ಉಪಚುನಾವಣೆಯ ಬಳಿಕ ರಾಜ್ಯ ಕಾಂಗ್ರೆಸ್‌ ಪಾಳಯದಲ್ಲಿ ಎಲ್ಲವೂ ಸರಿಯಿಲ್ಲ ಎಂಬ ಸ್ಥಿತಿ ನಿರ್ಮಾಣವಾಗಿದೆ. ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸ್ಥಾನಕ್ಕೆ ಅಬ್ದುಲ್‌ ಜಬ್ಬಾರ್‌ ರಾಜೀನಾಮೆಯಿಂದ ಆರಂಭವಾದ...

Read moreDetails
ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿದ ಹೈಕೋರ್ಟ್‌ : SSLC ಹಿಂದಿ ಗ್ರೇಡ್‌ ವಿವಾದಕ್ಕೆ ನ್ಯಾಯಾಲಯ ಹೇಳಿದ್ದೇನು..?

ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿದ ಹೈಕೋರ್ಟ್‌ : SSLC ಹಿಂದಿ ಗ್ರೇಡ್‌ ವಿವಾದಕ್ಕೆ ನ್ಯಾಯಾಲಯ ಹೇಳಿದ್ದೇನು..?

April 21, 2026
ತಮಿಳುನಾಡಿಗೆ ಡಿಎಂಕೆ ಮೈತ್ರಿಕೂಟದಿಂದಲೇ ಭವಿಷ್ಯ: ಡಿಸಿಎಂ ಡಿ.ಕೆ. ಶಿವಕುಮಾರ್‌

ತಮಿಳುನಾಡಿಗೆ ಡಿಎಂಕೆ ಮೈತ್ರಿಕೂಟದಿಂದಲೇ ಭವಿಷ್ಯ: ಡಿಸಿಎಂ ಡಿ.ಕೆ. ಶಿವಕುಮಾರ್‌

April 21, 2026
ಕುಮಾರಸ್ವಾಮಿ ದೊಡ್ಡ ವ್ಯಕ್ತಿ ಇರಬಹುದು, ಆದ್ರೆ ನನಗೂ ಸಣ್ಣ ಅನುಭವವಿದೆ : ಹೆಚ್‌ಡಿಕೆಗೆ ಡಿಕೆಶಿ ಡಿಚ್ಚಿ..

ಕುಮಾರಸ್ವಾಮಿ ದೊಡ್ಡ ವ್ಯಕ್ತಿ ಇರಬಹುದು, ಆದ್ರೆ ನನಗೂ ಸಣ್ಣ ಅನುಭವವಿದೆ : ಹೆಚ್‌ಡಿಕೆಗೆ ಡಿಕೆಶಿ ಡಿಚ್ಚಿ..

April 21, 2026
ದೇವೇಗೌಡರಿಗೆ ಸಿದ್ದರಾಮಯ್ಯ ಭರ್ಜರಿ ಗಿಫ್ಟ್..!‌: ಗುರುವಿಗೆ ಶಿಷ್ಯನ ಕೊಡುಗೆ ಏನು..?

ದೇವೇಗೌಡರಿಗೆ ಸಿದ್ದರಾಮಯ್ಯ ಭರ್ಜರಿ ಗಿಫ್ಟ್..!‌: ಗುರುವಿಗೆ ಶಿಷ್ಯನ ಕೊಡುಗೆ ಏನು..?

April 21, 2026
Next Post
ಕೋವಿಡ್ ಚಿಕಿತ್ಸೆ ನಿರಾಕರಣೆ- ಎರಡು ಖಾಸಗಿ ಆಸ್ಪತ್ರೆಗಳ ಸೇವೆಯನ್ನು ಮುಚ್ಚಿಸಿದ ಆರೋಗ್ಯಾಧಿಕಾರಿ

ಕೋವಿಡ್ ಚಿಕಿತ್ಸೆ ನಿರಾಕರಣೆ- ಎರಡು ಖಾಸಗಿ ಆಸ್ಪತ್ರೆಗಳ ಸೇವೆಯನ್ನು ಮುಚ್ಚಿಸಿದ ಆರೋಗ್ಯಾಧಿಕಾರಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada