• Home
  • About Us
  • ಕರ್ನಾಟಕ
Monday, November 24, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಕೋವಿಡ್‌ಗೆ ಆತ್ಮಹತ್ಯೆ ಪರಿಹಾರವಲ್ಲ; ಆತ್ಮಸ್ಥೈರ್ಯದಿಂದ ಎದುರಿಸೋಣ

by
July 22, 2020
in ಕರ್ನಾಟಕ
0
ಕೋವಿಡ್‌ಗೆ ಆತ್ಮಹತ್ಯೆ ಪರಿಹಾರವಲ್ಲ; ಆತ್ಮಸ್ಥೈರ್ಯದಿಂದ ಎದುರಿಸೋಣ
Share on WhatsAppShare on FacebookShare on Telegram

ಇಡೀ ಕರ್ನಾಟಕದ ಉದ್ದಗಲಕ್ಕೂ ಕರೋನಾ ಸೋಂಕು ಎನ್ನುವ ವಿಪರೀತವಾಗಿ ಹರಡುತ್ತಲೇ ಸಾಗುತ್ತಿದೆ. ರಾಜ್ಯದಲ್ಲಿ ಪತ್ತೆಯಾಗಿರುವ ಅರ್ಧದಷ್ಟು ಪ್ರಕರಣ ಬೆಂಗಳೂರಿನಲ್ಲೇ ಪತ್ತೆಯಾಗಿದೆ. ಬೆಂಗಳೂರಿನಲ್ಲಿ ಸೋಂಕಿತರ ಪ್ರಮಾಣ ಹಾಗೂ ಸಾವಿನ ಪ್ರಮಾಣ ಏರಿಕೆಯಾಗುತ್ತಿದೆ. ಈ ಸೋಂಕು ಹಾಗೂ ಸಾವಿನ ನಡುವೆ ಜನರು ಮಾನಸಿಕ ಖಿನ್ನತೆಗೆ ಒಳಗಾಗುತ್ತಿದ್ದಾರೆ. ಕರೋನಾದಿಂದ ಸಾವು ಬರುವ ಮುನ್ನವೇ ಜನರು ಸಾವಿನ ಹಾದಿ ಹಿಡಿಯುತ್ತಿದ್ದಾರೆ. ಇನ್ನೂ ಕೆಲವು ಕಡೆ ಸಮಾಜಕ್ಕೆ ಬೆದರಿ ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ.

ADVERTISEMENT

ಸಾವನ್ನಪ್ಪಿದವರ ಹೆಣಗಳ ಅಂತ್ಯಕ್ರಿಯೆಗೂ ಜನರು ಪರದಾಡುವ ಪರಿಸ್ಥಿತಿ ಎದುರಾಗಿದೆ. ಬೆಂಗಳೂರಿನ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಸಿಗದೆ ಜನರು ಅಲೆದಾಡುವ ಪರಿಸ್ಥಿತಿ ಎದುರಾಗಿದೆ. ಇದೆಲ್ಲವನ್ನೂ ನೋಡುತ್ತಿರುವ ಸೂಕ್ಷ್ಮ ಮನಸ್ಸಿನ ಜನರು ಆತ್ಮಹತ್ಯೆಯ ಮೊರೆ ಹೋಗುತ್ತಿದ್ದಾರೆ. ಬೆಂಗಳೂರಿನ ಮತ್ತಿಕೆರೆಯ 2ನೇ ಮುಖ್ಯ ರಸ್ತೆಯ ದೇವಸಂದ್ರದಲ್ಲಿ ಕರೋನಾ ಪಾಸಿಟಿವ್ ಬಂದಿದ್ದಕ್ಕೆ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಕಳೆದ ವಾರ ಮೃತನ ಅಣ್ಣನಿಗೆ ಕರೋನಾ ಪಾಸಿಟಿವ್ ಬಂದಿತ್ತು. ಪ್ರಾಥಮಿಕ ಸಂಪರ್ಕದಲ್ಲಿದ್ದ ತಮ್ಮನಿಗೂ ಪಾಸಿಟಿವ್ ಬಂದಿತ್ತು. ಅದೇ ಭೀತಿಯಲ್ಲಿ ಬ್ಲೇಡ್ನಿಂದ ಕೈ ಹಾಗೂ ಕಾಲಿನ ನರವನ್ನು ತುಂಡರಿಸಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಆದರೆ ಮೃತದೇಹ ಕೊಂಡೊಯ್ಯಲು ಆ್ಯಂಬುಲೆನ್ಸ್ ಬಂದಿರಲಿಲ್ಲ. ಬೆಳಗ್ಗೆಯಿಂದ ಮೃತದೇಹ ಮಹಡಿ ಮೇಲೇಯೇ ಬಿದ್ದಿತ್ತು. ಸ್ಥಳೀಯರು ಬಿಬಿಎಂಪಿಗೆ ಮಾಹಿತಿ ನೀಡಿದರೂ ತಕ್ಷಣಕ್ಕೆ ಯಾವ ಸಿಬ್ಬಂದಿಯೂ ಬಂದಿರಲಿಲ್ಲ.

ಪ್ರತಿಧ್ವನಿಗೆ ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ಇನ್ನೊಂದು ಪ್ರಕರಣದಲ್ಲಿ ಸಮಾಜಕ್ಕೆ ಬೆದರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ದೊಡ್ಡಬಳ್ಳಾಪುರ ನಿವಾಸಿ 56 ವರ್ಷದ ನಾಗರಾಜು ಆತ್ಮಹತ್ಯೆ ಮಾಡಿಕೊಂಡ ನತದೃಷ್ಟನಾಗಿದ್ದಾರೆ. ಪತ್ನಿ ಹಾಗೂ ಮಗನಿಗೆ ಕರೋನಾ ಸೋಂಕು ಬಂದಿದ್ದರಿಂದ ನೊಂದ ತಂದೆ ನೇಣು ಹಾಕಿಕೊಂಡು ಅತ್ಮಹತ್ಯೆಗೆ ಶರಣಾಗಿದ್ದಾರೆ.

ಮನೆ ಸೀಲ್ಡೌನ್ ಮಾಡುವಾಗ ನೆರೆಯವರು ಗಲಾಟೆ ಮಾಡಿದ್ದರು. ನಿಮ್ಮಿಂದ ನಮಗೆಲ್ಲಾ ಸಮಸ್ಯೆ ಎಂದು ಜನರು ಗಲಾಟೆ ಮಾಡಿದ್ದಾರೆ. ಗಲಾಟೆಗೆ ಬೇಸತ್ತು ಹೆಸರುಘಟ್ಟದ ಕೆರೆಯಲ್ಲಿ ನೇಣಿಗೆ ಶರಣಾಗಿದ್ದಾರೆ. ಸೋಂಕಿತ ಪತ್ನಿ ದೊಡ್ಡಬಳ್ಳಾಪುರ ಅಸ್ಪತ್ರೆಯಲ್ಲಿ ಅಡ್ಮಿಟ್ ಆಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಆ ಬಳಿಕ ನಾಗರಾಜು ಮತ್ತು ಮಗ ಕ್ವಾರಂಟೈನ್ ಆಗಿದ್ದರು. ಅಕ್ಕಪಕ್ಕದ ಮನೆಯವರ ನಿಂದನೆಯಿಂದ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ. ಸೋಲದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಪ್ತಗಿರಿ ಆಸ್ಪತ್ರೆಯಲ್ಲಿ ಮೃತದೇಹದ ಕೋವಿಡ್ ಟೆಸ್ಟ್ ಮಾಡಲಾಗಿದೆ. ಕೋವಿಡ್ ವರದಿ ಬಂದ ನಂತರ ಮರಣೋತ್ತರ ಪರೀಕ್ಷೆ ಮಾಡಲು ನಿರ್ಧಾರ ಮಾಡಲಾಗಿದೆ.

ಈ ರೀತಿಯ ವ್ಯತಿರಿಕ್ತ ನಿರ್ಧಾರಗಳನ್ನು ಪಡೆಯುವುದು ಕೋವಿಡ್‌ನಿಂದ ಪಾರಾಗಲು ಇರುವ ದಾರಿಯಲ್ಲಿ. ಒಬ್ಬರ ಆತ್ಮಹತ್ಯೆಯಿಂದ ನೋವನ್ನು ಅನುಭವಿಸುವುದು ಅವರ ಕುಟುಂಬ. ಕ್ಷಣಿಕ ನೋವಿಗಾಗಿ ಜೀವವನ್ನೇ ಕಳೆದುಕೊಳ್ಳುವ ನಿರ್ಧಾರ ತೆಗೆದುಕೊಳ್ಳುವ ಮುಂಚೆ ತಮ್ಮ ಕುಟುಂಬದವರ ಜೀವನದ ಕುರಿತಾಗಿ ಒಮ್ಮೆ ಯೋಚನೆ ಮಾಡುವುದು ಒಳಿತು.

ಸಿಎಂ ಯಡಿಯೂರಪ್ಪನವರು ಕೂಡಾ ಈ ಕುರಿತಾಗಿ ಮನವಿ ಮಾಡಿಕೊಂಡಿದ್ದು, ಸೋಂಕಿತರಲ್ಲಿ ಶೇ. 98 ಜನರು ಗುಣಮುಖರಾಗುತ್ತಿದ್ದಾರೆ. ಹಾಗಾಗಿ, ಆತ್ಮಹತ್ಯೆಯಂತಹ ನಿರ್ಧಾರಗಳನ್ನು ತೆಗೆದುಕೊಳ್ಳಬಾರದು ಎಂದು ವಿನಂತಿಸಿಕೊಂಡಿದ್ದಾರೆ.

ಕರೋನಾದಂತಹ ಸಾಕಷ್ಟು ಸಂಕಷ್ಟಗಳು ಜೀವನದಲ್ಲಿ ಬಂದು ಹೋಗುತ್ತವೆ. ಆದರೆ, ಆ ಕಾರಣಕ್ಕಾಗಿ ಜೀವವನ್ನೇ ಬಲಿ ಪಡೆಯುವಂತಹ ಯೋಚನೆ ನಿಜಕ್ಕೂ ತಪ್ಪಾದದು. ಕರೋನಾವನ್ನು ದಿಟ್ಟವಾಗಿ ಎದುರಿಸಿ ಅದನ್ನು ಗೆಲ್ಲುವ ಪ್ರಯತ್ನವನ್ನು ಮಾಡಬೇಕಿದೆ.

Tags: ಕರೋನಾ
Previous Post

IT, BPO ಉದ್ಯೋಗಿಗಳಿಗೆ ವರ್ಷಾಂತ್ಯದವರೆಗೆ ʼಮನೆಯಿಂದಲೇ ಕೆಲಸʼ

Next Post

ಆಸ್ತಿ ತೆರಿಗೆ ಹೆಚ್ಚಳ; ಜನರ ಮೇಲೆ ಇನ್ನೊಂದು ಬರೆ

Related Posts

Top Story

DCM DK Shivakumar: ಕೆಜೆ ಜಾರ್ಜ್ ರವರನ್ನು ಬೇಟಿ ಮಾಡಿ ನಾಯಕತ್ವ ಬದಲಾವಣೆಯ ಕುತೂಹಲ ಮೂಡಿಸಿದ ಡಿಕೆ ಶಿವಕುಮಾರ್

by ಪ್ರತಿಧ್ವನಿ
November 24, 2025
0

ನಾಯಕತ್ವ ಬದಲಾವಣೆ ಸಂಬಂಧ ಕರ್ನಾಟಕ ಕಾಂಗ್ರೆಸ್​​ನಲ್ಲಿ ( Congress) ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಸಿದ್ದರಾಮಯ್ಯ ಬಣ, ಡಿಕೆ ಶಿವಕುಮಾರ್ (DK Shivakumar)ಬಣ ನಾಯಕರಿಂದ ಹೈಕಮಾಂಡ್ ಭೇಟಿ ಬಳಿಕ...

Read moreDetails
Political News Karnataka

ಡಿಸ್ಟಿಲರಿಗಳಿಗೆ ಪತ್ರ: ಸಿಎಂಗೆ ಈಗ ಜ್ಞಾನೋದಯ ; ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಕೇಂದ್ರ ಸಚಿವ ಜೋಶಿ ಕಿಡಿ

November 23, 2025
ಡಿಕೆಶಿ ಪರ ಬಿಜೆಪಿಗರ ಗಿಳಿ ಶಾಸ್ತ್ರ: ಗಿಳಿ ತೆಗದ ಕಾರ್ಡ್ ಏನು..?

ಡಿಕೆಶಿ ಪರ ಬಿಜೆಪಿಗರ ಗಿಳಿ ಶಾಸ್ತ್ರ: ಗಿಳಿ ತೆಗದ ಕಾರ್ಡ್ ಏನು..?

November 23, 2025
ಸಿಎಂ ಬದಲಾವಣೆ ಚರ್ಚೆ ನಡುವೆ ಮಲ್ಲಿಕಾರ್ಜುನ ಖರ್ಗೆ ಭೇಟಿಯಾದ ಲಕ್ಷ್ಮೀ ಹೆಬ್ಬಾಳ್ಕರ್

ಸಿಎಂ ಬದಲಾವಣೆ ಚರ್ಚೆ ನಡುವೆ ಮಲ್ಲಿಕಾರ್ಜುನ ಖರ್ಗೆ ಭೇಟಿಯಾದ ಲಕ್ಷ್ಮೀ ಹೆಬ್ಬಾಳ್ಕರ್

November 23, 2025
ಸಿಎಂ ಕುರ್ಚಿ ಕದನ: ಕೊನೆಗೂ ಮೌನ ಮುರಿದ ಮಲ್ಲಿಕಾರ್ಜುನ ಖರ್ಗೆ

ಸಿಎಂ ಕುರ್ಚಿ ಕದನ: ಕೊನೆಗೂ ಮೌನ ಮುರಿದ ಮಲ್ಲಿಕಾರ್ಜುನ ಖರ್ಗೆ

November 23, 2025
Next Post
ಆಸ್ತಿ ತೆರಿಗೆ ಹೆಚ್ಚಳ; ಜನರ ಮೇಲೆ ಇನ್ನೊಂದು ಬರೆ

ಆಸ್ತಿ ತೆರಿಗೆ ಹೆಚ್ಚಳ; ಜನರ ಮೇಲೆ ಇನ್ನೊಂದು ಬರೆ

Please login to join discussion

Recent News

Daily Horoscope: ಇಂದು ಈ ರಾಶಿಯವರು ಮುಟ್ಟಿದೆಲ್ಲಾ ಚಿನ್ನ..!
Top Story

Daily Horoscope: ಇಂದು ಈ ರಾಶಿಯವರು ಮುಟ್ಟಿದೆಲ್ಲಾ ಚಿನ್ನ..!

by ಪ್ರತಿಧ್ವನಿ
November 24, 2025
Top Story

DCM DK Shivakumar: ಕೆಜೆ ಜಾರ್ಜ್ ರವರನ್ನು ಬೇಟಿ ಮಾಡಿ ನಾಯಕತ್ವ ಬದಲಾವಣೆಯ ಕುತೂಹಲ ಮೂಡಿಸಿದ ಡಿಕೆ ಶಿವಕುಮಾರ್

by ಪ್ರತಿಧ್ವನಿ
November 24, 2025
ಸಿಎಂ ಬದಲಾವಣೆ ಚರ್ಚೆ ನಡುವೆ ಮಲ್ಲಿಕಾರ್ಜುನ ಖರ್ಗೆ ಭೇಟಿಯಾದ ಲಕ್ಷ್ಮೀ ಹೆಬ್ಬಾಳ್ಕರ್
Top Story

ಸಿಎಂ ಬದಲಾವಣೆ ಚರ್ಚೆ ನಡುವೆ ಮಲ್ಲಿಕಾರ್ಜುನ ಖರ್ಗೆ ಭೇಟಿಯಾದ ಲಕ್ಷ್ಮೀ ಹೆಬ್ಬಾಳ್ಕರ್

by ಪ್ರತಿಧ್ವನಿ
November 23, 2025
ಸಿಎಂ ಕುರ್ಚಿ ಕದನ: ಕೊನೆಗೂ ಮೌನ ಮುರಿದ ಮಲ್ಲಿಕಾರ್ಜುನ ಖರ್ಗೆ
Top Story

ಸಿಎಂ ಕುರ್ಚಿ ಕದನ: ಕೊನೆಗೂ ಮೌನ ಮುರಿದ ಮಲ್ಲಿಕಾರ್ಜುನ ಖರ್ಗೆ

by ಪ್ರತಿಧ್ವನಿ
November 23, 2025
ಗೃಹ ಸಚಿವ ಪರಮೇಶ್ವರ್‌ ಸಿಎಂ ಆಗಲಿ : ದಲಿತ ಕಾರ್ಡ್‌ ಉರುಳಿಸಿದ ಸಚಿವ ಜಾರಕಿಹೊಳಿ..
Top Story

ಗೃಹ ಸಚಿವ ಪರಮೇಶ್ವರ್‌ ಸಿಎಂ ಆಗಲಿ : ದಲಿತ ಕಾರ್ಡ್‌ ಉರುಳಿಸಿದ ಸಚಿವ ಜಾರಕಿಹೊಳಿ..

by ಪ್ರತಿಧ್ವನಿ
November 23, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Daily Horoscope: ಇಂದು ಈ ರಾಶಿಯವರು ಮುಟ್ಟಿದೆಲ್ಲಾ ಚಿನ್ನ..!

Daily Horoscope: ಇಂದು ಈ ರಾಶಿಯವರು ಮುಟ್ಟಿದೆಲ್ಲಾ ಚಿನ್ನ..!

November 24, 2025

DCM DK Shivakumar: ಕೆಜೆ ಜಾರ್ಜ್ ರವರನ್ನು ಬೇಟಿ ಮಾಡಿ ನಾಯಕತ್ವ ಬದಲಾವಣೆಯ ಕುತೂಹಲ ಮೂಡಿಸಿದ ಡಿಕೆ ಶಿವಕುಮಾರ್

November 24, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada