• Home
  • About Us
  • ಕರ್ನಾಟಕ
Sunday, February 1, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಆರ್ಥಿಕತೆಗೆ ಪಿವಿಎನ್‌ ರಾವ್‌ ಬಾಷ್ಯ ಬರೆದಿದ್ದು ಹೇಗೆ..?

by
July 26, 2020
in ದೇಶ
0
ಆರ್ಥಿಕತೆಗೆ ಪಿವಿಎನ್‌ ರಾವ್‌ ಬಾಷ್ಯ ಬರೆದಿದ್ದು ಹೇಗೆ..?
Share on WhatsAppShare on FacebookShare on Telegram

ಭಾರತದ ಆರ್ಥಿಕತೆ ನೆಲಕಚ್ಚಿದ್ದು, ಉದ್ಯಮವು ಮೇಲೆ ಏಳಲಾರದೆ ನೆಲದೊಳಗೆ ಹೂತು ಹೋಗುವ ಪರಿಸ್ಥಿತಿ ಎದುರಾಗಿದೆ. ಅದರಲ್ಲೂ ಮೊದಲೇ ಆರ್ಥಿಕ ಸಂಕಷ್ಟಕ್ಕೆ ಗುರಿಯಾಗಿದ್ದ ಭಾರತದಲ್ಲಿ ಕರೋನಾ ಸೋಂಕು ವಿಪರೀತವಾದ ಬಳಿಕ ಭಾರತದ ಆರ್ಥಕತೆ ಒಡೆದ ಮಡಕೆಯಲ್ಲಿ ನೀರಿಟ್ಟಂತೆ ಆಗಿದೆ. ಆದರೆ ಇದೇ ಪರಿಸ್ಥಿತಿ 1991ರಲ್ಲೂ ಸೃಷ್ಠಿಯಾಗಿತ್ತು. ಆದರೆ ಅದನ್ನು ಅತ್ಯುತ್ತಮವಾಗಿ ನಿರ್ವಹಣೆ ಮಾಡಿದ್ದು ಹೇಗೆ..? ದೇಶದ ಇತಿಹಾಸದಲ್ಲಿ ನೆನಪಿನಲ್ಲಿ ಇಡುವಂತಹ ಕೆಲಸ ಮಾಡಿದ್ದು ಹೇಗೆ ಎನ್ನುವ ಬಗ್ಗೆ ಸ್ವತಃ ಆರ್ಥಿಕ ತಜ್ಞನಾಗಿರುವ ಮಾಜಿ ಪ್ರಧಾನಿ ಡಾ. ಮನಮೋಹನ್‌ ಸಿಂಗ್‌ ಎಳೆಎಳೆಯಾಗಿ ಹಂಚಿಕೊಂಡಿದ್ದಾರೆ.

ADVERTISEMENT

ದಿವಂಗತ ಮಾಜಿ ಪ್ರಧಾನಿ ಪಿ. ವಿ ನರಸಿಂಹರಾವ್ ಅವರ ಜನ್ಮ ಶತಮಾನೋತ್ಸವದಲ್ಲಿ ಮಾತನಾಡಿದ ಮಾಜಿ ಪ್ರಧಾನಿ ಡಾ ಮನಮೋಹನ್‌ ಸಿಂಗ್‌, ಪಿ.ವಿ ನರಸಿಂಹರಾವ್‌ ಈ ಮಣ್ಣಿನ ಶ್ರೇಷ್ಠ ಮಗ. ಭಾರತದ ಆರ್ಥಿಕ ಸುಧಾರಣೆಗಳ ಪಿತಾಮಹ ಎನ್ನಬಹುದು ಎಂದಿದ್ದಾರೆ. ರಾವ್ ಪ್ರಧಾನಿಯಾಗಿದ್ದಾಗ ನಾನು ಹಣಕಾಸು ಸಚಿವನಾಗಿ ಕೆಲಸ ಮಾಡಲು ಅವಕಾಶ ಸಿಕ್ಕಿತ್ತು. ಮೊದಲ ಬಾರಿಗೆ ಬಜೆಟ್‌ ಮಂಡಿಸಲು ಮುಕ್ತ ಅವಕಾಶ ಸಿಕ್ಕಿತ್ತು ಎಂದಿದ್ದಾರೆ. ಇನ್ನೂ ಆ ಬಜೆಟ್‌ನಲ್ಲಿ ರಾಜೀವ್‌ ಗಾಂಧಿ ಅವರ ಕನಸನ್ನು ನನಸು ಮಾಡುವ ಬಗ್ಗೆ ಸಾಕಷ್ಟು ಅಂಶಗಳನ್ನು ಸೇರಿಸಿದ್ದೆ. ಬಜೆಟ್‌ ಭಾಷಣದಲ್ಲೂ ನಾನೂ ಅದನ್ನೇ ಹೇಳಿದ್ದೆ. ರಾಜೀವ್‌ ಗಾಂಧಿ ನಮ್ಮ ಜೊತೆಗಿಲ್ಲ, ಆದರೆ ಅವರ ಕನಸು ನಮ್ಮ ಜೊತೆಗೆ ಜೀವಿಸುತ್ತದೆ ಎಂದಿದ್ದಾರೆ. ಅವರ 21ನೇ ಶತಮಾನದ ದೂರದೃಷ್ಟಿಯನ್ನು ಆ ಬಜೆಟ್‌ನಲ್ಲಿ ತಂದಿದ್ದೆವು ಎಂದಿದ್ದಾರೆ.

ತೆಲಂಗಾಣದಲ್ಲಿ ಕಾಂಗ್ರೆಸ್ ಆಯೋಜಿಸಿದ್ದ ಪಿ.ವಿ ಎನ್.ರಾವ್ ಅವರ ಜನ್ಮಶತಮಾನೋತ್ಸವ ಉದ್ಘಾಟನೆ ಬಳಿಕ ವಿಡಿಯೋ ಕಾನ್ಫೆರೆನ್ಸ್ ಮೂಲಕ ಮಾತನಾಡಿದ ಡಾ. ಮನಮೋಹನ್ ಸಿಂಗ್, 1991ರಲ್ಲಿ ಮಂಡಿಸಿದ ಬಜೆಟ್‌ ದೇಶದ ದಿಕ್ಕನ್ನು ಹಲವು ರೀತಿಯಲ್ಲಿ ಬದಲಾಯಿಸಿತು. ಭಾರತದ ಭದ್ರ ಬುನಾದಿಗೆ 29 ವರ್ಷದ ಹಿಂದಿನ ಬಜೆಟ್‌ ನಾಂಧಿ ಹಾಡಿತು ಎಂದು ನೆನಪಿಸಿಕೊಂಡಿದ್ದಾರೆ. ಆರ್ಥಿಕ ಸುಧಾರಣೆ ಹಾಗೂ ಉದಾರಿಕರಣಕ್ಕೆ ಅನುಕೂಲವಾಯಿತು. ಆರ್ಥಿಕತೆ ಏನು ಸಮಸ್ಯೆ ಆಗುತ್ತಿದೆ ಎಂಬುದನ್ನು ಅರ್ಥ ಮಾಡಿಕೊಂಡು ಸರಿ ದಾರಿಗೆ ತರುವ ಸ್ವಾತಂತ್ರ್ಯ ನೀಡಿದ್ದರು. ರಾಜೀವ್‌ ಗಾಂಧಿ ಅವರ ಹಾಗೆ ಪಿ.ವಿ ನರಸಿಂಹರಾವ್‌ ಕೂಡ ಬಡವರ ಬಗ್ಗೆ ಸಾಕಷ್ಟು ಕಾಳಜಿ ಹೊಂದಿದ್ದರು ಎಂದಿದ್ದಾರೆ.

ಪ್ರತಿಧ್ವನಿಗೆ ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

1991ರ ಸಮಯದಲ್ಲಿ ಭಾರತದ ಆರ್ಥಿಕತೆಯೂ ಬಹಳ ಸಂಕಷ್ಟಕ್ಕೆ ಸಿಲುಕಿತ್ತು. ವಿದೇಶ ವಿನಿಮಯ ಬಿಕ್ಕಟ್ಟು ಎದುರಾಗಿತ್ತು. ಎರಡು ವಾರಗಳ ರಫ್ತು ಮೊತ್ತಕ್ಕೆ ವಿದೇಶ ವಿನಿಮಯ ಮೀಸಲು ಕುಸಿದಿತ್ತು. ದೇಶದ ಆರ್ಥಿಕ ಪರಿಸ್ಥಿತಿ ಪ್ರಪಾತಕ್ಕೆ ಕುಸಿದು ಬೀಳುವ ಪರಿಸ್ಥಿತಿಯಲ್ಲಿತ್ತು. 1991ರಲ್ಲಿ ಆರ್ಥಿಕ ಬಿಕ್ಕಟ್ಟಿನ ಸಂದರ್ಭದಲ್ಲಿ ಬಹಳ ಕಠಿಣ ನಿರ್ಧಾರಗಳನ್ನ ತುರ್ತಾಗಿ ತೆಗೆದುಕೊಳ್ಳುವ ಅಗತ್ಯ ಇತ್ತು. ರಾಜಕೀಯವಾಗಿ ಇದು ಸವಾಲಿನ ಕೆಲಸ ಆಗಿತ್ತು. ಯಾಕೆಂದರೆ ಪಿ.ವಿ ನರಸಿಂಹರಾವ್‌ ಸರ್ಕಾರ ಅಲ್ಪಮತದ ಸರ್ಕಾರವಾಗಿತ್ತು. ಎಲ್ಲರನ್ನೂ ಓಲೈಸುವುದು ತಲನೋವಿನ ಕೆಲಸ ಆಗಿತ್ತು. ಆದರೆ, ನರಸಿಂಹರಾವ್ ಎಲ್ಲಾ ಮಿತ್ರ ಪಕ್ಷಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಆರ್ಥಿಕ ಸುಧಾರಣೆಗಳ ಬಗ್ಗೆ ಮನವೊಲಿಸುವಲ್ಲಿ ಯಶಸ್ವಿಯಾದರು ಎಂದಿದ್ದಾರೆ.

ಭಾರತಕ್ಕೆ ಕಠಿಣ ಹಾದಿ ಆರಂಭವಾಗಿತ್ತು. ಆದರೆ, ಭಾರತ ಜಾಗೃತವಾಗಿದೆ ಎಂದು ಇಡೀ ವಿಶ್ವಕ್ಕೆ ಸ್ಪಷ್ಟ ಸಂದೇಶ ರವಾನಿಸುವ ಸಮಯ. ಆ ಬಳಿಕ ನಡೆದಿದ್ದು ಈಗ ಇತಿಹಾಸ. ಇದನ್ನು ಸ್ಮರಿಸುವಾಗ ನರಸಿಂಹ ರಾವ್ ಅವರನ್ನು ಭಾರತದ ಆರ್ಥಿಕ ಸುಧಾರಣೆಗಳ ಪಿತಾಮಹ ಎಂದು ಕರೆಯುವುದು ಸರಿ ಎಂದಿದ್ದಾರೆ. ಪಿ.ವಿ ನರಸಿಂಹರಾವ್‌ ಅವರು ಆರ್ಥಿಕ ಸುಧಾರಣೆಗಳನ್ನು ಮಾತ್ರ ತರಲಿಲ್ಲ. ಹಲವು ಕ್ಷೇತ್ರಗಳಲ್ಲಿ ಗಮನಾರ್ಹ ಹೆಜ್ಜೆಗಳನ್ನು ಇಟ್ಟಿದ್ದರು. ಆಧುನಿಕ ಭಾರತದ ಸರ್ವಾಂಗೀಣ ಅಭಿವೃದ್ಧಿಗೆ ತನ್ನದೇ ಆದ ಕೊಡುಗೆ ನೀಡಿದ್ದಾರೆ ಎಂದು ಡಾ ಮನಮೋಹನ್ ಸಿಂಗ್ ಹೇಳಿದ್ದಾರೆ.

ವಿರೋಧ ಪಕ್ಷಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವಲ್ಲಿ ಪಿ.ವಿ ನರಸಿಂಹರಾವ್‌ ಮುಂದಿದ್ದರು. ಜಮ್ಮು ಮತ್ತು ಕಾಶ್ಮೀರದಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಬಗ್ಗೆ ಭಾರತವನ್ನು ಪ್ರತಿನಿಧಿಸಲು ಭಾರತೀಯ ನಿಯೋಗದ ನಾಯಕನಾಗಿ ಶ್ರೀ ಅಟಲ್ ಬಿಹಾರಿ ವಾಜಪೇಯಿ ಅವರನ್ನು ನಿಯೋಜಿಸಿದ್ದರು. ಅದರಲ್ಲಿ ಯಶಸ್ವಿಯಾಗಲೂ ಕೂಡ ಸಾಧ್ಯವಾಯಿತು. ಬಿಜೆಪಿಯ ಸುಬ್ರಮಣಿಯನ್ ಸ್ವಾಮಿ ಅವರನ್ನು ಕಾರ್ಮಿಕ ಮಾನದಂಡಗಳು ಮತ್ತು ಅಂತರರಾಷ್ಟ್ರೀಯ ವ್ಯಾಪಾರ ಆಯೋಗದ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಕ್ಯಾಬಿನೆಟ್ ದರ್ಜೆ ಸ್ಥಾನಮಾನವನ್ನು ನೀಡಲಾಗಿತ್ತ ಎಂದು ನೆನಪಿನ ಬುತ್ತಿ ಬಿಚ್ಚಿಟ್ಟಿದ್ದಾರೆ. ನರಸಿಂಹ ರಾವ್‌ ಅವರು ಭಾಷಾ ಪಾಂಡಿತ್ಯದ ಬಗ್ಗೆ ಮಾತನಾಡಿದ್ದು, 10 ಭಾರತೀಯ ಭಾ಼ೆಗಳು ಹಾಗೂ ನಾಲ್ಕು ವಿದೇಶಿ ಭಾಷೆಗಳಲ್ಲಿ ಪಾರಂಗತರಾಗಿದ್ದರೆ ಮತ್ತು ಸ್ವತಃ ವಿದ್ವಾಂಸರಾಗಿದ್ದರು. ಕಂಪ್ಯೂಟರ್ ಬಳಸುವುದರಲ್ಲಿ ಪ್ರವೀಣನಾಗಿದ್ದರ ಜೊತೆಗೆ ಪ್ರೋಗ್ರಾಮಿಂಗ್‌ ಕೂಡ ಮಾಡುತ್ತಿದ್ದರು. ಯಾವಾಗಲೂ ಹೊಸ ವಿಷಯಗಳನ್ನು ಕಲಿಯಲು ಸಿದ್ಧರಿರುತ್ತಿದ್ದರು ಎಂದು ಸ್ಮರಿಸಿದ್ದಾರೆ.

Tags: ಪಿ.ವಿ. ನರಸಿಂಹರಾವ್ಮನಮೋಹನ್ ಸಿಂಗ್
Previous Post

ಭೂ ಮಾಫಿಯಾದೊಂದಿಗೆ ಕೈ ಜೋಡಿಸಿದ ಅಧಿಕಾರಿಯ ಅಮಾನತಿಗೆ ಶಿಫಾರಸು

Next Post

ಟ್ರೆಂಡ್ ಆಗುತ್ತಿದೆ ಕಾಂಗ್ರೆಸ್ ಶುರು ಮಾಡಿದ #SpeakUpForDemocracy

Related Posts

ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು: ಕಾಂಗ್ರೆಸಿಗರ ಟೀಕೆಗೆ ಕುಮಾರಸ್ವಾಮಿ ಖಡಕ್‌ ಉತ್ತರ
Top Story

ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು: ಕಾಂಗ್ರೆಸಿಗರ ಟೀಕೆಗೆ ಕುಮಾರಸ್ವಾಮಿ ಖಡಕ್‌ ಉತ್ತರ

by ಪ್ರತಿಧ್ವನಿ
February 1, 2026
0

ನವದೆಹಲಿ: ಕೇಂದ್ರದ ಹಣಕಾಸು ಖಾತೆ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ 2026-27ನೇ ಸಾಲಿನ ಆಯವ್ಯಯದ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರ ಮಾಡುತ್ತಿರುವ ಟೀಕೆಗಳಿಗೆ ಉತ್ತರ ಕೊಡಲಾಗಿದೆ...

Read moreDetails
400 ಕೋಟಿ ದರೋಡೆ ಕೇಸ್‌: ದಿಢೀರ್‌ ಪೊಲೀಸರಿಗೆ ಶರಣಾದ ವ್ಯಕ್ತಿ ಯಾರು..?

400 ಕೋಟಿ ದರೋಡೆ ಕೇಸ್‌: ದಿಢೀರ್‌ ಪೊಲೀಸರಿಗೆ ಶರಣಾದ ವ್ಯಕ್ತಿ ಯಾರು..?

February 1, 2026
Union Budget 2026: ಇನ್ಮುಂದೆ ಬೈಕ್ ಅಪಘಾತ ಪರಿಹಾರ ವಿಮೆ ಹಣಕ್ಕೆ ತೆರಿಗೆ ಇಲ್ಲ

Union Budget 2026: ಇನ್ಮುಂದೆ ಬೈಕ್ ಅಪಘಾತ ಪರಿಹಾರ ವಿಮೆ ಹಣಕ್ಕೆ ತೆರಿಗೆ ಇಲ್ಲ

February 1, 2026
Union Budget 2026: ಆದಾಯ ತೆರಿಗೆದಾರರಿಗೆ ಗುಡ್‌ನ್ಯೂಸ್‌: ಮಧ್ಯಮ ವರ್ಗಕ್ಕೆ ಬಿಗ್‌ ರಿಲೀಫ್

Union Budget 2026: ಆದಾಯ ತೆರಿಗೆದಾರರಿಗೆ ಗುಡ್‌ನ್ಯೂಸ್‌: ಮಧ್ಯಮ ವರ್ಗಕ್ಕೆ ಬಿಗ್‌ ರಿಲೀಫ್

February 1, 2026
Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ

Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ

February 1, 2026
Next Post
ಟ್ರೆಂಡ್ ಆಗುತ್ತಿದೆ ಕಾಂಗ್ರೆಸ್ ಶುರು ಮಾಡಿದ #SpeakUpForDemocracy

ಟ್ರೆಂಡ್ ಆಗುತ್ತಿದೆ ಕಾಂಗ್ರೆಸ್ ಶುರು ಮಾಡಿದ #SpeakUpForDemocracy

Please login to join discussion

Recent News

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಹಾಗೂ ಅಳಿಯನ ಬಗ್ಗೆ ಇಲ್ಲಿದೆ ಯಾರಿಗೂ ತಿಳಿಯದ ಈ ವಿಷಯ!
Top Story

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಹಾಗೂ ಅಳಿಯನ ಬಗ್ಗೆ ಇಲ್ಲಿದೆ ಯಾರಿಗೂ ತಿಳಿಯದ ಈ ವಿಷಯ!

by ಪ್ರತಿಧ್ವನಿ
February 1, 2026
ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು: ಕಾಂಗ್ರೆಸಿಗರ ಟೀಕೆಗೆ ಕುಮಾರಸ್ವಾಮಿ ಖಡಕ್‌ ಉತ್ತರ
Top Story

ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು: ಕಾಂಗ್ರೆಸಿಗರ ಟೀಕೆಗೆ ಕುಮಾರಸ್ವಾಮಿ ಖಡಕ್‌ ಉತ್ತರ

by ಪ್ರತಿಧ್ವನಿ
February 1, 2026
Vijayapura: 27 ಭೂ ಕಬಳಿಕೆ ಪ್ರಕರಣಗಳಲ್ಲಿ 200 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ
Top Story

Vijayapura: 27 ಭೂ ಕಬಳಿಕೆ ಪ್ರಕರಣಗಳಲ್ಲಿ 200 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ

by ಪ್ರತಿಧ್ವನಿ
February 1, 2026
ಕೇಂದ್ರದಿಂದ ಕರ್ನಾಟಕಕ್ಕೆ ಪದೇ ಪದೇ ಅನ್ಯಾಯ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಿಡಿ
Top Story

ಕೇಂದ್ರದಿಂದ ಕರ್ನಾಟಕಕ್ಕೆ ಪದೇ ಪದೇ ಅನ್ಯಾಯ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಿಡಿ

by ಪ್ರತಿಧ್ವನಿ
February 1, 2026
400 ಕೋಟಿ ದರೋಡೆ ಕೇಸ್‌: ದಿಢೀರ್‌ ಪೊಲೀಸರಿಗೆ ಶರಣಾದ ವ್ಯಕ್ತಿ ಯಾರು..?
Top Story

400 ಕೋಟಿ ದರೋಡೆ ಕೇಸ್‌: ದಿಢೀರ್‌ ಪೊಲೀಸರಿಗೆ ಶರಣಾದ ವ್ಯಕ್ತಿ ಯಾರು..?

by ಪ್ರತಿಧ್ವನಿ
February 1, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಹಾಗೂ ಅಳಿಯನ ಬಗ್ಗೆ ಇಲ್ಲಿದೆ ಯಾರಿಗೂ ತಿಳಿಯದ ಈ ವಿಷಯ!

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಹಾಗೂ ಅಳಿಯನ ಬಗ್ಗೆ ಇಲ್ಲಿದೆ ಯಾರಿಗೂ ತಿಳಿಯದ ಈ ವಿಷಯ!

February 1, 2026
ಅಕ್ರಮ ಗಣಿಗಾರಿಕೆಗೆ ಜೆಸಿಬಿ ಮೇಲೆ ಕಲ್ಲೆಸೆದು ಕಾನೂನಿನ ಗಡುಸು ಮುಖ ತೋರಿಸಿದ ಮಹಿಳಾ ಅಧಿಕಾರಿ

ಅಕ್ರಮ ಗಣಿಗಾರಿಕೆಗೆ ಜೆಸಿಬಿ ಮೇಲೆ ಕಲ್ಲೆಸೆದು ಕಾನೂನಿನ ಗಡುಸು ಮುಖ ತೋರಿಸಿದ ಮಹಿಳಾ ಅಧಿಕಾರಿ

February 1, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada