• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 23, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಇಂದು ಬಿಜೆಪಿಗೆ ಸೇರ್ಪಡೆ

by
August 25, 2020
in ದೇಶ
0
ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಇಂದು ಬಿಜೆಪಿಗೆ ಸೇರ್ಪಡೆ
Share on WhatsAppShare on FacebookShare on Telegram

ಕರ್ನಾಟಕ ಪೊಲೀಸ್‌ ಇಲಾಖೆಯಲ್ಲಿ ದಕ್ಷ ಅಧಿಕಾರಿ, ʼಸಿಂಗಂʼ ಎಂದೇ ಪ್ರಖ್ಯಾತರಾಗಿದ್ದ ಕುಪ್ಪುಸ್ವಾಮಿ ಅಣ್ಣಾಮಲೈ ಅವರು, ಮಂಗಳವಾರ ಮಧ್ಯಾಹ್ನ ಒಂದು ಗಂಟೆಗೆ ಬಿಜೆಪಿ ಸೇರಲಿದ್ದಾರೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ಅವರ ಸಮ್ಮುಖದಲ್ಲಿ ಅವರು ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ಈ ಕುರಿತಾಗಿ ಹೇಳಿಕೆ ನೀಡಿರುವ ಅಣ್ಣಾಮಲೈ, “ನಾನು ʼನೈಸರ್ಗಿಕʼವಾಗಿ ಬಿಜೆಪಿಯೊಂದಿಗೆ ಬೆರೆಯುತ್ತೇನೆ. ಬಿಜೆಪಿಯ ವಿಶಾಲವಾದ ದೂರದೃಷ್ಟಿತ್ವ ನನ್ನ ಆಲೋಚನೆಗಳೊಂದಿಗೆ ಬೆಸೆದಿವೆ. ಪಕ್ಷದೊಂದಿಗೆ ಬೆರೆತು ಬಿಜೆಪಿಯನ್ನು ತಮಿಳುನಾಡಿನಲ್ಲಿ ಇನ್ನಷ್ಟು ಬೆಳೆಸುವ ಅವಕಾಶ ನನಗೆ ಒದಗಿ ಬಂದಿದೆ,” ಎಂದು ಹೇಳಿದ್ದಾರೆ.

“ತಮಿಳುನಾಡುನಲ್ಲಿರುವ ದ್ರಾವಿಡ ರಾಜಕೀಯ ಪಕ್ಷಗಳು, ಆಯಾ ಪಕ್ಷಗಳ ನಿಜವಾದ ಸಿದ್ದಾಂತಗಳನ್ನು ಮರೆತಿವೆ. ಅಣ್ಣಾದೊರೈ, ಪೆರಿಯಾರ್‌ ಮತ್ತು ಎಂಜಿಆರ್‌ ಅವರ ಸಿದ್ದಾಂತಗಳು ಈಗಿನ ರಾಝಕೀಯ ನಾಯಕರ ಸಿದ್ದಾಂತಗಳಿಗಿಂತ ಭಿನ್ನವಾಗಿದ್ದವು,” ಎಂದು ಎಂಜಿಆರ್‌ ನಂತರದ ತಮಿಳುನಾಡಿನ ಪ್ರಾದೇಶಿಕ ಪಕ್ಷಗಳ ರಾಜಕೀಯ ನಾಯಕರ ಮೇಲೆ ಪರೋಕ್ಷವಾಗಿ ಹರಿಹಾಯ್ದಿದ್ದಾರೆ.

ತಮಿಳುನಾಡಿನ ಚೆನ್ನೈ ಮತ್ತು ಕೊಯಂಬತ್ತೂರು ಪ್ರದೇಶಗಳಲ್ಲಿ ಬಿಜೆಪಿ ಬಲಗೊಳಿಸುವ ಉದ್ದೇಶವನ್ನು ಹೊಂದಿದ್ದಾರೆಂದು ಹೇಳಲಾಗಿದೆ.

ಅಣ್ಣಾಮಲೈ ಬಿಜೆಪಿ ಸೇರುವ ಕುರಿತು ಸಾಮಾಜಿಕ ಜಾಲತಾಣಗಳಲ್ಲಿಯೂ ಹಸಿಬಿಸಿ ಚರ್ಚೆ ನಡೆಯುತ್ತಿದ್ದು, ಬಿಜೆಪಿಯ ನಾಯಕರು ಅಣ್ಣಾಮಲೈ ಅವರಿಗೆ ಸ್ವಾಗತ ಕೋರಿದ್ದಾರೆ. ತಮಿಳು ಗುಣಲಕ್ಷಣ ಹೊಂದಿರುವ ಹಿಂದುತ್ವವೇ? ಎಂಬ ಪ್ರಶ್ನೆಯನ್ನೂ ಕೆಲವರು ಮಾಡಿದ್ದಾರೆ.

ಇನ್ನು ಕೆಲವರು, ಅಣ್ಣಾಮಲೈ ರಾಜಕೀಯಕ್ಕೆ ಸೇರದೇ ಪೊಲೀಸ್‌ ಇಲಾಖೆಯಿಂದಲೇ ಜನಸೇವೆ ಮಾಡಬೇಕಿತ್ತು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಬಿಜೆಪಿ ಸೇರುವುದರಿಂದ ಇನ್ನು ಮುಂದೆ ಸುಳ್ಳು ಹೇಳುವುದನ್ನು ಕಲಿಯಬೇಕಿದೆ ಎಂದು ಮತ್ತೊಬ್ಬರು ವ್ಯಂಗ್ಯವಾಡಿದ್ದಾರೆ.

ಕರ್ನಾಟಕ ಕೇಡರ್‌ನ ನಿವೃತ್ತಿ ಐಪಿಎಸ್‌ ಅಧಿಕಾರಿ ಕೆ. ಅಣ್ಣಾಮಲೈ ಇಂದು ದೆಹಲಿಯಲ್ಲಿ ಬಿಜೆಪಿ ಸೇರಲಿದ್ದಾರೆ.
ಬೆಂಗಳೂರು, ಚಿಕ್ಕಮಗಳೂರು ಸೇರಿದಂತೆ ಹಲವೆಡೆ ದಕ್ಷತೆಯಿಂದ ಕಾರ್ಯನಿರ್ವಹಿಸಿ ಸ್ವಯಂ ನಿವೃತ್ತಿ ಪಡೆದು ಬಿಜೆಪಿ ಸೇರುತ್ತಿದ್ದಾರೆ. ಅವರು ಬಿಜೆಪಿ ಸೇರುತ್ತಿರುವುದು ನನಗೆ ಅತೀವ ಸಂತೋಷ ತಂದಿದೆ.ಅವರಿಗೆ ಹೃದಯಪೂರ್ವಕ ಸ್ವಾಗತ. pic.twitter.com/iDqL3SEoaf

— Dr Sudhakar K (@mla_sudhakar) August 25, 2020


K Annamalai: “I am a natural fit in BJP”.
He also importantly says “today's Dravidian Parties are not following ideals of Annadurai, Periyar and MGR”. So he will attack post-MGR leadership. No one hates MGR anyway.
Hindutva with Tamizh characteristics?https://t.co/GAHyptTJ34

— Pradip Varma (@Pradip_K_Varma) August 25, 2020


ಅಣ್ಣಾಮಲೈ ಒಬ್ಬ ಪೋಲಿಸ್ ಅಧಿಕಾರಿಯಾಗಿ ಜನರ ಸೇವೆ ಮಾಡಬೇಕಿತ್ತೇ ಹೊರತು ಒಬ್ಬ ರಾಜಕಾರಣಿಯಾಗಲ್ಲ.
ಈಗ ಇರುವ ರಾಜಕಾರಣಿಗಳನ್ನು ನೋಡಿದರೆ ಸಾಕು ಜನರು ಎಷ್ಟು ಸುಖ ಸಂತೋಷದಿಂದ ಇದ್ದಾರೆ ಅಂತ ಗೊತ್ತಾಗುತ್ತೆ.

— ಕೃಷ್ಣಂ ವಂದೇ ಜಗದ್ಗುರುಂ (@PK_Chiguru) August 25, 2020


ಹಾಗಾದರೆ ಇವತ್ತಿನಿಂದ ಸುಳ್ಳು ಹೇಳುವುದನ್ನ ಕಲಿಯಲೇ ಬೇಕು

— Ravikumar H (@Ravikum70679423) August 25, 2020


ADVERTISEMENT
Tags: Former IPS officer Annamalaiಬಿಜೆಪಿಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ
Previous Post

ಅದಾನಿಗೆ ಏರ್‌ಪೋರ್ಟ್ ಗುತ್ತಿಗೆ ವಿರುದ್ಧ ನಿರ್ಣಯ ಅಂಗೀಕರಿಸಿದ ಕೇರಳ ವಿಧಾನಸಭೆ

Next Post

ಉ.ಪ್ರ ಪತ್ರಕರ್ತನ ಕೊಲೆ; ಪತ್ರಿಕಾ ಸ್ವಾತಂತ್ರ್ಯದ ಧಕ್ಕೆಗೆ ಮತ್ತೊಂದು ಉದಾಹರಣೆಯೇ?

Related Posts

ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!
Top Story

ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!

by ಪ್ರತಿಧ್ವನಿ
April 22, 2026
0

ಮುಂಬೈ : ಟ್ರಾಪೀಕ್‌ ಕಿರಿ ಕಿರಿ ಅನುಭವಿಸಿದ ಮಹಿಳೆಯೊಬ್ಬಳು ಪೊಲೀಸ್‌ ಅಧಿಕಾರಿ ಹಾಗೂ ಇಲ್ಲಿನ ಸಚಿವರಿಗೆ ಖಡಕ್‌ ಕ್ಲಾಸ್‌ ತೆಗೆದುಕೊಂಡ ಘಟನೆ ನಡೆದಿದೆ. ಮಂಗಳವಾರ ವರ್ಲಿ ಪ್ರದೇಶದಲ್ಲಿ...

Read moreDetails
ರಾಹುಲ್‌ ಯಡವಟ್ಟಿನಿಂದ ಹೈದ್ರಾಬಾದ್‌ ಎದುರು ಶರಣಾದ ಡೆಲ್ಲಿ ಕ್ಯಾಪಿಟಲ್ಸ್..

ರಾಹುಲ್‌ ಯಡವಟ್ಟಿನಿಂದ ಹೈದ್ರಾಬಾದ್‌ ಎದುರು ಶರಣಾದ ಡೆಲ್ಲಿ ಕ್ಯಾಪಿಟಲ್ಸ್..

April 22, 2026
ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

April 21, 2026
“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

April 21, 2026
ತಮಿಳುನಾಡಿಗೆ ಡಿಎಂಕೆ ಮೈತ್ರಿಕೂಟದಿಂದಲೇ ಭವಿಷ್ಯ: ಡಿಸಿಎಂ ಡಿ.ಕೆ. ಶಿವಕುಮಾರ್‌

ತಮಿಳುನಾಡಿಗೆ ಡಿಎಂಕೆ ಮೈತ್ರಿಕೂಟದಿಂದಲೇ ಭವಿಷ್ಯ: ಡಿಸಿಎಂ ಡಿ.ಕೆ. ಶಿವಕುಮಾರ್‌

April 21, 2026
Next Post
ಉ.ಪ್ರ ಪತ್ರಕರ್ತನ ಕೊಲೆ; ಪತ್ರಿಕಾ ಸ್ವಾತಂತ್ರ್ಯದ ಧಕ್ಕೆಗೆ ಮತ್ತೊಂದು ಉದಾಹರಣೆಯೇ?

ಉ.ಪ್ರ ಪತ್ರಕರ್ತನ ಕೊಲೆ; ಪತ್ರಿಕಾ ಸ್ವಾತಂತ್ರ್ಯದ ಧಕ್ಕೆಗೆ ಮತ್ತೊಂದು ಉದಾಹರಣೆಯೇ?

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada