• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 24, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಕೇಂದ್ರ ಸರ್ಕಾರವನ್ನು ಪ್ರಶ್ನಿಸಲು ಧೈರ್ಯವಿಲ್ಲದ ಹೇಡಿ ಸರ್ಕಾರ ನಮ್ಮ ರಾಜ್ಯದಲ್ಲಿದೆ- ಸಿದ್ದರಾಮಯ್ಯ

by
August 29, 2020
in ಕರ್ನಾಟಕ
0
ಕೇಂದ್ರ ಸರ್ಕಾರವನ್ನು ಪ್ರಶ್ನಿಸಲು ಧೈರ್ಯವಿಲ್ಲದ ಹೇಡಿ ಸರ್ಕಾರ ನಮ್ಮ ರಾಜ್ಯದಲ್ಲಿದೆ- ಸಿದ್ದರಾಮಯ್ಯ
Share on WhatsAppShare on FacebookShare on Telegram

ಕರೋನಾ ಸೋಂಕಿಗೆ ಒಳಗಾಗಿದ್ದ ಸಿದ್ದರಾಮಯ್ಯ ಇದೀಗ ಸಂಪೂರ್ಣ ಗುಣಮುಖರಾಗಿದ್ದಾರೆ. ವೈದ್ಯರ ಸಲಹೆ ಮೇರೆಗೆ ಹೋಂ ಕ್ವಾರಂಟೈನ್‍ಗೆ ಒಳಗಾಗಿದ್ದ ಅವರು ಸಂಪೂರ್ಣ ಚೇತರಿಸಿಕೊಂಡಿದ್ದು ಮತ್ತೆ ಸಕ್ರಿಯ ರಾಜಕಾರಣದಲ್ಲಿ ಭಾಗಿಯಾಗುತ್ತೇನೆ ಎಂದಿದ್ದಾರೆ.

ಈ ಕುರಿತು ಸರಣಿ ಟ್ವೀಟ್‌ ಮಾಡಿರುವ ಸಿದ್ದರಾಮಯ್ಯ ಮುಂದಿನ ವಾರ ಬಾದಾಮಿಗೆ ಭೇಟಿ ನೀಡಲಿದ್ದೇನೆ ಎಂದಿದ್ದಾರೆ. ಬಳಿಕ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ವಿರುದ್ಧ ನೇರ ಟ್ವೀಟ್ದಾಳಿ ನಡೆಸಿದ ಸಿದ್ದರಾಮಯ್ಯ, ರಾಜ್ಯಗಳ ಬಗ್ಗೆ ಕಾಳಜಿಯೇ ಇಲ್ಲದಿರುವ ಅತ್ಯಂತ ಕೆಟ್ಟ ಸರ್ಕಾರ ಕೇಂದ್ರದಲ್ಲಿದ್ದರೆ, ಅದನ್ನು ಪ್ರಶ್ನಿಸುವ ಧೈರ್ಯವಿಲ್ಲದ ಹೇಡಿ ಸರ್ಕಾರ ನಮ್ಮ ರಾಜ್ಯದಲ್ಲಿದೆ. ಈಗಾಗಲೇ ಬಿಜೆಪಿಯೇತರ ರಾಜ್ಯ ಸರ್ಕಾರಗಳು ಕೇಂದ್ರವು ಜಿಎಸ್‌ಟಿ ಪರಿಹಾರ ನೀಡದಿರುವ ನಿರ್ಧಾರವನ್ನು ವಿರೋಧ ಮಾಡಿವೆ. ರಾಜ್ಯ ಸರ್ಕಾರಕ್ಕೆ ಧೈರ್ಯವಿದ್ದರೆ ನೀವೇ ಸಾಲ ತೆಗೆದುಕೊಂಡು ನಮಗೆ ಜಿ.ಎಸ್.ಟಿ ಪರಿಹಾರ ಕೊಡಿ ಎಂದು ಕೇಂದ್ರ ಸರ್ಕಾರವನ್ನು ಕೇಳಲಿ ಮತ್ತು ಸರ್ವ ಪಕ್ಷ ನಿಯೋಗ ಕೊಂಡೊಯ್ದು ಕೇಂದ್ರದ ಮೇಲೆ ಒತ್ತಡ ಹೇರಲಿ. ರಾಜ್ಯದ ಹಿತದೃಷ್ಟಿಯಿಂದ ಕೇಂದ್ರದ ಮೇಲೆ ಒತ್ತಡ ಹೇರುವ ಕೆಲಸವನ್ನು ರಾಜ್ಯ ಸರ್ಕಾರ ಈಗ ಮಾಡಬೇಕು ಎಂದು ಆಗ್ರಹಿಸಿದ್ದಾರೆ.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ಈ ವರ್ಷವೂ ಪ್ರವಾಹ ಬಂದಿದ್ದು 56 ತಾಲೂಕುಗಳ 1000 ಹಳ್ಳಿಗಳು ಪ್ರವಾಹದಿಂದ ಬಾಧಿಸಲ್ಪಟ್ಟಿದೆ. ಸುಮಾರು 1 ಲಕ್ಷ ಹೆಕ್ಟೇರ್ ಬೆಳೆ ಹಾನಿಯಾಗಿದೆ, ಸಾವಿರಾರು ಮನೆಗಳು ಕುಸಿದುಬಿದ್ದಿವೆ, ಜಾನುವಾರುಗಳು ಸಾವಿಗೀಡಾಗಿವೆ. ರಾಜ್ಯ ಸರ್ಕಾರವೇ ಸುಮಾರು ರೂ.4 ಸಾವಿರ ಕೋಟಿಗಳಷ್ಟು ನಷ್ಟವಾಗಿದೆ ಎಂದಿದೆ.ಕಳೆದ ಬಾರಿಯ ಪ್ರವಾಹ ಪರಿಹಾರ ಧನವನ್ನೇ ಕೇಂದ್ರ ಸರ್ಕಾರ ಸರಿಯಾಗಿ ಕೊಟ್ಟಿಲ್ಲ. ರೂ.35,000 ಕೋಟಿ ಪರಿಹಾರ ಕೇಳಿದ್ದರೆ ಬರೀ ರೂ.1800 ಕೋಟಿ ಪರಿಹಾರ ಮಾತ್ರ ಕೇಂದ್ರದಿಂದ ಬಂದಿದೆ. ಇನ್ನೂ ಹಲವೆಡೆ ಮನೆ ಕಳೆದುಕೊಂಡವರಿಗೆ ಮನೆ ಕಟ್ಟಿಕೊಟ್ಟಿಲ್ಲ, ಹಳ್ಳಿಗಳ ಸ್ಥಳಾಂತರವಾಗಿಲ್ಲ, ಶಾಲೆಗಳ ಪುನರ್ ನಿರ್ಮಾಣ ಕಾರ್ಯವೂ ಆಗಿಲ್ಲ.

ಕೇಂದ್ರದ ವಿತ್ತ ಸಚಿವರನ್ನು ಭೇಟಿ ಮಾಡಿ ಮನವಿ ಕೊಟ್ಟು, ಪ್ರಧಾನಿಗಳ ಮನವೊಲಿಸಿ ಪರಿಹಾರ ಸಿಗುವವರೆಗೂ ಪಟ್ಟು ಬಿಡಬಾರದು. ನಮ್ಮ ಸರ್ಕಾರವಿದ್ದಾಗ ಪದೇ ಪದೇ ಪ್ರಧಾನಿಗಳನ್ನು ಭೇಟಿ ಮಾಡಿ ಪರಿಹಾರಕ್ಕಾಗಿ ಆಗ್ರಹಿಸುತ್ತಿದ್ದೆವು, ಆದರೆ ರಾಜ್ಯ ಬಿಜೆಪಿ ನಾಯಕರು ಪ್ರಧಾನಿಗಳನ್ನು ಭೇಟಿ ಮಾಡೋಕೇ ಹೆದರುತ್ತಾರೆ.
ಇದೊಂದು ಮಹಾ ಪುಕ್ಕಲು ಸರ್ಕಾರ. 8/12

— Siddaramaiah (@siddaramaiah) August 29, 2020


ADVERTISEMENT

ಯಡಿಯೂರಪ್ಪನವರು ಹೆಲಿಕಾಪ್ಟರ್ ಮೂಲಕ ಸರ್ವೇ ಮಾಡಿದರು, ಆದರೆ ಸರ್ಕಾರದ ಬೇರೆ ಮಂತ್ರಿಗಳು, ಜಿಲ್ಲಾ ಉಸ್ತುವಾರಿ ಸಚಿವರು ಜನರ ಬಳಿಗೆ ಹೋಗಿ ಅವರ ಕಷ್ಟ ಆಲಿಸಬೇಕೋ ಬೇಡವೋ? ಸಚಿವರಾದ ಅಶೋಕ್ ಅವರು ಕೇಂದ್ರದಿಂದ ಪರಿಹಾರ ಕೇಳಿದ್ದೇವೆ, ಅವರ ತಂಡ ಬಂದು ಸರ್ವೇ ಮಾಡಿ ಪರಿಹಾರ ನೀಡುತ್ತದೆ ಎನ್ನುತ್ತಾರೆ, ಆದರೆ ಅಧಿಕಾರಿಗಳು ಹೇಳುವ ಮಾತೇ ಬೇರೆ.

ಕೇಂದ್ರದ ವಿತ್ತ ಸಚಿವರನ್ನು ಭೇಟಿ ಮಾಡಿ ಮನವಿ ಕೊಟ್ಟು, ಪ್ರಧಾನಿಗಳ ಮನವೊಲಿಸಿ ಪರಿಹಾರ ಸಿಗುವವರೆಗೂ ಪಟ್ಟು ಬಿಡಬಾರದು. ನಮ್ಮ ಸರ್ಕಾರವಿದ್ದಾಗ ಪದೇ ಪದೇ ಪ್ರಧಾನಿಗಳನ್ನು ಭೇಟಿ ಮಾಡಿ ಪರಿಹಾರಕ್ಕಾಗಿ ಆಗ್ರಹಿಸುತ್ತಿದ್ದೆವು, ಆದರೆ ರಾಜ್ಯ ಬಿಜೆಪಿ ನಾಯಕರು ಪ್ರಧಾನಿಗಳನ್ನು ಭೇಟಿ ಮಾಡೋಕೇ ಹೆದರುತ್ತಾರೆ. ಇದೊಂದು ಮಹಾ ಪುಕ್ಕಲು ಸರ್ಕಾರ ಎಂದು ಬಿ ಯಸ್‌ ಯಡಿಯೂರಪ್ಪ ಸರ್ಕಾರವನ್ನು ಕಠಿಣವಾಗಿ ವಿಮರ್ಷಿಸಿದ್ದಾರೆ.

Tags: ಜಿಎಸ್‌ಟಿಸಿದ್ದರಾಮಯ್ಯ
Previous Post

ಜೀವ ಬಲಿ ಪಡೆದ ಜಾತಿ ಶ್ರೇಷ್ಟತೆಯ ವ್ಯಸನ

Next Post

ತಮಿಳುನಾಡು ಬಿಜೆಪಿ ಉಪಾಧ್ಯಕ್ಷನಾಗಿ ಮಾಜಿ IPS ಅಧಿಕಾರಿ ಅಣ್ಣಾಮಲೈ

Related Posts

ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ
ಕರ್ನಾಟಕ

ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

by ಪ್ರತಿಧ್ವನಿ
April 24, 2026
0

ಬೆಂಗಳೂರು: ನಗರದ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯ ಪಾಲಿಕೆಗಳ ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ಮತ್ತು ಸಾಮಾಜಿಕ ಜಾಲತಾಣಗಳ ಮೂಲಕ ವಂಚನೆ ಯತ್ನ ನಡೆಯುತ್ತಿರುವುದು ಬೆಳಕಿಗೆ ಬಂದಿದೆ. ಈ...

Read moreDetails
ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

April 23, 2026
ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ದಾಖಲೆ ಸಾಧನೆ: ಈ 7 ಮಂದಿಗೆ ಪೂರ್ಣ ಅಂಕ!

ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ದಾಖಲೆ ಸಾಧನೆ: ಈ 7 ಮಂದಿಗೆ ಪೂರ್ಣ ಅಂಕ!

April 23, 2026
ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಜಿಲ್ಲಾವಾರು ವಿವರ ಇಲ್ಲಿದೆ

ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಜಿಲ್ಲಾವಾರು ವಿವರ ಇಲ್ಲಿದೆ

April 23, 2026
ಬೆಸ್ಕಾಂನ ‘ಹೆಚ್‌ಟಿ ಮಿತ್ರ’  ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

ಬೆಸ್ಕಾಂನ ‘ಹೆಚ್‌ಟಿ ಮಿತ್ರ’ ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

April 23, 2026
Next Post
ತಮಿಳುನಾಡು ಬಿಜೆಪಿ ಉಪಾಧ್ಯಕ್ಷನಾಗಿ ಮಾಜಿ IPS ಅಧಿಕಾರಿ ಅಣ್ಣಾಮಲೈ

ತಮಿಳುನಾಡು ಬಿಜೆಪಿ ಉಪಾಧ್ಯಕ್ಷನಾಗಿ ಮಾಜಿ IPS ಅಧಿಕಾರಿ ಅಣ್ಣಾಮಲೈ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada