• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, July 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಡ್ರಗ್ಸ್ ಮಾಫಿಯಾ ವಸೂಲಿ ಹಣದಿಂದಲೇ ಮೈತ್ರಿ ಸರ್ಕಾರವನ್ನು ಉರುಳಿಸಲಾಗಿದೆ- HDK ಗಂಭೀರ ಆರೋಪ

by
August 31, 2020
in ಕರ್ನಾಟಕ
0
ಡ್ರಗ್ಸ್ ಮಾಫಿಯಾ ವಸೂಲಿ ಹಣದಿಂದಲೇ ಮೈತ್ರಿ ಸರ್ಕಾರವನ್ನು ಉರುಳಿಸಲಾಗಿದೆ- HDK ಗಂಭೀರ ಆರೋಪ
Share on WhatsAppShare on FacebookShare on Telegram

ಡ್ರಗ್ಸ್ ಮಾಫಿಯಾ, ಬೆಟ್ಟಿಂಗ್ ದಂಧೆ ಮಾಡುವವರಿಂದ ವಸೂಲಿ ಮಾಡಿದ ಹಣದಿಂದಲೇ ನನ್ನ ಸರ್ಕಾರವನ್ನು ಬುಡಮೇಲು ಮಾಡಲಾಯಿತು ಎಂದು ಮಾಜಿ ಮುಖ್ಯಮಂತ್ರಿ ಹೆಚ್‌ ಡಿ ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ.

ಮಾಜಿ ಮುಖ್ಯಮಂತ್ರಿ ನೀಡಿರುವ ಹೇಳಿಕೆ ಕಳೆದ ಕೆಲವು ದಿನಗಳಿಂದ ರಾಜ್ಯದಲ್ಲಿ ಚರ್ಚಾ ವಿಷಯವಾಗಿರುವ ಡ್ರಗ್ಸ್‌ ಮಾಫಿಯಾದ ಬಗ್ಗೆ ಇನ್ನಷ್ಟು ಒಳಸುಳಿ ನೀಡಿದೆ. ಬೆಂಗಳೂರಿನಲ್ಲಿ ನಡೆದ ಭಾರೀ ಡ್ರಗ್ಸ್‌ ಬೇಟೆಯೊಂದಿಗೆ ಕನ್ನಡ ಚಿತ್ರರಂಗದಲ್ಲಿರುವ ಕೆಲವು ವ್ಯಕ್ತಿಗಳಿಗೆ ಡ್ರಗ್ಸ್‌ ಮಾಫಿಯಾದೊಂದಿಗೆ ಸಂಬಂಧವಿದೆಯೆಂದು ಆರೋಪಗಳು ಕೇಳಿಬರುತ್ತಿದೆ. ರಾಜಕೀಯಕ್ಕಿಂತಲೂ ಮೊದಲು ಚಿತ್ರರಂಗದಲ್ಲಿ ಕೆಲಸ ಮಾಡಿರುವ ಕುಮಾರಸ್ವಾಮಿಯ ಈ ಹೆಳಿಕೆಯೊಂದಿಗೆ ಡ್ರಗ್ ಮಾಫಿಯಾ ಮತ್ತು ಕನ್ನಡ ಸಿನೆಮಾ ಉದ್ಯಮದ ನಡುವಿನ ಸಂಬಂಧದ ಬಗ್ಗೆ ತನಿಖೆ ನಡೆಯುತ್ತಿರುವ ಈ ಹೊತ್ತಿಗೆ ಇನ್ನಷ್ಟು ಕುತೂಹಲಕಾರಿ ಅಂಶ ಸೇರಿಕೊಂಡಿದೆ.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ ಸುಧಾಕರ್‌ ಅವರನ್ನು ಗುರಿ ಮಾಡಿ ನಡೆಸಿದ ಟ್ವೀಟ್ದಾಳಿಯಲ್ಲಿ ಕುಮಾರಸ್ವಾಮಿ ಈ ಹೇಳಿಕೆ ನೀಡಿದ್ದಾರೆ. “ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ಅವರು ನನ್ನ ಹಿನ್ನೆಲೆ ಬಗೆಗೆ ಮಾತನಾಡಿದ್ದಾರೆ. ಬಹುಶಃ ಸುಧಾಕರ್ ಅವರಿಗೆ ಸ್ಮರಣಶಕ್ತಿ ಕಡಿಮೆ ಇದ್ದಂತಿದೆ. ರಾಜಕೀಯವಾಗಿ ಈಗಾಗಲೇ ಎಷ್ಟು ನೆಲೆಗಳನ್ನು ಬದಲಾಯಿಸಿ ರಾತ್ರೋರಾತ್ರಿ ವಿಮಾನ ಬದಲಿಸಿ ಓಡಾಡಿ ಬಂದವರು ನನ್ನ ಹಿನ್ನೆಲೆ ಬಗೆಗೆ ಮಾತನಾಡಿದರೆ ರಾಜ್ಯದ ಜನತೆ ನಗುತ್ತಾರೆ.” ಎಂದು ಕುಮಾರಸ್ವಾಮಿ ಟ್ವೀಟ್‌ ಮಾಡಿದ್ದಾರೆ.

ಡ್ರಗ್ಸ್ ಮಾಫಿಯಾ, ಬೆಟ್ಟಿಂಗ್ ದಂಧೆ ಮಾಡುವವರಿಂದ ವಸೂಲಿ ಮಾಡಿದ ಹಣದಿಂದಲೇ ನನ್ನ ಸರ್ಕಾರವನ್ನು ಬುಡಮೇಲು ಮಾಡಲಾಯಿತು ಎಂಬುದು ಸೂರ್ಯ-ಚಂದ್ರರಷ್ಟೇ ಸ್ಪಷ್ಟ. ಇದನ್ನು ಮುಂಬೈವೀರರು ಚೆನ್ನಾಗಿಯೇ ಬಲ್ಲರು. ಅದಕ್ಕೆ ಸಚಿವ ಸುಧಾಕರ್ ಹೊರತಲ್ಲ.
3/7

— H D Kumaraswamy (@hd_kumaraswamy) August 31, 2020


ಈ ಕುರಿತಂತೆ ಸರಣಿ ಟ್ವೀಟ್‌ ಮಾಡಿರುವ ಕುಮಾರಸ್ವಾಮಿ, ಡ್ರಗ್ಸ್ ಮಾಫಿಯಾ, ಬೆಟ್ಟಿಂಗ್ ದಂಧೆ ಮಾಡುವವರಿಂದ ವಸೂಲಿ ಮಾಡಿದ ಹಣದಿಂದಲೇ ನನ್ನ ಸರ್ಕಾರವನ್ನು ಬುಡಮೇಲು ಮಾಡಲಾಯಿತು ಎಂಬುದು ಸೂರ್ಯ-ಚಂದ್ರರಷ್ಟೇ ಸ್ಪಷ್ಟ. ಇದನ್ನು ಮುಂಬೈವೀರರು ಚೆನ್ನಾಗಿಯೇ ಬಲ್ಲರು. ಅದಕ್ಕೆ ಸಚಿವ ಸುಧಾಕರ್ ಹೊರತಲ್ಲ. ಸಚಿವ ಸ್ಥಾನ ಸಿಕ್ಕಿದೆ ಎಂಬ ಉತ್ಸಾಹದಲ್ಲಿ ನನ್ನ ಹಿನ್ನೆಲೆ-ಮುನ್ನೆಲೆ ಬಗೆಗೆ ಮಾತನಾಡುವುದು ಸುಧಾಕರ್ ಅವರ ನೈಜ ವ್ಯಕ್ತಿತ್ವವನ್ನು ಬಿಂಬಿಸುತ್ತದೆ. ಅಧಿಕಾರ ಶಾಶ್ವತ ಮತ್ತು ತಮ್ಮ ಸ್ವಂತ ಶಕ್ತಿ ಎಂಬ ಭ್ರಮೆಯಲ್ಲಿ ಇರುವವರು ಮಾತ್ರ ಹೀಗೆ ಮಾತನಾಡುತ್ತಾರೆ ಎಂಬುದು ನನ್ನ ಗ್ರಹಿಕೆ ಎಂದು ಹೇಳಿದ್ದಾರೆ.

ಕಳೆದ ಎರಡು ದಶಕಗಳಿಂದ ಸುಧಾಕರ್ ಅವರು ಯಾವ್ಯಾವ ನಾಯಕರಿಗೆ ಎಂತೆಂಥ ಸೇವೆಗಳನ್ನು ಮಾಡಿದ್ದಾರೆ ಎಂಬ ಹಿನ್ನೆಲೆ ಬಗೆಗೆ ನಾನು ಮಾತನಾಡಲಾರೆ.
5/7

— H D Kumaraswamy (@hd_kumaraswamy) August 31, 2020


ADVERTISEMENT

ಸುಧಾಕರ್‌ ವಿರುದ್ಧ ಸತತ ದಾಳಿ ನಡೆಸಿದ ಕುಮಾರಸ್ವಾಮಿ, ಕಳೆದ ಎರಡು ದಶಕಗಳಿಂದ ಸುಧಾಕರ್ ಅವರು ಯಾವ್ಯಾವ ನಾಯಕರಿಗೆ ಎಂತೆಂಥ ಸೇವೆಗಳನ್ನು ಮಾಡಿದ್ದಾರೆ ಎಂಬ ಹಿನ್ನೆಲೆ ಬಗೆಗೆ ನಾನು ಮಾತನಾಡಲಾರೆ. ಜನಸೇವೆಯಲ್ಲಿ ವಿಶ್ವಾಸವಿಟ್ಟು ರಚ‌ನೆಗೊಂಡ ಸರಕಾರವೊಂದು ಮಾಫಿಯಾದ ಹಣದಿಂದ ಹೇಗೆ ಬುಡಮೇಲಾಯಿತು ಎಂಬುದಷ್ಟನ್ನೇ ಜನತೆಯ ಮುಂದೆ ಹೇಳಿದ್ದೇನೆ. ಆದರೆ ಸಚಿವ ಸುಧಾಕರ್ ಹೆಗಲು ಮುಟ್ಟಿಕೊಳ್ಳುವ ಪ್ರಮೇಯ ಉದ್ಭವಿಸಿದ್ದು ಏಕೆಂದು ಅರ್ಥವಾಗಲಿಲ್ಲ ಎಂದಿದ್ದಾರೆ.

ಇಂತಹ ಮಾಫಿಯಾಗಳಿಂದ ಹಣ ಪಡೆದು ಸರ್ಕಾರವನ್ನು ಉರುಳಿಸುವ ಯತ್ನ ಮಾಡುವ ಕಿಂಗ್‌ಪಿನ್‌ಗಳ ಕುರಿತಾಗಿ ತನಿಖೆ ನಡೆಸಲು 2018ರಲ್ಲೇ ಕುಮಾರಸ್ವಾಮಿಯವರು ಆದೇಶ ನೀಡಿದ್ದರು. ಆದರೆ, ಆ ತನಿಖೆಯಿಂದ ಯಾವುದೇ ಪ್ರಯೋಜನವಾಗಿರಲಿಲ್ಲ ಎಂದು ದಿ ಹಿಂದೂ ವರದಿ ಮಾಡಿದೆ.

Tags: ಎಚ್ ಡಿ ಕುಮಾರಸ್ವಾಮಿಕನ್ನಡ ಚಿತ್ರರಂಗಡಾ. ಕೆ ಸುಧಾಕರ್ಡ್ರಗ್‌ ಮಾಫಿಯಾಮೈತ್ರಿ ಸರ್ಕಾರ
Previous Post

ಅಸಂಘಟಿತ ವಲಯದ ಜನರನ್ನು ಗುಲಾಮರನ್ನಾಗಿಸುತ್ತಿರುವ ಮೋದಿ- ರಾಹುಲ್ ಆರೋಪ

Next Post

ಅನ್‌ಲಾಕ್ 4: ಮೆಟ್ರೋ ಸಂಚಾರ ಹಾಗೂ ಕೆ ಆರ್ ಮಾರ್ಕೆಟ್ ಆರಂಭ

Related Posts

AI ತಂತ್ರಜ್ಞಾನದ ಜಾಗತಿಕ ಕೇಂದ್ರವಾಗಿ ಕರ್ನಾಟಕ: ಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದೇನು..?
Top Story

AI ತಂತ್ರಜ್ಞಾನದ ಜಾಗತಿಕ ಕೇಂದ್ರವಾಗಿ ಕರ್ನಾಟಕ: ಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದೇನು..?

by ಪ್ರತಿಧ್ವನಿ
July 14, 2026
0

ಬೆಂಗಳೂರು: ಬೆಂಗಳೂರಿನಲ್ಲಿ ಭಾರತದ ಮೊದಲ ಸರ್ಕಾರಿ ಪ್ರಾಯೋಜಿತ ಕೃತಕ ಬುದ್ಧಿಮತ್ತೆ (AI) ವಿಶ್ವವಿದ್ಯಾಲಯ ಆರಂಭಿಸುವುದಾಗಿ ಸಿಎಂ ಡಿ.ಕೆ ಶಿವಕುಮಾರ್ ಘೋಷಿಸಿದರು. https://youtu.be/_88MGrTJXb0?si=TMbaKMg2Dn5lzJUR ಬೆಂಗಳೂರು ಅಂತಾರಾಷ್ಟ್ರೀಯ ವಸ್ತು ಪ್ರದರ್ಶನ...

Read moreDetails
FIFA World Cup 2026: ಬೆಂಗಳೂರಿನ ಫುಟ್ಬಾಲ್ ಪ್ರಿಯರಿಗಾಗಿ ಸರ್ಕಾರದಿಂದ ಗುಡ್ ನ್ಯೂಸ್!

FIFA World Cup 2026: ಬೆಂಗಳೂರಿನ ಫುಟ್ಬಾಲ್ ಪ್ರಿಯರಿಗಾಗಿ ಸರ್ಕಾರದಿಂದ ಗುಡ್ ನ್ಯೂಸ್!

July 14, 2026
H.D Deve Gowda:ಬಿಡದಿ ಟೌನ್​​ಶಿಪ್​​ ಯೋಜನೆ ಕೈಬಿಡುವಂತೆ ಸಿಎಂಗೆ ದೇವೇಗೌಡರ ಪತ್ರ: ಹೋರಾಟದ ಎಚ್ಚರಿಕೆ!

H.D Deve Gowda:ಬಿಡದಿ ಟೌನ್​​ಶಿಪ್​​ ಯೋಜನೆ ಕೈಬಿಡುವಂತೆ ಸಿಎಂಗೆ ದೇವೇಗೌಡರ ಪತ್ರ: ಹೋರಾಟದ ಎಚ್ಚರಿಕೆ!

July 14, 2026
Bidadi Township: ಬಿಡದಿ ಟೌನ್‌ಶಿಪ್‌ ವಿವಾದ: 20ಕ್ಕೂ ಹೆಚ್ಚು ರೈತರ ವಿರುದ್ಧ FIR

Bidadi Township: ಬಿಡದಿ ಟೌನ್‌ಶಿಪ್‌ ವಿವಾದ: 20ಕ್ಕೂ ಹೆಚ್ಚು ರೈತರ ವಿರುದ್ಧ FIR

July 14, 2026
ದುರಂತದ ಮಧ್ಯೆಯೂ ರಾಜಕೀಯ! ವಯನಾಡ್‌ನಿಂದ ಮಣಿಪುರದವರೆಗೆ ವಾಗ್ಯುದ್ಧ

ದುರಂತದ ಮಧ್ಯೆಯೂ ರಾಜಕೀಯ! ವಯನಾಡ್‌ನಿಂದ ಮಣಿಪುರದವರೆಗೆ ವಾಗ್ಯುದ್ಧ

July 14, 2026
Next Post
ಅನ್‌ಲಾಕ್ 4: ಮೆಟ್ರೋ ಸಂಚಾರ ಹಾಗೂ ಕೆ ಆರ್ ಮಾರ್ಕೆಟ್ ಆರಂಭ

ಅನ್‌ಲಾಕ್ 4: ಮೆಟ್ರೋ ಸಂಚಾರ ಹಾಗೂ ಕೆ ಆರ್ ಮಾರ್ಕೆಟ್ ಆರಂಭ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada