• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಯಲಹಂಕ ಮೇಲ್ಸೇತುವೆ: ಕನ್ನಡ ಹೋರಾಟಗಾರರ ಬಂಧನ, ಸರ್ಕಾರದ ವಿರುದ್ಧ ಹೆಚ್ಚಾದ ಆಕ್ರೋಶ

by
September 8, 2020
in ಕರ್ನಾಟಕ
0
ಯಲಹಂಕ ಮೇಲ್ಸೇತುವೆ: ಕನ್ನಡ ಹೋರಾಟಗಾರರ ಬಂಧನ
Share on WhatsAppShare on FacebookShare on Telegram

ರಾಜ್ಯದಲ್ಲಿ ಭಾರೀ ಸಂಚಲನ ಮೂಡಿಸಿದ್ದ ಯಲಹಂಕ ಮೇಲ್ಸೇತುವೆಗೆ ಕೊನೆಗೂ ಸರ್ಕಾರ ಸಾವರ್ಕರ್‌ ಹೆಸರನ್ನೇ ಅಂತಿಮ ಗೊಳಿಸಿದೆ. ಮೇ 28 ರಂದು ಉದ್ಘಾಟನೆಗೊಳ್ಳಬೇಕಿದ್ದ ಮೇಲ್ಸೇತುವೆ‌ ಕಾರಣಾಂತರಗಳಿಂದ ಮುಂದೂಡಿ ಸೆಪ್ಟಂಬರ್ 1ಕ್ಕೆ ಉದ್ಘಾಟನೆಯಾಗುವುದೆಂದು ನಿಗದಿಯಾಗಿತ್ತು. ಮಾಜಿ ರಾಷ್ಟ್ರಪತಿ ಪ್ರಣಬ್‌ ಮುಖರ್ಜಿ ನಿಧನದ ಹಿನ್ನೆಲೆಯಲ್ಲಿ ಎರಡನೇ ಬಾರಿ ಸೇತುವೆ ಉದ್ಘಾಟನೆ ಮುಂದೂಡಲ್ಪಟ್ಟು ಅಂತಿಮವಾಗಿ ಸೆಪ್ಟೆಂಬರ್‌ 8ರ ಮಧ್ಯಾಹ್ನ 12 ಗಂಟೆಗೆ ಉದ್ಘಾಟನೆಯಾಗಲಿದೆ.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ಕರ್ನಾಟಕದಲ್ಲಿ ಕನ್ನಡಿಗ ಸ್ವಾತಂತ್ರ್ಯ ಹೋರಾಟಗಾರನ ಹೆಸರು ಮೇಲ್ಸೇತುವೆ ಇಡುವಂತೆ ಆಗ್ರಹಿಸಿ ಪ್ರತಿಪಕ್ಷಗಳು, ಕನ್ನಡ ಪರ ಸಂಘಟನೆಗಳು ಆಗ್ರಹಿಸಿದ್ದವು. ಸಂಗೊಳ್ಳಿ ರಾಯಣ್ಣನ ಹೆಸರು ಇಡುವಂತೆ ಸಲಹೆಗಳೂ ಕೇಳಿಬಂದಿದ್ದವು. ಆದರೆ ರಾಷ್ಟ್ರೀಯ ಬಿಜೆಪಿ ಪಕ್ಷ ಕನ್ನಡ ವಿರೋಧಿ ಧೋರಣೆ ತೋರುತ್ತಿದೆ ಎಂಬ ಆರೋಪ ಕೇಳಿ ಬರುತ್ತಿರುವ ಹೊರತಾಗಿಯೂ ಬಿಜೆಪಿ ಸರ್ಕಾರ ಕನ್ನಡಿಗನಲ್ಲದ ಸಾವರ್ಕರ್‌ ಹೆಸರು ಇಟ್ಟಿದೆ.

ಕನ್ನಡ ಪರ ಸಂಘಟನೆ, ರಾಜಕೀಯ ಪಕ್ಷಗಳಿಂದ ಪ್ರತಿಭಟನೆ: ಬಂಧನ

ಯಲಹಂಕ ಮೇಲ್ಸೇತುವೆ ವಿಚಾರ ಕುರಿತಾಗಿ ಪ್ರತಿಕ್ರಿಯಿಸಿರುವ ಕೆಆರ್‌ಎಸ್‌ ಪಕ್ಷದ ಅಧ್ಯಕ್ಷ ರವಿಕೃಷ್ಣಾ ರೆಡ್ಡಿ, “ಯಲಹಂಕದ ಮೇಲ್ಸೇತುವೆಗೆ ಹೆಸರಿಡುವ ವಿಚಾರದಲ್ಲಿ ಕರ್ನಾಟಕದ ಜನತೆಯಿಂದ ಗಂಭೀರವಾದ, ಸಕಾರಣವಾದ ವಿರೋಧ ಇದ್ದರೂ ಯಡಿಯೂರಪ್ಪ ಸರ್ಕಾರ ಆ ಜನಾಭಿಪ್ರಾಯವನ್ನು ಕಡೆಗಣಿಸಿ ಮುಂದುವರೆಯುತ್ತಿರುವುದು ಅಕ್ಷಮ್ಯ. ಕನ್ನಡಿಗರ ಭಾವನೆಗಳಿಗೆ ಬೆಲೆ ನೀಡದ ಸರ್ಕಾರದ ನಡೆಯನ್ನು ಕೆಆರ್‌ಎಸ್‌ ಪಕ್ಷ ಖಂಡಿಸುತ್ತದೆ. ಹೇರಿಕೆ ಸಲ್ಲದು. ಒಪ್ಪಿತ ಹೆಸರು ಇಡಿ.ʼ ಎಂದು ಆಗ್ರಹಿಸಿದ್ದಾರೆ.

ಇನ್ನು ಮೇಲ್ಸೇತುವೆ ಉದ್ಘಾಟನೆಗೂ ಮುನ್ನ ಕನ್ನಡ ಪರ ಸಂಘಟನೆಯ ಹೋರಾಟಗಾರರನ್ನು ಬಂಧಿಸಿರುವ ಸರ್ಕಾರದ ನಡೆಯ ವಿರುದ್ಧ ಕನ್ನಡ ಹೋರಾಟಗಾರರು ಆಕ್ರೋಶ ವ್ಯಕ್ತಪಡಿಸದ್ದಾರೆ.

ಯಲಹಂಕ ಮೇಲ್ಸೆತುವೆ ವಿಚಾರವಾಗಿ ಇಂದು ಬೆಳಿಗ್ಗೆ ಕರ್ನಾಟಕ ರಣಧೀರ ಪಡೆ ರಾಜ್ಯಾಧ್ಯಕ್ಷರಾದ ಭೈರಪ್ಪ ಹರೀಶ್‌ ಕುಮಾರ್‌ ಅವರನ್ನು ಅಮೃತಹಳ್ಳಿ ಪೋಲಿಸ್ ಠಾಣೆಯವರು ಬಂಧಿಸಿದ್ದಾರೆ. ಒಬ್ಬ ಹೋರಾಟಗಾರನನ್ನು ಬಂಧಿಸಿ ಯಲಹಂಕ ಮೇಲ್ಸೇತುವೆ ಉದ್ಘಾಟನಾ ಮಾಡೋ ಪರಿಸ್ಥಿತಿ ನಮ್ಮ ರಾಜ್ಯ ಸರ್ಕಾರಕ್ಕೆ ಬಂದಿದೆ ಎಂದು ಮಂಜು ಗಣಪತಿ ಎಂಬವರು ಸಾಮಾಜಿಕ ಜಾಲತಾಣದಲ್ಲಿ ಬರೆದಿದ್ದಾರೆ.

ತನ್ನನ್ನು ಬಂಧಿಸಿರುವುದಾಗಿ ಸ್ವತಃ ಭೈರಪ್ಪ ಹರೀಶ್‌ ಕುಮಾರ್‌ ಫೇಸ್‌ಬುಕ್‌ ಮೂಲಕ ಹೇಳಿಕೊಂಡಿದ್ದಾರೆ.

ಯಲಹಂಕ ಮೇಲ್ಸೇತುವೆಗೆ ವಿಚಾರದಲ್ಲಿ
ಬೆಳಗ್ಗೆ ನನ್ನ ಮನೆಯಲ್ಲಿ
ಪೋಲೀಸರು ನನ್ನನ್ನು ಬಂಧಿಸಿದ್ದಾರೆ …

Posted by ಭೈರಪ್ಪ ಹರೀಶ್ ಕುಮಾರ್ on Monday, September 7, 2020

ಯಲಹಂಕ ಮೇಲ್ಸೇತುವೆಗೆ ಸಾವರ್ಕರ್ ಹೆಸರನ್ನು ಅಂತಿಮಗೊಳಿಸಿ,ರಾಜ್ಯ ಸರ್ಕಾರ ಉದ್ಘಾಟನೆಗೆ ಮುಂದಾಗಿದೆ. ನಮ್ಮದೇ ಬೆಳಗಾವಿಯಲ್ಲಿ ರಾಯಣ್ಣನ ಪ್ರತಿಮೆಯನ್ನು ಪ್ರತಿಷ್ಠಾಪಿಸಲು ಹರಸಾಹಸ ಪಟ್ಟಿದ್ದೇವೆ ಹೀಗಿರುವಾಗ, ಕರ್ನಾಟಕಕ್ಕೆ ಯಾವುದೇ ಸಂಬಂಧವಿಲ್ಲದ ವ್ಯಕ್ತಿಯ ಹೆಸರನ್ನು ಸಾರ್ವಜನಿಕ ಮೇಲ್ಸೇತುವೆಗೆ ಇಡುವುದನ್ನು ಜೆಡಿಎಸ್ ಪಕ್ಷ ವಿರೋಧಿಸುತ್ತದೆ ಎಂದು ಜೆಡಿಎಸ್‌ ಹೇಳಿಕೊಂಡಿದೆ.

@CMofKarnataka @BSBommai ಪ್ರತಿಭಟನೆ ಪ್ರಜಾಪ್ರಭುತ್ವದಲ್ಲಿ ಸಾಂವಿಧಾನಿಕ ಹಕ್ಕು
ಅದನ್ನ ಯಾವುದೇ ಕಾರಣಕ್ಕೂ ಕಸಿಯುವ ಪ್ರಯತ್ನ ಮಾಡಬಾರದು. ಅದು ಪ್ರಜಾಪ್ರಭುತ್ವದ ಕೊಲೆ
ಯಲಹಂಕ ಮೇಲ್ಸೇತುವೆಗೆ ಕರುನಾಡಿನ ಸಾಧಕರ ಹೆಸರು ಮಾತ್ರವೇ ಇಡಬೇಕು
ಕರುನಾಡು ನಿಮ್ಮ ನಾಗಪುರದ ಜಾಗೀರು ಅಲ್ಲ, ಅವರು ಹೇಳಿದ್ದು ಮಾಡೋಕೆ
ಪೂರ್ಣಚಂದ್ರ ತೇಜಸ್ವಿ ಹೆಸರಿಡಿ https://t.co/vDLz1nV9KA

— ಕೃಷಿಕ ಎವಿ/Krushika AV (@KrishKrushik) September 8, 2020


ಬೆಂಗಳೂರು ಯುವ ಜನತಾದಳದ ಅಧ್ಯಕ್ಷ ಪ್ರವೀಣ್ ಕುಮಾರ್ ಅವರನ್ನು ಪ್ರತಿಭಟನೆಯ ಭಯದಿಂದ ಸರ್ಕಾರ ಬಂಧಿಸಿದ್ದು, ಯಲಹಂಕ ಮೇಲ್ಸೇತುವೆಗೆ ಮಹಾರಾಷ್ಟ್ರದ ಸಾವರ್ಕರ್ ಹೆಸರಿಡುವುದನ್ನು ವಿರೋಧಿಸಿ ಶಾಂತಿಯುತ ಪ್ರತಿಭಟನೆ ನಡೆಸಲು ಅವಕಾಶ ನೀಡದ ಸರ್ವಾಧಿಕಾರಿ ಧೋರಣೆಯಿಂದ ರಾಜ್ಯ ಸರ್ಕಾರ ನಡೆದುಕೊಳ್ಳುತ್ತಿದೆ. ಇದು ಜನವಿರೋಧಿ ಸರ್ಕಾರದ ಭಂಡ ನಡೆ ಎಂದೂ ಜೆಡಿಎಸ್‌ ಹೇಳಿದೆ.

ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ದಿನದಿಂದಲೂ ನಾಡವಿರೋಧಿ ನೀತಿಯನ್ನು ಅನುಸರಿಸುತ್ತಿದೆ, ಯಲಹಂಕ ಮೇಲ್ಸೇತುವೆಗೆ ಸಾವರ್ಕರ್ ಹೆಸರನ್ನು ನಾಮಕರಣ ಮಾಡುತ್ತಿರುವುದೂ ಕೂಡ ಬಿಜೆಪಿ ಸರ್ಕಾರದ ನಾಡವಿರೋಧಿ ಧೋರಣೆಯ ಮುಂದುವರಿದ ಭಾಗ ಎಂದು JDS ಬೆಂಗಳೂರು ನಗರ ಅಧ್ಯಕ್ಷ ಆರ್‌ ಪ್ರಕಾಶ್‌ ಹೇಳಿದ್ದಾರೆ.

ಯಲಹಂಕ ಮೇಲು ಸೇತುವೆಗೆ ಕೊನೆಗೂ ಸಾವರ್ಕರ್ ಹೆಸರನ್ನು ಇಡಲು ಹೊರಟಿರುವ ರಾಜ್ಯ @BJP4Karnataka ಸರ್ಕಾರ ದೇಶಭಕ್ತಿ ಮತ್ತು ರಾಷ್ಟ್ರಪ್ರೇಮದ ಬಗ್ಗೆ ಮಾತನಾಡುವ ನೈತಿಕತೆಯನ್ನು ಕಳೆದುಕೊಂಡಿದೆ.
ಬಿಜೆಪಿಯು ದ್ರೋಹಿಗಳನ್ನು ನಂಬುವಷ್ಟು ರಾಯಣ್ಣನನ್ನು ನಂಬಲಿಲ್ಲ‌ ಎನ್ನುವುದು ಈ ಹೊತ್ತಿನ ದುರಂತ!https://t.co/glwdGrYWQu

— Dr. Syed Roshan Abbas (@DrRoshanAbbas) September 8, 2020


ADVERTISEMENT

ಜನಾಂದೋಲನ ಆಗುವವರೆಗೆ ಸಂಗೊಳ್ಳಿ ರಾಯಣ್ಣನವರ ಪ್ರತಿಮೆಯ ವಿಷಯದಲ್ಲಿ ಆಸಕ್ತಿ ತೋರದ ರಾಜ್ಯ ಬಿಜೆಪಿ ಸರ್ಕಾರ, ಗಾಂಧಿ ಹತ್ಯಾ ಆರೋಪಿಯಾದ ಸಾವರ್ಕರ್ ಹೆಸರನ್ನು ಯಲಹಂಕ ಮೇಲು ಸೇತುವೆಗೆ ನಾಮಕರಣ ಮಾಡಲು ಹೊರಟಿರುವುದು ನಿಜಕ್ಕೂ ನಾಚಿಕೆಗೇಡಿನ ಮತ್ತು ದೇಶದ್ರೋಹಿ ಕೆಲಸ ಎಂದು ಕಾಂಗ್ರೆಸ್‌ ಆರೋಪಿಸಿದೆ.

Tags: ಕನ್ನಡ ಹೋರಾಟಗಾರರುಬಿಜೆಪಿಯಲಹಂಕ ಫ್ಲೈಓವರ್‌ವಿನಾಯಕ ದಾಮೋದರ ಸಾವರ್ಕರ್ಸಂಗೊಳ್ಳಿ ರಾಯಣ್ಣ
Previous Post

ಕೋವಿಡ್ -19 ಮೊದಲು ಮಾನಸಿಕ ಆರೋಗ್ಯಕ್ಕೆ ಆದ್ಯತೆ ನೀಡದೆ ಈಗ ಬೆಲೆ ತೆರುತ್ತಿರುವ ಭಾರತ

Next Post

ಈ ಬಾರಿಯ ದಸರಾ ಆಚರಣೆ ಅರಮನೆಗೆ ಮಾತ್ರ ಸೀಮಿತ

Related Posts

ವಿದ್ಯಾರ್ಥಿಗಳ ದುಡುಕಿನ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ
ಕರ್ನಾಟಕ

ಇನ್ನು ಪಿಯುಸಿ ಅಂಕಪಟ್ಟಿ ಮುಂದಿನ ವರ್ಷದಿಂದ  ಹೀಗಿರಲಿದೆ ! ಮಧು ಬಂಗಾರಪ್ಪ ಮಹತ್ವದ ಹೇಳಿಕೆ

by ಪ್ರತಿಧ್ವನಿ
April 10, 2026
0

ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗುವ ವಿದ್ಯಾರ್ಥಿಗಳಿಗೆ ಮುಂದಿನ ಶೈಕ್ಷಣಿಕ ಸಾಲಿನಿಂದ ಮುದ್ರಿತ ಅಂಕಪಟ್ಟಿ ನೀಡುವ ಪದ್ಧತಿಗೆ ಸರ್ಕಾರ ತೆರೆ ಎಳೆಯಲು ನಿರ್ಧರಿಸಿದೆ. ಬದಲಿಗೆ ಡಿಜಿಟಲ್ ಅಂಕಪಟ್ಟಿಯನ್ನೇ ಅಧಿಕೃತವಾಗಿ...

Read moreDetails
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

April 9, 2026
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

April 9, 2026
Next Post
ಈ ಬಾರಿಯ ದಸರಾ ಆಚರಣೆ ಅರಮನೆಗೆ ಮಾತ್ರ ಸೀಮಿತ

ಈ ಬಾರಿಯ ದಸರಾ ಆಚರಣೆ ಅರಮನೆಗೆ ಮಾತ್ರ ಸೀಮಿತ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada