• Home
  • About Us
  • ಕರ್ನಾಟಕ
Sunday, January 18, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಶಿರಾ: ಉಪಚುನಾವಣೆ ಘೋಷಣೆಗೂ ಮುನ್ನ ಕಾಂಗ್ರೆಸ್‌ ಒಳಗೆ ಭಿನ್ನಮತದ ಹೊಗೆ..!

by
September 15, 2020
in ಕರ್ನಾಟಕ
0
ಶಿರಾ: ಉಪಚುನಾವಣೆ ಘೋಷಣೆಗೂ ಮುನ್ನ ಕಾಂಗ್ರೆಸ್‌ ಒಳಗೆ ಭಿನ್ನಮತದ ಹೊಗೆ..!
Share on WhatsAppShare on FacebookShare on Telegram

ತುಮಕೂರು ಜಿಲ್ಲೆಯ ಶಿರಾ ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದ ಸತ್ಯನಾರಾಯಣ ಅಕಾಲಿಕ ನಿಧನದಿಂದ ತೆರವಾಗಿರುವ ಸ್ಥಾನಕ್ಕೆ ಶೀಘ್ರದಲ್ಲೇ ಉಪಚುನಾವಣೆ ಘೋಷಣೆ ಆಗಲಿದೆ. ಸತ್ಯನಾರಾಯಣ ಅವರು ಜೆಡಿಎಸ್‌ನಿಂದ ಆಯ್ಕೆಯಾಗಿದ್ದರಿಂದ ಸಹಜವಾಗಿಯೇ ಕ್ಷೇತ್ರವನ್ನು ಉಳಿಸಿಕೊಳ್ಳಲು ಜೆಡಿಎಸ್ ನಾಯಕರು ಕಸರತ್ತು ನಡೆಸುತ್ತಿದ್ದಾರೆ. ಸತ್ಯನಾರಾಯಣ ಅವರ ಹೆಂಡತಿಯನ್ನು ಅಥವಾ ಅವರ ಪುತ್ರನನ್ನು ಕಣಕ್ಕಿಳಿಸುವ ಮೂಲಕ ಸಾವಿನ ಅನುಕಂಪವನ್ನು ಗಿಟ್ಟಿಸಲು ಯೋಜನೆ ರೂಪಿಸುತ್ತಿದ್ದಾರೆ.

ADVERTISEMENT

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ಆದರೆ ಹಲವು ವರ್ಷಗಳಿಂದ ಕ್ಷೇತ್ರದಲ್ಲಿ ಹಿಡಿತ ಸಾಧಿಸಿಕೊಂಡು ಬಂದಿರುವ ಮಾಜಿ ಕಾನೂನು ಸಚಿವ ಟಿ.ಬಿ ಜಯಚಂದ್ರ ಕಳೆದ ಬಾರಿಯ ಸೋಲಿನ ನೋವನ್ನು ಉಪಚುನಾವಣೆ ಗೆಲುವಲ್ಲಿ ಮರೆಯಲು ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಇದರ ಅಂಗವಾಗಿಯೇ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ. ಆದರೆ ಕಾಂಗ್ರೆಸ್ ಗೆಲ್ಲುವ ಅವಕಾಶ ಇದ್ದರೂ ಕೈ ಚೆಲ್ಲುವ ಸಾಧ್ಯತೆ ಹೆಚ್ಚಾಗಿದೆ.

ಸ್ವಪಕ್ಷೀಯ ಹೊಡೆತ ಕಂಡುಕೊಂಡ ಡಿಕೆ ಶಿವಕುಮಾರ್..!

ಶಿರಾ ವಿಧಾನಸಭಾ ಚುನಾವಣೆಯಲ್ಲಿ ಒಳ ಏಟು ಬೀಳುವ ಎಲ್ಲಾ ಸಾಧ್ಯತೆಗಳೂ ಕಾಣಿಸುತ್ತಿವೆ. ಇದನ್ನು ಅರಿತ ಕಾಂಗ್ರೆಸ್‌ ರಾಜ್ಯ ಅಧ್ಯಕ್ಷ ಡಿ.ಕೆ ಶಿವಕುಮಾರ್‌, ಸಿದ್ದರಾಮಯ್ಯ ಅವರಿಗೆ ಕರೆ ಮಾಡಿ ಕೆ.ಎನ್‌. ರಾಜಣ್ಣ ಅವರನ್ನು ಸಮಾಧಾನ ಮಾಡುವಂತೆ ಮನವಿ ಮಾಡಿದ್ದಾರೆ. ಕಾಂಗ್ರೆಸ್‌ನಿಂದ ಕಳದ ಬಾರಿ ಪರಜಯ ಪಡೆದಿದ್ದ ಟಿ.ಬಿ ಜಯಚಂದ್ರ ಅವರನ್ನೇ ಅಭ್ಯರ್ಥಿಯನ್ನಾಗಿ ಘೋಷಣೆ ಮಾಡುವ ಸಾಧ್ಯತೆ ದಟ್ಟವಾಗಿದೆ. ಆದರೆ ಕಳೆದ ಲೋಕಸಭಾ ಚುನಾವಣೆಯಲ್ಲಿ ಅಡ್ಡಗಾಲು ಹಾಕಿದಂತೆಯೇ ಈ ಬಾರಿಯೂ ಅಡ್ಡಗಾಲು ಹಾಕುವುದರಿಂದ ಪಕ್ಷದ ಅಭ್ಯರ್ಥಿ ಸೋಲುಣ್ಣಬೇಕಾಗುತ್ತೆ ಎನ್ನುವ ಆತಂಕ ಕಾಂಗ್ರೆಸ್‌ ನಾಯಕರನ್ನು ಕಾಡುತ್ತಿದೆ. ಒಂದು ವೇಳೆ ಕಾಂಗ್ರೆಸ್‌ ಅಭ್ಯರ್ಥಿ ಎದುರು ಕೆ.ಎನ್‌ ರಾಜಣ್ಣನೋ ಅಥವಾ ರಾಜಣ್ಣನ ಬೆಂಬಲಿಗರೋ ಬಂಡಾಯವಾಗಿ ಸ್ಪರ್ಧೆ ಮಾಡಿದರೆ ಕಾಂಗ್ರೆಸ್‌ ಮತಗಳು ಹರಿದು ಹಂಚಿ ಹೋಗಲಿವೆ. ಹಾಗಾಗಿ ಸಮಾಧಾನ ಮಾಡುವಂತೆ ಡಿ.ಕೆ ಶಿವಕುಮಾರ್‌ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿಕೊಂಡಿದ್ದಾರೆ.

ಕೆ.ಎನ್‌. ರಾಜಣ್ಣ

ಲೋಕಸಭಾ ಚುನಾವಣೆಯಲ್ಲಿ ಗೌಡರನ್ನು ಸೋಲಿಸಿದ್ದ ರಾಜಣ್ಣ..!

ಕಳೆದ ಲೋಕಸಭಾ ಚುನಾವಣೆಯಲ್ಲಿ ಮಾಜಿ ಪ್ರಧಾನಿ ಹೆಚ್‌.ಡಿ ದೇವೇಗೌಡರು, ತುಮಕೂರು ಕ್ಷೇತ್ರದಿಂದ ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿದ್ದರು. ಕಾಂಗ್ರೆಸ್‌, ಜೆಡಿಎಸ್‌ ಮೈತ್ರಿ ಸರ್ಕಾರ ಇದ್ದ ಕಾರಣ ರಾಜ್ಯದಲ್ಲೂ ಜೆಡಿಎಸ್‌, ಕಾಂಗ್ರೆಸ್‌ ಮೈತ್ರಿ ಮಾಡಿಕೊಂಡೇ ಬಿಜೆಪಿಯನ್ನು ಎದುರಿಸುವ ನಿರ್ಧಾರ ಮಾಡಿದ್ದರು. ಅದರೆ ಇದೇ ಕೆ.ಎನ್‌ ರಾಜಣ್ಣ ಮುದ್ದಹನುಮೇಗೌಡರ ಜೊತೆಗೆ ಬಂದು ತಾನೂ ಕೂಡ ನಾಮಪತ್ರ ಸಲ್ಲಿಕೆ ಮಾಡಿದ್ದರು. ಆ ಬಳಿಕ ನಾಮಪತ್ರ ವಾಪಸ್‌ ಪಡೆದರೂ ದೇವೇಗೌಡರ ವಿರುದ್ಧ ಅಪಪ್ರಚಾರ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಆದರೂ ಮೈತ್ರಿ ಸರ್ಕಾರದ ನಾಯಕರೇ ಆಯ್ಕೆ ಮಾಡಿ, ಹೊಂದಾಣಿಕೆ ಮಾಡಿಕೊಂಡು ಚುನಾವಣೆಗೆ ನಿಲ್ಲಿಸಿದ್ದರೂ ದೇವೇಗೌಡರು ರಾಜಕೀಯದ ಅಳಿವಿನಲ್ಲಿ ನಿಂತು ಸೋಲುಂಡು ಪೆಚ್ಚು ಮೋರೆ ಹಾಕಿಕೊಳ್ಳಬೇಕಾಯಿತು. ಇದಕ್ಕೆಲ್ಲಾ ಪ್ರಮುಖ ಕಾರಣ ಕೆ.ಎನ್‌ ರಾಜಣ್ಣ ಎನ್ನುವುದು ರಾಜಕೀಯ ಬಲ್ಲ ಎಲ್ಲರಿಗೂ ಗೊತ್ತಿದೆ.

ಇದೀಗ ಮತ್ತೆ ಶಿರಾ ಕ್ಷೇತ್ರದ ಮೇಲೆ ಕೆ.ಎನ್‌ ರಾಜಣ್ಣ ಕಣ್ಣಿಟ್ಟಿದ್ದಾರೆ. ಡಿಸಿಸಿ ಬ್ಯಾಂಕ್‌ ಅಧ್ಯಕ್ಷರಾಗಿದ್ದ ಕೆ.ಎನ್‌ ರಾಜಣ್ಣ ಬೆಂಬಲಿಗರು ಪ್ರತಿಯೊಂದು ಕ್ಷೇತ್ರದಲ್ಲೂ ಇದ್ದಾರೆ. ಹಾಗಾಗಿ ಜಿಲ್ಲೆಯ ಯಾವುದೇ ವಿಚಾರದಲ್ಲೂ ಕೆ.ಎನ್‌ ರಾಜಣ್ಣ ಮೂಗು ತೂರಿಸುವಂತಾಗಿದೆ. ಗೆಲ್ಲಿಸುವಷ್ಟು ಕಾರ್ಯಕರ್ತರ ಬೆಂಬಲ ಇಲ್ಲದಿದ್ದರೂ ಸಣ್ಣ ಪ್ರಮಾಣದ ಮತಗಳನ್ನು ಚದುರಿಸಬಲ್ಲರು. ಇದೇ ಕಾರಣಕ್ಕೆ ಸಾಕಷ್ಟು ದೂರ ಮುಂದುವರಿಯುವ ಮೊದಲೇ ಕೆ.ಎನ್‌ ರಾಜಣ್ಣ ಅವರನ್ನು ಕರೆದು ಒಮ್ಮೆ ಮಾತನಾಡಿ ಎಂದು ವಿರೋಧ ಪಕ್ಷದ ನಾಯಕ ಆಗಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಕರೆ ಮಾಡಿ ಮಾತುಕತೆ ನಡೆಸಿದ್ದಾರೆ. ಸುಮಾರು 20 ನಿಮಿಷಕ್ಕೂ ಹೆಚ್ಚು ಕಾಲ ಚರ್ಚೆ ಮಾಡಿರುವ ಉಭಯ ನಾಯಕರು, ಶಿರಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಗೆಲ್ಲುಲು ಮಾಡಿಕೊಳ್ಳಬೇಕಾದ ಯೋಜನೆಗಳ ಬಗ್ಗೆ ಚರ್ಚೆಮಾಡಿದ್ದಾರೆ.

ತುಮಕೂರು ತನ್ನ ಹಿಡಿತಕ್ಕೆ ಬರಬೇಕು ಎನ್ನುವುದು ಕೆಎನ್ ರಾಜಣ್ಣ ಹಪಾಹಪಿ, ಆದರೆ ನಾನು ಹಿರಿಯ ನಾಯಕ ನಾನು ಕೆಪಿಸಿಸಿ ಅಧ್ಯಕ್ಷನಾಗಿದ್ದವನು ನನ್ನ ಹಿಡಿತದಲ್ಲೇ ಇರಬೇಕು ಎನ್ನುವುದು ಡಾ ಜಿ.ಪರಮೇಶ್ವರ್‌ ಅವರ ಒತ್ತಾಸೆ. ಆಗಸ್ಟ್‌ 29 ರಂದು ಮಾತನಾಡಿದ್ದ ಡಾ ಜಿ ಪರಮೇಶ್ವರ್‌, ಶಿರಾ ಕ್ಷೇತ್ರದಲ್ಲಿ ಈಗಾಗಲೇ ಸೋಲುಂಡಿರುವ ಟಿ.ಬಿ ಜಯಚಂದ್ರ ಅವರನ್ನೇ ಕಣಕ್ಕಿಳಿಸುವುದು ಬಹುತೇಕ ಖಚಿತ ಎನ್ನುವಂತೆ ಮಾತನಾಡಿದ್ದರು. ಆದರೆ ಕೆ.ಎನ್‌ ರಾಜಣ್ಣ ಕೂಡ ಸ್ಪರ್ಧೆಗೆ ಒಲವು ತೋರಿಸಿದ್ದಾರೆ ಎನ್ನಲಾಗಿದೆ ಎನ್ನುವ ಪ್ರಶ್ನೆಗೆ ಇಟ್‌ ಈಸ್‌ ಟೂ ಅರ್ಲಿ. ಪಕ್ಷ ಆ ಬಗ್ಗೆ ತೀರ್ಮಾನ ಮಾಡುತ್ತದೆ ಎಂದಿದ್ದರು. ಇದಕ್ಕೆ ಪ್ರತ್ಯುತ್ತರ ಕೊಟ್ಟಿದ್ದ ಕೆ.ಎನ್‌ ರಾಜಣ್ಣ, ನನ್ನನ್ನು ಪರಿಗಣಿಸದೆ ಟಿಕೆಟ್‌ ಕೊಡುತ್ತಾರೆಯೇ ಎಂದು ಪ್ರಶ್ನೆ ಹಾಕಿದ್ದರು. ಅದಾದ ಬಳಿಕ ಸಿದ್ದರಾಮಯ್ಯ ಮಧ್ಯ ಪ್ರವೇಶಕ್ಕೆ ಡಿಕೆ ಶಿವಕುಮಾರ್‌ ಮನವಿ ಮಾಡಿಕೊಂಡಿದ್ದಾರೆ. ಉಭಯ ನಾಯಕರನ್ನು ಕೂರಿಸಿ ಒಮ್ಮತದ ನಿರ್ಧಾರ ತೆಗೆದುಕೊಳ್ಳುವ ಬಗ್ಗೆ ನಿರ್ಧಾರವಾಗಿದೆ. ಅಂತಿಮವಾಗಿ ಶಿರಾ ಶಿಕಾರಿಯಲ್ಲಿ ಕಾಂಗ್ರೆಸ್‌ ಮತ ಬೇಟೆಗೆ ಹೇಗೆ ಬಾಣ ಹೂಡಲಿದೆ ಎನ್ನುವುದನ್ನು ಕಾದು ನೋಡಬೇಕು.

Tags: ಉಪಚುನಾವಣೆಕಾಂಗ್ರೆಸ್ಜೆಡಿಎಸ್ಶಿರಾ
Previous Post

ರಾಜ್ಯ ಬಿಜೆಪಿಯೊಳಗೆ ಭಿನ್ನಮತದ ಸುಳಿ: ಅನುಮಾನಸ್ಪದ ಭೇಟಿಯಲ್ಲಿ ರಾಜ್ಯ ನಾಯಕರು

Next Post

ಬಿಹಾರ ಗೋಧಿ ಬೆಳೆಗಾರರನ್ನು ನಷ್ಟಕ್ಕೆ ತಳ್ಳಿದ ಸರ್ಕಾರ

Related Posts

Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!
Top Story

Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!

by ಪ್ರತಿಧ್ವನಿ
January 18, 2026
0

ಮೇಷ ರಾಶಿಯ ಇಂದಿನ ಭವಿಷ್ಯ ಕುಟುಂಬದೊಂದಿಗೆ ಹೆಚ್ಚಿನ ಸಮಯ ಕಳೆಯುವಿರಿ. ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಲು ಇಂದು ಸೂಕ್ತ ದಿನ. ಸಂಜೆ ವೇಳೆಗೆ ಅನಿರೀಕ್ಷಿತ ಶುಭವಾರ್ತೆ ಕೇಳುವ ಸಾಧ್ಯತೆ...

Read moreDetails
25 ಲಕ್ಷ ರೂ.ಲಂಚ: ಅಬಕಾರಿ ಡಿಸಿಯೇ ಟ್ರ್ಯಾಪ್

25 ಲಕ್ಷ ರೂ.ಲಂಚ: ಅಬಕಾರಿ ಡಿಸಿಯೇ ಟ್ರ್ಯಾಪ್

January 17, 2026
BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

January 17, 2026
BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?

BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?

January 17, 2026
ಕಲ್ಟ್ ಸಿನಿಮಾದ ಫ್ಲೆಕ್ಸ್ ವಿಚಾರಕ್ಕೆ ಪೌರಾಯುಕ್ತೆಗೆ ನಿಂದನೆ: ಕ್ಷಮೆ ಕೇಳಿದ ನಟ ಝೈದ್ ಖಾನ್

ಕಲ್ಟ್ ಸಿನಿಮಾದ ಫ್ಲೆಕ್ಸ್ ವಿಚಾರಕ್ಕೆ ಪೌರಾಯುಕ್ತೆಗೆ ನಿಂದನೆ: ಕ್ಷಮೆ ಕೇಳಿದ ನಟ ಝೈದ್ ಖಾನ್

January 17, 2026
Next Post
ಬಿಹಾರ ಗೋಧಿ ಬೆಳೆಗಾರರನ್ನು ನಷ್ಟಕ್ಕೆ ತಳ್ಳಿದ ಸರ್ಕಾರ

ಬಿಹಾರ ಗೋಧಿ ಬೆಳೆಗಾರರನ್ನು ನಷ್ಟಕ್ಕೆ ತಳ್ಳಿದ ಸರ್ಕಾರ

Please login to join discussion

Recent News

Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!
Top Story

Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!

by ಪ್ರತಿಧ್ವನಿ
January 18, 2026
BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ
Top Story

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

by ಪ್ರತಿಧ್ವನಿ
January 17, 2026
Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ
Top Story

Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

by ಪ್ರತಿಧ್ವನಿ
January 17, 2026
BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?
Top Story

BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?

by ಪ್ರತಿಧ್ವನಿ
January 17, 2026
ಕಲ್ಟ್ ಸಿನಿಮಾದ ಫ್ಲೆಕ್ಸ್ ವಿಚಾರಕ್ಕೆ ಪೌರಾಯುಕ್ತೆಗೆ ನಿಂದನೆ: ಕ್ಷಮೆ ಕೇಳಿದ ನಟ ಝೈದ್ ಖಾನ್
Top Story

ಕಲ್ಟ್ ಸಿನಿಮಾದ ಫ್ಲೆಕ್ಸ್ ವಿಚಾರಕ್ಕೆ ಪೌರಾಯುಕ್ತೆಗೆ ನಿಂದನೆ: ಕ್ಷಮೆ ಕೇಳಿದ ನಟ ಝೈದ್ ಖಾನ್

by ಪ್ರತಿಧ್ವನಿ
January 17, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!

Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!

January 18, 2026
25 ಲಕ್ಷ ರೂ.ಲಂಚ: ಅಬಕಾರಿ ಡಿಸಿಯೇ ಟ್ರ್ಯಾಪ್

25 ಲಕ್ಷ ರೂ.ಲಂಚ: ಅಬಕಾರಿ ಡಿಸಿಯೇ ಟ್ರ್ಯಾಪ್

January 17, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada