• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 24, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಎಂಟು ಸಂಸದರ ಅಮಾನತು: ಸಂಸತ್ ಆವರಣದಲ್ಲಿ ಪ್ರತಿಪಕ್ಷಗಳ ಪ್ರತಿಭಟನೆ

by
September 23, 2020
in ದೇಶ
0
ಎಂಟು ಸಂಸದರ ಅಮಾನತು: ಸಂಸತ್ ಆವರಣದಲ್ಲಿ ಪ್ರತಿಪಕ್ಷಗಳ ಪ್ರತಿಭಟನೆ
Share on WhatsAppShare on FacebookShare on Telegram

ಎಂಟು ರಾಜ್ಯಸಭಾ ಸಂಸದರನ್ನು ಅಮಾನತುಗೊಳಿಸಿರುವ ಬಗ್ಗೆ ವಿರೋಧ ಪಕ್ಷಗಳು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿವೆ ಮತ್ತು ಈ ಕ್ರಮವನ್ನು ವಿರೋಧಿಸಿ ಸಂಸತ್ತಿನ ಆವರಣದಲ್ಲಿ ಪ್ರತಿಭಟನೆ ನಡೆಸುತ್ತಿವೆ.

ADVERTISEMENT

ಸಂಸತ್ತಿನ ಮೇಲ್ಮನೆಯಲ್ಲಿ ಕೃಷಿ ಮಸೂದೆಗಳನ್ನು ಅಂಗೀಕರಿಸುವ ಸಮಯದಲ್ಲಿ “ಅಶಿಸ್ತಿನ ವರ್ತನೆ” ತೋರಿದ ಆರೋಪದ ಮೇಲೆ.ಕಾಂಗ್ರೆಸ್, ಸಿಪಿಐ (ಎಂ), ತೃಣಮೂಲ ಕಾಂಗ್ರೆಸ್ ಮತ್ತು ಎಎಪಿ ಯ ಎಂಟು ಸದಸ್ಯರನ್ನು ಮುಂಗಾರು ಅಧಿವೇಶನದಿಂದ ಅಮಾನತುಗೊಳಿಸಲಾಗಿತ್ತು.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

“ರೈತರ ಹಿತಾಸಕ್ತಿಗಳನ್ನು ರಕ್ಷಿಸಲು ಹೋರಾಡಿದ 8 ಸಂಸದರನ್ನು ಅಮಾನತುಗೊಳಿಸುವುದು ದುರದೃಷ್ಟಕರ ಮತ್ತು ಪ್ರಜಾಪ್ರಭುತ್ವದ ತತ್ವಗಳನ್ನು ಗೌರವಿಸದ ಈ ನಿರಂಕುಶಾಧಿಕಾರಿ ಸರ್ಕಾರದ ಮನಸ್ಥಿತಿಯನ್ನು ಪ್ರತಿಬಿಂಬಿಸುತ್ತದೆ. ಸಂಸತ್ತಿನಲ್ಲಿ ಹಾಗೂ ಬೀದಿ ಬೀದಿಗಳಲ್ಲಿ ಈ ಫ್ಯಾಸಿಸ್ಟ್‌ ಸರ್ಕಾರದ ವಿರುದ್ಧ ನಾವು ಹೋಡುತ್ತೇವೆ, ಇವರಿಗೆ ನಾವು ಎಂದೂ ತಲೆಬಾಗುವುದಿಲ್ಲ” ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಟ್ವೀಟ್ ನಲ್ಲಿ ಹೇಳಿದ್ದಾರೆ.

‘ಪ್ರಜಾಪ್ರಭುತ್ವದ ಕೊಲೆ’, ‘ಸಂಸತ್ತಿನ ಸಾವು’ ಮತ್ತು ‘ನಾಚಿಕೆಗೇಡುʼ ಮುಂತಾದ ಪ್ಲೆಕಾರ್ಡ್‌ ಹಿಡಿದು ಕಾಂಗ್ರೆಸ್, ಸಿಪಿಐ (ಎಂ), ಶಿವಸೇನೆ, ಜೆಡಿಎಸ್, ಟಿಎಂಸಿ, ಸಿಪಿಐ ಮತ್ತು ಸಮಾಜವಾದಿ ಪಕ್ಷಗಳಂತಹ ವಿರೋಧ ಪಕ್ಷಗಳು ಸಂಸತ್ತಿನ ಆವರಣದಲ್ಲಿ ಪ್ರತಿಭಟಿಸಿದವು.

“ಅಮಾನತುಗೊಳಿಸುವಿಕೆಯು ನಮ್ಮನ್ನು ಮೌನಗೊಳಿಸುವುದಿಲ್ಲ. ನಾವು ರೈತರ ಹೋರಾಟದಲ್ಲಿ ಅವರೊಂದಿಗೆ ನಿಲ್ಲುತ್ತೇವೆ. ಉಪಾಧ್ಯಕ್ಷರು ನಿನ್ನೆ ಸಂಸತ್ತಿನ ಕಾರ್ಯವಿಧಾನಗಳನ್ನು ತಡೆದಿದ್ದಾರೆ. ಸಂಸದರ ಅಮಾನತು ಬಿಜೆಪಿಯ ಹೇಡಿತನದ ಮುಖವನ್ನು ಬಹಿರಂಗಪಡಿಸಿದೆ. ಪ್ರಜಾಪ್ರಭುತ್ವ ವಿರೋಧಿ ಕ್ರಮಗಳ ಮೂಲಕ ತಮ್ಮ ಗಮನವನ್ನು ಬೇರೆಡೆಗೆ ತಿರುಗಿಸುವ ಪ್ರಯತ್ನವನ್ನು ಜನರು ನೋಡುತ್ತಿದ್ದಾರೆ” ಎಂದು ಅಮಾನತುಗೊಂಡವರಲ್ಲಿ ಒಬ್ಬರಾದ ಸಿಪಿಐ (ಎಂ) ಸಂಸದ ಎಲರಾಮಂ ಕರೀಮ್ ಹೇಳಿದ್ದಾರೆ.

“ದೇಶದ ರೈತರೇ ಎಚ್ಚರಗೊಳ್ಳಿ, ಬಿಜೆಪಿ ಸರ್ಕಾರ ನಿಮ್ಮ ಜೀವನವನ್ನು ಅದಾನಿ-ಅಂಬಾನಿಗೆ ಅಡಮಾನ ಇಟ್ಟಿದೆ, ಎಚ್ಚರಗೊಂಡು ಈ ಕರಾಳ ಕಾನೂನನ್ನು ವಿರೋಧಿಸಿ. ನಾವು ಸಂಸತ್ತಿನಲ್ಲಿ ಆಂದೋಲನದಲ್ಲಿದ್ದೇವೆ, ನೀವು ಹೊರಗೆ ಆಂದೋಲನ ನಡೆಸಬೇಕು. ರೈತರ ವಿರುದ್ಧ ಬಿಜೆಪಿ ಸರ್ಕಾರ ಕರಾಳ ಕಾನೂನು ಜಾರಿಗೆ ತಂದಿದೆ. ಮಸೂದೆಯನ್ನು ವಿರೋಧಿಸಿದ್ದಕ್ಕಾಗಿ ನಮ್ಮನ್ನು ವಜಾಗೊಳಿಸಲಾಯಿತು “ಎಂದು ಎಎಪಿ ಸಂಸದ ಸಂಜಯ್ ಸಿಂಗ್ ಹೇಳಿದ್ದಾರೆ.

“ಅದಕ್ಕಾಗಿಯೇ ನಾವು ಧರಣಿ ಕುಳಿತಿದ್ದೇವೆ ಮತ್ತು ಪ್ರಜಾಪ್ರಭುತ್ವದ ಕತ್ತು ಹಿಸುಕುವ ಮೂಲಕ ಈ ಕರಾಳ ಕಾನೂನನ್ನು ಏಕೆ ಅಂಗೀಕರಿಸಲಾಗಿದೆ ಎಂದು ಬಿಜೆಪಿ ಸರ್ಕಾರ ವಿವರಿಸುವವರೆಗೂ ಕುಳಿತುಕೊಳ್ಳುತ್ತೇವೆ” ಎಂದು ಅವರು ಹೇಳಿದ್ದಾರೆ.

ಎನ್‌ಡಿಎ ಮೈತ್ರಿಕೂಟದಲ್ಲಿರದ ಹಲವಾರು ಪಕ್ಷಗಳು ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರಿಗೆ ಪತ್ರ ಬರೆದು ಕೇಂದ್ರ ಸರ್ಕಾರದ ಪ್ರಸ್ತಾವಿತ ಶಾಸನಗಳಿಗೆ ತಮ್ಮ ಒಪ್ಪಿಗೆಯನ್ನು ನೀಡದಂತೆ ಒತ್ತಾಯಿಸಿದೆ.

ಮೂಲಗಳ ಪ್ರಕಾರ, ಕಾಂಗ್ರೆಸ್, ಎಡ ಪಕ್ಷಗಳು, ಎನ್‌ಸಿಪಿ, ಡಿಎಂಕೆ, ಎಸ್‌ಪಿ, ತೃಣಮೂಲ ಕಾಂಗ್ರೆಸ್ ಮತ್ತು ಆರ್‌ಜೆಡಿ ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಮುಖಂಡರು ರಾಷ್ಟ್ರಪತಿಗಳಿಗೆ ಮನವಿ ಪತ್ರದಲ್ಲಿ ಈ ವಿಷಯದಲ್ಲಿ ತಮ್ಮ ಹಸ್ತಕ್ಷೇಪವನ್ನು ಕೋರಿದ್ದಾರೆ ಮತ್ತು ಮಸೂದೆಗಳಿಗೆ ಸಹಿ ಮಾಡದಂತೆ ಕೇಳಿಕೊಂಡಿದ್ದಾರೆ.

ಪ್ರತಿಪಕ್ಷಗಳ ವಿರೋಧದ ನಡುವೆಯೂ, ಕೃಷಿಯಲ್ಲಿ ಅತಿದೊಡ್ಡ ಸುಧಾರಣೆ ಎಂದು ಸರ್ಕಾರ ಕರೆಯುವ ಎರಡು ಪ್ರಮುಖ ಕೃಷಿ ಮಸೂದೆಗಳನ್ನು ರಾಜ್ಯಸಭೆಯಲ್ಲಿ ಭಾನುವಾರ ಅಂಗೀಕರಿಸಲಾಗಿತ್ತು.

Previous Post

ಡ್ರಗ್‌ ವಿರುದ್ಧದ ಹೋರಾಟದಲ್ಲಿ ಸಿಕ್ಕಿಂ ರಾಜ್ಯದ ಗಮನಾರ್ಹ ನಿಲುವು

Next Post

ಸದನದಲ್ಲಿ ಕೋಲಾಹಲ ಸೃಷ್ಟಿಸಿದ ರಮೇಶ್ ಕುಮಾರ್ ಅವರ ʼಪದʼಬಳಕೆ

Related Posts

ಬೆಸ್ಕಾಂನ ‘ಹೆಚ್‌ಟಿ ಮಿತ್ರ’  ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್
Top Story

ಬೆಸ್ಕಾಂನ ‘ಹೆಚ್‌ಟಿ ಮಿತ್ರ’ ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

by ಪ್ರತಿಧ್ವನಿ
April 23, 2026
0

ಬೆಂಗಳೂರು: ಬೆಸ್ಕಾಂನ ಹೈ ಟೆನ್ಷನ್ ಗ್ರಾಹಕರಿಗಾಗಿ ಸಂಸ್ಥೆಯ ಇಂಜಿನಿಯರ್‌ಗಳು ಅಭಿವೃದ್ಧಿಪಡಿಸಿರುವ ಸೇವೆ ಕೋರಿಕೆ/ಕುಂದುಕೊರತೆ ಪರಿಹಾರ ಪೋರ್ಟಲ್ 'ಹೆಚ್‌ಟಿ ಮಿತ್ರ'ಗೆ ಇಂಧನ ಸಚಿವ ಕೆ.ಜೆ. ಜಾರ್ಜ್ ಅವರು ಗುರುವಾರ...

Read moreDetails
ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

April 23, 2026
ಮಹಿಳಾ ಮೀಸಲಾತಿ ಡಿಎಂಕೆ ರಾಜಕೀಯ ಹುನ್ನಾರಕ್ಕೆ ರಾಜ್ಯದ ಹಿತ ಬಲಿ:ಬಸವರಾಜ ಬೊಮ್ಮಾಯಿ

ಮಹಿಳಾ ಮೀಸಲಾತಿ ಡಿಎಂಕೆ ರಾಜಕೀಯ ಹುನ್ನಾರಕ್ಕೆ ರಾಜ್ಯದ ಹಿತ ಬಲಿ:ಬಸವರಾಜ ಬೊಮ್ಮಾಯಿ

April 23, 2026
ಸಂವಿಧಾನದ ಅಶಯಗಳು -ಬಾಬು ಜಗಜೀವನ್‌ರಾಮ್‌-

ಸಂವಿಧಾನದ ಅಶಯಗಳು -ಬಾಬು ಜಗಜೀವನ್‌ರಾಮ್‌-

April 23, 2026
ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!

ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!

April 22, 2026
Next Post
ಸದನದಲ್ಲಿ ಕೋಲಾಹಲ ಸೃಷ್ಟಿಸಿದ ರಮೇಶ್ ಕುಮಾರ್ ಅವರ ʼಪದʼಬಳಕೆ

ಸದನದಲ್ಲಿ ಕೋಲಾಹಲ ಸೃಷ್ಟಿಸಿದ ರಮೇಶ್ ಕುಮಾರ್ ಅವರ ʼಪದʼಬಳಕೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada