• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, May 16, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಹಥ್ರಾಸ್: ಸಾಮೂಹಿಕ ಅತ್ಯಾಚಾರಕ್ಕೊಳಗಾಗಿದ್ದ ದಲಿತ ಹುಡುಗಿ ಮೃತ್ಯು

by
September 29, 2020
in ದೇಶ
0
ಹಥ್ರಾಸ್: ಸಾಮೂಹಿಕ ಅತ್ಯಾಚಾರಕ್ಕೊಳಗಾಗಿದ್ದ ದಲಿತ ಹುಡುಗಿ ಮೃತ್ಯು
Share on WhatsAppShare on FacebookShare on Telegram

ಉತ್ತರಪ್ರದೇಶದ ಹತ್ರಾಸ್‌ ಜಿಲ್ಲೆಯಲ್ಲಿ ನಾಲ್ವರು ಮೇಲ್ಜಾತಿ ಪುರುಷರಿಂದ ಅತ್ಯಾಚಾರಕ್ಕೊಳಗಾಗಿ ಚಿಂತಾಜನಕ ಸ್ಥಿತಿಯಲ್ಲಿದ್ದ 19 ವರ್ಷದ ದಲಿತ ಹುಡುಗಿ ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದಿದ್ದಾಳೆ.

ADVERTISEMENT

ಸೆಪ್ಟೆಂಬರ್‌ 14 ರಂದು ಭೀಕರ ಸಾಮೂಹಿಕ ಅತ್ಯಾಚಾರ ಮಾಡಿದ ಬಳಿಕ ಆರೋಪಿಗಳು ಹುಡುಗಿಯ ಕತ್ತು ಹಿಸುಕಿ ಕೊಲೆಗೆ ಯತ್ನಿಸಿದ್ದಾರೆ. ಈ ವೇಳೆ ಹುಡುಗಿ ತನ್ನ ನಾಲಿಗೆ ಕಚ್ಚಿಕೊಂಡಿದ್ದು ನಾಲಿಗೆ ಕತ್ತರಿಸಲ್ಪಟ್ಟಿತ್ತು ಎಂದು ಚಿಕಿತ್ಸೆ ನೀಡುತ್ತಿದ್ದ ವೈದ್ಯಾಧಿಕಾರಿಗಳು ಹುಡುಗಿಯ ಮೇಲೆ ನಡೆದ ದಾಳಿಯ ತೀವ್ರತೆಯನ್ನು ವಿವರಿಸಿದ್ದಾರೆ. ಆಕೆಯ ಮೇಲೆ ನಡೆದ ದಾಳಿಯಲ್ಲಿ ಆಕೆಯ ಬೆನ್ನುಹುರಿಗೂ ತೀವ್ರ ಗಾಯಗಳಾಗಿದ್ದು, ಹೆಚ್ಚಿನ ಚಿಕಿತ್ಸೆಗೆ ಅಲಿಘರ್‌ ಆಸ್ಪತ್ರೆಯಿಂದ ದೆಹಲಿಯ ಸಫ್ದರ್ಜಂಗ್ ಆಸ್ಪತ್ರೆಗೆ ರವಾನಿಸಲಾಗಿತ್ತು.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ಸಂತ್ರಸ್ತೆಯನ್ನು ಹೊಲಕ್ಕೆ ಬಲತ್ಕಾರದಿಂದ ಎಳೆದುಕೊಂಡು ಹೋಗಿ ಅತ್ಯಾಚಾರ ಮಾಡಲಾಗಿದೆ, ದುಪ್ಪಟ್ಟದಿಂದ ಕತ್ತು ಹಿಸುಕಿ ಸಾಯಿಸಲು ಯತ್ನಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಅತ್ಯಾಚಾರ ಆರೋಪಿಗಳೂ ಆಕೆಯ ಗ್ರಾಮಕ್ಕೆ ಸೇರಿದ ಮೇಲ್ಜಾತಿಯವರೆನ್ನಲಾಗಿದ್ದು, ದಲಿತ ದೌರ್ಜನ್ಯ ತಡೆ ಕಾಯ್ದೆ ಹೊರತುಪಡಿಸಿ, ಸಾಮೂಹಿಕ ಅತ್ಯಾಚಾರ ಹಾಗೂ ಕೊಲೆಯತ್ನ ಪ್ರಕರಣವನ್ನೂ ಅವರ ಮೇಲೆ ದಾಖಲಿಸಿ, ಬಂಧಿಸಲಾಗಿದೆ.

ಬಂಧಿತರನ್ನು ಸಂದೀ, ಆತನ ಸಂಬಂಧಿ ರವಿ, ಹಾಗೂ ಅವರ ಸಹವರ್ತಿ ಲವ್‌ ಕುಶ್‌ ಎಂದು ಗುರುತಿಸಲಾಗಿದ್ದು, ಸೆಪ್ಟೆಂಬರ್ 23 ರಂದು ಸಂತ್ರಸ್ತೆ ಪ್ರಜ್ಞೆ ಪಡೆದಾಗ ನೀಡಿದ ಹೇಳಿಕೆಯ ಆಧಾರದ ಮೇಲೆ ಅವರನ್ನು ಬಂಧಿಸಲಾಗಿದೆ.

ತಮ್ಮ ಹಸುಗಳಿಗೆ ಹುಲ್ಲು ಕತ್ತರಿಸಲು ಹತ್ತಿರದ ಹೊಲಕ್ಕೆ ತೆರಳಿದ್ದ ವೇಳೆ ಈ ಘಟನೆ ನಡೆದಿದೆ, ಅವಳಿಂದ 100 ಮೀಟರಷ್ಟೇ ದೂರದಲ್ಲಿದ್ದೆ, ನನಗೆ ಅವಳ ಕೂಗು ಕೇಳಿದ್ದರೆ ಬಹುಷ, ಅವಳನ್ನು ರಕ್ಷಿಸಬಹುದಿತ್ತು ಎಂದು ಸಂತ್ರಸ್ತೆಯ ತಾಯಿ ಗದ್ಗದಿತರಾಗಿ ಪತ್ರಕರ್ತರೊಂದಿಗೆ ಹೇಳಿದ್ದಾರೆ.

ಮುಖ್ಯ ಆರೋಪಿ ಸಂದೀಪ್ ಮತ್ತು ಆತನ ಕುಟುಂಬಸ್ಥರು “ತಮ್ಮ ಪ್ರದೇಶದಲ್ಲಿ ಯಾವಾಗಲೂ ದಲಿತರ ಮೇಲೆ ಕಿರುಕುಳ ನೀಡುತ್ತಿರುತ್ತಾರೆ” ಎಂದು ಸಂತ್ರಸ್ತೆಯ ಕುಟುಂಬ ಆರೋಪಿಸಿದೆ. 19 ವರ್ಷಗಳ ಹಿಂದೆ ಸಂದೀಪ್‌ನ ಅಜ್ಜ, ಸಂತ್ರಸ್ತೆಯ ಅಜ್ಜನ ಮೇಲೆ ನಡೆಸಿದ ಹಲ್ಲೆ ಸಂಬಂಧಿಸಿ ದಲಿತ ದೌರ್ಜನ್ಯ ಕಾಯ್ದೆಯಡಿ ಮೂರು ತಿಂಗಳು ಬಂಧಿಸಲಾಗಿತ್ತು ಎಂಬುವುದನ್ನೂ ಅವರು ಉಲ್ಲೇಖಿಸಿದ್ದಾರೆ.

ಸಂತ್ರಸ್ತೆಯ ಸಹೋದರನ ಹೇಳಿಕೆಯ ಪ್ರಕಾರ, 19 ವರ್ಷಗಳ ಹಿಂದೆ ನಡೆದ ಆ ಘಟನೆಯ ಬಳಿಕ, ನಮ್ಮ ಕುಟುಂಬಸ್ಥರನ್ನು ಅವರು ಯಾವಾಗಲೂ ಏಕವಚನದಿಂದ ಕರೆಯುತ್ತಿದ್ದರು, ನಾವು ನಿರ್ಲಕ್ಷಿಸುತ್ತಿದ್ದೆವು, ಅವರು ನಮ್ಮ ಕುಟುಂಬದ ಮೇಲೆ ಹಗೆ ಸಾಧಿಸುತ್ತಿದ್ದರು, ಮುಖ್ಯ ಆರೋಪಿ ಮಾದಕ ವಸ್ತು ವ್ಯಸನಿಯಾಗಿದ್ದು, ಸದಾ ಮಹಿಳೆಯರಿಗೆ ಕಿರುಕುಳ ನೀಡುತ್ತಿದ್ದ, ಆದರೆ ಅವರ ಕುಟುಂಬದ ಪ್ರಭಾವಕ್ಕೆ ಹೆದರಿ ಯಾರೂ ದೂರು ದಾಖಲಿಸುತ್ತಿರಲಿಲ್ಲ ಎಂದು ಹೇಳಿದ್ದಾರೆ.

ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥರನ್ನು ಎಷ್ಟೇ ವಿಜೃಂಬಿಸುತ್ತಿದ್ದರೂ, ಅವರ ಆಡಳಿತದಲ್ಲಿ ಅಪರಾಧ ಪ್ರಮಾಣ ಏರಿಕೆಯಾಗುತ್ತಿದೆ. ಅದರಲ್ಲೂ ಮಹಿಳೆ, ದಲಿತ ಹಾಗೂ ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯಗಳ ಸಂಖ್ಯೆ, ಗುಂಪು ಹಲ್ಲೆಗಳ ಪ್ರಕರಣ ದಾಖಲಾಗುತ್ತಲೇ ಇದೆ.

ಉತ್ತರಪ್ರದೇಶದಲ್ಲಿ ಈ ಒಂದು ತಿಂಗಳಲ್ಲೇ ಮೂರು ಸಾಮೂಹಿಕ ಅತ್ಯಾಚಾರ ಪ್ರಕರಣಗಳು ಬೆಳಕಿಗೆ ಬಂದಿದೆ ಎಂದು ಇಂಡಿಯಾ ಟುಡೆ ವರದಿ ಹೇಳುತ್ತದೆ. ದೆಹಲಿ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಘಟನೆ ಕಳೆದ ವಾರ ನಡೆದಿದ್ದು, ಚಲಿಸುತ್ತಿರುವ ಬಸ್‌ನಲ್ಲಿ ಯುವತಿಯ ಮೇಲೆ ಅತ್ಯಾಚಾರ ನಡೆಸಲಾಗಿದೆ. ಅಮಲು ಪದಾರ್ಥ ನೀಡಿ ಬಸ್‌ ಚಾಲಕ ಹಾಗೂ ನಿರ್ವಾಹಕ ಸತತ ಅತ್ಯಾಚಾರ ನಡೆಸಿದ್ದಾರೆ ಎಂದು ಸಂತ್ರಸ್ತೆ ಪೊಲೀಸರಿಗೆ ದೂರು ನೀಡಿದ್ದಾಳೆ.

ಸೆಪ್ಟೆಂಬರ್ ತಿಂಗಳಾರಂಭದಲ್ಲಿ, ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಕಬ್ಬಿನ ಹೊಲದಲ್ಲಿ ಮೂರು ವರ್ಷದ ಬಾಲಕಿಯ ಮೃತದೇಹ ಪತ್ತೆಯಾಗಿದ್ದು, ಬಾಲಕಿಯ ಮೇಲೆ ಅತ್ಯಾಚಾರ ಎಸಗಲಾಗಿತ್ತು ಎಂದು ಪೊಲೀಸ್‌ ವರದಿ ತಿಳಿಸಿತ್ತು.

ಲಖಿಂಪುರ ಜಿಲ್ಲೆಯೊಂದರಲ್ಲೇ ಆಗಸ್ಟ್‌ ಕೊನೆಯ ಮೂರು ವಾರದಲ್ಲಿ ಮೂರು ಅತ್ಯಾಚಾರ ಪ್ರಕರಣಗಳು ದಾಖಲಾಗಿದೆ ಎಂದು ಸ್ಕ್ರಾಲ್‌.ಇನ್‌ ವರದಿಯಲ್ಲಿ ತಿಳಿಸಲಾಗಿದೆ. ಆಗಸ್ಟ್‌ 14 ರಂದು 13 ವರ್ಷದ ದಲಿತ ಬಾಲಕಿಯನ್ನು ಅತ್ಯಾಚಾರಗೈದು ಕತ್ತು ಹಿಸುಕಿ ಕೊಲೆಮಾಡಲಾಗಿತ್ತು. ಮತ್ತದೇ ಜಿಲ್ಲೆಯಲ್ಲಿ, ಅಗಸ್ಟ್‌ 24 ರಂದು 17 ವರ್ಷದ ಬಾಲಕಿಯನ್ನು ಬಲಾತ್ಕರಿಸಿ ತೀಕ್ಷ್ಣವಾದ ಆಯುಧದಿಂದ ಕೊಲೆಗೈಯಲಾಗಿತ್ತು ಎಂದು ವರದಿ ತಿಳಿಸಿದೆ.

Tags: ಉತ್ತರ ಪ್ರದೇಶಸಾಮೂಹಿಕ ಅತ್ಯಾಚಾರ
Previous Post

ಬೆಂಗಳೂರನ್ನು ಅಪಮಾನಿಸಿದ್ದು ಅಪರಾಧ – ಹೆಚ್‌ ಡಿ ಕುಮಾರಸ್ವಾಮಿ

Next Post

ನಾಲ್ಕು ರಾಜ್ಯಗಳಲ್ಲಿ ಉಪಚುನಾವಣೆ ನಡೆಸದಿರಲು ಚುನಾವಣಾ ಆಯೋಗ ತೀರ್ಮಾನ

Related Posts

ಇಸ್ರೇಲ್ – ಕರ್ನಾಟಕದ ನಡುವೆ ಆರಂಭವಾಗಲಿದೆಯಾ ಕೌಶಲ್ಯಯುತ ಶ್ರಮಶಕ್ತಿ ಒಪ್ಪಂದ? : ಸಚಿವ ಲಾಡ್‌ ಪ್ಲ್ಯಾನ್‌ ಏನು..?
Top Story

ಇಸ್ರೇಲ್ – ಕರ್ನಾಟಕದ ನಡುವೆ ಆರಂಭವಾಗಲಿದೆಯಾ ಕೌಶಲ್ಯಯುತ ಶ್ರಮಶಕ್ತಿ ಒಪ್ಪಂದ? : ಸಚಿವ ಲಾಡ್‌ ಪ್ಲ್ಯಾನ್‌ ಏನು..?

by ಪ್ರತಿಧ್ವನಿ
May 15, 2026
0

ಬೆಂಗಳೂರು :  ಪರಿಣತ ಕಾರ್ಮಿಕರ ಕೊರತೆ ಎದುರಿಸುತ್ತಿರುವ ಮಧ್ಯಪ್ರಾಚ್ಯದ ಕೆಲವು ದೇಶಗಳಲ್ಲಿ ಕೆಲಸ ಮಾಡುವ ಕ್ಷಮೆತೆಯಿರುವ ರಾಜ್ಯದ ಕಾರ್ಮಿಕರಿಗೆ ಅವಕಾಶ ಕಲ್ಪಿಸುವ ಸಂಬಂಧ ಕಾರ್ಮಿಕ ಸಚಿವ ಸಂತೋಷ್‌...

Read moreDetails
ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ಖಂಡನೀಯ : ಮೋದಿ ವಿರುದ್ಧ ಸಿದ್ದರಾಮಯ್ಯ ಕಿಡಿ

ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ಖಂಡನೀಯ : ಮೋದಿ ವಿರುದ್ಧ ಸಿದ್ದರಾಮಯ್ಯ ಕಿಡಿ

May 15, 2026
ಮೋದಿಯಿಂದ ದೇಶ ದೊಡ್ಡ ದುರಂತ ಸ್ಥಿತಿಗೆ ಬಂದಿದೆ : ಬೆಲೆ ಏರಿಕೆಗೆ ಡಿಕೆ ಶಿವಕುಮಾರ್‌ ವಾಗ್ದಾಳಿ

ಮೋದಿಯಿಂದ ದೇಶ ದೊಡ್ಡ ದುರಂತ ಸ್ಥಿತಿಗೆ ಬಂದಿದೆ : ಬೆಲೆ ಏರಿಕೆಗೆ ಡಿಕೆ ಶಿವಕುಮಾರ್‌ ವಾಗ್ದಾಳಿ

May 15, 2026
ಮೋದಿ ಎಚ್ಚರಿಕೆಯ ಬೆನ್ನಲ್ಲೆ ದಿಢೀರ್‌ ಪೆಟ್ರೋಲ್‌, ಡಿಸೇಲ್‌ ಬೆಲೆ ಏರಿಕೆ

ಮೋದಿ ಎಚ್ಚರಿಕೆಯ ಬೆನ್ನಲ್ಲೆ ದಿಢೀರ್‌ ಪೆಟ್ರೋಲ್‌, ಡಿಸೇಲ್‌ ಬೆಲೆ ಏರಿಕೆ

May 15, 2026
ವಿದ್ಯುತ್ ಉತ್ಪಾದನೆಯಲ್ಲಿ ಮಹಿಳಾ ಸಿಬ್ಬಂದಿ ಸೇವೆ ಶ್ಲಾಘನೀಯ: ಗೌರವ್ ಗುಪ್ತ

ವಿದ್ಯುತ್ ಉತ್ಪಾದನೆಯಲ್ಲಿ ಮಹಿಳಾ ಸಿಬ್ಬಂದಿ ಸೇವೆ ಶ್ಲಾಘನೀಯ: ಗೌರವ್ ಗುಪ್ತ

May 14, 2026
Next Post
ನಾಲ್ಕು ರಾಜ್ಯಗಳಲ್ಲಿ ಉಪಚುನಾವಣೆ ನಡೆಸದಿರಲು ಚುನಾವಣಾ ಆಯೋಗ ತೀರ್ಮಾನ

ನಾಲ್ಕು ರಾಜ್ಯಗಳಲ್ಲಿ ಉಪಚುನಾವಣೆ ನಡೆಸದಿರಲು ಚುನಾವಣಾ ಆಯೋಗ ತೀರ್ಮಾನ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada