• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 23, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ವಿಧೇಯಕಗಳ ಮರು ಸುಗ್ರೀವಾಜ್ಞೆ ಸಂವಿಧಾನ ವಿರೋಧಿ – ರೈತ ಸಂಘಟನೆಗಳ ಒಕ್ಕೂಟ

by
October 23, 2020
in ಕರ್ನಾಟಕ
0
ವಿಧೇಯಕಗಳ ಮರು ಸುಗ್ರೀವಾಜ್ಞೆ ಸಂವಿಧಾನ ವಿರೋಧಿ – ರೈತ ಸಂಘಟನೆಗಳ ಒಕ್ಕೂಟ
Share on WhatsAppShare on FacebookShare on Telegram

ಕರ್ನಾಟಕ ಸರ್ಕಾರ, ರೈತ ವಿರೋಧಿ ಭೂ ಸುಧಾರಣೆ ತಿದ್ದುಪಡಿ ಸುಗ್ರೀವಾಜ್ಞೆ, ಎ ಪಿ ಎಂ ಸಿ ತಿದ್ದುಪಡಿ ಸುಗ್ರೀವಾಜ್ಞೆ, ಕಾರ್ಮಿಕ ವಿರೋಧಿ ತಿದ್ದುಪಡಿ ಹಾಗೂ ವಿದ್ಯುಚಕ್ತಿ ತಿದ್ದುಪಡಿ ಸುಗ್ರೀವಾಜ್ಞೆಗಳ ವಿಧೇಯಕಗಳು, ಕಳೆದ ವಿಧಾನ ಮಂಡಲದ ಅಧಿವೇಶನದಲ್ಲಿ ಶಾಸನ ಸಭೆಯ ಅನುಮೋದನೆ ಪಡೆಯಲು ವಿಫಲವಾಗಿವೆ, ರಾಜ್ಯಾದ್ಯಂತ ರೈತರು, ಕೂಲಿಕಾರರು, ಪ್ರಗತಿಪರ ನಾಗರೀಕರು, ದಲಿತರು ಬಾರಿ ಪ್ರತಿರೋಧವನ್ನು ವ್ಯಕ್ತಪಡಿಸಿ ರಾಜ್ಯಾದ್ಯಂತ ಹಲವು ಚಳುವಳಿಗಳನ್ನು ನಡೆಸಿ ಸ್ವಯಂ ಪ್ರೇರಿತವಾಗಿ ಬಂದ್ ಆಚರಣೆ ಮಾಡಿ ಸರ್ಕಾರವನ್ನು ಎಚ್ಚರಿಸುವ ಕಾರ್ಯ ನಡೆಸಲಾಗಿದೆ, ವಿರೋಧ ಪಕ್ಷಗಳು ತೀವ್ರವಾಗಿ ಪ್ರತಿರೋಧಿಸಿವೆ. ಪರಿಸ್ಥಿತಿ ಹೀಗಿರುವಾಗ, ಮತ್ತೆ ಸದರಿ ವಿಧೇಯಕಗಳನ್ನು ಪುನಃ ಹಿಂಬಾಗಿಲಿನಿಂದ ಮರಳಿ ಸುಗ್ರೀವಾಜ್ಞೆಗಳಾಗಿ ಜಾರಿಗೆ ತರಲು ಮಂತ್ರಿಮಂಡಲ ಕ್ರಮವಹಿಸಿರುವುದನ್ನು ಕರ್ನಾಟಕ ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಬಲವಾಗಿ ಖಂಡಿಸುತ್ತದೆ ಎಂದು ರ್ನಾಟಕ ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷರಾಗಿರುವ ಕುರುಬೂರು ಶಾಂತಕುಮಾರ್‌ ಅವರು ರಾಜ್ಯಪಾಲ ವಾಜುಭಾಯಿ ವಾಲಾ ಅವರಿಗೆ ಬರೆದ ಪತ್ರದಲ್ಲಿ ಹೇಳಿದ್ದಾರೆ.

ADVERTISEMENT

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ಸರ್ವೋಚ್ಚ ನ್ಯಾಯಾಲಯದ ಸಂವಿಧಾನ ಪೀಠವು 2017 ರಲ್ಲಿ ಮತ್ತು ಬಿಹಾರ ಸರ್ಕಾರ ಪ್ರಕರಣದಲ್ಲಿ ಶಾಸನ ಸಭೆಯ ಅನುಮೋದನೆ ಪಡೆಯದ ಸುಗ್ರೀವಾಜ್ಞೆಗಳನ್ನು ಪುನರ್ ಸುಗ್ರೀವಾಜ್ಞೆಯಾಗಿ ಹೊರಡಿಸುವುದು ಈ ಸಂವಿಧಾನಕ್ಕೆ ಎಸಗುವ ವಂಚನೆಯಾಗಿದೆ” ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ಕುರುಬೂರು ಶಾಂತಕುಮಾರ್‌

ರಾಜ್ಯ ಸರ್ಕಾರ ಸರ್ವೋಚ್ಚ ನ್ಯಾಯಾಲಯದ ಈ ತೀರ್ಪಿಗೆ ವಿರುದ್ಧವಾದ ಮತ್ತು ಸಂವಿಧಾನವನ್ನು ಉಲ್ಲಂಘಿಸುವ ಕೆಲಸದಲ್ಲಿ ತೊಡಗಿದೆ. ವಿಧಾನ ಮಂಡಲ ಮತ್ತು ಜನತೆ ತೀವ್ರವಾಗಿ ವಿರೋಧಿಸುತ್ತಿರುವಾಗ, ಸರ್ವೋಚ್ಚ ನ್ಯಾಯಾಲಯ ಈ ರೀತಿಯ ಕ್ರಮಗಳು ಸಂವಿಧಾನವನ್ನು ವಂಚಿಸುವ ಕ್ರಮಗಳೆಂದು ತೀವ್ರವಾಗಿ ಆಕ್ಷೇಪಿಸಿರುವಾಗ ಅಷ್ಟೊಂದು ತರಾತುರಿಯಲ್ಲಿ ಸಂವಿಧಾನ ವಿರೋಧಿಯಾಗಿ ಅವುಗಳನ್ನು ಮರಳಿ ತುರ್ತಾಗಿ ಜಾರಿಗೆ ತರುವ ಅಗತ್ಯವಾದರೂ ಏನು? ಯಾರ ಲಾಭಕ್ಕಾಗಿ ? ಎಂದು ಒಕ್ಕೂಟವು ಪ್ರಶ್ನಿಸಿದೆ.

ಯಾವುದೇ ಕಾರಣಕ್ಕೂ ರಾಜ್ಯ ಸಚಿವ ಸಂಪುಟದ 22.10.2020 ರ ಶಿಫಾರಸ್ಸಿನಂತಹ ರೈತ ವಿರೋಧಿ, ಕಾರ್ಮಿಕ ವಿರೋಧಿ, ಈ ಸುಗ್ರೀವಾಜ್ಞೆಗಳ ಮಾನ್ಯತೆ ನೀಡದೇ ಈ ಸೂಚನೆಗಳನ್ನು ತಾವು ಒಪ್ಪದೇ, ಅವುಗಳನ್ನು ವಾಪಾಸು ಕಳುಹಿಸಬೇಕು ಮತ್ತು ವಿಧಾನ ಮಂಡಲದ ಅಧಿಕಾರಿಗಳನ್ನು ಮತ್ತು ಸಂವಿಧಾನವನ್ನು ಸಂರಕ್ಷಿಸಲು ಸೂಕ್ತ ನಿರ್ದೇಶನ ನೀಡಬೇಕೆಂದು ಶಾಂತಕುಮಾರ್‌ ವಿನಂತಿಸಿದ್ದಾರೆ.

ಬಿಹಾರ ಮತ್ತು ತಮಿಳುನಾಡು ರಾಜ್ಯಗಳಲ್ಲಿ ಚುನಾವಣೆಯಲ್ಲಿ ಮತ ನೀಡಿ ಅಧಿಕಾರಕ್ಕೆ ಬಂದರೆ, ಕರೋನಾ ಲಸಿಕೆಯನ್ನು ಉಚಿತವಾಗಿ ನೀಡಲಾಗುವುದು ಎಂಬುವುದು ಮತದಾರರನ್ನು ವಂಚಿಸುವ ಪ್ರಕ್ರಿಯೆಯಾಗಿದೆ. ಇಂತಹ ರಾಜಕೀಯ ಪಕ್ಷಗಳ ವಿರುದ್ಧ ಕ್ರಮ ಕೈಗೊಳ್ಳಲು ಚುನಾವಣಾ ಆಯೋಗ ತಕ್ಷಣವೇ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕೆಂದು ಒತ್ತಾಯಿಸುತ್ತೇವೆ ಎಂದೂ ಒಕ್ಕೂಟ ಹೇಳಿದೆ.

Previous Post

ಉದ್ಯೋಗ ಸೃಷ್ಟಿಯ ಭರವಸೆ ಮೂಲಕ ಬಯಲಾದ ಬಿಜೆಪಿಯ ನಿರ್ಲಜ್ಜ ಅಧಿಕಾರ ರಾಜಕಾರಣ

Next Post

ಕೇಂದ್ರ ಹಾಗೂ ರಾಜ್ಯದಲ್ಲಿ ಒಂದೇ ಸರ್ಕಾರವಿದ್ದರೆ ಅಭಿವೃದ್ದಿಯ ವೇಗ ಹೆಚ್ಚುತ್ತದೆ – ಪ್ರಧಾನಿ ಮೋದಿ

Related Posts

ಗಮನ ಸೆಳೆದ ಗದಗ ಜಿಲ್ಲಾಸ್ಪತ್ರೆ : ಬಿಸಿಲಿನ ಬೇಗೆಯಲ್ಲಿ ರೋಗಿಗಳಿ ಆಶಾಕಿರಣವಾದ ವೈದ್ಯರು, ಏನಿದು ವಿಶೇಷ..?
Top Story

ಗಮನ ಸೆಳೆದ ಗದಗ ಜಿಲ್ಲಾಸ್ಪತ್ರೆ : ಬಿಸಿಲಿನ ಬೇಗೆಯಲ್ಲಿ ರೋಗಿಗಳಿ ಆಶಾಕಿರಣವಾದ ವೈದ್ಯರು, ಏನಿದು ವಿಶೇಷ..?

by ಪ್ರತಿಧ್ವನಿ
April 22, 2026
0

ಗದಗ :  ಬೇಸಿಗೆ ಕಾಲ ಆರಂಭವಾಗಿದ್ದು, ಬಿರು ಬಿಸಿಲಿನ ಬೇಗೆಗೆ ಜನರು ತತ್ತರಿಸಿದ್ದಾರೆ. ಜಿಲ್ಲೆಯಲ್ಲಂತೂ ದಿನದಿಂದ ದಿನಕ್ಕೆ ಸೂರ್ಯ ಕಾವೇರುತ್ತಿದ್ದಾನೆ. ಬಿಸಿಲಿನ ಹೊಡೆತ ತಾಳಲಾರದೆ ಜನರು ಹೈರಾಣಾಗಿದ್ದಾರೆ. https://youtu.be/dMLKOlJu3kY?si=xK3Kdu_8RkdSidp9...

Read moreDetails
ಫಾರಿನ್‌ ಸ್ಟೈಲ್‌ ಲವ್‌ & ಮರ್ಡರ್‌ : ಕಿರಾತಕಿ ಪ್ರೇಮಾಳಿಂದ ಕೊಲೆ ಸ್ಫೋಟಕ ರಹಸ್ಯ ಬಯಲು..

ಫಾರಿನ್‌ ಸ್ಟೈಲ್‌ ಲವ್‌ & ಮರ್ಡರ್‌ : ಕಿರಾತಕಿ ಪ್ರೇಮಾಳಿಂದ ಕೊಲೆ ಸ್ಫೋಟಕ ರಹಸ್ಯ ಬಯಲು..

April 22, 2026
ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

April 21, 2026
“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

April 21, 2026
ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿದ ಹೈಕೋರ್ಟ್‌ : SSLC ಹಿಂದಿ ಗ್ರೇಡ್‌ ವಿವಾದಕ್ಕೆ ನ್ಯಾಯಾಲಯ ಹೇಳಿದ್ದೇನು..?

ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿದ ಹೈಕೋರ್ಟ್‌ : SSLC ಹಿಂದಿ ಗ್ರೇಡ್‌ ವಿವಾದಕ್ಕೆ ನ್ಯಾಯಾಲಯ ಹೇಳಿದ್ದೇನು..?

April 21, 2026
Next Post
ಕೇಂದ್ರ ಹಾಗೂ ರಾಜ್ಯದಲ್ಲಿ ಒಂದೇ ಸರ್ಕಾರವಿದ್ದರೆ ಅಭಿವೃದ್ದಿಯ ವೇಗ ಹೆಚ್ಚುತ್ತದೆ – ಪ್ರಧಾನಿ ಮೋದಿ

ಕೇಂದ್ರ ಹಾಗೂ ರಾಜ್ಯದಲ್ಲಿ ಒಂದೇ ಸರ್ಕಾರವಿದ್ದರೆ ಅಭಿವೃದ್ದಿಯ ವೇಗ ಹೆಚ್ಚುತ್ತದೆ – ಪ್ರಧಾನಿ ಮೋದಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada