ಲವ್ ಜಿಹಾದ್ ತಡೆಯಲು ಹೊಸ ಕಾನೂನು ರೂಪಿಸಲಾಗುವುದು ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿಕೆ ನೀಡಿದ ಬೆನ್ನಿಗೆ ಕರ್ನಾಟಕದಲ್ಲಿ ಸಚಿವ ಸಿಟಿ ರವಿ ಕೂಡಾ ಈ ರೀತಿಯದ್ದೇ ಕಾನೂನು ತರುವುದಾಗಿ ಟ್ವೀಟ್ ಮಾಡಿದ್ದಾರೆ.
ಮದುವೆಯಾಗುವ ಉದ್ದೇಶದಿಂದ ಮತಾಂತರ ಆಗುವಂತಿಲ್ಲ ಎಂದು ಅಲಹಾಬಾದ್ ಹೈಕೋರ್ಟ್ ನೀಡಿರುವ ತೀರ್ಪನ್ನು ಉಲ್ಲೇಖಿಸಿರುವ ಸಿಟಿ ರವಿ, ಜಿಹಾದಿ ಶಕ್ತಿಗಳು ನಮ್ಮ ಸಹೋದರಿಯರ ಘನತೆ ಹರಣ ಮಾಡುವುದನ್ನು ಸಹಿಸುವುದಿಲ್ಲ. ಮತಾಂತರದಂತಹ ಕೃತ್ಯದಲ್ಲಿ ತೊಡಗಿಕೊಂಡ ಯಾರೇ ಇರಲಿ ಅವರನ್ನು ಸುಮ್ಮನೆ ಬಿಡುವುದಿಲ್ಲ ಎಂದು ಎಚ್ಚರಿಸಿದ್ದಾರೆ.
On lines of Allahabad High Court's order, Karnataka will enact a law banning religious conversions for the sake of marriage.
We will not remain silent when Jihadis strip the dignity of Our Sisters.
Any one involved in the act of conversion shall face severe & swift punishment.
— C T Ravi ಸಿ ಟಿ ರವಿ (@CTRavi_BJP) November 3, 2020
Also Read: ಅಸ್ತಿತ್ವದಲ್ಲೇ ಇಲ್ಲದ ಲವ್ ಜಿಹಾದ್ ವಿರುದ್ದ ಕಾನೂನು ರೂಪಿಸಲು ಮುಂದಾದ ಯೋಗಿ
ಕೆಲ ದಿನಗಳ ಹಿಂದೆ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಯೋಗಿ ಕೂಡಾ, ಪ್ರಚೋದನಕಾರಿ ಭಾಷಣ ಮಾಡಿದ್ದು, ಹಿಂದೂ ಯುವತಿಯರನ್ನು ಪ್ರೀತಿಸುವವರಿಗೆ ಪರೋಕ್ಷ ಎಚ್ಚರಿಕೆಯನ್ನು ನೀಡಿದ್ದರು.
Also Read: ಮದುವೆ ಉದ್ದೇಶಕ್ಕಾಗಿ ಮತಾಂತರ ಸ್ವೀಕಾರಾರ್ಹವಲ್ಲ: ಅಲಹಾಬಾದ್ ಹೈಕೋರ್ಟ್