• Home
  • About Us
  • ಕರ್ನಾಟಕ
Tuesday, January 13, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಬಿಹಾರದಲ್ಲಿ ಮಹಾಘಟಬಂಧನವೇ ಸರ್ಕಾರ ರಚಿಸುತ್ತೆ: ತೇಜಸ್ವಿ ಯಾದವ್

by
November 12, 2020
in ದೇಶ
0
ಬಿಹಾರದಲ್ಲಿ ಮಹಾಘಟಬಂಧನವೇ ಸರ್ಕಾರ ರಚಿಸುತ್ತೆ: ತೇಜಸ್ವಿ ಯಾದವ್
Share on WhatsAppShare on FacebookShare on Telegram

ಮಹಾಘಟಬಂಧನದ ಮುಖ್ಯಮಂತ್ರಿ ಅಭ್ಯರ್ಥಿ ಹಾಗೂ ರಾಷ್ಟ್ರೀಯ ಜನತಾದಳದ (RJD) ನಾಯಕ ತೇಜಸ್ವಿ ಯಾದವ್ ಬಹಳ ಕುತೂಹಲಕಾರಿ ಹೇಳಿಕೆಯೊಂದನ್ನು ನೀಡಿದ್ದಾರೆ. ಚುನಾವಣಾ ಆಯೋಗ ಅಧಿಕೃತವಾಗಿ ಪ್ರಕಟಿಸಿರುವ ಪಕ್ಷಗಳ ಬಲಾಬಲದಲ್ಲಿ ಆರ್ ಜೆಡಿ ಅತಿಹೆಚ್ಚು ಸ್ನಾನ ಗಳಿಸಿರುವ (75) ದೊಡ್ಡ ಪಕ್ಷ. ಆದರೆ ಅವರ ಮಹಾಘಟಬಂಧನ ಗಳಿಸಿರುವುದು ಕೇವಲ 110 ಮತ್ತು ಎದುರಾಳಿ ಎನ್ ಡಿಎ ಗಳಿಸಿರುವುದು 125, ಆದರೂ ತೇಜಸ್ವಿ ಯಾದವ್ ತಾವೇ ಸರ್ಕಾರ ರಚಿಸುತ್ತೇವೆ ಎಂದು ಹೇಳಿದ್ದಾರೆ.

ADVERTISEMENT

ಪಾಟ್ನಾದ ತಮ್ಮ ನಿವಾಸದಲ್ಲಿ ಆರ್ ಜೆಡಿಯ ನೂತನ ಶಾಸಕರು ಹಾಗೂ ನಾಯಕರ ಸಭೆ ಕರೆದಿದ್ದ ಅವರು ‘ಸರ್ಕಾರ ರಚನೆಯ’ ಭರವಸೆ ನೀಡಿದ್ದಾರೆ. ಹೇಗೆ ಎಂಬುದನ್ನು ವಿವರಿಸಿದ್ದಾರೆ. ಬಿಹಾರದ ಜನತೆ ಬಿಜೆಪಿ ವಿರುದ್ಧ ಹಾಗೂ ಎನ್ ಡಿಎ ವಿರುದ್ಧ ಮತ ನೀಡಿದ್ದಾರೆ. ಆದರೆ ಚುನಾವಣಾ ಆಯೋಗ ಎನ್ ಡಿಎ ಪರ ಬಹುಮತ ಘೋಷಿಸಿದೆ. ಚುನಾವಣಾ ಅಕ್ರಮದ ಬಗ್ಗೆ ಈಗಾಗಲೇ ಮಹಾಘಟಬಂಧನದ ವತಿಯಿಂದ ಚುನಾವಣಾ ಆಯೋಗಕ್ಕೆ ದೂರು ನೀಡಲಾಗಿದೆ. ಚುನಾವಣಾ ಆಯೋಗ ಏನು‌ ಕ್ರಮ ತೆಗೆದುಕೊಳ್ಳುತ್ತದೆ ಎಂಬುದನ್ನು ಎದುರು ನೋಡುತ್ತಿದ್ದೇವೆ. ಈ ಹೋರಾಟದಲ್ಲಿ ನಮಗೇ ಗೆಲುವಾಗಲಿದೆ ಎಂದಿದ್ದಾರೆ.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ಇದಲ್ಲದೆ ಕೇವಲ 40 ಶಾಸಕರನ್ನು ಗೆದ್ದಿರುವ ನಿತೀಶ್ ಕುಮಾರ್ ಅವರನ್ನು ಮುಖ್ಯಮಂತ್ರಿ ಮಾಡಲು 74 ಸ್ಥಾನಗಳಲ್ಲಿ ಗೆದ್ದಿರುವ ಬಿಜೆಪಿ ನಾಯಕರಿಗೆ ಮನಸ್ಸಿಲ್ಲ. ಬಿಜೆಪಿ ನಾಯಕರು ಪರ್ಯಾಯ ಮಾರ್ಗವನ್ನು ಹುಡುಕುತ್ತಿದ್ದಾರೆ. ನಿತೀಶ್ ಕುಮಾರ್ ಮುಖ್ಯಮಂತ್ರಿ ಆಗುವುದು ಸುಲಭವಾಗಿ ಉಳಿದಿಲ್ಲ ಎಂದು ಎನ್ ಡಿಎ ಪಾಳೆಯದ ತಲ್ಲಣಗಳನ್ನು ಸಭೆಗೆ ತಿಳಿಸಿದ್ದಾರೆ.

ಬಳಿಕ ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ಹಾಗೂ ರಾಜ್ಯದಲ್ಲಿ ಆಡಳಿತ ನಡೆಸುತ್ತಿದ್ದ ಜೆಡಿಯು ಪಕ್ಷದ ನಾಯಕರು ‘ಸರ್ಕಾರಿ ಯಂತ್ರ’ವನ್ನು ದುರುಪಯೋಗ ಮಾಡಿಕೊಂಡಿದ್ದಾರೆ. ‘ಚೋರ್ ದರ್ವಾಜಾ’ (ಕಳ್ಳ ಬಾಗಿಲು) ಮೂಲಕ ಅಧಿಕಾರ ಹಿಡಿದ್ದಾರೆ ಎಂದು ನೇರವಾಗಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಆರೋಪ ಮಾಡಿದ್ದಾರೆ.

ಬಿಹಾರದ ಜನತೆ ಬದಲಾವಣೆ ಬಯಸಿದ್ದಾರೆ ಎಂಬುದಕ್ಕೆ ನಿತೀಶ್ ಕುಮಾರ್ ಮುಖ್ಯಮಂತ್ರಿಯಾಗಿ ಮುನ್ನಡೆಸಿದ ಪಕ್ಷ ಜೆಡಿಯು ಮೂರನೇ ಸ್ಥಾನಕ್ಕೆ ತಳ್ಳಲ್ಪಟ್ಟಿರುವುದೇ ಉದಾಹರಣೆ. ನಿತೀಶ್ ಕುಮಾರ್ ಇದನ್ನು ಅರ್ಥ ಮಾಡಿಕೊಂಡು ಸ್ವತಃ ಮುಖ್ಯಮಂತ್ರಿ ಸ್ಥಾನದಿಂದ ದೂರ ಇರಬೇಕೆಂದು ತೇಜಸ್ವಿ ಯಾದವ್ ಆಗ್ರಹಿಸಿದ್ದಾರೆ.

Also Read: ಬಿಹಾರ: ಗೆದ್ದ 68% ಅಭ್ಯರ್ಥಿಗಳಿಗೆ ಕ್ರಿಮಿನಲ್‌ ಹಿನ್ನೆಲೆ

ನರೇಂದ್ರ ಮೋದಿ ಮತ್ತು ನಿತೀಶ್ ಕುಮಾರ್ ನನ್ನ ವಿರುದ್ಧ ಹಣ ಬಲ, ತೋಳ್ಬಲಗಳನ್ನು ಬಳಸುವುದೂ ಸೇರಿದಂತೆ ನಾನಾ ನಮೂನೆಯ ತಂತ್ರ-ಕುತಂತ್ರ ಮಾಡಿದ್ದಾರೆ. ಆದರೂ ಅವರಿಂದ ನಾನು ಗೆಲ್ಲುವುದನ್ನು ತಡೆಯಲು ಸಾಧ್ಯವಾಗಲಿಲ್ಲ. ಆರ್‌ಜೆಡಿ ಅತಿದೊಡ್ಡ ಪಕ್ಷವಾಗುವುದನ್ನು ತಡೆಯಲು ಸಾಧ್ಯವಾಗಲಿಲ್ಲ. ನಿತೀಶ್ ಕುಮಾರ್ ಅವರೇ ಮುಖ್ಯಮಂತ್ರಿ ಕುರ್ಚಿಯಲ್ಲಿ ಕುಳಿತರೂ ಜನರ ಹೃದಯದಲ್ಲಿರುವವರು ನಾವೇ ಎಂದು ಹೇಳಿದ್ದಾರೆ.

Also Read: ಬಿಹಾರ ಚುನಾವಣೆ ನೆನಪಿಸಿದ ಪ್ರಾದೇಶಿಕ ಪಕ್ಷಗಳ ಮಹತ್ವ

ಆರ್ ಜೆಡಿ ಮತ್ತು ಕಾಂಗ್ರೆಸ್ ಚುನಾವಣಾ ಫಲಿತಾಂಶದ ಬಗ್ಗೆ ಈಗಾಗಲೇ ಕಾನೂನು ಹೋರಾಟ ಆರಂಭಿಸಿರುವುದರ ನಡುವೆಯೇ ತೇಜಸ್ವಿ ಯಾದವ್ ‘ನಾವೇ ಸರ್ಕಾರ ರಚಿಸುತ್ತೇವೆ’ ಎಂದು ಬಹಿರಂಗವಾಗಿ ಹೇಳಿರುವುದು ಅಚ್ಚರಿ ಮೂಡಿಸಿದೆ. ಅಲ್ಲದೆ ಫಲಿತಾಂಶ ಬಂದು ಎರಡು ದಿನವಾದರೂ ಬಿಜೆಪಿ ಅಧಿಕೃತವಾಗಿ ನಿತೀಶ್ ಕುಮಾರ್ ಅವರೇ ಮುಖ್ಯಮಂತ್ರಿ ಅಭ್ಯರ್ಥಿ ಎಂದು ರಾಜಭವನಕ್ಕೆ ಪತ್ರ ಕಳಿಸದೇ ಇರುವುದು ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ.

Tags: Tejashwi Yadavಬಿಹಾರಮಹಾಘಟಬಂಧನ್
Previous Post

ಕರೋನಾ ಬಳಿಕ ಆರೋಗ್ಯ ವಿಮೆ ಖರೀದಿಯಲ್ಲಿ ಭಾರೀ ಹೆಚ್ಚಳ

Next Post

ಕುನಾಲ್ ಕಮ್ರಾ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕ್ರಿಯೆ ಆರಂಭಿಸಲು ಅನುಮತಿಸಿದ ಅಟಾರ್ನಿ ಜನರಲ್

Related Posts

Top Story

ಸಿದ್ದು, ಬಿಎಸ್ವೈ ಅವರಂತೆ ಕೆಲಸಮಾಡಿ ಜನಪ್ರಿಯ ನಾಯಕಿಯಾಗೋ ಹುಚ್ಚಿದೆ : ಲಕ್ಷ್ಮಿ ಹೆಬ್ಬಾಳ್ಕರ್ ಭಾವನಾತ್ಮಕ ಮಾತು..

by ಪ್ರತಿಧ್ವನಿ
January 13, 2026
0

ಬೆಂಗಳೂರು: ನಾನು ಎಂಎಲ್ಎ ಆದ ಮೇಲೆ ಬೆಳಗಾವಿ ಗ್ರಾಮಾಂತರ ಕ್ಷೇತ್ರದಲ್ಲಿ ಯಾವ ಜಾತಿ ಗಲಭೆ, ಜಾತಿ ರಾಜಕಾರಣ, ಪೊಲೀಸರ ಮೇಲೆ ಒತ್ತಡ, ಒತ್ತಾಯ ಮಾಡಿಲ್ಲ.ಕುವೆಂಪುರವರು ಹೇಳಿದಂತೆ ನಮ್ಮ...

Read moreDetails

ಇತಿಹಾಸ ಸೃಷ್ಟಿಸಿದ ಕುಣಿಗಲ್ ಉತ್ಸವ ! 35 ಸಾವಿರ ಜನ ಜನರ ಉಪಸ್ಥಿತಿಯಲ್ಲಿ ನಡೆದ ಬೃಹತ್ ತಾರಾಮೇಳ !

January 13, 2026
ಅಕ್ರಮ ತೆರವಿನ ಹೆಸರಿನಲ್ಲಿ ಬಡವರ ಬದುಕು ಧ್ವಂಸ!: ರಾ ಚಿಂತನ್..!!

ಅಕ್ರಮ ತೆರವಿನ ಹೆಸರಿನಲ್ಲಿ ಬಡವರ ಬದುಕು ಧ್ವಂಸ!: ರಾ ಚಿಂತನ್..!!

January 13, 2026
ಮಹಾತ್ಮ ಗಾಂಧಿ ಹೆಸರು ಎಂದರೆ ಬಿಜೆಪಿಗೆ ಅಲರ್ಜಿ: ಸಿ.ಎಂ ಸಿದ್ದರಾಮಯ್ಯ

ಮಹಾತ್ಮ ಗಾಂಧಿ ಹೆಸರು ಎಂದರೆ ಬಿಜೆಪಿಗೆ ಅಲರ್ಜಿ: ಸಿ.ಎಂ ಸಿದ್ದರಾಮಯ್ಯ

January 13, 2026
ರಾಹುಲ್ ಗಾಂಧಿ ಜೊತೆಗೆ ರಾಜಕಾರಣ ಚರ್ಚೆ ಮಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

ರಾಹುಲ್ ಗಾಂಧಿ ಜೊತೆಗೆ ರಾಜಕಾರಣ ಚರ್ಚೆ ಮಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

January 13, 2026
Next Post
ಕುನಾಲ್ ಕಮ್ರಾ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕ್ರಿಯೆ ಆರಂಭಿಸಲು ಅನುಮತಿಸಿದ ಅಟಾರ್ನಿ ಜನರಲ್

ಕುನಾಲ್ ಕಮ್ರಾ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕ್ರಿಯೆ ಆರಂಭಿಸಲು ಅನುಮತಿಸಿದ ಅಟಾರ್ನಿ ಜನರಲ್

Please login to join discussion

Recent News

Top Story

ಸಿದ್ದು, ಬಿಎಸ್ವೈ ಅವರಂತೆ ಕೆಲಸಮಾಡಿ ಜನಪ್ರಿಯ ನಾಯಕಿಯಾಗೋ ಹುಚ್ಚಿದೆ : ಲಕ್ಷ್ಮಿ ಹೆಬ್ಬಾಳ್ಕರ್ ಭಾವನಾತ್ಮಕ ಮಾತು..

by ಪ್ರತಿಧ್ವನಿ
January 13, 2026
Top Story

ಇತಿಹಾಸ ಸೃಷ್ಟಿಸಿದ ಕುಣಿಗಲ್ ಉತ್ಸವ ! 35 ಸಾವಿರ ಜನ ಜನರ ಉಪಸ್ಥಿತಿಯಲ್ಲಿ ನಡೆದ ಬೃಹತ್ ತಾರಾಮೇಳ !

by ಪ್ರತಿಧ್ವನಿ
January 13, 2026
ಅಕ್ರಮ ತೆರವಿನ ಹೆಸರಿನಲ್ಲಿ ಬಡವರ ಬದುಕು ಧ್ವಂಸ!: ರಾ ಚಿಂತನ್..!!
Top Story

ಅಕ್ರಮ ತೆರವಿನ ಹೆಸರಿನಲ್ಲಿ ಬಡವರ ಬದುಕು ಧ್ವಂಸ!: ರಾ ಚಿಂತನ್..!!

by ಪ್ರತಿಧ್ವನಿ
January 13, 2026
ಮಹಾತ್ಮ ಗಾಂಧಿ ಹೆಸರು ಎಂದರೆ ಬಿಜೆಪಿಗೆ ಅಲರ್ಜಿ: ಸಿ.ಎಂ ಸಿದ್ದರಾಮಯ್ಯ
Top Story

ಮಹಾತ್ಮ ಗಾಂಧಿ ಹೆಸರು ಎಂದರೆ ಬಿಜೆಪಿಗೆ ಅಲರ್ಜಿ: ಸಿ.ಎಂ ಸಿದ್ದರಾಮಯ್ಯ

by ಪ್ರತಿಧ್ವನಿ
January 13, 2026
ರಾಹುಲ್ ಗಾಂಧಿ ಜೊತೆಗೆ ರಾಜಕಾರಣ ಚರ್ಚೆ ಮಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ
Top Story

ರಾಹುಲ್ ಗಾಂಧಿ ಜೊತೆಗೆ ರಾಜಕಾರಣ ಚರ್ಚೆ ಮಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
January 13, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಸಿದ್ದು, ಬಿಎಸ್ವೈ ಅವರಂತೆ ಕೆಲಸಮಾಡಿ ಜನಪ್ರಿಯ ನಾಯಕಿಯಾಗೋ ಹುಚ್ಚಿದೆ : ಲಕ್ಷ್ಮಿ ಹೆಬ್ಬಾಳ್ಕರ್ ಭಾವನಾತ್ಮಕ ಮಾತು..

January 13, 2026

ಇತಿಹಾಸ ಸೃಷ್ಟಿಸಿದ ಕುಣಿಗಲ್ ಉತ್ಸವ ! 35 ಸಾವಿರ ಜನ ಜನರ ಉಪಸ್ಥಿತಿಯಲ್ಲಿ ನಡೆದ ಬೃಹತ್ ತಾರಾಮೇಳ !

January 13, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada