• Home
  • About Us
  • ಕರ್ನಾಟಕ
Tuesday, December 23, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಸಿಟಿ ರವಿಯವರನ್ನು ಇಕ್ಕಟ್ಟಿನಲ್ಲಿ ಸಿಲುಕಿಸಲಿರುವ ನೂತನ ಜವಾಬ್ದಾರಿ

by
November 14, 2020
in ಕರ್ನಾಟಕ
0
ಸಿಟಿ ರವಿಯವರನ್ನು ಇಕ್ಕಟ್ಟಿನಲ್ಲಿ ಸಿಲುಕಿಸಲಿರುವ ನೂತನ ಜವಾಬ್ದಾರಿ
Share on WhatsAppShare on FacebookShare on Telegram

ಕನ್ನಡ ಸಂಸ್ಕೃತಿ ಇಲಾಖೆ ಸಚಿವ ಸಿಟಿ ರವಿ ಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆ ನೀಡಿದ ಬಳಿಕ ಇದೀಗ ಮಹಾರಾಷ್ಟ್ರ, ಗೋವಾ ಹಾಗೂ ತಮಿಳುನಾಡಿನ ಉಸ್ತುವಾರಿಯನ್ನು ನೀಡಿ ಜವಾಬ್ದಾರಿಯನ್ನು ಹೆಚ್ಚಿಸಿದೆ.

ADVERTISEMENT

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ ವೇಳೆ ಸಿಟಿ ರವಿಯ ಸಚಿವ ಸ್ಥಾನಕ್ಕೆ ಕೊಕ್‌ ಬೀಳುವುದು ಈಗಾಗಲೇ ಖಚಿತವಾಗಿದೆ. ಇದೀಗ ಹೊಸದಾಗಿ ವಹಿಸಿರುವ ನೂತನ ಜವಾಬ್ದಾರಿಯಿಂದ ಸಿಟಿ ರವಿ ಬೇರೆಯದೇ ರೀತಿಯ ಇಕ್ಕಟ್ಟಿಗೆ ಸಿಲುಕುವುದು ಮೇಲ್ನೋಟಕ್ಕೆ ಕಂಡುಬರುತ್ತಿದೆ.

Also Read: ಸಚಿವ ಸ್ಥಾನದಿಂದ ಕೆಳಗಿಳಿಯಲಿರುವ ಸಿಟಿ ರವಿ: ಯಡಿಯೂರಪ್ಪ ನಿರಾಳ

ಮಹಾರಾಷ್ಟ್ರದೊಂದಿಗೆ ಕರ್ನಾಟಕಕ್ಕೆ ಈಗಾಗಲೇ ಗಡಿ ವಿವಾದ, ಭಾಷಾ ವಿವಾದವಿದ್ದು, ಈ ವಿಚಾರದಲ್ಲಿ ಸಿಟಿ ರವಿ ಮಹಾರಾಷ್ಟ್ರದ ಪರ ಮೃದು ಧೋರಣೆ ತಾಳಿದರೆ ಮೊದಲೇ ಕನ್ನಡ ವಿರೋಧಿ ಎಂಬ ಆರೋಪವಿರುವ ಬಿಜೆಪಿಗೆ ನಕರಾತ್ಮಕ ಪರಿಣಾಮ ಬೀರುವುದಕ್ಕಿಂತಲೂ ಸಿಟಿ ರವಿಗೆ ನೇರ ಪರಿಣಾಮ ತಾಕುವ ಸಾಧ್ಯತೆ ಇದೆ. ಬದಲಾಗಿ ಕರ್ನಾಟಕದ ಪರ ನಿಂತರೆ ʼಮಹಾರಾಷ್ಟ್ರ ಬಿಜೆಪಿʼಗೆ ನಕರಾತ್ಮಕ ಏಟು ಬೀಳಲಿದೆ.

ತಮಿಳುನನಾಡಿನೊಂದಿಗೆ ಕಾವೇರಿ ನೀರು ವಿವಾದವಿದ್ದು ಇದೂ ಕೂಡಾ ಸಿಟಿ ರವಿಯವರ ಸುಗಮ ಹಾದಿಗೆ ಮುಳ್ಳಾಗುವ ಸಾಧ್ಯವಿದೆ. ತಮಿಳುನಾಡಿನಲ್ಲಿ ಬಿಜೆಪಿಯನ್ನು ಭದ್ರವಾಗಿ ನೆಲೆಯೂರಿಸಬೇಕೆಂದು ಶತಾಯಗತಾಯ ಪಕ್ಷ ಪರದಾಡುತ್ತಿದೆ. ಈಗಾಗಲೇ ಅಣ್ಣಾಮಲೈ ಮುಂತಾದವರನ್ನು ಸೇರ್ಪಡಿಸಿ ಪಕ್ಷ ಬಲವರ್ಧನೆಯಲ್ಲಿ ತೊಡಗಿಕೊಂಡಿದೆ. ತಮಿಳು ನಾಡು ರಾಜ್ಯ ಬಿಜೆಪಿ, ರಾಮಮಂದಿರ ರಥಯಾತ್ರೆಯಂತೆಯೇ ಕೃಷ್ಣನ ಹೆಸರಿನಲ್ಲಿ ರಾಜಕಾರಣ ಮಾಡಿ ತನ್ನ ಹಳೆ ಧರ್ಮ ರಾಜಕಾರಣದ ಚಾಳಿ ಮುಂದುವರೆಸಿದೆ. ʼವೆಟ್ರಿವೇಲ್ʼ ಹೆಸರಿನಲ್ಲಿ ಯಾತ್ರೆ ನಡೆದಿದ್ದು, ಸಿಟಿ ರವಿ ಅದಕ್ಕೆ ಬೆಂಬಲವಾಗಿ ನಿಂತಿದ್ದರು ಹಾಗೂ ಬಂಧನಕ್ಕೂ ಒಳಗಾಗಿದ್ದರು.

Also Read: ತಮಿಳುನಾಡು: ಸಿಟಿ ರವಿ ಸೇರಿದಂತೆ ಹಲವು ಬಿಜೆಪಿ ನಾಯಕರ ಬಂಧನ

ತಮಿಳುನಾಡು-ಕರ್ನಾಟಕ ವಿಷಯ ಬಂದಾಗಲೇ ಕಾವೇರಿ ವಿಚಾರ ಮುನ್ನೆಲೆಗೆ ಬರುತ್ತದೆ. ಈ ಸಂಧರ್ಭ ಯಾವುದೇ ಒಂದು ರಾಜ್ಯದ ಪರ ಮೃದು ಧೋರಣೆಯಿಟ್ಟರೂ ಕರ್ನಾಟಕದಲ್ಲಿ ಸಿಟಿ ರವಿಗೆ ಹಾಗೂ ತಮಿಳುನಾಡಿನಲ್ಲಿ ಬಿಜೆಪಿಗೆ ತೀವ್ರ ಹಿನ್ನೆಡೆಯಾಗಲಿದೆ.

ಸಿಟಿ ರವಿಗೆ ಉಸ್ತುವಾರಿ ಕೊಟ್ಟ ಇನ್ನೊಂದು ರಾಜ್ಯ ಗೋವಾ. ಈ ರಾಜ್ಯಕ್ಕೂ ಮಹದಾಯಿ ವಿಚಾರದಲ್ಲಿ ಕರ್ನಾಟಕದೊಂದಿಗೆ ತಕರಾರಿದೆ. ಈ ಎಲ್ಲಾ ಹಿನ್ನೆಲೆಯಲ್ಲಿ ಸಿಟಿ ರವಿ ಇನ್ನಷ್ಟು ಜಾಗರೂಕರಾಗಿ ಮಾತನಾಡಬೇಕೆಂಬ ಒತ್ತಡದಲ್ಲಿರುತ್ತಾರೆ. ಅಕಸ್ಮಾತ್‌, ಈ ಯಾವುದೇ ವಿಚಾರಗಳು ಸಿಟಿ ರವಿ ಎದುರು ಬಂದರೂ ಸಿಟಿ ರವಿ ಹೇಳಿಕೆ ನೀಡದೆ ತಪ್ಪಿಸಿಕೊಳ್ಳುವಂತಿಲ್ಲ. ಹಾಗಾಗಿ ಅವರ ಮಾತು ತಮ್ಮ ವೈಯಕ್ತಿಕ ಬೆಳವಣಿಗೆಗೆ ಹಾಗೂ ಪಕ್ಷದ ಮೇಲೆ ಬೀರುವ ಪರಿಣಾಮವನ್ನು ಗಮನದಲ್ಲಿಟ್ಟು ನಿಭಾಯಿಸಬೇಕಾಗುತ್ತದೆ. ಕತ್ತಿ ಅಲಗಿನಂತಹ ಈ ಜವಾಬ್ದಾರಿಗಳನ್ನು ಸಿಟಿ ರವಿ ಹೇಗೆ ನಿರ್ವಹಿಸಲಿದ್ದಾರೆಂದು ಕಾದು ನೋಡಬೇಕು.

Also Read: ಸಚಿವ ಸ್ಥಾನ ಕಳೆದುಕೊಳ್ಳುವ ಆತಂಕದಲ್ಲಿ ಸಚಿವ ಸಿ ಟಿ ರವಿ ಆಡಿದ ಮಾತಿನ ಗುರಿ ಏನು?

Tags: ಕಾವೇರಿ ನೀರುಬೆಳಗಾವಿ ಗಡಿ ವಿವಾದಮಹದಾಯಿ ನೀರು ಹಂಚಿಕೆ ವಿವಾದಮಹದಾಯಿ ಯೋಜನೆಮಹಾರಾಷ್ಟ್ರಸಚಿವ ಸಿಟಿ ರವಿಸಿಟಿ ರವಿ
Previous Post

ಸಂಪುಟ ವಿಸ್ತರಣೆಯೋ, ಪುನರ್‌ರಚನೆಯೋ ನಿರ್ಧಾರ ಹೈಕಮಾಂಡ್‌ಗೆ ಬಿಟ್ಟದ್ದು – BSY

Next Post

ವಿದ್ಯುತ್‌ ದರ ಏರಿಸಿ BSY ಸರ್ಕಾರ ಜನತೆಗೆ ಗಾಯದ ಮೇಲೆ ಬರೆ ಹಾಕುತ್ತಿದೆ: AAP

Related Posts

Top Story

ಮನರೇಗಾ ಯೋಜನೆ ಹತ್ಯೆ ಮಾಡುತ್ತಿರುವ ಕೇಂದ್ರ : ಡಿಸಿಎಂ ಡಿ.ಕೆ.ಶಿವಕುಮಾರ್

by ಪ್ರತಿಧ್ವನಿ
December 23, 2025
0

"ಮನಮೋಹನ್ ಸಿಂಗ್ ಅವರು ಅನೇಕ ಅಧ್ಯಯನ ನಡೆಸಿ ನರೇಗಾ ಯೋಜನೆ ಜಾರಿಗೆ ತಂದಿದ್ದರು. ಮೋದಿ ಸರ್ಕಾರ ಇಂತಹ ನಿರ್ಧಾರ ಕೈಗೊಳ್ಳುತ್ತದೆ ಎಂದು ಭಾವಿಸಿರಲಿಲ್ಲ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್...

Read moreDetails

ರೈತರ ಅಭಿವೃದ್ಧಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಹೆಚ್ಚು ಒತ್ತು ನೀಡಬೇಕು: ಎನ್. ಚಲುವರಾಯಸ್ವಾಮಿ.

December 23, 2025

ಜಾಮೀನು ಅರ್ಜಿ ವಜಾ: ಭೈರತಿ ಬಸವರಾಜುಗೆ ಬಂಧನದ ಭೀತಿ ಶುರು..

December 23, 2025

ಜೀವರಕ್ಷಕ ಪ್ರಶಸ್ತಿ ಸ್ವೀಕರಿಸಿದ ಕಾರ್ಮಿಕ ಸಚಿವ ಸಂತೋಷ್‌ ಎಸ್‌ ಲಾಡ್‌

December 23, 2025
ಹೊಸಕೋಟೆಗೆ ಬಿರಿಯಾನಿ ತಿನ್ನಲು ಹೋದವರ ಸುಲಿಗೆ..

ಹೊಸಕೋಟೆಗೆ ಬಿರಿಯಾನಿ ತಿನ್ನಲು ಹೋದವರ ಸುಲಿಗೆ..

December 23, 2025
Next Post
ವಿದ್ಯುತ್‌ ದರ ಏರಿಸಿ BSY ಸರ್ಕಾರ ಜನತೆಗೆ ಗಾಯದ ಮೇಲೆ ಬರೆ ಹಾಕುತ್ತಿದೆ: AAP

ವಿದ್ಯುತ್‌ ದರ ಏರಿಸಿ BSY ಸರ್ಕಾರ ಜನತೆಗೆ ಗಾಯದ ಮೇಲೆ ಬರೆ ಹಾಕುತ್ತಿದೆ: AAP

Please login to join discussion

Recent News

Top Story

ಮನರೇಗಾ ಯೋಜನೆ ಹತ್ಯೆ ಮಾಡುತ್ತಿರುವ ಕೇಂದ್ರ : ಡಿಸಿಎಂ ಡಿ.ಕೆ.ಶಿವಕುಮಾರ್

by ಪ್ರತಿಧ್ವನಿ
December 23, 2025
Top Story

ರೈತರ ಅಭಿವೃದ್ಧಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಹೆಚ್ಚು ಒತ್ತು ನೀಡಬೇಕು: ಎನ್. ಚಲುವರಾಯಸ್ವಾಮಿ.

by ಪ್ರತಿಧ್ವನಿ
December 23, 2025
Top Story

ಜಾಮೀನು ಅರ್ಜಿ ವಜಾ: ಭೈರತಿ ಬಸವರಾಜುಗೆ ಬಂಧನದ ಭೀತಿ ಶುರು..

by ಪ್ರತಿಧ್ವನಿ
December 23, 2025
Top Story

ಜೀವರಕ್ಷಕ ಪ್ರಶಸ್ತಿ ಸ್ವೀಕರಿಸಿದ ಕಾರ್ಮಿಕ ಸಚಿವ ಸಂತೋಷ್‌ ಎಸ್‌ ಲಾಡ್‌

by ಪ್ರತಿಧ್ವನಿ
December 23, 2025
Daily Horoscope: ಇಂದು ಈ ರಾಶಿಗಳ ಯಶಸ್ಸಿನ ಹಾದಿ ಸುಗಮ..!
Top Story

Daily Horoscope: ಇಂದು ಈ ರಾಶಿಗಳ ಯಶಸ್ಸಿನ ಹಾದಿ ಸುಗಮ..!

by ಪ್ರತಿಧ್ವನಿ
December 23, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಮನರೇಗಾ ಯೋಜನೆ ಹತ್ಯೆ ಮಾಡುತ್ತಿರುವ ಕೇಂದ್ರ : ಡಿಸಿಎಂ ಡಿ.ಕೆ.ಶಿವಕುಮಾರ್

December 23, 2025

ರೈತರ ಅಭಿವೃದ್ಧಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಹೆಚ್ಚು ಒತ್ತು ನೀಡಬೇಕು: ಎನ್. ಚಲುವರಾಯಸ್ವಾಮಿ.

December 23, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada