• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಕರ್ನಾಟಕದ IPS ಅಧಿಕಾರಿ ರೂಪಾರನ್ನು ಅಮಾನತು ಮಾಡುವಂತೆ ಕಂಗನಾ ಆಗ್ರಹ

by
November 19, 2020
in ದೇಶ
0
ಕರ್ನಾಟಕದ IPS ಅಧಿಕಾರಿ ರೂಪಾರನ್ನು ಅಮಾನತು ಮಾಡುವಂತೆ ಕಂಗನಾ ಆಗ್ರಹ
Share on WhatsAppShare on FacebookShare on Telegram

ಕರ್ನಾಟಕದ ಐಪಿಎಸ್‌ ಅಧಿಕಾರಿ ಡಿ ರೂಪಾ ಅವರನ್ನು ಅಮಾನತು ಮಾಡುವಂತೆ ಬಾಲಿವುಡ್‌ನ ವಿವಾದಾತ್ಮಕ ನಟಿ ಕಂಗನಾ ರಣಾವತ್‌ ಆಗ್ರಹಿಸಿದ್ದಾರೆ. ಇಂತಹ ಪೊಲೀಸ್‌ ಅಧಿಕಾರಿಗಳು ಪೊಲೀಸ್‌ ಪಡೆಗೆ ಅಪಮಾನಕಾರಿ #ShameOnYouIPSRoopa ಎಂದು ಟ್ವೀಟ್‌ ಮಾಡಿದ್ದಾರೆ.

ದೀಪಾವಳಿ ಪಟಾಕಿ ನಿಷೇಧವನ್ನು ಸ್ವಾಗತಿಸಿದ್ದ ರೂಪಾ, ಪಟಾಕಿ ಹಿಂದೂ ಧರ್ಮದ ಸಂಸ್ಕೃತಿಯಲ್ಲವೆಂದು ಟ್ವೀಟ್‌ ಮಾಡಿದ್ದರು. ಇದನ್ನು ಹಿಂದೂ ಬಲಪಂಥೀಯ ಶಕ್ತಿಗಳು ವಿರೋಧಿಸಿದ್ದು, ನಟಿ ಕಂಗನಾ ಕೂಡಾ ವಿರೋಧಿಸಿದ್ದಾರೆ.

She should be suspended, such cops are a shame in the name of police force #ShameOnYouIPSRoopa we can’t let her get her evil ways #BringBackTrueIndology https://t.co/3rmraOW2lv

— Kangana Ranaut (@KanganaTeam) November 18, 2020


ಈ ನಡುವೆ ರೂಪಾ ಅವರೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆ ಎಂದು ಆರೋಪಿಸಲ್ಪಟ್ಟ ಎರಡು ನಕಲಿ ಅಕೌಂಟ್‌ಗಳನ್ನು ಟ್ವಿಟರ್‌ ರದ್ದುಗೊಳಿಸಿತ್ತು. ಈ ಎರಡು ಅಕೌಂಟ್‌ಗಳನ್ನು ಮರಳಿ ಸ್ಥಾಪಿಬೇಕೆಂದು ಬಲಪಂಥೀಯ ಬೆಂಬಲಿಗರು ಟ್ವಿಟರ್‌ ಟ್ರೆಂಡ್‌ ಮಾಡಿದ್ದಾರೆ.

ಇದನ್ನು ಬೆಂಬಲಿಸಿದ ಕಂಗನಾ ರಣಾವತ್‌‌, ಸಾಮಾನ್ಯ ಜನರ ಮೂಲಭೂತ ಹಕ್ಕುಗಳನ್ನು ರಕ್ಷಿಸಲು ಸರ್ಕಾರ ಐಪಿಎಸ್‌ ರೂಪಾರಂತವರನ್ನು ನೇಮಿಸುತ್ತದೆ. ಆದರೆ ಆಕೆಯ ಅಜ್ಞಾನವನ್ನು ನೋಡಿ, ಸತ್ಯದೊಂದಿಗೆ ವಾದ ಮಾಡಿ ಗೆಲ್ಲಲಾಗದೆ ಅಕಂಟ್‌ಗಳನ್ನು ಬ್ಲಾಕ್‌ ಮಾಡಿಸುತ್ತಿದ್ದಾರೆ. ನಾಚಿಕೆ ಆಗಬೇಕು ರೂಪಾ ಅವರೆ ನಿಮಗೆ ಎಂದು ಕಂಗನಾ ಇನ್ನೊಂದು ಟ್ವೀಟಿನಲ್ಲಿ ಹೇಳಿದ್ದಾರೆ.

ದೀಪಾವಳಿ ಪಟಾಕಿಯಿಂದ ಮೀಸಲಾತಿ ಚರ್ಚೆಯವರೆಗೆ..

ಸಂಘಪರಿವಾರದ ಪರಿಭಾಷೆಯಲ್ಲಿ ಮಾತನಾಡುವ, ಬಲಪಂಥೀಯ ಧೋರಣೆಯಲ್ಲಿ ವಿಷಯಗಳನ್ನು ನಿರೂಪಿಸುವ ಕಂಗನಾ, ಈ ಚರ್ಚೆಯಲ್ಲಿ ಅನಗತ್ಯವಾಗಿ ಮೀಸಲಾತಿಯನ್ನು ಎಳೆದು ತಂದು, ಮೀಸಲಾತಿಯ ಮೇಲೆ ತಮಗಿರುವ ಅಸಹನೆಯನ್ನು ಹೊರ ಹಾಕಿದ್ದಾರೆ.

Also Read: ಕಂಗನಾ ವಿರುದ್ದ FIR ದಾಖಲಿಸುವಂತೆ ನಿರ್ದೇಶನ ನೀಡಿದ ತುಮಕೂರು ನ್ಯಾಯಾಲಯ

ಡಿ.ರೂಪರವರ ವಿರುದ್ಧ ಸರಣಿ ಟ್ವೀಟ್‌ಗಳನ್ನು ಮಾಡಿದ ಕಂಗನಾ “ನೀವೆಲ್ಲಾ ಮೀಸಲಾತಿಯ ಅಡ್ಡಪರಿಣಾಮಗಳು” ಎಂದು ಹಿಯಾಳಿಸಿದ್ದಾರೆ. ಯೋಗ್ಯರಲ್ಲದವರಿಗೆ ಅಧಿಕಾರ ದೊರೆತರೆ ಅವರು ಸಮಾಜದಲ್ಲಿನ ಗಾಯಗಳನ್ನು ಶಮನಗೊಳಿಸುವ ಬದಲು ಮತ್ತಷ್ಟು ವ್ರಣಗೊಳಿಸುತ್ತಾರೆ. ರೂಪರವರ ವೈಯಕ್ತಿಕ ಬದುಕಿನ ಬಗ್ಗೆ ನನಗೆ ಹೆಚ್ಚು ತಿಳಿದಿಲ್ಲ, ಆದರೆ ಅವರು ತಮ್ಮ ಅಸಾಮರ್ಥ್ಯದಿಂದಾಗಿ ಹತಾಶೆಗೊಳಗಾಗಿರುವುದಂತೂ ಖಾತ್ರಿ ಇದೆ” ಎಂದು ಟ್ವೀಟ್‌ ಮಾಡಿದ್ದಾರೆ.

Side effects of reservations, when unworthy and undeserving gets the power they don’t heal they only hurt, I don’t know anything about her personal life but I guarantee that her frustration is stemming out of her incompetence #BringBackTrueIndology https://t.co/BUrVm1Fjz3

— Kangana Ranaut (@KanganaTeam) November 18, 2020


ADVERTISEMENT

ಕಂಗನಾರ ಈ ಟ್ವೀಟ್‌ ವ್ಯಾಪಕ ಆಕ್ರೋಶಕ್ಕೆ ಒಳಗಾಗಿದೆ. ಮೀಸಲಾತಿಯ ಉದ್ದೇಶ ಹಾಗೂ ಅವಶ್ಯಕತೆಯೇ ಗೊತ್ತಿಲ್ಲದೆ ಕಂಗನಾ ಟ್ವೀಟ್‌ ಮಾಡುತ್ತಿದ್ದಾರೆಂದು ನೆಟ್ಟಿಗರು ಕಂಗನಾರಿಗೆ ಟೀಕಿಸಿದ್ದಾರೆ. ಅಲ್ಲದೆ ಬ್ರಾಹ್ಮಣ ಸಮುದಾಯದವರಾಗಿರುವ ರೂಪಾ ಅವರು ಮೀಸಲಾತಿ ಮೂಲಕ ಬಂದವರಲ್ಲ, ಮೀಸಲಾತಿಯ ಬಗ್ಗೆ ಕಂಗನಾರಿಗಿರುವ ಪೂರ್ವಾಗ್ರಹಪೀಡಿತ ಚಿಂತನೆಯೇ ಅವರನ್ನು ಈ ರೀತಿ ಪ್ರತಿಕ್ರಿಯಿಸಲು ಪ್ರೇರೇಪಿಸಿದೆ ಎಂದು ಕಂಗನಾರ ವಿರುದ್ಧ ಟ್ವೀಟ್‌ ಮಾಡಿದ್ದಾರೆ.

Tags: ಕಂಗನಾ ರಣಾವತ್‌ಡಿ ರೂಪಾ
Previous Post

“ಕರ್ನಾಟಕ ಅವರಪ್ಪನದ್ದಲ್ಲ, ನಮ್ಮದು” – ಮಹಾರಾಷ್ಟ್ರ DCMಗೆ ರಾಜ್ಯ BJP ಸಚಿವರ ತಿರುಗೇಟು

Next Post

ಮೈಸೂರು: ದಲಿತರಿಗೆ ಕ್ಷೌರ ಮಾಡಿದ ಕ್ಷೌರಿಕನಿಗೆ ಸಾಮಾಜಿಕ ಬಹಿಷ್ಕಾರ

Related Posts

ಮೋದಿಗೆ ಹತ್ಯೆ ಸಂಚು ಆರೋಪ: ಬಿಹಾರದಲ್ಲಿ ಮೂವರು ಬಂಧನ, ಸಿಐಎ ಇಮೇಲ್‌  ಬಹಿರಂಗ
ದೇಶ

ಮೋದಿಗೆ ಹತ್ಯೆ ಸಂಚು ಆರೋಪ: ಬಿಹಾರದಲ್ಲಿ ಮೂವರು ಬಂಧನ, ಸಿಐಎ ಇಮೇಲ್‌  ಬಹಿರಂಗ

by ಪ್ರತಿಧ್ವನಿ
April 10, 2026
0

ಪಟ್ನಾ, ಏ.10: ಪ್ರಧಾನಮಂತ್ರಿ  ನರೇಂದ್ರ ಮೋದಿ ಅವರನ್ನು ಹತ್ಯೆ ಮಾಡುವ ಸಂಚು ರೂಪಿಸಿದ್ದ ಆರೋಪದಡಿ ಬಿಹಾರ ಪೊಲೀಸರು ಮೂವರು ಯುವಕರನ್ನು ಬಂಧಿಸಿದ್ದಾರೆ. ಈ ಘಟನೆ ದೇಶದಾದ್ಯಂತ ಆತಂಕ...

Read moreDetails
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

April 9, 2026
ಇಂಧನ ಕೊರತೆ ಆರೋಪ: ಕೇಂದ್ರದ ವಿರುದ್ಧ ಕೆ.ಹೆಚ್. ಮುನಿಯಪ್ಪ ವಾಗ್ದಾಳಿ

ಇಂಧನ ಕೊರತೆ ಆರೋಪ: ಕೇಂದ್ರದ ವಿರುದ್ಧ ಕೆ.ಹೆಚ್. ಮುನಿಯಪ್ಪ ವಾಗ್ದಾಳಿ

April 6, 2026
ಟೆರಿಟೋರಿಯಲ್ ಆರ್ಮಿಯಲ್ಲಿ ಉದ್ಯೋಗ:ಯುವಕರಿಗೆ ಸುವರ್ಣಾವಕಾಶ

 ಮೊಹಮ್ಮದ್ ಇಕ್ಬಾಲ್ ‘ಪಲಾಯನಗೈದ ಆರ್ಥಿಕ ಅಪರಾಧಿ’ ಎಂದು ನ್ಯಾಯಾಲಯ ಘೋಷಣೆ

April 1, 2026
Next Post
ಮೈಸೂರು: ದಲಿತರಿಗೆ ಕ್ಷೌರ ಮಾಡಿದ ಕ್ಷೌರಿಕನಿಗೆ ಸಾಮಾಜಿಕ ಬಹಿಷ್ಕಾರ

ಮೈಸೂರು: ದಲಿತರಿಗೆ ಕ್ಷೌರ ಮಾಡಿದ ಕ್ಷೌರಿಕನಿಗೆ ಸಾಮಾಜಿಕ ಬಹಿಷ್ಕಾರ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada