• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, February 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಹಿಂದೂ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಆರೋಪ: #BoycottNetflix ಅಭಿಯಾನ

by
November 22, 2020
in ದೇಶ
0
ಹಿಂದೂ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಆರೋಪ: #BoycottNetflix ಅಭಿಯಾನ
Share on WhatsAppShare on FacebookShare on Telegram

ಲಾಕ್‌ಡೌನ್‌ ಬಳಿಕ ವೆಬ್ ಸರಣಿಯ ವ್ಯಾಮೋಹ ಭಾರತೀಯರಲ್ಲಿ ಹೆಚ್ಚಾಗಿದೆ. ಆದರೆ ಇತ್ತೀಚೆಗೆ ಪದೇ ಪದೇ ಹಿಂದೂ ಮೂಲಭೂತವಾಧಿಗಳು ‘#BoycottNetflix‘ ಎಂಬ ಹ್ಯಾಶ್‌ಟ್ಯಾಗ್‌ ಮೂಲಕ ಟ್ವಿಟರ್‌ ಅಭಿಯಾನ ನಡೆಸುತ್ತಿದ್ದಾರೆ.

ಇದೀಗ, ‘ಎ ಸೂಟೇಬಲ್ ಬಾಯ್’ ಎಂಬ ವೆಬ್ ಸರಣಿಯಲ್ಲಿ ಬರುವ ಚುಂಬನದ ದೃಶ್ಯದ ವಿರುದ್ಧ ಬಿಜೆಪಿ ಮುಖಂಡ ಗೌರವ್ ತಿವಾರಿ ಮಧ್ಯಪ್ರದೇಶ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಿದ್ದಾರೆ. ವೆಬ್ ಸರಣಿಯಲ್ಲಿ ತಬು ಮತ್ತು ಇಶಾನ್ ಖಟ್ಟರ್ ಪ್ರಮುಖ ಪಾತ್ರದಲ್ಲಿದ್ದಾರೆ.

This is not our culture what Netflix is showcasing#BoycottNetflix pic.twitter.com/wpMv9mIx2X

— Parvinder Singh (@Parvinder4Bjp) November 22, 2020


‘ಎ ಸೂಟೇಬಲ್ ಬಾಯ್’ ಎಂಬ ವೆಬ್ ಶೋನ ಕಥಾವಸ್ತುವಿನ ಪ್ರಕಾರ, ಕಥೆ ಹಿಂದೂ ಹುಡುಗಿ ಮತ್ತು ಮುಸ್ಲಿಂ ಹುಡುಗನ ಪ್ರೇಮಕಥೆಯ ಸುತ್ತ ಸುತ್ತುತ್ತದೆ. ಸರಣಿಯಲ್ಲಿ ಈ ಜೋಡಿಯ ನಡುವೆ ಚುಂಬನದ ದೃಶ್ಯವನ್ನು ಚಿತ್ರೀಕರಿಸಿದ ನಂತರ ವಿವಾದ ಪ್ರಾರಂಭವಾಗಿದೆ. ಬಲಪಂಥೀಯ ಹಿಂದೂ ಗುಂಪುಗಳು ಈ ದೃಶ್ಯಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ತಿವಾರು ಪ್ರಕಾರ, ಮಧ್ಯಪ್ರದೇಶದ ಮಹೇಶ್ವರದಲ್ಲಿರುವ ದೇವಾಲಯದ ಸುತ್ತಮುತ್ತಲಿನ ಪ್ರದೇಶದಲ್ಲಿ ಹಿಂದೂ ಹುಡುಗಿ ಮತ್ತು ಮುಸ್ಲಿಂ ಹುಡುಗನ ನಡುವೆ ಚುಂಬನ ದೃಶ್ಯವನ್ನು ಚಿತ್ರೀಕರಿಸಲಾಗಿದೆ. ಇದು ಹಿಂದೂಗಳ ಭಾವನೆಗಳಿಗೆ ನೋವುಂಟು ಮಾಡಿದೆ ಮತ್ತು ಹಿಂದೂ-ಮುಸ್ಲಿಂ ನಡುವಿನ ಲವ್-ಜಿಹಾದ್ ಅನ್ನು ಪ್ರೋತ್ಸಾಹಿಸುವ ಕ್ರಿಯೆ ಅತ್ಯಂತ ನಾಚಿಕೆಗೇಡಿನ ಸಂಗತಿ ಎಂದು ಅವರು ಹೇಳಿದ್ದಾರೆ.

ನೆಟ್‌ಫ್ಲಿಕ್ಸ್ ಒಟಿಟಿ ಪ್ಲಾಟ್‌ಫಾರ್ಮ್‌ನಿಂದ ಆ ವೀಡಿಯೊವನ್ನು ತೆಗೆಯದಿದ್ದರೆ ಅದರ ವಿರುದ್ಧ ಪ್ರತಿಭಟನೆ ನಡೆಸಲಾಗುತ್ತದೆ ಮತ್ತು ಒಟಿಟಿ ಪ್ಲಾಟ್‌ಫಾರ್ಮ್ ನೆಟ್‌ಫ್ಲಿಕ್ಸ್ ವಿರುದ್ಧವೂ ಪ್ರಕರಣ ದಾಖಲಿಸಬಹುದು ಎಂದು ಬಿಜೆಪಿ ನಾಯಕ ಗೌರವ್ ತಿವಾರಿ ಹೇಳಿದ್ದಾರೆ.

अपने ‘A Suitable Boy’ कार्यक्रम में @NetflixIndia ने एक ही एपिसोड में तीन बार मंदिर प्रांगण में चुंबन दृश्य फ़िल्माए। पटकथा के अनुसार मुस्लिम युवक को हिंदू महिला प्रेम करती है, पर सभी किसिंग सीन मंदिर प्रांगण में क्यूँ शूट किए गए?

मैने रीवा में इस मामले पर FIR दर्ज करा दी है। pic.twitter.com/RcwuPDDME2

— Gaurav Tiwari (@adolitics) November 21, 2020


It`s not the first time. It won`t be the last. Time and again Netflix has shown it`s hαte towards Sanatan Dharma. Do we need such propaganda in the name of freedom of speech. It is time we take a stand. #BoycottNetflix pic.twitter.com/jYqpX4NLnR

— Vertigo_Warrior (@VertigoWarrior) November 22, 2020


#BoycottNetflix ಅಭಿಯಾನಕ್ಕೆ ಪರ-ವಿರೋಧ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಹಿಂದೂ ಮೂಲಭೂತವಾದಿಗಳು ನೆಟ್‌ಫ್ಲಿಕ್ಸ್‌ ನಿಷೇಧಕ್ಕೆ ಕರೆ ನೀಡಿದ್ದಾರೆ. ನೆಟ್‌ಫ್ಲಿಕ್ಸ್‌ ʼಹಿಂದೂಫೋಬಿಯಾʼವನ್ನು ಸೃಷ್ಟಿಸುತ್ತಿದೆ ಎಂದು ಆರೋಪಿಸಿದ್ದಾರೆ. ಆದರೆ, ನೆಟ್‌ಫ್ಲಿಕ್ಸ್‌ ಪರವೂ ನಿಂತಿರುವ ನೆಟ್ಟಿಗರು, ಚುಂಬನದ ದೃಶ್ಯ ನಮ್ಮ ಸಂಸ್ಕೃತಿಯ ವಿರುದ್ಧ ಎಂದು ಮಾತನಾಡುವವರು ದೇವಸ್ಥಾನದ ಮೇಲಿರುವ ಪ್ರಾಚೀನ ಶಿಲ್ಪಕಲೆಯನ್ನು ನೋಡಬೇಕು ಎಂದು ಪ್ರತಿಕ್ರಿಯಿಸಿದ್ದಾರೆ.

#BoycottNetflix NOW !
How can they show kissing inside a temple
THIS IS NOT OUR CULTURE!#BhaktBanerjee pic.twitter.com/vV9JDTyJ1d

— Akash Banerjee (@TheDeshBhakt) November 22, 2020


ADVERTISEMENT

ನೆಟ್‌ಫ್ಲಿಕ್ಸ್‌ ವಿರುದ್ಧ ಹಿಂದೂ ಮೂಲಭೂತವಾದಿಗಳು ಅಭಿಯಾನ ನಡೆಸುವುದು ಇದೇ ಮೊದಲಲ್ಲ. ಈ ಹಿಂದೆ ಪಾತಾಳ್‌ ಲೋಕ್‌, ಬೇತಾಳ, ಲೈಲಾ ಹಾಗೂ ಕೃಷ್ಣಾ ಆಂಡ್‌ ಹಿಸ್‌ ಲೀಲಾ ಮೊದಲಾದ ವೆಬ್‌ ಸರಣಿ/ ಸಿನೆಮಾಗಳ ವಿರುದ್ಧವೂ ಸಾಮಾಜಿಕ ಜಾಲತಾಣದ ಮೂಲಕ ಅಭಿಯಾನ ನಡೆಸಿದ್ದರು.

Tags: #BoycottNetflixA Suitable Boynetflix
Previous Post

ಕರ್ನಾಟಕ: ಕಳೆದ ಐದು ವರ್ಷದ 971 ಗಲಭೆಯಲ್ಲಿ ಬೆಂಗಳೂರು ಗಲಭೆಗೆ ಮಾತ್ರ UAPA

Next Post

ಕರೋನಾ ಸಂಕಷ್ಟದಲ್ಲಿಯೂ ಶ್ರೀ ಚರಣ್ ಸೌಹಾರ್ದ ಬ್ಯಾಂಕಿಗೆ 159.30 ಲಕ್ಷ ರೂಪಾಯಿ ಲಾಭ

Related Posts

ಅಣೆಕಟ್ಟು ಸುರಕ್ಷತೆ ಒಂದೇ ಇಲಾಖೆಯ ಜವಾಬ್ದಾರಿಯಲ್ಲ : ಸಿಎಂ ಸಿದ್ದರಾಮಯ್ಯ
Top Story

ಅಣೆಕಟ್ಟು ಸುರಕ್ಷತೆ ಒಂದೇ ಇಲಾಖೆಯ ಜವಾಬ್ದಾರಿಯಲ್ಲ : ಸಿಎಂ ಸಿದ್ದರಾಮಯ್ಯ

by ಪ್ರತಿಧ್ವನಿ
February 13, 2026
0

ಬೆಂಗಳೂರು :  ಭಾರತದಲ್ಲಿಯೇ ಅತಿ ಹೆಚ್ಚು ಅಣೆಕಟ್ಟುಗಳನ್ನು ಹೊಂದಿರುವ ರಾಜ್ಯಗಳಲ್ಲಿ ಕರ್ನಾಟಕವೂ ಒಂದಾಗಿದ್ದು, ಅಣೆಕಟ್ಟು ಸುರಕ್ಷತೆ ಕುರಿತು ನಡೆಯುವ ಚರ್ಚೆಗಳಲ್ಲಿ ಅನುಭವ ಮತ್ತು ಜವಾಬ್ದಾರಿ ಎರಡನ್ನೂ ಹೊಂದಿದ್ದೇವೆ...

Read moreDetails
ರಾಜ್ಯದ 1.31 ಕೋಟಿ ಮಹಿಳೆಯರ ಖಾತೆಗೆ ಇಂದೇ 5 ಸಾವಿರ ರೂ.ಜಮಾ-ತಮಿಳುನಾಡು ಸಿಎಂ

ರಾಜ್ಯದ 1.31 ಕೋಟಿ ಮಹಿಳೆಯರ ಖಾತೆಗೆ ಇಂದೇ 5 ಸಾವಿರ ರೂ.ಜಮಾ-ತಮಿಳುನಾಡು ಸಿಎಂ

February 13, 2026
ಆರೋಗ್ಯ ಇಲಾಖೆ ಅಧಿಕಾರಿ ವರ್ಗಾವಣೆಗೆ ಸಿಎಂ ಹೆಸರಲ್ಲಿ ನಕಲಿ  ಲೆಟರ್‌ : ಕಿಡಿಗೇಡಿಗಳ ವಿರುದ್ಧ ಕೇಸ್‌ ದಾಖಲು..

ಆರೋಗ್ಯ ಇಲಾಖೆ ಅಧಿಕಾರಿ ವರ್ಗಾವಣೆಗೆ ಸಿಎಂ ಹೆಸರಲ್ಲಿ ನಕಲಿ ಲೆಟರ್‌ : ಕಿಡಿಗೇಡಿಗಳ ವಿರುದ್ಧ ಕೇಸ್‌ ದಾಖಲು..

February 13, 2026
ದಳಪತಿ ವಿಜಯ್ ರ‍್ಯಾಲಿಯಲ್ಲಿ ಮತ್ತೊಂದು ದುರಂತ: ಹೀಟ್‌ಸ್ಟ್ರೋಕ್‌ದಿಂದ ವ್ಯಕ್ತಿ ಸಾ**

ದಳಪತಿ ವಿಜಯ್ ರ‍್ಯಾಲಿಯಲ್ಲಿ ಮತ್ತೊಂದು ದುರಂತ: ಹೀಟ್‌ಸ್ಟ್ರೋಕ್‌ದಿಂದ ವ್ಯಕ್ತಿ ಸಾ**

February 13, 2026
ಹಿರಿ ಜೀವದ ನರೇಗಾ ಯಶೋಗಾಥೆ : ನೆಮ್ಮದಿಯ ಬದುಕಿಗೆ “ಖಾತ್ರಿ”ಯಿದ್ದ ಉದ್ಯೋಗಕ್ಕೆ ಬೀಳದಿರಲಿ ಕತ್ತರಿ..!

ಹಿರಿ ಜೀವದ ನರೇಗಾ ಯಶೋಗಾಥೆ : ನೆಮ್ಮದಿಯ ಬದುಕಿಗೆ “ಖಾತ್ರಿ”ಯಿದ್ದ ಉದ್ಯೋಗಕ್ಕೆ ಬೀಳದಿರಲಿ ಕತ್ತರಿ..!

February 13, 2026
Next Post
ಕರೋನಾ ಸಂಕಷ್ಟದಲ್ಲಿಯೂ ಶ್ರೀ ಚರಣ್ ಸೌಹಾರ್ದ ಬ್ಯಾಂಕಿಗೆ 159.30 ಲಕ್ಷ ರೂಪಾಯಿ ಲಾಭ

ಕರೋನಾ ಸಂಕಷ್ಟದಲ್ಲಿಯೂ ಶ್ರೀ ಚರಣ್ ಸೌಹಾರ್ದ ಬ್ಯಾಂಕಿಗೆ 159.30 ಲಕ್ಷ ರೂಪಾಯಿ ಲಾಭ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada