• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, May 2, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಕರ್ನಾಟಕ ಬಂದ್‌ಗೆ ಸಂಪೂರ್ಣ ಬೆಂಬಲ ಘೋಷಿಸಿದ ಕರ್ನಾಟಕ ರಕ್ಷಣಾ ವೇದಿಕೆ

by
November 25, 2020
in ಕರ್ನಾಟಕ
0
ಕರ್ನಾಟಕ ಬಂದ್‌ಗೆ ಸಂಪೂರ್ಣ ಬೆಂಬಲ ಘೋಷಿಸಿದ ಕರ್ನಾಟಕ ರಕ್ಷಣಾ ವೇದಿಕೆ
Share on WhatsAppShare on FacebookShare on Telegram

ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆ ವಿರುದ್ಧ ಕನ್ನಡ ಪರ ಸಂಘಟನೆಗಳು ನೀಡಿದ ಬಂದ್‌ ಕರೆಗೆ ಕರ್ನಾಟಕ ರಕ್ಷಣಾ ವೇದಿಕೆ ಕೈಜೋಡಿಸಿದೆ. ಬೆಂಗಳೂರಿನಲ್ಲಿ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಕರವೇ ಅಧ್ಯಕ್ಷರಾದ ನಾರಾಯಣ ಗೌಡ ಅವರು, ವಾಟಾಳ್ ನಾಗರಾಜ್ ಅವರು ಬಂದ್‌ಗೆ ಬೆಂಬಲ ಕೋರಿದ್ದಾರೆ‌, ಕರವೇ ಬಂದ್‌ ಗೆ ಬೆಂಬಲ ನೀಡಲು ನಿರ್ಧರಿಸಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ADVERTISEMENT

ರಾಜ್ಯ ಸರ್ಕಾರದ ನಡೆಯನ್ನು ಟೀಕಿಸಿದ ಅವರು, ನೆರೆ ಹಾವಳಿಯಿಂದ ಜನರು ತತ್ತರಿಸಿ ಹೋಗಿದ್ದಾರೆ. ಕಷ್ಟಲ್ಲಿದ್ದಾರೆ. ಉತ್ತರ ಕರ್ನಾಟಕದ ಹತ್ತು ಜಿಲ್ಲೆಗಳಲ್ಲಿ. 25000 ಕೋಟಿ ನಷ್ಟ ಆಗಿದೆ ಎಂದು ಸಿಎಂ ಹೇಳಿದರೂ, ಕೇಂದ್ರ ಸರ್ಕಾರ 577 ಕೋಟಿ ನೀಡಿ ಸುಮ್ಮನಾಗಿದೆ. ಕೇಂದ್ರ ಕೊಟ್ಟ ಅನುದಾನದಿಂದ ಯಾವ ಸಮಸ್ಯೆಗಳನ್ನು ಪರಿಹರಿಸಲು‌ ಸಾಧ್ಯವಿಲ್ಲ. ಇಂತಹ ಸಂದರ್ಭದಲ್ಲಿ ಚುನಾವಣೆ ಗೆಲ್ಲಲು ಮರಾಠ ಅಭಿವೃದ್ಧಿ ಪ್ರಾಧಿಕಾರ ರಚಿಸಿ 50 ಕೋಟಿ ಕೊಡುತ್ತಿದೆ ಸರ್ಕಾರ. ಇದು ಸರಿಯಾದ ಕ್ರಮವಲ್ಲ, ಈ ನಿರ್ಧಾರದಿಂದ ಸರ್ಕಾರ ಹಿಂದೆ ಸರಿಯಬೇಕು, ಶಾಂತ ರೀತಿಯಿಂದ ಪ್ರತಿಭಟಿಸಲು ನಿರ್ಧಾರ ಮಾಡಿದ್ದು, ಸರ್ಕಾರದ ತೀರ್ಮಾನ ಖಡಾಖಂಡಿತವಾಗಿ ಖಂಡಿಸುತ್ತೇವೆ ಎಂದಿದ್ದಾರೆ.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ನಾವು ಮರಾಠ ಸಮಾಜದ ವಿರೋಧಿಗಳಲ್ಲ. ನಮ್ಮ ವಿರೋಧ ಸರ್ಕಾರದ ಕ್ರಮದ ವಿರುದ್ಧ, ನಾವು ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡುತ್ತಿದ್ದೇವೆಯೇ ಹೊರತು ಮರಾಠ ಸಮುದಾಯದ ವಿರುದ್ಧವಲ್ಲ, ಕರ್ನಾಟಕ ರಕ್ಷಣಾ ವೇದಿಕೆಯು ಈ ಹಿಂದೆಯೂ ಎಲ್ಲಾ ಸರ್ಕಾರಗಳ ವಿರುದ್ದ ಪ್ರತಿಭಟನೆ ನಡೆಸಿದೆ ಎಂದು ಅವರು ತಿಳಿಸಿದ್ದಾರೆ.

Also Read: ನಾವು ಹಿಂದೂಗಳು, ಕನ್ನಡಿಗರ ಓಟು ಹೋಗುತ್ತದೆಂಬ ಭಯವಿಲ್ಲ; ಬಸನಗೌಡ ಯತ್ನಾಳ್

ಚುನಾವಣೆ ಗೆಲ್ಲಲು ಈ ರೀತಿ ಮಾಡಿದರೆ ಎಲ್ಲಾ ಭಾಷಾ ಅಲ್ಪಸಂಖ್ಯಾತರಿಗೆ ಏನು ಮಾಡುತ್ತೀರಾ? ಬಿಬಿಎಂಪಿ ಚುನಾವಣೆ ಬಂದರೆ ತಮಿಳು , ತೆಲುಗು, ಮಾರ್ವಾಡಿ, ಮಲಯಾಳಿ ಭಾಷೆಗಳ ಅಭಿವೃದ್ಧಿ ಪ್ರಾಧಿಕಾರ ರಚನೆ ಮಾಡುತ್ತೀರಾ ಎಂದು ಪ್ರಶ್ನಿಸಿದ ಅವರು ಈ ರೀತಿಯ ನಿರ್ಧಾರ ತಗೋಬೇಡಿ ಎಂದು ಎಚ್ಚರಿಸಿದ್ದಾರೆ.

ಯತ್ನಾಳ್‌‌ಗೆ ತಿರುಗೇಟು!

ಕನ್ನಡ ಪರ ಹೋರಾಟಗಾರರನ್ನು ರೋಲ್‌ಕಾಲ್‌ ಗಿರಾಕಿಗಳೆಂದು ಕರೆದಿದ್ದ ಯತ್ನಾಳ್‌‌ ವಿರುದ್ಧ ಹರಿಹಾಯ್ದ ಅವರು, ಯತ್ನಾಳ್‌ ಆಡಿರುವ ಮಾತುಗಳು ಅವರ ಸ್ವಂತ ವಿವೇಚನೆಯದ್ದೋ, ಸರ್ಕಾರದ್ದೋ ಗೊತ್ತಿಲ್ಲ. ಸರ್ಕಾರದ ಮಾತುಗಳಾಗಿದ್ದರೆ, ಎಲ್ಲಾ ಶಾಸಕರು ರಾಜಿನಾಮೆ ನೀಡಿ, ಕನ್ನಡದ ಮತಗಳು ಬೇಡ ಎಂದು ಮತ ಕೇಳಿ ಗೆದ್ದು ತೋರಿಸಿ ಎಂದು ಸವಾಲು ಹಾಕಿದ್ದಾರೆ.

Also Read: ಬಸನಗೌಡ ಯತ್ನಾಳ್ ಗೆ ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡರ ಸವಾಲುಗಳು

ಎಲ್ಲಾ ತಾಲೂಕು ಮತ್ತು ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆಗಳು ನಡೆಯುತ್ತವೆ. ವಿಜಯಪುರದಲ್ಲಿ ದೊಡ್ಡ ಸಮಾವೇಶ ನಡೆಸಿ ಯತ್ನಾಳ್ ಸವಾಲಿಗೆ ಅಲ್ಲಿಯೇ ಉತ್ತರ ನೀಡುತ್ತೇವೆ ಎಂದಿರುವ ಅವರು ಕನ್ನಡದವರ ಓಟ್ ಬೇಡ ಎಂದು ಚುನಾವಣೆಗೆ ಬನ್ನಿ ಇಲ್ಲವಾದರೆ ಯತ್ನಾಳ್ ಅವರನ್ನು ಪಕ್ಷದಿಂದ ಉಚ್ಚಾಟಿಸಿ ಎಂದು ಬಹಿರಂಗ ಸವಾಲು ಹಾಕಿದ್ದಾರೆ.

Tags: ಕರ್ನಾಟಕ ಬಂದ್‌ಕರ್ನಾಟಕ ರಕ್ಷಣಾ ವೇದಿಕೆ
Previous Post

ದೆಹಲಿಯಲ್ಲಿ ಬಂಧಿಸಿರುವ ರೈತ ಮುಖಂಡರನ್ನು ಬಿಡುಗಡೆಗೊಳಿಸಿ – ಕುರಬೂರು ಶಾಂತಕುಮಾರ್

Next Post

ಕರ್ನಾಟಕ: 1630 ಹೊಸ ಕರೋನಾ ಪ್ರಕರಣ ದಾಖಲು

Related Posts

ಡಿ.ಕೆ. ಶಿವಕುಮಾರ್ ಮನೆಗೆ ಲಕ್ಷ್ಮಿ ಆಗಮನ: ಅಜ್ಜನಾದ ಡಿಕೆಶಿ, ಸಂಭ್ರಮದ ಕ್ಷಣ ವೈರಲ್   
ಕರ್ನಾಟಕ

ಮೊದಲ ದಿನವೇ ಕೆಡಿ ಭರ್ಜರಿ ಓಪನಿಂಗ್:  ಮೊದಲ‌ ದಿನದ ಕಲೆಕ್ಷನ್ ಎಷ್ಟು ?

by ಪ್ರತಿಧ್ವನಿ
May 1, 2026
0

ಕನ್ನಡ ಚಿತ್ರರಂಗದ ಬಹು ನಿರೀಕ್ಷಿತ ಕೆಡಿ ಚಿತ್ರ ಏಪ್ರಿಲ್ 30ರಂದು ಭರ್ಜರಿಯಾಗಿ ಬಿಡುಗಡೆಯಾಗಿ ಮೊದಲ ದಿನವೇ ಉತ್ತಮ ಪ್ರತಿಕ್ರಿಯೆ ಪಡೆದುಕೊಂಡಿದೆ. ಸುಮಾರು 400ಕ್ಕೂ ಹೆಚ್ಚು ಥಿಯೇಟರ್‌ಗಳಲ್ಲಿ ಬಿಡುಗಡೆಯಾದ...

Read moreDetails
ಡಿ.ಕೆ. ಶಿವಕುಮಾರ್ ಮನೆಗೆ ಲಕ್ಷ್ಮಿ ಆಗಮನ: ಅಜ್ಜನಾದ ಡಿಕೆಶಿ, ಸಂಭ್ರಮದ ಕ್ಷಣ ವೈರಲ್   

ಡಿ.ಕೆ. ಶಿವಕುಮಾರ್ ಮನೆಗೆ ಲಕ್ಷ್ಮಿ ಆಗಮನ: ಅಜ್ಜನಾದ ಡಿಕೆಶಿ, ಸಂಭ್ರಮದ ಕ್ಷಣ ವೈರಲ್  

May 1, 2026
ಬಿಗ್‌ ಬಾಸ್‌ ಮಾಜಿ ಸ್ಪರ್ಧಿಗೆ ವಂಚಿಸಿದ್ರಾ ಖ್ಯಾತ ಧಾರಾವಾಹಿ ನಿರ್ಮಾಪಕ..?

ಬಿಗ್‌ ಬಾಸ್‌ ಮಾಜಿ ಸ್ಪರ್ಧಿಗೆ ವಂಚಿಸಿದ್ರಾ ಖ್ಯಾತ ಧಾರಾವಾಹಿ ನಿರ್ಮಾಪಕ..?

May 1, 2026
ನಮ್ಮ ಸರ್ಕಾರ ಯಾವಾಗಲೂ ಕಾರ್ಮಿಕರ ಪರವಾಗಿದೆ , ಮೋದಿ ಅದರ ವಿರೋಧಿ : ಸಿದ್ದರಾಮಯ್ಯ ವಾಗ್ದಾಳಿ

ನಮ್ಮ ಸರ್ಕಾರ ಯಾವಾಗಲೂ ಕಾರ್ಮಿಕರ ಪರವಾಗಿದೆ , ಮೋದಿ ಅದರ ವಿರೋಧಿ : ಸಿದ್ದರಾಮಯ್ಯ ವಾಗ್ದಾಳಿ

May 1, 2026
ದೇಶದ ತಂತ್ರಜ್ಞಾನ, ನಾವೀನ್ಯತೆಯ ಪಯಣದಲ್ಲಿ ಕರ್ನಾಟಕವು ಮುಂಚೂಣಿಯಲ್ಲಿದೆ : ಸಚಿವ ಪ್ರಿಯಾಂಕ್‌ ಖರ್ಗೆ..

ದೇಶದ ತಂತ್ರಜ್ಞಾನ, ನಾವೀನ್ಯತೆಯ ಪಯಣದಲ್ಲಿ ಕರ್ನಾಟಕವು ಮುಂಚೂಣಿಯಲ್ಲಿದೆ : ಸಚಿವ ಪ್ರಿಯಾಂಕ್‌ ಖರ್ಗೆ..

May 1, 2026
Next Post
ಕರ್ನಾಟಕ: 1630 ಹೊಸ ಕರೋನಾ ಪ್ರಕರಣ ದಾಖಲು

ಕರ್ನಾಟಕ: 1630 ಹೊಸ ಕರೋನಾ ಪ್ರಕರಣ ದಾಖಲು

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada