• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, May 2, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಖಾಸಗಿ ಶಾಲಾ ಮಾಲೀಕರೊಂದಿಗೆ ಸರ್ಕಾರ ಶಾಮೀಲು: ಸಿದ್ದರಾಮಯ್ಯ ಆರೋಪ

by
December 21, 2020
in ಕರ್ನಾಟಕ
0
ಖಾಸಗಿ ಶಾಲಾ ಮಾಲೀಕರೊಂದಿಗೆ ಸರ್ಕಾರ ಶಾಮೀಲು: ಸಿದ್ದರಾಮಯ್ಯ ಆರೋಪ
Share on WhatsAppShare on FacebookShare on Telegram

ಕೋವಿಡ್19 ಕಾರಣದಿಂದಾಗಿ ಮುಚ್ಚಲ್ಪಟ್ಟಿರುವಂತಹ ಶಾಲಾ ಕಾಲೇಜುಗಳ ಆರಂಭಕ್ಕೆ ಸರ್ಕಾರ ಮುಂದಾಗಿದ್ದು, ಜನವರಿ 1, 2021 ರಿಂದ ಹತ್ತನೇ ತರಗತಿ ಮತ್ತು ದ್ವಿತೀಯ ಪಿಯುಸಿ ಕಾಲೇಜುಗಳನ್ನು ಆರಂಭ ಮಾಡುವುದಾಗಿ ರಾಜ್ಯಸರ್ಕಾರ ತೀರ್ಮಾನ ಕೈಗೊಂಡಿದೆ. ಇತ್ತ 6 ರಿಂದ 9 ನೇ ತರಗತಿಯವರಿಗೆ ವಿದ್ಯಾಗಮ ಕಾರ್ಯಕ್ರಮ ಮುಂದುವರೆಸಲಾಗುವುದು ಎಂದು ಸಿಎಂ ಜೊತೆ ಸಭೆ ನಡೆಸಿ ತೀರ್ಮಾನಿಸಲಾಗಿದೆ ಎಂದು ಶನಿವಾರ ಶಿಕ್ಷಣ ಸಚಿವ ಸುರೇಶ್ ಕುಮಾರ್ ಪತ್ರಿಕಾ ಗೋಷ್ಠಿ ನಡೆಸಿ ಮಾಹಿತಿ ಹಂಚಿಕೊಂಡಿದ್ದಾರೆ. ಇದರ ಬೆನ್ನಲ್ಲೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಖಾಸಗಿ ಶಾಲೆಗಳ ವಿದ್ಯಾರ್ಥಿಗಳಿಗಾಗುತ್ತಿರುವ ಅನ್ಯಾಯವನ್ನು ವಿರೋಧಿಸಿ ಪ್ರತಿಕ್ರಿಯಿಸಿದ್ದಾರೆ.

ಸರ್ಕಾರದ ಈ ಎಡಬಿಡಂಗಿ ಕಾರ್ಯ ಸರಿಯಿಲ್ಲ ಎನ್ನುವುರದ ಮೂಲಕ ಸಿದ್ದರಾಮಯ್ಯ ಖಾಸಗಿ ಶಾಲೆಗಳ ವಿಚಾರ ಪ್ರಸ್ತಾಪಿಸಿದ್ದಾರೆ. ಶಾಲೆ ಪುನರಾರಂಭದ ಬಗ್ಗೆ ಸರಣಿ ಸಭೆಗಳು, ಶಿಕ್ಷಣ ಸಚಿವರ ಮತ್ತು ಪೋಷಕರನ್ನು ಗೊಂದಲಕ್ಕೆ ನೂಕುತ್ತಿವೆ. ಈ ಸಂಬಂಧ ಶಿಕ್ಷಣ ಸಚಿವರು ಖಾಸಗಿ ಶಾಲೆಗಳ ಮುಖ್ಯಸ್ಥರ ಮತ್ತು ಪೋಷಕರ ಸಭೆ ಕರೆದು ಪಾರದರ್ಶಕವಾಗಿ ಸಮಸ್ಯೆ ಬಗೆಹರಿಸಿ ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಸ ಬೇಕು ಎಂದಿದ್ದಾರೆ.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ತರಗತಿಗಳು ನಡೆಯದೆ ಇದ್ದರೂ ಭೋದನಾ ಶುಲ್ಕದ ಜೊತೆಯಲ್ಲಿ ಪ್ರಯೋಗ ಶಾಲೆ, ಲೈಬ್ರೆರಿ ಮತ್ತಿತರ ಪಠ್ಯೇತರ ಶಲ್ಕ ವಸೂಲಿಗೆ ಹೊರಟಿರುವ ಖಾಸಗಿ ಶಾಲೆಗಳು ಸರ್ಕಾರದ ಪೊಳ್ಳು ಬೆದರಿಕೆಗೆ ಜಗ್ಗುತ್ತಿಲ್ಲ ಎನ್ನುವ ಮೂಲಕ ಸರ್ಕಾರ ಖಾಸಗಿ ಶಾಲೆಯ ಜೊತೆ ಶಾಮಿಲಾಗಿದೆ ಎಂದಿದ್ದಾರೆ. ಖಾಸಗಿ ಶಾಲೆಗಳ ಮೇಲೆ ಸರ್ಕಾರಕ್ಕೆ ನಿಯಂತ್ರಣ ಇಲ್ಲ. ತರಗತಿಗಳಿಲ್ಲದೆ ಇದ್ದರೂ ಪೋಷಕರಿಂದ ಪೂರ್ಣಶುಲ್ಕ ವಸೂಲಿ ಮಾಡಲಾಗುತ್ತಿದೆ. ಇದಕ್ಕಾಗಿ ಆನ್ ಲೈನ್ ತರಗತಿಗಳನ್ನು ಬ್ಲಾಕ್ ಮೇಲ್ ಮಾಡಲಾಗುತ್ತಿದೆ. ಸರ್ಕಾರ ಮಾತ್ರ ಕಣ್ಣುಮುಚ್ಚಿ ಕೂತಿದೆ ಎಂಬ ಅಸಮಾಧಾನವನ್ನು ಹೊರಹಾಕಿದ್ದಾರೆ.

ರಾಜ್ಯದ ಶೈಕ್ಷಣಿಕ ಕ್ಷೇತ್ರದಲ್ಲಿನ ಈಗಿನ ಬಿಕ್ಕಟ್ಟಿಗೆ @CMofKarnataka ಮತ್ತು ಶಿಕ್ಷಣಸಚಿವ @nimmasuresh ಅವರೇ ನೇರ ಹೊಣೆಗಾರರು.

ಖಾಸಗಿ ಶಾಲೆಗಳ ಆಡಳಿತ ಮಂಡಳಿ ಮತ್ತು ಪೋಷಕರ ನಡುವೆ ಜಗಳ ತಂದು ಹಾಕಿ ಇವರು ತಮ್ಮ ವೈಫಲ್ಯವನ್ನು ಮುಚ್ಚಿಕೊಳ್ಳುವ ಪ್ರಯತ್ನ ಮಾಡುತ್ತಿದ್ದಾರೆ.#SOS_Education
2/5

— Siddaramaiah (@siddaramaiah) December 20, 2020


ADVERTISEMENT

ರಾಜ್ಯದಲ್ಲಿನ ಶೈಕ್ಷಣಿಕ ಬಿಕ್ಕಟಿಗೆ ಸಿಎಂ ಯಡಿಯೂರಪ್ಪ ಮತ್ತು ಶಿಕ್ಷಣ ಸಚಿವ ಸುರೇಶ್ ಕುಮಾರ್ ನೇರಹೊಣೆಯಾಗಿದ್ದಾರೆ. ಖಾಸಗಿ ಶಾಲೆಗಳ ಆಡಳಿತ ಮಂಡಳಿ ಮತ್ತು ಪೋಷಕರ ನಡುವೆ ಜಿದ್ದಾಜಿದ್ದಿಗೆ ಕಾರಣವಾಗಿದ್ದಾರೆ. ಸರ್ಕಾರದ ಕೆಲವೊಂದು ವೈಪಲ್ಯಗಳನ್ನು ಮುಚ್ಚಿಹಾಕಲು ಈ ರೀತಿಯ ಆಟವಾಡುತ್ತಿದ್ದಾರೆಂದು ಅವರು ವಾಗ್ದಾಳಿ ನಡೆಸಿದ್ದಾರೆ.

ಸಿಎಂ ಯಡಿಯೂರಪ್ಪ ನೇತೃತ್ವದ ಸರ್ಕಾರದ ಎಡಬಿಡಂಗಿ ನಿಲುವುಗಳಿಂದಾಗಿ ವಿದ್ಯಾರ್ಥಿಗಳು, ಪೋಷಕರು ಮತ್ತು ಕೆಲವೊಂದು ಖಾಸಗಿ ಶಾಲೆಗಳ ಮಾಲೀಕರು ಬೀದಿಗಿಳಿದಿದ್ದಾರೆ. ಇದಕ್ಕೆ ಸಿಎಂ ಮತ್ತು ಶಿಕ್ಷಣ ಸಚಿವರು ಸ್ಪಷ್ಟ ನಿರ್ಧಾರ ಕೈಗೊಂಡು ಈ ಬಿಕ್ಕಟ್ಟನ್ನು ಬಗೆಹರಿಸಿ ವಿದ್ಯಾರ್ಥಿಗಳನ್ನು ರಕ್ಷಿಸ ಬೇಕೆಂದು ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

Tags: KarnatakaPrivate Schoolssiddaramaiah
Previous Post

ವಿದೇಶದಿಂದ ಹೋರಾಟಕ್ಕೆ ದೇಣಿಗೆ; ಪ್ರತಿಭಟನಾನಿರತ ರೈತರಿಗೆ ಕೇಂದ್ರದಿಂದ ಬೆದರಿಕೆ?

Next Post

ಪಶ್ಚಿಮ ಬಂಗಾಳ ಚುನಾವಣೆ; ಸಾಮಾಜಿಕ ಜಾಲತಾಣ ಪರಿಣಾಮಕಾರಿ ಬಳಕೆಗೆ ಅಮಿತ್ ಶಾ ಸೂಚನೆ

Related Posts

ಮಿತಿಮೀರಿದ ವ್ಹೀಲಿಂಗ್‌ ಪುಂಡರ ಅಟ್ಟಹಾಸ : ಬುದ್ಧಿವಾದ ಹೇಳಿದ ದಂಪತಿ ಮೇಲೆ ಮನಸೋ ಇಚ್ಚೆ ಹಲ್ಲೆ..
Top Story

ಮಿತಿಮೀರಿದ ವ್ಹೀಲಿಂಗ್‌ ಪುಂಡರ ಅಟ್ಟಹಾಸ : ಬುದ್ಧಿವಾದ ಹೇಳಿದ ದಂಪತಿ ಮೇಲೆ ಮನಸೋ ಇಚ್ಚೆ ಹಲ್ಲೆ..

by ಪ್ರತಿಧ್ವನಿ
May 2, 2026
0

ಬೆಂಗಳೂರು : ಬೆಳಂಬೆಳಿಗ್ಗೆ ಪಶ್ಚಿಮ ಬಂಗಾಳ ಮೂಲದ ದಂಪತಿಗಳ ಮೇಲೆ ಪುಂಡರು ಹಲ್ಲೆ ನಡೆಸಿರುವ ಘಟನೆ ನಡೆದಿದೆ. ನಗರದ ಹೃದಯ ಭಾಗವಾಗಿರುವ ಎಲೆಕ್ಟ್ರಾನಿಕ್ ಸಿಟಿಯ ಸಮೀಪದ ಬೆಟ್ಟದಾಸನಪುರದಲ್ಲಿ ರೋಡ್...

Read moreDetails
ಡಿ.ಕೆ. ಶಿವಕುಮಾರ್ ಮನೆಗೆ ಲಕ್ಷ್ಮಿ ಆಗಮನ: ಅಜ್ಜನಾದ ಡಿಕೆಶಿ, ಸಂಭ್ರಮದ ಕ್ಷಣ ವೈರಲ್   

ಮೊದಲ ದಿನವೇ ಕೆಡಿ ಭರ್ಜರಿ ಓಪನಿಂಗ್:  ಮೊದಲ‌ ದಿನದ ಕಲೆಕ್ಷನ್ ಎಷ್ಟು ?

May 1, 2026
ಡಿ.ಕೆ. ಶಿವಕುಮಾರ್ ಮನೆಗೆ ಲಕ್ಷ್ಮಿ ಆಗಮನ: ಅಜ್ಜನಾದ ಡಿಕೆಶಿ, ಸಂಭ್ರಮದ ಕ್ಷಣ ವೈರಲ್   

ಡಿ.ಕೆ. ಶಿವಕುಮಾರ್ ಮನೆಗೆ ಲಕ್ಷ್ಮಿ ಆಗಮನ: ಅಜ್ಜನಾದ ಡಿಕೆಶಿ, ಸಂಭ್ರಮದ ಕ್ಷಣ ವೈರಲ್  

May 1, 2026
ಬಿಗ್‌ ಬಾಸ್‌ ಮಾಜಿ ಸ್ಪರ್ಧಿಗೆ ವಂಚಿಸಿದ್ರಾ ಖ್ಯಾತ ಧಾರಾವಾಹಿ ನಿರ್ಮಾಪಕ..?

ಬಿಗ್‌ ಬಾಸ್‌ ಮಾಜಿ ಸ್ಪರ್ಧಿಗೆ ವಂಚಿಸಿದ್ರಾ ಖ್ಯಾತ ಧಾರಾವಾಹಿ ನಿರ್ಮಾಪಕ..?

May 1, 2026
ನಮ್ಮ ಸರ್ಕಾರ ಯಾವಾಗಲೂ ಕಾರ್ಮಿಕರ ಪರವಾಗಿದೆ , ಮೋದಿ ಅದರ ವಿರೋಧಿ : ಸಿದ್ದರಾಮಯ್ಯ ವಾಗ್ದಾಳಿ

ನಮ್ಮ ಸರ್ಕಾರ ಯಾವಾಗಲೂ ಕಾರ್ಮಿಕರ ಪರವಾಗಿದೆ , ಮೋದಿ ಅದರ ವಿರೋಧಿ : ಸಿದ್ದರಾಮಯ್ಯ ವಾಗ್ದಾಳಿ

May 1, 2026
Next Post
ಟಿಎಂಸಿ ಸೇರಿದ ಪತ್ನಿ; ವಿಚ್ಛೇದನ ನೀಡಲು ಬಿಜೆಪಿ ಸಂಸದ ನಿರ್ಧಾರ

ಟಿಎಂಸಿ ಸೇರಿದ ಪತ್ನಿ; ವಿಚ್ಛೇದನ ನೀಡಲು ಬಿಜೆಪಿ ಸಂಸದ ನಿರ್ಧಾರ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada