• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಕೇರಳಿಗರಿಗೆ ಪ್ರವೇಶ ನಿಷೇಧಿಸಿಲ್ಲ: ಪಿಣರಾಯಿ ಪತ್ರಕ್ಕೆ ಸುಧಾಕರ್ ಪ್ರತಿಕ್ರಿಯೆ

by
February 23, 2021
in ಕರ್ನಾಟಕ
0
ಕೇರಳಿಗರಿಗೆ ಪ್ರವೇಶ ನಿಷೇಧಿಸಿಲ್ಲ: ಪಿಣರಾಯಿ ಪತ್ರಕ್ಕೆ ಸುಧಾಕರ್ ಪ್ರತಿಕ್ರಿಯೆ
Share on WhatsAppShare on FacebookShare on Telegram

ಕರೋನಾ ಹಿನ್ನೆಲೆಯಲ್ಲಿ ಅಂತರರಾಜ್ಯ ಪ್ರಯಾಣಕ್ಕೆ ನಿರ್ಬಂಧ ಹೇರಲಾಗಿದೆ ಎಂಬ ವದಂತಿಯನ್ನು ಅಲ್ಲಗೆಳೆದ ಕರ್ನಾಟಕ ಸರ್ಕಾರ ಅಂತರ್-ರಾಜ್ಯ ಪ್ರಯಾಣಕ್ಕೆ ಯಾವುದೇ ನಿರ್ಬಂಧಗಳನ್ನು ವಿಧಿಸಿಲ್ಲ ಎಂದು ಸ್ಪಷ್ಟಪಡಿಸಿದೆ, ಆದರೆ ನೆರೆಯ ಕೇರಳ ಮತ್ತು ಮಹಾರಾಷ್ಟ್ರದಿಂದ ಕರ್ನಾಟಕಕ್ಕೆ ಆಗಮಿಸುವವರಿಗೆ 72 ಗಂಟೆಗಳು ಮೀರದ ಆರ್‌ಟಿ-ಪಿಸಿಆರ್ ನೆಗೆಟಿವ್ ಪ್ರಮಾಣಪತ್ರಗಳನ್ನು ಕಡ್ಡಾಯಗೊಳಿಸಿರುವುದಾಗಿ ತಿಳಿಸಿದೆ.

ADVERTISEMENT

ಅದಾಗ್ಯೂ, ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಕರ್ನಾಟಕ ಸರ್ಕಾರ ಕೇರಳದ ಪ್ರಯಾಣಿಕರಿಗೆ ನಿರ್ಬಂಧಿಸಿದೆ. ಈ ಕ್ರಮದಿಂದ ಮುಖ್ಯವಾಗಿ ವಿದ್ಯಾರ್ಥಿಗಳು, ಮೆಡಿಕಲ್‌ ಹಾಗೂ ಅಗತ್ಯ ಸಾಮಾಗ್ರಿ ಸಾಗಿಸುವವರಿಗೆ ತೊಂದರೆಯಾಗಿದೆ. ಪ್ರಧಾನಮಂತ್ರಿ ಕರ್ನಾಟಕ ಸರ್ಕಾರದ ಈ ಕ್ರಮದ ಕುರಿತು ಗಮನ ಹರಿಸಬೇಕೆಂದು ಪತ್ರದಲ್ಲಿ ಆಗ್ರಹಿಸಿದ್ದಾರೆ.

ಇದಕ್ಕೆ ಪ್ರತಿಕ್ರಿಯೆ ನೀಡಿದ ಕರ್ನಾಟಕ ಆರೋಗ್ಯ ಸಚಿವ ಡಾ. ಕೆ ಸುಧಾಕರ್‌ ಕರ್ನಾಟಕ ಮತ್ತು ಕೇರಳ ನಡುವಿನ ಅಂತರರಾಜ್ಯ ಪ್ರಯಾಣವನ್ನು ಕರ್ನಾಟಕ ನಿಷೇಧಿಸಿಲ್ಲ. ಆದಾಗ್ಯೂ, ಮುನ್ನೆಚ್ಚರಿಕೆ ಕ್ರಮವಾಗಿ, ಕೇರಳದಿಂದ ಕರ್ನಾಟಕಕ್ಕೆ ಪ್ರವೇಶಿಸುವ ಪ್ರಯಾಣಿಕರು ಕಡ್ಡಾಯವಾಗಿ 72 ಗಂಟೆಗಳನ್ನು ಮೀರದ ಆರ್‌ಟಿ-ಪಿಸಿಆರ್ ನೆಗೆಟಿವ್ ಪರೀಕ್ಷಾ ವರದಿಯನ್ನು ಹೊಂದಿರಬೇಕು ಎಂದು ಮಾರ್ಗಸೂಚಿಗಳನ್ನು ನೀಡಲಾಗಿದೆ ಎಂದು ತಿಳಿಸಿದ್ದಾರೆ.

Karnataka has not prohibited inter-state travel between Karnataka and Kerala. However, as a precautionary measure, guidelines have been issued that travelers entering Karnataka from Kerala must mandatorily possess a negative RT-PCR test report not older than 72 hours.@PMOIndia pic.twitter.com/R5cd0xS4Nt

— Dr Sudhakar K (Modi ka Parivar) (@DrSudhakar_) February 23, 2021

ಈ ಹಿಂದೆಯೂ ಇದರ ಕುರಿತು ಮಾಹಿತಿ ನೀಡಿದ್ದ ಆರೋಗ್ಯ ಸಚಿವ ಡಾ. ಕೆ ಸುಧಾಕರ್‌, ʼಕೇರಳ, ಮಹಾರಾಷ್ಟ್ರ ಅಥವಾ ಇನ್ಯಾವುದೇ ರಾಜ್ಯದ ಪ್ರಯಾಣಿಕರನ್ನು ನಿರ್ಬಂಧಿಸಿಲ್ಲ. ಬೇರೆ ರಾಜ್ಯಗಳು ನಮ್ಮ ಬಗ್ಗೆ ತಪ್ಪು ಅಭಿಪ್ರಾಯ ಹೊಂದಬಾರದೆಂಬ ಕಾರಣಕ್ಕೆ ನಾವು ಈ ಸ್ಪಷ್ಟನೆ ನೀಡುತ್ತಿದ್ದೇವೆ. ಅಂತರ್-ರಾಜ್ಯ ಪ್ರಯಾಣಿಕರಿಗೆ ಯಾವುದೇ ತಡೆ ಒಡ್ಡಲಾಗಿಲ್ಲ, ಒಡ್ಡುವುದಿಲ್ಲ ಎಂದು ಸಚಿವರು ತಿಳಿಸಿದ್ದರು.

ಆದರೆ ಬೇರೆ ರಾಜ್ಯದಿಂದ ಕರ್ನಾಟಕಕ್ಕೆ ಬರುವವರಿಗೆ 72 ಗಂಟೆಗಿಂತ ಹಳೆಯದಲ್ಲದ RT-PCR ವರದಿಯನ್ನು ಕಡ್ಡಾಯಗೊಳಿಸಲಾಗಿದೆ. ಈ ಕ್ರಮವನ್ನು ಕಳೆದ ವಾರವೇ ತೆಗೆದುಕೊಳ್ಳಲಾಗಿದೆ. ಬಸ್‌,ರೈಲು,ವಿಮಾನ ಅಥವಾ ಇನ್ಯಾವುದೇ ರೀತಿಯಲ್ಲಿ ಮಹಾರಾಷ್ಟ್ರ ಹಾಗೂ ಕೇರಳ ರಾಜ್ಯದಿಂದ ಬರುವ ಪ್ರಯಾಣಿಕರಿಗೆ RT-PCR ವರದಿಯನ್ನು ಕಡ್ಡಾಯಗೊಳಿಸಲಾಗಿದೆ. ಆ ರಾಜ್ಯಗಳಲ್ಲಿ ಕೋವಿಡ್‌ ಸಂಖ್ಯೆ ಗಣನೀಯವಾಗಿ ಏರುತ್ತಿರುವುದರಿಂದ ಈ ಕ್ರಮವನ್ನು ತೆಗೆದುಕೊಳ್ಳುವುದು ಅನಿವಾರ್ಯವಾಗಿತ್ತು ಎಂದು ಸುಧಾಕರ್‌ ತಿಳಿಸಿದ್ದರು.

Previous Post

ಆದಿವಾಸಿಗಳು ಹಿಂದೂಗಳಲ್ಲ, ಅವರು ಎಂದಿಗೂ ಹಿಂದೂಗಳಾಗುವುದಿಲ್ಲ: ಜಾರ್ಖಂಡ್ ಸಿಎಂ

Next Post

ʼಎಸಿಬಿʼಗೆ ಕೊಟ್ಟ ದೂರುಗಳು ಕಸದ ಬುಟ್ಟಿ ಸೇರುತ್ತಿವೆ: ಕೆಆರ್‌ಎಸ್ ಆರೋಪ

Related Posts

ಸಿಎಂ ಬದಲಾವಣೆ ಚರ್ಚೆಗೆ ತೆರೆ? ಜಿ. ಪರಮೇಶ್ವರ್ ಸ್ಪಷ್ಟನೆ ಏನು
ಕರ್ನಾಟಕ

ಸಿಎಂ ಬದಲಾವಣೆ ಚರ್ಚೆಗೆ ತೆರೆ? ಜಿ. ಪರಮೇಶ್ವರ್ ಸ್ಪಷ್ಟನೆ ಏನು

by ಪ್ರತಿಧ್ವನಿ
April 28, 2026
0

ಕಲಬುರಗಿ: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಕುರಿತ ಚರ್ಚೆಗಳು ರಾಜಕೀಯ ವಲಯದಲ್ಲಿ ಗರಿಗೆದರಿರುವ ನಡುವೆಯೇ, ಗೃಹ ಸಚಿವ ಜಿ. ಪರಮೇಶ್ವರ್ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿದ ಅವರು,...

Read moreDetails
ಕಬ್ಬನ್ ಪಾರ್ಕ್ ನಿಗೂಢ ಸಾವು ಪ್ರಕರಣದ ಸತ್ಯ ಬಯಲು

ಕಬ್ಬನ್ ಪಾರ್ಕ್ ನಿಗೂಢ ಸಾವು ಪ್ರಕರಣದ ಸತ್ಯ ಬಯಲು

April 28, 2026
ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

April 27, 2026
ಬೆಂಗಳೂರು ಅಭಿವೃದ್ಧಿಗೆ ದೆಹಲಿಯಲ್ಲಿ ದೌಡಾಯಿಸಿದ ಡಿ.ಕೆ. ಶಿವಕುಮಾರ್; ಸಾವಿರಕ್ಕೂ ಹೆಚ್ಚು ಯೋಜನೆಗಳಿಗೆ ಕೇಂದ್ರದ ಗಮನ

ಬೆಂಗಳೂರು ಅಭಿವೃದ್ಧಿಗೆ ದೆಹಲಿಯಲ್ಲಿ ದೌಡಾಯಿಸಿದ ಡಿ.ಕೆ. ಶಿವಕುಮಾರ್; ಸಾವಿರಕ್ಕೂ ಹೆಚ್ಚು ಯೋಜನೆಗಳಿಗೆ ಕೇಂದ್ರದ ಗಮನ

April 26, 2026
ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ

ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ

April 25, 2026
Next Post
ʼಎಸಿಬಿʼಗೆ ಕೊಟ್ಟ ದೂರುಗಳು ಕಸದ ಬುಟ್ಟಿ ಸೇರುತ್ತಿವೆ: ಕೆಆರ್‌ಎಸ್ ಆರೋಪ

ʼಎಸಿಬಿʼಗೆ ಕೊಟ್ಟ ದೂರುಗಳು ಕಸದ ಬುಟ್ಟಿ ಸೇರುತ್ತಿವೆ: ಕೆಆರ್‌ಎಸ್ ಆರೋಪ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada