• Home
  • About Us
  • ಕರ್ನಾಟಕ
Friday, July 11, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಅಸ್ಸಾಂನಲ್ಲಿ ಮತದಾರರ ಪಟ್ಟಿಯ ದುಪ್ಪಟ್ಟು ಮತದಾನ..!

by
April 6, 2021
in ದೇಶ
0
ಅಸ್ಸಾಂನಲ್ಲಿ ಮತದಾರರ ಪಟ್ಟಿಯ ದುಪ್ಪಟ್ಟು ಮತದಾನ..!
Share on WhatsAppShare on FacebookShare on Telegram

ಮತಗಟ್ಟೆಯ ವ್ಯಾಪ್ತಿಯ ಮತದಾರರ ಪಟ್ಟಿಯಲ್ಲಿ ಕೇವಲ 90 ಮತದಾರರಿದ್ದರೂ, ಮತಗಟ್ಟೆಯೊಂದರಲ್ಲಿ 171 ಮಂದಿ ಮತದಾನ ಮಾಡಿರುವ ಪವಾಡಸದೃಶ ಘಟನೆ ಅಸ್ಸಾಂನಲ್ಲಿ ಬೆಳಕಿಗೆ ಬಂದಿದೆ.

ADVERTISEMENT

ಏಪ್ರಿಲ್ 1ರಂದು ನಡೆದ ಅಸ್ಸಾಂ ವಿಧಾನಸಭೆ ಚುನಾವಣೆಯ ಎರಡನೇ ಹಂತದಲ್ಲಿ ಈ ಅಚ್ಚರಿಯ ಘಟನೆ ನಡೆದಿದ್ದು, ಅಲ್ಲಿನ ದಿಮಾ ಹ್ಯಾಸಾ ಜಿಲ್ಲೆಯ ಹಾಫ್ಲೊಂಗ್ ವಿಧಾನಸಭಾ ಕ್ಷೇತ್ರದ ಮತಗಟ್ಟೆಯಲ್ಲಿ ಇವಿಎಂ ಯಂತ್ರ ಬಳಸಿಯೂ ಇಂತಹ ವಿದ್ಯಮಾನ ನಡೆದಿದೆ. ಈ ಸಂಬಂಧ ಅಲ್ಲಿನ ಚುನಾವಣಾಧಿಕಾರಿ ಮತಗಟ್ಟೆಯ ಆರು ಮಂದಿ ಸಿಬ್ಬಂದಿಯನ್ನು ಅಮಾನತು ಮಾಡಿ, ಇಡೀ ವಿಧಾನಸಭಾ ಕ್ಷೇತ್ರದಲ್ಲಿ ಮರು ಮತದಾನ ನಡೆಸುವುದಾಗಿ ಘೋಷಿಸಲಾಗಿದೆ.

ಕಳೆದ ಬಾರಿ; 2016ರ ಚುನಾವಣೆಯಲ್ಲಿಈ ಕ್ಷೇತ್ರದಿಂದ ಬಿಜೆಪಿಯ ವೀರಭದ್ರ ಹಗ್ಜೇರ್ ಗೆಲುವು ಸಾಧಿಸಿದ್ದರು. ಆ ಹಿನ್ನೆಲೆಯಲ್ಲಿ ಈ ಅಕ್ರಮದ ಬಗ್ಗೆ ಸಾಕಷ್ಟು ಅನುಮಾನಗಳು ಎದ್ದಿದ್ದು, ಅಕ್ರಮ ನಡೆದು ಮೂರ್ನಾಲ್ಕು ದಿನಗಳ ಬಳಿಕ ಘಟನೆ ಬೆಳಕಿಗೆ ಬಂದಿರುವ ಬಗ್ಗೆಯೂ ಸಾಕಷ್ಟು ಚರ್ಚೆ ನಡೆಯುತ್ತಿದೆ.

ಚುನಾವಣಾ ಆಯೋಗದ ಅಧಿಕೃತ ಮತದಾರರ ಪಟ್ಟಿಯ ಬದಲಾಗಿ, ಅಲ್ಲಿನ ಗ್ರಾಮ ಮುಖ್ಯಸ್ಥ ನೀಡಿದ ಪಟ್ಟಿಯ ಪ್ರಕಾರ ಮತದಾನ ಮಾಡಿಸಿದ್ದೇ ಈ ಯಡವಟ್ಟಿಗೆ ಕಾರಣ. ಗ್ರಾಮದ ಜನರಲ್ಲದೆ ಇತರರನ್ನು ಹೊರಗಿನಿಂದ ಕರೆತಂದು ನಕಲಿ ಮತದಾನ ಮಾಡಿಸಲಾಗಿದೆ. ಮತಗಟ್ಟೆ ಅಧಿಕಾರಿಗಳು ಮತ್ತು ಸಿಬ್ಬಂದಿ ಕೂಡ ಈ ಕೃತ್ಯದಲ್ಲಿ ಪಾಲುದಾರರಾಗಿದ್ದಾರೆ ಎಂಬ ದೂರಿನ ಹಿನ್ನೆಲೆಯಲ್ಲಿ ಆರು ಮಂದಿಯನ್ನು ಅಮಾನತು ಮಾಡಲಾಗಿದೆ.

ಆದರೆ, ಮುಖ್ಯ ಮತಗಟ್ಟೆಗಳಲ್ಲಿ ನೋಂದಾಯಿತರಾದ ಮತದಾರರಿಗೆ ಉಪ ಮತಗಟ್ಟೆಗಳಲ್ಲಿ ಮತದಾನಕ್ಕೆ ಅವಕಾಶ ನೀಡಲಾಗಿತ್ತು. ಹಾಗಾಗಿ, ಮತಗಟ್ಟೆಯ ಪಟ್ಟಿಗಿಂತ ಹೆಚ್ಚು ಮತದಾನವಾಗಿದೆ ಎಂದು ಮತಗಟ್ಟೆಯ ಹಿರಿಯ ಅಧಿಕಾರಿಯೊಬ್ಬರು ಈ ಬಗ್ಗೆ ಸ್ಪಷ್ಟನೆ ನೀಡಿದ್ಧಾರೆ. ಆದರೆ, ಆ ಸ್ಪಷ್ಟನೆಯನ್ನು ಆಯೋಗ ಪರಿಗಣಿಸಿಲ್ಲ ಎಂಬುದು ಗಮನಾರ್ಹ.

ಈ ಹಿಂದೆ, ಮಾರ್ಚ್ 27ರಂದು ಮೊದಲ ಹಂತದ ಮತದಾನ ನಡೆದಾಗಲೂ ಅಸ್ಸಾಂನಲ್ಲಿ ಇಂತಹದ್ದೇ ಚುನಾವಣಾ ಅಕ್ರಮವೊಂದು ಬಯಲಾಗಿತ್ತು. ಆಗ ರತಾಬರಿ ಎಂಬ ವಿಧಾನಸಭಾ ಕ್ಷೇತ್ರದಲ್ಲಿ ಇವಿಎಂ ಯಂತ್ರಗಳನ್ನು ಬಿಜೆಪಿಯ ಅಧ್ಯರ್ಥಿಯ ಕಾರಿನಲ್ಲೇ ಸಾಗಣೆ ಮಾಡುತ್ತಿದ್ದಾಗ ಸಿಕ್ಕಿಬಿದ್ದಿದ್ದರು. ಆ ಹಿನ್ನೆಲೆಯಲ್ಲಿ ಚುನಾವಣಾ ಆಯೋಗ ಆ ಕ್ಷೇತ್ರದಲ್ಲಿ ಮರು ಚುನಾವಣೆ ಘೋಷಿಸಿತ್ತು. ಇದೀಗ ಹಾಫ್ಲೊಂಗ್ ಕ್ಷೇತ್ರದಲ್ಲಿ ಮತದಾರರ ಪಟ್ಟಿಯ ದುಪ್ಪಟ್ಟು ಮಂದಿ ಮತದಾನ ಮಾಡಿರುವ ಪವಾಡ ನಡೆದಿದೆ. ಆ ಹಿನ್ನೆಲೆಯಲ್ಲಿ ಆಯೋಗ ಅಲ್ಲಿಯೂ ಮರು ಚುನಾವಣೆ ಘೋಷಿಸಿರುವುದರಿಂದ ಸದ್ಯ ಒಟ್ಟು ಎರಡು ಕ್ಷೇತ್ರಗಳಲ್ಲಿ ಮರು ಚುನಾವಣೆ ಘೋಷಿಸಿದಂತಾಗಿದೆ.

ಅಸ್ಸಾಂ ವಿಧಾನಸಭೆಯ ಒಟ್ಟು 126 ಕ್ಷೇತ್ರಗಳಿಗೆ ಮೂರು ಹಂತಗಳಲ್ಲಿ ಚುನಾವಣೆ ನಡೆಯುತ್ತಿದ್ದು, ಮಾರ್ಚ್.27ರಂದು ಮೊದಲ ಹಂತದಲ್ಲಿ 47 ಕ್ಷೇತ್ರಗಳಿಗೆ ಮತದಾನ ನಡೆದಿದೆ. ಏಪ್ರಿಲ್.1ರಂದು ಎರಡನೇ ಹಂತದಲ್ಲಿ39 ಕ್ಷೇತ್ರಗಳಿಗೆ ಮತದಾನ ನಡೆದಿದೆ. ಏಪ್ರಿಲ್ 6ರಂದು 40 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಮೇ 2ರಂದು ವಿಧಾನಸಭಾ ಚುನಾವಣಾ ಫಲಿತಾಂಶ.

Previous Post

ಸಿ.ಡಿ ಪ್ರಕರಣ: ಎಸ್‌ಐಟಿ ಗೆ ತನಿಖಾ ವರದಿ ನೀಡುವಂತೆ ಹೈಕೋರ್ಟ್‌ ಸೂಚನೆ‌

Next Post

ಪಂಚರಾಜ್ಯ ಚುನಾವಣೆ: ಮತದಾನದ ಹಕ್ಕು ಚಲಾಯಿಸಲಿರುವ 5 ರಾಜ್ಯಗಳ ಸುಮಾರು 20 ಕೋಟಿ ಮತದಾರರು

Related Posts

CM Siddaramaiah: ಕರ್ನಾಟಕದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ,, ಕರ್ನಾಟಕದ ಮುಖ್ಯಮಂತ್ರಿ ನಾನೇ..!!
Top Story

CM Siddaramaiah: ಕರ್ನಾಟಕದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ,, ಕರ್ನಾಟಕದ ಮುಖ್ಯಮಂತ್ರಿ ನಾನೇ..!!

by ಪ್ರತಿಧ್ವನಿ
July 10, 2025
0

ಶಾಸಕರ ಅಭಿಪ್ರಾಯ ಪಕ್ಷದ ವರಿಷ್ಠರ ತೀರ್ಮಾನವಲ್ಲ, ನಾವಿಬ್ಬರೂ ವರಿಷ್ಠರ ತೀರ್ಮಾನಕ್ಕೆ ಬದ್ಧ ಮುಖ್ಯಮಂತ್ರಿಗಳ ಬದಲಾವಣೆ ಮಾಧ್ಯಮಗಳ ಸೃಷ್ಠಿ - ಊಹಾಪೋಹಗಳಿಗೆ ಆಸ್ಪದವಿಲ್ಲ-ಮುಖ್ಯಮಂತ್ರಿ ಸಿದ್ದರಾಮಯ್ಯ ನವದೆಹಲಿ,ಜುಲೈ 10 :...

Read moreDetails

DCM DK Shivakumar: ರಾಜ್ಯದ ಆರು ನೀರಾವರಿ ಯೋಜನೆಗಳಿಗೆ ₹11,122.76 ಕೋಟಿ ಅನುದಾನಕ್ಕಾಗಿ ಮನವಿ.

July 9, 2025

HD Kumarswamy: ಗ್ರೀನ್ ಸ್ಟೀಲ್ ವಲಯಕ್ಕೆ ಒತ್ತು; ಲೋಹ ತ್ಯಾಜ್ಯ ಮರುಬಳಕೆಗೆ ಆದ್ಯತೆ.

July 9, 2025

CM Siddaramaiah: ರಕ್ಷಣಾ ಸಚಿವ ರಾಜನಾಥಸಿಂಗ್‌ ಅವರನ್ನು ಬೇಟಿ ಮಾಡಿದ ಸಿಎಂ ಸಿದ್ದರಾಮಯ್ಯ..

July 9, 2025

CM, DCM: ಸಿಎಂ, ಡಿಸಿಎಂ ಹೆಸರಲ್ಲಿ ಕೋಟಿ ಕೋಟಿ ಹಣ ವಂಚನೆ: ಜನರಿಗೆ ಯಾಮಾರಿಸಿದ್ದ ಮಹಿಳೆ ಅರೆಸ್ಟ್‌

July 9, 2025
Next Post
ಪಂಚರಾಜ್ಯ ಚುನಾವಣೆ: ಮತದಾನದ ಹಕ್ಕು ಚಲಾಯಿಸಲಿರುವ 5 ರಾಜ್ಯಗಳ ಸುಮಾರು 20 ಕೋಟಿ ಮತದಾರರು

ಪಂಚರಾಜ್ಯ ಚುನಾವಣೆ: ಮತದಾನದ ಹಕ್ಕು ಚಲಾಯಿಸಲಿರುವ 5 ರಾಜ್ಯಗಳ ಸುಮಾರು 20 ಕೋಟಿ ಮತದಾರರು

Please login to join discussion

Recent News

CM Siddaramaiah: ಕರ್ನಾಟಕದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ,, ಕರ್ನಾಟಕದ ಮುಖ್ಯಮಂತ್ರಿ ನಾನೇ..!!
Top Story

CM Siddaramaiah: ಕರ್ನಾಟಕದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ,, ಕರ್ನಾಟಕದ ಮುಖ್ಯಮಂತ್ರಿ ನಾನೇ..!!

by ಪ್ರತಿಧ್ವನಿ
July 10, 2025
Top Story

ಹಾಸನದಲ್ಲಿ ಹಾರ್ಟ್‌ ಅಟ್ಯಾಕ್‌ ಹೆಚ್ಚಾಗಲು ಇದೇ ಕಾರಣನಾ ಡಾಕ್ಟರ್‌ ಏನಂದ್ರು..!

by ಪ್ರತಿಧ್ವನಿ
July 10, 2025
Top Story

5ವರ್ಷ ನಾನೇ ಸಿಎಂರಾಜಕೀಯದಲ್ಲಿ ಅಲ್ಲೋಲ ಕಲ್ಲೋಲ..!

by ಪ್ರತಿಧ್ವನಿ
July 10, 2025
Top Story

ಗೃಹ ಸಚಿವರು ಏನೇ ಕೇಳಿದ್ರೂ I Dont No ಅಂತಾರೇ..!

by ಪ್ರತಿಧ್ವನಿ
July 10, 2025
5 ವರ್ಷವೂ ನಾನೇ ಮುಖ್ಯಮಂತ್ರಿ..!! ದೆಹಲಿಯಲ್ಲೇ ಕುಳಿತು ಸಿಎಂ ಸಿದ್ದು ಮಾಸ್ಟರ್ ಸ್ಟ್ರೋಕ್ ! 
Top Story

5 ವರ್ಷವೂ ನಾನೇ ಮುಖ್ಯಮಂತ್ರಿ..!! ದೆಹಲಿಯಲ್ಲೇ ಕುಳಿತು ಸಿಎಂ ಸಿದ್ದು ಮಾಸ್ಟರ್ ಸ್ಟ್ರೋಕ್ ! 

by Chetan
July 10, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

CM Siddaramaiah: ಕರ್ನಾಟಕದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ,, ಕರ್ನಾಟಕದ ಮುಖ್ಯಮಂತ್ರಿ ನಾನೇ..!!

CM Siddaramaiah: ಕರ್ನಾಟಕದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ,, ಕರ್ನಾಟಕದ ಮುಖ್ಯಮಂತ್ರಿ ನಾನೇ..!!

July 10, 2025

ಹಾಸನದಲ್ಲಿ ಹಾರ್ಟ್‌ ಅಟ್ಯಾಕ್‌ ಹೆಚ್ಚಾಗಲು ಇದೇ ಕಾರಣನಾ ಡಾಕ್ಟರ್‌ ಏನಂದ್ರು..!

July 10, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada