• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಪಂಚರಾಜ್ಯ ಚುನಾವಣೆ: ಮತದಾನದ ಹಕ್ಕು ಚಲಾಯಿಸಲಿರುವ 5 ರಾಜ್ಯಗಳ ಸುಮಾರು 20 ಕೋಟಿ ಮತದಾರರು

by
April 6, 2021
in ದೇಶ
0
ಪಂಚರಾಜ್ಯ ಚುನಾವಣೆ: ಮತದಾನದ ಹಕ್ಕು ಚಲಾಯಿಸಲಿರುವ 5 ರಾಜ್ಯಗಳ ಸುಮಾರು 20 ಕೋಟಿ ಮತದಾರರು
Share on WhatsAppShare on FacebookShare on Telegram

ಪ್ರಜಾಪ್ರಭುತ್ವದ ಹಬ್ಬವೆಂದೇ ಹೇಳಲಾಗುವ ಚುನಾವಣೆಯಲ್ಲಿ ಇಂದು ದೇಶದ ಸುಮಾರು 20 ಕೋಟಿ ಮತದಾರರು ಪಾಲ್ಗೊಳ್ಳಲಿದ್ದಾರೆ. ಅಸ್ಸಾಂ, ಪಶ್ಚಿಮ ಬಂಗಾಳ, ಕೇರಳ, ತಮಿಳುನಾಡು ಮತ್ತು ಪುದುಚೆರಿಯಲ್ಲಿ ನಡೆಯಲಿರುವ ಚುನಾವಣೆಯನ್ನು ಇಡೀ ದೇಶವೇ ಎದುರು ನೋಡುತ್ತಿದೆ. ಈ ರಾಜ್ಯಗಳಲ್ಲಿ ಕೇರಳ, ತಮಿಳುನಾಡು ಮತ್ತು ಪುದುಚೆರಿಯಲ್ಲಿ ಒಂದೇ ಹಂತದಲ್ಲಿ ಮತದಾನ ಪ್ರಕ್ರಿಯೆ ಮುಕ್ತಾಯವಾಗಲಿದ್ದು, ಅಸ್ಸಾಂಗೆ ಇದು ಮೂರನೇ ಹಾಗೂ ಕೊನೇಯ ಹಂತವಾಗಿದೆ. ಪಶ್ಚಿಮ ಬಂಗಾಳದಲ್ಲಿ ಇನ್ನೂ 5 ಹಂತದ ಮತದಾನ ಬಾಕಿಯಿದೆ.

ADVERTISEMENT

ಪಶ್ಚಿಮ ಬಂಗಾಳದ 31 ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ. ತೃಣಮೂಲ ಕಾಂಗ್ರೆಸ್‌ ಹಾಗೂ ಬಿಜೆಪಿ ಈ ಎಲ್ಲಾ 31 ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತಿದೆ. ಎಡಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಂಡಿರುವ ಕಾಂಗ್ರೆಸ್‌ 7 ಸ್ಥಾನಗಳಲ್ಲಿ, ಸಿಪಿಎಂ 13 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದ್ದರೆ, ಉಳಿದ ಸ್ಥಾನಗಳಲ್ಲಿ ಸಣ್ಣ ಪ್ರಾದೇಶಿಕ ಪಕ್ಷಗಳಾದ ಐಎಸ್‌ಎಫ್‌, ಎಐಎಫ್‌ಬಿ ಮತ್ತು ಆರ್‌ಎಸ್‌ಬಿ ಸ್ಪರ್ಧಿಸುತ್ತಿದೆ. 2016ರಲ್ಲಿ ನಡೆದ ಚುನಾವಣೆಯಲ್ಲಿ ಈ ಕ್ಷೇತ್ರಗಳಲ್ಲಿ ಟಿಎಂಸಿ 29 ಸ್ಥಾನಗಳನ್ನು ಗೆದ್ದುಕೊಂಡಿತ್ತು.

ತಮಿಳುನಾಡಿನಲ್ಲಿ 234 ಕ್ಷೇತ್ರಗಳಿಗೆ ಒಂದೇ ಹಂತದ ಚುನಾವಣೆ ನಡೆಯಲಿದ್ದು, ಡಿಎಂಕೆ ಮತ್ತು ಎಡಿಎಂಕೆ ನಡುವೆ ತೀವ್ರ ಹಣಾಹಣಿ ನಿರೀಕ್ಷಿಸಲಾಗುತ್ತಿದೆ. ಎಡಿಎಂಕೆ 191 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದ್ದರೆ, ಮಿತ್ರ ಪಕ್ಷಗಳಾದ ಪಿಎಂಕೆ ಮತ್ತು ಬಿಜೆಪಿ ಕ್ರಮವಾಗಿ 23 ಮತ್ತು 20 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ.

ಡಿಎಂಕೆ ಮೈತ್ರಿಕೂಟದಲ್ಲಿಯೂ, ಡಿಎಂಕೆ 188 ಸ್ಥಾನಗಳಲ್ಲಿ ಸ್ಪರ್ಧಿಸಿದರೆ, ಕಾಂಗ್ರೆಸ್‌ 25 ಸ್ಥಾನಗಳಲ್ಲಿ ಸ್ಪರ್ಧಿಸಲಿದೆ. ಉಳಿದ ಕ್ಷೇತ್ರಗಳು ಇತರೆ ಪ್ರಾದೇಶಿಕ ಪಕ್ಷಗಳಿಗೆ ಹಂಚಿಕೆ ಮಾಡಲಾಗಿದೆ. ಆದರೆ, 142 ಸ್ಥಾನಗಳಲ್ಲಿ ಸ್ಪರ್ಧಿಸಲಿರುವ ಕಮಲ್‌ ಹಾಸನ್‌ ನೇತೃತ್ವದ ಎಂಎನ್‌ಎಂ ಹಾಗೂ ಇದರ ಮಿತ್ರ ಪಕ್ಷಗಳು ಈ ಬಾರಿ ಚುನಾವಣೆಯಲ್ಲಿ ಎಷ್ಟು ಮತಗಳನ್ನು ಪಡೆಯುತ್ತಾರೆ ಎಂಬುದು ನಿಜಕ್ಕೂ ಕುತೂಹಲ ಕೆರಳಿಸಿದೆ.

ಇನ್ನು ಕೇರಳದ 140 ಕ್ಷೇತ್ರಗಳಿಗೂ ಒಂದೇ ಹಂತದಲ್ಲಿ ಮತದಾನವಾಗಲಿದೆ. ಪಿನರಾಯಿ ವಿಜಯನ್‌ ನೇತೃತ್ವದ ಎಲ್‌ಡಿಎಫ್‌ ಈ ಭಾರಿಯೂ ಅಧಿಕಾರವನ್ನು ಉಳಿಸಿಕೊಳ್ಳುವ ವಿಶ್ವಾಸದಲ್ಲಿದೆ. ಸಿಪಿಎಂ 77 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದ್ದು, ಸಿಪಿಐ 21 ಸ್ಥಾನಗಳಲ್ಲಿ ಸ್ಪರ್ಧೆ ಮಾಡುತ್ತಿದೆ. ಜೆಡಿಎಸ್‌ ನಾಲ್ಕು ಹಾಗೂ ಎನ್‌ಸಿಪಿ ಮೂರು ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ. ಇದರೊಂದಿಗೆ 11 ಸ್ವತಂತ್ರ ಅಭ್ಯರ್ಥಿಗಳನ್ನು ಕೂಡಾ ಎಲ್‌ಡಿಎಫ್‌ ಬೆಂಬಲಿಸುತ್ತಿದೆ.

ಇನ್ನೊಂದೆಡೆ ಯುಡಿಎಫ್‌ ಮೈತ್ರಿಕೂಟದಲ್ಲಿ ಕಾಂಗ್ರೆಸ್‌ 93 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದ್ದರೆ, ಐಯುಎಂಎಲ್‌ 25 ಮತ್ತು ಕೇರಳ ಕಾಂಗ್ರೆಸ್‌ 10 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ. ಪ್ರಸ್ತುತ ಕೇರಳದಲ್ಲಿ ಕೇವಲ ಒಂದು ಸ್ಥಾನ ಮಾತ್ರ ಹೊಂದಿರುವ ಬಿಜೆಪಿ 113 ಸ್ಥಾನಗಳಿಗೆ ಸ್ಪರ್ಧಿಸುತ್ತಿದೆ.

ಅಸ್ಸಾಂನ ಕೊನೆಯ 40 ವಿಧಾನಸಭಾ ಕ್ಷೇತ್ರಗಳಿಗೆ ಇಂದು ಚುನಾವಣೆ ನಡೆಯಲಿದೆ. ಪ್ರಮುಖ ವಿರೋಧ ಪಕ್ಷವಾಗಿರುವ ಕಾಂಗ್ರೆಸ್‌ 24 ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತಿದ್ದರೆ ಮೈತ್ರಿ ಪಕ್ಷವಾಗಿರುವ ಬದ್ರುದ್ದಿನ್‌ ಅಜ್ಮಲ್‌ ಅವರ ಎಐಯುಎಫ್‌ 12 ಸ್ಥಾನಗಳಲ್ಲಿ ಸ್ಪರ್ಧೆ ಮಾಡುತ್ತಿದೆ. ಬಿಪಿಎಫ್‌ ಹಾಗೂ ಸಿಪಿಎಂ ತಲಾ ಒಂದು ಸ್ಥಾನಗಳಲ್ಲಿ ಸ್ಪರ್ಧೆ ಮಾಡುತ್ತಿವೆ.

ಬಿಜೆಪಿ 20 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದ್ದು, ಇದರ ಮೈತ್ರಿ ಪಕ್ಷಗಳಾದ ಎಜಿಪಿ ಹಾಗೂ ಯುಪಿಪಿಎಲ್‌ ಕ್ರಮವಾಗಿ 13 ಮತ್ತು 8 ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತಿದೆ. 2016 ಬಿಜೆಪಿ-ಎಜಿಪಿ ಮೈತ್ರಿಕೂಟವು ಈ 40 ಕ್ಷೇತ್ರಗಳಲ್ಲಿ 15ನ್ನು ಗೆದ್ದುಕೊಂಡಿತ್ತು. ಕಾಂಗ್ರೆಸ್‌ 11 ಗೆದ್ದರೆ, ಬಿಪಿಎಫ್‌ 8 ಕ್ಷೇತ್ರಗಳಲ್ಲಿ ಮತ್ತು ಎಐಯುಡಿಎಫ್‌ ಆರು ಸ್ಥಾನಗಳಲ್ಲಿ ಗೆಲುವು ಸಾಧಿಸಿತ್ತು.

ನಾಟಕೀಯ ಬೆಳವಣಿಗೆಗಳಿಂದ ಪತನಗೊಂಡಿದ್ದ ಪುದುಚೆರಿ ಸರ್ಕಾರವನ್ನು ಸದ್ಯಕ್ಕೆ ರಾಷ್ಟ್ರಪತಿಗಳೇ ನಡೆಸುತ್ತಿದ್ದಾರೆ. ಇಂದು 30 ಸ್ಥಾನಗಳಿಗೆ ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದ್ದು, 14 ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಸ್ಪರ್ಧೆ ಮಾಡುತ್ತಿದೆ. 13 ಕ್ಷೇತ್ರಗಳಲ್ಲಿ ಡಿಎಂಕೆ ಸ್ಪರ್ಧಿಸುತ್ತಿದೆ. ಉಳಿದ ಸ್ಥಾನಗಳನ್ನು ಮೈತ್ರಿಕೂಟದ ಇತರ ಪಕ್ಷಗಳಿಗೆ ಹಂಚಿಕೆ ಮಾಡಲಾಗಿದೆ.

ಎನ್‌ಡಿಎ ಮೈತ್ರಿಕೂಟದಲ್ಲಿ ಬಿಜೆಪಿ 9 ಸ್ಥಾನಗಳಲ್ಲಿ ಸ್ಪರ್ಧೆ ಮಾಡುತ್ತಿದ್ದು, 14 ಕ್ಷೇತ್ರಗಳಲ್ಲಿ ಎಡಿಎಂಕೆ ಸ್ಪರ್ಧಿಸುತ್ತಿದೆ. ಉಳಿದ ಸ್ಥಾನಗಳನ್ನು ಮೈತ್ರಿಕೂಟದ ಇತರ ಪಕ್ಷಗಳಿಗೆ ಹಂಚಿಕೆ ಮಾಡಲಾಗಿದೆ.

ಇಂದು ಬೆಳಿಗ್ಗೆ 9 ಗಂಟೆಯ ವೇಳೆಗೆ ತಮಿಳುನಾಡಿನಲ್ಲಿ 13.8% ಮತದಾರರು ಮತದಾನದಲ್ಲಿ ಭಾಗವಹಿಸಿದ್ದಾರೆ. ಕೇರಳದಲ್ಲಿ 13.88, ಪಶ್ಚಿಮ ಬಂಗಾಳದಲ್ಲಿ 14.62 ಮತ್ತು ಅಸ್ಸಾಂನಲ್ಲಿ 12.83 ಶೇಕಡಾ ಮತದಾನವಾಗಿದೆ. ಎಲ್ಲಾ ರಾಜ್ಯಗಳ ಫಲಿತಾಂಶವು ಮೇ 2ರಂದು ಪ್ರಕಟವಾಗಲಿದೆ.

Previous Post

ಅಸ್ಸಾಂನಲ್ಲಿ ಮತದಾರರ ಪಟ್ಟಿಯ ದುಪ್ಪಟ್ಟು ಮತದಾನ..!

Next Post

ಈ ಭಾರತೀಯ ಸೇನಾಧಿಕಾರಿ ಬಾಂಗ್ಲಾ ಪ್ರಧಾನಿ ಶೇಖ್ ಹಸೀನಾ ಮತ್ತು ಕುಟುಂಬವನ್ನು ರಕ್ಷಿಸಿದ್ದು ಹೇಗೆ..?

Related Posts

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ
ಅಭಿಮತ

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

by ಪ್ರತಿಧ್ವನಿ
April 27, 2026
0

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ 'ಗ್ಲೋಬಲ್ ರಾಜಸ್ಥಾನ ಅಗ್ರಿಟೆಕ್ ಮೀಟ್ 2026' ಅಂಗವಾಗಿ ಬೆಂಗಳೂರಿನ ರೋಡ್ ಶೋನಲ್ಲಿ ಹೂಡಿಕೆಗೆ ಕೈಗಾರಿಕೆಗಳ ಆಸಕ್ತಿ...

Read moreDetails
ಬೆಸ್ಕಾಂನ ‘ಹೆಚ್‌ಟಿ ಮಿತ್ರ’  ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

ಬೆಸ್ಕಾಂನ ‘ಹೆಚ್‌ಟಿ ಮಿತ್ರ’ ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

April 23, 2026
ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

April 23, 2026
ಮಹಿಳಾ ಮೀಸಲಾತಿ ಡಿಎಂಕೆ ರಾಜಕೀಯ ಹುನ್ನಾರಕ್ಕೆ ರಾಜ್ಯದ ಹಿತ ಬಲಿ:ಬಸವರಾಜ ಬೊಮ್ಮಾಯಿ

ಮಹಿಳಾ ಮೀಸಲಾತಿ ಡಿಎಂಕೆ ರಾಜಕೀಯ ಹುನ್ನಾರಕ್ಕೆ ರಾಜ್ಯದ ಹಿತ ಬಲಿ:ಬಸವರಾಜ ಬೊಮ್ಮಾಯಿ

April 23, 2026
ಸಂವಿಧಾನದ ಅಶಯಗಳು -ಬಾಬು ಜಗಜೀವನ್‌ರಾಮ್‌-

ಸಂವಿಧಾನದ ಅಶಯಗಳು -ಬಾಬು ಜಗಜೀವನ್‌ರಾಮ್‌-

April 23, 2026
Next Post
ಈ ಭಾರತೀಯ ಸೇನಾಧಿಕಾರಿ ಬಾಂಗ್ಲಾ ಪ್ರಧಾನಿ ಶೇಖ್ ಹಸೀನಾ ಮತ್ತು ಕುಟುಂಬವನ್ನು ರಕ್ಷಿಸಿದ್ದು ಹೇಗೆ..?

ಈ ಭಾರತೀಯ ಸೇನಾಧಿಕಾರಿ ಬಾಂಗ್ಲಾ ಪ್ರಧಾನಿ ಶೇಖ್ ಹಸೀನಾ ಮತ್ತು ಕುಟುಂಬವನ್ನು ರಕ್ಷಿಸಿದ್ದು ಹೇಗೆ..?

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada