• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Uncategorized

ವಾರಣಾಸಿ: ಮಸೀದಿ ಅಡಿಯಲ್ಲಿ ದೇವಾಲಯವಿದೆಯೇ ಎಂದು ಸರ್ವೇ ನಡೆಸಲು ಆದೇಶ ನೀಡಿದ ಕೋರ್ಟ್

by
April 9, 2021
in Uncategorized
0
ವಾರಣಾಸಿ: ಮಸೀದಿ ಅಡಿಯಲ್ಲಿ ದೇವಾಲಯವಿದೆಯೇ ಎಂದು ಸರ್ವೇ ನಡೆಸಲು ಆದೇಶ ನೀಡಿದ ಕೋರ್ಟ್
Share on WhatsAppShare on FacebookShare on Telegram

ವಾರಣಾಸಿಯ ಪ್ರಸಿದ್ಧ ಕಾಶಿ ವಿಶ್ವನಾಥ ದೇವಾಲಯದ ಪಕ್ಕದಲ್ಲಿರುವ ಜ್ಞಾನವಾಪಿ ಮಸೀದಿಯ ಭೌತಿಕ ಸಮೀಕ್ಷೆ ನಡೆಸಲು ವಾರಣಾಸಿಯ ನ್ಯಾಯಾಲಯವು ಭಾರತದ ಪುರಾತತ್ವ ಇಲಾಖೆಗೆ (ASI) ಆದೇಶಿಸಿದೆ.

ADVERTISEMENT

ಮೊಘಲ್ ಚಕ್ರವರ್ತಿ ಔರಂಗಜೇಬನು “ಭಗವಾನ್ ವಿಶ್ವೇಶ್ವರ” ಎಂಬ ಪುರಾತನ ದೇವಾಲಯವನ್ನು ನೆಲಸಮಗೊಳಿಸಿ, ಆ ದೇವಾಲಯದ ಅವಶೇಷಗಳ ಸಹಾಯದಿಂದ ಮಸೀದಿಯನ್ನು ನಿರ್ಮಿಸಿದ್ದಾನೆ ಎಂದು ಮೂರು ದಶಕಗಳ ಹಿಂದೆ ಹಾಕಿದ್ದ ಹಳೆಯ ಅರ್ಜಿಯೊಂದರಲ್ಲಿ ತೀರ್ಪು ನೀಡುವಾಗ ನ್ಯಾಯಾಲಯ ಈ ಸಮೀಕ್ಷೆಗೆ ಆದೇಶಿಸಿದೆ.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ನ್ಯಾಯಾಲಯವು ತನ್ನ ಆದೇಶದಲ್ಲಿ, ಪುರಾತತ್ತ್ವ ಶಾಸ್ತ್ರದ ವಿಜ್ಞಾನವನ್ನು ಚೆನ್ನಾಗಿ ತಿಳಿದಿರುವ ಐವರು ಸದಸ್ಯರ ಸಮಿತಿಯನ್ನು ರಚಿಸುವಂತೆ ಸೂಚಿಸಿದ್ದು, ಹಾಗೂ, ಅದರಲ್ಲಿ ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ ಇಬ್ಬರಿಗೆ ಆದ್ಯತೆ ನೀಡುವಂತೆ ಭಾರತದ ಪುರಾತತ್ವ ಇಲಾಖೆ ಮಹಾನಿರ್ದೇಶಕರಿಗೆ ಹೇಳಿದೆ. ಅಲ್ಲದೆ, ಸಮಿತಿಯ ಮೇಲ್ವಿಚಾರಕರಾಗಿ ಒಬ್ಬ ಪ್ರಖ್ಯಾತ ವಿದ್ವಾಂಸ ಅಥವಾ ಶಿಕ್ಷಣ ತಜ್ಞರನ್ನು ನೇಮಕ ಮಾಡುವಂತೆಯೂ ನ್ಯಾಯಾಲಯ ಸೂಚಿಸಿದೆ.

ನ್ಯಾಯಾಲಯವು ತನ್ನ ಆದೇಶದಲ್ಲಿ, ವಿವಾದಿತ ಸ್ಥಳದಲ್ಲಿ ಪ್ರಸ್ತುತ ನಿಂತಿರುವ ಧಾರ್ಮಿಕ ರಚನೆಯು ಬೇರೆ ಯಾವುದೇ ಧಾರ್ಮಿಕ ರಚನೆಯ ಮೇಲಿನ ಅತಿಕ್ರಮಣ ಮಾಡಿ ರಚಿಸಲಾಗಿದೆಯೇ ಎಂದು ಕಂಡುಹಿಡಿಯುವುದು ಪುರಾತತ್ತ್ವ ಶಾಸ್ತ್ರದ ಸಮೀಕ್ಷೆಯ ಮುಖ್ಯ ಉದ್ದೇಶವೆಂದು ತಿಳಿಸಿದೆ.

ವಿವಾದಿತ ಸ್ಥಳದಲ್ಲಿ ಮಸೀದಿಯನ್ನು ನಿರ್ಮಿಸುವ ಮೊದಲು ಅಥವಾ ಹಿಂದೂ ಸಮುದಾಯಕ್ಕೆ ಸೇರಿದ ಯಾವುದೇ ದೇವಾಲಯವು ಅಸ್ತಿತ್ವದಲ್ಲಿತ್ತೇ ಎಂಬುದನ್ನು ಸಮಿತಿಯು ಪತ್ತೆಹಚ್ಚುತ್ತದೆ ಎಂದು ನ್ಯಾಯಾಲಯ ಹೇಳಿದೆ.

ಈ ಪ್ರಕರಣದ ಮೂಲ ಅರ್ಜಿಯನ್ನು 1991 ರಲ್ಲಿ ಸಲ್ಲಿಸಲಾಗಿದೆ. 1664 ರಲ್ಲಿ ಮೊಘಲ್ ಚಕ್ರವರ್ತಿ ಔರಂಗಜೇಬ ಪುರಾತನ ದೇವಾಲಯದ ಮೇಲೆ ಮಸೀದಿಯನ್ನು ನಿರ್ಮಿಸಿದ್ದಾನೆ ಎಂದು ಅರ್ಜಿಯಲ್ಲಿ ವಾದಿಸಲಾಗಿದೆ.

ಅದಾಗ್ಯೂ, ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿಯ ಸದಸ್ಯ ಆರ್.ಶಂಶದ್ ಅವರು, ಮೊಕದ್ದಮೆಯನ್ನು ನಿರ್ವಹಿಸಲಾಗದು ಮತ್ತು 1991 ರಲ್ಲಿ ಮಾಡಿದ ಕಾನೂನಿನ ದೃಷ್ಟಿಯಿಂದ ವಜಾಗೊಳಿಸಬೇಕು ಎಂದು ಆಗ್ರಹಿಸಿದ್ದಾರೆ.

“ಈ ಮೊಕದ್ದಮೆಯನ್ನು ವಜಾಗೊಳಿಸುವಂತೆ ಕೋರಿ ಅರ್ಜಿಯನ್ನು ಸಲ್ಲಿಸಲಾಗಿದ್ದು, ಅದರ ಮೇಲೆ ಜಿಲ್ಲಾ ನ್ಯಾಯಾಲಯವು ಆದೇಶ ಹೊರಡಿಸಿದೆ. ಈಗ ಮೊಕದ್ದಮೆಯನ್ನು ಆಲಿಸಬಹುದೇ ಅಥವಾ ಇಲ್ಲವೇ ಎಂಬ ಬಗ್ಗೆ ಅಲಹಾಬಾದ್ ಹೈಕೋರ್ಟ್‌ನಲ್ಲಿ ಇಡೀ ವಿಚಾರಣೆ ಬಾಕಿ ಇದೆ. ಈ ಹಿನ್ನೆಲೆಯಲ್ಲಿ, ಅಲಹಾಬಾದ್ ಹೈಕೋರ್ಟ್‌ನಲ್ಲಿ ವಿಚಾರಣೆ ಬಾಕಿ ಇದೆ. ಈ ಹಂತದಲ್ಲಿ ಅಂತಹ (ಸಮೀಕ್ಷೆಗೆ ಹೊರಡಿಸಿರುವ) ಆದೇಶವನ್ನು ಅಂಗೀಕರಿಸಬಾರದು” ಎಂದು ಅವರು ಹೇಳಿರುವುದಾಗಿ ಎನ್‌ಡಿಟಿವಿ ವರದಿ ಮಾಡಿದೆ.

Previous Post

ಧರಣಿ ನಿರತ ರೈತರನ್ನು ಸರ್ಕಾರ ಮಾತನಾಡಿಸದಿರುವುದು ರೈತರ ಸ್ವಾಭಿಮಾನಕ್ಕೆ ಆದ ಧಕ್ಕೆ –ಡಿಕೆ ಶಿವಕುಮಾರ್

Next Post

ಕೋವಿಡ್ ನಿಯಮ ಉಲ್ಲಂಘಿಸಿದ ಪ್ರಧಾನಿಗೆ ದಂಡ ವಿಧಿಸಿದ ಪೊಲೀಸರು

Related Posts

BREAKING NEWS ; ನಟ ದರ್ಶನ್‌ಗೆ ಇನ್ನೂ 1 ವರ್ಷ ಜೈಲು ವಾಸ : ಕಾಲಾವಕಾಶ ಕೇಳಿದ ಸುಪ್ರೀಂಕೋರ್ಟ್‌
Uncategorized

BREAKING NEWS ; ನಟ ದರ್ಶನ್‌ಗೆ ಇನ್ನೂ 1 ವರ್ಷ ಜೈಲು ವಾಸ : ಕಾಲಾವಕಾಶ ಕೇಳಿದ ಸುಪ್ರೀಂಕೋರ್ಟ್‌

by ಪ್ರತಿಧ್ವನಿ
May 15, 2026
0

ನವದೆಹಲಿ : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಆರೋಪಿಯಾಗಿ ಜೈಲು ಸೇರಿರುವ ನಟ ದರ್ಶನ್‌ಗೆ ಸುಪ್ರೀಂಕೋರ್ಟ್‌ ಆಘಾತ ನೀಡಿದೆ. ಇಂದು ನಡೆದ ಮಧ್ಯಂತರ ಜಾಮೀನು ಅರ್ಜಿ ವಿಚಾರಣೆಯಲ್ಲಿ ಸುಪ್ರೀಂಕೋರ್ಟ್‌...

Read moreDetails
BREAKING NEWS : ನಾಳೆ ಡಿ ಫ್ಯಾನ್ಸ್‌ಗೆ ಬಿಗ್‌ ಡೇ : ಸುಪ್ರೀಂನಲ್ಲಿ ದರ್ಶನ್ ಜಾಮೀನು ಅರ್ಜಿಯ ವಿಚಾರಣೆ

BREAKING NEWS : ನಾಳೆ ಡಿ ಫ್ಯಾನ್ಸ್‌ಗೆ ಬಿಗ್‌ ಡೇ : ಸುಪ್ರೀಂನಲ್ಲಿ ದರ್ಶನ್ ಜಾಮೀನು ಅರ್ಜಿಯ ವಿಚಾರಣೆ

May 14, 2026
ಕುಟುಂಬ ಕಲಹ, ರಾಜಕೀಯ ಬಿಕ್ಕಟ್ಟು; ಪ್ರತೀಕ್ ಯಾದವ್ ಜೀವನ ಮತ್ತೆ ಚರ್ಚೆಯಲ್ಲಿ!

ಕುಟುಂಬ ಕಲಹ, ರಾಜಕೀಯ ಬಿಕ್ಕಟ್ಟು; ಪ್ರತೀಕ್ ಯಾದವ್ ಜೀವನ ಮತ್ತೆ ಚರ್ಚೆಯಲ್ಲಿ!

May 14, 2026
ಕೇರಳ ಸಿಎಂ ಆಗಿ ಕೆ.ಸಿ. ವೇಣುಗೋಪಾಲ್ ಆಯ್ಕೆ?

ಕೇರಳ ಸಿಎಂ ಆಗಿ ಕೆ.ಸಿ. ವೇಣುಗೋಪಾಲ್ ಆಯ್ಕೆ?

May 14, 2026
ಧೋನಿ ಯಾವಾಗ ಕಣಕ್ಕಿಳಿಯುತ್ತಾರೆ?; ಸಿಎಸ್‌ಕೆ ಅಭಿಮಾನಿಗಳಲ್ಲಿ ಹೆಚ್ಚಿದ ಕುತೂಹಲ

ಧೋನಿ ಯಾವಾಗ ಕಣಕ್ಕಿಳಿಯುತ್ತಾರೆ?; ಸಿಎಸ್‌ಕೆ ಅಭಿಮಾನಿಗಳಲ್ಲಿ ಹೆಚ್ಚಿದ ಕುತೂಹಲ

May 14, 2026
Next Post
ಕೋವಿಡ್ ನಿಯಮ ಉಲ್ಲಂಘಿಸಿದ ಪ್ರಧಾನಿಗೆ ದಂಡ ವಿಧಿಸಿದ ಪೊಲೀಸರು

ಕೋವಿಡ್ ನಿಯಮ ಉಲ್ಲಂಘಿಸಿದ ಪ್ರಧಾನಿಗೆ ದಂಡ ವಿಧಿಸಿದ ಪೊಲೀಸರು

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada