• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 24, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಕರ್ನಾಟಕ ರಾಜ್ಯ ಯುವ ಕಾಂಗ್ರೆಸ್‌ ಅಧ್ಯಕ್ಷರಾಗಿ ರಕ್ಷಾ ರಾಮಯ್ಯ ನೇಮಕ; ನಲಪಾಡ್‌ ʼಅನರ್ಹʼ!

by
April 15, 2021
in ಕರ್ನಾಟಕ
0
Share on WhatsAppShare on FacebookShare on Telegram

ರಾಜ್ಯ ಯುವ ಕಾಂಗ್ರೆಸ್‌ ಪದಾಧೀಕಾರಿಗಳ ಚುನಾವಣೆಯ ಫಲಿತಾಂಶ ಕೊನೆಗೂ ಹೊರಬಿದ್ದಿದೆ. ಗುರುವಾರ ಸಂಜೆಯ ವೇಳೆಗೆ ಭಾರತೀಯ ಯುವ ಕಾಂಗ್ರೆಸ್‌ನ ಅಧಿಕೃತ ಅಂತರ್ಜಾಲ ತಾಲತಾಣದಲ್ಲಿ ಫಲಿತಾಂಶ ಪ್ರಕಟವಾಗಿದ್ದು, ರಕ್ಷಾ ರಾಮಯ್ಯ ಅವರು ಭಾರತೀಯ ಯುವ ಕಾಂಗ್ರೆಸ್‌ನ ಕರ್ನಾಟಕ ಘಟಕದ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

ADVERTISEMENT

ರಕ್ಷಾ ರಾಮಯ್ಯ ಅವರು ಒಟ್ಟು 57,271 ಮತಗಳನ್ನು ಪಡೆದುಕೊಂಡಿದ್ದರು. ಚುನಾವಣೆಯಲ್ಲಿ ದ್ವಿತೀಯ ಸ್ಥಾನ ಪಡೆಯುವವರಿಗೆ ಉಪಾಧ್ಯಕ್ಷ ಸ್ಥಾನ ನೀಡುವ ನಿಯಮ ಇದ್ದುದರಿಂದ, ರಾಜ್ಯ ಎನ್‌ಎಸ್‌ಯುಐ ಅಧ್ಯಕ್ಷರಾಗಿರುವ ಮಂಜುನಾಥ ಹೆಚ್‌ ಎಸ್‌ ಅವರಿಗೆ ಈ ಸ್ಥಾನ ಲಭಿಸಿದೆ. ಮಂಜುನಾಥ ಅವರು ಒಟ್ಟು 18,137 ಮತಗಳನ್ನು ಪಡೆದಿದ್ದಾರೆ.

ಪ್ರತಿಧ್ವನಿಗೆ ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ಮಹಿಳಾ ಉಪಾಧ್ಯಕ್ಷರಾಗಿ ಭವ್ಯ ಕೆ ಆರ್‌ (3156 ಮತಗಳು), ಎಸ್‌ಸಿ/ಎಸ್‌ಟಿ ಉಪಾಧ್ಯಕ್ಷರಾಗಿ ಸಂದೀಪ್‌ ನಾಯಕ್‌ (736 ಮತಗಳು) ಆಯ್ಕೆಯಾಗಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌ ಅವರ ಬಲಗೈ ಬಂಟ ಮಿಥುನ್‌ ರೈ ಅವರು ಚುನಾವಣೆಯ ಮುನ್ನಾ ದಿನ ಕಣದಿಂದ ಹಿಂದೆ ಸರಿದಿದ್ದರು. ಇನ್ನೋರ್ವ ಅಧ್ಯಕ್ಷ ಸ್ಥಾನ ಅಭ್ಯರ್ಥಿಯಾದ ಸಯ್ಯದ್‌ ಖಾಲಿದ್‌ ಅವರಿಗೆ 4740 ಮತಗಳು ಲಭಿಸಿವೆ.

ಈ ಚುನಾವಣೆಯಲ್ಲಿ ಒಟ್ಟು 1,92,703 ಯುವ ಕಾಂಗ್ರೆಸ್‌ ಕಾರ್ಯಕರ್ತರು ಮತ ಚಲಾಯಿಸಿದ್ದು, ಇದರಲ್ಲಿ 27,206 ಮತಗಳನ್ನು ಅಸಿಂಧು ಎಂದು ಪರಿಗಣಿಸಲಾಗಿದೆ.

ಮೊಹಮ್ಮದ್‌ ನಲಪಾಡ್‌ ಅನರ್ಹ:

ವಿಚಿತ್ರ ಎಂದರೆ, ಎಲ್ಲಾ ಚುನಾವಣೆಗಳಲ್ಲಿ ಅತೀ ಹೆಚ್ಚು ಮತಗಳನ್ನು ಪಡೆದುಕೊಂಡ ವ್ಯಕ್ತಿ ವಿಜೇತ ಎಂದು ಸಾರಲಾಗುತ್ತದೆ. ಆದರೆ, ಯುವ ಕಾಂಗ್ರೆಸ್‌ ಚುನಾವಣೆಯಲ್ಲಿ ಅತೀ ಹೆಚ್ಚು ಮತ ಪಡೆದ ವ್ಯಕ್ತಿಯನ್ನು ಅನರ್ಹ ಎಂದು ಸಾರಲಾಗಿದೆ.

ರಾಜ್ಯ ಯುವ ಕಾಂಗ್ರೆಸ್‌ ಅಧ್ಯಕ್ಷ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿದ್ದ ಮೊಹಮ್ಮದ್‌ ನಲಪಾಡ್‌ ಅವರನ್ನು ಕೊನೇಯ ಕ್ಷಣದಲ್ಲಿ ಅನರ್ಹ ಎಂದು ಘೋಷಿಸಿದ್ದಾರೆ. ಇವರು ಪಡೆದ ಮತಗಳು 64,203. ಬೇರೆ ಎಲ್ಲಾ ಅಭ್ಯರ್ಥಿಗಳಿಗಿಂತ ಅತೀ ಹೆಚ್ಚು ಮತಗಳನ್ನು ಪಡೆದಿದ್ದರೂ, ಅಧ್ಯಕ್ಷರಾಗುವ ಭಾಗ್ಯ ಮಾತ್ರ ಇವರ ಪಾಲಿಗೆ ಒಲಿದಿಲ್ಲ.

ಇದರ ನಂತರ ತಮ್ಮ ಇನ್ಸ್ಟಾಗ್ರಾಮ್‌ನಲ್ಲಿ ವೀಡಿಯೋ ಬಿಡುಗಡೆ ಮಾಡಿರುವ ನಲಪಾಡ್‌ ಅವರು, ರಾಜ್ಯದಲ್ಲಿ ಅತೀ ಹೆಚ್ಚು ಮತಗಳನ್ನು ನಾನು ಪಡೆದಿದ್ದೇನೆ. ಆದರೆ, ಕಾಂಗ್ರೆಸ್‌ ಪಕ್ಷದ ಕಾರ್ಯಕರ್ತನಾಗಿರುವುದರಿಂದ ಪಕ್ಷ ಯಾವ ತೀರ್ಮಾನ ತೆಗೆದುಕೊಂಡರೂ ಅದನ್ನು ಸ್ವೀಕರಿಸುತ್ತೇನೆ ಎಂದಿದ್ದಾರೆ.https://www.instagram.com/p/CK320JlAQLD/embed/captioned/?cr=1&v=13&wp=492&rd=https%3A%2F%2Fpratidhvani.com&rp=%2Fstate%2F2021%2F02%2F04%2Fraksha-ramaiah-elected-as-kpyc-president#%7B%22ci%22%3A1%2C%22os%22%3A3098.1899999969755%7D

ಚುನಾವಣೆ ನಿರೀಕ್ಷಣಾ ಸಂಸ್ಥೆಯಾದ FAME (Foundation for advanced Management of Elections) ನಲಪಾಡ್‌ ಅವರನ್ನು ಅನರ್ಹ ಎಂದು ಘೋಷಿಸಿದೆ. ವಿಪರ್ಯಾಸವೆಂದರೆ, ಇದೇ ಸಂಸ್ಥೆ ಚುನಾವಣೆಗೂ ಒಂದು ತಿಂಗಳ ಮುಂಚೆ ಅಧ್ಯಕ್ಷ ಸ್ಥಾನ ಆಕಾಂಕ್ಷಿಗಳ ಸಂದರ್ಶನವನ್ನು ನಡೆಸಿತ್ತು. ಅದರಲ್ಲಿ ಆಯ್ಕೆಯಾದವರಿಗೆ ಮಾತ್ರ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ನೀಡಲಾಗಿತ್ತು. ಆ ಸಂದರ್ಭದಲ್ಲಿ ʼಅರ್ಹʼ ಎಂದು ಪ್ರಮಾಣಪತ್ರ ನೀಡಿ ಚುನಾವಣೆಯಲ್ಲಿ ಗೆಲುವು ಸಾಧಿಸಿದಾಗ ಅನರ್ಹ ಎಂದು ಘೋಷಿಸುವುದು ಎಷ್ಟು ಸರಿ? ಎಂಬ ಪ್ರಶ್ನೆ ಮೂಡಿದೆ.

ಗೊಂದಲದ ಗೂಡಾದ ಕೆಪಿವೈಸಿ ಚುನಾವಣೆ

ಮೊಟ್ಟಮೊದಲಿಗೆ ಈ ಚುನಾವಣೆ ಪಕ್ಷ ಕಟ್ಟಲೋ ಅಥವಾ ಪಕ್ಷ ಒಡೆಯಲೋ ಎಂಬ ಸಂದೇಹ ಹುಟ್ಟುಕೊಂಡಿದೆ. ಈ ಚುನಾವಣೆ ಎಐಸಿಸಿ ಕಾರ್ಯದರ್ಶಿಯಾಗಿರುವ ಕೃಷ್ಣಾ ಆಲುವಾರ್‌ ಅವರ ಮಾರ್ಗದರ್ಶನದಲ್ಲಿ ನಡೆದಿದೆ. ಇವರೊಂದಿಗೆ ಕನ್ನಡಿಗರಾದ ಹಾಗೂ IYC ರಾಷ್ಟ್ರಾಧ್ಯಕ್ಷರಾದ ಶ್ರೀನಿವಾಸ್‌ ಬಿ ವಿ ಅವರೂ ಇದ್ದರು.

ಘಟಾನುಘಟಿಗಳ ಆಶ್ರಯದಲ್ಲೇ ಈ ಚುನಾವಣೆ ನಡೆದರೂ, ಈ ಪರಿಯ ಗೊಂದಲಗಳು ಏಕೆ ಮೂಡಿದವು ಎಂಬುದು ಇನ್ನೂ ಪ್ರಶ್ನೆಯಾಗಿಯೇ ಉಳಿದಿದೆ. ಸದಾ ಇವಿಎಂಗಳ ಬಳಕೆಗೆ ವಿರೋಧ ವ್ಯಕ್ತಪಡಿಸುತ್ತಿದ್ದ ಕಾಂಗ್ರೆಸ್, ಪಕ್ಷದ ಆಂತರಿಕ ಚುನಾವಣೆಯನ್ನು ಏಕೆ ಆನ್ಲೈನ್‌ ಮೂಲಕ ನಡೆಸಿತು? ಆಂತರಿಕ ಚುನಾವಣೆಯಲ್ಲಿಯೇ ಇಷ್ಟೊಂದು ಗೊಂದಲಗಳು ಮೂಡಬೇಕಾದರೆ, ಇನ್ನು ರಾಷ್ಟ್ರೀಯ ಚುನಾವಣೆಗಳ ಸಂದರ್ಭದಲ್ಲಿ ಪಕ್ಷದೊಳಗೆ ಎಷ್ಟರ ಮಟ್ಟಿನ ಗೊಂದಲಗಳು ಇರಲಾರವು? ಎಂಬುದು ಈಗ ಸಾಮಾನ್ಯ ಕಾರ್ಯಕರ್ತನೂ ಕೇಳುವ ಪ್ರಶ್ನೆ.

ಒಟ್ಟಿನಲ್ಲಿ, ಕೆಪಿವೈಸಿ ಚುನಾವಣೆ ಎಂಬ ಗಜಪ್ರಸವ ಮುಗಿದುಹೋಗಿದೆ. ರಕ್ಷಾ ರಾಮಯ್ಯ ಅವರು ಮುಂದಿನ ಅಧ್ಯಕ್ಷರೆಂದು ಘೊಷಿಸಲಾಗಿದೆ. ಇವರ ನಾಯಕತ್ವದಲ್ಲಿ ಕರ್ನಾಟಕ ಯುವ ಕಾಂಗ್ರೆಸ್‌ ಯಾವ ರೀತಿ ಕೆಪಿಸಿಸಿಯ ಕಾರ್ಯಯೋಜನೆಗಳಿಗೆ ಸಾಥ್‌ ನೀಡುತ್ತದೆ ಎಂಬುದನ್ನು ಕಾದು ನೋಡಬೇಕಿದೆ.

Previous Post

ನಾಲ್ಕು ತಿಂಗಳಾದರೂ ಪತ್ರಕರ್ತ ಸಿದೀಕ್ ಕಪ್ಪನ್‌ಗೆ ಇನ್ನೂ ಸಿಗದ ಜಾಮೀನು

Next Post

ಪರಿಷತ್‌ ಸಭಾಪತಿ ಸ್ಥಾನಕ್ಕೆ ಪ್ರತಾಪ್‌ಚಂದ್ರ ಶೆಟ್ಟಿ ರಾಜಿನಾಮೆ

Related Posts

ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ
ಕರ್ನಾಟಕ

ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

by ಪ್ರತಿಧ್ವನಿ
April 24, 2026
0

ಬೆಂಗಳೂರು: ನಗರದ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯ ಪಾಲಿಕೆಗಳ ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ಮತ್ತು ಸಾಮಾಜಿಕ ಜಾಲತಾಣಗಳ ಮೂಲಕ ವಂಚನೆ ಯತ್ನ ನಡೆಯುತ್ತಿರುವುದು ಬೆಳಕಿಗೆ ಬಂದಿದೆ. ಈ...

Read moreDetails
ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

April 23, 2026
ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ದಾಖಲೆ ಸಾಧನೆ: ಈ 7 ಮಂದಿಗೆ ಪೂರ್ಣ ಅಂಕ!

ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ದಾಖಲೆ ಸಾಧನೆ: ಈ 7 ಮಂದಿಗೆ ಪೂರ್ಣ ಅಂಕ!

April 23, 2026
ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಜಿಲ್ಲಾವಾರು ವಿವರ ಇಲ್ಲಿದೆ

ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಜಿಲ್ಲಾವಾರು ವಿವರ ಇಲ್ಲಿದೆ

April 23, 2026
ಬೆಸ್ಕಾಂನ ‘ಹೆಚ್‌ಟಿ ಮಿತ್ರ’  ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

ಬೆಸ್ಕಾಂನ ‘ಹೆಚ್‌ಟಿ ಮಿತ್ರ’ ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

April 23, 2026
Next Post
ಪರಿಷತ್‌ ಸಭಾಪತಿ ಸ್ಥಾನಕ್ಕೆ ಪ್ರತಾಪ್‌ಚಂದ್ರ ಶೆಟ್ಟಿ ರಾಜಿನಾಮೆ

ಪರಿಷತ್‌ ಸಭಾಪತಿ ಸ್ಥಾನಕ್ಕೆ ಪ್ರತಾಪ್‌ಚಂದ್ರ ಶೆಟ್ಟಿ ರಾಜಿನಾಮೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada