• Home
  • About Us
  • ಕರ್ನಾಟಕ
Monday, November 24, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ರಾಜಕೀಯ

ಕಾಂಗ್ರೆಸ್ ಮೈತ್ರಿ ಸರ್ಕಾರ ಪತನ ಬೆನ್ನಲ್ಲೆ ಪುದುಚೇರಿಗೆ ನೆರವು ಘೋಷಿಸಿದ ಪ್ರಧಾನಿ ಮೋದಿ

by
April 20, 2021
in ರಾಜಕೀಯ
0
ಕಾಂಗ್ರೆಸ್ ಮೈತ್ರಿ ಸರ್ಕಾರ ಪತನ ಬೆನ್ನಲ್ಲೆ ಪುದುಚೇರಿಗೆ ನೆರವು ಘೋಷಿಸಿದ ಪ್ರಧಾನಿ ಮೋದಿ
Share on WhatsAppShare on FacebookShare on Telegram

ಕೇಂದ್ರಾಡಳಿತ ಪ್ರದೇಶ ಪುದುಚೇರಿಯಲ್ಲಿ ಕಾಂಗ್ರೆಸ್-ಡಿಎಂಕೆ ಮೈತ್ರಿ ಸರ್ಕಾರ ಪತನಗೊಂಡಿದೆ. ಸದ್ಯ ಪುದುಚೇರಿಯಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಲಾಗಿದೆ. ಹೇಗಾದರೂ ಪುದುಚೇರಿಯಲ್ಲಿ ಭದ್ರವಾಗಿ ಊರಲು ಹವಣಿಸುತ್ತಿರುವ ಬಿಜೆಪಿಗೆ ಇದು ಸುಸಂಧರ್ಭ. ಯಾಕೆಂದರೆ ಪುದುಚೇರಿಯನ್ನು ಭದ್ರಪಡಿಸಿಕೊಳ್ಳುವುದು, ತಮಿಳುನಾಡಿಗೆ ಬಿಜೆಪಿ ಪ್ರವೇಶಿಸಲು ರಹದಾರಿಯಾಗಬಹುದು ಎಂಬುದು ರಾಜಕೀಯ ತಜ್ಞರ ಅಂಬೋಣ. ಹಾಗಾಗಿ, ಈ ಅವಕಾಶವನ್ನು ಕೈ ಚೆಲ್ಲಲು ಬಿಜೆಪಿ ತಯಾರಿಲ್ಲ. ಇದು ಪ್ರಧಾನಿ ಮೋದಿ ಪುದುಚೇರಿಯಲ್ಲಿ ಗುರುವಾರ ಮಾಡಿದ ಭಾಷಣದಲ್ಲೂ ವ್ಯಕ್ತವಾಗುತ್ತದೆ.

ADVERTISEMENT

ಪುದುಚೇರಿಯಲ್ಲಿ ಪೂರ್ಣಗೊಂಡ ವಿವಿಧ ಯೋಜನೆಗಳ ಉದ್ಘಾಟನೆ ಹಾಗೂ ಹಲವು ಯೋಜನೆಗಳಡಿ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿದ ನಂತರ ಮಾತನಾಡಿದ ಮೋದಿ ಕಾಂಗ್ರೆಸ, ರಾಹುಲ್‌ ಗಾಂಧಿ ವಿರುದ್ಧ ಸಾಕಷ್ಟು ತೀಕ್ಷ್ಣ ಟೀಕೆಗಳನ್ನು ಮಾಡಿದ್ದಾರೆ. ಜೊತೆಗೆ ಕೇಂದ್ರದ ಆರ್ಥಿಕ ನೆರವು ನೀಡುವುದಾಗಿಯೂ ಘೋಷಿಸಿದ್ದಾರೆ.

ಕೇಂದ್ರಾಡಳಿತ ಪ್ರದೇಶ ಪುದುಚೇರಿಯ ಸರ್ವಾಂಗೀಣ ಅಭಿವೃದ್ಧಿಗೆ ಕೇಂದ್ರ ಸರ್ಕಾರ ನೆರವು ನೀಡುವುದು ಎಂದು ಪ್ರಧಾನಿ ಘೋಷಿಸಿದ್ದು, ದೇಶದ ಅಭಿವೃದ್ಧಿಗೆ ಉತ್ತಮ ರಸ್ತೆ ಸೇರಿದಂತೆ ಸಂಪರ್ಕ ಜಾಲ ಅಗತ್ಯ. ಉತ್ತಮ ಸಂಪರ್ಕ ರಸ್ತೆಗಳ ನಿರ್ಮಾಣದಿಂದ ರೈತರು ಬೆಳೆದ ಉತ್ಪನ್ನಗಳಿಗೆ ಉತ್ತಮ ಮಾರುಕಟ್ಟೆಯೂ ಲಭಿಸುತ್ತದೆ ಎಂದು ಹೇಳಿದ್ದಾರೆ.

ರಾಷ್ಟ್ರೀಯ ಹೆದ್ದಾರಿ 45ಎ ಪೈಕಿ ಸತ್ಯನಾಥಪುರಂ–ನಾಗಪಟ್ಟಿನಂ ನಡುವಿನ ಹೆದ್ದಾರಿಯನ್ನು ಚತುಷ್ಪಥ ರಸ್ತೆಯನ್ನಾಗಿ ಅಭಿವೃದ್ಧಿಪಡಿಸಲಾಗುತ್ತಿದೆ. ಇದರಿಂದ ಈ ಭಾಗದಲ್ಲಿ ಆರ್ಥಿಕ ಚಟುವಟಿಕೆಗೆ ಉತ್ತೇಜನ ಸಿಗಲಿದೆ. ಪುದುಚೇರಿ ಅಗಾಧ ಮಾನವ ಸಂಪನ್ಮೂಲ ಹೊಂದಿದೆ. ಪ್ರವಾಸೋದ್ಯಮಕ್ಕೂ ಇಲ್ಲಿ ವಿಪುಲ ಅವಕಾಶಗಳಿವೆ. ರಾಷ್ಟ್ರೀಯ ಹೆದ್ದಾರಿಯನ್ನು ಚತುಷ್ಪಥ ರಸ್ತೆಯನ್ನಾಗಿ ಮೇಲ್ದರ್ಜೆಗೇರಿಸುವುದರಿಂದ ಉದ್ಯಮಗಳು ಬೆಳೆಯುತ್ತವೆ. ಆ ಮೂಲಕ ಉದ್ಯೋಗಾವಕಾಶಗಳು ಹೆಚ್ಚಗಲಿವೆ ಎಂದು ಭಾಷಣ ಮಾಡಿದ್ದಾರೆ.

‘ದೇಶವನ್ನಾಗಳಿದ ಬ್ರಿಟಿಷರು ವಿಭಜಿಸಿ ಆಳುವ ನೀತಿ ಅನುಸರಿಸುತ್ತಿದ್ದರು. ಈಗಿನ ಕಾಂಗ್ರೆಸ್‌ ಜನರನ್ನು ವಿಭಜಿಸಿ, ಸುಳ್ಳು ಹೇಳಿ, ಆಡಳಿತ ನಡೆಸುವ ನೀತಿಯನ್ನು ಅನುಸರಿಸುತ್ತಿದೆ. ಕಾಂಗ್ರೆಸ್‌ನ ಕೆಲವು ಮುಖಂಡರು ಒಂದು ಪ್ರದೇಶದ ವಿರುದ್ಧ ಮತ್ತೊಂದು ಪ್ರದೇಶವನ್ನು, ಒಂದು ಸಮುದಾಯದ ವಿರುದ್ಧ ಮತ್ತೊಂದು ಸಮುದಾಯವನ್ನು ಎತ್ತಿಕಟ್ಟುವ ಕೆಲಸ ಮಾಡುತ್ತಿದ್ದಾರೆ’ ಎಂದು ಪರೋಕ್ಷವಾಗಿ ರಾಹುಲ್‌ ಗಾಂಧಿಯವರನ್ನು ಟೀಕಿಸಿದ್ದಾರೆ.

ಇತ್ತೀಚೆಗೆ ಕೇರಳಕ್ಕೆ ಭೇಟಿ ನೀಡಿದ್ದ ರಾಹುಲ್‌ ಗಾಂಧಿ, ‘ಉತ್ತರ ಭಾರತದ ಬೇರೆ ರೀತಿಯ ರಾಜಕಾರಣವನ್ನು ಗಮನಿಸಿರುವ ನನಗೆ, ದಕ್ಷಿಣ ಭಾರತದಲ್ಲಿನ ರಾಜಕಾರಣ ಚೇತೋಹಾರಿ ಎನಿಸುತ್ತದೆ’ ಎಂದು ಹೇಳಿಕೆ ನೀಡಿದ್ದನ್ನು ಇಲ್ಲಿ ನೆನಪಿಸಬಹುದು.

ಅಲ್ಲಿಗೆ ನಿಲ್ಲಿಸದ ಮೋದಿ, ಮೀನುಗಾರಿಕೆಗೆ ಸಂಬಂಧಿಸಿ ಕೇಂದ್ರದಲ್ಲಿ ಪ್ರತ್ಯೇಕ ಸಚಿವಾಲಯವನ್ನು 2019ರಲ್ಲಿ ಎನ್‌ಡಿಎ ಸರ್ಕಾರ ರಚಿಸಿದೆ. ಅಲ್ಲಿಯವರೆಗೂ ಇಂಥ ಸಚಿವಾಲಯವೇ ಇರಲಿಲ್ಲ ಎಂದರೆ ಅಚ್ಚರಿ ಎನಿಸುತ್ತದೆ’ ಎನ್ನುವ ಮೂಲಕ ಕಾಂಗ್ರೆಸ್‌ ವಿರುದ್ಧ ಹರಿಹಾಯ್ದಿದ್ದಾರೆ. ಪ್ರಸ್ತುತ ಮೀನುಗಾರರೊಂದಿಗೆ ಸಮಯ ಕಳೆಯುತ್ತಿರುವ ರಾಹುಲ್‌ ಗಾಂಧಿ ಅವರ ವಿರುದ್ಧವೇ ಈ ಅಂಶವನ್ನು ಪ್ರತ್ಯೇಕವಾಗಿ ಉಲ್ಲೇಖಿಸಲಾಗಿದೆ ಎಂದು ಹೇಳಲಾಗಿದೆ.

ಚುನಾವಣೆ ಹೊಸ್ತಿಲಲ್ಲಿರುವ ಪುದುಚೇರಿಯಲ್ಲಿ ಬಹಿರಂಗ ಸಭೆಯನ್ನು ಉದ್ದೇಶಿಸಿ ಮಾತನಾಡುವಾಗ ಏಕಕಾಲಕ್ಕೆ ಆಶ್ವಾಸನೆಗಳನ್ನೂ ಅದೇ ವೇಳೆ ರಾಜಕೀಯ ವಿರೋಧಿಗಳನ್ನು ಹಣಿಯುವ ಮೋದಿ ಉದ್ದೇಶ ಏನು ಎಂಬುದನ್ನು ಪ್ರತ್ಯೇಕವಾಗಿ ವಿವರಿಸಬೇಕಿಲ್ಲ. ಆದರೆ ಯಾವ ಆಶ್ವಾಸನೆ ನೀಡುವ ಮೊದಲು, ತಾನು ಈ ಮೊದಲು ನೀಡಿದ್ದ ಆಶ್ವಾಸನೆಗಳನ್ನು ಪ್ರಧಾನಿ ಮೋದಿಯವರು ಮರೆಯಕೂಡದು..

Previous Post

ಡಿಜಿಟಲ್ ಹಕ್ಕುಗಳನ್ನು ರಕ್ಷಿಸಲು ವಿಫಲವಾದ ಜಾಗತಿಕ ದೂರಸಂಪರ್ಕ ಮತ್ತು ಟೆಕ್ ಕಂಪೆನಿಗಳು

Next Post

ಇನ್ನುಮುಂದೆ ಒಟಿಟಿ, ಸಾಮಾಜಿಕ ಜಾಲತಾಣಗಳಿಗೆ ಕೇಂದ್ರ ಮೂಗುದಾರ

Related Posts

Top Story

DCM DK Shivakumar: ಕೆಜೆ ಜಾರ್ಜ್ ರವರನ್ನು ಬೇಟಿ ಮಾಡಿ ನಾಯಕತ್ವ ಬದಲಾವಣೆಯ ಕುತೂಹಲ ಮೂಡಿಸಿದ ಡಿಕೆ ಶಿವಕುಮಾರ್

by ಪ್ರತಿಧ್ವನಿ
November 24, 2025
0

ನಾಯಕತ್ವ ಬದಲಾವಣೆ ಸಂಬಂಧ ಕರ್ನಾಟಕ ಕಾಂಗ್ರೆಸ್​​ನಲ್ಲಿ ( Congress) ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಸಿದ್ದರಾಮಯ್ಯ ಬಣ, ಡಿಕೆ ಶಿವಕುಮಾರ್ (DK Shivakumar)ಬಣ ನಾಯಕರಿಂದ ಹೈಕಮಾಂಡ್ ಭೇಟಿ ಬಳಿಕ...

Read moreDetails
Political News Karnataka

ಡಿಸ್ಟಿಲರಿಗಳಿಗೆ ಪತ್ರ: ಸಿಎಂಗೆ ಈಗ ಜ್ಞಾನೋದಯ ; ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಕೇಂದ್ರ ಸಚಿವ ಜೋಶಿ ಕಿಡಿ

November 23, 2025
ಡಿಕೆಶಿ ಪರ ಬಿಜೆಪಿಗರ ಗಿಳಿ ಶಾಸ್ತ್ರ: ಗಿಳಿ ತೆಗದ ಕಾರ್ಡ್ ಏನು..?

ಡಿಕೆಶಿ ಪರ ಬಿಜೆಪಿಗರ ಗಿಳಿ ಶಾಸ್ತ್ರ: ಗಿಳಿ ತೆಗದ ಕಾರ್ಡ್ ಏನು..?

November 23, 2025
ಸಿಎಂ ಬದಲಾವಣೆ ಚರ್ಚೆ ನಡುವೆ ಮಲ್ಲಿಕಾರ್ಜುನ ಖರ್ಗೆ ಭೇಟಿಯಾದ ಲಕ್ಷ್ಮೀ ಹೆಬ್ಬಾಳ್ಕರ್

ಸಿಎಂ ಬದಲಾವಣೆ ಚರ್ಚೆ ನಡುವೆ ಮಲ್ಲಿಕಾರ್ಜುನ ಖರ್ಗೆ ಭೇಟಿಯಾದ ಲಕ್ಷ್ಮೀ ಹೆಬ್ಬಾಳ್ಕರ್

November 23, 2025
ಸಿಎಂ ಕುರ್ಚಿ ಕದನ: ಕೊನೆಗೂ ಮೌನ ಮುರಿದ ಮಲ್ಲಿಕಾರ್ಜುನ ಖರ್ಗೆ

ಸಿಎಂ ಕುರ್ಚಿ ಕದನ: ಕೊನೆಗೂ ಮೌನ ಮುರಿದ ಮಲ್ಲಿಕಾರ್ಜುನ ಖರ್ಗೆ

November 23, 2025
Next Post
ಇನ್ನುಮುಂದೆ ಒಟಿಟಿ, ಸಾಮಾಜಿಕ ಜಾಲತಾಣಗಳಿಗೆ ಕೇಂದ್ರ ಮೂಗುದಾರ

ಇನ್ನುಮುಂದೆ ಒಟಿಟಿ, ಸಾಮಾಜಿಕ ಜಾಲತಾಣಗಳಿಗೆ ಕೇಂದ್ರ ಮೂಗುದಾರ

Please login to join discussion

Recent News

Daily Horoscope: ಇಂದು ಈ ರಾಶಿಯವರು ಮುಟ್ಟಿದೆಲ್ಲಾ ಚಿನ್ನ..!
Top Story

Daily Horoscope: ಇಂದು ಈ ರಾಶಿಯವರು ಮುಟ್ಟಿದೆಲ್ಲಾ ಚಿನ್ನ..!

by ಪ್ರತಿಧ್ವನಿ
November 24, 2025
Top Story

DCM DK Shivakumar: ಕೆಜೆ ಜಾರ್ಜ್ ರವರನ್ನು ಬೇಟಿ ಮಾಡಿ ನಾಯಕತ್ವ ಬದಲಾವಣೆಯ ಕುತೂಹಲ ಮೂಡಿಸಿದ ಡಿಕೆ ಶಿವಕುಮಾರ್

by ಪ್ರತಿಧ್ವನಿ
November 24, 2025
ಸಿಎಂ ಬದಲಾವಣೆ ಚರ್ಚೆ ನಡುವೆ ಮಲ್ಲಿಕಾರ್ಜುನ ಖರ್ಗೆ ಭೇಟಿಯಾದ ಲಕ್ಷ್ಮೀ ಹೆಬ್ಬಾಳ್ಕರ್
Top Story

ಸಿಎಂ ಬದಲಾವಣೆ ಚರ್ಚೆ ನಡುವೆ ಮಲ್ಲಿಕಾರ್ಜುನ ಖರ್ಗೆ ಭೇಟಿಯಾದ ಲಕ್ಷ್ಮೀ ಹೆಬ್ಬಾಳ್ಕರ್

by ಪ್ರತಿಧ್ವನಿ
November 23, 2025
ಸಿಎಂ ಕುರ್ಚಿ ಕದನ: ಕೊನೆಗೂ ಮೌನ ಮುರಿದ ಮಲ್ಲಿಕಾರ್ಜುನ ಖರ್ಗೆ
Top Story

ಸಿಎಂ ಕುರ್ಚಿ ಕದನ: ಕೊನೆಗೂ ಮೌನ ಮುರಿದ ಮಲ್ಲಿಕಾರ್ಜುನ ಖರ್ಗೆ

by ಪ್ರತಿಧ್ವನಿ
November 23, 2025
ಗೃಹ ಸಚಿವ ಪರಮೇಶ್ವರ್‌ ಸಿಎಂ ಆಗಲಿ : ದಲಿತ ಕಾರ್ಡ್‌ ಉರುಳಿಸಿದ ಸಚಿವ ಜಾರಕಿಹೊಳಿ..
Top Story

ಗೃಹ ಸಚಿವ ಪರಮೇಶ್ವರ್‌ ಸಿಎಂ ಆಗಲಿ : ದಲಿತ ಕಾರ್ಡ್‌ ಉರುಳಿಸಿದ ಸಚಿವ ಜಾರಕಿಹೊಳಿ..

by ಪ್ರತಿಧ್ವನಿ
November 23, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Daily Horoscope: ಇಂದು ಈ ರಾಶಿಯವರು ಮುಟ್ಟಿದೆಲ್ಲಾ ಚಿನ್ನ..!

Daily Horoscope: ಇಂದು ಈ ರಾಶಿಯವರು ಮುಟ್ಟಿದೆಲ್ಲಾ ಚಿನ್ನ..!

November 24, 2025

DCM DK Shivakumar: ಕೆಜೆ ಜಾರ್ಜ್ ರವರನ್ನು ಬೇಟಿ ಮಾಡಿ ನಾಯಕತ್ವ ಬದಲಾವಣೆಯ ಕುತೂಹಲ ಮೂಡಿಸಿದ ಡಿಕೆ ಶಿವಕುಮಾರ್

November 24, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada