• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಮಣ್ಣಿನ ಫಲವತ್ತತೆ ಹೆಚ್ಚಿಸುವ ದೇಸಿ ಗೋವುಗಳು; ನಿವೃತ್ತ ಸೇನಾಧಿಕಾರಿ ನೂತನ ಪ್ರಯತ್ನ

Any Mind by Any Mind
April 25, 2021
in ಕರ್ನಾಟಕ
0
ಮಣ್ಣಿನ ಫಲವತ್ತತೆ ಹೆಚ್ಚಿಸುವ ದೇಸಿ ಗೋವುಗಳು; ನಿವೃತ್ತ ಸೇನಾಧಿಕಾರಿ ನೂತನ ಪ್ರಯತ್ನ
Share on WhatsAppShare on FacebookShare on Telegram

ಸುಗ್ಗಿ ಮುಗಿಸಿ ಬೇಸಿಗೆಯಲ್ಲಿ ಖಾಲಿಯಾಗಿರುವ ಹೊಲದಲ್ಲಿ ದೇಸಿ ಗೋವುಗಳನ್ನು ನಿಲ್ಲಿಸಿ  ಮಣ್ಣಿನ ಫಲವತ್ತತೆ ಹೆಚ್ಚಿಸಲು ರೈತ ಸಮುದಾಯ ಮುಂದಾಗಿದೆ. ಹೋಬಳಿಯ ಹೊಲಗಳಲ್ಲಿ ಕೊಪ್ಪಳ ಜಿಲ್ಲೆಯ ಹಾಲವರ್ತಿ ಗ್ರಾಮದ 600 ಕ್ಕೂ ಹೆಚ್ಚು ದೇಸಿ ಗೋವುಗಳ ಹಿಂಡು 22 ದಿನಗಳಿಂದ ಬೀಡು ಬಿಟ್ಟಿದೆ.

ADVERTISEMENT

          ರಾಸಾಯನಿಕ ಗೊಬ್ಬರದಿಂದ ಬೇಸತ್ತಿದ್ದ ನಿವೃತ್ತ ಸೇನಾಧಿಕಾರಿ ರಾಮಣ್ಣ ಸಕ್ರೋಜಿ  12 ವರ್ಷಗಳಿಂದ ಸಾವಯವ ಕೃಷಿಯ ಕಡೆಗೆ ಮುಖ ಮಾಡಿದ್ದಾರೆ. ಪ್ರತಿ ವರ್ಷ ಹೊಲಗಳಿಗೆ ಕೊಟ್ಟಿಗೆ ಗೊಬ್ಬರ ಹಾಕಿಸುತ್ತಿದ್ದರು ಆದರೆ ಅದರ ಬೆಲೆಗೂ ಹೆಚ್ಚಾಗಿದೆ. ಅಧಿಕ ಹಣ ನೀಡಿದರೂ ಉತ್ತಮ ಸೆಗಣಿ ಗೊಬ್ಬರ ಸಿಗುತ್ತಿಲ್ಲ. ಆದ್ದರಿಂದ ರೈತರು ದೇಸಿ ಗೋವುಗಳ ಗುಂಪಿಗೆ ಮೊರೆ ಹೋಗಿದ್ದಾರೆ.

          10 ವರ್ಷಗಳ ಹಿಂದೆ ಕೊಪ್ಪಳ ಜಿಲ್ಲೆಯ ಕುರಗಡ್ಡಿ ಹಾಗೂ ಕೆರಳ್ಳಿ ಗೋಪಾಲಕರ ಗೆಳತನ ಮಾಡಿದ ನಿವೃತ್ತ ಸೇನಾಧಿಕಾರಿ ನಂತರ ದಿನಗಳಲ್ಲಿಅವುಗಳನ್ನು ಆಹ್ವಾನಿಸಿ ತಮ್ಮ ಹೊಲದಲ್ಲಿ ನಿಲ್ಲಿಸಿದ್ದಾರೆ. ಇದರಿಂದ ಭೂಮಿ ಫಲವತ್ತತೆ ಹೆಚ್ಚಾಗಿ ಮಣ್ಣಿನ ರೋಗ ನಿರೋಧಕ ಶಕ್ತಿ ಬಲಗೊಂಡಿದೆ. ಇಳುವರಿಯೂ ಉತ್ತಮವಾಗಿ ಬಂದಿದೆ. ಅಂದಿನಿಂದ ಇಲ್ಲಿಯವರೆಗೆ 3 ವರ್ಷಕ್ಕೊಮ್ಮೆ ತಮ್ಮ ಜಮೀನಿನಲ್ಲಿ ದೇಸಿ ಗೋವುಗಳ ಬೀಡಾರಕ್ಕೆ ಆದ್ಯತೆ ನೀಡಿದ್ದಾರೆ. ನೂರಾರು ಗೋವುಗಳನ್ನು ಕಂಡ ಇಲ್ಲಿನ ರೈತರು ತಮ್ಮ ಜಮಿನುಗಳಿಗೆ ದನಗಳ ಬೀಡಾರು ಹೂಡುವಂತೆ  ಬೇಡಿಕೆ ಇಡುತ್ತಿದ್ದಾರೆ.

          ಆದರೆ  ಗೋವುಗಳನ್ನು ನಿಲ್ಲಿಸಲು ಎರಡು ವರ್ಷ ಮುಂಚಿತವಾಗಿ  ಬುಕಿಂಗ್‌ ಮಾಡಬೇಕು. ಮಳೆಗಾಲ ಆರಂಭವಾಗುವ ಮೊದಲು ಬಳ್ಳಾರಿ, ಗಂಗಾವತಿ, ಬಾಗಲಕೋಟ, ಗದಗ, ಧಾರವಾಡ, ಹಾವೇರಿ ಜಿಲ್ಲೆಗಳ ವಿವಿಧ ಭಾಗದ ರೈತರ ಜಮೀನುಗಳಿಗೆ ಹೋಗುತ್ತೇವೆ. ನೀರು, ಮೇವು ಸಿಗುವ ಪ್ರದೇಶಕ್ಕೆ ಹೆಚ್ಚಿನ ಆದ್ಯತೆ ನೀಡುತ್ತೇವೆ. ಮಳೆಗಾಲದಲ್ಲಿ ಸೊಂಡುರು ಗುಡ್ಡ, ಕೊಪ್ಪಳ ಗುಡ್ಡದಲ್ಲಿ ವಾಸ ಮಾಡುತ್ತೇವೆ. ಗೋವಿನ ಹಿಂಡಿನ ಜೊತೆಯಲ್ಲೇ ನಮ್ಮ ಸಂಸಾರ ಇರುತ್ತದೆ. ಕಾಲಕ್ಕನುಗುಣವಾಗಿ ಔಷಧೋಪಚಾರ, ರಕ್ಷಣೆ ಮಾಡುತ್ತೇವೆ ಎಂದು ಬಾಳಪ್ಪ ಕುರಗಡ್ಡಿ, ಹೊನ್ನಪ್ಪ ಕೆರಳ್ಳಿ ತಿಳಿಸಿದರು.




ರಾಮಣ್ಣ ಸಕ್ರೋಜಿ, ನಿವೃತ್ತ ಸೇನಾಧಿಕಾರಿ

 ಹೋರಿ ಕರುಗಳ ವ್ಯಾಪರ ಬಲು ಜೋರು

          ಪೂರ್ವಜರ ಕಾಲದಿಂದಲೂ ಸಾವಿರಾರು ದೇಸಿ ಗೋವುಗಳ ಸಂರಕ್ಷಣೆ ಮಾಡಿಕೊಂಡು ಬಂದಿರುವ ಹೊನ್ನಪ್ಪ ಕೆರಳ್ಳಿ ಅವರ 200 ಹಾಗೂ ಬಾಲಪ್ಪ ಕುರಗಡ್ಡಿಯವರ 400  ಗೋವುಗಳನ್ನು ಹೊಲದಲ್ಲಿ ನಿಲ್ಲಿಸಿದ್ದಾರೆ. 600 ಗೋವುಗಳನ್ನು ಒಂದು ರಾತ್ರಿ ನಿಲ್ಲಿಸಿದರೆ 4 ಸಾವಿರ ರೂಪಾಯಿ ಸಿಗುತ್ತದೆ.  ದಿನಕ್ಕೆ ಒಂದು ಎಕರೆ ಪ್ರದೇಶ ಗೋವಿನ ಸೆಗಣಿ ಹಾಗೂ ಗಂಜಲುನಲ್ಲಿರುವ ಪೋಷಕಾಂಶಗಳಿಂದ ಗೋಮಾಳವಾಗುತ್ತದೆ.

          60ಕ್ಕೂ ಹೆಚ್ಚು ದೇಸಿ ತಳಿ ಹೋರಿ ಕರುಗಳಿದ್ದು ಅವುಗಳ ಖರೀದಿ ಜೋರು ನಡೆದಿದೆ. ಉಳಿಮೆಗೆ ಉಪಯುಕ್ತವಾಗುವ ಹೋರಿ ಕರುಗಳಿಗೆ ಬೆಳವಣಿಗೆಗೆ ತಕ್ಕಂತೆ ರೂ. 10 – 12 ಸಾವಿರ ಕೊಟ್ಟು ಖರೀದಿ ಮಾಡುತ್ತಿದ್ದಾರೆ. ಹೊಲದ ಮಾಲಿಕರು ಹಣ, ಜೋಳ, ಮೇವು ನೀಡುತ್ತಿರುವುದರಿಂದ ಹೋಬಳಿಯ ರೈತರಿಂದ ಗೋಪಾಲಕರು ಖುಷಿಯಾಗಿದ್ದಾರೆ.

 ರಾಸಾಯನಿಕ ಗೊಬ್ಬರ ಬಳಸಿ ಭೂ ತಾಯಿಗೆ ವಿಷ ಉಣಿಸುವ ಬದಲು ದೇಸಿ ಗೋವುಗಳನ್ನು ನಿಲ್ಲಿಸಿ ಸೆಗಣಿ ಹಾಗೂ ಗಂಜಲು ಮೂಲಕ ಭೂಮಿಯ ಶಕ್ತಿ ಹೆಚ್ಚಿಸುವ ಕಾರ್ಯಕ್ಕೆ ಮುಂದಾಗಿದ್ದೇವೆ.

–        ರಾಮಣ್ಣ ಸಕ್ರೋಜಿ, ನಿವೃತ್ತ ಸೇನಾಧಿಕಾರಿ

Previous Post

ಬಂಗಾಳದಲ್ಲಿ ಗೆದ್ದರೆ ಬಿಜೆಪಿ ಉಚಿತವಾಗಿ ಕರೋನಾ ಲಸಿಕೆ ಕೊಡುತ್ತದೆಯಂತೆ, ದೇಶದಲ್ಲಿ ಗೆದ್ದಿದೆಯಲ್ಲಾ, ದೇಶಕ್ಕೆ ಏಕೆ ಕೊಡುತ್ತಿಲ್ಲ?

Next Post

ನಿದ್ರಾಹೀನತೆಯಿಂದ ಬಳಲುವ ಮಹಿಳೆಯರಿಗೆ ಲೈಂಗಿಕ ಸಮಸ್ಯೆಗಳು ಎರಡು ಪಟ್ಟು ಹೆಚ್ಚು: ಅಧ್ಯಯನ

Related Posts

ಸಿಎಂ ಬದಲಾವಣೆ ಚರ್ಚೆಗೆ ತೆರೆ? ಜಿ. ಪರಮೇಶ್ವರ್ ಸ್ಪಷ್ಟನೆ ಏನು
ಕರ್ನಾಟಕ

ಸಿಎಂ ಬದಲಾವಣೆ ಚರ್ಚೆಗೆ ತೆರೆ? ಜಿ. ಪರಮೇಶ್ವರ್ ಸ್ಪಷ್ಟನೆ ಏನು

by ಪ್ರತಿಧ್ವನಿ
April 28, 2026
0

ಕಲಬುರಗಿ: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಕುರಿತ ಚರ್ಚೆಗಳು ರಾಜಕೀಯ ವಲಯದಲ್ಲಿ ಗರಿಗೆದರಿರುವ ನಡುವೆಯೇ, ಗೃಹ ಸಚಿವ ಜಿ. ಪರಮೇಶ್ವರ್ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿದ ಅವರು,...

Read moreDetails
ಕಬ್ಬನ್ ಪಾರ್ಕ್ ನಿಗೂಢ ಸಾವು ಪ್ರಕರಣದ ಸತ್ಯ ಬಯಲು

ಕಬ್ಬನ್ ಪಾರ್ಕ್ ನಿಗೂಢ ಸಾವು ಪ್ರಕರಣದ ಸತ್ಯ ಬಯಲು

April 28, 2026
ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

April 27, 2026
ಬೆಂಗಳೂರು ಅಭಿವೃದ್ಧಿಗೆ ದೆಹಲಿಯಲ್ಲಿ ದೌಡಾಯಿಸಿದ ಡಿ.ಕೆ. ಶಿವಕುಮಾರ್; ಸಾವಿರಕ್ಕೂ ಹೆಚ್ಚು ಯೋಜನೆಗಳಿಗೆ ಕೇಂದ್ರದ ಗಮನ

ಬೆಂಗಳೂರು ಅಭಿವೃದ್ಧಿಗೆ ದೆಹಲಿಯಲ್ಲಿ ದೌಡಾಯಿಸಿದ ಡಿ.ಕೆ. ಶಿವಕುಮಾರ್; ಸಾವಿರಕ್ಕೂ ಹೆಚ್ಚು ಯೋಜನೆಗಳಿಗೆ ಕೇಂದ್ರದ ಗಮನ

April 26, 2026
ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ

ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ

April 25, 2026
Next Post
ನಿದ್ರಾಹೀನತೆಯಿಂದ ಬಳಲುವ ಮಹಿಳೆಯರಿಗೆ ಲೈಂಗಿಕ ಸಮಸ್ಯೆಗಳು ಎರಡು ಪಟ್ಟು ಹೆಚ್ಚು: ಅಧ್ಯಯನ

ನಿದ್ರಾಹೀನತೆಯಿಂದ ಬಳಲುವ ಮಹಿಳೆಯರಿಗೆ ಲೈಂಗಿಕ ಸಮಸ್ಯೆಗಳು ಎರಡು ಪಟ್ಟು ಹೆಚ್ಚು: ಅಧ್ಯಯನ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada