• Home
  • About Us
  • ಕರ್ನಾಟಕ
Wednesday, July 2, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಕೋವಿಡ್‌ ಬಿಕ್ಕಟ್ಟು: ದುಬಾರಿ ವೆಚ್ಚದ ಯೋಜನೆ ಕೈಬಿಡಿ, ಆ ಹಣ ಆರೋಗ್ಯ ಕ್ಷೇತ್ರಕ್ಕೆ ಬಳಸಿ- KRS ಪಕ್ಷದಿಂದ ಆಗ್ರಹ

Any Mind by Any Mind
May 7, 2021
in ಕರ್ನಾಟಕ
0
ಕೋವಿಡ್‌ ಬಿಕ್ಕಟ್ಟು: ದುಬಾರಿ ವೆಚ್ಚದ ಯೋಜನೆ  ಕೈಬಿಡಿ, ಆ ಹಣ ಆರೋಗ್ಯ ಕ್ಷೇತ್ರಕ್ಕೆ ಬಳಸಿ- KRS ಪಕ್ಷದಿಂದ ಆಗ್ರಹ
Share on WhatsAppShare on FacebookShare on Telegram

ADVERTISEMENT

ಕರೋನಾ 2ನೇ ಅಲೆ ದೇಶದಲ್ಲಿ ಸಂದಿಗ್ಧ ಪರಿಸ್ಥಿತಿ ಉಂಟು ಮಾಡಿದ್ದು, ವೈದ್ಯಕೀಯ ಸೌಲಭ್ಯದ ಕೊರತೆಯಿಂದ ಸೋಂಕಿತರು ಸಾವನ್ನಪ್ಪುತ್ತಿರುವುದು ದುರಾದೃಷ್ಟಕರ. ಈ ನಿಟ್ಟಿನಲ್ಲಿ ಸರ್ಕಾರದ ಎಲ್ಲಾ ದುಬಾರಿ ಯೋಜನೆಯನ್ನು ಕೈಬಿಟ್ಟು, ಆ ಹಣವನ್ನು ವೈದ್ಯಕೀಯ ಕ್ಷೇತ್ರಕ್ಕೆ ಬಳಸಿ ಜನರ ಪ್ರಾಣ ಉಳಿಸಿ ಎಂಬುವುದು ದೇಶದ ರಾಜಕೀಯ ನಾಯಕರ, ಪ್ರಜ್ಞಾವಂತ ಸಮುದಾಯದ ಒತ್ತಾಯವಾಗಿದ್ದು, ಇದೀಗಾ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷವು ನವ ಸಂಸತ್ ಭವನ ಮತ್ತು ಪ್ರಧಾನಿ ಬಂಗಲೆಯ ಕಾಮಗಾರಿಯನ್ನು ಮುಂದೂಡಿ ಅದರ ಹಣ ಆರೋಗ್ಯ ಸೇವಾ ವ್ಯವಸ್ಥೆಯ ಬಲವರ್ಧನೆಗೆ ಬಳಸಬೇಕೆಂದು ಆಗ್ರಹಿಸಿದೆ.

ದೆಹಲಿಯಲ್ಲಿ ಸುಮಾರು 13,450 ಕೋಟಿ ರೂಪಾಯಿಗಳ ವೆಚ್ಚದಲ್ಲಿ ನಿರ್ಮಿಸುತ್ತಿರುವ “ನವ ಸಂಸತ್ ಭವನ” ಮತ್ತು ಪ್ರಧಾನಿ ಬಂಗಲೆಯ ಕಾಮಗಾರಿಯನ್ನು (Central Vista Project) ಸದ್ಯಕ್ಕೆ ಮುಂದೂಡಿ ಅದಕ್ಕೆ ಒದಗಿಸಿರುವ ಹಣವನ್ನು ದೇಶದಲ್ಲಿ ಸರ್ಕಾರಿ ಆರೋಗ್ಯ ಸೇವಾ ವ್ಯವಸ್ಥೆಯ ಬಲವರ್ಧನೆಗೆ ಬಳಸಬೇಕೆಂದು ಕೆಆರ್‌ಎಸ್‌ ಪಕ್ಷದ ರಾಜಾಧ್ಯಕ್ಷ ರವಿಕೃಷ್ಣಾ ರೆಡ್ಡಿ ಸಲಹೆ ಕೊಟ್ಟಿದ್ದಾರೆ.

ಹೊಸ ಸಂಸತ್‌ ಕಟ್ಟಡ ನಿರ್ಮಾಣ ಯೋಜನೆ ಕೈಬಿಟ್ಟು ವೈದ್ಯಕೀಯ ಸೌಲಭ್ಯ ವಿಸ್ತರಿಸಿ: ಕೇಂದ್ರ ಸರ್ಕಾರಕ್ಕೆ ನೆಟ್ಟಿಗರಿಂದ ಒತ್ತಾಯ

ಸದ್ಯಕ್ಕೆ ನಿರುಪಯುಕ್ತವಾಗಿರುವ ಬೆಳಗಾವಿಯ ಸುವರ್ಣಸೌಧವನ್ನು ರಾಜ್ಯ ಸರ್ಕಾರವು ಸರ್ಕಾರಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯನ್ನಾಗಿ ಪರಿವರ್ತಿಸಬೇಕೆಂದು ಹೀಗಾಗಲೇ ಹಲವು ನಾಯಕರು ಮುಖ್ಯಮಂತ್ರಿ ಯಡಿಯೂರಪ್ಪ ಸರ್ಕಾರವನನ್ನು ಒತ್ತಾಯಿಸಿದ್ದು, ಇದಕ್ಕೆ ಕೆಆರ್‌ಎಸ್‌ ಪಕ್ಷ ಕೂಡ ಬೆಂಬಲ ನೀಡಿದೆ.

ತಕ್ಷಣಕ್ಕೆ ಅಗತ್ಯವಿಲ್ಲದ ಎಲ್ಲಾ ಕಟ್ಟಡ, ಸೇತುವೆ, ಕಾಂಕ್ರೀಟ್ ಯೋಜನೆಗಳನ್ನು ರಾಜ್ಯ ಸರ್ಕಾರ ಕೂಡಲೇ ನಿಲ್ಲಿಸಿ ಆ ಹಣವನ್ನು ರಾಜ್ಯದ ಆಸ್ಪತ್ರೆ ಮತ್ತು ವೈದ್ಯಕೀಯ ಸೌಲಭ್ಯಗಳ ಉನ್ನತೀಕರಣಕ್ಕೆ ಬಳಸಬೇಕು. ಹಾಗೆಯೇ ಸೆಂಟ್ರಲ್‌ ವಿಸ್ತಾ(Central Vista Project) ವಿಚಾರಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ಹಠಕ್ಕೆ ಬೀಳದೆ ಮತ್ತು ಅದನ್ನು ತಮ್ಮ ದೊಡ್ಡಸ್ತಿಕೆಯ ತೋರ್ಪಡಿಕೆಗೆ ಬಳಸದೆ ದೇಶದ ಸದ್ಯದ ಪರಿಸ್ಥಿತಿಯನ್ನು ಮನಗಂಡು ಸಂವೇದನೆ ಮತ್ತು ಕಾಳಜಿಯಿಂದ ವರ್ತಿಸಬೇಕೆಂದು ತಿಳಿಸಿದೆ.

ದೇಶದ ಬಹುಜನರು ಸಂಕಷ್ಟದಲ್ಲಿ ಇರುವಾಗ ಆಡಳಿತಗಾರರ ವೈಭವೋಪೇತ ಜೀವನ ಮತ್ತು ಎದ್ದು ಕಾಣಿಸುವ ದುಂದು ವೆಚ್ಚವನ್ನು ಜನರು ಹಗುರವಾಗಿ ಪರಿಗಣಿಸುವುದಿಲ್ಲ. ಅಂತಹ ನಡವಳಿಕೆ ಕೇವಲ ಮೋದಿಯವರ ಮೇಲಷ್ಟೇ ಪರಿಣಾಮ ಬೀರದೆ ಇಡೀ ದೇಶದ ಎಲ್ಲಾ ರಾಜಕಾರಣಿಗಳ ಮೇಲೆಯೂ ಕೆಟ್ಟ ಪರಿಣಾಮ ಬೀರುತ್ತದೆ. ಜನರು ತಮ್ಮ ಪ್ರತಿನಿಧಿಗಳ ಮೇಲೆ ಸಾರಾಸಗಟಾಗಿ ವಿಶ್ವಾಸವನ್ನು ಕಳೆದುಕೊಂಡ ಸಂದರ್ಭದಲ್ಲಿ ದೇಶದ ಪ್ರಜಾಪ್ರಭುತ್ವವೂ ಅಪಾಯಕ್ಕೆ ಸಿಲುಕುತ್ತದೆ. ವ್ಯಕ್ತಿ ಮತ್ತು ಆತನ ವೈಯಕ್ತಿಕ ತೆವಲು ಮತ್ತು ಮಹತ್ವಾಕಾಂಕ್ಷೆಗಳಿಗಿಂತ ದೇಶ ದೊಡ್ಡದು ಈ ವೇಳೆ ಪರಿಸ್ಥಿತಿಯನ್ನು ಗಂಭೀರವಾಗಿ ಪರಿಗಣಿಸಿ ಸರ್ಕಾರ ಜನರ ಸಮಸ್ಯೆ ಬಗೆಹರಿಸುವತ್ತ ಚಿತ್ತಹರಿಸ ಬೇಕೆಂಬುವುದು ಕೆಆರ್‌ಎಸ್‌ ಪಕ್ಷದ ಸಲಹೆ.

Previous Post

ಕ್ಷಮೆಯಾಚನೆ ಸುದ್ದಿಯನ್ನು ನಿರಾಕರಿಸಿದ ತೇಜಸ್ವಿ ಸೂರ್ಯ!

Next Post

ಮೈಸೂರಿನಲ್ಲಿ ಜನ ಪ್ರತಿನಿಧಿಗಳ ನಡುವೆಯೇ ತಿಕ್ಕಾಟಕ್ಕೆ ಕಾರಣವಾದ ಆಕ್ಸಿಜನ್ ಮರುಭರ್ತಿ ಕಾರ್ಯ

Related Posts

Top Story

Khushi Mukherjee: ನಾನು ಬಂಗಾಳಿ ಬ್ರಾಹ್ಮಣ ಕುಟುಂಬದವಳು, ಸಂಸ್ಕೃತಿಯ ಅರಿವಿದೆ..!

by ಪ್ರತಿಧ್ವನಿ
July 2, 2025
0

ಸೋಷಿಯಲ್‌ ಮೀಡಿಯಾದಲ್ಲಿ ಆಕ್ಟೀವ್‌ ಆಗಿರುವ ನಟಿಯರಲ್ಲಿ ಖುಷಿ ಮುಖರ್ಜಿ (Khushi Mukherjee) ಕೂಡ ಒಬ್ಬರು. ಸದಾ ತುಂಡುಡುಗೆ ತೊಟ್ಟು ಸದ್ದು ಮಾಡುತ್ತಿರುವ ಬೆಡಗಿ ಎಂದೇ ಹೇಳಬಹುದು. ಇದೀಗ...

Read moreDetails

“ಕೊರಗಜ್ಜ” ಸಿನಿಮಾಗೆ ಕಾಸ್ಟ್ಯೂಮ್ ಮತ್ತು ಆರ್ಟ್ ಡೈರೆಕ್ಷನ್ ಗೆ ಟಿಪ್ಸ್ ನೀಡಿದ್ದೇ 96ವರ್ಷದ ಎಂ ಎಸ್ ಸತ್ಯು- ನಿರ್ದೇಶಕ ಸುಧೀರ್ ಅತ್ತಾವರ್

July 2, 2025

ನಂದಿ ಗಿರಿಧಾಮದಲ್ಲಿ ಸಿಎಂ, ಡಿಸಿಎಂ ಸಚಿವ ಸಂಪುಟ ಸಭೆ..!

July 2, 2025

CM Siddaramaiah: ಬಿಜೆಪಿ ಹಗಲುಗನಸು ಕಾಣುತ್ತಿದೆ: ಸಿ.ಎಂ.ಸಿದ್ದರಾಮಯ್ಯ

July 2, 2025
‘I have no other option’ – ಸಿಎಂ ಬದಲಾವಣೆ ಬಗ್ಗೆ ಹಿಂಗಂದಿದ್ದ್ಯಾಕೆ ಡಿಕೆ ಶಿವಕುಮಾರ್ ..?! 

‘I have no other option’ – ಸಿಎಂ ಬದಲಾವಣೆ ಬಗ್ಗೆ ಹಿಂಗಂದಿದ್ದ್ಯಾಕೆ ಡಿಕೆ ಶಿವಕುಮಾರ್ ..?! 

July 2, 2025
Next Post
ಮೈಸೂರಿನಲ್ಲಿ ಜನ ಪ್ರತಿನಿಧಿಗಳ ನಡುವೆಯೇ ತಿಕ್ಕಾಟಕ್ಕೆ ಕಾರಣವಾದ  ಆಕ್ಸಿಜನ್ ಮರುಭರ್ತಿ ಕಾರ್ಯ

ಮೈಸೂರಿನಲ್ಲಿ ಜನ ಪ್ರತಿನಿಧಿಗಳ ನಡುವೆಯೇ ತಿಕ್ಕಾಟಕ್ಕೆ ಕಾರಣವಾದ ಆಕ್ಸಿಜನ್ ಮರುಭರ್ತಿ ಕಾರ್ಯ

Please login to join discussion

Recent News

Top Story

Khushi Mukherjee: ನಾನು ಬಂಗಾಳಿ ಬ್ರಾಹ್ಮಣ ಕುಟುಂಬದವಳು, ಸಂಸ್ಕೃತಿಯ ಅರಿವಿದೆ..!

by ಪ್ರತಿಧ್ವನಿ
July 2, 2025
Top Story

“ಕೊರಗಜ್ಜ” ಸಿನಿಮಾಗೆ ಕಾಸ್ಟ್ಯೂಮ್ ಮತ್ತು ಆರ್ಟ್ ಡೈರೆಕ್ಷನ್ ಗೆ ಟಿಪ್ಸ್ ನೀಡಿದ್ದೇ 96ವರ್ಷದ ಎಂ ಎಸ್ ಸತ್ಯು- ನಿರ್ದೇಶಕ ಸುಧೀರ್ ಅತ್ತಾವರ್

by ಪ್ರತಿಧ್ವನಿ
July 2, 2025
Top Story

ನಂದಿ ಗಿರಿಧಾಮದಲ್ಲಿ ಸಿಎಂ, ಡಿಸಿಎಂ ಸಚಿವ ಸಂಪುಟ ಸಭೆ..!

by ಪ್ರತಿಧ್ವನಿ
July 2, 2025
Top Story

CM Siddaramaiah: ಬಿಜೆಪಿ ಹಗಲುಗನಸು ಕಾಣುತ್ತಿದೆ: ಸಿ.ಎಂ.ಸಿದ್ದರಾಮಯ್ಯ

by ಪ್ರತಿಧ್ವನಿ
July 2, 2025
‘I have no other option’ – ಸಿಎಂ ಬದಲಾವಣೆ ಬಗ್ಗೆ ಹಿಂಗಂದಿದ್ದ್ಯಾಕೆ ಡಿಕೆ ಶಿವಕುಮಾರ್ ..?! 
Top Story

‘I have no other option’ – ಸಿಎಂ ಬದಲಾವಣೆ ಬಗ್ಗೆ ಹಿಂಗಂದಿದ್ದ್ಯಾಕೆ ಡಿಕೆ ಶಿವಕುಮಾರ್ ..?! 

by Chetan
July 2, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Khushi Mukherjee: ನಾನು ಬಂಗಾಳಿ ಬ್ರಾಹ್ಮಣ ಕುಟುಂಬದವಳು, ಸಂಸ್ಕೃತಿಯ ಅರಿವಿದೆ..!

July 2, 2025

“ಕೊರಗಜ್ಜ” ಸಿನಿಮಾಗೆ ಕಾಸ್ಟ್ಯೂಮ್ ಮತ್ತು ಆರ್ಟ್ ಡೈರೆಕ್ಷನ್ ಗೆ ಟಿಪ್ಸ್ ನೀಡಿದ್ದೇ 96ವರ್ಷದ ಎಂ ಎಸ್ ಸತ್ಯು- ನಿರ್ದೇಶಕ ಸುಧೀರ್ ಅತ್ತಾವರ್

July 2, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada