ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಶನಿವಾರ ಮೋದಿ ಸರ್ಕಾರದ ವಿರುದ್ಧ ಗುಡುಗಿದ್ದು, ಕೇಂದ್ರ ಸರ್ಕಾರ ದೇಶವನ್ನು ಕರೋನದ ವಿನಾಶಕ್ಕೆ ದೂಡಿದೆ ಎಂದು ಆರೋಪಿಸಿದ್ದಾರೆ.
ಕಳೆದ 6 ತಿಂಗಳಲ್ಲಿ ಸಾಂಕ್ರಾಮಿಕ ರೋಗವನ್ನು ಎದುರಿಸಲು ಕೇಂದ್ರ ಸರ್ಕಾರ ಮತ್ತು ಸಚಿವರು ಯಾವುದೇ ಕೆಲಸ ಮಾಡಿಲ್ಲ. ಕರೋನ ಎದುರಿಸುವ ಸಮಯದಲ್ಲಿ ಅಧಿಕಾರ ಹಿಡಿಯಲು ಬಂಗಾಳಕ್ಕೆ ಬರುತ್ತಿದ್ದರು. ಹಾಗಾಗಿಯೇ ಇಂದು ಕೋವಿಡ್ ಬಿಕ್ಕಟ್ಟಿನಲ್ಲಿ ಮುಳುಗಿದ್ದಾರೆ ಎಂದು ಆರೋಪಿಸಿದ್ದಾರೆ.
77 ಸ್ಥಾನಗಳನ್ನು ಗೆಲ್ಲುವ ಮೂಲಕ ಮುಖ್ಯ ವಿರೋಧ ಪಕ್ಷವಾಗಿರುವ ಬಿಜೆಪಿ ಬಂಗಾಳದ ಹಿಂಸಾಚಾರದ ವಿರುದ್ಧ ಸ್ಪೀಕರ್ ಚುನಾವಣೆ ಪ್ರಕ್ರಿಯೆಯನ್ನು ಬಹಿಷ್ಕರಿಸಿತ್ತು. ಆದರು ಟಿಎಂಸಿ ಶಾಸಕ ಬಿಮನ್ ಬಂದೋಪಾಧ್ಯಾಯ ಸತತ ಮೂರನೇ ಬಾರಿಗೆ ಸ್ಪೀಕರ್ ಆಗಿ ಆಯ್ಕೆಯಾಗಿದ್ದಾರೆ.
ಪಶ್ಚಿಮ ಬಂಗಾಳದಲ್ಲಿ ಕರೋನದ ಪ್ರಕರಣಗಳು ಕ್ರಮೇಣ ಹೆಚ್ಚುತ್ತಿವೆ. ರಾಜ್ಯ ಆರೋಗ್ಯ ಸಚಿವಾಲಯದ ಪ್ರಕಾರ, ರಾಜ್ಯದಲ್ಲಿ ಶನಿವಾರ 127 ಜನರು ಕರೋನಾದಿಂದ ಸಾವನ್ನಪ್ಪಿದ್ದರೆ, 19436 ಹೊಸ ಪ್ರಕರಣಗಳು ವರದಿಯಾಗಿವೆ.
ಚುನಾವಣಾ ಆಯೋಗದಲ್ಲಿ ತುರ್ತು ಸುಧಾರಣೆ ಮಾಡಬೇಕು: ಮಮತಾ ಬ್ಯಾನರ್ಜಿ
ಚುನಾವಣಾ ಆಯೋಗದಲ್ಲಿ ತುರ್ತು ಸುಧಾರಣೆಗೆ ಮಮತಾ ಬ್ಯಾನರ್ಜಿ ಒತ್ತಾಯಿಸಿದ್ದಾರೆ, ಚುನಾವಣೆಯಲ್ಲಿ ಬಿಜೆಪಿ ದೊಡ್ಡ ಮೊತ್ತವನ್ನು ಖರ್ಚು ಮಾಡಿದೆ ಎಂಬ ಗಂಭೀರ ಆರೋಪವನ್ನು ಮಾಡಿದ್ದಾರೆ.
“ಚುನಾವಣಾ ಆಯೋಗವನ್ನು ತಕ್ಷಣ ಸುಧಾರಿಸಬೇಕಾಗಿದೆ. ಕೇಂದ್ರ ಮತ್ತು ಇತರ ರಾಜ್ಯಗಳ ಮುಖಂಡರು ಸೇರಿದಂತೆ ಬಿಜೆಪಿ ತನ್ನ ಮುಖಂಡರಿಗಾಗಿ ಅನೇಕ ಹೋಟೆಲ್ಗಳನ್ನು ಕಾಯ್ದಿರಿಸಿತ್ತು. ವಿಮಾನ ಮತ್ತು ಗಯಾ ಹೋಟೆಲ್ಗೆ ಎಷ್ಟು ಹಣವನ್ನು ಖರ್ಚು ಮಾಡಲಾಗಿದೆ ಎಂದು ನನಗೆ ತಿಳಿದಿಲ್ಲ. ಆದರೆ ಇಲ್ಲಿ ಹಣವನ್ನು ನೀರಿನಂತೆ ಚೆಲ್ಲುತ್ತಿದ್ದಾರೆ. ಇದರ ಬದಲು ಜನರಿಗೆ ಲಸಿಕೆ ನೀಡಿದ್ದರೆ ರಾಜ್ಯ ಉತ್ತಮವಾಗುತ್ತಿತ್ತು ಎಂದು ಹೇಳಿದ್ದಾರೆ.
ಪಶ್ಚಿಮ ಬಂಗಾಳದಲ್ಲಿ ಇತ್ತೀಚೆಗೆ ವಿಧಾನಸಭಾ ಚುನಾವಣೆ ನಡೆದಿದ್ದು ಈ ಪೈಕಿ ತೃಣಮೂಲ ಕಾಂಗ್ರೆಸ್ 213 ಸ್ಥಾನಗಳನ್ನು ಗೆದ್ದು ಅಧಿಕಾರದ ಗದ್ದುಗೆ ಹೇರಿದರೆ ಅದೇ ಸಮಯದಲ್ಲಿ ಬಿಜೆಪಿ 77 ಸ್ಥಾನಗಳನ್ನು ಗೆದ್ದು ವಿರೋಧ ಪಕ್ಷದ ಸ್ಥಾನ ಗಿಟ್ಟಿಸಿಕೊಂಡಿತ್ತು. 294 ಕ್ಷೇತ್ರ ವಿಧಾನಸಭೆಯಲ್ಲಿ 2 ಕ್ಷೇತ್ರದ ಅಭ್ಯರ್ಥಿಗಳು ಸಾವನ್ನಪ್ಪಿದ್ದರಿಂದ ಅಲ್ಲಿ ಮತದಾನ ನಡೆಯಲಿಲ್ಲ ಎಂದು ತಿಳಿದುಬಂದಿದೆ.