• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಕರೋನಾ ನಿರ್ವಹಣೆಯಲ್ಲಿ ಯೋಗಿ ಆದಿತ್ಯನಾಥ್‌ ವಿಫಲ: ಕೇಂದ್ರ ಸಚಿವ, ಬಿಜೆಪಿ ಸಂಸದರಿಂದಲೇ ಅಸಮಾಧಾನ

ಫೈಝ್ by ಫೈಝ್
May 11, 2021
in ದೇಶ
0
ಕರೋನಾ ನಿರ್ವಹಣೆಯಲ್ಲಿ ಯೋಗಿ ಆದಿತ್ಯನಾಥ್‌ ವಿಫಲ: ಕೇಂದ್ರ ಸಚಿವ, ಬಿಜೆಪಿ ಸಂಸದರಿಂದಲೇ ಅಸಮಾಧಾನ
Share on WhatsAppShare on FacebookShare on Telegram

ADVERTISEMENT

ಉತ್ತರ ಪ್ರದೇಶ ರಾಜ್ಯ ಸರ್ಕಾರ ಕೋವಿಡ್19‌ ನಿರ್ವಹಣೆಯಲ್ಲಿ ಸಮರ್ಥವಾಗಿ ಕಾರ್ಯ ನಿರ್ವಹಿಸುತ್ತಿಲ್ಲ ಎಂದು ಕೇಂದ್ರ ಸಚಿವರು ಹಾಗೂ ಬಿಜೆಪಿ ಸಂಸದರೇ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ತಮ್ಮ ಕ್ಷೇತ್ರದಲ್ಲಿ ಜನತೆ ಆರೋಗ್ಯ ಸೌಕರ್ಯಗಳ ಕೊರತೆಯಿಂದ ಪರಿತಪಿಸುತ್ತಿದ್ದಾರೆಂದು ಸ್ವತಃ ಬಿಜೆಪಿ ಸಂಸದರೇ, ಯೋಗಿ ನೇತೃತ್ವದ ಸರ್ಕಾರದ ವಿರುದ್ಧ ಆಕ್ರೋಶಗೊಂಡಿದ್ದಾರೆ.

ಬರೇಲಿ ಕ್ಷೇತ್ರದಿಂದ ಎಂಟು ಬಾರಿ ಸಂಸದರಾಗಿರುವ, ಕೇಂದ್ರ ಸಚಿವ ಸಂತೋಷ್‌ ಗಂಗವಾರ್‌, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ರಿಗೆ ಪತ್ರ ಬರೆದಿದ್ದು, ತನ್ನ ಕ್ಷೇತ್ರದ ಜನತೆ ಕೋವಿಡ್‌ನಿಂದ ಎದುರಿಸುತ್ತಿರುವ ಸಮಸ್ಯೆಗಳನ್ನು ಪತ್ರದಲ್ಲಿ ಎತ್ತಿ ತೋರಿಸಿದ್ದಾರೆ.

ಪತ್ರದಲ್ಲಿ ಜಿಲ್ಲೆಯ ಜೊತೆಗೆ ರಾಜ್ಯದ ಆರೋಗ್ಯ ಸೌಲಭ್ಯಗಳನ್ನು ಸುಧಾರಿಸಲು ಕೆಲವು ಕ್ರಮಗಳನ್ನು ಕೂಡಾ ಅವರು ಸೂಚಿಸಿದ್ದಾರೆ.

ಬರೇಲಿ ಜಿಲ್ಲೆಯ ರಾಜ್ಯ ವೈದ್ಯಕೀಯ ವಿಭಾಗದ ಹಿರಿಯ ಅಧಿಕಾರಿಗಳು ರೋಗಿಗಳು ಮತ್ತು ಪರಿಚಾರಕರ ದೂರವಾಣಿ ಕರೆಗಳಿಗೆ ಸಮರ್ಪಕವಾಗಿ ಪ್ರತಿಕ್ರಿಯಿಸುತ್ತಿಲ್ಲ ಎಂದು ಗಂಗವಾರ್‌ ಆರೋಪಿಸಿದ್ದಾರೆ.

ಮುನ್ನೆಚ್ಚರಿಕೆ ಕ್ರಮವಾಗಿ ಜನರು ತಮ್ಮ ಮನೆಯಲ್ಲಿ ಆಮ್ಲಜನಕ ಸಿಲಿಂಡರ್‌ಗಳನ್ನು ಸಂಗ್ರಹಿಸುವ ವಿಷಯವನ್ನೂ ಉಲ್ಲೇಖಿಸಿದ ಅವರು, ಇದು ಜಿಲ್ಲೆಯಲ್ಲಿ ವೈದ್ಯಕೀಯ ಆಮ್ಲಜನಕದ ಕೊರತೆಯನ್ನು ಹೆಚ್ಚಿಸುತ್ತಿದೆ ಎಂದಿದ್ದಾರೆ, ಹಾಗೂ ಅನಗತ್ಯವಾಗಿ ಆಮ್ಲಜನಕವನ್ನು ಸಂಗ್ರಹಿಸುವ ಮತ್ತು ಸಿಲಿಂಡರ್‌ಗಳನ್ನು ಕಾಳ ಮಾರುಕಟ್ಟೆಯಲ್ಲಿ ಮಾರಾಟ ಮಾಡುವವರನ್ನು ಗುರುತಿಸುವ ತುರ್ತು ಅವಶ್ಯಕತೆಯಿದೆ ಎಂದು ಸರ್ಕಾರಕ್ಕೆ ಸೂಚಿಸಿದ್ದಾರೆ.

ಆಸ್ಪತ್ರೆಗಳಿಗೆ ದಾಖಲಿಸಲು ಒಂದು ಆಸ್ಪತ್ರೆಯಿಂದ ಇನ್ನೊಂದು ಆಸ್ಪತ್ರೆಗ ಓಡುತ್ತಿರಬೇಕಾದ ಪರಿಸ್ಥಿತಿ ಇದೆ. ಆಮ್ಲಜನಕ ಕೊರತೆಯನ್ನು ಪೂರೈಸಲು ಬರೇಲಿಯಲ್ಲಿ ತುರ್ತಾಗಿ ಒಂದು ಆಮ್ಲಜನಕ ಘಟಕ ಪೂರೈಸಬೇಕೆಂದು ಅವರು ಆಗ್ರಹಿಸಿದ್ದಾರೆ.

ಕಾಳ ಮಾರುಕಟ್ಟೆಯಲ್ಲಿ ವೈದ್ಯಕೀಯ ಸಾಮಾಗ್ರಿಗಳು ಮಾರಾಟವಾಗುವುದನ್ನು ತಡೆಯಲು ಸರ್ಕಾರ ಅಗತ್ಯ ವೈದ್ಯಕೀಯ ಸಾಮಾಗ್ರಿಗಳ ಬೆಲೆಗಳನ್ನು ನಿಯಂತ್ರಿಸಬೇಕು ಹಾಗೂ ಖಾಸಗಿಯಾಗಿ ನೋಂದಣಿಯಾಗಿರುವ ಆಸ್ಪತ್ರೆಗಳಿಗೆ MSME ಅಡಿಯಲ್ಲಿ ಹಣಕಾಸು ನೆರವು ನೀಡಬೇಕು ಎಂದು ಅವರು ಸಲಹೆ ನೀಡಿದ್ದಾರೆ.

ಕೇವಲ ಎರಡು ದಿನಗಳ ಹಿಂದೆ, ಕಾನ್ಪುರದ ಬಿಜೆಪಿಯ ಲೋಕಸಭಾ ಸದಸ್ಯ ಸತ್ಯದೇವ್ ಪಚೌರಿ ಉತ್ತರಪ್ರದೇಶ ಸಿಎಂಗೆ ಪತ್ರವೊಂದನ್ನು ಬರೆದಿದ್ದು, ಕೋವಿಡ್ -19 ರೋಗಿಗಳು ಉತ್ತಮ ಚಿಕಿತ್ಸೆ ಪಡೆಯುತ್ತಿಲ್ಲ. ಕೋವಿಡಡಡ ರೋಗಿಗಳಲ್ಲಿ ಅನೇಕರು ತಮ್ಮ ಮನೆಗಳ ಹೊರಗೆ, ಅಥವಾ ಆಸ್ಪತ್ರೆಗಳ ಹೊರಗೆ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ ಎಂದು ಉಲ್ಲೇಖಿಸಿದ್ದಾರೆ. ಕಾನ್ಪುರದ ಆಂಬ್ಯುಲೆನ್ಸ್‌ಗಳಲ್ಲಿ ಸಾಕಷ್ಟು ಜೀವ ಉಳಿಸುವ ವ್ಯವಸ್ಥೆಯ ಅಗತ್ಯವಿದೆ ಎಂದು ಸೂಚಿಸಿದ್ದರು.

ಮಾರಣಾಂತಿಕ ವೈರಲ್ ಸೋಂಕಿನ ಮೂರನೇ ಅಲೆಯನ್ನು ಎದುರಿಸಲು ಯುಪಿ ಸರ್ಕಾರವು ಈಗ ಸಾಧ್ಯವಿರುವ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಪಚೌರಿ ಸಲಹೆ ನೀಡಿದ್ದರು.

ಇದಕ್ಕೂ ಮುನ್ನ ಲಖನೌ ಜಿಲ್ಲೆಯ ಮೋಹನ್‌ಲಾಲ್‌ಗಂಜ್‌ನ ಬಿಜೆಪಿ ಸಂಸದ ಕೌಶಲ್ ಕಿಶೋರ್ ಅವರು ಲಕ್ನೋ ಜಿಲ್ಲೆಯಲ್ಲಿ ವೈದ್ಯಕೀಯ ಆಮ್ಲಜನಕ, ಜೀವ ಉಳಿಸುವ ಔಷಧಿಗಳು ಮತ್ತು ಇತರ ಅಗತ್ಯ ಆಸ್ಪತ್ರೆ ಉಪಕರಣಗಳ ಕೊರತೆಯ ಬಗ್ಗೆ ಸಿಎಂಗೆ ಪತ್ರ ಬರೆದಿದ್ದರು.

ಒಂದು ಕಡೆ, ತನ್ನದೇ ಪಕ್ಷದ ಸಂಸದರು ಪರೋಕ್ಷವಾಗಿ ತನ್ನ ಆಡಳಿತದ ವೈಫಲ್ಯ ಹಾಗೂ ಕರೋನಾ ನಿರ್ವಹಣೆಯಲ್ಲಿ ತನ್ನ ಅಸಮರ್ಪಕತೆಯ ವಿರುದ್ಧ ತಮ್ಮ ಅಸಮಾಧಾನವನ್ನು ಹೊರ ಹಾಕುತ್ತಿದ್ದರೂ, ಯೋಗಿ ಆದಿತ್ಯನಾಥ್‌ ತನ್ನ ಮೊಂಡುತನ ಪ್ರದರ್ಶಿಸುತ್ತಿದ್ದಾರೆ.

ಆರೋಗ್ಯ ಕ್ಷೇತ್ರದ ಅಸಮರ್ಪಕತೆಯಿಂದಾಗಿ, ವೈದ್ಯಕೀಯ ಸವಲತ್ತುಗಳ ಕೊರತೆಯಿಂದಾಗಿ ಸಹಸ್ರ ಸಂಖ್ಯೆಯಲ್ಲಿ ನಾಗರಿಕರು ಜೀವ ಕಳೆದುಕೊಳ್ಳುತ್ತಿರುವುದರ ನಡುವೆಯೇ ದನಗಳಿಗೆ ವೈದ್ಯಕೀಯ ಸೌಲಭ್ಯಗಳನ್ನು ಹೆಚ್ಚಿಸುವುದಾಗಿ ಘೋಷಿಸಿಕೊಂಡಿರುವ ಉತ್ತರಪ್ರದೇಶ ಸರ್ಕಾರಕ್ಕೆ ತನ್ನ ನಾಗರಿಕರ ಜೀವದ ಮೌಲ್ಯ ಅರಿವಾಗದಿರುವುದು ವಿಪರ್ಯಾಸ, ಈ ವಿಷಮ ಪರಿಸ್ಥಿತಿಯಲ್ಲೂ ಭಾವನಾತ್ಮಕವಾಗಿ ʼದನದ ಹೆಸರಿನ ರಾಜಕಾರಣʼ ಮಾಡುತ್ತಿರುವುದು ಯೋಗಿ ಆದಿತ್ಯನಾಥರ ಆದ್ಯತೆಯನ್ನು ವಿವರಿಸುತ್ತದೆ. ಯೋಗಿ ಆಡಳಿತದ ಉತ್ತರ ಪ್ರದೇಶದಲ್ಲಿ ಮನುಷ್ಯರಾಗಿ ಹುಟ್ಟುವುದಕ್ಕಿಂತ ದನವಾಗಿ ಹುಟ್ಟುವುದೇ ಲೇಸು ಅನ್ನುವುದನ್ನು ಉತ್ತರಪ್ರದೇಶದಲ್ಲಿ ಪದೇ ಪದೇ ಸಾಬೀತುಪಡಿಸಲಾಗುತ್ತಿದೆ.

Tags: Union Minister
Previous Post

ಸೆಂಟ್ರಲ್ ವಿಸ್ಟಾಗೆ ಮಧ್ಯಂತರ ತಡೆ ಕೋರಿ ಅರ್ಜಿಯ ವಿಚಾರಣೆಗೆ ಒಪ್ಪಿದ ದೆಹಲಿ ಹೈಕೋರ್ಟ್

Next Post

ಮೊದಲ ದಿನವೇ ನರಕದರ್ಶನ ಮಾಡಿಸಿದ ಅಮಾನುಷ ಲಾಕ್ ಡೌನ್!

Related Posts

ಮೋದಿಗೆ ಹತ್ಯೆ ಸಂಚು ಆರೋಪ: ಬಿಹಾರದಲ್ಲಿ ಮೂವರು ಬಂಧನ, ಸಿಐಎ ಇಮೇಲ್‌  ಬಹಿರಂಗ
ದೇಶ

ಮೋದಿಗೆ ಹತ್ಯೆ ಸಂಚು ಆರೋಪ: ಬಿಹಾರದಲ್ಲಿ ಮೂವರು ಬಂಧನ, ಸಿಐಎ ಇಮೇಲ್‌  ಬಹಿರಂಗ

by ಪ್ರತಿಧ್ವನಿ
April 10, 2026
0

ಪಟ್ನಾ, ಏ.10: ಪ್ರಧಾನಮಂತ್ರಿ  ನರೇಂದ್ರ ಮೋದಿ ಅವರನ್ನು ಹತ್ಯೆ ಮಾಡುವ ಸಂಚು ರೂಪಿಸಿದ್ದ ಆರೋಪದಡಿ ಬಿಹಾರ ಪೊಲೀಸರು ಮೂವರು ಯುವಕರನ್ನು ಬಂಧಿಸಿದ್ದಾರೆ. ಈ ಘಟನೆ ದೇಶದಾದ್ಯಂತ ಆತಂಕ...

Read moreDetails
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

April 9, 2026
ಇಂಧನ ಕೊರತೆ ಆರೋಪ: ಕೇಂದ್ರದ ವಿರುದ್ಧ ಕೆ.ಹೆಚ್. ಮುನಿಯಪ್ಪ ವಾಗ್ದಾಳಿ

ಇಂಧನ ಕೊರತೆ ಆರೋಪ: ಕೇಂದ್ರದ ವಿರುದ್ಧ ಕೆ.ಹೆಚ್. ಮುನಿಯಪ್ಪ ವಾಗ್ದಾಳಿ

April 6, 2026
ಟೆರಿಟೋರಿಯಲ್ ಆರ್ಮಿಯಲ್ಲಿ ಉದ್ಯೋಗ:ಯುವಕರಿಗೆ ಸುವರ್ಣಾವಕಾಶ

 ಮೊಹಮ್ಮದ್ ಇಕ್ಬಾಲ್ ‘ಪಲಾಯನಗೈದ ಆರ್ಥಿಕ ಅಪರಾಧಿ’ ಎಂದು ನ್ಯಾಯಾಲಯ ಘೋಷಣೆ

April 1, 2026
Next Post
ಮೊದಲ ದಿನವೇ ನರಕದರ್ಶನ ಮಾಡಿಸಿದ ಅಮಾನುಷ ಲಾಕ್ ಡೌನ್!

ಮೊದಲ ದಿನವೇ ನರಕದರ್ಶನ ಮಾಡಿಸಿದ ಅಮಾನುಷ ಲಾಕ್ ಡೌನ್!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada