• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಪ್ರಧಾನಿಯವರೇ ಗಂಗೆಯಲ್ಲಿ ರಾಶಿರಾಶಿ ಹೆಣಗಳು ತೇಲುತ್ತಿವೆ, ಈ ಸಂಧರ್ಭದಲ್ಲಿ ನಿಮ್ಮ ಅನುಪಸ್ಥಿತಿ ಕಾಡುತ್ತಿದೆ ಎಲ್ಲಿದ್ದೀರಿ?

Any Mind by Any Mind
May 11, 2021
in ಕರ್ನಾಟಕ
0
ಪ್ರಧಾನಿಯವರೇ ಗಂಗೆಯಲ್ಲಿ ರಾಶಿರಾಶಿ ಹೆಣಗಳು ತೇಲುತ್ತಿವೆ, ಈ ಸಂಧರ್ಭದಲ್ಲಿ ನಿಮ್ಮ ಅನುಪಸ್ಥಿತಿ ಕಾಡುತ್ತಿದೆ ಎಲ್ಲಿದ್ದೀರಿ?
Share on WhatsAppShare on FacebookShare on Telegram

ನರೇಂದ್ರ ಮೋದಿಯವರೇ, ಗಂಗೆಯಲ್ಲಿ ರಾಶಿರಾಶಿ ಹೆಣಗಳು ತೇಲುತ್ತಿವೆ, ಈ ಸಂಧರ್ಭದಲ್ಲಿ ನಿಮ್ಮ ಅನುಪಸ್ಥಿತಿ ಕಾಡುತ್ತಿದೆ. ಎಲ್ಲಿದ್ದೀರಿ? ಎಂದು ಒಕ್ಕೂಟ ವ್ಯವಸ್ಥೆಯ ಪ್ರಧಾನಿ ಮೋದಿಯವರನ್ನು ಕೆಆರ್‌ಎಸ್‌ ಪಕ್ಷದ ರಾಜ್ಯಾಧ್ಯಕ್ಷ ರವಿ ಕೃಷ್ಣಾ ರೆಡ್ಡಿ ಪ್ರಶ್ನಿಸಿದ್ದಾರೆ.

ADVERTISEMENT

ಈ ಮಹಾವಿಪತ್ತಿನ ಸಂದರ್ಭದಲ್ಲಿ ನೀವಷ್ಟೆ ಅಲ್ಲ, ಇಡೀ ಕೇಂದ್ರ/ಒಕ್ಕೂಟ ಸರ್ಕಾರವೆ ನಾಪತ್ತೆಯಾಗಿದೆ ಎಂದು ಜನ ಭಾವಿಸಿದ್ದಾರೆ. ಹಾಗಾಗಿಯೇ ಸರ್ವೋಚ್ಚ ನ್ಯಾಯಾಲಯ ಇಂದು ಕೇಂದ್ರ ಸರ್ಕಾರಕ್ಕೆ ನಿರ್ದೇಶನಗಳನ್ನು ನೀಡಿ ಸೋಂಕನ್ನು ಮತ್ತು ಆರೋಗ್ಯ ತುರ್ತುಪರಿಸ್ಥಿತಿಯನ್ನು ನಿಭಾಯಿಸಲು ಪ್ರಯತ್ನಿಸುತ್ತಿದೆ. ಇಲ್ಲವಾದಲ್ಲಿ ದೇಶದ ಜನರಿಗೆ ಅಂದಂದಿನ ಮಾಹಿತಿ ನೀಡಿ ವಿಶ್ವಾಸ ತುಂಬಬೇಕಾದ ಕೇಂದ್ರದ ಆರೋಗ್ಯ ಸಚಿವರು ಮತ್ತು ನೀವು ಎಲ್ಲಿದ್ದೀರಿ? ಏನು ಮಾಡುತ್ತಿದ್ದೀರಿ? ಎಂದು ಅವರು ಕೇಳಿದ್ದಾರೆ.

ಅಮೆರಿಕದಲ್ಲಿ ಕೋವಿಡ್-19 ಸೋಂಕು ತಾರಕಕ್ಕೆ ಹೋಗುತ್ತಿದ್ದಾಗ ಅಲ್ಲಿಯ ರಾಷ್ಟ್ರಾಧ್ಯಕ್ಷ ಆಗಿದ್ದ ನಿಮ್ಮ ಆಪ್ತ ಸ್ನೇಹಿತ ಡೊನಾಲ್ಡ್ ಟ್ರಂಪ್ ಸಹ ಮಾಧ್ಯಮದ ಮುಂದೆ ಬಂದು ಒಂದಷ್ಟು ದಿನಗಳ ಕಾಲ ಪ್ರತಿದಿನ ಮಾಹಿತಿ ನೀಡುತ್ತಿದ್ದರು. ಇನ್ನು ನೀವೋ, ನೀವೇ ಹೇಳಿಕೊಂಡಂತೆ 56 ಇಂಚಿನ ಎದೆಯವರು! ಈ ಸಂದರ್ಭದಲ್ಲಿ ದೇಶಕ್ಕೆ ನಿಮ್ಮ ಪ್ರಾಮಾಣಿಕ ಮಾತು ಮತ್ತು ಪರಿಣಾಮಕಾರಿ ಕೆಲಸದ ಅಗತ್ಯ ಇದೆ. ಈಗ ಚುನಾವಣೆಗಳು ಇಲ್ಲದ ಮಾತ್ರಕ್ಕೆ ನೀವು ಮಾತನಾಡಬಾರದು ಎಂದಿಲ್ಲ. ದಯವಿಟ್ಟು ಕರ್ನಾಟಕವೂ ಸೇರಿದಂತೆ ಹಲವು ರಾಜ್ಯಗಳಿಗೆ ಭೇಟಿ ಕೊಡಿ. ಇಲ್ಲಿಯ ಪರಿಸ್ಥಿತಿ ಮತ್ತು ವ್ಯವಸ್ಥೆಗಳನ್ನು ಪರಿಶೀಲನೆ ಮಾಡಿ. ನೀವು ಬರುತ್ತೀರಿ ಎನ್ನುವ ಕಾರಣಕ್ಕಾದರೂ ದುರಾಡಳಿತ ಮತ್ತು ನಿರಾಡಳಿತದ ಮಧ್ಯೆ ಹೊಯ್ದಾಡುತ್ತಿರುವ ನಮ್ಮ ರಾಜ್ಯ ಸರ್ಕಾರ ಎಚ್ಚೆತ್ತುಕೊಳ್ಳುತ್ತದೆ ಎಂದು ಅವರು ಹೇಳಿದ್ದಾರೆ.

ನೀವು ಸಂಸದರಾಗಿರುವ ಉತ್ತರಪ್ರದೇಶದ ವಾರಣಾಸಿಗೂ ಭೇಟಿ ಕೊಡಿ. ಅಲ್ಲಿ ಸೋಂಕಿಗೆ ಬಲಿಯಾದವರ ಹೆಣಗಳನ್ನು ಗಂಗಾ ನದಿಗೆ ಎಸೆಯಲಾಗುತ್ತಿದೆಯಂತೆ. ಅವು ಬಿಹಾರಕ್ಕೆ ಹೋಗಿ ತೇಲುತ್ತಿವೆ. ಉತ್ತರಪ್ರದೇಶ ಮತ್ತು ಬಿಹಾರದ ರಾಜ್ಯಗಳಲ್ಲಿ ಸೋಂಕು ಈಗ ಗ್ರಾಮೀಣ ಭಾಗಕ್ಕೂ ಹರಡಿದೆಯಂತೆ. ಮೊದಲೇ ಅವು ಅತಿಹಿಂದುಳಿದ ರಾಜ್ಯಗಳು. ಹಾಗೆಯೇ ನಮ್ಮ ದೇಶದ ಕಾಲುಭಾಗ ಜನಸಂಖ್ಯೆ ಅವೆರಡೇ ರಾಜ್ಯಗಳಲ್ಲಿ ಇದೆ. ನೀವು ಈಗ ಅಲ್ಲಿಗೆ ಖುದ್ದು ಭೇಟಿ ನೀಡದೆ ಇದ್ದರೆ ಊಹಿಸಲಾಗದಷ್ಟು ದುರಂತಗಳನ್ನು ದೇಶ ಕಾಣಲಿದೆ ಎಂದು ರೆಡ್ಡಿ ಅವರು ಎಚ್ಚರಿಸಿದ್ದಾರೆ.

ನೀವು ದಯವಿಟ್ಟು ಮಾತನಾಡಿ. ಸತ್ಯವಾದ ವಿಚಾರಗಳನ್ನು ಹಂಚಿಕೊಳ್ಳಿ. ವಿಜ್ಞಾನವನ್ನು ನಂಬಿ. ತಜ್ಞರ ಮಾತನ್ನು ಕೇಳಿ. ವೈಚಾರಿಕವಾಗಿ ಆಲೋಚಿಸಿ. ಇತರೆ ಪಕ್ಷಗಳ ಉತ್ತಮ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಿ. ಅಹಂ ಮತ್ತು ಏಕ ವ್ಯಕ್ತಿ ಪ್ರದರ್ಶನವನ್ನು ಬದಿಗಿಟ್ಟು ದೇಶಕ್ಕೆ ನಾಯಕತ್ವ ಕೊಡಲು ಪ್ರಯತ್ನಿಸಿ. ದೇಶವನ್ನು ಈ ಮಹಾವಿಪತ್ತಿನಿಂದ ಪಾರು ಮಾಡಲು ಕೇಂದ್ರ ಸರ್ಕಾರದ ಎಲ್ಲಾ ಸಂಪನ್ಮೂಲಗಳನ್ನು ಈ ಹೋರಾಟದಲ್ಲಿ ತೊಡಗಿಸಿ ಎಂದು ರವಿ ಕೃಷ್ಣಾ ರೆಡ್ಡಿ ಸಲಹೆ ನೀಡಿದ್ದಾರೆ.

Previous Post

ಚುನಾವಣೆ ಸೋತ ಕಾರಣಕ್ಕೆ ಕರೋನಾ ಬಗ್ಗೆ ತಲೆಕೆಡಿಸಿಕೊಂಡಿರುವ ಬಿಜೆಪಿ ಮತ್ತು ಆರ್‌ಎಸ್‌ಎಸ್!

Next Post

ಲಸಿಕೆ ವಿಷಯದಲ್ಲಿ ರಾಜಕೀಯ ಬೇಡ, ಎಲ್ಲ ಅರ್ಹರಿಗೂ ವ್ಯಾಕ್ಸಿನ್ ಹಾಕಿಸಿ- ಸಿದ್ದರಾಮಯ್ಯ ಒತ್ತಾಯ

Related Posts

ವಿದ್ಯಾರ್ಥಿಗಳ ದುಡುಕಿನ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ
ಕರ್ನಾಟಕ

ಇನ್ನು ಪಿಯುಸಿ ಅಂಕಪಟ್ಟಿ ಮುಂದಿನ ವರ್ಷದಿಂದ  ಹೀಗಿರಲಿದೆ ! ಮಧು ಬಂಗಾರಪ್ಪ ಮಹತ್ವದ ಹೇಳಿಕೆ

by ಪ್ರತಿಧ್ವನಿ
April 10, 2026
0

ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗುವ ವಿದ್ಯಾರ್ಥಿಗಳಿಗೆ ಮುಂದಿನ ಶೈಕ್ಷಣಿಕ ಸಾಲಿನಿಂದ ಮುದ್ರಿತ ಅಂಕಪಟ್ಟಿ ನೀಡುವ ಪದ್ಧತಿಗೆ ಸರ್ಕಾರ ತೆರೆ ಎಳೆಯಲು ನಿರ್ಧರಿಸಿದೆ. ಬದಲಿಗೆ ಡಿಜಿಟಲ್ ಅಂಕಪಟ್ಟಿಯನ್ನೇ ಅಧಿಕೃತವಾಗಿ...

Read moreDetails
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

April 9, 2026
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

April 9, 2026
Next Post
ಲಸಿಕೆ ವಿಷಯದಲ್ಲಿ ರಾಜಕೀಯ ಬೇಡ, ಎಲ್ಲ ಅರ್ಹರಿಗೂ ವ್ಯಾಕ್ಸಿನ್ ಹಾಕಿಸಿ- ಸಿದ್ದರಾಮಯ್ಯ ಒತ್ತಾಯ

ಲಸಿಕೆ ವಿಷಯದಲ್ಲಿ ರಾಜಕೀಯ ಬೇಡ, ಎಲ್ಲ ಅರ್ಹರಿಗೂ ವ್ಯಾಕ್ಸಿನ್ ಹಾಕಿಸಿ- ಸಿದ್ದರಾಮಯ್ಯ ಒತ್ತಾಯ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada