• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 23, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಶಿವಮೊಗ್ಗ ಲಾಕ್‌ಡೌನ್‌: ರೈತರಿಗಾಗುವ ನಷ್ಟವನ್ನು ಈಶ್ವರಪ್ಪ ತುಂಬಿಕೊಡುತ್ತಾರಾ…? ರೈತ ಸಂಘದಿಂದ ಆಕ್ರೋಶ

Any Mind by Any Mind
May 11, 2021
in ಕರ್ನಾಟಕ
0
ಶಿವಮೊಗ್ಗ ಲಾಕ್‌ಡೌನ್‌: ರೈತರಿಗಾಗುವ ನಷ್ಟವನ್ನು ಈಶ್ವರಪ್ಪ ತುಂಬಿಕೊಡುತ್ತಾರಾ…? ರೈತ ಸಂಘದಿಂದ ಆಕ್ರೋಶ
Share on WhatsAppShare on FacebookShare on Telegram

ADVERTISEMENT

ಕೋವಿಡ್‌ ಹೆಚ್ಚಳದಿಂದಾಗಿ, ಶಿವಮೊಗ್ಗ ನಗರ ವ್ಯಾಪ್ತಿಯಲ್ಲಿ ಗುರುವಾರದಿಂದ ಭಾನುವಾರದ ತನಕ ಒಟ್ಟು ನಾಲ್ಕು ದಿನ ಕಠಿಣ ಲಾಕ್‌ಡೌನ್‌ ಮಾಡಲಾಗುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಇಂದು ಸುದ್ದಿಗೋಷ್ಟಿ ನಡೆಸಿ ತಿಳಿಸಿದ್ದು, ಈ ವೇಳೆ ಈ ಅವಧಿಯಲ್ಲಿ ಎಲ್ಲಾ ಕೈಗಾರಿಕಾ ಚಟುವಟಿಕೆಗಳು, ಗಾಂಧಿ ಬಜಾರ್, ಸಗಟು ದಿನಸಿ ವ್ಯಾಪಾರ, ಎಪಿಎಂಸಿ ಸಂಪೂರ್ಣವಾಗಿ ಸ್ಥಬ್ತವಾಗಲಿದೆ ಎಂದಿದ್ದಾರೆ. ಇದಕ್ಕೆ ಶಿವಮೊಗ್ಗ ಜಿಲ್ಲಾ ರೈತಸಂಘ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.

ಇಂದೊಂದು ಅವೈಜ್ಞಾನಿಕ ನಿರ್ಧಾರ, ಇದರಿಂದಾಗಿ ನಗರದ ಎಪಿಎಂಸಿ ಮಾರುಕಟ್ಟೆ ಕೂಡ ಸ್ಥಗಿತಗೊಳ್ಳುತ್ತದೆ.ಸತತವಾಗಿ ನಾಲ್ಕೈದು ದಿನಗಳ ಕಾಲ ಮಾರುಕಟ್ಟೆ ಮುಚ್ಚಿದರೇ ರೈತರು ಬೆಳೆದ ತರಕಾರಿ, ಹಣ್ಣು, ಹೂ ಇತ್ಯಾದಿಗಳನ್ನು ರೈತರು ಎಲ್ಲಿ ಮಾರಾಟ ಮಾಡಬೇಕು ಎಂದು ಜಿಲ್ಲಾ ರೈತ ಸಂಘ ಆಕ್ರೋಶ ವ್ಯಕ್ತಪಡಿಸಿದೆ.

ಶಿವಮೊಗ್ಗ ನಗರದ ಮಾರುಕಟ್ಟೆಗೆ ಕೇವಲ ಶಿವಮೊಗ್ಗ ಜಿಲ್ಲೆಯ ರೈತರಲ್ಲದೇ ಅಕ್ಕ ಪಕ್ಕದ ಜಿಲ್ಲೆಯ ರೈತರು ಸಹ ತರಕಾರಿ, ಹಣ್ಣು ಇತ್ಯಾದಿಗಳನ್ನು ರವಾನೆ ಮಾಡುತ್ತಾರೆ.ಶಿವಮೊಗ್ಗ ಮಾರುಕಟ್ಟೆಯಿಂದ ಕೂಡ ತರಕಾರಿ ಬೆಳೆಗಳು ಬೇರೆ ಜಿಲ್ಲೆಗಳಿಗೆ ರವಾನೆಯಾಗುತ್ತದೆ. ನಾಲ್ಕೈದು ದಿನ ಕಂಪ್ಲೀಟ್ ಲಾಕ್ ಡೌನ್ ಮಾಡಿದರೇ ಮಾರುಕಟ್ಟೆ ನೆಚ್ಚಿಕೊಂಡ ರೈತರ ಪಾಡಿನ ಬಗ್ಗೆ ಈ ಮಹಾನಾಯಕರುಗಳು ಕನಿಷ್ಟ ಯೋಚನೆಯನ್ನು ಮಾಡದಿರುವುದು ಸಚಿವರ ಅಪ್ರಬುದ್ದತೆಯನ್ನು ಪ್ರದರ್ಶಿಸುತ್ತದೆ ಎಂದು ಕೆ.ಎಸ್‌ ಈಶ್ವರಪ್ಪ ವಿರುದ್ಧ ಜಿಲ್ಲಾ ರೈತಸಂಘದ ಪ್ರಧಾನ ಕಾರ್ಯದರ್ಶಿ ಡಿ.ವಿ.ವೀರೇಶ್ ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ.

ತರಕಾರಿ ಬೆಳೆಗಳನ್ನು ನಾಲ್ಕೈದು ದಿನಗಳ ಕಾಲ ಸಂರಕ್ಷಿಸಿಡಲು ಗ್ರಾಮೀಣ ಪ್ರದೇಶಗಳಲ್ಲಿ ಸರ್ಕಾರ ಯಾವುದೇ ಶೈತ್ಯಾಗಾರಗಳನ್ನು,ಗೋಧಾಮುಗಳನ್ನಾಗಲೀ ಇದುವರೆವಿಗೂ ತೆರೆದಿಲ್ಲ,,ಈ ಸಂಧರ್ಭದಲ್ಲಿ ರೈತರ ಬೆಳೆ ರಕ್ಷಣೆ ಮಾಡುವವರ್ಯಾರು? ರೈತರಿಗಾಗುವ ನಷ್ಟವನ್ನು ಈಶ್ವರಪ್ಪನವರು ಮತ್ತು ಇತರರು ತುಂಬಿಕೊಡುತ್ತಾರಾ…?ಕಷ್ಟದಲ್ಲಿರುವ ಜನರಿಗೆ ಹಣ ನೀಡಲು ಸರ್ಕಾರದ ಬಳಿ ನೋಟು ಪ್ರಿಂಟಿಂಗ್ ಮೆಷಿನ್ ಇಲ್ಲ ಎಂದು ಹೇಳುವ ಈಶ್ವರಪ್ಪನವರು ಜನರು, ರೈತರನ್ನು ರಕ್ಷಣೆ ಮಾಡಲು ಯಾವ ಸೌಲಭ್ಯಗಳನ್ನು ಕೊಡುತ್ತಾರೆ..? ಎಂದು ಪ್ರಶ್ನಿಸಿದ್ದಾರೆ.

ಏನನ್ನೂ ಮಾಡುವುದಿಲ್ಲ ಎನ್ನುವುದಾದರೇ ಇದನ್ನು ಸರ್ಕಾರ ಎಂದು ಹೇಗೆ ಕರೆಯಬೇಕು?ಈ ದಿನ ನಿಮ್ಮ ಕ್ಷೇತ್ರದ ರೈತನೊಬ್ಬ ಬೆಳೆದ ಹೂ ಮಾರಾಟವಾಗದೇ ರಸ್ತೆಯಲ್ಲಿ ಹಾಕಿ ಹೋಗಿದ್ದಾರೆ. ಇದರಿಂದಾಗಿ ಆ ರೈತನಿಗೆ ದಿನವೊಂದಕ್ಕೆ ಸುಮಾರು ನಾಲ್ಕು ಸಾವಿರ ರೂಪಾಯಿ ನಷ್ಠವಾಗುತ್ತಿದೆ.ಇದನ್ನು ಭರಿಸುವ ಶಕ್ತಿ ಸರ್ಕಾರ ಮತ್ತು ಈಶ್ವರಪ್ಪನವರಿಗೆ ಇಲ್ಲವೆಂದಾದ ಮೇಲೆ ಅವೈಜ್ಞಾನಿಕವಾಗಿ ಮಾರುಕಟ್ಟೆ ಮುಚ್ಚುವ ನೈತಿಕ ಹಕ್ಕು ಇದೆಯೇ..?  ಎಂದು ವಾಗ್ದಾಳಿ ನಡೆಸಿದ್ದಾರೆ.

ಕಷ್ಟದ ಸಮಯದಲ್ಲಿ ರೈತರ ನೆರವಿಗೆ ಬರಬೇಕಾದ ಸರ್ಕಾರ ಈ ರೀತಿಯ ಅವೈಜ್ಞಾನಿಕ ಕ್ರಮಗಳನ್ನು ಕೈಗೊಂಡು,ರೈತರನ್ನು ಮತ್ತಷ್ಟು ಸಂಕಷ್ಟಕ್ಕೆ ದೂಡುವ ನಿರ್ಧಾರವನ್ನು ತಕ್ಷಣವೇ ಹಿಂಪಡೆಯುವಂತೆ ಕೂಡಲೇ ಈಶ್ವರಪ್ಪನವರು ಮತ್ತು ಇತರರಿಗೆ ಸೂಚನೆ ನೀಡಿ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಜಿಲ್ಲಾ ರೈತಸಂಘದ ಪ್ರಧಾನ ಕಾರ್ಯದರ್ಶಿ ಡಿ.ವಿ.ವೀರೇಶ್ ಒತ್ತಾಯಿಸಿದ್ದಾರೆ.

ರೈತರ ಬದುಕಿನ ಬಗ್ಗೆ ಕನಿಷ್ಠ ಜ್ಞಾನ ಇಲ್ಲದ ನಿಮ್ಮ ಮಂತ್ರಿಗಳಿಗೆ  ರೈತರ ಸಂಕಷ್ಟಗಳ ಬಗ್ಗೆ ಅರ್ಥಮಾಡಿಸಿ. ನಾಲ್ಕೈದು ದಿನಗಳ ಅವೈಜ್ಞಾನಿಕ ಮಾರುಕಟ್ಟೆ ಸ್ಥಗಿತ ಮಾಡದೇ ಸರ್ಕಾರ ರೈತರ ನೆರವಿಗೆ ಧಾವಿಸಬೇಕೆಂದು ಎಂದು ರಾಜ್ಯ ಸರ್ಕಾರಕ್ಕೆ ಮನವಿ ಮಾಡಿಕೊಂಡಿದ್ದಾರೆ.

Previous Post

ಬದಲಾವಣೆ ಬಿರುಸು: ಯಡಿಯೂರಪ್ಪಗೆ ಪಾಂಡಿಚೇರಿ ರಾಜ್ಯಪಾಲರ ಹುದ್ದೆ?

Next Post

ಕೋವಿಡ್ ಲಸಿಕೆಗಳಿಗೆ 35 ಸಾವಿರ ಕೋಟಿ ಖರ್ಚು: ಹೆಸರು ಕೇಂದ್ರಕ್ಕೆ, ಹೊಣೆಗಾರಿಕೆ ಮಾತ್ರ ರಾಜ್ಯಕ್ಕೆ..!

Related Posts

ಗಮನ ಸೆಳೆದ ಗದಗ ಜಿಲ್ಲಾಸ್ಪತ್ರೆ : ಬಿಸಿಲಿನ ಬೇಗೆಯಲ್ಲಿ ರೋಗಿಗಳಿ ಆಶಾಕಿರಣವಾದ ವೈದ್ಯರು, ಏನಿದು ವಿಶೇಷ..?
Top Story

ಗಮನ ಸೆಳೆದ ಗದಗ ಜಿಲ್ಲಾಸ್ಪತ್ರೆ : ಬಿಸಿಲಿನ ಬೇಗೆಯಲ್ಲಿ ರೋಗಿಗಳಿ ಆಶಾಕಿರಣವಾದ ವೈದ್ಯರು, ಏನಿದು ವಿಶೇಷ..?

by ಪ್ರತಿಧ್ವನಿ
April 22, 2026
0

ಗದಗ :  ಬೇಸಿಗೆ ಕಾಲ ಆರಂಭವಾಗಿದ್ದು, ಬಿರು ಬಿಸಿಲಿನ ಬೇಗೆಗೆ ಜನರು ತತ್ತರಿಸಿದ್ದಾರೆ. ಜಿಲ್ಲೆಯಲ್ಲಂತೂ ದಿನದಿಂದ ದಿನಕ್ಕೆ ಸೂರ್ಯ ಕಾವೇರುತ್ತಿದ್ದಾನೆ. ಬಿಸಿಲಿನ ಹೊಡೆತ ತಾಳಲಾರದೆ ಜನರು ಹೈರಾಣಾಗಿದ್ದಾರೆ. https://youtu.be/dMLKOlJu3kY?si=xK3Kdu_8RkdSidp9...

Read moreDetails
ಫಾರಿನ್‌ ಸ್ಟೈಲ್‌ ಲವ್‌ & ಮರ್ಡರ್‌ : ಕಿರಾತಕಿ ಪ್ರೇಮಾಳಿಂದ ಕೊಲೆ ಸ್ಫೋಟಕ ರಹಸ್ಯ ಬಯಲು..

ಫಾರಿನ್‌ ಸ್ಟೈಲ್‌ ಲವ್‌ & ಮರ್ಡರ್‌ : ಕಿರಾತಕಿ ಪ್ರೇಮಾಳಿಂದ ಕೊಲೆ ಸ್ಫೋಟಕ ರಹಸ್ಯ ಬಯಲು..

April 22, 2026
ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

April 21, 2026
“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

April 21, 2026
ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿದ ಹೈಕೋರ್ಟ್‌ : SSLC ಹಿಂದಿ ಗ್ರೇಡ್‌ ವಿವಾದಕ್ಕೆ ನ್ಯಾಯಾಲಯ ಹೇಳಿದ್ದೇನು..?

ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿದ ಹೈಕೋರ್ಟ್‌ : SSLC ಹಿಂದಿ ಗ್ರೇಡ್‌ ವಿವಾದಕ್ಕೆ ನ್ಯಾಯಾಲಯ ಹೇಳಿದ್ದೇನು..?

April 21, 2026
Next Post
ಕೋವಿಡ್ ಲಸಿಕೆಗಳಿಗೆ 35 ಸಾವಿರ ಕೋಟಿ ಖರ್ಚು: ಹೆಸರು ಕೇಂದ್ರಕ್ಕೆ, ಹೊಣೆಗಾರಿಕೆ ಮಾತ್ರ ರಾಜ್ಯಕ್ಕೆ..!

ಕೋವಿಡ್ ಲಸಿಕೆಗಳಿಗೆ 35 ಸಾವಿರ ಕೋಟಿ ಖರ್ಚು: ಹೆಸರು ಕೇಂದ್ರಕ್ಕೆ, ಹೊಣೆಗಾರಿಕೆ ಮಾತ್ರ ರಾಜ್ಯಕ್ಕೆ..!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada