• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 21, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ರಸಗೊಬ್ಬರ ಬೆಲೆ ಏರಿಕೆ: ರೈತರಿಗೆ ಕರೋನಾ ಗಾಯದ ಮೇಲೆ ಬರೆ

Any Mind by Any Mind
May 13, 2021
in ಕರ್ನಾಟಕ
0
ರಸಗೊಬ್ಬರ ಬೆಲೆ ಏರಿಕೆ: ರೈತರಿಗೆ ಕರೋನಾ ಗಾಯದ ಮೇಲೆ ಬರೆ
Share on WhatsAppShare on FacebookShare on Telegram

ADVERTISEMENT

ರಸಗೊಬ್ಬರ ಬೆಲೆ ಏರಿಕೆ ಕುರಿತಂತೆ ದೇಶದ ರೈತರು ಕಂಗಾಲಾಗಿದ್ದು, ರಸಗೊಬ್ಬರಗಳ ಮೇಲಿನ ದರ ಏರಿಕೆಯನ್ನು ಖಂಡಿಸುತ್ತಿದ್ದಾರೆ. ಬೆಲೆ ಏರಿಕೆ ಕುರಿತಂತೆ ಖಂಡಿಸಿ ಪತ್ರಿಕಾ ಹೇಳಿಕೆ ನೀಡಿರುವ ರಾಜ್ಯ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕುರುಬೂರು ಶಾಂತಕುಮಾರ್ ಕರೋನಾ ಸಂಕಷ್ಟದ ನಡುವೆ ರಸಗೊಬ್ಬರಗಳ ಬೆಲೆ ಏರಿಸಿ ರೈತರಿಗೆ ಬರೆ ಎಳೆಯಲಾಗಿದೆ ಎಂದಿದ್ದಾರೆ. 

ರಸಗೊಬ್ಬರ ಬೆಲೆ ಇಳಿಕೆ ಮಾಡದಿದ್ದರೆ ಪ್ರತಿಭಟನೆ -ಕುರುಬೂರು ಶಾಂತಕುಮಾರ್ ಎಚ್ಚರಿಕೆ

ರಸಗೊಬ್ಬರ ಬೆಲೆ ಏರಿಕೆ ಕೇಂದ್ರ ರಾಜ್ಯ ಸರ್ಕಾರಗಳ  ಗೋಮುಖ ವ್ಯಾಘ್ರ ನಡವಳಿಕೆಯಾವುದೇ ಕಾರಣಕ್ಕೂ ರಸಗೊಬ್ಬರ ಬೆಲೆ ಏರಿಕೆ ಮಾಡುವುದಿಲ್ಲ. ಹಳೆಯ ದರದಲ್ಲಿಯೇ ರಸಗೊಬ್ಬರಗಳು ಮಾರಾಟವಾಗುತ್ತದೆ ರೈತರಿಗೆ ತೊಂದರೆಯಾಗುವುದಿಲ್ಲ ಎಂದು ಕೇಂದ್ರ ಸಚಿವ ಸದಾನಂದ ಗೌಡ  ಹಾಗೂ ರಾಜ್ಯ ಕೃಷಿ ಸಚಿವ  ಬಿ ಸಿ ಪಾಟೀಲ್ ಹೇಳುತ್ತಲೇ  ಬೆಲೆ ಏರಿಕೆ ಮಾಡಿ ರೈತರನ್ನು ಮೋಸಗೊಳಿಸಿದೆ ಎಂದು ಅವರು ಹೇಳಿದ್ದಾರೆ. 

ರಸಗೊಬ್ಬರ ಬೆಲೆ ಏರಿಕೆ: ರೈತರ ಕರೋನಾ ಗಾಯದ ಮೇಲೆ ಬರೆ- Kurubur Shanthakumar #Farmers #Fertilizer #pricehike

ರಸಗೊಬ್ಬರಗಳಿಗೆ ಹೊಸ ದರ ನಿಗದಿಯಾಗಿದೆ. ಡಿಎಪಿ ಪ್ರತಿ ಚೀಲಕ್ಕೆ 1200 ರಿಂದ ಏರಿಕೆ ಮಾಡಿ 1900 ಹೊಸ ದರ ನಿಗದಿ ಮಾಡಿ ರಸಗೊಬ್ಬರ ಕಂಪನಿಗಳು ಆದೇಶ ಹೊರಡಿಸಿವೆ.

ರಸಗೊಬ್ಬರಗಳ ಮೇಲೆ 45% ರಿಂದ 58% ಬೆಲೆ ಏರಿಕೆ: ಕಂಗಾಲಾದ ರೈತರು

ಕರೋನಾ ಲಾಕ್ ಡೌನ್ ಸಂಕಷ್ಟದಿಂದ ರೈತರು ಬೆಳೆದ ಉತ್ಪನ್ನಗಳ ಬೆಲೆ ಕುಸಿತ ಹಣ್ಣು-ತರಕಾರಿಗಳನ್ನು  ಬೀದಿ ಬೀದಿಯಲ್ಲಿ  ಸುರಿಯುತ್ತಿದ್ದಾರೆ. ಖರೀದಿದಾರರು ಇಲ್ಲದ ಕಾರಣ ಕೆಲವು ರೈತರು  ಕಟಾವು ಮಾಡದೆ  ಹೊಲದಲ್ಲಿಯೇ ಬಿಟ್ಟಿದ್ದಾರೆ ಸಾಲ ಮಾಡಿದ ರೈತ ಅಂಗೈಯಲ್ಲಿ ಆಕಾಶ ನೋಡುವಂತಾಗಿದೆ. ಇಂಥ ಸಂದರ್ಭದಲ್ಲಿ ರೈತರಿಗೆ ಬೇಕಾದ ರಸಗೊಬ್ಬರ ಬೆಲೆ ಏರಿಕೆ  ಮಾಡಲು ಕೇಂದ್ರ ಸರ್ಕಾರ ರಸಗೊಬ್ಬರ ಸಬ್ಸಿಡಿಯನ್ನು 1 ಲಕ್ಷ 30 ಸಾವಿರ ಕೋಟಿಯಿಂದ 54 ಸಾವಿರ ಕೋಟಿಗೆ ಇಳಿಕೆ ಮಾಡಿದ ಕಾರಣ ಬೆಲೆ ಏರಿಕೆಯಾಗಿದೆ. ರೈತರ ತಲೆ ಮೇಲೆ ಚಪ್ಪಡಿ ಎಳೆದಿದ್ದಾರೆ ಎಂದು ಅವರು ಹೇಳಿದ್ದಾರೆ. 

ರಸಗೊಬ್ಬರ ಸಬ್ಸಿಡಿ ಇಳಿಸಿರುವುದೇ ಬೆಲೆ ಏರಿಕೆಗೆ ಕಾರಣ; ಸಿದ್ದರಾಮಯ್ಯ

ಕೂಡಲೇ ಬೆಲೆ ಇಳಿಸಲು ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳಬೇಕು ಸಚಿವರುಗಳು ಸುಳ್ಳು ಸಂದೇಶಗಳನ್ನು ಮಾಧ್ಯಮಗಳ ಮೂಲಕ ಬಿತ್ತುವ ಮೂಲಕ ರೈತರನ್ನ ದಾರಿತಪ್ಪಿಸುತ್ತಿದ್ದಾರೆ. ರೈತರು ಎಚ್ಚೆತ್ತುಕೊಂಡು ಸುಳ್ಳು ಹೇಳುವ ಮಂತ್ರಿಗಳಿಗೆ ಮುಖಕ್ಕೆ ಮಂಗಳಾರತಿ ಮಾಡಿ ಸರಿಯಾದ ಪಾಠ ಕಲಿಸಬೇಕು. ಇನ್ನಾದರೂ ರೈತರು ಎಚ್ಚೆತ್ತುಕೊಂಡು ರಸಗೊಬ್ಬರ ಖರೀದಿ ನಿಲ್ಲಿಸಿ ತಮ್ಮ ತಮ್ಮ ಮನೆಗಳಿಗೆ ಬೇಕಾದ ಆಹಾರವನ್ನು ಮಾತ್ರ ಬೆಳೆದುಕೊಂಡರೆ ಆಗ ಸರ್ಕಾರವೇ ರೈತರ ಮನೆ ಬಾಗಿಲಿಗೆ ಬರುತ್ತದೆ ಎಂಬುದನ್ನು ಅರಿತುಕೊಳ್ಳಬೇಕು ಎಂದು ರಾಜ್ಯ ಅಧ್ಯಕ್ಷ ಕುರುಬೂರು ಶಾಂತಕುಮಾರ್ ತಿಳಿಸಿದ್ದಾರೆ.

ರಸಗೊಬ್ಬರ ಬೆಲೆ ಏರಿಕೆ: ಬಿಜೆಪಿ ಸರ್ಕಾರಗಳ ವಿರುದ್ಧ ಹೆಚ್ ಡಿ ಕುಮಾರಸ್ವಾಮಿ ಆಕ್ರೋಶ
Previous Post

ಕೋವಿಡ್-19 ಮಹಾವಿಪತ್ತಿನ ಸಂದರ್ಭದಲ್ಲಿ ನಮ್ಮ MLA/MPಗಳು ಎಲ್ಲಿ ಹೋಗಿದ್ದಾರೆ?

Next Post

ರಾಜ್ಯದಿಂದ ಆಯ್ಕೆಯಾಗಿರುವ 25 ಸಂಸದರಲ್ಲಿ ಯಾರಾದರೂ ಒಬ್ಬರು ರಾಜ್ಯದ ಪರವಾಗಿ ಧ್ವನಿ ಎತ್ತಿದ್ದಾರಾ? – ಡಿ.ಕೆ. ಶಿವಕುಮಾರ್

Related Posts

ಇದೇ ಲಾಸ್ಟ್‌ ಇನ್ಮುಂದೆ ಜಿಬಿಎ ಎಲೆಕ್ಷನ್ ಗಡುವು ವಿಸ್ತರಿಸಲ್ಲಾ : ಸರ್ಕಾರಕ್ಕೆ ಸುಪ್ರೀಂ ಖಡಕ್‌ ವಾರ್ನ್..!‌
Top Story

ಇದೇ ಲಾಸ್ಟ್‌ ಇನ್ಮುಂದೆ ಜಿಬಿಎ ಎಲೆಕ್ಷನ್ ಗಡುವು ವಿಸ್ತರಿಸಲ್ಲಾ : ಸರ್ಕಾರಕ್ಕೆ ಸುಪ್ರೀಂ ಖಡಕ್‌ ವಾರ್ನ್..!‌

by ಪ್ರತಿಧ್ವನಿ
May 20, 2026
0

ಬೆಂಗಳೂರು : ಕರ್ನಾಟಕ ಸರ್ಕಾರ ಹಾಗೂ ರಾಜ್ಯ ಚುನಾವಣಾ ಆಯೋಗಕ್ಕೆ (SEC) ಬೆಂಗಳೂರಿನ ಐದು ನಗರ ಪಾಲಿಕೆಗಳ ಚುನಾವಣೆಯನ್ನು ಪೂರ್ಣಗೊಳಿಸಲು ಅಂತಿಮ ಅವಕಾಶವಾಗಿ ಆಗಸ್ಟ್ 31ರವರೆಗೆ ಹೆಚ್ಚುವರಿ ಕಾಲಾವಕಾಶ...

Read moreDetails
ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

May 20, 2026
ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

May 20, 2026
ಕೈ ಕೊಟ್ಟ ಹುಡುಗಿ : ಹೈಟೆನ್ಷನ್‌ ಕಂಬ ಹತ್ತಿ ಪ್ರಿಯತಮನ ರಂಪಾಟ..!

ಕೈ ಕೊಟ್ಟ ಹುಡುಗಿ : ಹೈಟೆನ್ಷನ್‌ ಕಂಬ ಹತ್ತಿ ಪ್ರಿಯತಮನ ರಂಪಾಟ..!

May 20, 2026
ಕೊಳಚೆ ನಿರ್ಮೂಲನಾ ಮಂಡಳಿ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ: ಅಧಿಕಾರಿಗಳಲ್ಲಿ ಆತಂಕ

ಕೊಳಚೆ ನಿರ್ಮೂಲನಾ ಮಂಡಳಿ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ: ಅಧಿಕಾರಿಗಳಲ್ಲಿ ಆತಂಕ

May 20, 2026
Next Post
ರಾಜ್ಯದಿಂದ ಆಯ್ಕೆಯಾಗಿರುವ 25 ಸಂಸದರಲ್ಲಿ ಯಾರಾದರೂ ಒಬ್ಬರು ರಾಜ್ಯದ ಪರವಾಗಿ ಧ್ವನಿ ಎತ್ತಿದ್ದಾರಾ? – ಡಿ.ಕೆ. ಶಿವಕುಮಾರ್

ರಾಜ್ಯದಿಂದ ಆಯ್ಕೆಯಾಗಿರುವ 25 ಸಂಸದರಲ್ಲಿ ಯಾರಾದರೂ ಒಬ್ಬರು ರಾಜ್ಯದ ಪರವಾಗಿ ಧ್ವನಿ ಎತ್ತಿದ್ದಾರಾ? - ಡಿ.ಕೆ. ಶಿವಕುಮಾರ್

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada