• Home
  • About Us
  • ಕರ್ನಾಟಕ
Wednesday, January 14, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಚಾಮರಾಜನಗರ ಆಕ್ಸಿಜನ್‌ ದುರಂತ: ದಾಖಲಾತಿಗಳನ್ನು ತಿರುಚಲಾಗಿದೆಯೇ..?

Any Mind by Any Mind
May 14, 2021
in ಕರ್ನಾಟಕ
0
ಚಾಮರಾಜನಗರ ಆಕ್ಸಿಜನ್‌ ದುರಂತ: ದಾಖಲಾತಿಗಳನ್ನು ತಿರುಚಲಾಗಿದೆಯೇ..?
Share on WhatsAppShare on FacebookShare on Telegram

ಕಳೆದ ಮೇ 2 ರಂದು  ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ  24 ಜನ ಚಿಕಿತ್ಸೆ ಪಡೆಯುತಿದ್ದ ರೋಗಿಗಳು  ಆಕ್ಸಿಜನ್ಕೊರತೆಯಿಂದ ಮೃತಪಟ್ಟಿದ್ದು ಇಡೀ ದೇಶಾದ್ಯಂತ ದೊಡ್ಡ ಮಟ್ಟದ ಸುದ್ದಿ ಆಗಿತ್ತು. ಈ ಕುರಿತು ನ್ಯಾಯಾಂಗ ತನಿಖೆ ಕೋರಿ ರಾಜ್ಯ ಹೈ ಕೋರ್ಟಿಗೆ ಸಲ್ಲಿಸಿದ  ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಪರಿಗಣಿಸಿ ಕೋರ್ಟು ಮೂವರು ಸದಸ್ಯರ ಸಮಿತಿ ನೇಮಿಸಿ ಮೂರು ದಿನಗಳಲ್ಲಿ ವರದಿ ಸಲ್ಲಿಸುವಂತೆ ಸೂಚಿಸಿತ್ತು. ಅದರಂತೆ ಆಗಮಿಸಿ ತನಿಖೆ ನಡೆಸಿದ್ದ ನ್ಯಾಯಮೂರ್ತಿ ಏ ಎನ್ಗೋಪಾಲ ಗೌಡ ನೇತೃತ್ವದ ಸಮಿತಿಯು  ದುರಂತಕ್ಕೆ   ಆಕ್ಸಿಜನ್ ಕೊರತೆಯೇ ಕಾರಣ ಎಂದು  ಸ್ಪಷ್ಟಪಡಿಸಿ  ವರದಿಯನ್ನೂ ಹೈ ಕೋರ್ಟಿಗೆ ಸಲ್ಲಿಸಿದೆ. ಈ ವರದಿಯು  ರಾಜ್ಯ ಆರೋಗ್ಯ ಸಚಿವ ಡಾ ಸುಧಾಕರ್  ಮಾಧ್ಯಮಗಳಿಗೆ ನೀಡಿದ್ದ ಹೇಳಿಕೆಯು ಸುಳ್ಳು ಎಂದು ಸಾಬೀತುಪಡಿಸಿದೆ. ದುರಂತ ನಡೆದ ಮಾರನೇ ದಿನ ಸಚಿವರು ಆಸ್ಪತ್ರೆಗೆ ಭೇಟಿ ನೀಡಿ ಕೇವಲ ಮೂರು ರೋಗಿಗಳು ಮಾತ್ರ ಆಮ್ಲಜನಕ ಕೊರತೆಯಿಂದ ಮೃತಪಟ್ಟಿದ್ದಾರೆ ಎಂದು ಹೇಳಿಕೆ ನೀಡಿ ಡ್ಯಾಮೇಜ್ ಕಂಟ್ರೋಲ್‌ಗೆ ಮುಂದಾಗಿದ್ದರು. ಈಗ ವರದಿಯಿಂದ ರಾಜ್ಯ ಸರ್ಕಾರ ಮುಖಭಂಗವನ್ನು ಅನುಭವಿಸಿದೆ. 

ADVERTISEMENT
ಚಾಮರಾಜನಗರ ಆಕ್ಸಿಜನ್‌ ದುರಂತ- ಸಚಿವ ಸುಧಾಕರ್‌ ಹೇಳಿರುವುದು ಶುದ್ಧ ಸುಳ್ಳು -ಸಿದ್ದರಾಮಯ್ಯ

ಸದರಿ ವರದಿಯಲ್ಲಿ ಸಮಿತಿಯು  ದುರಂತಕ್ಕೆ ಸಂಬಂಧಿಸಿದ ಕೆಲ ದಾಖಲೆಗಳನ್ನು ತಿರುಚಲಾಗಿದೆ ಎಂದು     ಸಂಶಯ ವ್ಯಕ್ತಪಡಿಸಿದೆ.  ಅಲ್ಲದೆ ಈ  ದುರಂತಕ್ಕೆ ಸಂಬಂಧಿಸಿದ ಎಲ್ಲಾ ದಾಖಲಾತಿಗಳನ್ನು  ವಶಕ್ಕೆ ಪಡೆದುಕೊಂಡು   ಸಂರಕ್ಷಿಸುವಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಹೈಕೋರ್ಟ್ ನಿರ್ದೇಶನ ನೀಡಿದೆ ಎಂದು ತಿಳಿದು ಬಂದಿದೆ.  ಈಗ ವರದಿಯ  ಅಂಶಗಳು ಬಹಿರಂಗಗೊಂಡಿದ್ದು  ಸಮಿತಿಯು ಹೈ ಕೋರ್ಟೊಗೆ ಸಲ್ಲಿಸಿರುವ ವರದಿಯ ಪ್ರಕಾರ ದ್ರವೀಕೃತ ವೈದ್ಯಕೀಯ ಆಮ್ಲಜನಕ (ಎಲ್ಎಂಒ) ನಿರ್ವಹಣೆಯ ರಿಜಿಸ್ಟರ್ ಪುಸ್ತಕ ಗಮನಿಸಿದರೆ ದಾಖಲೆ ತಿರುಚಿರುವುದು ಗಮನಕ್ಕೆ ಬರುತ್ತಿದೆ ಎಂದು ಹೇಳಿದೆ.  6 ಕಿಲೋ ಲೀಟರ್ ಸಾಮರ್ಥ್ಯದ ಎಲ್ಎಂಒ ಟ್ಯಾಂಕ್ ಅನ್ನು ಕೆಲ ದಿನಗಳ ಹಿಂದೆ ಆಸ್ಪತ್ರೆ ಆವರಣದಲ್ಲಿ ಅಳವಡಿಸಲಾಗಿದೆ. ಆದರೂ, ಈ ಟ್ಯಾಂಕ್ಗೆ ಮೊದಲ ಬಾರಿಗೆ 2021ರ ಏಪ್ರಿಲ್ 29ರಂದು ಎಲ್ಎಂಒ ತುಂಬಿಸಲಾಗಿದೆ. ಬಳಿಕ ಮೇ 1ರಂದು ಎರಡನೇ ಬಾರಿ ತುಂಬಿಸಲಾಗಿದೆ.

ಮೈಸೂರಿನಲ್ಲಿ ಜನ ಪ್ರತಿನಿಧಿಗಳ ನಡುವೆಯೇ ತಿಕ್ಕಾಟಕ್ಕೆ ಕಾರಣವಾದ ಆಕ್ಸಿಜನ್ ಮರುಭರ್ತಿ ಕಾರ್ಯ

ಆದರೆ, 30 ಗಂಟೆಗಳಿಗಿಂತ ಕಡಿಮೆ ಅವಧಿಯಲ್ಲಿ ಅದು ಖಾಲಿಯಾಗಿದೆ ಎಂದು ದಾಖಲಿಸಲಾಗಿದೆ. ಏ.29ರಿಂದ ಎಲ್ಎಂಒ ನಿರ್ವಹಿಸುತ್ತಿರುವ ರಿಜಿಸ್ಟರ್ ಪುಸ್ತಕ ಮತ್ತು ಬಯೋ ಮೆಡಿಕಲ್ ಎಂಜಿನಿಯರ್ ನಿರ್ವಹಿಸುತ್ತಿರುವ ಆಮ್ಲಜನಕ ಬಳಕೆ ರಿಜಿಸ್ಟರ್ ಪುಸ್ತಕಗಳನ್ನು ಗಮನಿಸಿದರೆ ದಾಖಲೆಗಳನ್ನು ನಾಶ ಮಾಡಿರುವುದು ಗಮನಕ್ಕೆ ಬರುತ್ತದೆ. ಎಲ್ಎಂಒ ರಿಜಿಸ್ಟರ್ ಪುಸ್ತಕದಲ್ಲಿನ ಪುಟ ಸಂಖ್ಯೆ 3 ಮತ್ತು 4 ಕಾಣೆಯಾಗಿದೆ ಎಂದು ವರದಿ ಹೇಳಿದೆ. ‘ಮೈಸೂರು ಜಿಲ್ಲಾಸ್ಪತ್ರೆಯಲ್ಲಿ 40 ಸಿಲಿಂಡರ್ ಲಭ್ಯವಿದ್ದರೂ, ಮೇ 3ರ ಬೆಳಿಗ್ಗೆ 6 ಗಂಟೆಗಷ್ಟೇ ಅವು ಚಾಮರಾಜನಗರ ಜಿಲ್ಲಾಸ್ಪತ್ರೆಗೆ ತಲುಪಿವೆ. ಸಿಸಿಟಿವಿ ದೃಶ್ಯಗಳು ಮತ್ತು ಹಾರ್ಡ್ ಡಿಸ್ಕ್ಗಳನ್ನು ಸಂರಕ್ಷಣೆ ಮಾಡಬೇಕು ಎಂದು ಮುಖ್ಯ ಕಾರ್ಯದರ್ಶಿಗೆ ಸಮಿತಿ ಶಿಫಾರಸು ಮಾಡಿದೆ. ದುರಂತಕ್ಕೆ ಸಂಬಂಧಿಸಿದ ಎಲ್ಲಾ ದಾಖಲೆಗಳನ್ನು ವಶಕ್ಕೆ ಪಡೆದು ಸಂರಕ್ಷಣೆ ಮಾಡಬೇಕು ಎಂದು ಮುಖ್ಯ ನ್ಯಾಯಮುರ್ತಿ ಎ.ಎಸ್. ಓಕಾ ಮತ್ತು ನ್ಯಾಯಮೂರ್ತಿ ಅರವಿಂದಕುಮಾರ್ ಅವರನ್ನು ಒಳಗೊಂಡ ಪೀಠ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ನಿರ್ದೇಶನ ನೀಡಿದೆ.

‘ಮೃತಪಟ್ಟವರಿಗೆ ಸಂಬಂಧಿಸಿದ ಕೇಸ್ ಶೀಟ್ಗಳಲ್ಲೂ ವ್ಯತ್ಯಾಸ ಆಗಿರುವುದು ಗಮನಕ್ಕೆ ಬಂದಿದೆ. 28 ಕೇಸ್ ಶೀಟ್ಗಳನ್ನು ಒಬ್ಬ ವೈದ್ಯರೇ ದಾಖಲಿಸಿದ್ದರೆ, ಒಂದು ಕೇಸ್ಶೀಟ್ ಅನ್ನು ಮಾತ್ರ ಬೇರೆ ವೈದ್ಯರು ನಮೂದಿಸಿದ್ದಾರೆ. ಸಾವಿನ ಸಮಯ ಮತ್ತು ದಿನಾಂಕ ಸೇರಿ ಕೆಲ ವಾಸ್ತವ ವಿವರಗಳನ್ನು ಉಲ್ಲೇಖಿಸಿಲ್ಲ. ಮುದ್ರಿತ ಕೆಲ ಕಾಲಂಗಳು ಖಾಲಿ ಇದ್ದರೂ ವೈದ್ಯಾಧಿಕಾರಿ ಸಹಿ ಒಳಗೊಂಡಿದೆ’ ಎಂದು ವರದಿ ತಿಳಿಸಿದೆ.  ಮೃತರ ಕುಟುಂಬಗಳಿಗೆ ಪರಿಹಾರ ನೀಡುವ ಬಗ್ಗೆ ಮಂದಿನ ವಿಚಾರಣೆಯೊಳಗೆ ನಿರ್ಧಾರ ತೆಗೆದುಕೊಳ್ಳುವಂತೆ ರಾಜ್ಯ ಸರ್ಕಾರಕ್ಕೆ ಪೀಠ ನಿರ್ದೇಶನ ನೀಡಿತು. ಸರ್ಕಾರದ ನಿರ್ಲಕ್ಷ್ಯದಿಂದ ಸಂಭವಿಸಿದ ಸಾವುಗಳಿಗೆ ಪರಿಹಾರ ನೀಡಬೇಕು ಎಂಬ ಸುಪ್ರೀಂ ಕೋರ್ಟ್ ಆದೇಶವನ್ನು  ನೆನಪಿಸಿದ ಪೀಠ, ‘ಸಂವಿಧಾನದ ಪರಿಚ್ಛೇದ 21ರ ಅಡಿಯಲ್ಲಿನ ಜೀವಿಸುವ ಮೂಲಭೂತ ಹಕ್ಕಿನ ಉಲ್ಲಂಘನೆ ಆಗಿರುವ ಕಾರಣ ಪರಿಹಾರ ನೀಡಬೇಕು’ ಎಂದು  ಹೇಳಿದೆ.

ಸಾಂಸ್ಕೃತಿಕ ನಗರಿಯಲ್ಲಿಯೂ ಪ್ರಾರಂಭವಾಗಿದೆ ಬೆಡ್‌ಗಳಿಗಾಗಿ ಹಾಹಾಕಾರ

 ಇದಲ್ಲದೆ  ಆಮ್ಲಜನಕ ದುರಂತ ಕುರಿತು ಸತ್ಯ ಶೋಧನೆಗೆ ಹೈಕೋರ್ಟ್ ನೇಮಿಸಿದ್ದ ಮೂವರು ಸದಸ್ಯರ ಸಮಿತಿಯು ನೀಡಿರುವ ವರದಿಯಲ್ಲಿ ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರಿಗೆ ಕ್ಲೀನ್ ಚೀಟ್ ನೀಡಿರುವ ವಿಷಯವೂ ಚರ್ಚೆಗೆ ಗ್ರಾಸವಾಗಿದೆ.  ಹೈ ಕೋರ್ಟ್‌ ನೇಮಿಸಿರುವ ಸತ್ಯ ಶೋಧನಾ ಸಮಿತಿಯಿಂದ ಪೂರ್ಣಪ್ರಮಾಣದ ಸತ್ಯಾಂಶ ಹೊರಬಂದಿಲ್ಲ.   ಮೈಸೂರು ಜಿಲ್ಲಾಧಿಕಾರಿಗಳು  ಆಕ್ಸಿಜನ್‌ ಮರುಪೂರಣ ಘಟಕಗಳಿಗೆ ಮೌಖಿಕ ಆದೇಶ ನೀಡಿ ಹೊರ ಜಿಲ್ಲೆಗಳಿಗೆ ಸರಬರಾಜಾಗುವ  ಆಕ್ಸಿಜನ್ ಗೆ ತಡೆ ಒಡ್ಡಿರುವುದು ಜಗಜ್ಜಾಹೀರೇ ಆಗಿತ್ತು. ಸ್ವತಃ ಚಾಮರಾಜನಗರ ಜಿಲ್ಲಾಧಿಕಾರಿ ಡಾ ಎಂ ಆರ್‌ ರವಿ ಅವರು ಈ ಆರೋಪವನ್ನು ಮಾಡಿದ್ದರು. ಆದರೆ ಸಮಿತಿಯು ಅವರ ಪಾತ್ರ ಇದರಲ್ಲಿ ಇಲ್ಲ ಮತ್ತು ಯಾವುದೇ ಸಾಕ್ಷ್ಯಾಧಾರ ಸಿಕ್ಕಿಲ್ಲ ಎಂಬ ನೆಪವೊಡ್ಡಿ ಅವರಿಗೆ ಕ್ಲೀನ್‌ಚೀಟ್‌ ನೀಡಿರುವುದೂ ಅನುಮಾನಕ್ಕೆ ಕಾರಣವಾಗಿದೆ. 

ಈ ಕುರಿತು ಪ್ರತಿಕ್ರಿಯಿಸಿದ ಕನ್ನಡ ಚಳವಳಿಗಾರ ಶಾ ಮುರಳಿ, ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರಿಗೆ ಪ್ರಭಾವಿ ರಾಜಕಾರಣಿಗಳ ಬೆಂಬಲ ಹಾಗೂ ಒಡನಾಟ ಇರುವುದರಿಂದ ಅವರ ಹೆಸರನ್ನು ಕೈಬಿಡಲಾಗಿದೆ. ಹೈಕೋರ್ಟ್ನ ಹಾಲಿ ನ್ಯಾಯಮೂರ್ತಿಗಳಿಂದ ತನಿಖೆ ಮಾಡಿಸಿದ್ದರೆ ಸತ್ಯಾಂಶ ಹೊರಬರುತ್ತಿತ್ತು. ನಿವೃತ್ತ ನ್ಯಾಯಮೂರ್ತಿಗಳಿಗೆ ಒತ್ತಡ ಹಾಕುವ ಸಾಧ್ಯತೆಗಳಿರುತ್ತವೆ ಎಂದು ಅವರು ಹೇಳಿದರು.   ಮೌಖಿಕ ಆದೇಶದ ಮೂಲಕ ಜಿಲ್ಲೆಗೆ ಬರಬೇಕಿದ್ದ ಆಕ್ಸಿಜನ್‌ ತಡೆಹಿಡಿದ ಮೈಸೂರಿನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರದು ಶೇ 25ರಷ್ಟು ತಪ್ಪಿದೆ ಹಾಗಾಗಿ ಅವರನ್ನು ತಪ್ಪಿತಸ್ಥರೆಂದು ಪರಿಗಣಿಸಿ ಕಡ್ಡಾಯ ರಜೆ ಮೇಲೆ ಕಳುಹಿಸಬೇಕು. ಅವರ ಮೊಬೈಲ್‌ಹಾಗೂ  ದೂರವಾಣಿಗಳ ಕರೆಗಳ ವಿವರವನ್ನು ಕಲೆಹಾಕಿ ಕೂಲಂಕಷವಾಗಿ ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳಬೇಕು. ಮುಕ್ತವಾದ ತನಿಖೆ ನಡೆದು ಸತ್ಯಾಂಶ ಹೊರಬರಲಿ ಎಂದು   ಒತ್ತಾಯಿಸಿದರು. ಇದರ ಜತೆಗೇ  ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ  ಸುರೇಶ್‌ಕುಮಾರ್‌ ಮತ್ತು ಆರೋಗ್ಯ ಸಚಿವ  ಡಾ ಸುಧಾಕರ್‌ಅವರ  ಪಾತ್ರದ ಕುರಿತೂ ತನಿಖೆ ಆಗಬೇಕಿದೆ ಎಂದು ಅವರು ಹೇಳಿದರು.

Previous Post

ಹಿರಿಯ ಪತ್ರಕರ್ತ, ಮುಖ್ಯಮಂತ್ರಿಗಳ ಮಾಜಿ ಮಾಧ್ಯಮ ಸಲಹೆಗಾರ ಮಹದೇವಪ್ರಕಾಶ್‌ರಿಗೆ ಶೃದ್ಧಾಂಜಲಿ

Next Post

ಗರ್ಭಿಣಿ ಸ್ತ್ರೀಯರು ಚಳಿಗಾಲದ ಅಲರ್ಜಿಗಳಿಂದ ರಕ್ಷಿಸಿಕೊಳ್ಳಲು ಸಲಹೆಗಳು

Related Posts

Top Story

ಸಿದ್ದು, ಬಿಎಸ್ವೈ ಅವರಂತೆ ಕೆಲಸಮಾಡಿ ಜನಪ್ರಿಯ ನಾಯಕಿಯಾಗೋ ಹುಚ್ಚಿದೆ : ಲಕ್ಷ್ಮಿ ಹೆಬ್ಬಾಳ್ಕರ್ ಭಾವನಾತ್ಮಕ ಮಾತು..

by ಪ್ರತಿಧ್ವನಿ
January 13, 2026
0

ಬೆಂಗಳೂರು: ನಾನು ಎಂಎಲ್ಎ ಆದ ಮೇಲೆ ಬೆಳಗಾವಿ ಗ್ರಾಮಾಂತರ ಕ್ಷೇತ್ರದಲ್ಲಿ ಯಾವ ಜಾತಿ ಗಲಭೆ, ಜಾತಿ ರಾಜಕಾರಣ, ಪೊಲೀಸರ ಮೇಲೆ ಒತ್ತಡ, ಒತ್ತಾಯ ಮಾಡಿಲ್ಲ.ಕುವೆಂಪುರವರು ಹೇಳಿದಂತೆ ನಮ್ಮ...

Read moreDetails

ಇತಿಹಾಸ ಸೃಷ್ಟಿಸಿದ ಕುಣಿಗಲ್ ಉತ್ಸವ ! 35 ಸಾವಿರ ಜನ ಜನರ ಉಪಸ್ಥಿತಿಯಲ್ಲಿ ನಡೆದ ಬೃಹತ್ ತಾರಾಮೇಳ !

January 13, 2026
ಅಕ್ರಮ ತೆರವಿನ ಹೆಸರಿನಲ್ಲಿ ಬಡವರ ಬದುಕು ಧ್ವಂಸ!: ರಾ ಚಿಂತನ್..!!

ಅಕ್ರಮ ತೆರವಿನ ಹೆಸರಿನಲ್ಲಿ ಬಡವರ ಬದುಕು ಧ್ವಂಸ!: ರಾ ಚಿಂತನ್..!!

January 13, 2026
ಮಹಾತ್ಮ ಗಾಂಧಿ ಹೆಸರು ಎಂದರೆ ಬಿಜೆಪಿಗೆ ಅಲರ್ಜಿ: ಸಿ.ಎಂ ಸಿದ್ದರಾಮಯ್ಯ

ಮಹಾತ್ಮ ಗಾಂಧಿ ಹೆಸರು ಎಂದರೆ ಬಿಜೆಪಿಗೆ ಅಲರ್ಜಿ: ಸಿ.ಎಂ ಸಿದ್ದರಾಮಯ್ಯ

January 13, 2026
ಪೊಲೀಸರ ಮೇಲಿನ ಕೊಲೆ ಪ್ರಕರಣಕ್ಕೆ ಟ್ವಿಸ್ಟ್

ಪೊಲೀಸರ ಮೇಲಿನ ಕೊಲೆ ಪ್ರಕರಣಕ್ಕೆ ಟ್ವಿಸ್ಟ್

January 13, 2026
Next Post
ಗರ್ಭಿಣಿ ಸ್ತ್ರೀಯರು ಚಳಿಗಾಲದ ಅಲರ್ಜಿಗಳಿಂದ ರಕ್ಷಿಸಿಕೊಳ್ಳಲು ಸಲಹೆಗಳು

ಗರ್ಭಿಣಿ ಸ್ತ್ರೀಯರು ಚಳಿಗಾಲದ ಅಲರ್ಜಿಗಳಿಂದ ರಕ್ಷಿಸಿಕೊಳ್ಳಲು ಸಲಹೆಗಳು

Please login to join discussion

Recent News

Top Story

ಸಿದ್ದು, ಬಿಎಸ್ವೈ ಅವರಂತೆ ಕೆಲಸಮಾಡಿ ಜನಪ್ರಿಯ ನಾಯಕಿಯಾಗೋ ಹುಚ್ಚಿದೆ : ಲಕ್ಷ್ಮಿ ಹೆಬ್ಬಾಳ್ಕರ್ ಭಾವನಾತ್ಮಕ ಮಾತು..

by ಪ್ರತಿಧ್ವನಿ
January 13, 2026
Top Story

ಇತಿಹಾಸ ಸೃಷ್ಟಿಸಿದ ಕುಣಿಗಲ್ ಉತ್ಸವ ! 35 ಸಾವಿರ ಜನ ಜನರ ಉಪಸ್ಥಿತಿಯಲ್ಲಿ ನಡೆದ ಬೃಹತ್ ತಾರಾಮೇಳ !

by ಪ್ರತಿಧ್ವನಿ
January 13, 2026
ಅಕ್ರಮ ತೆರವಿನ ಹೆಸರಿನಲ್ಲಿ ಬಡವರ ಬದುಕು ಧ್ವಂಸ!: ರಾ ಚಿಂತನ್..!!
Top Story

ಅಕ್ರಮ ತೆರವಿನ ಹೆಸರಿನಲ್ಲಿ ಬಡವರ ಬದುಕು ಧ್ವಂಸ!: ರಾ ಚಿಂತನ್..!!

by ಪ್ರತಿಧ್ವನಿ
January 13, 2026
ಮಹಾತ್ಮ ಗಾಂಧಿ ಹೆಸರು ಎಂದರೆ ಬಿಜೆಪಿಗೆ ಅಲರ್ಜಿ: ಸಿ.ಎಂ ಸಿದ್ದರಾಮಯ್ಯ
Top Story

ಮಹಾತ್ಮ ಗಾಂಧಿ ಹೆಸರು ಎಂದರೆ ಬಿಜೆಪಿಗೆ ಅಲರ್ಜಿ: ಸಿ.ಎಂ ಸಿದ್ದರಾಮಯ್ಯ

by ಪ್ರತಿಧ್ವನಿ
January 13, 2026
ರಾಹುಲ್ ಗಾಂಧಿ ಜೊತೆಗೆ ರಾಜಕಾರಣ ಚರ್ಚೆ ಮಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ
Top Story

ರಾಹುಲ್ ಗಾಂಧಿ ಜೊತೆಗೆ ರಾಜಕಾರಣ ಚರ್ಚೆ ಮಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
January 13, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಸಿದ್ದು, ಬಿಎಸ್ವೈ ಅವರಂತೆ ಕೆಲಸಮಾಡಿ ಜನಪ್ರಿಯ ನಾಯಕಿಯಾಗೋ ಹುಚ್ಚಿದೆ : ಲಕ್ಷ್ಮಿ ಹೆಬ್ಬಾಳ್ಕರ್ ಭಾವನಾತ್ಮಕ ಮಾತು..

January 13, 2026

ಇತಿಹಾಸ ಸೃಷ್ಟಿಸಿದ ಕುಣಿಗಲ್ ಉತ್ಸವ ! 35 ಸಾವಿರ ಜನ ಜನರ ಉಪಸ್ಥಿತಿಯಲ್ಲಿ ನಡೆದ ಬೃಹತ್ ತಾರಾಮೇಳ !

January 13, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada