• Home
  • About Us
  • ಕರ್ನಾಟಕ
Saturday, July 5, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಕೋವಿಡ್ ಬಯಲು ಮಾಡುತ್ತಿರುವ ಗುಜರಾತ್ ಮಾದರಿಯ ಅಸಲಿ ಮುಖ!

ಫೈಝ್ by ಫೈಝ್
May 15, 2021
in ದೇಶ
0
ಕೋವಿಡ್ ಬಯಲು ಮಾಡುತ್ತಿರುವ ಗುಜರಾತ್ ಮಾದರಿಯ ಅಸಲಿ ಮುಖ!
Share on WhatsAppShare on FacebookShare on Telegram

ಕೋವಿಡ್‌ ಸೋಂಕು ಭಾರತಕ್ಕೆ ಕಾಲಿಟ್ಟಂದಿನಿಂದ ಒಕ್ಕೂಟ ಮತ್ತು ರಾಜ್ಯ ಸರ್ಕಾರಗಳ ಬೇಜವಾಬ್ದಾರಿ ಮತ್ತು ಯಡವಟ್ಟುಗಳು ಬಹಿರಂಗಗೊಳ್ಳುತ್ತಿವೆ. ಕೋವಿಡ್‌ ಸಾಂಕ್ರಾಮಿಕ ರೋಗದ ವಿರುದ್ಧದ ಹೋರಾಟಕ್ಕೆಂದು ಸ್ಥಾಪನೆಯಾದ ಪಿಎಂಕೇರ್ಸ್‌ ನಿಧಿಯಿಂದ ಹಿಡಿದು ಕೋವಿಡ್‌ ಸಂಬಂಧಿತ ಸಾವುಗಳವರೆಗೆ ಸರ್ಕಾರ ನಾಗರಿಕರಿಂದ ವಾಸ್ತವಾಂಶಗಳನ್ನು ಮುಚ್ಚಿಡುತ್ತಿದೆ.

ADVERTISEMENT

ಕೋವಿಡ್‌ ಎರಡನೇ ಅಲೆಯ ತೀವೃತೆ ಆರಂಭವಾದಗಿನಿಂದ ಸ್ಮಶಾನಗಳಲ್ಲಿ ಸರತಿ ಸಾಲಿನಲ್ಲಿ ತಮ್ಮ ಸರದಿಗಾಗಿ ಕಾಯುತ್ತಿರುವ ಮೃತದೇಹಗಳಿಗೂ ಸರ್ಕಾರ ನೀಡುತ್ತಿರುವ ಕೋವಿಡ್‌ ಸಾವು ಪಟ್ಟಿಗಳಿಗೂ ಅಜಗಜಾಂತರ ವ್ಯತ್ಯಾಸವಿರುವುದನ್ನು ಅಂತರಾಷ್ಟ್ರೀಯ ಮಾಧ್ಯಮಗಳೇ ವರದಿ ಮಾಡಿದ್ದವು. ಇದೀಗ, ಪ್ರಧಾನಿ ಮೋದಿ ತವರು ರಾಜ್ಯ ಗುಜರಾತ್‌ ಕೋವಿಡ್‌ ಮರಣ ಪ್ರಮಾಣಗಳ ಅಂಕಿ ಅಂಶದಲ್ಲಿ ʼಚೆಂಗಾಸಿʼ ಮಾಡಿರುವುದು ಬಯಲಾಗಿದೆ.

ಗುಜರಾತ್‌ ಸರ್ಕಾರ 2021ರ ಮಾರ್ಚ್‌ 1 ರಿಂದ ಮೇ 10 ರ ಅವಧಿಯಲ್ಲಿ ಸುಮಾರು 1.23 ಲಕ್ಷ ಮರಣ ಪ್ರಮಾಣ ಪತ್ರಗಳನ್ನು ವಿತರಿಸಿದೆ. ಅದರಲ್ಲಿ, ಕೋವಿಡ್‌ ಮರಣಗಳೆಂದು ಕೇವಲ 4,218 ಸಾವುಗಳನ್ನು ನಮೂದಿಸಿದೆ. ಗುಜರಾತಿ ಪತ್ರಿಕೆ ʼದಿವ್ಯ ಭಾಸ್ಕರ್‌ʼ ವರದಿ ಪ್ರಕಾರ ಕಳೆದ ವರ್ಷ ಅಂದರೆ, 2020 ರ ಇದೇ ಅವಧಿಯಲ್ಲಿ ಸರ್ಕಾರ ಸುಮಾರು 58 ಸಾವಿರದಷ್ಟು ಮರಣ ಪ್ರಮಾಣ ಪತ್ರಗಳನ್ನು ವಿತರಿಸಿದೆ. ಅಂದರೆ, ಒಂದೇ ವರ್ಷದ ಅಂತರದಲ್ಲಿ ಬರೋಬ್ಬರಿ ದುಪ್ಪಟ್ಟು ಮರಣಗಳು ಸಂಭವಿಸಿವೆ. ಅದಾಗ್ಯೂ ಕೋವಿಡ್‌ ಸಾವುಗಳೆಂದು ಕೇವಲ 4 ಸಾವಿರ ಚಿಲ್ಲರೆ ಸಾವುಗಳನ್ನು ಪರಿಗಣಿಸಿರುವುದು ಸರ್ಕಾರ ಕೋವಿಡ್‌ ಅಂಕಿಅಂಶದಲ್ಲಿ ನಡೆಸುತ್ತಿರುವ ಮುಚ್ಚುಮರೆಯನ್ನು ಬಯಲಿಗೆಳೆದಿವೆ.

Gujarat issued 1.23 lakh death certificates in March 1-May 10 period this year in comparison to 58 thousand issued in the same period last year: Divya Bhaskar

This means Gujarat issued 65,085 more death certificates in March 1-May 10 period this year.

65,085.

(1/n) pic.twitter.com/9a6QZPIKHF

— Deepak Patel (@deepakpatel_91) May 14, 2021

ಕಳೆದ ವರ್ಷಕ್ಕಿಂತ ಅಂಕಿಅಂಶಗಳು ದ್ವಿಗುಣಗೊಂಡಿದ್ದರೂ ರಾಜ್ಯ ಸರ್ಕಾರದ ಅಂಕಿ ಅಂಶಗಳು ಮಾರ್ಚ್ 1 ಮತ್ತು ಮೇ 10 ರ ನಡುವೆ ಕೇವಲ 4,218 ಕೋವಿಡ್ ಸಾವುಗಳನ್ನು ಮಾತ್ರ ಉಲ್ಲೇಖಿಸಿವೆ ಎಂದು ದಿವ್ಯ ಭಾಸ್ಕರ್‌ ಮಾಡಿರುವ ವರದಿಯನ್ನು ಪತ್ರಕರ್ತ ದೀಪಕ್‌ ಪಟೇಲ್‌ ಟ್ವಿಟರಿನಲ್ಲಿ ಹಂಚಿಕೊಂಡಿದ್ದಾರೆ. ಆದಾಗ್ಯೂ, ರಾಜ್ಯದ ಸಾವಿನ ಅಂಕಿಅಂಶಗಳನ್ನು ಮರೆಮಾಚಲಾಗುತ್ತಿದೆ ಎಂದು ಹೇಳುವುದು ಸೂಕ್ತವಲ್ಲ ಎಂದು ಗುಜರಾತ್ ಸರ್ಕಾರ ಹೇಳಿದೆ.

ಗುಜರಾತ್‌ ಸರ್ಕಾರ ಕೋವಿಡ್‌ ಸಾವುಗಳ ವಾಸ್ತವ ಅಂಕಿಅಂಶಗಳನ್ನು ಮರೆಮಾಚುತ್ತಿರುವುದಾಗಿ ಈ ಹಿಂದೆಯೇ ದಿ ಹಿಂದೂ, ದಿ ಕ್ಯಾರವಾನ್‌ ಮೊದಲಾದ ಪತ್ರಿಕೆಗಳು ವಿಸ್ಕೃತ ವರದಿ ಪ್ರಕಟಿಸಿದ್ದವು. ರಾಜ್ಯ ಮಾಧ್ಯಮಗಳೂ ಸರ್ಕಾರ ಅಂಕಿಅಂಶಗಳಲ್ಲಿ ತೋರಿಸುತ್ತಿರುವ ʼಕಳ್ಳಾಟʼಗಳ ಕುರಿತು ಖಾರವಾಗಿ ಸರ್ಕಾರಕ್ಕೆ ಚಾಟಿ ಬೀಸುತ್ತಿದ್ದವು.

ಕರೋನಾ ಸಾವಿನ ವಿಷಯದಲ್ಲಿಯೂ ಸುಳ್ಳು ಹೇಳುತ್ತಿದೆ ಸರ್ಕಾರ!

ಈ ಹಿನ್ನೆಲೆಯಲ್ಲಿ ಗುಜರಾತ್‌ ಮುಖ್ಯಮಂತ್ರಿ ವಿಜಯ್‌ ರೂಪಾನಿ ಕಳೆದ ಎಪ್ರಿಲ್‌ನಲ್ಲೇ ಒಂದು ಸಮರ್ಥನೆಯೊಂದಿಗೆ ಮಾಧ್ಯಮದೆದುರು ಪ್ರತ್ಯಕ್ಷವಾಗಿದ್ದು, ರಾಜ್‌ ಸರ್ಕಾರ ಕೋವಿಡ್‌ ಸಾವುಗಳಲ್ಲಿ ಯಾವುದೇ ಮುಚ್ಚುಮರೆ ಮಾಡುವುದಿಲ್ಲವೆಂದು ಸಮಜಾಯಿಷಿ ನೀಡಿದ್ದರು. ಮುಂದುವರೆದು, comorbid ರೋಗಿಗಳ (ಒಂದಕ್ಕಿಂತ ಹೆಚ್ಚು ರೋಗಗಳಿರುವ ವ್ಯಕ್ತಿಗಳು) ಸಾವಿನ ಪ್ರಾಥಮಿಕ  ಕಾರಣವನ್ನು ತಜ್ಞರ ಸಮಿತಿ ನಿರ್ಧರಿಸಬೇಕೆಂದು ICMR ಮಾರ್ಗಸೂಚಿ ಇದೆ. ಒಂದು ವೇಳೆ ಸಮಿತಿಯು ಕೋವಿಡ್‌ ಸೋಂಕಿತನ ಸಾವಿಗೆ ಹೃದಯಾಘಾತವೆಂದು ನಿರ್ಧರಿಸಿದರೆ ಆತ ಕೋವಿಡ್‌ ಸೋಂಕಿತನಾಗಿದ್ದರೂ ಸಾವನ್ನು ಕೋವಿಡ್‌ ಸೋಂಕು ಎಂದು ಪರಿಗಣಿಸಲಾಗುವುದಿಲ್ಲ. ದೇಶಾದ್ಯಂತ ಇದೇ ವ್ಯವಸ್ಥೆ ಚಾಲ್ತಿಯಲ್ಲಿದೆ ಎಂದು ಹೇಳಿದ್ದರು. ಆದರೆ, ICMR ಮಾರ್ಗಸೂಚಿಯು, ಕೋವಿಡ್‌ ಸೋಂಕಿತ ವ್ಯಕ್ತಿ ರೋಗಲಕ್ಷಣಗಳಿಲ್ಲದೆ ಮೃತಪಟ್ಟರೂ ಕೋವಿಡ್‌ ಸಾವೆಂದು ಪರಿಗಣಿಸಬೇಕೆಂದು ಹೇಳುತ್ತದೆ. ಹಾಗಾಗಿ ಅವರು ಹೇಳಿರುವುದು ತಪ್ಪು ಎಂದು ಸ್ಕ್ರಾಲ್‌.ಇನ್ ವರದಿ ಮಾಡಿದೆ.

ಗುಜರಾತಿನಲ್ಲಿ ಕೋವಿಡ್‌ ರೋಗಿಗಳ ಸಾವಿನ ಪಟ್ಟಿಯಲ್ಲಿ ನಮೂದಿಸದ ಹಲವಾರು ಪ್ರಕರಣಗಳಿವೆ ಇದೆ ಎಂದು ದಿ ಹಿಂದೂ ಕೂಡಾ ವರದಿ ಮಾಡಿದೆ. ಸಾವಿಗೆ ಪ್ರಾಥಮಿಕ ಕಾರಣ ಕೋವಿಡ್‌ ಅಲ್ಲವೆಂದು ಪರಿಗಣಿಸಿ ಹಲವಾರು ಸೋಂಕಿತರ ಮರಣವನ್ನು ಕೋವಿಡ್‌ ಮರಣವಲ್ಲವೆಂದು ಪರಿಗಣಿಸಲಾಗಿದೆ ಎಂದು ದಿ ಹಿಂದೂ ವರದಿ ಮಾಡಿತ್ತು.

ದಿ ಕ್ಯಾರವಾನ್‌ ಕೂಡಾ ಮರಣಗಳ ಸಂಖ್ಯೆಯ ಕುರಿತು ಸರ್ಕಾರ ನೀಡುವ ಅಂಕಿ ಅಂಶ ಹಾಗೂ ಸ್ಮಶಾನದಲ್ಲಿ ದಹಿಸಲ್ಪಡುವ ಮೃತದೇಹಗಳ ಸಂಖ್ಯೆಯಲ್ಲಿ ವಿಪರೀತ ವ್ಯತ್ಯಾಸಗಳಿರುವುದನ್ನು ಬಯಲಿಗೆಳೆದಿತ್ತು. ಇದೀಗ, ಸರ್ಕಾರವೇ ನೀಡಿರುವ ಮರಣ ಪ್ರಮಾಣ ಪತ್ರಗಳ ಆಧಾರದ ಮೇಲೆಯೇ ಕೋವಿಡ್‌ ಕುರಿತಾದ ಅಂಕಿ ಅಂಶಗಳಲ್ಲಿ ಸರ್ಕಾರ ʼಕಳ್ಳಾಟʼ ನಡೆಸಿರುವುದು ಮೇಲ್ನೋಟಕ್ಕೆ ಸಾಬೀತಾಗಿದೆ.

ಭಾರತವನ್ನು ಯಾವ ಗುಜರಾತ್‌ ಮಾಡುತ್ತೇನೆಂದು ಬಿಜೆಪಿ ಅಧಿಕಾರಕ್ಕೆ ಬಂದಿತೋ, ಆ ʼಗುಜರಾತ್‌ ಮಾಡೆಲ್‌ʼ ನ ವಾಸ್ತವಾಂಶ ಇದು. ಕೋವಿಡ್‌ ದೆಸೆಯಿಂದಾಗಿ ಆರೋಗ್ಯ ಕ್ಷೇತ್ರದ ಅಸಮರ್ಪಕತೆ ಹಾಗೂ ಗುಜರಾತ್‌ ಮಾದರಿಯ ನಗ್ನ ಸತ್ಯಗಳು ಹೀಗೆ ಬಯಲಾಗ ತೊಡಗಿವೆ.

Previous Post

ಆಧುನಿಕ ನಾಗರಿಕ ಜಗತ್ತು ಪ್ರಾಚೀನ ಮನಸ್ಥಿತಿಯ ಸಂಘರ್ಷ

Next Post

ಕೆಪಿಸಿಸಿಯಿಂದ ಲಸಿಕೆ ಯೋಜನೆ: ಅನುಮತಿ ಕೋರಿ ಮುಖ್ಯಮಂತ್ರಿಗಳಿಗೆ ಸಿದ್ದರಾಮಯ್ಯ ಪತ್ರ

Related Posts

Top Story

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

by ಪ್ರತಿಧ್ವನಿ
July 4, 2025
0

ಹಾಸನ ಜಿಲ್ಲೆಯ ಇಂಧನ ಇಲಾಖೆ ಪ್ರಗತಿ ಪರಿಶೀಲನಾ ಸಭೆ ರಾಜ್ಯದಲ್ಲಿ ಮೂರು ಸಾವಿರ ಅಕ್ರಮ ಪಂಪ್ ಸೆಟ್ ಗಳ ಸಕ್ರಮ ಕೃಷಿ ಫೀಡರ್ ಗಳನ್ನು ಸೌರೀಕರಣಗೊಳಿಸಿ ರೈತರ...

Read moreDetails

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

July 4, 2025

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025

Bangalore Airport: 10 ಜಾಗತಿಕ ಪ್ರಶಸ್ತಿ ಪಡೆದ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ..!!

July 3, 2025
Next Post
ಕೆಪಿಸಿಸಿಯಿಂದ ಲಸಿಕೆ ಯೋಜನೆ: ಅನುಮತಿ ಕೋರಿ ಮುಖ್ಯಮಂತ್ರಿಗಳಿಗೆ ಸಿದ್ದರಾಮಯ್ಯ ಪತ್ರ

ಕೆಪಿಸಿಸಿಯಿಂದ ಲಸಿಕೆ ಯೋಜನೆ: ಅನುಮತಿ ಕೋರಿ ಮುಖ್ಯಮಂತ್ರಿಗಳಿಗೆ ಸಿದ್ದರಾಮಯ್ಯ ಪತ್ರ

Please login to join discussion

Recent News

Top Story

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

by ಪ್ರತಿಧ್ವನಿ
July 4, 2025
Top Story

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
Top Story

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

July 4, 2025

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

July 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada