• Home
  • About Us
  • ಕರ್ನಾಟಕ
Saturday, July 5, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಕೋವಿಡ್ 19 ಲಾಕ್ಡೌನ್ಗೆ ತತ್ತರಿಸಿ ಹೋಗಿರುವ ಚಾಮರಾಜನಗರದ ಹೂವು ಬೆಳೆಗಾರರ ಬದುಕು

Any Mind by Any Mind
May 19, 2021
in ಕರ್ನಾಟಕ
0
ಕೋವಿಡ್ 19  ಲಾಕ್ಡೌನ್ಗೆ ತತ್ತರಿಸಿ ಹೋಗಿರುವ ಚಾಮರಾಜನಗರದ ಹೂವು ಬೆಳೆಗಾರರ ಬದುಕು
Share on WhatsAppShare on FacebookShare on Telegram

ರಾಜ್ಯದ ಅತ್ಯಂತ ಹಿಂದುಳಿದ ಜಿಲ್ಲೆಗಳಲ್ಲಿ ಒಂದಾಗಿರುವ  ಚಾಮರಾಜನಗರ ಜಿಲ್ಲೆಯ ಬಹುತೇಕ ಜನಸಂಖ್ಯೆ ಬಡತನದ ರೇಖೆಗಿಂತ ಕೆಳಗಿರುವವರೇ ಆಗಿದ್ದಾರೆ. ಕೃಷಿಕ ಪ್ರಧಾನವೇ ಆಗಿರುವ ಈ ಜಿಲ್ಲೆಯ ಶೇಕಡಾ 80 ರಷ್ಟು ರೈತರು ಅರ್ಧ ಎಕರೆ ಅಥವಾ ಅದಕ್ಕಿಂತ ಕಡಿಮೆ ಭೂಮಿ ಹೊಂದಿರುವ ವರ್ಗದವರು. ಇಡೀ ಜಿಲ್ಲೆಗೆ ಇರುವ ಏಕೈಕ ದೊಡ್ಡಾಸ್ಪತ್ರೆ ಚಾಮರಾಜನಗರ ಜಿಲ್ಲಾಸ್ಪತ್ರೆ ಯಲ್ಲಿ ಕಳೆದ ಮೇ 2 ರಂದು ಆಕ್ಸಿಜನ್ ಕೊರತೆಯಿಂದ 24 ಜನರು ಮೃತರಾದ ಸುದ್ದಿ ಇಡೀ ದೇಶದಲ್ಲೆ ದೊಡ್ಡ ಮಟ್ಟದ ಖಂಡನೆ ,ಚರ್ಚೆಗೆ ಗ್ರಾಸವಾಗಿತ್ತು.

ADVERTISEMENT

ಈ ಜಿಲ್ಲೆಯ ಕೃಷಿಕರು ಮುಖ್ಯವಾಗಿ ಬೆಳೆಯುವುದು ರಾಗಿ, ಜೋಳ , ಅರಶಿನ ಮತ್ತು ಕಬ್ಬು. ನೀರಾವರಿ ಸೌಲಭ್ಯ ಇರುವವರು ಮಾತ್ರ ಕಬ್ಬು ಬೆಳೆಯುತ್ತಾರೆ. ಗುಂಡ್ಲುಪೇಟೆ , ಕೊಳ್ಳೇಗಾಲ ತಾಲ್ಲೂಕಿನ ಕೆಲವು ಪ್ರದೇಶಗಳಲ್ಲಿ ರೈತರು ಹೂವನ್ನೂ ಬೆಳೆಯುತ್ತಾರೆ. ಇವರು ಬೆಳೆದ ಹೂವು ಮುಖ್ಯವಾಗಿ ಮೈಸೂರಿನ ಹೂವಿನ ಮಾರುಕಟ್ಟೆಗೆ ಸರಬರಾಜು ಆಗುತ್ತದೆ. ಈ ಜಿಲ್ಲೆಯ ಜನತೆ ವ್ಯಾಪಾರ ವಹಿವಾಟಿಗೆ ಆಶ್ರಯಿಸಿರುವುದು ಮೈಸೂರು ಜಿಲ್ಲೆಯನ್ನೇ. ಆದರೆ ಕಳೆದ ಬಾರಿಯ ಕರೋನಾ ಲಾಕ್ ಡೌನ್ ಮತ್ತು ಈ ಬಾರಿಯ ಲಾಕ್ ಡೌನ್ ನಿಂದಾಗಿ  ಹೂವಿನ ವ್ಯಾಪಾರ ಸಂಪೂರ್ಣ ನೆಲ ಕಚ್ಚಿದೆ. ಹೂವು ಬೆಳೆಗಾರರು ಅಕ್ಷರಶಃ ಬೀದಿಗೆ ಬಂದಿದ್ದಾರೆ.

ಲಾಕ್ ಡೌನ್ ಇಲ್ಲದಿದ್ದಾಗ ಹೂವಿನ ಬೆಳೆ ನೂರಾರು ರೈತರಿಗೆ ಉತ್ತಮ ಆದಾಯವನ್ನು ತಂದು ಕೊಟ್ಟು ಬದುಕನ್ನು ಹಸನಾಗಿಸಿತ್ತು. ಏಕೆಂದರೆ ಜನವರಿಯಿಂದ ಮದುವೆ ಸೀಸನ್ ಆರಂಭಗೊಂಡರೆ ಜೂನ್ ನ ಮಳೆಗಾಲ ಬರುವವರೆಗೂ ಹೂವಿಗೆ ಉತ್ತಮ ಧಾರಣೆ ಸಿಗುತಿತ್ತು. ದಶಕಗಳ ಹಿಂದೆ ಶುಭ ಸಮಾರಂಭಗಳಿಗೆ ಹೂವು ಮೈಸೂರಿನಿಂದ ಸರಬರಾಜಾಗುತಿತ್ತು. ಆದರೆ ಈಗ  ಜಿಲ್ಲೆಯಲ್ಲಿಯೇ ಸಾಕಷ್ಟು ಹೂವುಗಳು ಉತ್ಪಾದನೆ ಆಗುತ್ತಿರುವುದರಿಂದ ಇತರೆಡೆಗಳಿಗೂ  ಮಾರಾಟ ಮಾಡಲಾಗುತ್ತಿದೆ. ಚಾಮರಾಜನಗರ ತಾಲ್ಲೂಕಿನ ಚೆನ್ನಿಪುರದಮೋಳೆ ಹೂವಿನ ಮಾರುಕಟ್ಟೆಗೆ ಹೆಸರುವಾಸಿ. ಬಹುತೇಕ ಜಿಲ್ಲೆಯ ಹೂವಿನ ಕೃಷಿಕರು ಇದೇ ಮಾರುಕಟ್ಟೆಯ ಮೂಲಕವೇ ತಾವು ಬೆಳೆದ ಹೂವುಗಳನ್ನು ಮಾರಾಟ ಮಾಡುತಿದ್ದರು ಆದರೆ ಈಗ ಮಾರುಕಟ್ಟೆ ಖರೀದಿದಾರರು ಇಲ್ಲದೆ ಬಂದ್ ಆಗಿದೆ. ಕಳೆದ ವರ್ಷವೂ ಇದೇ ರೀತಿ ಲಾಕ್ಡೌನ್ ಹೇರಲಾಗಿತ್ತು. ಶುಭ ಸಮಾರಂಭಗಳು ಸಾಲು ಸಾಲಾಗಿ ನಡೆಯುವ ಈ ವಸಂತ ಮಾಸದಲ್ಲೇ ಕರೋನಾ ಸೋಂಕು ಮತ್ತೆ ದಾಂಗುಡಿ ಇಟ್ಟಿದೆ. ಶುಭ ಸಮಾರಂಭಗಳ ಮೇಲೆ ಕಳೆದೆರಡು ತಿಂಗಳುಗಳಿಂದಲೂ ನಿಯಂತ್ರಣವಿದ್ದು, ಇದೀಗ ಸಂಪೂರ್ಣ ಇಲ್ಲವಾಗಿದೆ. ದೇವಸ್ಥಾಗಳೂ ಭಕ್ತರ ದರ್ಶನದಿಂದ ದೂರ ಉಳಿದಿವೆ. ಉತ್ಸವಗಳೂ ನಡೆಯದೇ ಹೂವಿಗೆ ಬೇಡಿಕೆಯೇ ಇಲ್ಲದಂತಹ ವಾತಾವರಣ ಸೃಷ್ಟಿಯಾಗಿದೆ.

 ಕರೋನಾದಿಂದ ಸಾವಿಗೀಡಾದವರ ಸಂಖ್ಯೆಯೂ ಜಿಲ್ಲೆಯಲ್ಲಿ ಕಡಿಮೆ ಏನಲ್ಲ ಆದರೆ ಸರ್ಕಾರ ಅಂತ್ಯ ಸಂಸ್ಕಾರಕ್ಕೆ ಕೇವಲ 5 ಜನರು ಮಾತ್ರ ಭಾಗವಹಿಸಬೇಕೆಂದು ನಿರ್ಭಂಧ ಹೇರಿರುವುದರಿಂದ  ಮೃತಪಟ್ಟವರ ಪಾರ್ಥಿವ ಶರೀರದ ಮೇಲೆ ಹೂವನಿರಿಸಲೂ ಸಾಧ್ಯವಾಗದಂತಹ ಸ್ಥಿತಿ ನಿರ್ಮಾಣವಾಗಿದೆ. ಮೃತಪಟ್ಟವರ ಅಂತಿಮ ದರ್ಶನಕ್ಕೂ ಜನರು ಹೋಗುತ್ತಿಲ್ಲ. ಹೂವಿಗೆ ದೇವರ ಮುಡಿ ಇರಲಿ, ಕನಿಷ್ಠ ಮೃತಪಟ್ಟವರ ಶರೀರದ ಮೇಲೆಯೂ ಸ್ಥಾನ ಸಿಗುತ್ತಿಲ್ಲ. ಹೂವುಗಳು ಗಿಡದಲ್ಲೇ ಬಾಡಿ, ಒಣಗಿ ಹೋಗುತ್ತಿವೆ. ಗಿಡದಲ್ಲಿ ಅರಳಿದ ಹೂಗಳು ಬಾಡಿ ಉದುರುತ್ತಿರುವುದನ್ನು ಕಂಡರೆ ಹೊಟ್ಟೆಯಲ್ಲಿ ಬೆಂಕಿ ಬಿದ್ದಂತಹ ಅನುಭವವಾಗುತ್ತದೆ. ಕೈಗೆ ಬಂದ ತುತ್ತು ಬಾಯಿಗೆ ಬಾರದಂತಹ ಸ್ಥಿತಿ ಬಂದಿದೆ ಎಂದು ಪುಷ್ಪ ಕೃಷಿಕರು ಅಳಲು ತೋಡಿಕೊಳ್ಳುತ್ತಾರೆ. ಜಿಲ್ಲೆಯ ಕೊಳ್ಳೇಗಾಲ ಭಾಗದಲ್ಲಿ ಬೆಳೆಯುತ್ತಿದ್ದ ಅಲಂಕಾರಿಕ ಹೂ ಜರ್ಬಾರ ಈ ಬಾರಿ ಕಡಿಮೆಯಾಗಿದೆ. ಸುಮಾರು ಶೇ 30ರಿಂದ 40ರಷ್ಟು ಮಂದಿ ಈ ಕೃಷಿಯಿಂದ ವಿಮುಖರಾಗಿದ್ದಾರೆ. ಇದರ ನಿರ್ವಹಣೆಗೆ ಹೆಚ್ಚಿನ ಹಣ ಬೇಕಿರುವುದರಿಂದ ಒಂದು ತಿಂಗಳು ಹೂಗಳು ಮಾರಾಟವಾಗದಿದ್ದರೆ ನಿರ್ವಹಣೆ ಕಷ್ಟವಾಗುತ್ತದೆ. ಇದರಿಂದ ಅನಿವಾರ್ಯವಾಗಿ ಇವರು ಈ ಬೇಸಾಯವನ್ನು ಕೈಬಿಡಬೇಕಾಗಿದೆ.

ಈ ಕುರಿತು  ಮಾತನಾಡಿದ ಗುಂಡ್ಲುಪೇಟೆ ತಾಲ್ಲೂಕಿನ ರೈತ ಬಸವರಾಜಪ್ಪ ಅವರು ,  ಹೂವಿನ ಬೇಸಾಯಕ್ಕೆ ಲಕ್ಷಾಂತರ ರೂಪಾಯಿ ಹಣ ಮತ್ತು  ಕಾರ್ಮಿಕ ಶಕ್ತಿ ಬೇಕು. ನಾವು ಬೆಳೆದ ಹೂಗಳು ಇಷ್ಟು ವರ್ಷ  ಬೆಂಗಳೂರಿನ ಕೆ.ಆರ್.ಮಾರುಕಟ್ಟೆಯಲ್ಲಿಯೇ ಉತ್ತಮ ದರಕ್ಕೆ ಮಾರಾಟ ಆಗುತಿದ್ದವು. ಆದರೆ ಕಳೆದ ವರ್ಷದ ಲಾಕ್‌ ಡೌನ್‌ ನಂತರ ಅಲಂಕಾರಕ್ಕಾಗಿ ಬಳಸುವ ಈ ಹೂವಿಗೆ ಕಳೆದೊಂದು ವರ್ಷದಿಂದ ಬೇಡಿಕೆಯೇ ಇಲ್ಲವಾಗಿದೆ ಈಗಾಗಲೇ ಕೊಳ್ಳೇಗಾಲ ತಾಲ್ಲೂಕಿನ ಕೊತ್ತನೂರು, ಕಾಮಗೆರೆ, ಕುರುಬನಕಟ್ಟೆ, ಆಮಕೆರೆ, ತಿಮ್ಮರಾಜಿಪುರ ಇಲ್ಲೆಲ್ಲ ಒಂದು ವರ್ಷದಿಂದ ಈ ಬೆಳೆ ನಶಿಸಿದೆ. ಪಾಳ್ಯ ಗ್ರಾಮದಲ್ಲಿ 4 ಎಕರೆಯಷ್ಟು ಪ್ರದೇಶದಲ್ಲಿ ಬೆಳೆಯಲಾಗುತ್ತಿದೆ. ಈ ಹೂವಿನ ಬಿತ್ತನೆ ಬೀಜವನ್ನು ಪುಣೆಯಿಂದ ತರಬೇಕು. ಒಂದು ಎಕರೆಗೆ 25 ಸಾವಿರ ಪೈರು ಬೇಕು. ಒಂದು ಎಕರೆ ಹೂ ಬೆಳೆಯಲು ಕನಿಷ್ಟ ಪಕ್ಷ 5 ಲಕ್ಷ ರೂಪಾಯಿ ಖರ್ಚಾಗುತ್ತದೆ. . ಇಷ್ಟು ಹಣವ್ಯಯಿಸಿ ನಷ್ಟವಾದರೆ ಬೆಳೆಗಾರರ ಗತಿ ಏನು ಎಂದು ಮತ್ತೋರ್ವ ರೈತ ನಾಗರಾಜು ಪ್ರಶ್ನಿಸುತ್ತಾರೆ.

ಸುಮಾರು  ಐನೂರಕ್ಕೂ ಅಧಿಕ ಮಂದಿ ಹೂ ಬೆಳೆಗಾರರು ಜಿಲ್ಲೆಯಲ್ಲಿದ್ದಾರೆ. ಕನಕಾಂಬರ, ಮಲ್ಲಿಗೆ, ಕಾಕಡ ಮೊದಲಾದ ಹೂಗಳನ್ನು ಇವರು ಬೆಳೆಯುತ್ತಿದ್ದಾರೆ. ಇವರಿಗೆ ಮುಖ್ಯ ಮಾರುಕಟ್ಟೆಯೇ ಬೆಂಗಳೂರಿನ ಕೃಷ್ಣ ರಾಜ ಮಾರುಕಟ್ಟೆ. ಆದರೆ ಲಾಕ್‌ ಡೌನ್‌ ನಿಂದಾಗಿ ಇಡೀ ಮಾರುಕಟ್ಟೆಯೇ ಬಂದ್‌ ಆಗಿದ್ದು ಲಾರಿಗಳೂ ಸಂಚರಿಸುತ್ತಿಲ ಜತೆಗೇ ಖರೀದಿದಾರರೂ ಸುಳಿಯುತ್ತಿಲ್ಲ. ಕೊರೋನದಿಂದಾಗಿ ಪುಷ್ಪ ಕೃಷಿಕರ ಬದುಕೇ ಕೊಚ್ಚಿಕೊಂಡು ಹೋಗಿದೆ.

Previous Post

ಜಿಂದಾಲ್ ಕಂಪೆನಿಗೆ ಭೂಮಿ ಮಾರಾಟ: ಮುಖ್ಯಮಂತ್ರಿ, ಮಂತ್ರಿ ಮಂಡಳಿಗೆ ಲೀಗಲ್ ನೋಟೀಸ್!

Next Post

ಮನೆ ಮನೆ ಸತ್ಯಕ್ಕೆ ಹಸೀ ಸುಳ್ಳಿನ ಸಾಕ್ಷಿ ನೀಡುತ್ತಿದೆ ಆರೋಗ್ಯ ಸಚಿವಾಲಯ!

Related Posts

SriLeela: ʼಜೂನಿಯರ್‌ʼ ವೈರಲ್‌ ವಯ್ಯರಿ… ಕಿರೀಟಿ-ಶ್ರೀಲೀಲಾ ಡ್ಯಾನ್ಸ್‌ ಭರ್ಜರಿ..!!
Top Story

SriLeela: ʼಜೂನಿಯರ್‌ʼ ವೈರಲ್‌ ವಯ್ಯರಿ… ಕಿರೀಟಿ-ಶ್ರೀಲೀಲಾ ಡ್ಯಾನ್ಸ್‌ ಭರ್ಜರಿ..!!

by ಪ್ರತಿಧ್ವನಿ
July 5, 2025
0

ಜೂನಿಯರ್‌ ಚಿತ್ರದ ಡ್ಯಾನ್ಸಿಂಗ್‌ ನಂಬರ್..ಡಿಎಸ್‌ಪಿ ಮ್ಯೂಸಿಕ್‌ಗೆ ಕುಣಿದು ಕುಪ್ಪಳಿಸಿದ ಕಿರೀಟಿ-ಶ್ರೀಲೀಲಾ ಕಿರೀಟಿ ಚಿತ್ರರಂಗದಲ್ಲಿ ಛಾಪೂ ಮೂಡಿಸಲು ಸಜ್ಜಾಗಿದ್ದು, ಚೊಚ್ಚಲ ಚಿತ್ರ ಜೂನಿಯರ್‌ ಟೀಸರ್‌ ಈಗಾಗಲೇ ಭಾರೀ ಸದ್ದು...

Read moreDetails

Dolly Dananjay: ಹೊಸ ರೆಟ್ರೋ ಲುಕ್‌ನಲ್ಲಿ ಧನಂಜಯ್..

July 5, 2025

Ranya Rao: ಅಕ್ರಮ ಚಿನ್ನ ಸಾಗಾಟಣೆಯ ನಟಿ ರನ್ಯಾ ರಾವ್ ಗೆ ಸೇರಿದ 34 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು

July 5, 2025

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

July 4, 2025

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

July 4, 2025
Next Post
ಮನೆ ಮನೆ ಸತ್ಯಕ್ಕೆ ಹಸೀ ಸುಳ್ಳಿನ ಸಾಕ್ಷಿ ನೀಡುತ್ತಿದೆ ಆರೋಗ್ಯ ಸಚಿವಾಲಯ!

ಮನೆ ಮನೆ ಸತ್ಯಕ್ಕೆ ಹಸೀ ಸುಳ್ಳಿನ ಸಾಕ್ಷಿ ನೀಡುತ್ತಿದೆ ಆರೋಗ್ಯ ಸಚಿವಾಲಯ!

Please login to join discussion

Recent News

SriLeela: ʼಜೂನಿಯರ್‌ʼ ವೈರಲ್‌ ವಯ್ಯರಿ… ಕಿರೀಟಿ-ಶ್ರೀಲೀಲಾ ಡ್ಯಾನ್ಸ್‌ ಭರ್ಜರಿ..!!
Top Story

SriLeela: ʼಜೂನಿಯರ್‌ʼ ವೈರಲ್‌ ವಯ್ಯರಿ… ಕಿರೀಟಿ-ಶ್ರೀಲೀಲಾ ಡ್ಯಾನ್ಸ್‌ ಭರ್ಜರಿ..!!

by ಪ್ರತಿಧ್ವನಿ
July 5, 2025
Top Story

Dolly Dananjay: ಹೊಸ ರೆಟ್ರೋ ಲುಕ್‌ನಲ್ಲಿ ಧನಂಜಯ್..

by ಪ್ರತಿಧ್ವನಿ
July 5, 2025
Top Story

Ranya Rao: ಅಕ್ರಮ ಚಿನ್ನ ಸಾಗಾಟಣೆಯ ನಟಿ ರನ್ಯಾ ರಾವ್ ಗೆ ಸೇರಿದ 34 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು

by ಪ್ರತಿಧ್ವನಿ
July 5, 2025
ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,
Top Story

ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,

by ಪ್ರತಿಧ್ವನಿ
July 5, 2025
Top Story

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

by ಪ್ರತಿಧ್ವನಿ
July 4, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

SriLeela: ʼಜೂನಿಯರ್‌ʼ ವೈರಲ್‌ ವಯ್ಯರಿ… ಕಿರೀಟಿ-ಶ್ರೀಲೀಲಾ ಡ್ಯಾನ್ಸ್‌ ಭರ್ಜರಿ..!!

SriLeela: ʼಜೂನಿಯರ್‌ʼ ವೈರಲ್‌ ವಯ್ಯರಿ… ಕಿರೀಟಿ-ಶ್ರೀಲೀಲಾ ಡ್ಯಾನ್ಸ್‌ ಭರ್ಜರಿ..!!

July 5, 2025

Dolly Dananjay: ಹೊಸ ರೆಟ್ರೋ ಲುಕ್‌ನಲ್ಲಿ ಧನಂಜಯ್..

July 5, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada