• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 24, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಮಕ್ಕಳು ರೋಗ ಹರಡುವ ಸರಪಳಿಯ ಭಾಗವಾಗದಂತೆ ನೋಡಿಕೊಳ್ಳಬೇಕು: NITI ಆಯೋಗ

ಫಾತಿಮಾ by ಫಾತಿಮಾ
May 23, 2021
in ದೇಶ
0
ಮಕ್ಕಳು ರೋಗ ಹರಡುವ ಸರಪಳಿಯ ಭಾಗವಾಗದಂತೆ ನೋಡಿಕೊಳ್ಳಬೇಕು: NITI ಆಯೋಗ

Concerned father and son using air protection masks

Share on WhatsAppShare on FacebookShare on Telegram

ADVERTISEMENT

ಮಕ್ಕಳು COVID-19 ಸೋಂಕಿಗೆ ಒಳಗಾಗುವುದಿಲ್ಲ ಎಂಬ ಜನಪ್ರಿಯ ನಂಬಿಕೆಗಳಿಗೆ ವಿರುದ್ಧವಾಗಿ ಸೋಂಕಿಗೊಳಗಾಗುತ್ತಾರೆ. ಆದರೆ ಅವರು ಸಾಮಾನ್ಯವಾಗಿ ಸೌಮ್ಯ ರೋಗಲಕ್ಷಣಗಳನ್ನು ಮಾತ್ರ ತೋರಿಸುತ್ತಾರೆ ಎಂದು ಎನ್ಐಟಿಐ (ನೀತಿ) ಆಯೋಗದ ಸದಸ್ಯ – ಡಾ.ವಿ.ಕೆ ಪಾಲ್ ಹೇಳಿದ್ದಾರೆ.  ಮಕ್ಕಳು ರೋಗ ಹರಡುವ ಸರಪಳಿಯ ಭಾಗವಾಗದಂತೆ ನೋಡಿಕೊಳ್ಳುವುದು ಈಗ ಸರ್ಕಾರದ ಪ್ರಯತ್ನವಾಗಬೇಕಿದೆ ಎಂದು ಅವರು ಹೇಳಿದರು.

ಸಾಂಕ್ರಾಮಿಕ ರೋಗದ ಎರಡನೇ ಅಲೆಯಲ್ಲಿ ಮಕ್ಕಳ ಸಂಖ್ಯೆಯು ಏರಿಕೆಯಾಗಿದೆ. ಮೊದಲೇ ಅಸ್ತಿತ್ವದಲ್ಲಿರುವ ರೋಗದೊಂದಿಗೆ ಮಾರಣಾಂತಿಕ ವೈರಸ್ ಸೋಂಕಿಗೆ ಒಳಗಾದ ಮಕ್ಕಳನ್ನು ನಿಭಾಯಿಸುವ ವಿಧಾನಗಳ ಬಗ್ಗೆ ಒತ್ತು ನೀಡುವಂತೆ ಇದು ದೇಶದ ಆರೋಗ್ಯ ತಜ್ಞರನ್ನು ಎಚ್ಚರಿಸಿದೆ ಎಂದು ANI ವರದಿ ಮಾಡಿದೆ.

ನಿದ್ದೆಯಿಂದ ಎದ್ದು, ಮಕ್ಕಳ ಆರೋಗ್ಯ ರಕ್ಷಣೆ ಬಗ್ಗೆ ಗಮನಹರಿಸಿ; ಮೂರನೆ ಅಲೆ ಕುರಿತು ಮೋದಿ ಸರ್ಕಾರಕ್ಕೆ ಎಚ್ಚರಿಸಿದ ರಾಹುಲ್ ಗಾಂಧಿ

“ಮಕ್ಕಳ ವಿಷಯವು ಹೆಚ್ಚು ಮುಖ್ಯವಾಗಿದೆ. ಅವರು ಕೋವಿಡ್‌ಗೆ ಒಳಗಾಗುತ್ತಾರೆ.  ಆದರೆ ರೋಗಲಕ್ಷಣಗಳು ಕಡಿಮೆ.  ಅವರು ಹೆಚ್ಚಾಗಿ ಲಕ್ಷಣರಹಿತ ಸೋಂಕಿಗೆ ತುತ್ತಾಗುತ್ತಾರೆ “ಎಂದು ಡಾ ಪಾಲ್ ನಿನ್ನೆ ಸುದ್ದಿಗಾರರಿಗೆ ತಿಳಿಸಿದ್ದಾರೆ.

“ಮಕ್ಕಳು ಜನರಲ್ಲಿ ರೋಗ ಹರಡುವ ಸರಪಳಿಯ ಭಾಗವಾಗದಂತೆ ನೋಡಿಕೊಳ್ಳುವ ಕೆಲಸವಾಗಬೇಕು” ಎಂದು ಅವರು ಹೇಳಿದರು.

ಭಾರತದಲ್ಲಿ ಒಟ್ಟು ಜನಸಂಖ್ಯೆಯಲ್ಲಿ ಶೇಕಡಾ 26 ರಷ್ಟು ಜನಸಂಖ್ಯೆ 14 ವರ್ಷಕ್ಕಿಂತ ಕಡಿಮೆ ಮತ್ತು ಸುಮಾರು ಶೇಕಡಾ ಏಳರಷ್ಟು ಜನಸಂಖ್ಯೆ  ಐದು ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳದ್ದು.

ಈ ಹಿಂದೆ ಮಕ್ಕಳ ಹಕ್ಕುಗಳ ಸಂರಕ್ಷಣಾ ರಾಷ್ಟ್ರೀಯ ಆಯೋಗವು ಕೇಂದ್ರ ಆರೋಗ್ಯ ಸಚಿವಾಲಯ ಮತ್ತು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿಗೆ ಪತ್ರ ಬರೆದು, ಆರೋಗ್ಯ ತಜ್ಞರು ಸೂಚಿಸಿದಂತೆ ಮೂರನೇ COVID-19 ತರಂಗವು ಹೆಚ್ಚಿನ ಸಂಖ್ಯೆಯಲ್ಲಿ ಮಕ್ಕಳ ಮೇಲೆ ಪರಿಣಾಮ ಬೀರಬಹುದು ಎಂದು ಎಚ್ಚರಿಸಿದೆ.

ಭಾರತದಲ್ಲಿ ಸಾಂಕ್ರಾಮಿಕ ರೋಗದ ಎರಡನೇ ಅಲೆಯು ನಗರಕ್ಕಿಂತ ಗ್ರಾಮೀಣ ಪ್ರದೇಶಗಳ ಮೇಲೆ ಹೆಚ್ಚು ಪರಿಣಾಮ ಬೀರಿವೆ ಎಂದು ಡಾ. ಪಾಲ್ ತಿಳಿಸಿದರು. ಆದರೆ ಈಗ ಪರಿಸ್ಥಿತಿ ಸ್ಥಿರವಾಗುತ್ತಿದೆ ಎಂದೂ ಅವರು ದೇಶಕ್ಕೆ ಭರವಸೆ ನೀಡಿದರು.

ಭಾರತವು ನಿನ್ನೆ 2.57 ಲಕ್ಷಕ್ಕೂ ಹೆಚ್ಚು ಹೊಸ ಪ್ರಕರಣಗಳನ್ನು ವರದಿ ಮಾಡಿದೆ ಮತ್ತು ಕೋವಿಡ್‌ಗೆ ಸಂಬಂಧಿಸಿದ ಸುಮಾರು 4,200 ಸಾವುಗಳು ಸಂಭವಿಸಿವೆ.

Previous Post

ಚಾಮರಾಜನಗರ ಆಕ್ಸಿಜನ್‌ ದುರಂತ: ಸಂತ್ರಸ್ಥರಿಗೆ ತಲಾ ಎರಡು ಲಕ್ಷ ಪರಿಹಾರ -ಆದರೆ ತಪ್ಪಿತಸ್ಥರ ವಿರುದ್ದ ಇನ್ನೂ ಕ್ರಮಕ್ಕೆ ಮುಂದಾಗದ ರಾಜ್ಯ ಸರ್ಕಾರ

Next Post

ಕೋವಿಡ್ 19 ನಿರ್ವಹಣೆಯಲ್ಲಿ ವೈಫಲ್ಯ: ನರೇಂದ್ರ ಮೋದಿಯನ್ನು ಟೀಕಿಸಿದ ಮೋಹನ್ ಭಾಗವತ್

Related Posts

ಬೆಸ್ಕಾಂನ ‘ಹೆಚ್‌ಟಿ ಮಿತ್ರ’  ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್
Top Story

ಬೆಸ್ಕಾಂನ ‘ಹೆಚ್‌ಟಿ ಮಿತ್ರ’ ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

by ಪ್ರತಿಧ್ವನಿ
April 23, 2026
0

ಬೆಂಗಳೂರು: ಬೆಸ್ಕಾಂನ ಹೈ ಟೆನ್ಷನ್ ಗ್ರಾಹಕರಿಗಾಗಿ ಸಂಸ್ಥೆಯ ಇಂಜಿನಿಯರ್‌ಗಳು ಅಭಿವೃದ್ಧಿಪಡಿಸಿರುವ ಸೇವೆ ಕೋರಿಕೆ/ಕುಂದುಕೊರತೆ ಪರಿಹಾರ ಪೋರ್ಟಲ್ 'ಹೆಚ್‌ಟಿ ಮಿತ್ರ'ಗೆ ಇಂಧನ ಸಚಿವ ಕೆ.ಜೆ. ಜಾರ್ಜ್ ಅವರು ಗುರುವಾರ...

Read moreDetails
ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

April 23, 2026
ಮಹಿಳಾ ಮೀಸಲಾತಿ ಡಿಎಂಕೆ ರಾಜಕೀಯ ಹುನ್ನಾರಕ್ಕೆ ರಾಜ್ಯದ ಹಿತ ಬಲಿ:ಬಸವರಾಜ ಬೊಮ್ಮಾಯಿ

ಮಹಿಳಾ ಮೀಸಲಾತಿ ಡಿಎಂಕೆ ರಾಜಕೀಯ ಹುನ್ನಾರಕ್ಕೆ ರಾಜ್ಯದ ಹಿತ ಬಲಿ:ಬಸವರಾಜ ಬೊಮ್ಮಾಯಿ

April 23, 2026
ಸಂವಿಧಾನದ ಅಶಯಗಳು -ಬಾಬು ಜಗಜೀವನ್‌ರಾಮ್‌-

ಸಂವಿಧಾನದ ಅಶಯಗಳು -ಬಾಬು ಜಗಜೀವನ್‌ರಾಮ್‌-

April 23, 2026
ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!

ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!

April 22, 2026
Next Post
ಕೋವಿಡ್ 19 ನಿರ್ವಹಣೆಯಲ್ಲಿ ವೈಫಲ್ಯ: ನರೇಂದ್ರ ಮೋದಿಯನ್ನು ಟೀಕಿಸಿದ ಮೋಹನ್ ಭಾಗವತ್

ಕೋವಿಡ್ 19 ನಿರ್ವಹಣೆಯಲ್ಲಿ ವೈಫಲ್ಯ: ನರೇಂದ್ರ ಮೋದಿಯನ್ನು ಟೀಕಿಸಿದ ಮೋಹನ್ ಭಾಗವತ್

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada