• Home
  • About Us
  • ಕರ್ನಾಟಕ
Saturday, July 5, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಶ್ವೇತಪತ್ರ ಎಂದರೆ ಸುಳ್ಳು ಹೇಳುವುದಲ್ಲ, ಸತ್ಯಾಂಶವನ್ನು ಜನರ ಮುಂದೆ ಇಡುವಂಥದ್ದು -ಸಿದ್ದರಾಮಯ್ಯ

Any Mind by Any Mind
May 24, 2021
in ಕರ್ನಾಟಕ
0
ಶ್ವೇತಪತ್ರ ಎಂದರೆ ಸುಳ್ಳು ಹೇಳುವುದಲ್ಲ, ಸತ್ಯಾಂಶವನ್ನು ಜನರ ಮುಂದೆ ಇಡುವಂಥದ್ದು -ಸಿದ್ದರಾಮಯ್ಯ
Share on WhatsAppShare on FacebookShare on Telegram

ರಾಜ್ಯದಲ್ಲಿ ಲಭ್ಯ ಇರುವ ಕೋವಿಡ್ ಲಸಿಕೆ, ಆಕ್ಸಿಜನ್, ವೆಂಟಿಲೇಟರ್ ಹಾಗೂ ಇತರ ಸೌಲಭ್ಯಗಳ ಬಗ್ಗೆ ಸರ್ಕಾರ ಕೂಡಲೇ ಶ್ವೇತಪತ್ರ ಹೊರಡಿಸಬೇಕು ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಒತ್ತಾಯಿಸಿದ್ದಾರೆ.

ADVERTISEMENT

ತಮ್ಮ ನಿವಾಸದಲ್ಲಿಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಸಿದ್ದರಾಮಯ್ಯ ಅವರು, ಶ್ವೇತಪತ್ರ ಹೊರಡಿಸುವಂತೆ ರಾಜ್ಯ ಹೈಕೋರ್ಟ್ ನೀಡಿರುವ ಆದೇಶವನ್ನು ಸರ್ಕಾರ ಪಾಲಿಸಬೇಕು. ಶ್ವೇತಪತ್ರ ಎಂದರೆ ಸುಳ್ಳು ಹೇಳುವುದಲ್ಲ. ಸತ್ಯಾಂಶವನ್ನು ಜನರ ಮುಂದೆ ಇಡುವಂಥದ್ದು ಎಂದಿದ್ದಾರೆ.

ಸೋಂಕು ಇಳಿಮುಖವಾಗುತ್ತಿದೆ ಎಂಬ ಸುಳ್ಳು ಭರವಸೆ ಜನರಲ್ಲಿ ಬಿತ್ತುವ ಬಿಜೆಪಿ ಸರ್ಕಾರದ ನಿರ್ಧಾರ ಕೊಲೆಗಡುಕತನದ್ದು -ಸಿದ್ದರಾಮಯ್ಯ

ಆಕ್ಸಿಜನ್ ವಿಚಾರದಲ್ಲಿ ಹೈಕೋರ್ಟ್ ನೀಡಿರುವ ಆದೇಶವನ್ನೂ ಸರ್ಕಾರ ಈವರೆಗೆ ಪಾಲಿಸಿಲ್ಲ. ಶ್ವೇತಪತ್ರದ ವಿಚಾರದಲ್ಲಿಯಾದರೂ ನ್ಯಾಯಾಲಯದ ಆದೇಶಕ್ಕೆ ಮನ್ನಣೆ ನೀಡಲಿ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಲಾಕ್ಡೌನ್ ನಿಂದ ಸಂಕಷ್ಟಕ್ಕೆ ಒಳಗಾಗಿರುವ ಬಡ ಕುಟುಂಬಗಳು ಹಾಗೂ ದುಡಿಯುವ ವರ್ಗದವರಿಗೆ ಪ್ಯಾಕೇಜ್ ಘೋಷಿಸುವಂತೆ ಒತ್ತಾಯಿಸಿದ್ದೆ. ಆದರೆ ಸರ್ಕಾರ ಮೂಗಿಗೆ ತುಪ್ಪ ಸವರುವ ಕೆಲಸ ಮಾಡಿದೆ. ಕಳೆದ ವರ್ಷ ಇದೇ ರೀತಿ ಪ್ಯಾಕೇಜ್ ಘೋಷಣೆ ಮಾಡಿತ್ತು. ಆದರೆ, ಬಹುತೇಕ ಮಂದಿಗೆ ಪರಿಹಾರವೇ ಸಿಕ್ಕಿಲ್ಲ. ಈ ವರ್ಷವೂ ಸಹ ಎಲ್ಲರಿಗೂ ಪರಿಹಾರ ಸಿಗುವ ಬಗ್ಗೆ ಅನುಮಾನವಿದೆ. ಪರಿಹಾರ ಪಡೆಯಲು ಅನುಸರಿಸಬೇಕಾದ ಮಾರ್ಗ ಏನು ಎಂಬುದನ್ನೇ ಸರ್ಕಾರ ಈವರೆಗೆ ತಿಳಿಸಿಲ್ಲ. ಹೀಗಾಗಿ ಪ್ಯಾಕೇಜ್ ಎಂಬುದು ಕೇವಲ ಕಣ್ಣೊರೆಸುವ ತಂತ್ರ ಎಂದು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಪತ್ರಿಕಾ ವಿತರಕರೂ ಇಂದು ನನ್ನನ್ನು ಭೇಟಿ ಮಾಡಿ ಪರಿಹಾರ ಘೋಷಣೆಗೆ ಸರ್ಕಾರದ ಮೇಲೆ ಒತ್ತಡ ಹೇರುವಂತೆ ಮನವಿ ಮಾಡಿದ್ದಾರೆ. ಅವರನ್ನೂ ಸಹ ಸರ್ಕಾರ ಪರಿಗಣಿಸಿ ನೆರವು ಒದಗಿಸಬೇಕು. ಜೊತೆಗೆ ಉಳಿದ ಕಾರ್ಮಿಕರಿಗೂ ಸಹಾಯ ಮಾಡಬೇಕು. ತಮಿಳುನಾಡು, ಕೇರಳ ಸೇರಿದಂತೆ ಹಲವಾರು ರಾಜ್ಯಗಳು ಪರಿಹಾರದ ವಿಚಾರದಲ್ಲಿ ಉದಾರತೆ ತೋರಿವೆ. ಆದರೆ, ನಮ್ಮ ಸರ್ಕಾರಕ್ಕೆ ಏಕೆ ಅದು ಸಾಧ್ಯವಾಗುತ್ತಿಲ್ಲ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಕಷ್ಟ ಕಾಲದಲ್ಲಿ ನಮ್ಮ ಪಕ್ಷದ ಎಲ್ಲ ಶಾಸಕರೂ ಜನರ ನೆರವಿಗೆ ನಿಂತಿದ್ದಾರೆ. ದಿನಸಿ ಕಿಟ್, ಔಷಧ, ಆಂಬುಲೆನ್ಸ್ ಮತ್ತಿತರ ನೆರವು ಒದಗಿಸುತ್ತಿದ್ದಾರೆ. ಅವರಿಗೆ ನಾನು ಧನ್ಯವಾದ ಸಲ್ಲಿಸುತ್ತೇನೆ ಎಂದು ಸಿದ್ದರಾಮಯ್ಯ ಅವರು ಹೇಳಿದರು.

ಕೋವಿಡ್‌ ಸಂಕಷ್ಟ: ಸರ್ಕಾರಕ್ಕೆ 12 ಪತ್ರಗಳನ್ನು ಬರೆದಿದ್ದೇನೆ, ಒಂದಕ್ಕಾದರೂ ಉತ್ತರ ನೀಡಿದ್ದೀರಾ? -ಸಿದ್ದರಾಮಯ್ಯ

ಲಸಿಕೆ ವಿಚಾರದಲ್ಲಿ ಅಪಪ್ರಚಾರ ಏನಿಲ್ಲ. ಲಸಿಕೆ ಇಲ್ಲ ಎಂಬುದು ವಾಸ್ತವ. 18 ವರ್ಷ ಮೀರಿದವರಿಗೆ ಮೇ 1ರಿಂದ ಲಸಿಕೆ ಎಂದು ಪ್ರಧಾನಿ ಮೋದಿಯವರು ಘೋಷಣೆ ಮಾಡಿದ್ದರು. ಈಗ ಕೊಡುತ್ತಿಲ್ಲ. ಅದು ಸುಳ್ಳೇ.. ? ಇದರಲ್ಲಿ ಅಪಪ್ರಚಾರ ಏನು ..? ಮೇ 1ರಂದು ಯಡಿಯೂರಪ್ಪ ಲಸಿಕೆ ಅಭಿಯಾನಕ್ಕೆ ಚಾಲನೆ ನೀಡಿದ್ದು ಸುಳ್ಳೇ. ಈಗ ಲಸಿಕೆ ಇಲ್ಲದಿವರುವುದು ಸುಳ್ಳೇ.. ? ಅಭಿಯಾನಕ್ಕೆ ಚಾಲನೆ ನೀಡಿ ಮೂರು ವಾರಗಳಾದರೂ ರಾಜ್ಯಕ್ಕೆ ಲಸಿಕೆ ಬಂದಿಲ್ಲ. ಸರ್ಕಾರ ಪಾರದರ್ಶಕವಾಗಿರಲಿ. ಸುಳ್ಳು ಹೇಳಿ ಸಿಕ್ಕಿ ಹಾಕಿಕೊಂಡು ಈಗ ಕಾಂಗ್ರೆಸ್ಸಿಗರು ಅಪ ಪ್ರಚಾರ ಮಾಡುತ್ತಿದ್ದಾರೆ ಎಂದರೆ ಹೇಗೆ.. ? ಎಂದು ವಾಗ್ದಾಳಿ ನಡೆಸಿದ್ದಾರೆ.
ಶಾಸಕರ ಕ್ಷೇತ್ರಾಭಿವೃದ್ಧಿ ನಿಧಿಯಲ್ಲಿ ತಲಾ ಒಂದು ಕೋಟಿ ಕೊಡಿ. ಲಸಿಕೆ ಖರೀದಿ ಮಾಡಿ ಜನರಿಗೆ ಹಂಚುತ್ತೇವೆ ಎಂದರೆ ಅದಕ್ಕೂ ಒಪ್ಪಿಗೆ ಕೊಡುವುದಿಲ್ಲ. ಸರ್ಕಾರದ ಹಣದಲ್ಲಿ ಲಸಿಕೆ ವಿತರಣೆ ಮಾಡುವುದರಲ್ಲಿ ತಪ್ಪೇನಿದೆ. ಸರ್ಕಾರ ಮಾಡುವುದೂ ಅದೇ ಕೆಲಸ ಅಲ್ಲವೇ..? ಎಂದು ಪ್ರಶ್ನಿಸಿದ್ದಾರೆ.

ಕರೋನಾದಿಂದ ಉಂಟಾಗಿರುವ ಪರಿಸ್ಥಿತಿ ಕುರಿತು ಜಿಲ್ಲಾಧಿಕಾರಿಗಳಿಂದ ಮಾಹಿತಿ ಸಂಗ್ರಹಕ್ಕೆ ಅನುಮತಿ ಕೊಟ್ಟಿಲ್ಲ. ಈ ಬಗ್ಗೆ ವಿಧಾನಸಭೆ ಅಧಿವೇಶನದಲ್ಲಿ ಸರ್ಕಾರದ ವಿರುದ್ಧ ಹಕ್ಕುಚ್ಯುತಿ ಮಂಡಿಸುತ್ತೇನೆ. ನಾನು ಪರಿಶೀಲನೆ ಸಭೆ ನಡೆಸಲು ಹೊರಟಿರಲಿಲ್ಲ. ಕೇವಲ ಮಾಹಿತಿ ಸಂಗ್ರಹಿಸುವ ಉದ್ದೇಶದಿಂದ ಸರ್ಕಾರಕ್ಕೆ ಪತ್ರ ಬರೆದಿದ್ದೆ. ವಿಪಕ್ಷ ನಾಯಕರು ಮಾಹಿತಿ ಸಂಗ್ರಹಿಸಬಾರದು ಎಂಬ ಸುತ್ತೋಲೆ 2009ರ ವರೆಗೆ ಇರಲಿಲ್ಲ. ಯಡಿಯೂರಪ್ಪವರು ಬಂದ ಬಳಿಕವಷ್ಟೇ ಅಂತಹ ಸುತ್ತೋಲೆ ಹೊರಬಿತ್ತು. ಮಾಹಿತಿ ಹಕ್ಕು ಕಾಯಿದೆ ಜಾರಿಯಲ್ಲಿರುವಾಗ ಮಾಹಿತಿ ಸಂಗ್ರಹಕ್ಕೂ ಅವಕಾಶ ಕೊಡುವುದಿಲ್ಲ ಎಂದರೆ ಸಂವಿಧಾನ ಮತ್ತು ಕಾನೂನು ಬಾಹಿರ. ಸತ್ಯ ಹೊರಗೆ ಬರುತ್ತದೆ ಎಂಬ ಕಾರಣಕ್ಕೆ ಸರ್ಕಾರ ಈ ನಿಲುವು ತಳೆದಿದೆ. ಇನ್ನು ಮಾಹಿತಿ ಕೋರಿ ಅಧಿಕಾರಿಗಳಿಗೆ ಪತ್ರ ಬರೆದರೂ ಉತ್ತರಿಸುವುದಿಲ್ಲ ಎಂದು ಸಿದ್ದರಾಮಯ್ಯ ಅಸಮಧಾನ ವ್ಯಕ್ತಪಡಿಸಿದ್ದಾರೆ.

Previous Post

ಆಸ್ಪತ್ರೆಗಳು ಹೆಚ್ಚಿನ ಶುಲ್ಕ ವಿಧಿಸಿದರೆ ನನ್ನ ಗಮನಕ್ಕೆ ತನ್ನಿ; ರಾಜ್ಯದ ಜನರಿಗೆ ಡಿ.ಕೆ ಶಿವಕುಮಾರ್ ಮನವಿ

Next Post

ರಾಜ್ಯವನ್ನು ಕಾಡುತ್ತಿರುವ ಕಪ್ಪು ಶಿಲೀಂಧ್ರದ ಮೂಲ ಪತ್ತೆ ಹಚ್ಚುವ ಹೊಣೆ ತಜ್ಞರ ಹೆಗಲಿಗೆ

Related Posts

Top Story

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

by ಪ್ರತಿಧ್ವನಿ
July 4, 2025
0

ನಟಿ ಭಾವನಾ ಈಗ ತಾಯಿ! ಮದ್ವೆ ಆಗದೆ ಅವಳಿ ಮಕ್ಕಳಿಗೆ ಅಮ್ಮ.. ನಟಿ ಭಾವನಾ ಅಮ್ಮ ಅಗ್ತಾ ಇದ್ದಾರೆ! ಅರೇ ಇದು ಜಾಕಿ ಭಾವನಾ ಅವರ ಸುದ್ದಿನಾ...

Read moreDetails

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

July 4, 2025

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

July 4, 2025

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025
Next Post
ರಾಜ್ಯವನ್ನು ಕಾಡುತ್ತಿರುವ ಕಪ್ಪು ಶಿಲೀಂಧ್ರದ ಮೂಲ ಪತ್ತೆ ಹಚ್ಚುವ ಹೊಣೆ ತಜ್ಞರ ಹೆಗಲಿಗೆ

ರಾಜ್ಯವನ್ನು ಕಾಡುತ್ತಿರುವ ಕಪ್ಪು ಶಿಲೀಂಧ್ರದ ಮೂಲ ಪತ್ತೆ ಹಚ್ಚುವ ಹೊಣೆ ತಜ್ಞರ ಹೆಗಲಿಗೆ

Please login to join discussion

Recent News

Top Story

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

by ಪ್ರತಿಧ್ವನಿ
July 4, 2025
Top Story

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
Top Story

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

July 4, 2025

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

July 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada