• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ವ್ಯಾಕ್ಸಿನೇಷನ್: ಬದ್ಧತೆ ಮರೆತ ಮೋದಿ ಸರ್ಕಾರದ ಮಾನ ಉಳಿಸಲು ಹೋಗಿ ಆರ್ಥಿಕ ಹೊರೆ ಹೊತ್ತ ರಾಜ್ಯ ಸರ್ಕಾರ!

ಫೈಝ್ by ಫೈಝ್
May 25, 2021
in ಕರ್ನಾಟಕ, ದೇಶ
0
ವ್ಯಾಕ್ಸಿನೇಷನ್: ಬದ್ಧತೆ ಮರೆತ ಮೋದಿ ಸರ್ಕಾರದ ಮಾನ ಉಳಿಸಲು ಹೋಗಿ ಆರ್ಥಿಕ ಹೊರೆ ಹೊತ್ತ ರಾಜ್ಯ ಸರ್ಕಾರ!
Share on WhatsAppShare on FacebookShare on Telegram

ವ್ಯಾಕ್ಸಿನೇಷನ್‌ ವಿಚಾರದಲ್ಲಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಮಾಡಿಕೊಂಡ ಎಡವಟ್ಟಿಗೆ ರಾಜ್ಯ ಸರ್ಕಾರ ಆರ್ಥಿಕ ಹೊರೆ ಹೊರುವಂತಾಗಿದೆ. ದಿ ಫೈಲ್‌ ಎಂಬ ಕನ್ನಡದ ಆನ್‌ಲೈನ್‌ ಪೋರ್ಟಲ್‌ ಮಾಡಿರುವ ವರದಿಯಲ್ಲಿ ಈ ವಿಚಾರ ಬಹಿರಂಗವಾಗಿದೆ.

ADVERTISEMENT

ವ್ಯಾಕ್ಸಿನ್ ಕಂಡು ಹಿಡಿಯುವುದರಿಂದ ಹಿಡಿದು, ತಯಾರಿಕೆ, ವಾಕ್ಸಿನೇಷನ್(ಲಸಿಕೆ ನೀಡುವ)ವರೆಗೆ ಎಲ್ಲಾ ಕ್ರೆಡಿಟನ್ನೂ ತನ್ನ ಹೆಸರಿಗೆ ಪಡೆದುಕೊಂಡ ನರೇಂದ್ರ ಮೋದಿ ಹಾಗೂ ಕೇಂದ್ರ ಸರ್ಕಾರ ನಿಜಾರ್ಥದಲ್ಲಿ ಲಸಿಕೆ ನೀಡುವ ಪ್ರಕ್ರಿಯೆಯಲ್ಲಿ ಬದ್ಧತೆ ತೋರದೆ ಕೇವಲ ಹೆಸರು ಗಳಿಸಿಕೊಳ್ಳುವುದರಲ್ಲೇ ಮಗ್ನರಾಗಿದ್ದೇ ಕರೋನಾ ಲಸಿಕೆ ಸುತ್ತ ಹುಟ್ಟಿಕೊಂಡ ಎಲ್ಲಾ ಗೊಂದಲಗಳಿಗೆ ಕಾರಣವಾಗಿದೆ.

ವಾಕ್ಸಿನೇಷನ್‌ ವಿಚಾರದಲ್ಲಿ ಕೇಂದ್ರ ಸರ್ಕಾರ ತನ್ನ ಬದ್ಧತೆ ಪೂರ್ಣಗೊಳಿಸದಿರುವುದರಿಂದ ರಾಜ್ಯದಲ್ಲಿ ಕರೋನಾ ಲಸಿಕೆ ಸುತ್ತ ಹಾಹಾಕಾರ ಹುಟ್ಟಿಕೊಂಡಿದೆ ಎಂದು ದಿ ಫೈಲ್‌ ತನ್ನ ವರದಿಯಲ್ಲಿ ಹೇಳಿದೆ. 45 ವಯಸ್ಸು ಮೇಲ್ಪಟ್ಟವರಿಗೆ ನೀಡಬೇಕಾದ ಎರಡನೇ ಡೋಸ್‌ ಲಸಿಕೆಯನ್ನು ಕೇಂದ್ರ ರಾಜ್ಯಕ್ಕೆ ಸರಬರಾಜು ಮಾಡದೆ ಇರುವುದರಿಂದ, 45 ವರ್ಷದೊಳಗಿನವರಿಗೆ ನೀಡಬೇಕಾದ ಮೊದಲ ಹಂತದ ಲಸಿಕೆಗಳ ಕೊರತೆಗೆ ಕಾರಣವಾಗಿದೆ.

ದಿ ಫೈಲ್‌ ವರದಿ ಪ್ರಕಾರ, ಮೇ 20 ರ ಮೊದಲೇ ರಾಜ್ಯ ಸರ್ಕಾರವು ಸುಮಾರು 28.50 ಕೋಟಿ ರುಪಾಯಿ ಪಾವತಿಸಿ 7.50 ಲಕ್ಷ ಕೋವಿಶೀಲ್ಡ್‌ ಹಾಗೂ 1,44,170 ಕೊವಾಕ್ಸಿನ್‌ ಲಸಿಕೆಯನ್ನು ಖರೀದಿ ಮಾಡಿತ್ತು. ಅಂದರೆ, ಮೇ 20 ರ ಮೊದಲೇ ರಾಜ್ಯದಲ್ಲಿ ಒಟ್ಟು 8.94 ಲಕ್ಷ ಲಸಿಕೆಗಳಿದ್ದವು. ಮೊದಲ ಹಂತದ ಲಸಿಕೆ ಪಡೆದವರಿಗೆ ಎರಡನೇ ಹಂತದ ಲಸಿಕೆಯನ್ನು ಕೇಂದ್ರ ಸರ್ಕಾರ ವಿತರಿಸದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಅನಿವಾರ್ಯವಾಗಿ ಈ ಲಸಿಕೆಗಳನ್ನು 45 ವರ್ಷ ಮೇಲ್ಪಟ್ಟವರ ಎರಡನೇ ಹಂತದ ವ್ಯಾಕ್ಸಿನೇಷನ್‌ ಪ್ರಕ್ರಿಯೆಗೆ ಬಳಸಿಕೊಂಡಿತು ಎಂದು ವರದಿಯಲ್ಲಿ ಹೇಳಲಾಗಿದೆ.

ತನ್ನದೇ ಪಕ್ಷದ ಹಿರಿಯ ಸಂಸದ ಅನಂತಕುಮಾರ್‌ ಹೆಗಡೆ ಕಳೆದ ವರ್ಷ ಮಾಡಿದ ವ್ಯಾಕ್ಸಿನೇಷನ್‌ ವಿರೋಧಿ ಭಾಷಣದ ಬಗ್ಗೆ ಏನೂ ಮಾತನಾಡದೆ, ಲಸಿಕೆ ಕೊರತೆಗೆ ವಿರೋಧ ಪಕ್ಷಗಳು ಕಾರಣವೆನ್ನುತ್ತಿರುವ ಬಿಜೆಪಿ ನಾಯಕರು, ಲಸಿಕೆ ವಿರುದ್ಧ ಕಾಂಗ್ರೆಸ್‌ ಮಾಡಿದ ಅಪಪ್ರಚಾರ ನಂಬಿ ಲಸಿಕೆ ಪಡೆಯಲು ಜನರು ಹಿಂದೇಟು ಹಾಕಿದ್ದಾರೆಂದು, ಹಾಗಾಗಿ ವಿದೇಶಗಳಿಗೆ ಲಸಿಕೆ ರಫ್ತು ಮಾಡಬೇಕಾಗಿದೆಯೆಂದು ಆರೋಪಿಸುತ್ತಿದ್ದಾರೆ. ಶೋಭಾ ಕರಂದ್ಲಾಜೆಯವರಂತೂ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ ʼಚರ್ಚ್‌ಗಳು ಲಸಿಕೆ ಪಡೆಯದಂತೆʼ ಅಪಪ್ರಚಾರ ನಡೆಸುತ್ತಿದೆಯೆಂದು ಆರೋಪಿಸಿ, ಕೋಮು ಆಯಾಮ ನೀಡಲು, ಆ ಮೂಲಕ ಜನರ ಗಮನ ಬೇರೆಡೆಗೆ ತಿರುಗಿಸಲು ಯತ್ನಿಸುತ್ತಿದ್ದಾರೆ.

ಆದರೆ, ಇವರ್ಯಾರೂ ಲಸಿಕೆಯ ಕುರಿತಂತೆ ತನ್ನ ಬದ್ಧತೆ ಪೂರ್ಣಗೊಳಿಸದ ಕೇಂದ್ರದ ವಿರುದ್ಧ ತುಟಿ ಪಿಟಿಕ್ಕೆನ್ನುವುದಿಲ್ಲ. ಮೊದಲನೇ ಡೋಸ್‌ ಪಡೆದವರಿಗೆ ಎರಡನೇ ಡೋಸ್‌ ಸಿಗದಂತಾಗಲು ಯಾರು ಕಾರಣ ಎಂದು ಬಹಿರಂಗಗೊಳಿಸುತ್ತಿಲ್ಲ.  ರಾಜ್ಯದ ಜನತೆಯ ಹಿತದೃಷ್ಟಿಗಿಂತಲೂ ತಮ್ಮ ಪ್ರಧಾನಿಯ ಇಮೇಜ್‌ ಮುಖ್ಯ ಎಂದೇ ಪರಿಗಣಿಸಿರುವ ಬಿಜೆಪಿ ನಾಯಕರು ರಾಜ್ಯದ ಜನೆತೆಗೆ ಬಗೆಯುತ್ತಿರುವ ದ್ರೋಹ ಕಡಿಮೆ ಪ್ರಮಾಣದ್ದಲ್ಲ.

ಈ ಕುರಿತು ಪ್ರತಿಕ್ರಯಿಸಿರುವ ಹಿರಿಯ ಪತ್ರಕರ್ತ ದಿನೇಶ್‌ ಕುಮಾರ್‌ ಎಸ್‌ಸಿ, “ಮೋದಿ ಸರ್ಕಾರದ ಮಾನ ಮುಚ್ಚಲು ರಾಜ್ಯ ಸರ್ಕಾರವೇ ಕಳಂಕ‌ ಹೊತ್ತುಕೊಂಡಿದೆ. ಜತೆಗೆ ಹಣವನ್ನೂ ಕಳೆದುಕೊಂಡಿದೆ. ರಾಜ್ಯದಲ್ಲಿ ಬೇರೆ ಪಕ್ಷದ ಸರ್ಕಾರ ಇದ್ದಿದ್ದರೆ ಒಕ್ಕೂಟ ಸರ್ಕಾರದ ವಿರುದ್ಧ ಪ್ರತಿಭಟನೆಗೆ ಇಳಿಯುತ್ತಿತ್ತು, ಕಾನೂನು ಹೋರಾಟಕ್ಕೆ ಮುಂದಾಗುತ್ತಿತ್ತು. ಆದರೆ ರಾಜ್ಯದಲ್ಲಿ ಇರುವುದು ಹೈಕಮಾಂಡ್ ಗುಲಾಮಗಿರಿ. ಇವರು ಬಾಯಿ ತೆರೆಯುವುದಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೇಂದ್ರದಲ್ಲೂ ರಾಜ್ಯದಲ್ಲೂ ಒಂದೇ ಪಕ್ಷದ ಸರ್ಕಾರವಿದ್ದರೆ ಅಭಿವೃದ್ಧಿ ಕಾರ್ಯದಲ್ಲಿ ಇನ್ನಷ್ಟು ಪ್ರಗತಿ ಕಾಣುತ್ತದೆಯೆಂದು ಮತಪಡೆದ ಬಿಜೆಪಿಯ ವಾಸ್ತವಾಂಶವಿದು. ಕೇಂದ್ರದ ಮಾನ ಮುಚ್ಚಲೆಂದು ರಾಜ್ಯ ಬಿಜೆಪಿ ನಾಯಕರು ಮೌನವಹಿಸಿ ಕರ್ನಾಟಕಕ್ಕೆ ದ್ರೋಹ ಮಾಡುತ್ತಿದ್ದಾರೆಂಬ ಆರೋಪಕ್ಕೆ ಈ ಪ್ರಕರಣ ಮತ್ತಷ್ಟು ಪುಷ್ಟಿ  ನೀಡಿದೆ. ಜಿಎಸ್‌ಟಿ, ನೆರೆ ಪರಿಹಾರ ಸೇರಿದಂತೆ ಕೇಂದ್ರ ಸರ್ಕಾರದಿಂದ ನ್ಯಾಯಯುತವಾಗಿ ರಾಜ್ಯಕ್ಕೆ ಬರಬೇಕಾದ ಪಾಲನ್ನು ರಾಜ್ಯದ 25 ಸಂಸದರಾಗಲೀ, ʼರಾಜಾಹುಲಿʼ ಎಂಬ ಮುಖ್ಯಮಂತ್ರಿಯಾಗಲೀ ಕೇಳಲು ತೋರುವ ಪುಕ್ಕಲುತನಕ್ಕೆ ರಾಜ್ಯದ ಜನತೆ ಬಹಳಷ್ಟು ನಷ್ಟ ಕಂಡುಕೊಂಡಿದ್ದಾರೆ.

ಒಕ್ಕೂಟ ವ್ಯವಸ್ಥೆಯ ಮಹತ್ವ ಹಾಗೂ ಕೇಂದ್ರ ಸರ್ಕಾರದ ಜವಾಬ್ದಾರಿಯನ್ನು ಮರೆತಿರುವ ಮೋದಿ ಸರ್ಕಾರ ತನ್ನ ಧೂರ್ತತನದಿಂದ ಅವಗಣಿಸುತ್ತಿದೆ. ಆದರೂ, ಸ್ವಂತ ವರ್ಷಸ್ಸಿನಿಂದ ಗೆಲ್ಲಲಾಗದ, ಉತ್ತರದ ನಾಯಕರಿಗೆ ನಡು ಬಗ್ಗಿಸಿ ಸಲಾಮು ಹೊಡೆಯುತ್ತಿರುವ ರಾಜ್ಯ ನಾಯಕರು ತಮ್ಮ ಗುಲಾಮಿ ಮನಸ್ಥಿತಿಯಿಂದ ಇನ್ನೂ ಹೊರ ಬರುವ ಲಕ್ಷಣಗಳು ಕಾಣುತ್ತಿಲ್ಲ.

ಒಟ್ಟಾರೆ, ಕೇಂದ್ರ ಸರ್ಕಾರಕ್ಕೆ ತೋರುತ್ತಿರುವ ಅತಿ ನಿಷ್ಟೆಯಿಂದ ರಾಜ್ಯ ಸರ್ಕಾರ ಸ್ವತಃ ಕಳಂಕವನ್ನು ಹೊತ್ತುಕೊಂಡಿದೆಯಲ್ಲದೆ, ವ್ಯಾಕ್ಸಿನೇಷನ್‌ ಪ್ರಕ್ರಿಯೆಯಲ್ಲಿ ಕೇಂದ್ರದ ಪಾಲನ್ನು ತಾನು ಭರಿಸಿ ಹೆಚ್ಚುವರಿ 28 ಕೋಟಿಯ ಹೊರೆಯನ್ನೂ ಹೊತ್ತುಕೊಂಡಿದೆ. !

Previous Post

ಸಾಮಾಜಿಕ ಜಾಲತಾಣಗಳು ಬಂದಾಗುವ ಸಾಧ್ಯತೆ? ಹೊಸ ನಿಯಮ ಪಾಲನೆಯ ಗಡುವು ಇಂದಿಗೆ ಮುಕ್ತಾಯ!

Next Post

ಮಡಿಕೇರಿ ಕೋವಿಡ್ ಆಸ್ಪತ್ರೆಯಲ್ಲಿ 1.5 ಲಕ್ಷ ಮೌಲ್ಯದ ತಾಳಿ ಸರ ಕಳವು ; ಪೊಲೀಸ್ ಠಾಣೆಯಲ್ಲಿ ದೂರು ದಾಖಲು

Related Posts

ಇದೇ ಲಾಸ್ಟ್‌ ಇನ್ಮುಂದೆ ಜಿಬಿಎ ಎಲೆಕ್ಷನ್ ಗಡುವು ವಿಸ್ತರಿಸಲ್ಲಾ : ಸರ್ಕಾರಕ್ಕೆ ಸುಪ್ರೀಂ ಖಡಕ್‌ ವಾರ್ನ್..!‌
Top Story

ಇದೇ ಲಾಸ್ಟ್‌ ಇನ್ಮುಂದೆ ಜಿಬಿಎ ಎಲೆಕ್ಷನ್ ಗಡುವು ವಿಸ್ತರಿಸಲ್ಲಾ : ಸರ್ಕಾರಕ್ಕೆ ಸುಪ್ರೀಂ ಖಡಕ್‌ ವಾರ್ನ್..!‌

by ಪ್ರತಿಧ್ವನಿ
May 20, 2026
0

ಬೆಂಗಳೂರು : ಕರ್ನಾಟಕ ಸರ್ಕಾರ ಹಾಗೂ ರಾಜ್ಯ ಚುನಾವಣಾ ಆಯೋಗಕ್ಕೆ (SEC) ಬೆಂಗಳೂರಿನ ಐದು ನಗರ ಪಾಲಿಕೆಗಳ ಚುನಾವಣೆಯನ್ನು ಪೂರ್ಣಗೊಳಿಸಲು ಅಂತಿಮ ಅವಕಾಶವಾಗಿ ಆಗಸ್ಟ್ 31ರವರೆಗೆ ಹೆಚ್ಚುವರಿ ಕಾಲಾವಕಾಶ...

Read moreDetails
ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

May 20, 2026
ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

May 20, 2026
ಕೈ ಕೊಟ್ಟ ಹುಡುಗಿ : ಹೈಟೆನ್ಷನ್‌ ಕಂಬ ಹತ್ತಿ ಪ್ರಿಯತಮನ ರಂಪಾಟ..!

ಕೈ ಕೊಟ್ಟ ಹುಡುಗಿ : ಹೈಟೆನ್ಷನ್‌ ಕಂಬ ಹತ್ತಿ ಪ್ರಿಯತಮನ ರಂಪಾಟ..!

May 20, 2026
“Welcome to Rome, My Friend ಎಂದ ಮೆಲೋನಿ : ಮೋದಿಗೆ ಇಟಲಿ ಪ್ರಧಾನಿ ಮಾಡಿದ ಪಾಠವೇನು..?

“Welcome to Rome, My Friend ಎಂದ ಮೆಲೋನಿ : ಮೋದಿಗೆ ಇಟಲಿ ಪ್ರಧಾನಿ ಮಾಡಿದ ಪಾಠವೇನು..?

May 20, 2026
Next Post
ಮಡಿಕೇರಿ ಕೋವಿಡ್ ಆಸ್ಪತ್ರೆಯಲ್ಲಿ 1.5 ಲಕ್ಷ ಮೌಲ್ಯದ ತಾಳಿ ಸರ ಕಳವು ; ಪೊಲೀಸ್ ಠಾಣೆಯಲ್ಲಿ  ದೂರು ದಾಖಲು

ಮಡಿಕೇರಿ ಕೋವಿಡ್ ಆಸ್ಪತ್ರೆಯಲ್ಲಿ 1.5 ಲಕ್ಷ ಮೌಲ್ಯದ ತಾಳಿ ಸರ ಕಳವು ; ಪೊಲೀಸ್ ಠಾಣೆಯಲ್ಲಿ ದೂರು ದಾಖಲು

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada